Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ರಸ್ತೆ ಬದಿಯಲ್ಲಿ ಟೈಯರ್ ಪಂಚಾಯತ್ ಆಗಿ ನಿಂತಿದ್ದ ಲಾರಿಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಹಾಸನ ತಾಲೂಕಿನ ಶಾಂತಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಾಸನದ ಸೆಂಟ್ರಲ್ ಕಾಮರ್ಸ್ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ, ದಾಸನಪುರ ಗ್ರಾಮ ನಿವಾಸಿ ರೇವಂತ್(18) ಎಂದು ತಿಳಿದುಬಂದಿದೆ. ಹಾಸನ ತಾಲೂಕಿನ, ಶಾಂತಿಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಲಾರಿಯೊಂದು ಟೈರ್ ಪಂಕ್ಚರ್ ಆಗಿ ರಸ್ತೆಯಲ್ಲೇ ನಿಂತಿತ್ತು. ಇದೇ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ನಲ್ಲಿ ವೇಗವಾಗಿ ಬಂದ ರೇವಂತ್ ಕತ್ತಲೆಯಲ್ಲಿ ಲಾರಿಯನ್ನು ಗಮನಿಸಿದೆ ಬೈಕ್ ನಿಯಂತ್ರಣ ಕಳೆದುಕೊಂಡು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದಾನೆ ಕೂಡಲೇ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.
ದಾವಣಗೆರೆ : ಕಿಡಿಗೇಡಿಗಳ ಕೃತ್ಯಕ್ಕೆ ಇದೀಗ 2200 ಅಡಕೆ ಗಿಡಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ತಾಲೂಕಿನ ತಮಿಳೇನಹಳ್ಳಿ ಕಿಡಿಗೇಡಿಗಳು ಈ ಒಂದು ಕೃತ್ಯ ಎಸಗಿದ್ದಾರೆ. ಹೌದು ದಾವಣಗೆರೆ ಜಿಲ್ಲೆಯ ತಮಲೇನಹಳ್ಳಿ ಈ ಒಂದು ಘಟನೆ ನಡೆದಿದೆ. ರೈತ ಈರಪ್ಪ ಅವರ ಮೂರು ಎಕರೆ ಅಡಕೆ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಎರಡು ವರ್ಷಗಳಿಂದ 6 ಲಕ್ಷ ಖರ್ಚು ಮಾಡಿ ಅಡಿಕೆ ಬೆಳೆ ಬೆಳೆದಿದ್ದರು. ನೆನ್ನೆ ತೋಟದಲ್ಲಿ ಕಳೆ ತೆಗೆದು ಈರಪ್ಪ ದಂಪತಿ ಮನೆಗೆ ತೆರಳಿದ್ದರು. ಈ ವೇಳೆ ಕಿಡಿಗೇಡಿಗಳು ಒಣ ಬೆಳೆಗಳಿಗೆ ಬೆಂಕಿ ಹಚ್ಚಿದ್ದು, ಇಡಿ ತೋಟಕ್ಕೆ ಬೆಂಕಿ ಆವರಿಸಿದೆ. ಕಿಡಿಗೇಡಿಗಳ ಕೃತಕ್ಕೆ 2200 ಅಡಿಕೆ ಮರಗಳು ಸುಟ್ಟು ಭಸ್ಮವಾಗಿವೆ. ಕಿಡಿಗೇಡಿಗಳ ಕೃತ್ಯಕ್ಕೆ ಇದೀಗ ರೈತ ಈರಪ್ಪ ಕಂಗಾಲಾಗಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಯಾರು ಈ ಕೃತ್ಯ ಎಸಗಿದ್ದು, ಎನ್ನುವುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮೈಸೂರು : ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿದೆ. ಲೋಕಾಯುಕ್ತ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರೋ ದೂರುದಾರ ಸ್ನೇಹಮಯಿ ಕೃಷ್ಣ, ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇನ್ನೊಂದೆಡೆ ಈ ಹಗರಣದಲ್ಲಿ ಇಡಿ ಪ್ರವೇಶ ಮಾಡಿದ್ದು, ತನಿಖೆ ನಡೆಸಿದೆ. ಇದರ ಮಧ್ಯ ಇದೀಗ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧವೂ ಸಹ ಅಕ್ರಮವಾಗಿ 50:50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸ್ನೇಹಮಯಿಕೃಷ್ಣ ದೂರು ನೀಡಿದ್ದಾರೆ. ಹೌದು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದು, ಜಿಟಿ ದೇವೇಗೌಡ ಮಹೇಂದ್ರ ಹೆಸರಿನಲ್ಲಿ ಬೇನಾಮಿಯಾಗಿ ಪರಿಹಾರ ಪಡೆಡಿದ್ದಾರೆ ಎಂದು ಆರೋಪಿಸಿದ್ದಾರೆ. ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಸಹೋದರಿ ಪುತ್ರ ಮಹೇಂದ್ರ, ದೇವನೂರು ಸರ್ವೇ ನಂಬರ್ 81/2 ರಲ್ಲಿ 2.22 ಎಕರೆ ಜಮೀನನ್ನು ಖರೀದಿಸಿದ್ದಾರೆ.ಬಳಿಕ ಆ ಜಮೀನಿಗೆ 50:50 ಅನುಪಾತದಲ್ಲಿ ಅಕ್ರಮವಾಗಿ…
ಬೆಂಗಳೂರು : ಈಗಾಗಲೇ ವರ್ಷದ ಆರಂಭದಲ್ಲಿ ಸರ್ಕಾರ ಕೆಎಸ್ಆರ್ಟಿಸಿ ಟಿಕೆಟ್ ದರದಲ್ಲಿ ಶೇಕಡ 15 ರಷ್ಟು ಹೆಚ್ಚಳ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸರ್ಕಾರ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು ಶೀಘ್ರದಲ್ಲಿ ಕಾವೇರಿ ನೀರಿನ ದರದಲ್ಲಿ ಹೆಚ್ಚಳ ಮಾಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಫ್ರೀಯಾಗಿ ಕೊಟ್ಟರೆ ಸರ್ಕಾರ ಹೇಗೆ ನಡೆಯಬೇಕು?ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲು ಸೂಚಿಸಲಾಗಿದೆ. ಬೆಂಗಳೂರಿನ ಕೆಲ ಏರಿಯಾಗಳಲ್ಲಿ ಫ್ರೀಯಾಗಿ ನೀರು ಕೊಡುತ್ತಿದ್ದೇವೆ. ಇನ್ನು ಮುಂದೆ ಫ್ರೀಯಾಗಿ ನೀರನ್ನು ಕೊಡಲು ಆಗಲ್ಲ BWSSB ವತಿಯಿಂದ ಶೀಘ್ರವೇ ನೀರಿನಿಂದ ಏರಿಕೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟವಾಗಿ ತಿಳಿಸಿದರು. ಬೆಂಗಳೂರು ನಗರದಲ್ಲಿ 2014ರ ನಂತರ ನೀರಿನ ಅದರ ಏರಿಕೆ ಮಾಡಿಲ್ಲ. ಜಲ ಮಂಡಳಿಯ ಮೇಲೆ ಈಗಾಗಲೇ ಸಾವಿರಾರು ಕೋಟಿ ರೂಪಾಯಿ ಹೊರೆ ಇದೆ. ತಿಂಗಳಿಗೆ 85 ಕೋಟಿಯಂತೆ…
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಮತ್ತೊಮ್ಮೆ ಪುನರುಚ್ಚಿಸಿದ್ದು ಮುಂದಿನ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಈ ವಿಚಾರವಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗಟ್ಟಲು ಶೀಘ್ರದಲ್ಲಿ ಹೊಸ ಕಾನೂನು ತರಲು ಸರ್ಕಾರದಿಂದ ಸಿದ್ಧತೆ ನಡೆಸಲಾಗುತ್ತಿದೆ. ಈ ವಿಚಾರವಾಗಿ ಮುಂದಿನ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇನ್ನು ಮೂಡ ಹಗರಣಕ್ಕೆ ಸಂಬಂಧಪಟ್ಟಂತೆ ಪತ್ನಿ ಪಾರ್ವತಿ ಅವರಿಗೆ ಇಡೀ ನೋಟಿಸ್ ನೀಡಿದ ವಿಚಾರವಾಗಿ, ಮುಡಾ ಕೇಸ್ ನಲ್ಲಿ ಪತ್ನಿ ಪಾರ್ವತಿಗೆ ನೀಡಿದ್ದ ಸಮನ್ಸ್ ಗೆ ತಡೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ಜಾರಿ ನಿರ್ದೇಶನಾಲಯ (ED) ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಪ್ರಕರಣದಲ್ಲಿ ನನಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಕೇಸ್ ನಲ್ಲಿ ಪತ್ನಿ ಪಾರ್ವತಿಗೆ ನೀಡಿದ್ದ ಸಮನ್ಸ್ ಗೆ ತಡೆ ನೀಡಿದೆ. ಲೋಕಾಯುಕ್ತತನಕ್ಕೆ ನಡೆಯುತ್ತಿರುವಾಗ ಯಾಕೆ ಇಷ್ಟು ಆತುರ ಎಂದಿದೆ. ಜಾರಿ ನಿರ್ದೇಶನಲಯದ ಸಂಬಂಧಿಸಿದೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನೀವು ಆತರ ಮಾಡುವುದರಲ್ಲಿ ಅರ್ಥವಿಲ್ಲವೆಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಬಿಐ ತನಿಖೆಗೆ ನೀಡಬೇಕೆ ಅಥವಾ ಬೇಡವೇ ಎಂದು ಚರ್ಚೆಯಾಗುತ್ತಿದೆ. ಹೈಕೋರ್ಟ್ ವಾದ ಪ್ರತಿವಾದವನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದೆ. ನನಗೆ ಈ ಒಂದು ಪ್ರಕರಣದಲ್ಲಿ ಯಾವುದೇ ಆತಂಕವಿಲ್ಲ ನ್ಯಾಯ ಸಿಗುವ ಭರವಸೆ…
ಚಿಕ್ಕಮಗಳೂರು : ನಾನು ಮೈಕ್ರೋ ಫೈನಾನ್ಸ್ ಕಂಪನಿಯ ಮ್ಯಾನೇಜರ್ ಎಂದು ಹೇಳಿ ಮಹಿಳೆಯ ಬಲಿ ಲಕ್ಷ ಲಕ್ಷ ಹಣವನ್ನು ಪಡೆದು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚಿಕ್ಕಮಂಗಳೂರು ನಗರ ಠಾಣೆಯ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತೋಷ್ ನನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಹೌದು ಮೈಕ್ರೋ ಫೈನಾನ್ಸ್ ಕಂಪನಿ ಮ್ಯಾನೇಜರ್ ಎಂದು ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಗೆ ವಂಚನೆ ಮಾಡಿದ್ದ ಆರೋಪಿ ಸಂತೋಷನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಮಂಗಳೂರು ನಗರ ಠಾಣೆಯ ಪೊಲೀಸರಿಂದ ಆರೋಪಿ ಸಂತೋಷನ್ನು ಇದೀಗ ಬಂಧಿಸಲಾಗಿದೆ. ಲೋನ್ ಕೊಡಿಸುವುದಾಗಿ ಹೇಳಿ ಸಂತೋಷ ಮತ್ತು ಗ್ಯಾಂಗ್ ವಂಚನೆ ಎಸಗಿತ್ತು.ಲಕ್ಷ ಲಕ್ಷ ಹಣ ಪೀಕಿ ಗ್ಯಾಂಗ್ ಪರಾರಿಯಾಗಿತ್ತು. ಇದೀಗ ಚಿಕ್ಕಮಂಗಳೂರು ಪೊಲೀಸರು ಇದೀಗ ಸಂತೋಷ್ ನನ್ನು ಅರೆಸ್ಟ್ ಮಾಡಿದೆ. ಪ್ರಕರಣ ಹಿನ್ನೆಲೆ? ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಎಂದು ನಾಲ್ಕು ಲಕ್ಷ ಹಣವನ್ನು ವಂಚಿಸಿದ್ದ ಹಳೆಯ ಲೋನ್ ಕ್ಲಿಯರ್ ಮಾಡಿದರೆ 10 ಲಕ್ಷ ಲೋನ್ ನೀಡುವುದಾಗಿ ಸಂತೋಷ್ ಮಹಿಳೆಗೆ ಭರವಸೆ ನೀಡಿದ್ದ.ಸಂತೋಷ್ ಮಾತನ್ನು…
ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು ಬಳಿಕ ವಿಧಾನಸೌಧದಿಂದ ತೆರಳುವ ವೇಳೆ ಕಾಲಿಗೆ ಪಂಚೆ ಸಿಲುಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಗ್ಗರಿಸಿದ ಘಟನೆ ನಡೆಯಿತು. ಹೌದು ವಿಧಾನಸೌಧದಿಂದ ತೆರಳುವಾಗ ಸಿಎಂ ಸಿದ್ದರಾಮಯ್ಯ ಕಾಲಿಗೆ ಪಂಚೆ ಸಿಲುಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗ್ಗರಿಸಿದ ಘಟನೆ ನಡೆಯಿತು. ಈ ವೇಳೆ ಎಂಎಲ್ಸಿ ಸುಧಾಮದಾಸ್ ಹಾಗೂ ಗನ್ ಮ್ಯಾನ್ ನನ್ನು ಕೂಡಲೇ ಹಿಡಿದುಕೊಂಡರು. ವಿಧಾನಸೌಧದ ಬಳಿ ಕಾರು ಹತ್ತುವಾಗ ಮುನ್ನ ಈ ಒಂದು ಘಟನೆ ನಡೆದಿದೆ.
ಮಂಗಳೂರು : ಸ್ಕೂಟರ್ ಬಿಡುಗಡೆಗೆ ಪೊಲೀಸ್ ಠಾಣೆಯ ಸಿಪಿಐ ಒಬ್ಬರು ಸ್ಕೂಟರ್ ಮಾಲೀಕರ ಬಳಿ 5,000 ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಮಂಗಳೂರು ಉತ್ತರ ಠಾಣೆಯಲ್ಲಿ ನಡೆದಿದೆ. ಹೌದು ನ್ಯಾಯಾಲಯದಲ್ಲಿ ಸ್ಕೂಟರ್ ಪಡೆದುಕೊಳ್ಳಲು ಅನುಮತಿ ಸಿಕ್ಕಿದ್ದರೂ, ಸ್ಕೂಟರ್ ಮಾಲಕರಿಂದ ಮಂಗಳೂರು ಉತ್ತರ ಠಾಣೆಯ ಸಿಪಿಐ ಮಹಮ್ಮದ್ ಶರೀಫ್ ಕೆ. 5 ಸಾವಿರ ರೂ. ಲಂಚಕ್ಕಾಗಿ ಬೇಡಿಕೆಯಿಟ್ಟಿದ್ದು, ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲಂಚದ ಹಣದಲ್ಲಿ ಚೌಕಾಶಿ ನಡೆಸಿ ನಿರೀಕ್ಷಕರು ಹಾಗೂ ಸಿಬಂದಿ 3 ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿ ದಾಳಿ ನಡೆಸಲಾಗಿದ್ದು, ಸಿಐ ಮಹಮ್ಮದ್ ಶರೀಫ್ ಕೆ. ಮತ್ತು ಎಚ್ಸಿ ಪ್ರವೀಣ್ ನಾಯ್ಕ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ ಸಹೋದರಿ ಎಂದು ಹೇಳಿ ಐಶ್ವರ್ಯಗೌಡ ಕೋಟ್ಯಾಂತರ ರೂಪಾಯಿ ವಂಚನೆ ಎಸೆಗಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ರೇಖಾ ಎನ್ನುವ ಮಹಿಳೆ ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿ ಸೇರಿದಂತೆ ಹಲವಾರು ಜನರಿಗೆ ನೂರಾರು ಕೋಟಿ ರೂಪಾಯಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಸಾಲ ಕೊಡಿಸುವ ನೆಪದಲ್ಲಿ ರೇಖಾ ಎಂಬುವರು ಆನೇಕ ಜನರಿಗೆ ನೂರಾರು ಕೋಟಿ ವಂಚನೆ ಮಾಡಿರುವುದು ಬಯಲಾಗಿದೆ. ಉದ್ಯಮಿಯೊಬ್ಬರಿಗೆ 25 ಕೋಟಿ ರೂ. ಆಸೆ ತೋರಿಸಿ, ಬರೋಬ್ಬರಿ 5.75 ಕೋಟಿ ರೂ. ವಂಚಿಸಿದ್ದಾರೆ. ಸದ್ಯ ಸಿಸಿಬಿ ಪೊಲೀಸರು ಆರೋಪಿ ರೇಖಾಳನ್ನು ಬಂಧಿಸಿದ್ದಾರೆ. ಕಳೆದ 2023ರಲ್ಲಿ ಉದ್ಯಮಿ ಹಾಗೂ ರೇಖಾಗೆ ಪರಸ್ಪರ ಪರಿಚಯವಾಗುತ್ತೆ. ನಾನು ಟವರ್ ದುರಂತದ ಪ್ರತ್ಯಕ್ಷ ಸಾಕ್ಷಿ, ನಾನು ಸಾಕ್ಷಿ ಹೇಳದಂತೆ ಮಾಲೀಕರು ಆಫರ್ ಮಾಡಿದ್ದಾರೆ. 25 ಕೋಟಿ ರೂ. ಕೊಡುತ್ತೇನೆ ಅಂದಿದ್ದಾರೆ. ನನ್ನ ಖಾತೆಯಲ್ಲಿದ್ದ 6…