Author: kannadanewsnow05

ಶಿವಮೊಗ್ಗ : ಎಂಸಿಎ ನಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದ ಗರ್ಭಿಣಿ, ತೀವ್ರ ರಕ್ತಸ್ರಾವದಿಂದ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಣಿ ಸಾವನ್ನಪ್ಪಿದ್ದಾಳೆ. ಬರತಟ್ಟಿಯ ಒಂದುವರೆ ತಿಂಗಳ ಗರ್ಭಿಣಿ ಅಶ್ವಿನಿ (28) ಸಾವನ್ನಪ್ಪಿದ್ದಾಳೆ. ಶಿವಮೊಗ್ಗ ಹೊಸನಗರ ತಾಲೂಕಿನ ದಬರತಟ್ಟಿ ಗ್ರಾಮದ ಅಶ್ವಿನಿ ಎಂದು ತಿಳಿದು ಬಂದಿದ್ದು, ಈಕೆ ಎಂಸಿಎ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕವನ್ನು ಪಡೆದಿದ್ದಳು ಎನ್ನಲಾಗಿದೆ. ಕಳೆದ ಒಂದುವರೆ ವರ್ಷದ ಹಿಂದೆ ಅಶ್ವಿನಿಗೆ ಮದುವೆಯಾಗಿತ್ತು. ನಿನ್ನೆ ಸಾಗರ ಸರ್ಕಾರಿ ಆಸ್ಪತ್ರೆಗೆ ಗರ್ಭಿಣಿ ಅಶ್ವಿನಿ ದಾಖಲಾಗಿದ್ದಳು. ಅಶ್ವಿನಿಗೆ ಗರ್ಭಪಾತವಾದ ಹಿನ್ನೆಲೆಯಲ್ಲಿ ತೀವ್ರವಾಗಿ ರಕ್ತಸ್ರಾವ ಆಗಿತ್ತು. ಈ ವೇಳೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಹೇಳಿದ್ದರು. ಶಿವಮೊಗ್ಗ ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ಅಶ್ವಿನಿ ಸಾವನಪ್ಪಿದ್ದಾಳೆ. ಸಾಗರ ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ನಿರ್ಲಕ್ಷ ಆರೋಪ ಮಾಡಿದ್ದು. ಸಾಗರ ಆಸ್ಪತ್ರೆ ವೈದ್ಯರ ವಿರುದ್ಧ ಅಶ್ವಿನಿ…

Read More

ಗದಗ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಅಟ್ಟಹಾಸ ಮಿತಿ ಮೀರಿದ್ದು, ಇದೀಗ ಬ್ಯಾಂಕ್ ನವರು ಸಾಲ ತೀರಿಸಿಲ್ಲ ಎಂದು ಮನೆ ಸೀಸ್ ಮಾಡಿದ್ದಾರೆ. ಇದರಿಂದ ನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಹೌದು ಬ್ಯಾಂಕ್ನಿಂದ ಮನೆ ಸೀಜ್ ಮಾಡಿದಕ್ಕೆ ಯುವಕ ಆತ್ಮಹತ್ಯೆಗೆ ಯತ್ನಯತ್ನಿಸಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಈ ಒಂದು ಘಟನೆ ನಡೆದಿದೆ. ರಂಭಾಪುರಿ ಆಶ್ರಯ ಬಡಾವಣೆಯ ರವಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ತಿಳಿದು ಬಂದಿದ್ದು, ಮನೆಯನ್ನು ಸೀಜ್ ಮಾಡಿದ್ದಕ್ಕೆ ಯುವಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥಗೊಂಡ ರವಿಯನ್ನು ತಕ್ಷಣ ತಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. 2017ರಲ್ಲಿ ರವಿ 7 ಲಕ್ಷ ಸಾಲ ಪಡೆದಿದ್ದ, ಆಶ್ರಯ ಮನೆ ಕಟ್ಟಿಸಿಕೊಳ್ಳಲು ಬ್ಯಾಂಕ್ನಿಂದ ಲೋನ್ ಪಡೆದಿದ್ದ ಎನ್ನಲಾಗಿದೆ. ಮೂರು ವರ್ಷದವರೆಗೆ 2 ಲಕ್ಷ ರೂಪಾಯಿ ಸಾಲವನ್ನು ತೀರಿಸಿದ್ದ ರವಿ ಕುಟುಂಬ. ಇನ್ನು 5 ಲಕ್ಷ ಬಾಕಿ ಇದೆ ಎಂದು ಬ್ಯಾಂಕ್ನಿಂದ ನೋಟಿಸ್…

Read More

ವಿಜಯಪುರ : ಕಾರಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿಯ ಮನಾವರ ದೊಡ್ಡಿ ಬಳಿ ಈ ಒಂದು ಭೀಕರ ಹತ್ಯೆ ನಡೆದಿದೆ. ಹೌದು ಹಾಡ ಹಗಲೇ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಸತೀಶ ರಾಠೋಡ್ ಎನ್ನುವ ವ್ಯಕ್ತಿಯನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಅರಕೇರಿಯ ಮನಾವರ ದೊಡ್ಡಿ ಬಳಿ ಈ ಒಂದು ಘಟನೆ ನಡೆದಿದ್ದು, ಈ ಒಂದು ಗುಂಡಿನ ದಾಳಿಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ರಮೇಶ್ ಚೌವ್ಹಾಣ ಹಾಗೂ ಇತರೆ ಆರೋಪಿಗಳಿಂದ ಈ ಒಂದು ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಸತೀಶ್ ಮೇಲೆ ದಾಳಿ ಮಾಡುವ ಸಂದರ್ಭದಲ್ಲಿ ಓರ್ವನ ಕಿವಿ ಕೂಡ ಕಟ್ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಾಗಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ತುಮಕೂರು : ತುಮಕೂರಿನಲ್ಲಿ ಘೋರವಾದ ದುರಂತ ಸಂಭವಿಸಿದ್ದು ಸೋಲಾರ್ ಪಾರ್ಕ್ ನಿರ್ಮಿಸಲು ಬಂಡೆ ಸ್ಫೋಟಿಸುವಾಗ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇನ್ನೊರ್ವ ವ್ಯಕ್ತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ, ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ಬಳಿ ಈ ಒಂದು ಘಟನೆ ಸಂಭವಿಸಿದೆ. ಮೃತ ಕಾರ್ಮಿಕನನ್ನು ರಾಯಚೂರು ಮೂಲದ ಕಾರ್ಮಿಕ ಬಸವರಾಜ್ (46) ಸಾವನ್ನಪ್ಪಿದ್ದಾರೆ ಮತ್ತೋರ್ವ ಶಿವಯ್ಯ ಎಂಬುವರಿಗೆ ಗಾಯವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಸ್ಥಳದಲ್ಲಿದ್ದ ಬಂಡೆ ಸ್ಪೋಟಿಸುವಾಗ ಈ ಒಂದು ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಬಳಸಿ ಬಂಡೆ ಸ್ಪೋಟಿಸಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಸ್ಫೋಟದ ತೀವ್ರತೆಗೆ ಸಮೀಪದಲ್ಲಿದ್ದ ಬೆಟ್ಟಕ್ಕೂ ಬೆಂಕಿ ವ್ಯಾಪಿಸಿದೆ. ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸುವ ಕಾರ್ಯ ನಡೆಸಿದ್ದಾರೆ. ತಿರುಮಣಿ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್. ಇದೀಗ ನಿನ್ನ ನಡೆದ ಬಿಗ್ ಬಾಸ್ ಸೀಸನ್ 11ರ ಗ್ರಾಂಡ್ ಫಿನಾಲೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಹನುಮಂತು ಅವರು ಬಿಗ್ ಬಾಸ್ ಸೀಸನ್ 11 ಕಪ್ ವಿನ್ ಆಗಿದ್ದಾರೆ. ಅಲ್ಲದೆ ಒಂದು ಶೋ ನಿರೂಪಣೆ ಕಾರ್ಯಕ್ರಮ ನಡೆಸಿ ಕೊಡುತ್ತಿದ್ದ ಕಿಚ್ಚ ಸುದೀಪ್ ಅವರು ಕೂಡ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಇದು ನನ್ನ ಕೊನೆಯ ಸೀಸನ್ ಇನ್ಮುಂದೆ ನಿರೂಪಣೆ ಮಾಡಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆದರೆ ಬಿಗ್ ಬಾಸ್ ಶೋ ನಿರ್ದೇಶಕರಾದಂತಹ ಪ್ರಕಾಶ್ ಗೋಪಾಲಕೃಷ್ಣ ಅವರು, ನಿನ್ನೆ ನಡೆದ ಸುದ್ದಿಗೋಷ್ಟಿಯಲ್ಲಿ ಸುದೀಪ್ ಸರ್ ಇಲ್ಲದೆ ಬಿಗ್ ಬಾಸ್ ಅನ್ನು ಊಹಿಸಿಕೊಳ್ಳೋಕು ಆಗುವುದಿಲ್ಲ. ಅವರಿಲ್ಲದೆ ಬಿಗ್ ಬಾಸ್ ಶೋ ಇಲ್ಲ. ಮುಂದಿನ ಸೀಸನ್ ಅವರೇ ಇರುತ್ತಾರೆ. ಸುದೀಪ್ ಸರ್ ಇಲ್ಲದೇ ಯೋಚನೆ ಮಾಡೋಕೆ ಆಗುತ್ತಾ? ಅವರನ್ನು ಒಪ್ಪಿಸುತ್ತೇವೆ. ಈ ಹಿಂದೆ 10 ಸೀಸನ್ ಸಾಕು ಅಂತ ಹೇಳಿದ್ದರು. ಈಗ ಮುಂದಿನ ಸೀಸನ್‌ಗೂ…

Read More

ಕಲಬುರ್ಗಿ : ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಎಲ್ಲಾ ಅಧಿಕಾರಿಗಳು ಕೆಲಸ ಮಾಡುತ್ತಿದ್ದು ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿಯಾಗಿದೆ. ಹಾಗಾಗಿ ಎಲ್ಲಾ ಅಧಿಕಾರಿಗಳು ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕಲ್ಬುರ್ಗಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ತಿಳಿಸಿದರು. ಇಂದು ಕಲಬುರ್ಗಿಯಲ್ಲಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಸ್ಟರ್ ಡ್ಯಾಶ್ ಬೋರ್ಡ್ ಉದ್ಘಾಟಿಸಿ ಮಾತನಾಡಿದರು.ಇನ್ನುಮುಂದೆ ಕಲ್ಬುರ್ಗಿಯ ಎಲ್ಲಾ ಠಾಣಾ ವ್ಯಾಪ್ತಿಯ ನೇರ ದೃಶ್ಯ ಒಂದೆಡೆ ಲಭ್ಯವಾಗಲಿದೆ. ಕಲ್ಬುರ್ಗಿ ನಗರ ವ್ಯಾಪ್ತಿಯಲ್ಲಿ ಒಟ್ಟು 113 ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು ಬೆಂಗಳೂರಿನಲ್ಲೂ ಈ ಸಿಸ್ಟಮ್ ಮಾಡುವ ಯೋಜನೆ ಇದೆ. ಅದಕ್ಕೂ ಮೊದಲು ಕಲಬುರ್ಗಿಯಲ್ಲಿ ಈ ಒಂದು ಯೋಜನೆ ಅನುಷ್ಠಾನ ಮಾಡಿದ್ದಾರೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ ಇದ್ದು ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಕಲಬುರ್ಗಿಯಲ್ಲಿ ಗೃಹ ಸಚಿವಾಜಿ ಪರಮೇಶ್ವರ್ ತಿಳಿಸಿದರು.

Read More

ಕಲಬುರ್ಗಿ : ಮುಂದಿನ 6-7ತಿಂಗಳಲ್ಲಿ 1,200 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತೇವೆ. ರಾಜ್ಯದಲ್ಲಿ 10 ರಿಂದ 12 ಸಾವಿರ ಪೋಲಿಸ್ ಸಿಬ್ಬಂದಿಗಳ ಕೊರತೆ ಇದೆ. ಅದನ್ನು ಕೂಡ ಭರ್ತಿ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ ಎಂದು ಕಲಬುರ್ಗಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಇಂದು ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಾನೂನು ಸುವ್ಯವಸ್ಥೆ ಹಾಳಾಗಿದೆ ಅಂತಾರೆ. ಅಂತಹ ಒಂದು ಉದಾಹರಣೆ ಕೊಡಿ? ಸುಮ್ಮನೆ ಜನರಲ್ ಆಗಿ ಆರೋಪಗಳನ್ನು ಮಾಡಬಾರದು. ಅವರ ಕಾಲದಲ್ಲಿ ಎಷ್ಟು ಆಗಿದೆ ಎಂಬುವುದರ ಬಗ್ಗೆ ದಾಖಲೆ ಇದೆ. ಅದನ್ನು ಸಮಯ ಬಂದಾಗ ನಾವು ಬಿಡುಗಡೆ ಮಾಡುತ್ತೇವೆ ಎಂದು ಅವರು ತಿಳಿಸಿದರು. ಇನ್ನು ಮಂಗಳೂರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, 48 ಗಂಟೆಯಲ್ಲಿ ಮಂಗಳೂರು ದರೋಡೆ ಕೇಸ್ ಬೇಧಿಸಿದ್ದೇವೆ. ಬೀದರ್ ದರೋಡೆ ಕೇಸ್ ಕೂಡ ಕೊನೆಯ ಹಂತದಲ್ಲಿದೆ. ಆದಷ್ಟು ಬೇಗ ನಮ್ಮ ಪೊಲೀಸರು ಅವರನ್ನು ಕೂಡ ಅರೆಸ್ಟ್ ಮಾಡುತ್ತಾರೆ ಎಂದು ಕಲಬುರ್ಗಿಯಲ್ಲಿ ಗೃಹ ಸಚಿವ ಜಿ…

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ‘ಹಸಿರಾಯಿತು ಕನ್ನಡ ಉಸಿರಾಯಿತು ಕನ್ನಡ’ ಎಂದು ವರ್ಷಪೂರ್ತಿ ಆಚರಿಸುತ್ತ ಬಂದಿದ್ದೇವೆ.ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸಂದೇಶ ನೀಡುವ ಕೆಲಸ ಮಾಡಿದ್ದೇವೆ ಎಂದು ವಿಧಾನಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ನೀಡಿದರು. ಬೆಂಗಳೂರಿನ ವಿಧಾನಸೌಧದ ಬಳಿ ಭುವನೇಶ್ವರಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸಂದೇಶ ನೀಡುವ ಕೆಲಸ ಮಾಡಿದ್ದೇವೆ. ರಾಜ್ಯಾದ್ಯಂತ ರಥಯಾತ್ರೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಎಲ್ಲಾ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಹಾಕಿಸುವ ಕೆಲಸವಾಗಿದೆ. ಅಲ್ಲದೆ ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ ಮಾಡಲಾಗಿದೆ. ನವೆಂಬರ್ 1ರಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡುತ್ತಿದ್ದರು. ನಮ್ಮ ಸರ್ಕಾರ ಅದಕ್ಕೆ ಬ್ರೇಕ್ ಹಾಕಿದೆ. ನಮ್ಮದು ಕನ್ನಡಿಗರ ಸರ್ಕಾರ. ನೆಲ, ಜಲ ಭಾಷೆ ವಿಚಾರದಲ್ಲಿ ಸರ್ಕಾರ ಕನ್ನಡಿಗರ ಪರ ನಿಲ್ಲುತ್ತದೆ. ನಾಮಫಲಕ ಅಳವಡಿಕೆಯಲ್ಲೂ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದೇವೆ. ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಜಾಗ…

Read More

ಹಾಸನ : ಇತ್ತೀಚಿಗೆ ರಾಜ್ಯದಲ್ಲಿ ಅಪಘಾತಗಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಹಾಸನದಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು ನಿಯಂತ್ರಣ ತಪ್ಪಿ ಥಾರ್ ಜೀಪ್ ಒಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಘಟನೆ, ಹಾಸನ ತಾಲೂಕಿನ ತಾಲ್ಲೂಕಿನ ಶಂಕರನಹಳ್ಳಿ ಬಳಿ ನಡೆದಿದೆ. ಮೃತ ಯುವಕನನ್ನು ಅರಕಲಗೂಡು ತಾಲ್ಲೂಕು ಕೊಂಗಳ್ಳಿ ಗ್ರಾಮದ ನಿಶ್ಚಿತ್‌ (28) ಎಂದು ತಿಳಿದುಬಂದಿದೆ. ವೇಗವಾಗಿ ಬಂದಂತಹ ಥಾರ್‌ ಜೀಪ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸಂಪೂರ್ಣ ಜೀಪ್ ಜಖಂಗೊಂಡಿದೆ. ಜೀಪ್‌ನಲ್ಲಿ ನಾಲ್ವರು ಯುವಕರು ತೆರಳುತ್ತಿದ್ದರು. ಈ ವೇಳೆ ನಿಶ್ಚಿತ್‌ ಸ್ಥಳದಲ್ಲಿ ಸಾವನ್ನಪ್ಪಿದ್ದು ಉಳಿದ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗೊರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More

ಬೆಳಗಾವಿ : ಜಿಲ್ಲೆಯಲ್ಲಿ ಇತ್ತೀಚೆಗೆ ಮಕ್ಕಳ ಮಾರಾಟ ಕೇಸ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಮಕ್ಕಳ ಕಿಡ್ನಾಪ್ ಕೇಸ್ ಗಳಲ್ಲಿ ಬೆಳಗಾವಿ ಪೊಲೀಸರು ಹಲವು ಪ್ರಕರಣಗಳನ್ನು ಬೇಧಿಸಿದ್ದು, ಇದೀಗ ಹುಕ್ಕೇರಿ ತಾಲ್ಲೂಕಿನ ಸುಲ್ತಾನಪುರದ 5 ವರ್ಷದ ಗಂಡು ಮಗುವನ್ನು ಮಾರಿದ್ದ ಪ್ರಕರಣ ಭೇದಿಸಿದ ಹುಕ್ಕೇರಿ ಠಾಣೆ ಪೊಲೀಸರು, ಮಹಾರಾಷ್ಟ್ರದ ಇಬ್ಬರು ಮಹಿಳೆಯರನ್ನು ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ಕೊಲ್ಹಾಪುರ ಜಿಲ್ಲೆಯ ಗಡಹಿಂಗ್ಲಜ್ ತಾಲೂಕಿನ ಮಾದ್ಯಾಳದ ಸಂಗೀತಾ ಹಮ್ಮನ್ನವರ, ರತ್ನಾಗಿರಿ ಜಿಲ್ಲೆಯ ಚಿಪಳುನ ತಾಲೂಕಿನ ನಿವಳಿಯ ಮೋಹನ ತಾವಡೆ ಮತ್ತು ಆತನ ಪತ್ನಿ ಸಂಗೀತಾ ತಾವಡೆ ಬಂಧಿತ ಆರೋಪಿಗಳು. ಇನ್ನಿಬ್ಬರು ಆರೋಪಿಗಳಾದ ನಂದಕುಮಾರ ಸೀತಾರಾಮ್ ಡೋರಲೇಕರ್ ಮತ್ತು ಆತನ ಪತ್ನಿ ನಂದಿನಿ ನಂದಕುಮಾರ ಡೋರಲೇಕರ್ ಪತ್ತೆಗೆ ಶೋಧ ಕಾರ್ಯವನ್ನು ಪೊಲೀಸರು ಮುಂದುವರೆಸಿದ್ದಾರೆ. ಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ. ಪ್ರಕರಣ ಹಿನ್ನೆಲೆ? ಸುಲ್ತಾನಪುರದ ಅರ್ಚನಾ ಮಗದುಮ್ಮ ಹಾಗೂ ರಾಜು ಮಗದುಮ್ಮ ವಿವಾಹವಾಗಿದ್ದರು. ಇಬ್ಬರಿಗೂ ಇದು ಎರಡನೇ…

Read More