Author: kannadanewsnow05

ಬೆಂಗಳೂರು : ಇತ್ತೀಚಿಗೆ ತುಮಕೂರು ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಕುರಿತು ಹಲವು ಚರ್ಚೆ ನಡೆದಿತ್ತು. ಇದೇ ವಿಚಾರವಾಗಿ ಸಿದ್ದಗಂಗಾ ಮಠದ ಶ್ರೀಗಳು ಸಹ ತುಮಕೂರು ಜಿಲ್ಲೆಯ ಹೆಸರು ಬದಲಾವಣೆ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಯಾವುದೇ ಕಾರಣಕ್ಕೂ ತುಮಕೂರು ಜಿಲ್ಲೆಯ ಹೆಸರನ್ನು ಬದಲಾಯಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಹುಟ್ಟು ಹಬ್ಬದಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ತುಮಕೂರು ಜಿಲ್ಲೆಯ ಹೆಸರು ಬದಲಾಯಿಸುವುದಿಲ್ಲ. ಬೆಂಗಳೂರು ವ್ಯಾಪ್ತಿಗೆ ಸೇರಿಸುವ ಪ್ರಶ್ನೆಗೆ ನಾನು ಉತ್ತರಿಸಿದ್ದೆ ಆದರೂ ಆಗಬಹುದು ಎಂದಿದ್ದೆ ಆದರೆ ತುಮಕೂರು ಹೆಸರು ಬದಲಾಯಿಸುತ್ತೇವೆ ಅಂತ ಹೇಳಿಲ್ಲ ಜಿಲ್ಲೆಯ ಹೆಸರು ಯಾವುದೇ ಕಾರಣಕ್ಕೂ ಬದಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ತುಮಕೂರು ಬೆಂಗಳೂರಿನ ದಕ್ಷಿಣ ಆಗಬಹುದು ಅಂತ ಕೇಳಿದಾಗ ನಾನು ಆದರೂ ಆಗಬಹುದು ಅಂತ ಹೇಳಿದ್ದೆ. ಆದರೆ ತುಮಕೂರಿನ ಜಿಲ್ಲೆಯ ಹೆಸರು ಬದಲಾಯಿಸುತ್ತೇವೆ ಅಂತ ನಾನು ಹೇಳಿರಲಿಲ್ಲ. ತುಮಕೂರಿನ…

Read More

ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರ ಅಮೆರಿಕ ಪ್ರವಾಸಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರವಾಸದ ನಿರ್ಬಂಧ ತೆರವು ಮಾಡಿ ಕೇಂದ್ರ ಸರ್ಕಾರ ಮರು ಅದೇಶ ಹೊರಡಿಸಿದೆ. ಈ ವಿಚಾರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಈ ಮೊದಲು ನನ್ನನ್ನು ಅಮೆರಿಕಕ್ಕೆ ಹೋಗದಂತೆ ತಡೆದುದ್ದಕ್ಕೆ ಕಾರಣ ಕೊಡಬೇಕು ಇಲ್ಲವಾದರೆ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟ್ರೈನ್ ಹೋದ ಮೇಲೆ ತಾತ್ಕಾಲಿಕ ಟಿಕೆಟ್ ಇಶ್ಯೂ ಮಾಡಿದ್ದಾರೆ. ಅನುಮತಿ ಕೊಟ್ಟಂತೆ ಆಗಬೇಕು ತಡೆದಂತೆಯೂ ಆಗಬೇಕು. ಇದು ಕರ್ನಾಟಕಕ್ಕೆ ಮಾಡಿರುವ ಅವಮಾನ. ಕರ್ನಾಟಕ ರಾಜ್ಯಕ್ಕೆ ಬಂಡವಾಳ ಹೂಡಿಕೆ ಆಕರ್ಷಿಸಲು ಹೋಗುತ್ತಿದ್ದೆ. ರಾಜಕ್ಕೆ ಬಂಡವಾಳ ತರುವುದನ್ನು ಕೇಂದ್ರ ಸರ್ಕಾರ ತಡೆಹಿಡಿದಿದೆ. ನನ್ನನ್ನು ಮೊದಲು ತಡೆದಿದ್ದು ಯಾಕೆ ಅದಕ್ಕೆ ಕಾರಣ ಕೊಡಲಿ. ಈಗಾಗಲೇ ಕಾರಣ ಕೇಳಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಅಮೆರಿಕಕ್ಕೆ ಹೋಗದಂತೆ ತಡೆದಿದ್ದರ ಬಗ್ಗೆ ಸ್ಪಷ್ಟವಾದ ಕಾರಣ ಬೇಕು. ಸರಿಯಾದ ಕಾರಣ ಕೊಡದಿದ್ದರೆ ಕಾನೂನು ಹೋರಾಟ…

Read More

ಬೆಂಗಳೂರು : ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ ಇರಾನ್ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಸರ್ಕಾರ ಸಿಂಧು ಕಾರ್ಯಾಚರಣೆಯನ್ನು ಪ್ರಾರಂಭಿಸಿತು.ಇದೀಗ ಇರಾನ್ ಅಲ್ಲಿ ಸಿಲುಕಿದ್ದ 16 ಜನ ಕನ್ನಡಿಗರು ಇಂದು ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದಾರೆ. ಹೌದು ಇರಾನ್ ಅಲ್ಲಿ ಸಿಲುಕಿದ್ದ ಕನ್ನಡಿಗರು ಇಂದು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ. 16 ಜನ ಕನ್ನಡಿಗರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 16 ಜನ ಕನ್ನಡಿಗರು ಸುರಕ್ಷಿತವಾಗಿ ಬಂದಿಳಿದಿದ್ದಾರೆ. ಸಂಜೆ ಮತ್ತೆರಡು ವಿಮಾನಗಳು ದೆಹಲಿಗೆ ಆಗಮಿಸಲಿವೆ ಎಂದು ತಿಳಿದುಬಂದಿದೆ.

Read More

ರಾಯಚೂರು : ಯಾದಗಿರಿಯಲ್ಲಿ ಘೋರ ದುರಂತ ನಡೆದಿದ್ದು, ಕೆರೆಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ಮುಳುಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಯ ಹಿರೇನಗನೂರು ಗ್ರಾಮದ ಹೊರವಲಯದ ಕ್ಯಾಸರ್ ಹಾಳ ಕರೆಯಲ್ಲಿ, ಮೌನೇಶ್ ಶಿವಣ್ಣ (18) ಎಂಬ ಯುವಕ ಕುರಿಗಳನ್ನು ಕಾಯುತ್ತಾ ಕೆರೆ ಬಳಿ ತೆರಳಿದ್ದ ಇತರ ಕುರಿಗಾಹಿ ಯುವಕರು ಈಜಲು ಇಳಿದಿದ್ದರು. ಮೌನೇಶ್ ಕೂಡ ನೀರಿನಲ್ಲಿ ಈಜಲು ಇಳಿದಿದ್ದ. ಈ ವೇಳೆ ಮೌನೇಶ್ ಕೆರೆಯಲ್ಲಿ ಒಮ್ಮೆಲೇ ಮುಳುಗಿದ್ದಾನೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದರು. ಘಟನಾ ಸ್ಥಳಕ್ಕೆ ಹಟ್ಟಿ ಪೊಲೀಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಕುರಿತಂತೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಾಗಲಕೋಟೆ : ಕೇವಲ ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಕಸ್ತ್ರಗಳಿಂದ, ದೊಣ್ಣೆ ಹಾಗೂ ಹಾಕಿ ಸ್ಟಿಕ್ ಗಳಿಂದ ಮಾರಾಮಾರಿ ನಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹೊಸಪೇಟೆ ನಗರದಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ಹೌದು ಬಾಗಲಕೋಟೆಯಲ್ಲಿ ಎರಡು ಗುಂಪುಗಳ ಮಧ್ಯ ಮಾರಾಮಾರಿ ನಡೆದಿದೆ. ಮಾರಕಾಸ್ತ್ರ, ದೊಣ್ಣೆ ಹಾಗು ಹಾಕಿ ಸ್ಟಿಕ್ ಹಿಡಿದುಕೊಂಡು ಗಲಾಟೆ ಮಾಡಿದ್ದಾರೆ. ರಸ್ತೆಗೆ ಅಡ್ಡಲಾಗಿ ನಿಂತಿದ್ದ ವಾಹನದ ವಿಚಾರವಾಗಿ ಗಲಾಟೆ ನಡೆದಿದೆ. ವಾಹನ ಸೈಡಿಗೆ ಹಾಕಿ ಅಂತ ಹೇಳಿದ್ದಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಇಳಕಲ್ ನಗರದ ಹೊಸಪೇಟೆ ಗಲ್ಲಿಯಲ್ಲಿ ಈ ಒಂದು ಘಟನೆ ನಡೆದಿದೆ. ದಾದಾಪೀರ್ ಜಕ್ಕಲಿ, ಶಾಮಿದ್ ರೇಷ್ಮೆ, ರಂಜಾನ್ ಬನ್ನು ಎಂಬ ಯುವಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಇದೀಗ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Read More

ವಿಜಯಪುರ : ವಿಜಯಪುರದಲ್ಲಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಳ್ಳಭಟ್ಟಿ ನಡೆಸುತ್ತಿದ್ದ ಅಡ್ಡೆಗಳಮೇಲೆ ಏಕಕಾಲಕ್ಕೆ ಅಬಕಾರಿ ಪೊಲೀಸರು ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಮೇರೆಗೆ ಅಬಕಾರಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಕುರುಬರದಿನ್ನಿ ತಾಂಡ, ಮುಳವಾಡ ತಾಂಡದಲ್ಲಿ ಈ ಒಂದು ದಾಳಿ ನಡೆದಿದೆ. ಕುರುಬರದಿನಿ ತಾಂಡಾದಲ್ಲಿ 35 ಬಿಂದಿಗೆಗಳಲ್ಲಿ ಕಳಬಟ್ಟಿ ತುಂಬಿ ಇಡಲಾಗಿತ್ತು. ಮುಳುವಾಡ ಎಲ್‌ಟಿ 2 ಬಳಿ ಜಮೀನಿನಲ್ಲಿ ಕಳ್ಳಬಟ್ಟಿ ತಯಾರಿಸುತ್ತಿದ್ದರು. ಕಳ್ಳಬಟ್ಟಿ ಯನ್ನು ಬಸವನಬಾಗೇವಾಡಿ ಅಬಕಾರಿ ಪೊಲೀಸ್ ಸರು ನಾಶಪಡಿಸಿದ್ದಾರೆ. ಅಕ್ರಮವಾಗಿ ಜಮೀನಿನಲ್ಲಿ ಕಲಬಟ್ಟಿ ದಂಧೆ ನಡೆಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಜಮೀನು ಮಾಲೀಕರನ್ನು ಸಧ್ಯಾಬಕಾರಿ ಪೊಲೀಸರ ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಹೆರಿಗೆ ಮಾಡಿಸುವುದರಲ್ಲಿ ವಿಳಂಬ ಮಾಡಿದ್ದರಿಂದ ಮಗು ಸಾವನಪ್ಪಿದೆ. ಬೆಂಗಳೂರಿನ ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ. ಸಂಗೀತಂ ಜೋಸ್ನಾ ಹಾಗು ಸುನೀಲ್ ದಂಪತಿಗಳ ಮಗು ಇದೀಗ ಸಾವನಪ್ಪಿದೆ. ಬೆಂಗಳೂರಿನ ಕಮಲಾನಗರದ ನಿವಾಸಿಯಾಗಿರುವ ಸಂಗೀತಂ ಮತ್ತು ಸುನಿಲ್ ಹೆರಿಗೆ ವಿಳಂಬ ಮಾಡಿಸಿದಕ್ಕೆ ಮಗು ಸಾವನ್ನಪ್ಪಿದೆ ಎಂದು ಆಸ್ಪತ್ರೆಯ ವಿರುದ್ಧ ಆರೋಪ ಮಾಡಿದ್ದಾರೆ. ಹೆರಿಗೆ ನೋವು ಹಿನ್ನೆಲೆ, ಆಸ್ಪತ್ರೆಗೆ ಕರೆತಂದಿದ್ದರು ಸೋಮವಾರ ನೋವು ಕಂಡು ಬಂದರೂ ಕೂಡ ಹೆರಿಗೆ ಮಾಡಿಸಿಲ್ಲ. ನೋವು ಬಂದು ವಿಪರೀತ ವಾಟರ್ ಡಿಸ್ಚಾರ್ಜ್ ಆಗಿದೆ ಡೆಲಿವರಿ ಮಾಡಿಸಿ ಅಂತ ಹೇಳಿದರು ಕೂಡ ಹೆರಿಗೆ ಮಾಡಿಸಿಲ್ಲ. ಮಂಗಳವಾರ ಬೆಳಿಗ್ಗೆ ಮಾಡಿದ್ದಾರೆ. ಮಗು ಸ್ಯಾನಿಟರಿ ನೀರು ಕುಡಿದಿದೆ ಅಂತ ಐಸಿಯುನಲ್ಲಿ ಇಟ್ಟಿದ್ದಾರೆ. ಆದರೆ ಇವತ್ತು ಮಗು ಮೃತಪಟ್ಟಿದೆ. ಮಧ್ಯಾಹ್ನದಿಂದ ಆಸ್ಪತ್ರೆಯಲ್ಲಿ ಯಾವ ಡಾಕ್ಟರ್ ಸಹ ಇರಲಿಲ್ಲ ಎಂದು ಸಂಬಂಧಿಕರು ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದ್ದು ಇದರ ಮಧ್ಯ ಕೊರೋನಾ ಆರ್ಭಟವು ಜೋರಾಗಿದೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮತ್ತೆ 72 ಹೊಸ ಕರೋನಾ ಪ್ರಕರಣಗಳು ಪತಿಯಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಕುರಿತು ಮಾಹಿತಿ ನೀಡಿದೆ. ಹೌದು ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 72 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 287 ಕ್ಕೆ ಏರಿಕೆಯಾಗಿದ್ದು, ಇದುವರೆಗೂ ರಾಜ್ಯದಲ್ಲಿ ಕೊರೊನ ಆಕ್ಟಿವ್ ಪ್ರಕರಣಗಳ ಸಂಖ್ಯೆ 27 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Read More

ಯಾದಗಿರಿ : ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾನೂನು ವಿದ್ಯಾರ್ಥಿಯನ್ನು ಬಲವಂತವಾಗಿ ತಡೆದು ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸುರಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ರಸ್ತೆಯಲ್ಲಿ ತೆರಳುತ್ತಿದ್ದ ಕಾನೂನು ವಿದ್ಯಾರ್ಥಿಯನ್ನು ಸವರ್ಣೀಯರು ಅಡ್ಡಗಟ್ಟಿ ಜಾತಿನಿಂದನೆ ಮಾಡಿದ್ದು ಅಲ್ಲದೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ರಸ್ತೆಯಲ್ಲಿ ಹೋಗುವಾಗ ಕಾನೂನು ವಿದ್ಯಾರ್ಥಿಯಾದ ದುರ್ಗಪ್ಪನನ್ನು ತಡೆದು ಜಾತಿನಿಂದನೆ ಮಾಡಿದ್ದಾರೆ. ಯಾವುದೇ ಕಾರಣವಿಲ್ಲದೆ ದಾರಿಯಲ್ಲಿ ತಡೆದು ಸವರ್ಣೀಯರು ಜಾತಿ ನಿಂದನೆ ಮಾಡಿದ್ದಾರೆ. ಮಲ್ಲಯ್ಯ ಹುಲಕಲ್ ಮತ್ತು ಅರ್ಜುನಪ್ಪ ದೇವಡಿಯಿಂದ ಈ ಒಂದು ಕೃತ್ಯ ನಡೆದಿದೆ. ಜಾತಿ ನಿಂದನೆ ಮಾಡಿದ್ದು ಅಲ್ಲದೆ ದುರ್ಗಪ್ಪನ ಮೇಲೆ ಹಲ್ಲೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿರುವ ವಿಡಿಯೋ ವೈರಲ್ ಆಗಿದೆ ಈ ಕುರಿತಂತೆ, SC, ST…

Read More

ಬೆಂಗಳೂರು : ಚಿತ್ರದ ಪ್ರಚಾರಕ್ಕೆ ರಚಿತಾ ರಾಮ್ ಬರುತ್ತಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ. ನಿರ್ಮಾಪಕ ನಿರ್ದೇಶಕ ಮತ್ತು ನಟರ ಹೇಳಿಕೆಯಿಂದ ಬೇಜಾರಾಗಿದೆ. ಅವರು ನನ್ನ ಬಗ್ಗೆ ಹೇಳಿದ ಮಾತುಗಳಿಂದ ನನಗೆ ಬಹಳ ಬೇಜಾರಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತಾ ರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ. ಸಂಜು ವೆಡ್ಸ್ ಗೀತಾ-2 ಪ್ರಚಾರಕ್ಕೆ ನಟಿ ರಚಿತಾ ರಾಮ್ ಪ್ರಚಾರಕ್ಕೆ ಬರುತ್ತಿಲ್ಲ ಎಂದು ಇತ್ತೀಚಿಗೆ ಆರೋಪಿಸಲಾಗಿತು. ನಟಿ ರಚಿತ ವಿರುದ್ಧ ನಟ ಶ್ರೀನಗರ ಕಿಟ್ಟಿ ನಿರ್ದೇಶಕ ನಾಗಶೇಖರ್ ಆರೋಪಿಸಿದ್ದರು. ಅಲ್ಲದೆ ರಚಿತರಾಮ್ ವಿರುದ್ಧ ಫಿಲಂ ಚೇಂಬರ್ಗು, ದೂರು ನೀಡಲಾಗಿತ್ತು. ಇದೀಗ ಈ ವಿಚಾರವಾಗಿ ನಟಿ ರಚಿತಾ ರಾಮ್ ಅವರು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸುಧೀರ್ಘವಾಗಿ ಮಾತನಾಡಿದ್ದು, ನಟ ಶ್ರೀನಗರ ಕಿಟ್ಟಿ ನಿರ್ದೇಶಕ ನಾಗಶೇಖರ್ ಅವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರಚಿತಾ ರಾಮ್ ಹೇಳಿದ್ದೇನು? ಈ ಒಂದು ಚಿತ್ರದ ತಂಡದ ಜೊತೆ ಒಂದು ಮುಕ್ಕಾಲು ವರ್ಷಗಳ ಕಾಲ…

Read More