Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದೀಗ ತಾಂತ್ರಿಕ ಸಮಸ್ಯೆ ಬಗೆಹರಿಸಲಾಗಿದ್ದು ಎಂದಿನಂತೆ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚರಿಸಲಿವೆ ಎಂದು ಬಿಎಂಆರ್ಸಿಎಲ್ ಟ್ವೀಟ್ ಮೂಲಕ ತಿಳಿಸಿದೆ. ತಾಂತ್ರಿಕ ಸಮಸ್ಯೆಯನ್ನು ಬೆಳಿಗ್ಗೆ 08:47 ಗಂಟೆಗೆ ಪರಿಹರಿಸಲಾಗಿದೆ ಮತ್ತು ಹಳದಿ ಮಾರ್ಗದ ಎಲ್ಲಾ ರೈಲುಗಳು ಈಗ ಎಂದಿನಂತೆ ಸೇವೆಯಲ್ಲಿ ಇವೆ. ರೈಲು ಸೇವೆಗಳು ಪುನರಾರಂಭಗೊಂಡಿದ್ದು, ಈಗ ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿವೆ ಎಂದು ಟ್ವೀಟ್ ನಲ್ಲಿ BMRCL ಮಾಹಿತಿ ಹಂಚಿಕೊಂಡಿದೆ. ಇಂದು ಬೆಳಿಗ್ಗೆ ಬಿಎಂಆರ್ ಸಿಎಲ್ ಈ ಕುರಿತು ಮಾಹಿತಿ ನೀಡಿದ್ದು, ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾದ ಕಾರಣ, ರೈಲು ಸಂಚಾರದಲ್ಲಿ ವಿಳಂಬ ಉಂಟಾಗುವ ಸಾಧ್ಯತೆ ಇದೆ ಎಂದು ತಿಳಿಸಿತ್ತು. ಇದೀಗ ತಾಂತ್ರಿಕ ಸಮಸ್ಯೆ ಪರಿಹಾರವಾಗಿದ್ದು ಎಂದಿನಂತೆ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚರಿಸಲಿದೆ ಎಂದು ಮಾಹಿತಿ ಹಂಚಿಕೊಂಡಿದೆ. https://twitter.com/OfficialBMRCL/status/1988455624448110994?t=S5tXs6ySecVEz4XZwYj3Sg&s=19
ಚಿಕ್ಕಮಗಳೂರು : ಮದ್ಯ ಸೇವಿಸಿ ಮನೆಯವರು ಬೈಯ್ತಾರೆ ಎಂದು ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಸಂಬಂಧಿಕರ ಮದುವೆಯಲ್ಲಿ ಬಾಲಕನಿಗೆ ಪಾರ್ಟಿಯಲ್ಲಿ ಎಣ್ಣೆ ಕುಡಿಸಿರುವ ಶಂಕೆ ವ್ಯಕ್ತವಾಗಿದ್ದು, ಎಣ್ಣೆ ಕುಡಿದಿರುವುದು ಮನೆಯಲ್ಲಿ ಗೊತ್ತಾದರೆ ಬಯ್ಯುತ್ತಾರೆ ಎಂಬ ಭಯಕ್ಕೆ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ನೇಣು ಬಿಗಿದುಕೊಂಡು ಪ್ರವಚನ್ (13) ಎನ್ನುವ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.ಚಿಕ್ಕಮಂಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮೇಲ್ಪಾಲ್ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಶರಣಾದ ಪ್ರವಚನ್ ಮೇಲ್ಪಾಲ್ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ.ಕಳೆದ 4 ದಿನಗಳ ಹಿಂದೆ ಸಂಬಂಧಿಕರ ಮದುವೆಯಲ್ಲಿ ಬಾಲಕ ಪ್ರವಚನ್ ಗೆ ಪಾರ್ಟಿಯಲ್ಲಿ ಎಣ್ಣೆ ಕುಡಿಸಿರುವ ಶಂಕೆ ವ್ಯಕ್ತವಾಗಿದ್ದು ಮನೆಯಲ್ಲಿ ಎಣ್ಣೆ ಕುಡಿದಿರುವ ವಿಚಾರ ತಿಳಿದು ಬೈಯುತ್ತಾರೆ ಎಂದು ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ನವದೆಹಲಿ : ದೆಹಲಿಯ ಕೆಂಪು ಕೋಟೆಯ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಷ್ ಉಗ್ರ ಮುಜಾಮಿಲ್ ದೆಹಲಿ ನಂಟು ಬಯಲಾಗಿದ್ದು, ಮುಜಾಮಿಲ್ ಮೊಬೈಲ್ ನಿಂದ ಸ್ಫೋಟಕ ಮಾಹಿತಿ ಬಯಲಾಗಿದೆ. ಜೈ ಮೊಹಮ್ಮದ್ ಮಾಡೈಲಾಗ್ ಭಯೋತ್ಪಾದಕ ಮುಜಾಮಿಲ್ ನ ಮೊಬೈಲ್ ನಿಂದ ತನಿಖಾ ಸಂಸ್ಥೆಗಳಿಗೆ ಆಘಾತಕಾರಿ ರಹಸ್ಯ ಬಯಲಾಗಿದೆ. ರಾಜಧಾನಿ ದೆಹಲಿಯಲ್ಲಿ ದುಷ್ಕೃತ್ಯಕ್ಕೆ ಮುಜಮಿಲ್ ಸಂಚು ರೂಪಿಸಿದ್ದ. ಈ ವರ್ಷ ಹಲವು ಬಾರಿ ಆತ ದೆಹಲಿಗೆ ಭೇಟಿ ನೀಡಿದ್ದ. ಮುಜಾಮಿಲ್ ಮೊಬೈಲ್ ನಲ್ಲಿ ಕೆಲವು ಸೂಕ್ಷ್ಮ ಸ್ಥಳಗಳ ಚಿತ್ರಗಳು ಪತ್ತೆಯಾಗಿವೆ. ಮುಜಾಮಿಲ್ ಭೇಟಿ ಷಡ್ಯಂತರದ ಭಾಗ ಎಂದು ಏಜೆನ್ಸಿಗಳು ನಂಬಿವೆ. ದೆಹಲಿಯಲ್ಲಿ ಮುಜಾಮಿಲ್ ಯಾರನ್ನು ಬೇಟೆಯಾಗಿದ್ದ ಮತ್ತು ಆತನ ಸಂಪರ್ಕದಲ್ಲಿದ್ದವರು ಯಾರು ಎಂಬುದರ ಕುರಿತು ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಮುಜಾಮಿಲ್ ಒಂಟಿಯಾಗಿ ದೆಹಲಿಗೆ ಬಂದಿದ್ದನಾ ಅಥವಾ ಪಿತೂರಿಯಲ್ಲಿ ಬೇರೆ ಯಾರಾದರೂ ಇದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಬೆಂಗಳೂರು : ಚಳಿಗಾಲದ ಅಧಿವೇಶನದಲ್ಲಿ ಭತ್ಯೆ ಸ್ವೀಕರಿಸದಿರಲು ಶಾಸಕ ಕಂದಕೂರು ಪತ್ರ ಬರೆದಿದ್ದು ಯಾವುದೇ ರೀತಿಯ ಬಟ್ಟೆ ಬೇಡ ಎಂದು ವಿಧಾನ ಸಭೆ ಸ್ಪೀಕರ್ಗೆ ಪತ್ರ ಬರೆದಿದ್ದಾರೆ ಜೆಡಿಎಸ್ ಶಾಸಕ ಶರಣಗೌಡ ಕಂದುಕುರ್ ಸ್ಪೀಕರ್ ಗೆ ಪತ್ರ ಬರೆದಿದ್ದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಶಾಸಕರಾಗಿರುವ ಶರಣಗೌಡ ಕಂದಕೂರು ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಮತ್ತೆ ಪಡೆಯುವುದಿಲ್ಲ ಎಂದು ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಹೊರಗಿನಿಂದ ಊಟ ವಸ್ತುಗಳನ್ನು ತಂದು ಬಳಕೆಗೆ ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ. ಕಳೆದ ಬಾರಿಯ ಅಧಿವೇಶನದಲ್ಲಿ ನಾನು ಭತ್ಯೆ ಪಡೆಯಲ್ಲ ಅಂತ ಶಾಸಕ ಶರಣಗೌಡ ಕಂದಕೂರು ಹೇಳಿದ್ದರು. ಉತ್ತರ ಕರ್ನಾಟಕ ಭಾಗದ ಸಮಸ್ಯೆಯ ಬಗ್ಗೆ ಚರ್ಚಿಸಲು 25 ರಿಂದ 30 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತದೆ ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಕಳೆದ ಅಧಿವೇಶನದಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಇದುವರೆಗೂ ತಿಳಿಸಿಲ್ಲ. ಮಳೆ, ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ಸಿಕ್ಕಿಲ್ಲ. ಶಾಸಕರು ಅನುದಾನ ತಂದು ಹೊಸ…
ಕೋಲಾರ : ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ನಿನ್ನೆ ಕೋಲಾರದ ತೋಟಗಾರಿಕೆ ವಿ.ವಿ. ಕಟ್ಟಡದಲ್ಲಿ ಮತ್ತೆ ಮರು ಮತ ಎಣಿಕೆ ನಡೆಸಲಾಯಿತು ಬಳಿಕ ಶಾಸಕ ಕೆ.ವೈ ನಂಜೇಗೌಡ ಫಲಿತಾಂಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬ ಸುಳಿವನ್ನು ನೀಡಿದರು. ಬೆಳಗ್ಗೆ 8 ಗಂಟೆಯಿಂದ ಆರಂಭವಾದ ಮತಗಳ ಎಣಿಕೆ ಪ್ರಕ್ರಿಯೆಯು ಸುಮಾರು 12 ತಾಸುಗಳ ಕಾಲ ಸತತವಾಗಿ ನಡೆಯಿತು. ಮಾಲೂರು ಕ್ಷೇತ್ರದ ಹಾಲಿ ಶಾಸಕ ಕೆ.ವೈ.ನಂಜೇಗೌಡ ಹಾಗೂ ಮರುಮತ ಎಣಿಕೆಗೆ ಆಗ್ರಹಿಸಿದ್ದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಕೆ. ಎಸ್. ಮಂಜುನಾಥಗೌಡ ಹಾಗೂ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಕುಮಾರ್ ಬೆಳಿಗ್ಗೆ ಮತ ಎಣಿಕೆ ಕೇಂದ್ರವನ್ನು ಪ್ರವೇಶಿಸಿದ್ದರು. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಚುನಾವಣ ಆಯೋಗವು ಮಂಗಳವಾರ ಮತಗಳ ಮರು ಎಣಿಕೆ ಕಾರ್ಯವನ್ನು ಪೊಲೀಸ್ ಸರ್ಪಗಾವಲಿನಲ್ಲಿ ನಡೆಸಿತು.ಮಧ್ಯಾಹ್ನದ ವೇಳೆಗೆ ಮರುಮತ ಎಣಿಕೆ ಕಾರ್ಯ ಮುಕ್ತಾಯವಾಗಬಹುದೆಂಬ ನಿರೀಕ್ಷೆ ಇತ್ತಾದರೂ ರಾತ್ರಿ 8 ಗಂಟೆಯವರೆಗೂ ಮುಂದುವರಿಯಿತು. ಇದರಿಂದ ಅಭ್ಯರ್ಥಿಗಳ ಬೆಂಬಲಿಗರು ನಿರಾಸೆಗೊಳಗಾದರು.
ಬೆಂಗಳೂರು : ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಇದೀಗ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದ್ದು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿದ್ದಾರೆ ಶಾಸಕ ರಾಜು ಕಾಗೆ ಪತ್ರ ಬರೆದ ಬೆನ್ನಲ್ಲೇ ಉತ್ತರ ಕರ್ನಾಟಕ ಹೋರಾಟ ಸಮಿತಿ, ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಮೂರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿವೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಬೇಡಿಕೆ ಈಡೇರಿಸಿ. ಒಂದು ವೇಳೆ ಮೂರು ಬೇಡಿಕೆ ಈಡೇರದಿದ್ದರೆ ಪ್ರತ್ಯೇಕ ಧ್ವಜಾರೋಹಣ ನೆರವೇರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸುವರ್ಣ ಸಹೋದರ ಮೇಲೆ ಪ್ರತ್ಯೇಕ ಧ್ವಜಾರೋಹಣ ನಡೆಸಲಾಗುತ್ತದೆ. ಉತ್ತರ ಕರ್ನಾಟಕ ರಾಜ್ಯವನ್ನಾಗಿಸಿ ಎಂದು ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ. ಸ್ವಪಕ್ಷದ ಶಾಸಕ ರಾಜು ಕಾಗೆಯಿಂದಲೇ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. 15 ಜಿಲ್ಲೆಗಳನ್ನು ಒಳಗೊಂಡ ಉತ್ತರ ಕರ್ನಾಟಕ ಪ್ರತ್ಯೇಕವಾಗಿಸಲು ಕೋರಿದ್ದಾರೆ.…
ಬೆಂಗಳೂರು : ನಟ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ್ ಮೂಲದ ವಿಕಾಸ್ ಕುಮಾರ್ ಎಂದು ತಿಳಿದುಬಂದಿದೆ. ಆನ್ಲೈನ್ ಲಿಂಕ್ ಮೂಲಕ ಪ್ರಿಯಾಂಕಾ ಅವರ ವಾಟ್ಸಾಪ್ ಹ್ಯಾಕ್ ಮಾಡಿ, ಹಣ ವರ್ಗಾಯಿಸಲು ವಂಚಕರು ಸಂದೇಶ ಕಳುಹಿಸಿದ್ದರು. ಇನ್ನು, ಪೊಲೀಸರ ತನಿಖೆ ವೇಳೆ ಬಿಹಾರದಲ್ಲಿ ಒಂದೇ ಊರಿನ 150ಕ್ಕೂ ಹೆಚ್ಚು ಯುವಕರು ಸೈಬರ್ ಅಪರಾಧದಲ್ಲಿ ತೊಡಗಿರುವ ಅಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಹೌದು ಸೆ.15ರಂದು ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಆಗಿತ್ತು. ಆನ್ಲೈನ್ನಲ್ಲಿ ಕೆಲ ವಸ್ತುಗಳನ್ನು ಪ್ರಿಯಾಂಕಾ ಉಪೇಂದ್ರ ಬುಕ್ ಮಾಡಿದ್ದರು. ಈ ವೇಳೆ ಮೊಬೈಲ್ಗೆ ಲಿಂಕ್ ಬಂದಿದ್ದು, ಆ ಲಿಂಕ್ ಅನ್ನು ಪ್ರಿಯಾಂಕ ಕ್ಲಿಕ್ ಮಾಡಿದ್ದರು. ಬಳಿಕ ನಟಿ ಪ್ರಿಯಾಂಕಾ ವಾಟ್ಸಾಪ್ ಹ್ಯಾಕ್ ಮಾಡಿದ್ದ ಖದೀಮ, ಅವರ ಸಂಪರ್ಕದಲ್ಲಿದ್ದವರಿಗೆ 55 ಸಾವಿರ ಹಣ ಕಳುಹಿಸುವಂತೆ ಮೆಸೇಜ್ ಮಾಡಿದ್ದ. ಈ ವೇಳೆ ಆರೋಪಿ ಯಾರೆಂದು ತಿಳಿಯಲು ಯತ್ನಿಸಿರುವ…
ಬೆಂಗಳೂರು : ಗೃಹಲಕ್ಷ್ಮೀ ಫಲಾನುಭವಿಗಳ ಅನುಕೂಲಕ್ಕಾಗಿ ಗೃಹ ಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪಿಸಲಾಗುತ್ತಿದ್ದು, ನ.14ರಂದು ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಘಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾದ ಸಹಕಾರ ಸಂಘಗಳ ಅಪರ ನಿಬಂಧಕ ಲಕ್ಷ್ಮೀಪತಯ್ಯ ಅವರು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದ ನೋಂದಣಿ ಪ್ರಮಾಣಪತ್ರ ಹಸ್ತಾಂತರಿಸಿದರು.ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಅನುಕೂಲಕ್ಕಾಗಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪಿಸಲಾಗುತ್ತಿದೆ. ಗೃಹಲಕ್ಷ್ಮೀ ಅಡಿಯಲ್ಲಿ 1.24 ಕೋಟಿ ಫಲಾನುಭವಿಗಳು ಯೋಜನೆಯಿಂದ ದೊರೆತ ಹಣವನ್ನು ಬೇರೆ ಮೂಲಗಳಲ್ಲಿ ತೊಡಗಿಸಿ ಆದಾಯ ಪಡೆಯುವಂತೆ ಸಂಘ ಸ್ಥಾಪಿಸಲಾಗುತ್ತಿದೆ. ಸಂಘದ ಮೂಲಕ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ರು.ವರೆಗೆ ಸಾಲ ನೀಡುವುದು ಸೇರಿ ಮತ್ತಿತರ ಸವಲತ್ತುಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ. ನ.19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ…
ನವದೆಹಲಿ : ದೆಹಲಿಯ ಕೆಂಪು ಕೋಟೆಯ ಬಳಿ ಕಾರು ಬಾಂಬ್ ಸ್ಫೋಟದಲ್ಲಿ ಇದುವರೆಗೂ 12ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 17 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಗೊಂಡ ವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಒಂದು ಪ್ರಕರಣದ ತನಿಖೆ ಸದ್ಯ ಎನ್ಐಎ ನಡೆಸುತ್ತಿದ್ದು ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ಅಂಶಗಳು ಬಯಲಾಗಿವೆ. ಹೌದು ಸ್ವಲ್ಪ ಯಾಮಾರಿದರೂ ಕೂಡ ದೊಡ್ಡ ದುರಂತ ಸಂಭವಿಸುತ್ತಿತ್ತು. ಸ್ಪೋಟಕ ವಶಕ್ಕೆ ಪಡೆದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ದೇಶದ ಹಲವು ಕಡೆಗೆ ಉಗ್ರರು ಸ್ಪೋಟಿಸಲು ದೊಡ್ಡ ಸಂಚು ರೂಪಿಸಿದ್ದರು. ಶಂಕಿತ ಉಗ್ರರ ಗ್ಯಾಂಗ್ ಈ ಒಂದು ಸಂಚು ರೂಪಿಸಿತ್ತು ಎಂದು ಎನ್ ಐ ಎ ಅಧಿಕಾರಿಗಳ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ದೇಶದ ಹಲವು ಸ್ಥಳಗಳಲ್ಲಿ ಸ್ಫೋಟಕಗಳಿಂದ ಬ್ಲಾಸ್ಟ್ ಗೆ ಉಗ್ರರು ಸಂಚು ರೂಪಿಸಿದ್ದರು ಜಮುವಿನಲ್ಲಿ ಮೊದಲೇ 2,900 ಕೆಜಿ ಸ್ಫೋಟಕ ವಶಕ್ಕೆ ಪಡೆದುಕೊಂಡಿದ್ದರು. ತಕ್ಷಣ ಅಲರ್ಟ್ ಆದ ಗುಪ್ತಚರ ಇಲಾಖೆ ಕಾರ್ಯಾಚರಣೆ ನಡೆಸಿದೆ. ಭಾರಿ ಪ್ರಮಾಣದ ಸ್ಪೋಟಕಗಳನ್ನು ವಶಕ್ಕೆ…
ದಿಕ್ಕುಗಳು ಶುಭದ ಸಂಕೇತಗಳಾಗಬಹುದು ಕೆಲವು ಸಂಪ್ರದಾಯಗಳ ಆಧಾರದ ಮೇಲೆ. ಹಿಂದೂ ಸಂಪ್ರದಾಯದಲ್ಲಿ, ದಿಕ್ಕುಗಳು ಶುಭ ಮತ್ತು ಅಶುಭಗಳ ಹೆಸರುಗಳನ್ನು ಹೊಂದಿದ್ದು, ಶುಭದ ದಿಕ್ಕುಗಳಲ್ಲಿ ನಡೆದ ಕ್ರಿಯೆಗಳು ಹೆಚ್ಚು ಪ್ರಾಸಂಗಿಕವಾಗಿ ಹೋಗಬಹುದು. ಹಾಗಾಗಿ ಯಾವುದೇ ಶುಭ ಕಾರ್ಯ ನಡೆಯುವ ವೇಳೆ ಕೊಡ ಸೂಕ್ತ ದಿಕ್ಕು ಗಳ ಆಧಾರದ ಮೇಲೆ ಪೂಜೆ ಸಲ್ಲಿಸಲಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…














