Author: kannadanewsnow05

ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಲೋಕಸಭಾ ಟಿಕೆಟ್ ಸಿಗದೇ ಇರುವುದಕ್ಕೆ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅಸಮಾಧಾನ ಹೊರಹಾಕಿದ್ದು ಎಲ್ಲಾ ನಮ್ಮವರಿಗೆ ಸಂಬಂಧಿಗಳಿಗೆ ನಮ್ಮ ಚೇಲಾಗಳಿಗೆ ಸಿಗಬೇಕೆಂಬುದು ಸ್ವಾರ್ಥ ಎಂದು ಪರೋಕ್ಷವಾಗಿ ಬಿಎಸ್ ಯಡಿಯೂರಪ್ಪ ವಿರುದ್ಧ ಡಿವಿ ಸದಾನಂದ ಗೌಡ ಅಸಮಾಧಾನ ಹೊರ ಹಾಕಿದರು. https://kannadanewsnow.com/kannada/mekedatu-project-will-be-stalled-if-india-comes-to-power-in-dmk-manifesto-bjp-to-congress/ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಶುದ್ದೀಕರಣ ಒಬ್ಬನಿಂದ ಆಗುವಂತಹ ಕೆಲಸವಲ್ಲ. ಪಕ್ಷ ಶುದ್ಧೀಕರಣಕ್ಕೆ ನಿರಂತರವಾದ ಹೋರಾಟ ಮಾಡುತ್ತೇನೆ.ಪಕ್ಷದ ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ ಎಲ್ಲವೂ ನಮ್ಮವರಿಗೆ ಸಂಬಂಧಿಗಳಿಗೆ ಚೇಲಾಗಳಿಗೆ ಸಿಗಬೇಕು.ಎಲ್ಲವೂ ನಮಗೆ ನಮ್ಮವರಿಗೆ ಸಿಗಬೇಕು ಎಂಬ ಸ್ವಾರ್ಥವಿದೆ. ಅಲ್ಲದೆ ಪಕ್ಷದಲ್ಲಿ ಕಾರ್ಯಕರ್ತರಿಗೆ ಯಾವುದೇ ರೀತಿಯಾದಂತಹ ಅವಕಾಶ ಕೊಡುತ್ತಿಲ್ಲ ಎಂದು ಯಡಿಯೂರಪ್ಪ ವಿರುದ್ಧ ಸನಂದ ಗೌಡ ಕಿಡಿ ಕಾರಿದ್ದಾರೆ. https://kannadanewsnow.com/kannada/italian-pm-giorgia-maloney-seeks-100000-in-compensation-for-deep-fake-video/ ನನಗೆ ಕಾಂಗ್ರೆಸ್ ನಿಂದ ಆಫರ್ ಬಂದಿರುವುದು ಸತ್ಯ. ಕಾಂಗ್ರೆಸ್ ನಿಂದ ನೀವು ಎಲ್ಲೇ ನಿಲ್ಲಿಸಿಕೊಳ್ಳುತ್ತೇವೆ ಅನ್ಯಾಯಕ್ಕೆ ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಆಫರ್ ಬಂದಿದೆ ಹೀಗೆ ನನಗೆ ಕಾಂಗ್ರೆಸ್ ನವರು ಆಹ್ವಾನ…

Read More

ಬೆಂಗಳೂರು : 2024 ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಕಾವೇರಿ ನದಿಗೆ ನಿರ್ಮಿಸಲು ಯೋಜಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಇದಕ್ಕೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. https://kannadanewsnow.com/kannada/italian-pm-giorgia-maloney-seeks-100000-in-compensation-for-deep-fake-video/ ಟ್ವೀಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಮೇಕೆದಾಟು ಹೆಸರಿನಲ್ಲಿ ಬೊಂಡಾ-ಬಜ್ಜಿ ತಿನ್ನುತ್ತಾ ವಾಕಿಂಗ್ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರೇ, ಡಿಸಿಎಂ DK ಶಿವಕುಮಾರ ಅವರೇ, ತಮಿಳುನಾಡಿನ ನಿಮ್ಮ ಚಿನ್ನ ತಂಬಿ ಎಂ. ಕೆ. ಸ್ಟಾಲಿನ್ ಅವರು ಇಂಡಿ ಮೈತ್ರಿಕೂಟ ಗೆದ್ದರೆ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಲು ಬಿಡುವುದಿಲ್ಲ ಎಂಬುದನ್ನು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿಯೇ ತಿಳಿಸಿದ್ದಾರೆ. https://kannadanewsnow.com/kannada/hc-orders-renewal-of-driving-licence-within-30-days-of-expiry-of-term/ ಸ್ಟ್ರಾಂಗ್ ಎಂದು ಬೀಗುವ ವೀಕ್ ಸಿಎಂ ಸಿದ್ದರಾಮಯ್ಯ ಅವರೇ, ಡಿಎಂಕೆ ಕರ್ನಾಟಕಕ್ಕೆ ಮಾಡುತ್ತಿರುವ ದ್ರೋಹವನ್ನು ಖಂಡಿಸಿ ಅವರನ್ನು ಇಂಡಿ ಮೈತ್ರಿಕೂಟದಿಂದ ಉಚ್ಛಾಟಿಸಿ ಎಂದು ರಾಹುಲಗಾಂಧಿ ಅವರಿಗೆ ಯಾವಾಗ…

Read More

ಬೆಂಗಳೂರು : ವಾಹನ ಚಾಲನೆ ಪರವಾನಿಗೆ ಅವಧಿ ಮುಗಿದ ನಂತರ 30 ದಿನಗಳ ಒಳಗೆ ನವೀಕರಣಗೊಳಿಸಿಕೊಳ್ಳಬೇಕು. ಒಂದು ವೇಳೆ ಅರ್ಜಿ ಸಲ್ಲಿಸದೆ ಹೋದಲ್ಲಿ, ವಾಹನ ಅಪಘಾತಕ್ಕೆ ಈಡಾದರೆ ಈ ವೇಳೆ ವಾಹನ ಮಾಲೀಕರು ತಮ್ಮ ಕೈಯಿಂದ ಅಪಘಾತಕ್ಕೆ ಒಳಗಾದ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪರವಾನಗಿ ಅವಧಿ ಮುಗಿದ ದಿನದಿಂದ 30 ದಿನಗಳಲ್ಲಿ ನವೀಕರಣಕ್ಕೆ ಅರ್ಜಿ ಸಲ್ಲಿಸಿರುವ ಬಗ್ಗೆ ಸಾಕ್ಷ್ಯ ಒದಗಿಸದ ಅಂಶ ಪರಿಗಣಿಸಿರುವ ಹೈಕೋರ್ಟ್‌, ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಚಾಲನೆ ಮಾಡಿ ಅಪಘಾತಕ್ಕೆ ಕಾರಣವಾದ ಆ್ಯಂಬುಲೆನ್ಸ್‌ ಚಾಲಕನ ಮೇಲೆ ಮೋಟಾರು ಅಪಘಾತ ಪರಿಹಾರ ಕ್ಲೇಮು ನ್ಯಾಯಾಧಿಕರಣ ಹೊರಿಸಿದ್ದ ಶೇ.50ರಷ್ಟು ಹೊಣೆಗಾರಿಕೆಯನ್ನು ಶೇ.100ಕ್ಕೆ ಹೆಚ್ಚಿಸಿ ಆದೇಶಿಸಿದೆ. ಅಪಘಾತ ಪ್ರಕರಣವೊಂದರ ಸಂಬಂಧ ಯುನೈಟೆಡ್‌ ಇಂಡಿಯಾ ಇನ್ಶೂರೆನ್ಸ್‌ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರ ಪೀಠ ಈ ಆದೇಶ ಮಾಡಿದೆ. ಅವಧಿ ಮುಗಿದ 30 ದಿನಗಳ ಒಳಗೆ ವಾಹನ ಚಾಲನಾ ಪರವಾನಿಗೆಯನ್ನು ನವೀಕರಣಗೊಳಿಸುತ್ತಿದ್ದಲ್ಲಿ ಅಪಘಾತಕ್ಕೆ…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು ಕರ್ನಾಟಕದಲ್ಲಿ ಬಿಜೆಪಿ ಶುದ್ಧೀಕರಣದ ಕಡೆಗೆ ನನ್ನ ನಡಿಗೆ ಎಂದು ಸದಾನಂದ ಗೌಡ ಇದೆ ವೇಳೆ ತಿಳಿಸಿದರು. https://kannadanewsnow.com/kannada/india-not-only-fulfills-the-aspirations-of-its-people-but-also-gives-hope-to-the-world-pm-modi/ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ಸತ್ಯ ಎಂದು ಬೆಂಗಳೂರಿನಲ್ಲಿ ಸಂಸದ ಸದಾನಂದಗೌಡ ತಿಳಿಸಿದರು. ಕರ್ನಾಟಕದಲ್ಲಿ ಬಿಜೆಪಿ ಶುದ್ಧೀಕರಣ ಕಡೆಗೆ ನನ್ನ ನಡಿಗೆ. ನನಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ನೋವಾಗಿದೆ. ನನಗೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ಸತ್ಯ. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ ಬೆಂಗಳೂರಿನಲ್ಲಿ ಬಿಜೆಪಿ ಸಂಸದ ಡಿ ಬಿ ಸದಾನಂದ ತಿಳಿಸಿದರು. https://kannadanewsnow.com/kannada/india-not-only-fulfills-the-aspirations-of-its-people-but-also-gives-hope-to-the-world-pm-modi/ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ತೊರೆಯುವುದಿಲ್ಲ ಹಾಗೂ ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ ಮುಂದಿನ ನಡೆ ಏನು ಎಂದು ಹಲವರು ನನಗೆ ಕೇಳಿದ್ದಾರೆ. ಆದರೆ ನನ್ನ ಮುಂದಿನ ನಡೆ ಕರ್ನಾಟಕ…

Read More

ಗದಗ : ದೇಶದಲ್ಲಿ ಸಂವಿಧಾನದ ತಿರುಚುವ ಪ್ರಯತ್ನ ಬಿಜೆಪಿ ಸದ್ದಿಲ್ಲದೆ ನಡೆಸುತ್ತಿದೆ. ಇನ್ನೊಂದೆಡೆ ಚುನಾವಣಾ ಬಾಂಡ್ ಮೂಲಕ ಬಿಜೆಪಿ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ.ದೇಶದಲ್ಲಿ ಮೋದಿ ಸರ್ಕಾರವನ್ನು ಕಿತ್ತೊಗೆಯದಿದ್ದರೆ ಮುಂಬರುವ ದಿನಗಳಲ್ಲಿ ದೇಶದಲ್ಲಿ ಆರ್ಥಿಕ ಗುಲಾಮಗಿರಿ ಅನುಭವಿಸಬೇಕಾಗುತ್ತದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್‌ ಹೇಳಿದರು. https://kannadanewsnow.com/kannada/breaking-russian-missile-attack-on-ukraines-capital-kiev/ ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಆರ್ಥಿಕ ಗುಲಾಮಗಿರಿ ತಪ್ಪಿಸಲು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಮಾನವ ಹಕ್ಕುಗಳನ್ನಾಗಿ ಮಾಡಲಾಗುವುದು ಎಂದರು. https://kannadanewsnow.com/kannada/india-will-dominate-ai-technology-pm-modi/ ಸಂವಿಧಾನ ಕಾಪಾಡಿಕೊಳ್ಳುವ, ಮೀಸಲಾತಿ ಉಳಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ರಕ್ಷಣೆ ಮಾಡಬೇಕಿದೆ, ಅದಕ್ಕಾಗಿ ದೇಶದ ಪ್ರತಿಯೊಬ್ಬರೂ ಕಾಂಗ್ರೆಸ್ ಪಕ್ಷ ಬೆಂಬಲಿಸಬೇಕು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವಧಿಯಲ್ಲಿ ದೇಶದ ರೈತರ ರೂ.72000 ಕೋಟಿ ಸಾಲಮನ್ನಾ ಮಾಡಲಾಯಿತು. ಬಿಜೆಪಿ ಅವಧಿಯಲ್ಲಿ ಅದಾನಿ, ಅಂಬಾನಿಗಳ ರೂ.6.50 ಲಕ್ಷ ಕೋಟಿ ಸಾಲ ಮನ್ನಾ ಮಾಡಲಾಗಿದೆ, ಇದು…

Read More

ಯಾದಗಿರಿ : ಕಳೆದ ಎರಡು ದಿನಗಳ ಹಿಂದೆ ಯಾದಗಿರಿಯಲ್ಲಿ ಅನ್ಯಕೋಮಿನ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ಬಜರಂಗದಳ ಕಾರ್ಯಕರ್ತರು ಹಿಗ್ಗಾಮುಗ್ಗ ಥಳಿಸಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಹಲ್ಲಿಗೆ ಒಳಗಾದ ಯುವಕನ ವಿರುದ್ಧ ಬಾಲಕಿಯ ಪೋಷಕರು ಪೋಕ್ಸೋ ಕೇಸ್ ದಾಖಲಿಸಿದ್ದಾರೆ. ಅನ್ಯ ಕೋಮೀನ ಬಾಲಕಿಗೆ ಪ್ರೀತಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆದಿತ್ತು ಮೂರು ದಿನಗಳ ಹಿಂದೆ ಯಾದಗಿರಿ ನಗರದಲ್ಲಿ ಈ ಘಟನೆ ನಡೆದಿತ್ತು. ಹಲ್ಲೆ ಸಂಬಂಧ ಪಟ್ಟಂತೆ ಯಾದಗಿರಿ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈಗ ಬಾಲಕಿಯ ಪೋಷಕರಿಂದ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಬಾಲಕಿಯ ಜೊತೆಗಿದ್ದ ಫೋಟೋ ವಿಡಿಯೋ ತೋರಿಸಿ ಯುವಕ ಬ್ಲಾಕ್ಮೇಲ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಯುವಕನ ವಿರುದ್ಧ ಬ್ಲಾಕ್ಮೇಲ್ ಬೆದರಿಕೆ ಆರೋಪದಡಿ ದಾಖಲಾಗಿದೆ. ಅಲ್ಲದೆ ಯುವಕನ ಕುಟುಂಬದ ಜೊತೆಗೆ 16 ಜನರು ಬಿರುದ ಕೂಡ ಯಾದಗಿರಿ ಮಹಿಳಾ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಘಟನೆ ಹಿನ್ನೆಲೆ? ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಬಜರಂಗದಳ ಮುಖಂಡರು ಯುವಕನಿಗೆ ಮನಬಂದಂತೆ…

Read More

ಬೆಂಗಳೂರು : ಯುವತಿ ಒಬ್ಬಳಿಗೆ ಫುಡ್ ಡೆಲಿವರಿ ಬಾಯ್ ಒಬ್ಬ ಕಿರುಕುಳ ನೀಡಿ ದೌರ್ಜನ್ಯ ಎಸಗಿ ದುರ್ವರ್ತನೆ ತೋರಿರುವ ಘಟನೆ ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಗೆ ಫುಡ್ ಡೆಲಿವರಿ ಬಾಯ್ ಕಿರುಕುಳ ನೀಡಿದ್ದು, ಬೆಂಗಳೂರಿನಲ್ಲಿ ಮಾರ್ಚ್ 17ರಂದು ಈ ಘಟನೆ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಡೆಲೇವರಿ ಬಾಯ್ ಆಕಾಶ್ ಬಿ ಎಂಬುವವನಿಂದ ಈ ಕೃತ್ಯ ನಡೆದಿದ್ದು ಸಂಜೆ ಆರೋಪಿ ಫುಡ್ ಡೆಲಿವರಿ ನೀಡಲು ಬಂದಿದ್ದ ಎನ್ನಲಾಗುತ್ತಿದೆ. ಈ ವೇಳೆ ಫುಡ್ ಡೆಲಿವರಿ ಮಾಡಿ ಆಕಾಶ್ ಕುಡಿಯಲು ನೀರು ಕೇಳಿದ್ದ ಈ ವೇಳೆ ಯುವತಿ ನೀರು ತರಲು ಹೋದಾಗ ಆಕಾಶ್ ದುರ್ವರ್ತನೆ ತೋರಿದ್ದಾನೆ ಎಂದು ಆರೋಪಿಸಲಾಗಿದ್ದು, ಯುವತಿಯನ್ನು ಹಿಂಬಾಲಿಸಿ ಕೈ ಹಿಡಿದು ಎಳೆದಾಡಿ ದೌರ್ಜನ್ಯ ಎಸಗಿದ್ದಾನೆ.ಈ ಕುರಿತಂತೆ ಎಚ್ ಎ ಎಲ್ ಪೊಲೀಸ್ ಠಾಣೆಗೆ ಯುವತಿ ಡೆಲಿವರಿ ಬಾಯ್ ವಿರುದ್ಧ ದೂರು ದಾಖಲಿಸಿದ್ದಾಳೆ. ಯುವತಿ ದೂರಿನ…

Read More

ಹುಬ್ಬಳ್ಳಿ : ಲೋಕಸಭಾ ಚುನಾವಣೆ ಹೊತ್ತಲ್ಲಿ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು ಪರಿಷತ್ ಸದಸ್ತ್ವಕ್ಕೆ ಜೆಡಿಎಸ್ ಮರಿತಿಬ್ಬೇಗೌಡ ಅವರು ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಹೌದು ಇಂದು ಜೆಡಿಎಸ್ ಗೆ ಮರಿತಿಬ್ಬೆಗೌಡ ರಾಜೀನಾಮೆ ನೀಡಲಿದ್ದು, ಪರಿಷತ್ ಸದಸ್ಯತ್ವಕ್ಕೆ ಮರೀತೀಬ್ಬೆಗೌಡ ಇಂದು ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.ಮಧ್ಯಾಹ್ನ 12 ಗಂಟೆಗೆ ಸಭಾಪತಿ ಬಸವರಾಜ್ ಹೊರಟ್ಟಿಗೆ ಇವರು ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹುಬ್ಬಳ್ಳಿಯ ಬಸವರಾಜ್ ಹೊರಟ್ಟಿ ಗೃಹ ಕಚೇರಿಯಲ್ಲಿ ಮರೀತೀಬ್ಬೆಗೌಡ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಜೆಡಿಎಸ್ ತೊರೆದು ಬಹುಶಹ ಅವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.

Read More

ಬೆಂಗಳೂರು : ಬಿಜೆಪಿಗೆ ಚಿಕ್ಕಬಳ್ಳಾಪುರ ಸಂಸದ ಬಿಎನ್ ಬಚ್ಚೇಗೌಡ ಗುಡ್ ಬೈ ಹೇಳಿದ್ದು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಎಂದು ತಿಳಿದುಬಂದಿದೆ. ನಾನು ಬಿಜೆಪಿ ಪ್ರಾಥಮಿಕ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ ಬಿವೈ ವಿಜಯೇಂದ್ರಗೆ ಈ ಪತ್ರವನ್ನು ನೀಡಲಾಗಿದೆ. ಲೋಕಸಭಾ ಟಿಕೆಟ್ ಚುನಾವಣೆ ಹಂಚಿಕೆ ವಿಚಾರವಾಗಿ ಇದೀಗ ಅವರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Read More

ಶಿವಮೊಗ್ಗ : ತಂದೆಯ ಭ್ರಷ್ಟಾಚಾರ ಹಣದಿಂದ ರಾಘವೇಂದ್ರ ಎಂಪಿ ಆಗಿದ್ದಾರೆ. ನಮ್ಮ ತಂದೆಯವರು ಯಾವುದೇ ಇಂತಹ ದುಡ್ಡು ಮಾಡಿಲ್ಲ. ಚೋಟಾ ಸಹಿ ಮೂಲಕ ನಾನು ಯಾರನ್ನೂ ಜೈಲಿಗೆ ಕಳಿಸಿಲ್ಲ. ಪರೋಕ್ಷ ವಾಗಿ ಮಕ್ಕಳೇ ಬಿಎಸ್​ವೈ ಅವರನ್ನು ಜೈಲಿಗೆ ಕಳುಹಿಸಿದ್ದು ಎಂದು ಸಚಿವ ಮಧು ಕಿಡಿಕಾರಿದರು. ಇಂದು ಟಿಕೆಟ್​ ಘೋಷಣೆ ಬಳಿಕ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಗೀತಾ ಅವರು ಆಗಮಿಸಿದ್ದು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿ ಎಂಆರ್​ಎಸ್ ವೃತ್ತದಿಂದ ಲಗಾನ್ ಕಲ್ಯಾಣ ಮಂದಿರದವರೆಗೆ ಬೃಹತ್ ಬೈಕ್​ ರ್‍ಯಾಲಿ ನಡೆಸಿದರು. ಗೀತಾಗೆ ಪತಿ ಶಿವರಾಜ್ ಕುಮಾರ್ ಹಾಗೂ ಸಚಿವ ಮಧು ಬಂಗಾರಪ್ಪ ಅವರು ಸಾಥ್ ನೀಡಿದರು. ಹ್ಯಾಟ್ರಿಕ್ ಹೀರೋ ಶಿವ ರಾಜ್​ಕುಮಾರ್ ಅವರ ಪತ್ನಿ ಗೀತಾ ಶಿವ ರಾಜ್​ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಈ ಹಿನ್ನಲೆ ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ​ಕುಮಾರ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ನಮ್ಮ ತಂದೆಯ ಸೋಲಿನ ಸೇಡು ತಿರಿಸಿಕೊಳ್ಳಬೇಕಿದೆ.ಗೀತಕ್ಕ ಅವರನ್ನು ನಾವು ನಿಮ್ಮ ಮಡಿಲಿಗೆ…

Read More