Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಸರ್ಕಾರಿ ಉದ್ಯೋಗ ಕೊಡಿಸುವ ನೆಪದಲ್ಲಿ ಹಲವಾರು ಜನರಿಗೆ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ್ದಾರೆ ಎನ್ನುವ ಗಂಭೀರವಾದ ಆರೋಪ ಕೇಳಿಬಂದಿದೆ. ಹೌದು ಸರ್ಕಾರಿ ಕೆಲಸ ಕೊಡಿಸುವುದಾಗಿ ಸಾಕಷ್ಟು ಜನರಿಗೆ ವಂಚನೆ ಎಸಗಿದ್ದು, ವಸಂತ ಮುರಳಿ ಅವರಿಂದ ಇದೀಗ ಸಾಕಷ್ಟು ಜನರು ಮೋಸ ಹೋಗಿದ್ದಾರೆ. ನನಗೆ ಮುಖ್ಯಮಂತ್ರಿ ಗೊತ್ತು, ಮಿನಿಸ್ಟರ್ ಗೊತ್ತು ಎಂದು ವಸಂತ ಮುರುಳಿ ಅನೇಕರಿಗೆ ವಂಚನೆ ಎಸಗಿದ್ದಾರೆ. ಈ ಕುರಿತು ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ ಇಂದು ವಸಂತ ಮುರುಳಿ ಅವರ ಕಾರ್ಯಕ್ರಮಕ್ಕೆ ಮೋಸ ಹೋದವರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಪರಸ್ಪರ ಗುಂಪುಗಳು ಕೈ ಕೈ ಮಿಲಾಯಿಸಿಸಿಕೊಂಡು ಗಲಾಟೆ ನಡೆಸಿವೆ. ವಿಶ್ವಕರ್ಮ ಸಮಾಜದ ಕಾರ್ಯಕ್ರಮದ ವೇಳೆ ಭಾರೀ ಗಲಾಟೆ ನಡೆದಿದೆ. ವಿಶ್ವಕರ್ಮ…
ಹಾವೇರಿ : ಹಾವೇರಿಯಲ್ಲಿ ಎಂದು ಘೋರ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೂಡಲ ಗ್ರಾಮದಲ್ಲಿರುವ ವರದಾ ನದಿಯಲ್ಲಿ ಕಾಲು ಜಾರಿ ಬಿದ್ದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಕಾಲು ಜಾರಿ ನದಿಗೆ ಬಿದ್ದು ಕಲ್ಲಪ್ಪ ಹುರಳಿಕುಪ್ಪಿ (80) ಎನ್ನುವವರು ಸಾವನಪ್ಪಿದ್ದಾರೆ. ಮೃತರು ಹಾನಗಲ್ ತಾಲೂಕಿನ ಜಾಕ್ಕನಾಯಕನ ಕೊಪ್ಪ ನಿವಾಸಿ ಆಗಿದ್ದು, ಇಂದ್ ನದಿಯಲ್ಲಿ ಕಾಲು ತೊಳೆಯಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿ ಬಂದು ಮೃತ ದೇಹಕ್ಕಾಗಿ ಶೋಧಕ ಕಾರ್ಯ ಮುಂದುವರಿಸಿದ್ದಾರೆ ಘಟನೆ ಕುರಿತಂತೆ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ : ನಿವೇಶನದ ಹಕ್ಕು ಪತ್ರ ನೀಡಲು ಐದು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು ಆ ಲಂಚದ ಹಣ ಪಡೆಯುವ ವೇಳೆ ಗ್ರಾ.ಪಂ ಬಿಲ್ ಕಲೆಕ್ಟರ್ ಹಾಗೂ ನೀರುಗಂಟಿ ಇಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ದೇವರಹಳ್ಳಿಯಲ್ಲಿ ನಡೆದಿದೆ. ದೇವರಹಳ್ಳಿ ಗ್ರಾ.ಪಂ ಹಂಗಾಮಿ ಬಿಲ್ ಕರೆಕ್ಟರ್ ಲೋಕೇಶ ಹಾಗೂ ನೀರುಗಂಟಿ ಶೇಖರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಇಂದಿರಾ ಗ್ರಾಮೀಣ ವಸತಿ ನಿವೇಶನದಡಿ 2016ನೇ ಸಾಲಿನಲ್ಲಿ ಮಂಜೂರಾಗಿದ್ದ ವಸತಿ ಯೋಜನೆಯ ನಿವೇಶನದ ಹಕ್ಕುಪತ್ರ ನೀಡಲು 5 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಈ ಘಟನೆ ನಡೆದಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವರಹಳ್ಳಿ ಗ್ರಾಮದ ಆರ್.ಲಕ್ಷ್ಮಿದೇವಿ ಲಕ್ಷ್ಮೀಪತಿ ಎಂಬುವದು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಇಂದಿರಾ ಗ್ರಾಮೀಣ ವಸತಿ ನಿವೇಶನ ಯೋಜನೆಯಡಿ 2016ನೇ ಸಾಲಿನಲ್ಲಿ ವಸತಿ ನಿವೇಶನ ಮಂಜೂರಾಗಿತ್ತು.ಬಿಲ್ ಕಲೆಕ್ಟರ್ ಲೋಕೇಶ ಹಕ್ಕುಪತ್ರ ನೀಡಲು 5 ಸಾವಿರ ರೂ. ಲಂಚದ ಬೇಡಿಕ…
BREAKING : ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು : ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 15ರಷ್ಟು ಮೀಸಲಾತಿ ಹೆಚ್ಚಳ ಮಾಡಿದ ವಿಚಾರವಾಗಿ, ಗ್ರಾಮೀಣ ಭಾಗದಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳು ಕಡಿಮೆ ಇರುವ ಕಾರಣಕ್ಕೆ ವಸತಿ ಸಚಿವರು ಮನೆ ಹಂಚಿಕೆ ಮೀಸಲಾತಿಯನ್ನು ನಗರ ಪ್ರದೇಶಕ್ಕೆ ವರ್ಗಾವಣೆ ಮಾಡಿದ್ದಾರೆ. ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ ಎಂದು ಡಿಸಿಎಂ ಸ್ಪಷ್ಟನೆ ನೀಡಿದರು. ಸಾಚಾರ್ ವರದಿಗೆ ಅನುಗುಣವಾಗಿ ಗ್ರಾಮೀಣ ಪ್ರದೇಶಕ್ಕೂ ಶೇ.10 ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ ಗ್ರಾಮೀಣ ಭಾಗದಲ್ಲಿ ಕಡಿಮೆ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಇರುವ ಕಾರಣಕ್ಕೆ ಸೌಲಭ್ಯ ರದ್ದಾಗುತ್ತಿತ್ತು. ನಾವೇನೂ ಹೊಸದಾಗಿ ಮೀಸಲಾತಿ ಸೃಷ್ಟಿ ಮಾಡಿ ನೀಡುತ್ತಿಲ್ಲ. ಪರಿಶಿಷ್ಟ ವರ್ಗ ಮತ್ತು ಜಾತಿಗಳಲ್ಲಿ ಶೇ.90 ರಷ್ಟು ಜನರಿಗೆ ಅನುಕೂಲ ಮಾಡಿಕೊಡಲಾಗಿದೆ. ಹೊಸದಾಗಿ ಮನೆ ಬೇಕಾಗಿರುವವರು ಅಡಿಪಾಯ ಹಾಕಿದರೆ ಮಾತ್ರ ಅವರಿಗೆ ಅನುಕೂಲ ಮಾಡಲು ಸಾಧ್ಯ. ಅಡಿಪಾಯ ಹಾಕದೇ ಹಣ ನೀಡಲು ಸಾಧ್ಯವಿಲ್ಲ ಎಂದರು. ವಿಪಕ್ಷಗಳು ರಾಜಕೀಯ ಮಾಡುತ್ತವೆ, ಮಾಡಲಿ. ಸರ್ಕಾರ ಮನೆಗಳನ್ನು ಕಟ್ಟಿ ನಷ್ಟ ಮಾಡಿಕೊಳ್ಳಬೇಕೆ? ಪರಿಶಿಷ್ಟರಿಗೆ ಅವಕಾಶ ಮಾಡಿಕೊಡಲಾಗಿತ್ತು, ಆದರೆ,…
ಬೆಂಗಳೂರು : ಡಿ.ಕೆ.ಶಿವಕುಮಾರ್ ಬಳಿ ಬಟ್ಟೆ ಹೊಲಿಸಿಕೊಳ್ಳುವಷ್ಟು ದರಿದ್ರ ನನಗಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಏನು ಹೇಳಿದ್ದರು?. ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಬರುತ್ತದೆ, ಎಲ್ಲ ತಯಾರಾಗಿ ಎಂದು ಹೇಳಿದ್ದರು. ಆಗ ಅದಕ್ಕೆ ನಾನು ಉಡುಗೊರೆ ನೀಡುತ್ತೇನೆ ಎಂದು ಹೇಳಿದ್ದೆ. ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ ಎಂದು ವ್ಯಂಗ್ಯವಾಡಿದರು.
ಬೆಂಗಳೂರು : ಸಾಲ ಮರು ಪಾವತಿ ತಡವಾಗಿದ್ದಕ್ಕೆ ಮನೆಯಲ್ಲಿದ್ದ ಮಗುವನ್ನು ಮೈಕ್ರೋಫೈನಾನ್ಸ್ ಸಿಬ್ಬಂದಿಗಳು ಕರೆದೊಯ್ದ ಪ್ರಕರಣ ಇದೀಗ ಸಾಕಷ್ಟು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ಗಳಿಗೆ ಕಡಿವಾಣ ಹಾಕಲು ಈಗಾಗಲೇ ಕಠಿಣ ಕಾನೂನು ತಂದಿದ್ದೇವೆ. ಆದರೂ ಕೆಲವೆಡೆ ಇಂತಹ ದುರ್ವರ್ತನೆ ನಡೆಯುತ್ತಿದೆ. ಇದು ಸರಿಯಲ್ಲ. ಮಗುವನ್ನು ಕರೆದೊಯ್ದವರು ಕಠಿಣ ಹೃದಯಿಗಳು. ಮಾನವೀಯತೆ ಇಲ್ಲದವರು ಮಗುವನ್ನು ಅಪಹರಣ ಮಾಡಿದ್ದಾರೆ. ಈ ಬಗ್ಗೆ ಇಂದು ಮೈಸೂರು ಪೊಲೀಸ್ ಕಮಿಷನರ್ ಅಥವಾ ಐಜಿ ಬಳಿ ಮಾತನಾಡುತ್ತೇನೆ. ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಪೊಲೀಸರಿಗೆ ಸೂಚನೆ ನೀಡುತ್ತೇನೆ ಎಂದರು. ಘಟನೆ ಹಿನ್ನೆಲೆ? ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮಗುವನ್ನು ಕರೆದೊಯ್ದಿದ್ದರು. ಈ…
ನವದೆಹಲಿ : ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಆಡಿಯೋ ವಿಚಾರವಾಗಿ, ಕಾಂಗ್ರೆಸ್, ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಕೆಟ್ಟದಾಗಿ ಮಾಡುತ್ತಿದೆ. ಬಿಜೆಪಿ ಮುಸ್ಲಿಂ ಧರ್ಮಕ್ಕೆ ವಿರೋಧವಿಲ್ಲ ಧರ್ಮ ಬಿಡಿ ಅಂತ ಹೇಳಿಲ್ಲ ಎಂದು ನವದೆಹಲಿಯಲ್ಲಿ ಬಿಜೆಪಿಯ ಸಂಸದ ರಮೇಶ್ ಜಿಗಜಣಗಿ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಮುಸ್ಲಿಂ ಧರ್ಮಕ್ಕೆ ವಿರೋಧವಿಲ್ಲ ಧರ್ಮ ಬಿಡಿ ಅಂತಾನು ಹೇಳಿಲ್ಲ. ಕಾಂಗ್ರೆಸ್ ನಾಯಕರು ಮುಸ್ಲಿಮರ ತಲೆ ಕೆಡಿಸುತ್ತಿದ್ದಾರೆ ದಲಿತರ ತಲೆಕೆಡಿಸುವ ರೀತಿ ಅಲ್ಪಸಂಖ್ಯಾತರಿಗೂ ತಲೆ ಕೆಡಿಸುತ್ತಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ನೂರಕ್ಕೆ ನೂರರಷ್ಟು ನಡೆಯುತ್ತಿರುವುದು ಸತ್ಯ. ರಾಮಕೃಷ್ಣ ಹೆಗಡೆ, ಬಸವರಾಜ ಬೊಮ್ಮಾಯಿ, ಎಚ್ಡಿ ದೇವೇಗೌಡರ ಜೊತೆ ಕೆಲಸ ಮಾಡಿದ್ದೇನೆ ಆದ್ರೆ ಇಷ್ಟು ಗಲೀಜು ಸರ್ಕಾರ ಎಂದು ನೋಡಿರಲಿಲ್ಲ. ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಸಂಸದ ರಮೇಶ್ ಜಿಗಿಜಣಗಿ ವಾಗ್ದಾಳಿ ನಡೆಸಿದರು. ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ವಿಜಯಪುರಕ್ಕೆ ಬಂದು ನೋಡಿ ಪ್ರಧಾನಿ ಮೋದಿಯವರು ಎಂತಹ ಕೆಲಸ ಮಾಡಿದ್ದಾರೆ…
ಹಾವೇರಿ : ಸಾಂಬಾರ್ ಮೈ ಮೇಲೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ರಾಮಪುರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ರುಕ್ಸಾನಾ ಬಾನು ಶೇಖ್ ಸನದಿ ಎನ್ನುವ ಬಾಲಕಿ ಸಾವನಪ್ಪಿದ್ದಾಳೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ರಾಮಾಪುರ ಎಂಬ ಗ್ರಾಮದಲ್ಲಿ ಈ ಒಂದು ದುರಂತ ನಡೆದಿದೆ. ಪೋಷಕರ ಜೊತೆಗೆ ಬಾಲಕಿ ಸಂಬಂಧಿಕರ ವಿವಾಹಕ್ಕೆ ಹೋಗಿದ್ದಳು. ಮದುವೆಯ ಮನೆಯಲ್ಲಿ ಬಾಲಕಿಯ ಮೇಲೆ ಬಿಸಿ ಸಾಂಬಾರ್ ಬಿದ್ದಿದೆ. ತಕ್ಷಣ ಬಾಲಕಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನದ ಹಿಂದೆ ಅಷ್ಟೇ ಬಾಲಕಿಯನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಇಂದು ಮತ್ತೆ ಬಾಲಕೀಯ ಮೈ ಮೇಲೆ ಗುಳ್ಳೆಗಳು ಆಗಿದ್ದವು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ.
ಶಿವಮೊಗ್ಗ : ಇಂದು ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವೈದ್ಯ ದಂಪತಿಯ ಪುತ್ರಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ಯುವತಿ ಸಹ ಇತ್ತೀಚಿಗಷ್ಟೇ ಎಂಬಿಬಿಎಸ್ ಮುಗಿಸಿ ವೈದ್ಯೇಯಾಗಿದ್ದಳು ಎಂದು ತಿಳಿದುಬಂದಿದೆ. ಇತ್ತೀಚಿಗಷ್ಟೇ ಮೃತ ಡಾ. ಸಾನಾ ವೈದ್ಯೆಯಾಗಿದ್ದರು. ಕಳೆದ ತಿಂಗಳು ಅಷ್ಟೇ ಎಂಬಿಬಿಎಸ್ ಮುಗಿಸಿ ಬಂದಿದ್ದರು. ಶಿವಮೊಗ್ಗದ ಸಿನ್ಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿದ್ದರು. ಶಿವಮೊಗ್ಗದ ತಾವರೆಕೊಪ್ಪದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲ ನಿವಾಸಿಯಾಗಿರುವ ಸಾನಾ ಈ ಒಂದು ಅಪಘಾತದಲ್ಲಿ ಸಾವನಪ್ಪಿದ್ದಾರೆ. ಘಟನೆ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉಡುಪಿ : ಪತ್ನಿ ಅತಿಯಾದ ಮೊಬೈಲ್ ಬಳಸ್ತಿಯ ಎಂದು ಪತಿಯೊಬ್ಬ ಪತ್ನಿಯ ಜೊತೆಗೆ ಗಲಾಟೆ ತೆಗೆದು ಕತ್ತಿಯಿಂದ ಕೊಚ್ಚಿ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಈ ಒಂದು ಘಟನೆ ನಡೆದಿದೆ.ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಪತ್ನಿ ರೇಖಾ (28) ಎನ್ನುವ ಪತ್ನಿಯನ್ನು ಪತಿ ಗಣೇಶ್ ಭೀಕರವಾಗಿ ಕೊಲೆ ಮಾಡಿದ್ದಾನೆ. ಮದ್ಯ ವ್ಯಸನಿಯಾಗಿರುವ ಗಣೇಶ್ ಪೂಜಾರಿ ಇಂದ ಈ ಒಂದು ಕೃತ್ಯ ನಡೆದಿದೆ. ವಿಪರೀತ ಮೊಬೈಲ್ ಬಳಸುತ್ತೀಯಾ ಎಂದು ಪತ್ನಿಯ ಜೊತೆಗೆ ಗಣೇಶ್ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ಕತ್ತಿಯಿಂದ ಕೊಚ್ಚಿ ಪತ್ನಿಯ ಭೀಕರ ಕೊಲೆ ಮಾಡಿದ್ದಾನೆ.ಸದ್ಯ ಪೊಲೀಸರು ಆರೋಪಿ ಗಣೇಶನನ್ನು ಅರೆಸ್ಟ್ ಮಾಡಿದ್ದಾರೆ. ಕೊಲೆ ಕುರಿತಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













