Author: kannadanewsnow05

ವಿಜಯಪುರ : ವಿವಾಹಿತ ಮಹಿಳೆಯೊಂದಿಗೆ ವ್ಯಕ್ತಿ ಒಬ್ಬ ಅನೈತಿಕ ಸಂಬಂಧ ಹೊಂದಿದ್ದ ಎಂದು ಸಂಕಿಸಿ ಅವರಿಬ್ಬರೂ ಹೊಲದಲ್ಲಿಯೇ ಇರುವಾಗ ದುಷ್ಕರ್ಮಿಗಳು ಅವರನ್ನು ಭೀಕರವಾಗಿ ಕೊಲೆಗೈದು ಪರಾರಿ ಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ನಡೆದಿದೆ. https://kannadanewsnow.com/kannada/bengaluru-in-a-major-twist-to-the-suicide-of-three-people-investigations-revealed-that-they-died-due-to-electrocution/ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಜೋಡಿ ಕೊಲೆ ನಡೆದಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ನಡೆದಿದೆ. ತಾಲೂಕಿನ ಗಣಿ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ(35) ಪಾರ್ವತಿ ತಳವಾರ(38) ಕೊಲೆಯಾದವರು. https://kannadanewsnow.com/kannada/lok-sabha-elections-2019-postal-voting-allowed-for-staff-of-various-departments-of-central-and-state-departments/ ವಿವಾಹಿತೆ ಪಾರ್ವತಿ ಹಾಗೂ ಕಲ್ಲಪ್ಪ ಮಧ್ಯೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಮಾರಡಗಿ ತಾಂಡಾದ ಬಳಿಯ ಜಮೀನೊಂದರಲ್ಲಿ ಪಾರ್ವತಿ ಹಾಗೂ ಕಲ್ಲಪ್ಪ ಇಬ್ಬರೂ ಒಟ್ಟಿಗೆ ಇದ್ದಾಗ ಕೊಲೆ ನಡೆದಿದೆ. ಕೊಲೆ ಮಾಡಿದ ಬಳಿಕ ಶವದ ಮೇಲೆ ಮುಳ್ಳು‌ಕಂಟಿ ಹಾಕಿ ಕೊಲೆಗಾರರು ಪರಾರಿಯಾಗಿದ್ದಾರೆ. https://kannadanewsnow.com/kannada/bengaluru-case-registered-against-actress-anitha-bhat-for-barking-dog/ ಮನೆಯ ಕಡೆಯವರು ‌ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ನಿಡಗುಂದಿ ಪೊಲೀಸ್ ಠಾಣೆಯ ಸಿಪಿಐ ಶರಣಗೌಡ ಹಾಗೂ ಸಿಬ್ಬಂದಿ…

Read More

ಬೆಂಗಳೂರು : ಬೆಂಗಳೂರಿನ ಜೆಪಿ ನಗರದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಖಾಸಗಿ ಬ್ಯಾಂಕ್‌ ನಲ್ಲಿ ಸಾಲ ಪಡೆದಿದ್ದರಿಂದ ಬ್ಯಾಂಕ್ ಸಿಬ್ಬಂದಿಯ ಬೆದರಿಕೆಗೆ ಹೆದರಿ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೀಗ ವಿದ್ಯುತ್ ಶಾಕ್ ನಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ತನಿಖೆ ವೇಳೆ ಬಹಿರಂಗವಾಗಿದೆ. https://kannadanewsnow.com/kannada/bengaluru-case-registered-against-actress-anitha-bhat-for-barking-dog/ ಹೌದು, ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಘಟನೆ ಕಾಡ್ಗಿಚ್ಚಿನಂತೆ ಹರಡಿತ್ತು. ಆದರೆ, ಇವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬುದನ್ನು ಪತ್ತೆ ಮಾಡುವುದೇ ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ಮಾಡಿದಾಗ ವಿದ್ಯುತ್ ವೈರ್ ಕಿತ್ತುಕೊಂಡು ಬಂದಿದ್ದು, ಎಲ್ಲರೂ ವಿದ್ಯುತ್ ವೈರ್‌ ಅನ್ನು ಹಿಡಿದುಕೊಂಡು ವಿದ್ಯುತ್‌ ಶಾಕ್‌ನಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಪುನಃ ಪರಿಶೀಲನೆ ಮಾಡಿದಾಗ ಆತ್ಮಹತ್ಯೆಗೆ ಮತ್ತೊಂದು ಕಾರಣ ಕಂಡುಬಂದಿದೆ. https://kannadanewsnow.com/kannada/breaking-vietnam-president-wo-van-thuang-resigns/ ಮೊದಲು ಕುಟುಂಬದ ಫ್ಯಾಕ್ಟರಿ ನಷ್ಟವಾಗಿದ್ದರಿಂದ, ಬ್ಯಾಂಕ್‌ನವರು ಸಾಲ ವಸೂಲಿಗೆ ಬಂದು ಕಿರಿಕುಳ ನಿಡಿದ್ದರು. ಆದ್ದರಿಂದ…

Read More

ಬೆಂಗಳೂರು : ನಾಯಿ ಬೊಗಳಿದೆ ಎಂದು ಕ್ಷುಲ್ಲಕ ಕಾರಣಕ್ಕೆ ಕಿಡಿಗೇಡಿಗಳು ನಟಿ ಅನಿತಾ ಭಟ್ ಅವರೊಂದಿಗೆ ಕಿರಿಕ್ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಟಿ ಅನಿತಾ ಭಟ್ ಜೊತೆ ಹಲವು ಕಿಡಿಗೇಡಿಗಳು ಕಿರಿಕ್ ಮಾಡಿಕೊಂಡಿದ್ದು, ನಾಯಿ ಬೊಗಳಿದೆ ಎಂದು ಕೆಲವರು ಕಿರಿಕ್ ಮಾಡಿದ್ದಾರೆ. ಜಕ್ಕೂರು ಬಳಿ ತನ್ನ ಗೆಳತಿ ಜೊತೆ ಅನಿತಾ ಭಟ್ ಹೊರಟಿದ್ದರು. ನಾಯಿ ಹಿಡಿದುಕೊಂಡು ಅನಿತಾ ಭಟ್ ಹೋಗುತ್ತಿದ್ದ ಸಂದರ್ಭದಲ್ಲಿ ಈ ವೇಳೆ ನಾಯಿ ಬೊಗಳಿದೆ ಎಂದು ಕೆಲವರು ನಟಿಯ ಜೊತೆ ಕಿರಿಕ್ ಮಾಡಿದ್ದಾರೆ ಎಂದಲಾಗುತ್ತಿದೆ. ಈ ವೇಳೆ ಅನಿತಾ ಭಟ್ ಕ್ಷಮೆ ಕೇಳಿದರೂ ಕೂಡ ಅವರು ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಅನಿತಾ ಭಟ್ ಆರೋಪಿಸಿದ್ದಾರೆ.ಈ ವೇಳೆ ಕಾರಿನ ಗಾಜುಗಳನ್ನು ಒಡೆಯಲು ಯತ್ನಿಸಿದ್ದಾಗಿ ನಟಿ ಅನಿತಾ ಭಟ್ ಆರೋಪಿಸಿದ್ದಾರೆ. ಘಟನೆ ಕುರಿತಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಕತ್ತಿ ಅವರಿಗೆ ಟಿಕೆಟ್ ಮಿಸ್ ಆಗಿದ್ದು ಅಣ್ಣ ಸಾಹೇಬ ಜೊಲ್ಲೆಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ ಈ ಕುರಿತು ರಮೇಶ್ ಕತ್ತಿ ಬೇಸರ ವ್ಯಕ್ತಪಡಿಸಿದ್ದು, ಯಾಕೆ ಟಿಕೆಟ್ ಕೈತಪ್ಪಿದೆ ಎಂದು ನನಗೆ ಮಾಹಿತಿ ಇಲ್ಲ ಎಂದು ಅವರು ಬೇಸರ ಹೊರಹಕಿದ್ದಾರೆ. https://kannadanewsnow.com/kannada/cm-siddaramaiahs-statement-calling-narendra-modi-week-pm-ridiculous-ct-ravi/ ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚಿಕ್ಕೋಡಿಯಿಂದ ಅಣ್ಣಾ ಸಾಹೇಬ ಜೊಲ್ಲೆಗೆ ಟಿಕೆಟ್ ನೀಡಿದ್ದಾರೆ.ಪಕ್ಷದ ಕಾರ್ಯಕರ್ತನಾಗಿ ಅವರ ಗೆಲುವಿಗೆ ನಾನು ಶ್ರಮಿಸುತ್ತೇನೆ. ಆದರೆ ಯಾವುದೇ ಕಾರಣಕ್ಕೆ ನಾನು ಪಕ್ಷವನ್ನು ಬಿಡುವುದಿಲ್ಲ ಎಂದು ಬೆಳಗಾವಿಯಲ್ಲಿ ರಮೇಶ್ ಕತ್ತಿ ಸ್ಪಷ್ಟನೆ ನೀಡಿದರು. https://kannadanewsnow.com/kannada/pappu-yadav-merges-his-jan-adhikar-party-with-congress/ ಬಹುಶಹ ಭಾರತೀಯ ಜನತಾ ಪಕ್ಷದ ಚಿಕ್ಕೋಡಿ ಲೋಕಸಭೆಯ ಅಭ್ಯರ್ಥಿಯಾಗಿ ನಾನು ಆಕಾಂಕ್ಷಿಯಾಗಿದ್ದೆ. ಆ ನಿಟ್ಟಿನಲ್ಲಿ ನಮ್ಮ ಹಿರಿಯರು ಮರದರ್ಶಕರಾಗಿರುವ ಬಿಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ಅವರು ತಮ್ಮದೇ ಆಗಿರುವಂತಹ ಸಾಕಷ್ಟು ಪ್ರಯತ್ನ ಮಾಡಿದರು ಸಹಿತ ಟಿಕೆಟ್ನಿಂದ ನಾನು ವಂಚಿತನಾಗಿದ್ದೇನೆ ಎಂದರು. https://kannadanewsnow.com/kannada/breaking-pm-modis-telephonic-conversation-with-putin-congratulates-russian-president/ ನಮ್ಮ ಪಕ್ಷದ ವರಿಷ್ಠರು ತೆಗೆದುಕೊಂಡಿರುವಂತಹ…

Read More

ಬೆಂಗಳೂರು : ಇಡೀ ವಿಶ್ವವೇ ಮೆಚ್ಚುವ ಪ್ರಭಾವಿ ಪ್ರಧಾನಿ ಎನ್ನುವ ನರೇಂದ್ರ ಮೋದಿಯನ್ನು ವೀಕ್ ಪಿಎಂ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಹಾಸ್ಯಾಸ್ಪದವಾಗಿದೆ. ಯಾರು ಸ್ಟ್ರಾಂಗ್ ಅಂತ ಹೇಳಿಕೊಳ್ಳುತ್ತಾರೋ ಅವರು ವೀಕ್ ಇರುತ್ತಾರೆ. ಮೋದಿ ಒನ್ ಆಫ್ ದಿ ಸ್ಟ್ರಾಂಗ್ ಲೀಡರ್ ಎಂದು ಬಿಜೆಪಿ ಮಾಜಿ ಶಾಸಕ ಸಿಟಿ ರವಿ ತಿಳಿಸಿದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಗೆ ಸಿಗುತ್ತಿರುವ ಜನ ಬೆಂಬಲ ಕಂಡು ಭಯದಿಂದಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ.ಸಿಎಂ ಸಿದ್ದರಾಮಯ್ಯ ಒಂದು ಟ್ವೀಟ್ ಮಾಡಿದ್ದಾರೆ. ಟ್ವೀಟ್​ ನಲ್ಲಿ ‘ನಾನು ಸ್ಟ್ರಾಂಗ್ ಸಿಎಂ, ಮೋದಿ ವೀಕ್ ಪಿಎಂ’ ಅಂತ ಹೇಳಿದ್ದಾರೆ ಎಂದು ತಿಳಿಸಿದರು. ಇದಕ್ಕೆ ಉತ್ತರಿಸಿದ ಸಿಟಿ ರವಿ ಯಾರು ಸ್ಟ್ರಾಂಗ್ ಅಂತ ಹೇಳಿಕೊಳ್ಳುತ್ತಾರೋ ಅವರು ವೀಕ್ ಇರುತ್ತಾರೆ. ಮೋದಿ ಸ್ಟ್ರಾಂಗ್ ಲೀಡರ್ ಅಂತ ಅನೇಕರು ಹೇಳಿದ್ದಾರೆ. ಮೋದಿ ಈಸ್ ಅವರ್ ಲೀಡರ್ ಅಂದಿದ್ದಾರೆ. ಮೋಸ್ಟ್ ಪಾಪ್ಯುಲರ್ ಪರ್ಸನ್ ಅಂತ ಅಮೆರಿಕ ಅಧ್ಯಕ್ಷರು ಹೇಳಿದ್ದಾರೆ…

Read More

ಧಾರವಾಡ: ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಒಗೆನ್ನವರ(28)ಮೃತ ಮಹಿಳೆಯಾಗಿದ್ದು, ಸುರೇಶ ಒಗೆನ್ನವರ, ಶ್ರೀಧರ ಒಗೆನ್ನವರ, ಚಿನ್ನಪ್ಪ ಒಗೆನ್ನವರ ಹಾಗೂ ಗಂಗವ್ವ ಒಗೆನ್ನವರ ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ‌. ಅಡುಗೆ ಮನೆಯಲ್ಲೇ ಇದ್ದ ಮಹಿಳೆ ಮಹಾದೇವಿ ಹೊರಗಡೆ ಬರಲಾಗದೇ ಅಲ್ಲೇ ಸಿಲುಕಿ ಸಾವನ್ನಪ್ಪಿದ್ದಾರೆ. ಇದರಿಂದ ಮಹಾದೇವಿ ದೇಹ ಸಂಪೂರ್ಣ ಬೆಂದು ಹೋಗಿದೆ. ಉಳಿದವರು, ಹಾಗೋ ಹೀಗೋ ಮಾಡಿ ಹೊರ ಬಂದಿದ್ದಾರೆ. ಅವರಿಗೂ ಗಾಯಗಳಾಗಿವೆ. ಅಕ್ಕಪಕ್ಕವೇ 2-3 ಸಿಲಿಂಡರ್​ಗಳಿದ್ದವು. ಆದರೆ ಅವುಗಳಿಗೆ ಬೆಂಕಿ ತಗುಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಹಾಗೂ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಚೆನ್ನೈ: ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಮಂಗಳವಾರ ಹೇಳಿದ್ದರು. ಈ ಹೇಳಿಕೆಗೆ ಸಂಬಂಧಪಟ್ಟಂತೆ ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ ಯಾರನ್ನೂ ಬಂಧನ ಮಾಡಿಲ್ಲ. ಹೀಗಾಗಿ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಡಿಎಂಕೆಯ ಆ‌ರ್.ಎಸ್ ಭಾರತಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈಬಗ್ಗೆ ಡಿಎಂಕೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಇನ್ನು ತಮಿಳಿಗರ ಆಕ್ರೋಶಕ್ಕೆ ಕಾರಣವಾಗಿದೆ ಶೋಭಾ ಕರಂದ್ಲಾಜೆ ಅವರು ನನ್ನ ತಮಿಳು ಸಹೋದರ ಮತ್ತು ಸಹೋದರಿಯರಿಗೆ ನಾನು ಕ್ಷಮೆ ಕೇಳುತ್ತೇನೆ. ಸಮಾಜದಲ್ಲಿ ಬೆಳಕು ಚೆಲುವಂತ ಕುರಿತಂತೆ ಹೇಳಿಕೆ ನೀಡಿದ್ದೇನೆ ಹೊರತು ಯಾವುದೇ ನೋವುಂಟು ಮಾಡುವ ಉದ್ದೇಶ ನನಗಿಲ್ಲ.…

Read More

ಬೆಳಗಾವಿ : ತಮ್ಮ ಮಗ ಮೃಣಾಲ್​ಗೆ ಟಿಕೆಟ್ ದೊರೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಯಕರ್ತೆಯರ ಬಳಿ ಆತನ ಪರ ಕೆಲಸ ಮಾಡುವಂತೆ ಸಚಿವೆ ಸೂಚಿಸಿದ್ದಾರೆ.ಈ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರ ಜೊತೆ ಸಭೆ ನಡೆಸಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಆ ಮೂಲಕ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. https://kannadanewsnow.com/kannada/breaking-two-naxals-killed-in-encounter-between-security-forces-and-maoists-in-chhattisgarh/ ಪುತ್ರ ಮೃಣಾಲ್​ಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗುತ್ತಿದ್ದಂತೆಯೇ ಸಚಿವೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಜತೆ ಸಭೆ ನಡೆಸಿದ್ದಾರೆ. ಮಗ ಮೃಣಾಲ್ ಪರ ಕೆಲಸ ಮಾಡುವಂತೆ ಮತ್ತು ಮತ ಹಾಕಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. https://kannadanewsnow.com/kannada/we-have-made-jds-prime-minister-chief-minister-dk-shivakumar-suresh/ ಲಕ್ಷ್ಮೀ ಹೆಬ್ಬಾಳ್ಕರ್ ಸಭೆ ನಡೆಸುತ್ತಿದ್ದ ಕಚೇರಿಯ ಮೇಲೆ ಚುನಾವಣಾಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ಹಠಾತ್ ದಾಳಿ ನಡೆಸಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ, ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿ ಸಭೆ ಮಾಡುತ್ತಿರುವುದು ಗಮನಕ್ಕೆ…

Read More

ಛತ್ತೀಸ್‌ಗಢ : ಪುರಂಗೆಲ್-ಗಾಂಪುರ್ ಅರಣ್ಯದಲ್ಲಿ ದಾಂತೇವಾಡ ಬಿಜಾಪುರ ಗಡಿಯ ಬಳಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಸಾವನ್ನಪ್ಪಿದ್ದಾರೆ. ಕಿರಾಂಡುಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಿರಂಡುಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪುರಂಗೆಲ್-ಗಾಂಪುರ ಅರಣ್ಯದಲ್ಲಿ ದಾಂತೇವಾಡ ಬಿಜಾಪುರ ಗಡಿಯಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ. ಪೊಲೀಸರು ಎರಡು ಶಸ್ತ್ರಾಸ್ತ್ರಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಇಂದಿನ ಎನ್‌ಕೌಂಟರ್ ನಲ್ಲಿ ದಾಂತೇವಾಡ ಜಿಲ್ಲಾ ಕೇಂದ್ರದಿಂದ 40 ಕಿಮೀ ದೂರದಲ್ಲಿರುವ ಕಿರಾಂಡುಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪುರಂಗೆಲ್ ಗಾಂಪುರ್ ಅರಣ್ಯ ಪ್ರದೇಶದಲ್ಲಿ ನಡೆದಿದೆ. “ಇಬ್ಬರು ಮಾವೋವಾದಿಗಳ ಶವಗಳು, ಒಬ್ಬ ಪುರುಷ ಮತ್ತು ಮಹಿಳೆಯನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಸ್ವದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರನ್ನು ಗುರುತಿಸುವ ಪ್ರಯತ್ನ ಮುಂದುವರಿದಿದೆ” ಎಂದು ದಾಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ತಿಳಿಸಿದ್ದಾರೆ.

Read More

ಕೊಪ್ಪಳ : ತಮ್ಮ ಮಗನಿಗೆ ಲೋಕಸಭಾ ಟಿಕೆಟ್ ಸಿಕ್ಕಿಲ್ಲವೆಂದು ಈಗಾಗಲೇ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಂಡಾಯವೇದಿದ್ದು ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇದೀಗ ಬಿಜೆಪಿ ಮತ್ತೊಬ್ಬ ನಾಯಕ ಬಂಡಾಯವೇದಿದ್ದು ಕೊಪ್ಪಳದಿಂದ ಸಂಸದ ಕರಡಿ ಸಂಗಣ್ಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/gps-based-toll-collection-to-replace-fastag-soon-heres-the-details/ ಹೌದು ಕೆಎಸ್ ಈಶ್ವರಪ್ಪ ಬಳಿಕ ಮತ್ತೊಬ್ಬ ಬಿಜೆಪಿ ನಾಯಕ ಬಂಡಾಯವೆದ್ದಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. https://kannadanewsnow.com/kannada/govt-fixes-age-limit-for-pregnancy-through-ivf-method/ ಇದೆ ವಿಚಾರವಾಗಿ ನಾಳೆ ಕಾರ್ಯಕರ್ತರು ಹಾಗೂ ಬೆಂಬಲಿಗರ ಜೊತೆಗೆ ಸಂಗಣ್ಣ ಕರಡಿ ಸಭೆಯನ್ನು ಕರೆದಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Read More