Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿ ದರ್ಶನ್ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಇದೀಗ ಈ ಒಂದು ಜಾಮೀನು ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೈ ಶಂಕರ್ ಅವರು ವಿಚಾರಣೆಯನ್ನು, ಸೋಮವಾರ ಅಂದರೆ ಸೆಪ್ಟೆಂಬರ್ 23ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ಗೆ, ಜೈಲಿನಲ್ಲಿ ರಾಜಾತಿಥ್ಯ ಅನುಭವಿಸಿದ್ದ ಪ್ರಕರಣ ಸದ್ದು ಮಾಡಿದ ಬೆನ್ನಲ್ಲೇ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲದೆ ದರ್ಶನ್ ಜೊತೆಗಿದ್ದ ರೌಡಿಶೀಟರ್ಗಳಾದ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಎಲ್ಲರನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇತ್ತೀಚಿಗೆ ದರ್ಶನ್ ಕಾಣಲು ಬಳ್ಳಾರಿ ಜೈಲಿಗೆ ಬಂದಿದ್ದ ಅವರ ತಾಯಿ ಮೀನಾ ತೂಗುದೀಪ್, ಅಕ್ಕ, ಭಾವ, ಸೋದರ ಅಳಿಯ, ಪತ್ನಿ ವಿಜಯಲಕ್ಷ್ಮಿ ಕೂಡ ಭೇಟಿ ನೀಡಿದ್ದರು. ಈ ವೇಳೆ ಕಾನೂನು ಹೋರಾಟದ ಕುರಿತು ಚರ್ಚೆ…
ಬಾಗಲಕೋಟೆ : ಟಿಪ್ಪು ಔರಂಗಜೇಬ್ ವಿರುದ್ಧ ಯತ್ನಾಳ್ ಹೇಳಿಕೆಗೆ, ಯತ್ನಾಳ ವಿರುದ್ಧ ಶಾಸಕ ವಿಜಯಾನಂದ ಕಾಶಪ್ಪನವರ ವಾಗ್ದಾಳಿ ನಡೆಸಿದ್ದು, ದೇಶ ಕಂಡ ವೀರ ಧೀರ ಟಿಪ್ಪು ಸುಲ್ತಾನ್ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ.ಇದು ಯತ್ನಾಳ್ ಅವರ ಸೌಜನ್ಯತೆ ತೋರಿಸಿ ಕೊಡುತ್ತದೆ. ಟಿಪ್ಪು ಸುಲ್ತಾನ್ ಯಾರಿಗೆ ಹುಟ್ಟಿದ್ದ? ಎಂದು ಯತ್ನಾಳ್ ನಿಂದಿಸಿದ್ದಾರೆ. ಹಾಗಾದರೆ ಇವರು ಯಾರಿಗೆ ಹುಟ್ಟಿದ್ದಾರೆ? ಎಂದು ಕಾಶಪ್ಪನವರ ಪ್ರಶ್ನಿಸಿದ್ದಾರೆ. ಇವರು ಈ ದೇಶದವರಿಗೆ ಹುಟ್ಟಿದ್ರಾ ಅಥವಾ ಬೇರೆ ದೇಶದವರಿಗೆ ಹುಟ್ಟಿದ್ರ? ಬಿಜೆಪಿಯವರು ಧರ್ಮದ ಆಧಾರದಲ್ಲಿ ಮಾತನಾಡುವುದನ್ನು ಮೊದಲು ಬಿಡಬೇಕು ಎಂದು ಅವರು ಕಿಡಿ ಕಾರಿದರು. ಪ್ರಜಾಪ್ರಭುತ್ವ, ಜಾತ್ಯಾತೀತ, ತತ್ವ ಸಿದ್ಧಾಂತದ ಬಗ್ಗೆ ಅರಿತುಕೊಳ್ಳಲಿ. ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರ ಸ್ವೀಕರಿಸಿದ್ದಾರೆ. ಬಾಯಿಗೆ ಬಂದಂತೆ ಮಾತನಾಡುವವರಿಗೆ ಗೌರವ ಇದೆಯಾ ಸಂವಿಧಾನದ ಮೇಲೆ ಇವರಿಗೆ ಗೌರವ ಇದೆಯಾ. ಸುಮ್ಮನಿರಬೇಕು ಎಂದು ಯತ್ನಾಳ್ ವಿರುದ್ಧ ಶಾಸಕ ವಿಜಯಾನಂದ ಕಾಶಪ್ಪನವರು ವಾಗ್ದಾಳಿ ನಡೆಸಿದರು. ಬಿಜೆಪಿ ಶಾಸಕ ಮುನಿರತ್ನಂದು ಒಂದ, ಎರಡ? ನೋಡುತ್ತೀರಿ ಇನ್ನೂ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಇದೀಗ ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಯುವತಿಯನ್ನು ಭೀಕರವಾಗಿ ಕೊಂದು ಫ್ರಿಜ್ ನಲ್ಲಿ ಪೀಸ್ ಪೀಸ್ ಮಾಡಿ ಇಟ್ಟಿರುವಂತಹ ಬೆಚ್ಚಿಬಿಳಿಸುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಹೌದು ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಯುವತಿಯ ಕೊಲೆಯಾಗಿರುವ ಮಾಹಿತಿ ಇದೀಗ ತಿಳಿದು ಬಂದಿದೆ. ಕೊಲೆಗೈದು ಪೀಸ್ ಪೀಸ್ ಮಾಡಿ ಫ್ರಿಜ್ ನಲ್ಲಿ ಇಟ್ಟಿರುವ ಮಾಹಿತಿ ತಿಳಿದು ಬಂದಿದೆ. ಸುಮಾರು 25 ರಿಂದ 26 ವಯಸ್ಸಿನ ಕೊಲೆಯಾಗಿದೆ. ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ಪೊಲೀಸರ ವಿಚಾರಣೆಯ ವೇಳೆ ಶಾಸಕ ಮುನಿರತ್ನ ತಮ್ಮ ವಿರುದ್ಧ ದೂರು ನೀಡಿದ್ದ ಮಹಿಳೆ ವಿರುದ್ಧ ಸ್ಪೋಟಕ ವಾದಂತಹ ಹೇಳಿಕೆ ನೀಡಿದ್ದಾರೆ. ಹೌದು ಮುನಿರತ್ನ ಅವರು ಎಚ್ಐವಿ ಸೋಂಕಿತರನ್ನು ಹನಿ ಟ್ರ್ಯಾಪ್ ಗೆ ಬಳಸಿಕೊಳ್ಳುತ್ತಿದ್ದರು ಎಂದು ಸಂತ್ರಸ್ತೆ ಮಹಿಳೆಯೊಬ್ಬರು ಇತ್ತೀಚಿಗೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಒಂದು ದೂರಿನ ಮೇರೆಗೆ ನಿನ್ನೆ ಪರಪ್ಪನ ಅಗ್ರಹಾರ ಜೈಲಲ್ಲೇ ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದರು. ಈ ವೇಳೆ ಪೊಲೀಸರು ವಿಚಾರಣೆ ನಡೆಸಿದಾಗ ಮುನಿರತ್ನ ಅವರು ದೂರು ನೀಡಿದ್ದ ಮಹಿಳೆಯೇ ನಿಮಗೆ ಯಾರ ವಿಡಿಯೋ ಬೇಕು ಹೇಳಿ ಎಂದು ಆಫರ್ ಕೊಟ್ಟಿದ್ದಳು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ವಿಚಾರಣೆ ವೇಳೆ ದೂರುದಾರೆ ನನಗೆ ತುಂಬಾ ಪರಿಚಯ,…
ಕಲಬುರ್ಗಿ : ಕಲಬುರ್ಗಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ರೌಡಿಶೀಟರ್, ಮಾಜಿ ಗ್ರಾ.ಪಂ ಸದಸ್ಯನ ಕೊಲೆ ಆರೋಪಿ ಮೇಲೆ ಗುಂಡಿನ ದಾಳಿ ನಡೆದಿದ್ದು, ಆಳಂದ ತಾಲೂಕಿನ ಖಾನಾಪುರದ ಕ್ರಾಸ್ ಬಳಿ ನಡೆದಿದ್ದ ವಿಶ್ವನಾಥ್ ಜಮಾದಾರ ಕೊಲೆ ಪ್ರಕರಣದ ಆರೋಪಿ ಲಕ್ಷ್ಮಣ ಪೂಜಾರಿ ಮೇಲೆ ಶನಿವಾರ ಮಾಡ್ಯಾಳ ಗ್ರಾಮದ ಬಳಿಯಲ್ಲಿ ಬೆಳಗ್ಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ. ಹೌದು ಸೆ.13ರಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ ಜಮಾದಾರ ಮೇಲೆ ಮೂರು ಸುತ್ತು ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮಣ ಪೂಜಾರಿಯು ತಾನು ಬಚ್ಚಿಟ್ಟಿದ್ದ ಗನ್ ವಶಕ್ಕೆ ಪಡೆಯಲು ಪೊಲೀಸರು ತೆರಳಿದಾಗ ನಿಂಬರ್ಗಾ ಮಹಿಳಾ ಪಿಎಸ್ಐ ಮೇಲೆ ಲಕ್ಷ್ಮಣ ಹಲ್ಲೆ ಮಾಡಿದ್ದಾನೆ. ಇದರಿಂದ ಪಿಎಸ್ಐ ಕೈಗೆ ಗಾಯವಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್ಐ ಸೋಮಲಿಂಗ ಒಡೆಯರ್ ಲಕ್ಷ್ಮಣ ಕಾಲಿಗೆ ಗುಂಡು ಹಾರಿಸಿದ್ದಾರೆ. ಕೂಡಲೇ ಸ್ಥಳದಲ್ಲಿ ಕುಸಿದು ಬಿದ್ದ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಕ್ಷ್ಮಣ ವಿರುದ್ಧ…
ಬೆಂಗಳೂರು : ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದರು. ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ಇಂದು ಅವರು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದರು.ಇದೀಗ ಲೋಕಾಯುಕ್ತ ಅಧಿಕಾರಿಗಳಿಂದ ವಿಚಾರಣೆ ಮುಗಿಸಿ ಕಚೇರಿಯಿಂದ ಯಡಿಯೂರಪ್ಪ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಎಸ್ ಯಡಿಯೂರಪ್ಪ ಈ ಇಬ್ಬರೂ ನಾಯಕರು ಜಂಟಿಯಾಗಿ ಡಿನೋಟಿಫಿಕೇಷನ್ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪವಿದೆ. ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು A1 ಆರೋಪಿಯನ್ನಾಗಿ ಮಾಡಲಾಗಿದೆ. ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆಗೂ ಹೆಚ್ಚು ಗುಂಟೆ ಭೂಮಿಯನ್ನು ಸತ್ತವರ ಹೆಸರಲ್ಲಿ ಕುಮಾರಸ್ವಾಮಿ ಹಾಗೂ ಬಿಎಸ್ವೈ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿದ್ದರು ಎಂಬ ಆರೋಪವಿದೆ. 2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ, ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ IAS ಅಧಿಕಾರಿ ರಾಕೇಶ್ ಸಿಂಗ್ ಅವರಿಂದ ನಿಯಮ 164ರಡಿ ಲೋಕಾಯುಕ್ತ ಅಧಿಕಾರಿಗಳು ಮಾಜಿಸ್ಟ್ರೇಟ್ ಮುಂದೆ ಹೇಳಿಕೆ ಪಡೆದುಕೊಂಡಿದ್ದರು.
ಉತ್ತರಕನ್ನಡ : ಜಿಲ್ಲೆಯ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಕೊನೆಗೂ ಪತ್ತೆಯಾಗಿದೆ. ಹೌದು ಮುಳುಗು ತಜ್ಞ ಈಶ್ವರ ಮಲ್ಪೆ ತಂಡದಿಂದ ಲಾರಿಯನ್ನು ಮೇಲೆತ್ತಲಾಗುತ್ತಿದ್ದು ಲಾರಿಗೆ ಹಗ್ಗ ಕಟ್ಟಿ ಮೇಲೆ ಎಳೆಯಲು ರಕ್ಷಣಾ ಸಿಬ್ಬಂದಿ ಇದೀಗ ಸಿದ್ಧತೆ ಮಾಡಿಕೊಂಡಿದ್ದಾರೆ. ಆದಷ್ಟು ಬೇಗ ಲಾರಿಯನ್ನು ಮೇಲೆ ತರಲು ಅಗ್ನಿಶಾಮಕ ದಳ ಸಿಬ್ಬಂದಿ ಸೇರಿದಂತೆ ಎಲ್ಲಾ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡದ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ ಘಟನೆ ಬಳಿಕ ರಾಡಾರ್ ಮೂಲಕ ಶೋಧ ಕಾರ್ಯ ನಡೆಸಿ ಶಂಕಿತ ಸ್ಥಳದಲ್ಲಿ ಶೋಧ ಕಾರ್ಯ ಮಾಡಿದರೂ ಟ್ರಕ್, ಟ್ಯಾಂಕರ್ ಗಳು ಇರುವುದು ಪತ್ತೆಯಾಗಿತ್ತು. ರಸ್ತೆಯ ಬದಿ ಇದ್ದ ಅಂಗಡಿ ನೆಲಸಮವಾದ ಕಡೆ ಶೋಧ ಕಾರ್ಯ ನಡೆಸಲಾಗಿದ್ದು, ಗಂಗಾವಳಿ ನದಿಗೆ ಬಿದ್ದ ಮಣ್ಣಿನ ಗುಡ್ಡದಲ್ಲಿ NDRF ,SDRF ,ಆರ್ಮಿ ಕಮಾಂಡೋಗಳ ತಂಡ ಶೋಧ ಕಾರ್ಯ ಮಾಡಿತ್ತು. ಸಂತ್ರಸ್ತರಿಗೆ ಮೋದಿ…
ತುಮಕೂರು : ಇಂದು ತುಮಕೂರಿನ ಚರ್ಚ್ ವೃತ್ತದ ಬಳಿ ಇರುವ ಹಿಂದೂ ಮಹಾಸಭಾ ಗಣಪತಿಯ ಒಂದು ವೇದಿಕೆ ಕಾರ್ಯಕ್ರಮದಲ್ಲಿ ಹಿಂದೂಪರ ಮುಖಂಡ ಪುನೀತ್ ಕೆರೆಹಳ್ಳಿ ಭಾಷಣ ಮಾಡಬೇಕಾಗಿತ್ತು, ಆದರೆ ವಿವಾದಾತ್ಮಕ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಪೊಲೀಸರಿಂದ ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿದೆ. ತುಮಕೂರಿನ ಕ್ಯಾತ್ಸಂದ್ರ ಬಳಿರುವ ಜಾಸ್ ಟೋಲ್ ಬಳಿ ಬಂಧಿಸಲಾಗಿದೆ. ತುಮಕೂರಿನ ಚರ್ಚ್ ವೃತ್ತದಲ್ಲಿ ಪುನೀತ್ ಕೆರೆಹಳ್ಳಿ ಭಾಷಣ ಮಾಡಬೇಕಾಗಿತ್ತು. ವಿವಾದಾತ್ಮಕ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ಯನ್ನು ಇದೀಗ ತುಮಕೂರು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು : ಮನುಷ್ಯರಲ್ಲಿ ಇನ್ನೂ ಮಾನವೀಯತೆ, ಕರುಣೆ ಇದೆ ಎನ್ನುವುದಕ್ಕೆ ಈ ಒಂದು ಘಟನೆ ಪ್ರಮುಖ ಸಾಕ್ಷಿಯಾಗಿದೆ. ಕೆಲವೊಂದು ಬಾರಿ ಗೊತ್ತಿಲ್ಲದೆ ಸಮಯ ಪ್ರಜ್ಞೆಯಿಂದ ಕೆಲವರು ಮತ್ತೊಬ್ಬರ ಜೀವ ಉಳಿಸಿರುತ್ತಾರೆ. ಇದೀಗ ಇಂತಹ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ವಿದ್ಯುತ್ ಟ್ರಾನ್ಸ್ಫಾರ್ಮರ್ ಮೇಲೆ ಕುಳಿತಿದ್ದ ಕಾಗೆ ಒಂದು ಕರೆಂಟ್ ಶಾಕ್ ನಿಂದ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿತ್ತು. ಈ ವೇಳೆ ತಕ್ಷಣ ಅಲ್ಲಿಯೇ ಇದ್ದಂತಹ ಅಗ್ನಿಶಾಮಕ ದಳದ ಸಿಬ್ಬಂದಿ ಒಬ್ಬರು ಕಾಗೆಗೆ ಸಿಪಿಆರ್ ಮೂಲಕ ಮರು ಜೀವ ನೀಡಿ ಮಾನವೀಯತೆ ಮೆರೆದಿದ್ದಾರೆ. ಹೌದು ಈ ಒಂದು ಘಟನೆ ತಮಿಳುನಾಡಿನಲ್ಲಿ ನಡೆದಿದ್ದು,ಕೊಯಮತ್ತೂರಿನ ಕವುಂಡಂಪಾಳ್ಯದಲ್ಲಿ ನಡೆದಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಯೋರ್ವ ತಮ್ಮ ಸಮಯ ಪ್ರಜ್ಞೆಯಿಂದ ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಕಾಗೆಯ ಪ್ರಾಣವನ್ನು ರಕ್ಷಿಸಿದ್ದಾರೆ. ಕರೆಂಟ್ ಶಾಕ್ ಹೊಡೆದ ಪರಿಣಾಮ ಕಾಗೆಯೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಪ್ರಾಣ ಉಳಿಸಿಕೊಳ್ಳಲು ನರಳಾಡುತ್ತಿತ್ತು, ಆ ಸಂದರ್ಭದಲ್ಲಿ ಕಾಗೆಯನ್ನು ಎತ್ತಿಕೊಂಡು ಅದರ ಬಾಯಿಗೆ ಬಾಯಿಟ್ಟು ಉಸಿರು ನೀಡಿ ಸಿಪಿಆರ್…
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಧಾನ ತಾಲೂಕ್ ಅವರು ಮಂಡ್ಯಾಕೆ ಭೇಟಿ ನೀಡುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಅವರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಆಕ್ರೋಶ ಹೊರಹಾಕಿದ ಪ್ರಮೋದ್ ಮುತಾಲಿಕ್, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಇವೆಲ್ಲಾ ಗಲಭೆ ನಡೆಯುತ್ತಿವೆ. ಇಂತವರನ್ನು ಶೂಟ್ ಮಾಡಬೇಕು ಎಂದು ಕಿಡಿ ಕಾಡಿದರು. ಮದ್ದೂರಿನ ನಿಡಘಟ್ಟದ ಬಳಿ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದು, ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲಾ ರೀತಿಯ ಸ್ವಾತಂತ್ರ್ಯ ನೀಡಿದ್ದಾರೆ. ನಾನು ಹೋದ ಮೇಲೆ ಏನಾದರೂ ಆದರೆ ನನ್ನ ಮೇಲೆ ಕೇಸ್ ಹಾಕಿ. ನಮ್ಮನ್ನು ತಡೆಯುವ ಕೆಲಸ ಅಕ್ಷಮ್ಯ ಅಪರಾಧ. ನಮ್ಮ ಸಂಘಟನೆ ಹಾಗೂ ನಮ್ಮ ವೈಚಾರಿಕತೆಯನ್ನು ತಡೆಯುತ್ತಿದ್ದಾರೆ ಎಂದು ಕಿಡಿ ಕಾರಿದರು. ನಾನು ನಾಗಮಂಗಲಕ್ಕೆ ಹೋಗ್ತಾ ಇಲ್ಲ. ನಾನು ಹೋಗ್ತಾ ಇದ್ದು ಮಂಡ್ಯದ ಜೈಲಿಗೆ. ಇಲ್ಲಿನ ನಾನು ಯಾವುದೇ ಸಭೆ ಮಾಡುತ್ತಿರಲಿಲ್ಲ.ನಾನು ಬಂಧತ ಹಿಂದೂ ಯುವಕರನ್ನು ಮಾತಾಡಿಸಲು ಹೋಗ್ತಾ…