Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸ್ ಹೆಸರು ಆರೋಪಿ ಮುತ್ತು ಅಭಿಮನ್ಯುವನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಗೀತಾ ಮತ್ತು ಆಕೆಯ ಪುತ್ರಿ ಜೊತೆಗೆ ಆರೋಪಿ ಮುತ್ತು ವಾಸವಿದ್ದ. ಪುತ್ರಿ ಮದುವೆ ಮಾಡಿ ಕೊಡುವಂತೆ ಗೀತಾಗೆ ಮುತ್ತು ಒತ್ತಾಯಿಸಿದ್ದಾನೆ. ಮದುವೆಗೆ ಒಪ್ಪದಿದ್ದಕ್ಕೆ ಗೀತಾ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿತ್ತು. ಸದ್ಯ ತಮಿಳುನಾಡಿನಲ್ಲಿ ಆರೋಪಿ ಮುತ್ತು ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Read More

ಬೀದರ್ : ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಇದೀಗ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ. ಬೀದರ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದೆ. ಉದ್ಯಮಿ ಸಂಜು ಕುಮಾರ್ ಸೂಗೂರೆ ದೂರನ್ನು ಆಧರಿಸಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಉದ್ಯಮಿ ಸಂಜುಕುಮಾರ ಸುಗುರೆ 99 ಲಕ್ಷ ಹಣ ಕೊಟ್ಟಿದ್ದರು. ಚುನಾವಣೆ ಸಮಯದಲ್ಲಿ ಶರಣು ಸಲಗರ 99 ಲಕ್ಷ ಹಣ ಪಡೆದಿದ್ದಾರೆ. ಖಾಲಿ ಚಕ್ ಪಡೆದು ಸಂಜು ಕುಮಾರ್ 99 ಲಕ್ಷ ರೂಪಾಯಿ ಹಣ ಕೊಟ್ಟಿದ್ದಾರೆ. ಆದರೆ ಹಣ ವಾಪಸ್ ಕೊಡದ ಹಿನ್ನೆಲೆಯಲ್ಲಿ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದಾರೆ.

Read More

ಉತ್ತರಕನ್ನಡ : ಕಾರವಾರದ ಕರಾವಳಿ ಉತ್ಸವದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರಾವಳಿಯನ್ನು ಪ್ರವಾಸೋದ್ಯಮ ಹಬ್ ಆಗಿ ಅಭಿವೃದ್ಧಿಪಡಿಸುವುದು ಎಂದು ಭರವಸೆ ನೀಡಿದರು. ಅಲ್ಲದೆ, ಸೂಪರ್ ಸ್ಪೆಷಲಿಟಿ ಆಸ್ಪತ್ರೆ ನಿರ್ಮಾಣ ಮತ್ತು ನದಿ ಜೋಡಣೆಗೆ ಡಿಪಿಆರ್ ಘೋಷಣೆ ಮಾಡಿದರು. ನಿನ್ನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಭಾಗವಹಿಸಿದರು. ಇದೇ ಸಮಾರಂಭದಲ್ಲಿ ಉತ್ತರ ಕನ್ನಡಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಉಡುಪಿ ಮತ್ತು ಕಾರವಾರದ ಸುಮಾರು 300 ಕಿಮೀ ಉದ್ದದ ಕರಾವಳಿ ತೀರವನ್ನು ಪ್ರವಾಸೋದ್ಯಮದ ಹಬ್ ಆಗಿ ಪರಿವರ್ತಿಸಲು ಸರ್ಕಾರ ಹೊಸ ಟೂರಿಸಂ ಪಾಲಿಸಿ ಜಾರಿಗೆ ತರಲಿದೆ ಎಂದು ತಿಳಿಸಿದ್ದಾರೆ. ಇದೆ ವೇಳೆ ಕರಾವಳಿ ಉತ್ಸವದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ, ಜಿಲ್ಲಾಡಳಿತ ವತಿಯಿಂದ ಶಾಸಕ ಸತೀಶ್ ಸೈಲ್, ವಿಷ್ಣುವಿನ ವಿಶ್ವರೂಪ ದರ್ಶನ ಬಿಂಬಿಸುವ 16 ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧದ ವಿಗ್ರಹ ಉಡುಗೊರೆಯಾಗಿ ನೀಡಿದರು. ಡಿಸಿಎಂ ಅವರ ಮನಸ್ಸಿನಲ್ಲಿರುವ ಎಲ್ಲಾ ಬಯಕೆ ಈಡೇರಲೆಂದು ಆಶಿಸುವುದಾಗಿ…

Read More

ಮೈಸೂರು : ಮೈಸೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಯುವತಿಯ ಪ್ರೀತಿಯ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಇದರಿಂದ ಮನನೊಂದ ಯುವಕ ನಾಗೇಂದ್ರ (23) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಟಿ ನರಸಿಪುರ ತಾಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಾಗೇಂದ್ರ ಯುತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಈ ವಿಷಯ ತಿಳಿದು ನಾಗೇಂದ್ರನ ಮೇಲೆ ಯುವತಿಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ. ಯುವತಿಯ ಕುಟುಂಬದ ಜಯಕುಮಾರ್ ಮಂಜು ಸೇರಿ ಐವರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಹಲ್ಲೆಯಿಂದ ಅವಮಾನ ಆಗಿದೆ ಎಂದು ಮನನೊಂದು ನಾಗೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ ಈ ಕುರಿತು ನಾಗೇಂದ್ರ ಪೋಷಕರು ಬನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸುತ್ತಿದ್ದಾರೆ.

Read More

ವಿಜಯಪುರ : ವಿಜಯಪುರದಲ್ಲಿ ಹೋಟೆಲ್ ಒಂದು ಧಗಧಗನೆ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಹೋಟೆಲ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ ಕೆಲವೇ ನಿಮಿಷದಲ್ಲಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ವಿಜಯಪುರ ನಗರದ BLDE ರಸ್ತೆಯಲ್ಲಿರುವ ಕೃಷ್ಣ ಹೋಟೆಲ್ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಹೋಟೆಲಲ್ಲಿ ಇದ್ದಂತಹ ಸಿಲಿಂಡರ್ ಗಳು ಬೆಂಕಿ ಇಂದ ಸ್ಪೋಟಗೊಂಡಿದ್ದು ಇಬ್ಬರು.  ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಈ ಒಂದು ಘಟನೆ ನಡೆದಿದೆ ಐದಾರು ಪುಡಿ ರೌಡಿಗಳು ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಕಾರಿನ ಒಳಗೆ ಇದ್ದಂತಹ ಇಬ್ಬರು ಯುವಕರ ಮೇಲೆ ಪುಡಿ ರೌಡಿಗಳು ದಾಳಿ ಮಾಡಲು ಯತ್ನಿಸಿದ್ದಾರೆ. ಕಾರಿನೊಳಗಿದ್ದ ಯುವಕರಿಬ್ಬರು ಅದೃಷ್ಟವಶಾತ್ ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಸಿಸಿಟಿವಿಯಲ್ಲಿ ದಾಳಿಯ ದೃಶ್ಯ ಲೈವ್ ಸೆರೆಯಾಗಿದೆ. ಬಶೀರ್ ಎಂಬಾತನ ಮನೆಗೆ ನುಗ್ಗಿ ಈ ಒಂದು ಗ್ಯಾಂಗ್ ಹಲ್ಲೆ ಮಾಡಿದೆ. ಅಲ್ಲದೇ ಪಾನ್ ಶಾಪ್ ಗೆ ನುಗ್ಗಿ ಬಾಟಲ್ ಗಳನ್ನು ಪುದಿಗಟ್ಟಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿ 9 ಗಂಟೆಗೆ ಈ ಒಂದು ಘಟನೆ ನಡೆದಿದೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ

Read More

ಬೆಂಗಳೂರು : ನಗರದ ಮಾಲ್ ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದ ಕಾಮುಕನನ್ನ ಪೊಲೀಸರು ಒದ್ದು ಒಳಗಡೆ ಹಾಕಿದ್ದಾರೆ. ಡಿಸೆಂಬರ್.25ರಂದು ಕ್ರಿಸ್ ಮಸ್ ಆಚರಣೆ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು. ಮಾಲ್ ನಲ್ಲಿ ಸ್ನೇಹಿತೆಯರೊಂದಿಗೆ ಕ್ರಿಸ್ ಮಸ್ ಆಚರಿಸುತ್ತಿದ್ದ ವೇಳೆಯಲ್ಲಿ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿಯನ್ನು ಮೆರೆದಿದ್ದನು.ಈ ವೇಳೆಯಲ್ಲಿ ಸ್ಥಳದಲ್ಲಿದ್ದ ಮಹದೇವಪುರ ಠಾಣೆಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯನ್ನು ವಿಚಾರಣೆ ಮಾಡಿದಾಗ ಗುವಾಹಟಿ ಮೂಲದ ಮನೋಜ್(27) ಎಂಬುದಾಗಿ ತಿಳಿದು ಬಂದಿದೆ. ಡೆಲಿವರಿ ಬಾಯ್ ಆಗಿ ಕೆಲಸವನ್ನು ಆರೋಪಿ ಮನೋಜ್ ಶಾ ಮಾಡುತ್ತಿದ್ದನು ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಮಹದೇವಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

Read More

ಆಂಧ್ರಪ್ರದೇಶ : ಕೇರಳದ ಎರ್ನಾಕುಲಂ ಎಕ್ಸ್ಪ್ರೆಸ್ ರೈಲಿನಲ್ಲಿ ಭೀಕರವಾದ ಅಗ್ನಿ ದುರಂತ ಸಂಭವಿಸಿದೆ. ಆಂಧ್ರಪ್ರದೇಶದ ಅನಕಾಪಲ್ಲಿಯಲ್ಲಿ ಯಲಮಂಚಿಯಲ್ಲಿ ಈ ಒಂದು ಘಟನೆ ನಡೆದಿದೆ. ಎಕ್ಸ್ಪ್ರೆಸ್ ರೈಲಿನ ಬಿ1 ಬೋಗಿಯಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ.ಇದರಲ್ಲಿ ಓರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ದುರಂತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಆಂಧ್ರಪ್ರದೇಶದ ವಿಜಯವಾಡ ನಿವಾಸಿ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಳಗಾವಿ : ಮದ್ಯ ಸೇವಿಸಲು ಬಾರ್​​​ಗೆ ಸ್ನೇಹಿತರು, ಸಂಬಂಧಿಕರನ್ನು ಕರೆದುಕೊಂಡು ಹೋಗೋದನ್ನ ನಾವು ಕೇಳಿದ್ದೇವೆ, ನೋಡಿದ್ದೇವೆ. ಆದ್ರೆ ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ಪಾಪಿ ಅಜ್ಜ ಮೊಮ್ಮಗನ ಬಾರ್​​ಗೆ ಕರೆದುಕೊಂಡು ಹೋಗಿದ್ದಲ್ಲದೆ ಆತನಿಗೆ ಎಣ್ಣೆ ಕುಡಿಸಿರುವ ವಿಡಿಯೋವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.ಜಿಲ್ಲೆಯ ರಾಯಬಾಗ ಪಟ್ಟಣದ ಬಾರ್​​ ಒಂದರಲ್ಲಿ ಘಟನೆ ನಡೆದಿದ್ದು, ಅಲ್ಲಿದ್ದವರ ವಿರೋಧದ ನಡುವೆಯೂ ಅಜ್ಜ ಚಿಕ್ಕ ಹುಡುಗನಿಗೆ ಕುಡಿಯಲು ಮದ್ಯ ನೀಡಿದ್ದಾನೆ. ತನ್ನ ಮೂರು ವರ್ಷದ ಮೊಮ್ಮಗನಿಗೆ ಅಜ್ಜನೇ ಸಾರಾಯಿ ಕುಡಿಸಿದ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ಪಟ್ಟಣದ ಬಾರ್‌ವೊಂದರಲ್ಲಿ ನಡೆದಿದೆ. ಮಗುವಿನ ಎದುರು ತಾನೂ ಸಾರಾಯಿ ಕುಡಿದ ದ್ದಲ್ಲದೆ ಎಳೆ ವಯಸ್ಸಿನ ಮೊಮ್ಮಗನಿಗೂ ಸಾರಾಯಿಯ ರುಚಿ ತೋರಿಸಿದ್ದಕ್ಕೆ ವೃದ್ಧನ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶನಿವಾರ ರಾತ್ರಿ ರಾಯಭಾಗ ಪಟ್ಟಣದ ಬಾರ್‌ಗೆ ತನ್ನ ಮೂರು ವರ್ಷದ ಮೊಮ್ಮಗ ನೊಂದಿಗೆ ಆಗಮಿಸಿದ ವ್ಯಕ್ತಿ, ಆತನ ಎದುರು ತಾನೂ ಕುಡಿದದ್ದಲ್ಲದೆ, ಮಗುವಿಗೂ ಸಾರಾಯಿ ಕುಡಿಸಿದ್ದಾನೆ. ಆ ವೇಳೆ, ಸ್ಥಳೀಯರು…

Read More

ಅಮೇರಿಕಾ : ಅಮೇರಿಕಾದಲ್ಲಿ ಬೆಚ್ಚಿ ಬೀಳಿಸೋ ಂ ಘಟನೆಯೊಂದು ನಡೆದಿದ್ದು, ಪ್ಯಾರಾಮರಿಬೊ, ಸುರಿನಾಮ್ (ಎಪಿ) – ಸುರಿನಾಮ್‌ನ ರಾಜಧಾನಿ ಪ್ಯಾರಾಮರಿಬೊದ ಹೊರಗೆ ನಡೆದ ಚಾಕು ದಾಳಿಯಲ್ಲಿ ಐದು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಭಾನುವಾರ ಮುಂಜಾನೆ ಸುರಿನಾಮ್‌ನ ಕಾಮೆವಿಜ್ನೆಯಲ್ಲಿ ವ್ಯಕ್ತಿಯೊಬ್ಬ ಕ್ರೂರವಾಗಿ ಇರಿದು ಐದು ಮಕ್ಕಳು ಸೇರಿದಂತೆ ಒಂಬತ್ತು ಜನರನ್ನು ಕ್ರೂರವಾಗಿ ಕೊಂದ ಆಘಾತಕಾರಿ ಅಪರಾಧ ಘಟನೆ ಇದು. ಪರಮಾರಿಬೊ ಪೊಲೀಸರು ಶಂಕಿತನ ಮೇಲೆ ಗುಂಡು ಹಾರಿಸಬೇಕಾಯಿತು, ಆತನ ಕಾಲುಗಳಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಬಂಧಿಸಿ ಪ್ರಸ್ತುತ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ಸಂಸ್ಥೆಯೊಂದು ವರದಿ ಮಾಡಿರುವ ಪ್ರಕಾರ, ಶಂಕಿತನನ್ನು ಫೈರಿಂಗ್ ಮಾಡಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 27 ರ ಶನಿವಾರದಿಂದ ಡಿಸೆಂಬರ್ 28 ರ ಭಾನುವಾರದವರೆಗೆ ರಾತ್ರಿಯ ವೇಳೆ, ಒಬ್ಬ ಪುರುಷ ವ್ಯಕ್ತಿ ನಾಲ್ವರು ವಯಸ್ಕರು ಮತ್ತು ಐದು ಮಕ್ಕಳನ್ನು ತೀಕ್ಷ್ಣವಾದ ವಸ್ತುವಿನಿಂದ ಹೊಡೆದು ಕೊಂದಿದ್ದಾನೆ. ಆರನೇ ಮಗು ಮತ್ತು…

Read More