Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯನಗರ : ಸಾವು ಯಾವಾಗ ಯಾವ ರೂಪದಲ್ಲಿ ಬರುತ್ತದೆ ಎಂದು ಹೇಳುವುದಕ್ಕೆ ಆಗುವುದಿಲ್ಲ. ಇದೀಗ ವಿಜಯನಗರದಲ್ಲಿ ಭೀಕರ ಅಪಘಾತ ಒಂದು ನಡೆದಿದ್ದು, ವಾಕಿಂಗ್ ಮಾಡುತ್ತಿದ್ದ ಪಾದಚಾರಿಗಳ ಮೇಲೆ ವೇಗವಾಗಿ ಬಂದಂತಹ ಲಾರಿ ಒಂದು ಹರಿದಿದೆ. ಇದರ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನಪ್ಪಿದರೆ ಒಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು ಇಂದು ಬೆಳಿಗ್ಗೆ ಬೆಂಗಳೂರಿನಿಂದ ರಾಜಸ್ಥಾನದತ್ತ ಹೊರಟಿದ್ದ ಲಾರಿಯೊಂದು ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಆಲೂರಿನ ಸಿದ್ದಲಿಂಗಯ್ಯ(39) ಹಾಗೂ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಗ್ರಾಮದ ದೇವಸಮುದ್ರದ ಕೊಟ್ರಯ್ಯ(26) ಮೃತ ರ್ದುದೈವಿಗಳು ಎನ್ನಲಾಗಿದೆ. ಗಾಯಗೊಂಡ ಮತ್ತೊಬ್ಬ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಪಡೆದುಕೊಂಡು ಬಿಡುಗಡೆಯಾದ ತಕ್ಷಣ ಅತ್ಯಾಚಾರ ಪ್ರಕಾರದಲ್ಲಿ ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೋಲಿಸರು ಮತ್ತೆ ಅರೆಸ್ಟ್ ಮಾಡಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಪೋಟಕ ವಾದಂತಹ ಮಾಹಿತಿ ಹೊರ ಬಿದ್ದಿದ್ದು, ಅದರಲ್ಲೂ ಮುನಿರತ್ನ ಮಾಡಿದ್ದ ಪ್ಲ್ಯಾನ್ ಗಳನ್ನ ಕೇಳಿದರೆ ಎಂಥವರಿಗೆ ಆದರೂ ಎದೆ ನಡುಗುತ್ತದೆ. ಅದರಲ್ಲೂ ತಮ್ಮದೇ ಪಕ್ಷದಲ್ಲಿದ್ದ ವ್ಯಕ್ತಿಗಳ ಜೀವನವನ್ನೇ ಹಾಳು ಮಾಡುವ ಹುನ್ನಾರ ಶಾಸಕ ಮುನಿರತ್ನ ಮಾಡಿದ್ದಾರೆ ಎನ್ನಲಾಗಿದೆ. ಹೌದು ವಿಪಕ್ಷ ನಾಯಕರಾದ ಆರ್ ಅಶೋಕ್ ಅವರಿಗೆನೆ ಬಿಜೆಪಿ ಶಾಸಕ ಮುನಿರತ್ನ ಏಡ್ಸ್ ರಕ್ತದ ಇಂಜೆಕ್ಟ್ ಮಾಡಲು ಹೋಗಿದ್ರಂತೆ. ಈ ಒಂದು ವಿಷಯ ತಿಳಿದು ತಕ್ಷಣನಾಯಕ ಆರ್ ಅಶೋಕ್ ಸಹಜವಾಗಿ ಬೆಚ್ಚಿಬಿದ್ದಿದ್ದಾರೆ. ಈ ವಿಚಾರವಾಗಿ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಮುನಿರತ್ನ ಅವರನ್ನ ನಾವ್ಯಾರು ಬೆಂಬಲಿಸಲ್ಲ. ಉಪ್ಪು ತಿಂದವ ನೀರು ಕುಡಿಯಲೇಬೇಕು. ಈ ಬಗ್ಗೆ ಪೊಲೀಸರು ತನಿಖೆ…
ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಆರೋಪಿ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದಾರೆ.ಇದೀಗ ದರ್ಶನ್ಗೆ ಸಿಗಬೇಕಿರುವ ಕೆಲವು ಅಗತ್ಯ ಸೌಲಭ್ಯಗಳನ್ನು ಜೈಲು ಅಧಿಕಾರಿಗಳು ಕೊಟ್ಟಿಲ್ಲವೆಂದು ಆರೋಪಿಸಿ ದರ್ಶನ್ ಪರವಾಗಿ ಅವರ ಕುಟುಂಬದವರು ಮಾನವ ಹಕ್ಕು ಆಯೋಗಕ್ಕೆ ದೂರು ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ. ಹೌದು ಬಳ್ಳಾರಿ ಜೈಲಿನಲ್ಲಿ ಕಠಿಣ ನಿಯಮಗಳನ್ನು ಎದುರಿಸುವ ಪರಸ್ಥಿತಿ ನಿರ್ಮಾಣವಾಗಿದೆ. ಬಳ್ಳಾರಿ ಜೈಲಿನ ಅಧಿಕಾರಿಗಳು ಶಿಸ್ತಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಇದು ದರ್ಶನ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕೆಲವು ‘ಸೌಲಭ್ಯ’ಗಳಿಗಾಗಿ ಪದೇ ಪದೇ ಜೈಲಧಿಕಾರಿಗಳ ಬಳಿ ದರ್ಶನ್ ಮನವಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೆ ದರ್ಶನ್ರ ಕುಟುಂಬಸ್ಥರು ಬಳ್ಳಾರಿ ಜೈಲು ಸಿಬ್ಬಂದಿ ವಿರುದ್ಧ ದೂರು ನೀಡಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಜೈಲು ಸೇರಿದ ಆರಂಭದಿಂದಲೂ ಹಾಸಿಗೆ ಮತ್ತು ಮೆತ್ತನೆಯ ದಿಂಬಿಗೆ ಡಿಮ್ಯಾಂಡ್ ಮಾಡುತ್ತಲೇ ಇದ್ದಾರೆ. ಬಳ್ಳಾರಿ ಜೈಲಿನಲ್ಲೂ ಅದೇ ಡಿಮ್ಯಾಂಡ್ ಮುಂದುವರೆದಿದೆ ಆದರೆ ಜೈಲು ಅಧಿಕಾರಿಗಳು ವಿಶೇಷ ಹಾಸಿಗೆ ಬಿಂದು…
ಮೈಸೂರು : ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಮುನಿರತ್ನ ವಿರುದ್ಧ ಎಸ್ಐಟಿ ತನಿಖೆ ಮಾಡಲು ಸಚಿವರು, ಶಾಸಕರು ಪತ್ರ ಕೊಟ್ಟಿದ್ದಾರೆ. ಮುನಿರತ್ನ ವಿರುದ್ದ ಬಹಳಷ್ಟು ಗಂಭೀರ ಪ್ರಕರಣಗಳು ಇವೆ. ಹೀಗಾಗಿ ವಿಶೇಷ ತನಿಖಾ ತಂಡದ(SIT) ಅಗತ್ಯವಿದೆ ಎಂದಿದ್ದಾರೆ. ಪತ್ರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವಂತೆ ಗೃಹಸಚಿವರಿಗೆ ಸೂಚನೆ ನೀಡಿದ್ದೇನೆ. ಈ ಬಗ್ಗೆ ಗೃಹ ಸಚಿವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣೇಶ ಮೂರ್ತಿ ವಿಚಾರವಾಗಿ ರಾಜ್ಯದಲ್ಲಿ ಪ್ರತಿನಿತ್ಯ ಏನು ಗಲಾಟೆ ನಡೆಯುತ್ತಿಲ್ಲ. ಇದುವರೆಗೆ ಎರಡು ಪ್ರಕರಣಗಳು ನಡೆದಿವೆ. ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ.ನಾಗಮಂಗಲ ಘಟನೆ ತಡೆಯುವಲ್ಲಿ ಪೊಲೀಸರು ವೈಫಲ್ಯ ಹಿನ್ನೆಲೆ ಡಿವೈಎಸ್ಪಿ, ಇನ್ಸ್ಪೆಕ್ಟರ್ ಅಮಾನತು ಮಾಡಿದ್ದೇವೆ. ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದಲ್ಲಿ ಎರಡು ಘಟನೆಗಳ ಹೊರತು ಎಲ್ಲ ಶಾಂತಿಯುತವಾಗಿ ನಡೆದಿದೆ. ಡಿನೋಟಿಫಿಕೇಷನ್ ಸಂಬಂಧ ದಾಖಲೆಗಳನ್ನ ನಿನ್ನೆ ಸಚಿವರು ಬಿಡುಗಡೆ ಮಾಡಿದ್ದಾರೆ. ನಾನು…
ಮಂಡ್ಯ : ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಆಗಿ ಸಂಕಷ್ಟ ಎದುರಾಗಿದ್ದು ಕಾನೂನಿನ ಮೂಲಕ ಅವರು ಹೋರಾಟ ನಡೆಸುತ್ತಿದ್ದಾರೆ ಇದರ ಮಧ್ಯ ವಿಪಕ್ಷ ನಾಯಕ ಆರ್ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಿ ಒಕ್ಕಲಿಗ ಸಮುದಾಯದವರನ್ನು ಸಿಎಂ ಮಾಡಿ ಎಂದು ಆಗ್ರಹಿಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್ ಡಿ ದೇವೇಗೌಡ ಕುಟುಂಬ ಮುಗಿಸಲು ಕಾಂಗ್ರೆಸ್ಸಿಗರು ಹೊರಟಿದ್ದರು. ಆಗ ಯಾಕೆ ಕಾಂಗ್ರೆಸ್ ವಿರುದ್ಧ ಒಕ್ಕಲಿಗರು ಹೋರಾಟ ಮಾಡಲಿಲ್ಲ? ಆಗ ಒಕ್ಕಲಿಗತನ ಯಾಕೆ ಪ್ರದರ್ಶನ ಮಾಡಲಿಲ್ಲ? ಎಂದು ಪ್ರಶ್ನಿಸಿದರು.ಹಾಗಾಗಿ ಸಿದ್ದರಾಮಯ್ಯರನ್ನು ಬದಲಾಯಿಸಿ ಒಕ್ಕಲಿಗರನ್ನು ಸಿಎಂ ಮಾಡಿ ಎಂದು ಆಗ್ರಹಿಸಿದರು. ಈಗಾಗಲೇ ಕೆಲವರು ಪೆನ್ನು ಪೇಪರ್ ಕೊಡಿ ಎಂದು ಕೇಳಿದ್ದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿದ್ದೇವೆ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಹಲೋ ಮಂಡ್ಯದಲ್ಲಿ ವಿರೋಧ ಪಕ್ಷದ ನಾಯಕ ಅರಶು ಹೇಳಿಕೆ ನೀಡಿದರು. ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಸೇರಿದಂತೆ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ…
ಮೈಸೂರು : ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಬಿಜೆಪಿಯವರ ಕುಮ್ಮಕ್ಕಿನಿಂದಲೇ ಗಣೇಶ ವಿಸರ್ಜನೆಯ ವೇಳೆ ಗಲಾಟೆ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರವಾದ ಆರೋಪ ಮಾಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕೋಮುವಾದಿಗಳು. ಬಿಜೆಪಿಯವರು ನೀಡುತ್ತಿರುವ ಹೇಳಿಕೆಗಳಿಂದ ಗಲಾಟೆ ನಡೆಯುತ್ತಿದೆ. ಪ್ರತಿನಿತ್ಯ ಏನು ಗಲಾಟೆ ಆಗುತ್ತಿಲ್ಲ. ಈ ವೆರೆಗೆ ಎರಡು ಪ್ರಕರಣ ನಡೆದಿದೆ. ಘಟನೆ ಸಂಬಂಧ ಸೂಕ್ತವಾದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಅಲ್ಲದೆ ಮುಂಜಾಗ್ರತ ಕ್ರಮ ಕೈಗೊಳ್ಳಲು ತಿಳಿಸಿದ್ದೇನೆ. ನಾಗಮಂಗಲ ಕೇಸ್ ನಲ್ಲಿ ಡಿವೈಎಸ್ಪಿ ಹಾಗು ಇನ್ಸ್ಪೆಕ್ಟರ್ ನನ್ನು ಸಸ್ಪೆಂಡ್ ಮಾಡಿದ್ದೇನೆ ಎಂದು ತಿಳಿಸಿದರು. ಇನ್ನೂ BDA ನಲ್ಲಿ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ಸಚಿವ ಕೃಷ್ಣ ಭೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲೆ ಬಿಡುಗಡೆ ಮಾಡಿದ್ದಾರೆ. ಆ ಫೈಲ್ ತರಿಸಿಕೊಂಡು ಪರಿಶೀಲನೆ ಮಾಡುತ್ತೇನೆ. ಕುಮಾರಸ್ವಾಮಿ ಎಲ್ಲಾ ಆರೋಪಕ್ಕೂ…
ಮೈಸೂರು : ಈ ಬಾರಿಯ ಮೈಸೂರು ದಸರಾ ಉದ್ಘಾಟಕರು ಯಾರು ಎಂಬುವುದು ತೀವ್ರ ಕುತೂಹಲ ಮೂಡಿಸಿತ್ತು. ಇದೀಗ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹಿತಿಗಳಾದ ಹಂ.ಪ ನಾಗರಾಜಯ್ಯ ಈ ಬಾರಿಯ ದಸರಾ ಉದ್ಘಾಟಕರು ಎಂದು ಅವರು ಘೋಷಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ ಈ ಬಾರಿ ಮೈಸೂರು ದಸರಾವನು ಸಾಹಿತಿಗಳಾದ ಹಂ.ಪ ನಾಗರಾಜಯ್ಯ ಉದ್ಘಾಟಿಸಲಿದ್ದಾರೆ.ಅಕ್ಟೋಬರ್ 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನ ಜೊತೆ ಮೊಬೈಲ್ ನಲ್ಲಿ ಮಹಿಳೆಯರ ಕುರಿತು ಅಶ್ಲೀಲವಾಗಿ ಪದ ಬಳಕೆ ಮಾಡಿದ್ದು, ಸಮಾಜಕ್ಕೆ ಧಕ್ಕೆ ತರುವಂತದ್ದು ಹಾಗಾಗಿ ಬಿಜೆಪಿ ಕೂಡಲೇ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು ಎಂದು ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ ಆಗ್ರಹಿಸಿದರು. ಶಾಸಕ ಮುನಿರತ್ನ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಮುನಿರತ್ನ ಪದಬಳಕೆ ಸಮಾಜಕ್ಕೆ ಅಚ್ಚರಿ ತರುವಂತಹದ್ದು, ಮುನಿರತ್ನ ವಿರುದ್ಧ ಹನಿ ಟ್ರಾಪ್ ಆರೋಪ ಕೇಳಿ ಬರುತ್ತಿದೆ.ಪ್ರಜ್ವಲ್ ಪ್ರಕರಣದಂತೆ ಮುನಿರತ್ನ ಕೆಸ್ ಅಚ್ಚರಿಯಾಗಿದೆ.ಅದಕ್ಕಾಗಿ ಆದಷ್ಟು ಬೇಗ ತನಿಖೆ ಆಗಬೇಕು ಎಂದು ಶರತ್ ಬಚ್ಚೇಗೌಡ ಆಗ್ರಹಿಸಿದರು. ತನಿಖೆ ಮಾಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಸಹ ಆಶ್ವಾಸನೆ ಕೊಟ್ಟಿದ್ದಾರೆ.ಎಸ್ ಐ ಟಿ ತನಿಖೆಗೆ ಕೊಡಬೇಕಾ ಅಥವಾ ಸಿಐಡಿ ಗೆ ಕೊಡಬೇಕಾ ಎಂದು ತಂಡ ರಸಿಸಿ ತೀರ್ಮಾನ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಕರಣದ ಕುರಿತಂತೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಮುನಿರತ್ನರನ್ನು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಈ ಒಂದು ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದ್ದು, ಏಡ್ಸ್ ಇರುವವರನ್ನು ಮುನಿರತ್ನ ಬಯಲಾಜಿಕಲ್ ವಾರ್ ರೀತಿ ಬಳಸಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಯಾಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ವಾಗ್ದಾಳಿ ನಡೆಸಿದ್ದು, ತನಿಖೆಗೆ ಒಂದು ವಿಶೇಷ ತಂಡ ರಚನೆಯಾಗಬೇಕು. ಯಾರ್ಯಾರನ್ನು ಯಾವ ಯಾವ ಸಂದರ್ಭದಲ್ಲಿ ಬಳಸಿಕೊಂಡಿದ್ದಾರೆ, ಯಾವ ಯಾವ ರೀತಿ ಬಳಸಿಕೊಂಡಿದ್ದಾರೆ ಎಂಬುವುದರ ಕುರಿತು ಸಮಗ್ರ ತನಿಖೆ ಆಗಬೇಕು. ಎಸ್ಐಟಿ ಅಥವಾ ಬೇರೆ ತನಿಖಾ ಮಾಡಬೇಕು ಎಂದು ಒತ್ತಾಯಿಸಿದ್ದೇವೆ ತನಿಖೆಯಿಂದ ಬಿಜೆಪಿ ನಾಯಕರ ಬಣ್ಣ ಬಯಲಾಗಬೇಕು ಸಿಟಿ ರವಿ ಆರ್ ಅಶೋಕ್ ಎಚ್ ಡಿ ಕುಮಾರಸ್ವಾಮಿ ಇವರ ಬೆನ್ನಿಗೆ ನಿಂತಿದ್ದಾರೆ ಎಂದು ಮಾಜಿ ಸಂಸದ…
ಬೆಂಗಳೂರು : ಒಂದು ಕಡೆ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧದ ಮುಡಾ ನಿವೇಶನ ಹಗರಣದ ಸದ್ದು ಮುಂದುವರಿದಿರುವ ಬೆನ್ನಲ್ಲೇ ಮತ್ತೊಂದು ಕಡೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಹೌದು ಕೆಪಿಸಿಸಿ ಕಚೇರಿಯಲ್ಲಿ ಸಚಿವರಾದಂತಹ ಕೃಷ್ಣಭೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಅವರು ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಬಿಡಿಎ ಭೂಮಿಯ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರ ವಿರುದ್ಧ ದಾಖಲೆ ಬಿಡುಗಡೆ ಮಾಡಿದ್ದು, ಪ್ರಕರಣ ಸಂಬಂಧ ಸುಮಾರು 9 ವರ್ಷಗಳ ಹಿಂದೆಯೇ ಎಫ್ಐಆರ್ ದಾಖಲಾಗಿದ್ದರೂ ಲೋಕಾಯುಕ್ತ ತನಿಖೆ ವಿಳಂಬವಾಗಿರುವ ಬಗ್ಗೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಠದಹಳ್ಳಿಯ ಗಂಗೇನಹಳ್ಳಿ ಬಡಾವಣೆಯಲ್ಲಿಬಿಡಿಎ ಜಮೀನು ಡಿನೋಟಿಫೈ ಕುರಿತಂತೆ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ವಿರುದ್ಧದ ಗಂಭೀರ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದರು. ಲೋಕಾಯುಕ್ತರು ಶೀಘ್ರ ತನಿಖೆಯನ್ನು ಪೂರೈಸಿ ವರದಿ ನೀಡಬೇಕು ಹಾಗೂ ತಪ್ಪಿತಸ್ಥರಿಗೆ…