Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಆಗಿ ಸಂಕಷ್ಟ ಎದುರಾಗಿದ್ದು ಕಾನೂನಿನ ಮೂಲಕ ಅವರು ಹೋರಾಟ ನಡೆಸುತ್ತಿದ್ದಾರೆ ಇದರ ಮಧ್ಯ ವಿಪಕ್ಷ ನಾಯಕ ಆರ್ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಿ ಒಕ್ಕಲಿಗ ಸಮುದಾಯದವರನ್ನು ಸಿಎಂ ಮಾಡಿ ಎಂದು ಆಗ್ರಹಿಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್ ಡಿ ದೇವೇಗೌಡ ಕುಟುಂಬ ಮುಗಿಸಲು ಕಾಂಗ್ರೆಸ್ಸಿಗರು ಹೊರಟಿದ್ದರು. ಆಗ ಯಾಕೆ ಕಾಂಗ್ರೆಸ್ ವಿರುದ್ಧ ಒಕ್ಕಲಿಗರು ಹೋರಾಟ ಮಾಡಲಿಲ್ಲ? ಆಗ ಒಕ್ಕಲಿಗತನ ಯಾಕೆ ಪ್ರದರ್ಶನ ಮಾಡಲಿಲ್ಲ? ಎಂದು ಪ್ರಶ್ನಿಸಿದರು.ಹಾಗಾಗಿ ಸಿದ್ದರಾಮಯ್ಯರನ್ನು ಬದಲಾಯಿಸಿ ಒಕ್ಕಲಿಗರನ್ನು ಸಿಎಂ ಮಾಡಿ ಎಂದು ಆಗ್ರಹಿಸಿದರು. ಈಗಾಗಲೇ ಕೆಲವರು ಪೆನ್ನು ಪೇಪರ್ ಕೊಡಿ ಎಂದು ಕೇಳಿದ್ದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿದ್ದೇವೆ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಹಲೋ ಮಂಡ್ಯದಲ್ಲಿ ವಿರೋಧ ಪಕ್ಷದ ನಾಯಕ ಅರಶು ಹೇಳಿಕೆ ನೀಡಿದರು. ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಸೇರಿದಂತೆ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ…
ಮೈಸೂರು : ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಬಿಜೆಪಿಯವರ ಕುಮ್ಮಕ್ಕಿನಿಂದಲೇ ಗಣೇಶ ವಿಸರ್ಜನೆಯ ವೇಳೆ ಗಲಾಟೆ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರವಾದ ಆರೋಪ ಮಾಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕೋಮುವಾದಿಗಳು. ಬಿಜೆಪಿಯವರು ನೀಡುತ್ತಿರುವ ಹೇಳಿಕೆಗಳಿಂದ ಗಲಾಟೆ ನಡೆಯುತ್ತಿದೆ. ಪ್ರತಿನಿತ್ಯ ಏನು ಗಲಾಟೆ ಆಗುತ್ತಿಲ್ಲ. ಈ ವೆರೆಗೆ ಎರಡು ಪ್ರಕರಣ ನಡೆದಿದೆ. ಘಟನೆ ಸಂಬಂಧ ಸೂಕ್ತವಾದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಅಲ್ಲದೆ ಮುಂಜಾಗ್ರತ ಕ್ರಮ ಕೈಗೊಳ್ಳಲು ತಿಳಿಸಿದ್ದೇನೆ. ನಾಗಮಂಗಲ ಕೇಸ್ ನಲ್ಲಿ ಡಿವೈಎಸ್ಪಿ ಹಾಗು ಇನ್ಸ್ಪೆಕ್ಟರ್ ನನ್ನು ಸಸ್ಪೆಂಡ್ ಮಾಡಿದ್ದೇನೆ ಎಂದು ತಿಳಿಸಿದರು. ಇನ್ನೂ BDA ನಲ್ಲಿ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ಸಚಿವ ಕೃಷ್ಣ ಭೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲೆ ಬಿಡುಗಡೆ ಮಾಡಿದ್ದಾರೆ. ಆ ಫೈಲ್ ತರಿಸಿಕೊಂಡು ಪರಿಶೀಲನೆ ಮಾಡುತ್ತೇನೆ. ಕುಮಾರಸ್ವಾಮಿ ಎಲ್ಲಾ ಆರೋಪಕ್ಕೂ…
ಮೈಸೂರು : ಈ ಬಾರಿಯ ಮೈಸೂರು ದಸರಾ ಉದ್ಘಾಟಕರು ಯಾರು ಎಂಬುವುದು ತೀವ್ರ ಕುತೂಹಲ ಮೂಡಿಸಿತ್ತು. ಇದೀಗ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹಿತಿಗಳಾದ ಹಂ.ಪ ನಾಗರಾಜಯ್ಯ ಈ ಬಾರಿಯ ದಸರಾ ಉದ್ಘಾಟಕರು ಎಂದು ಅವರು ಘೋಷಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ ಈ ಬಾರಿ ಮೈಸೂರು ದಸರಾವನು ಸಾಹಿತಿಗಳಾದ ಹಂ.ಪ ನಾಗರಾಜಯ್ಯ ಉದ್ಘಾಟಿಸಲಿದ್ದಾರೆ.ಅಕ್ಟೋಬರ್ 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನ ಜೊತೆ ಮೊಬೈಲ್ ನಲ್ಲಿ ಮಹಿಳೆಯರ ಕುರಿತು ಅಶ್ಲೀಲವಾಗಿ ಪದ ಬಳಕೆ ಮಾಡಿದ್ದು, ಸಮಾಜಕ್ಕೆ ಧಕ್ಕೆ ತರುವಂತದ್ದು ಹಾಗಾಗಿ ಬಿಜೆಪಿ ಕೂಡಲೇ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು ಎಂದು ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ ಆಗ್ರಹಿಸಿದರು. ಶಾಸಕ ಮುನಿರತ್ನ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಮುನಿರತ್ನ ಪದಬಳಕೆ ಸಮಾಜಕ್ಕೆ ಅಚ್ಚರಿ ತರುವಂತಹದ್ದು, ಮುನಿರತ್ನ ವಿರುದ್ಧ ಹನಿ ಟ್ರಾಪ್ ಆರೋಪ ಕೇಳಿ ಬರುತ್ತಿದೆ.ಪ್ರಜ್ವಲ್ ಪ್ರಕರಣದಂತೆ ಮುನಿರತ್ನ ಕೆಸ್ ಅಚ್ಚರಿಯಾಗಿದೆ.ಅದಕ್ಕಾಗಿ ಆದಷ್ಟು ಬೇಗ ತನಿಖೆ ಆಗಬೇಕು ಎಂದು ಶರತ್ ಬಚ್ಚೇಗೌಡ ಆಗ್ರಹಿಸಿದರು. ತನಿಖೆ ಮಾಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಸಹ ಆಶ್ವಾಸನೆ ಕೊಟ್ಟಿದ್ದಾರೆ.ಎಸ್ ಐ ಟಿ ತನಿಖೆಗೆ ಕೊಡಬೇಕಾ ಅಥವಾ ಸಿಐಡಿ ಗೆ ಕೊಡಬೇಕಾ ಎಂದು ತಂಡ ರಸಿಸಿ ತೀರ್ಮಾನ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಕರಣದ ಕುರಿತಂತೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಮುನಿರತ್ನರನ್ನು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಈ ಒಂದು ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದ್ದು, ಏಡ್ಸ್ ಇರುವವರನ್ನು ಮುನಿರತ್ನ ಬಯಲಾಜಿಕಲ್ ವಾರ್ ರೀತಿ ಬಳಸಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಯಾಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ವಾಗ್ದಾಳಿ ನಡೆಸಿದ್ದು, ತನಿಖೆಗೆ ಒಂದು ವಿಶೇಷ ತಂಡ ರಚನೆಯಾಗಬೇಕು. ಯಾರ್ಯಾರನ್ನು ಯಾವ ಯಾವ ಸಂದರ್ಭದಲ್ಲಿ ಬಳಸಿಕೊಂಡಿದ್ದಾರೆ, ಯಾವ ಯಾವ ರೀತಿ ಬಳಸಿಕೊಂಡಿದ್ದಾರೆ ಎಂಬುವುದರ ಕುರಿತು ಸಮಗ್ರ ತನಿಖೆ ಆಗಬೇಕು. ಎಸ್ಐಟಿ ಅಥವಾ ಬೇರೆ ತನಿಖಾ ಮಾಡಬೇಕು ಎಂದು ಒತ್ತಾಯಿಸಿದ್ದೇವೆ ತನಿಖೆಯಿಂದ ಬಿಜೆಪಿ ನಾಯಕರ ಬಣ್ಣ ಬಯಲಾಗಬೇಕು ಸಿಟಿ ರವಿ ಆರ್ ಅಶೋಕ್ ಎಚ್ ಡಿ ಕುಮಾರಸ್ವಾಮಿ ಇವರ ಬೆನ್ನಿಗೆ ನಿಂತಿದ್ದಾರೆ ಎಂದು ಮಾಜಿ ಸಂಸದ…
ಬೆಂಗಳೂರು : ಒಂದು ಕಡೆ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧದ ಮುಡಾ ನಿವೇಶನ ಹಗರಣದ ಸದ್ದು ಮುಂದುವರಿದಿರುವ ಬೆನ್ನಲ್ಲೇ ಮತ್ತೊಂದು ಕಡೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಹೌದು ಕೆಪಿಸಿಸಿ ಕಚೇರಿಯಲ್ಲಿ ಸಚಿವರಾದಂತಹ ಕೃಷ್ಣಭೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಅವರು ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಬಿಡಿಎ ಭೂಮಿಯ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರ ವಿರುದ್ಧ ದಾಖಲೆ ಬಿಡುಗಡೆ ಮಾಡಿದ್ದು, ಪ್ರಕರಣ ಸಂಬಂಧ ಸುಮಾರು 9 ವರ್ಷಗಳ ಹಿಂದೆಯೇ ಎಫ್ಐಆರ್ ದಾಖಲಾಗಿದ್ದರೂ ಲೋಕಾಯುಕ್ತ ತನಿಖೆ ವಿಳಂಬವಾಗಿರುವ ಬಗ್ಗೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಠದಹಳ್ಳಿಯ ಗಂಗೇನಹಳ್ಳಿ ಬಡಾವಣೆಯಲ್ಲಿಬಿಡಿಎ ಜಮೀನು ಡಿನೋಟಿಫೈ ಕುರಿತಂತೆ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ವಿರುದ್ಧದ ಗಂಭೀರ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದರು. ಲೋಕಾಯುಕ್ತರು ಶೀಘ್ರ ತನಿಖೆಯನ್ನು ಪೂರೈಸಿ ವರದಿ ನೀಡಬೇಕು ಹಾಗೂ ತಪ್ಪಿತಸ್ಥರಿಗೆ…
ಚಿತ್ರದುರ್ಗ : ತಮ್ಮ ಜಮೀನಲ್ಲಿ ಈರುಳ್ಳಿ ಬೆಳೆ ನೋಡಿಕೊಂಡು ಬರಲು ತೆರಳಿದ್ದ ದಂಪತಿಗಳ ಇಬ್ಬರ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಬೊಮ್ಮಕ್ಕನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಈ ಕೊಲೆಯ ಹಿಂದೆ ಅಳಿಯನ ಕೈವಾಡ ಇದೆ ಎಂದು ಇದೀಗ ಶಂಕೆ ವ್ಯಕ್ತವಾಗುತ್ತಿದೆ. ಹೌದು ಜಮೀನಿನಲ್ಲಿ ಸಾವಿಗೀಡಾದ ಮೃತರನ್ನು ಹನುಮಂತಪ್ಪ (46) ಮತ್ತು ಅವರ ಪತ್ನಿ ತಿಪ್ಪಮ್ಮ (42) ಎಂದು ಗುರುತಿಸಲಾಗಿದೆ. ಪೋಷಕರ ಬರ್ಬರ ಹತ್ಯೆ ಬೆನ್ನಲ್ಲೇ ತುರುವನೂರು ಠಾಣೆಯಲ್ಲಿ ಪುತ್ರಿ ಹರ್ಷಿತಾ ದೂರು ದಾಖಲಿಸಿದ್ದು, ಪತಿ ಮಂಜುನಾಥ್ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಎಸಗಿದ್ದಾರೆ. ವರ್ಷದ ಹಿಂದೆ ಮಂಜುನಾಥ್ ಜತೆ ಹರ್ಷಿತಾ ಮದುವೆ ಆಗಿತ್ತು. ವಿವಾಹ ಆದಾಗಿನಿಂದಲೂ ತನ್ನ ಮೇಲೆ ದೌರ್ಜನ್ಯ ನಡೆಯುತ್ತಿತ್ತು. ಮಂಜುನಾಥ್ ಮತ್ತು ಕುಟುಂಬಸ್ಥರು ಆಗಾಗ್ಗೆ ನಮ್ಮ ವಿರುದ್ಧ ಗಲಾಟೆ ಮಾಡುತ್ತಿದ್ದರು ಎಂದು ಆಕೆ ದೂರಿದ್ದಾರೆ. ಪತಿ ನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಹಿನ್ನೆಲೆ ಒಂದು ತಿಂಗಳ ಹಿಂದಷ್ಟೇ ತಾಯಿ ತಿಪ್ಪಮ್ಮ…
ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 16 ಚಕ್ರದ ಲಾರಿಯೊಂದು ಮೆಟ್ರೋ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ ಔಟರ್ ರಿಂಗ್ ರೋಡ್ ನಲ್ಲಿ ಸಂಭವಿಸಿದೆ. 16 ಚಕ್ರದ ಲಾರಿಯ ಅಪಘಾತವಾಗಿದೆ.ನಿಯಂತ್ರಣ ತಪ್ಪಿ ಮೆಟ್ರೋ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ನಾಗವಾರ ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ಈ ಒಂದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸದ್ಯ ಜೆಸಿಬಿ ಮೂಲಕ ಪೊಲೀಸರು ಲಾರಿ ಅನ್ನು ತೆರವು ಮಾಡಿಸಿದ್ದಾರೆ. ನಾಗವರ ಹೆಬ್ಬಾಳ ಮಾರ್ಗದ ಕೆಲವು ಕಾಲ ಕಿಲೋಮಿಟರ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬಳ್ಳಾರಿ : ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ನನ್ನು ತಾಯಿ ಮೀನಾ ತೂಗುದೀಪ, ಅಕ್ಕ ದಿವ್ಯಾ ಹಾಗೂ ಭಾವ ಸೇರಿ ಕುಟುಂಬ ಸದಸ್ಯರು ಗುರುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ವೇಳೆ ಮಗನ ಸ್ಥಿತಿ ಕಂಡು ತಾಯಿ ಕಣ್ಣಿರು ಹಾಕಿದ್ದು, ದರ್ಶನ್ ಸಮಾಧಾನಮಾಡಿದ್ದಾರೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ನಿನ್ನೆ ದರ್ಶನ ಅವರನ್ನು ಭೇಟಿ ಮಾಡಲು ತಾಯಿ ಮೀನಾ ತೂಗುದೀಪ ಅಕ್ಕ, ಭಾವ, ಹಾಗೂ ಸೋದರ ಅಳಿಯ ಜೈಲಿಗೆ ಬಂದಿದ್ದರು. ಈ ವೇಳೆ ತಾಯಿ ಮೀನಾ ತೂಗುದೀಪ್ ಅವರು ದರ್ಶನ್ಗೆ ಆತ್ಮಸ್ಥೈರ್ಯ ತುಂಬಿದ್ದಾರೆ ಎನ್ನಲಾಗಿದೆ. ಪುತ್ರ ದರ್ಶನ್ ಗೆ ಆತ್ಮಸ್ಥೈರ್ಯ ತುಂಬಿರುವ ಮೀನಾ ತೂಗುದೀಪ್ ಕೆಟ್ಟಗಳಿಗೆ ನಡೆದಿರಬಹುದು. ನಿನ್ನ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ. ರಾಜರಾಜೇಶ್ವರಿ ದೇವಿಯ ಕೃಪೆಯಿಂದ ಬೇಲ್ ಸಿಗುತ್ತೆ. ತಾಯಿಯ ಮಾತಿನಿಂದ ಆರೋಪಿ ದರ್ಶನ್ ಧೈರ್ಯ ತೆಗೆದುಕೊಂಡಿದ್ದಾರೆ. ತಾಯಿ ಭೇಟಿಯ ಬಳಿಕ ಆರೋಪಿ ದರ್ಶನ ಲವಲವಿಕೆಯಿಂದ…
ಮಂಗಳೂರು : ಗುತ್ತಿಗೆದಾರರೊಬ್ಬರು ಕೆರೆ ಅಭಿವೃದ್ಧಿಗಾಗಿ ಕಾಮಗಾರಿ ನೆರವೇರಿಸಿದ್ದರು. ಈ ಒಂದು ಕಾಮಗಾರಿಯ ಬಿಲ್ ಪಾವತಿಗಾಗಿ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುತ್ತಿರುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನು ರೆಡ್ ಹ್ಯಾಂಡಾಗಿ ಹಿಡಿದಿರುವ ಘಟನೆ ಮಂಗಳೂರಿನಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ನಡೆದಿದೆ. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರು, ಕೆರೆ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಕೆಲಸ ನಿರ್ವಹಿಸಿದ್ದರು. ಕಾಮಗಾರಿಯ 9,77,154 ರೂ ಮೊತ್ತದ ಬಿಲ್ ಮಂಜೂರಾತಿಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರ ಬಳಿ ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರು ತೆರಳಿದ್ದರು. ಈ ವೇಳೆ ಬಿಲ್ ಪಾಸ್ ಮಾಡಲು ತನಗೆ 37 ಸಾವಿರ ರೂ. ಮತ್ತು ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಮುಖ್ಯಾಧಿಕಾರಿಗೆ 15 ಸಾವಿರ ರೂ. ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಅಲ್ಲದೆ ಜೂನಿಯರ್ ಇಂಜಿನಿಯರ್ ನಾಗರಾಜು ಮುಂಚಿತವಾಗಿ 7000 ರೂ. ಲಂಚ ಪಡೆದಿದ್ದರು.ಉಳಿದ ಲಂಚದ ಮೊತ್ತವಾಗಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ…