Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಮನರೆಗ ಯೋಜನೆ ಹೆಸರು ಬದಲಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಇದೀಗ ಕಿಡಿ ಕಾರಿದ್ದಾರೆ. ಬಿಜೆಪಿ ಅವರಿಗೆ ಕೇಡುಗಾಲ ಬಂದಿದೆ. ಬಿಜೆಪಿಯವರಿಗೆ ಗಾಂಧೀಜಿ ನೆಹರು ರಾಜೀವ್ ಗಾಂಧಿ ಕಂಡರೆ ಆಗಲ್ಲ ನನ್ನನ್ನು ಸಹ ಕಂಡರೂ ಆಗುವುದಿಲ್ಲ ಆದರೆ ಅವರು ನನಗೆ ಏನು ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅಧಿಕಾರ ಬರುತ್ತೆ ಹೋಗುತ್ತೆ. ಆದರೆ ಗಾಂಧೀಜಿ ಹೆಸರು ಶಾಶ್ವತ ನಮ್ಮ ಕಾಂಗ್ರೆಸ್ ಫೌಂಡೇಶನ್ ಗಟ್ಟಿಯಾಗಿದೆ. ಬಿಜೆಪಿಯವರು ವೋಟ್ ಚೋರಿ ಕೆಲಸವನ್ನು ಮಾಡುತ್ತಾರೆ. ಬಿಜೆಪಿಯವರು ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತಾರೆ. ನಿತೀಶ್ ಚಂದ್ರಬಾಬು ನಾಯ್ಡು ಇಲ್ಲದಿದ್ದರೆ ಹೋಗಿ ಬಿಡುತ್ತಿದ್ದರು ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರ್ಯಕರ್ತರು. ಗಾಂಧೀಜಿಯನ್ನು ಕೊಂದ ಮೇಲು ಇವರ ದ್ವೇಷ ಕಡಿಮೆ ಆಗಿಲ್ಲ. ಮಹಾತ್ಮ ಗಾಂಧೀಜಿ ಅವರನ್ನು ಕಂಡರೆ ಬಿಜೆಪಿ ಅವರಿಗೆ ಆಗಲ್ಲ. ಹೀಗಾಗಿ ಮನರೇಗಾ ಹೆಸರನ್ನು ಬದಲಾಯಿಸಿದರು. ಬಿಜೆಪಿಯವರಿಗೆ ನೆಹರು…
ಬೆಂಗಳೂರು : ಮನರೆಗ ಯೋಜನೆ ಹೆಸರು ಬದಲಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಇದೀಗ ಕಿಡಿ ಕಾರಿದ್ದಾರೆ. ಬಿಜೆಪಿ ಅವರಿಗೆ ಕೇಡುಗಾಲ ಬಂದಿದೆ. ಬಿಜೆಪಿಯವರಿಗೆ ಗಾಂಧೀಜಿ ನೆಹರು ರಾಜೀವ್ ಗಾಂಧಿ ಕಂಡರೆ ಆಗಲ್ಲ ನನ್ನನ್ನು ಸಹ ಕಂಡರೂ ಆಗುವುದಿಲ್ಲ ಆದರೆ ಅವರು ನನಗೆ ಏನು ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅಧಿಕಾರ ಬರುತ್ತೆ ಹೋಗುತ್ತೆ. ಆದರೆ ಗಾಂಧೀಜಿ ಹೆಸರು ಶಾಶ್ವತ ನಮ್ಮ ಕಾಂಗ್ರೆಸ್ ಫೌಂಡೇಶನ್ ಗಟ್ಟಿಯಾಗಿದೆ. ಬಿಜೆಪಿಯವರು ವೋಟ್ ಚೋರಿ ಕೆಲಸವನ್ನು ಮಾಡುತ್ತಾರೆ. ಬಿಜೆಪಿಯವರು ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತಾರೆ. ನಿತೀಶ್ ಚಂದ್ರಬಾಬು ನಾಯ್ಡು ಇಲ್ಲದಿದ್ದರೆ ಹೋಗಿ ಬಿಡುತ್ತಿದ್ದರು ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರ್ಯಕರ್ತರು. ಗಾಂಧೀಜಿಯನ್ನು ಕೊಂದ ಮೇಲು ಇವರ ದ್ವೇಷ ಕಡಿಮೆ ಆಗಿಲ್ಲ. ಮಹಾತ್ಮ ಗಾಂಧೀಜಿ ಅವರನ್ನು ಕಂಡರೆ ಬಿಜೆಪಿ ಅವರಿಗೆ ಆಗಲ್ಲ. ಹೀಗಾಗಿ ಮನರೇಗಾ ಹೆಸರನ್ನು ಬದಲಾಯಿಸಿದರು. ಬಿಜೆಪಿಯವರಿಗೆ ನೆಹರು…
ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪೊಲೀಸರಿಂದ ಬಿಗಿ ಭದ್ರತೆ ಕೈಗೊಳ್ಳಲಾಗುತ್ತೆ. ಕಾನೂನು ಸುವ್ಯವಸ್ಥೆ ಮತ್ತು ಸಾರಿಗೆ ವ್ಯವಸ್ಥೆಯ ಬಗ್ಗೆ ನಿಗಾ ವಹಿಸುವುದಕ್ಕೆ ಈಗಾಗಲೇ ಗೃಹ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಈ ಪರಮೇಶ್ವರ ರವರು ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಜನ ಸೇರಬಹುದು ಎನ್ನುವ ನಿರೀಕ್ಷೆ ಇದೆ ೧೦ ಲಕ್ಷಕ್ಕೂ ಹೆಚ್ಚು ಜನರು ಸೇರಬಹುದು ಎನ್ನುವ ಊಹೆ ಇದೆ ಜನ ವಾಪಸ್ ಹೋಗಲು ವ್ಯವಸ್ಥೆ ಮಾಡಿಕೊಡಬೇಕಿದೆ. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಗಮನಹರಿಸಬೇಕಿದೆ. ಜನಸಂದಣಿ ಜಾಸ್ತಿಯಾಗಿದಂತೆ ನೋಡಿಕೊಳ್ಳಬೇಕು. ಅಕಸ್ಮಾತ್ ಒಂದು ವೇಳೆ ಆದರೂ ಕೂಡ ಅದಕ್ಕೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು ಮಾಲ್ ಮೆಟ್ರೋ ಹೋಟೆಲ್ಗಳ ಬಳಿ ಹೆಚ್ಚು ಜನ ಸೇರುವ ಸಾಧ್ಯತೆ ಇದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆದಂತೆ ಸಿಸಿಟಿವಿ ಕ್ಯಾಮೆರಾ ಹಾಗೂ ಡ್ರೋನ್ ಕ್ಯಾಮೆರಾ ಗಳನ್ನು ಸಹ ಬಳಸಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್…
ಬೆಂಗಳೂರು : ಕೇವಲ 58 ದಿನಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹನಿಮೂನ್ ವೇಳೆ ಜಗಳ ಶುರುವಾಗಿದ್ದು, ಪೋಷಕರ ಮನೆಗೆ ಮರಳಿದ್ದ ಗಾನವಿ, ಬ್ರೈನ್ ಡೆಡ್ ಆಗಿ ಕೊನೆಯುಸಿರೆಳೆದಿದ್ದಾರೆ. ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪತಿ ಸೂರಜ್ ಹಾಗೂ ಕುಟುಂಬಸ್ಥರ ವಿರುದ್ಧ ರಾಮಮೂರ್ತಿನಗರ ಪೊಲೀಸರು ಎಫ್ಐಆರ್ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಗಾನವಿ ಪೋಷಕರು ವಿರುದ್ಧ ದೂರು ದಾಖಲಾಗಿದೆ. ಗಾನವಿ ಆತ್ಮಹತ್ಯೆ ಬೆನ್ನಲ್ಲೆ ಪತಿ ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದ. ಗಾನವಿ ಪೋಷಕರು ಕೇಸ್ ದಾಖಲಿಸುತ್ತೀದ್ದಂತೆ ಸೂರಜ್ ಹಾಗು ತಾಯಿ ಜಯಂತಿ ಮಹಾರಾಷ್ಟ್ರಕ್ಕೆ ತೆರಳಿದ್ದಾರೆ. ಕಿರುಕುಳ ಆರೋಪದಿಂದ ಮನನೊಂದು ಲಾರ್ಡ್ಸ್ ನಲ್ಲಿ ಆತ್ಮಹತ್ಯೆಗೆ ಸೂರಜ್ ಶರಣಾಗಿದ್ದಾನೆ ಸದ್ಯ ಶಿವರಾಜ್ ಭಾವ ಗಾನವಿ ಪೋಷಕರ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ಸೂರಜ್ ಭಾವ ರಾಜ್ ಕುಮಾರ್ ದೂರು ನೀಡಿದ್ದಾರೆ ಸೂರಜ್ ಸಾವಿಗೆ ರುಕ್ಮಿಣಿ…
ಬೆಂಗಳೂರು : ತಿಪ್ಪರಲಾಗ ಹಾಕಿದ್ರು ಗ್ಯಾರಂಟಿಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಯಾವುದೇ ಸರ್ಕಾರ ಬಂದರು ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲು ಆಗಲ್ಲ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಹಾಗು ಆದಾಯ ಪಾತಾಳಕ್ಕೆ ಹೋಗ್ತಿತ್ತು. ಹೀಗಾಗಿ ಮಾದರಿ ಕಾರ್ಯಕ್ರಮ ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಹಳ್ಳಿ ಹಳ್ಳಿಗಳಲ್ಲಿ ಗ್ಯಾರಂಟಿ ಸಂಭ್ರಮ ಆಚರಿಸಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಬಳ್ಳಾರಿ : ಗಣಿ ಹಗರಣದಲ್ಲಿ ಈ ಹಿಂದೆ ಶಾಸಕ ಜನಾರ್ದನ ರೆಡ್ಡಿ ಅವರು ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದರು. ಇದೀಗ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಮತ್ತೆ ಗಣಿ ಲೂಟಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಸುದಾಂಶ ದುಲಿಯಾ ಸಮಿತಿಯಿಂದ ವರದಿ ಸಲ್ಲಿಕೆ ಮಾಡಲಾಗಿದ್ದು, ಕರ್ನಾಟಕ ಗಡಿ ಒತ್ತುವರಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ದುಲಿಯ ಸಮಿತಿ ವರದಿ ಸಲ್ಲಿಕೆಯಾಗಿದೆ. ಒಂದು ತಿಂಗಳ ಹಿಂದೆ ಬಳ್ಳಾರಿಯಲಿ ಕಮಿಟಿ ಸರ್ವೇ ಮಾಡಲು ಬಂದಿತ್ತು. ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿಯಲ್ಲಿ ಈ ಒಂದು ಸರ್ವೆ ನಡೆದಿತ್ತು ಜನಾರ್ದನ ರೆಡ್ಡಿ ಒಡೆತನದ ಓ ಎಂ ಸಿ 2 ಹೆಸರಿನಲ್ಲಿ 39.50 ಹೆಕ್ಟರ್, ಅಂತರಗಂಗಮ್ಮ ಹೆಸರಿನ 68.50 ಪ್ರದೇಶದಲ್ಲಿ ಹೊಂದಾಣಿಕೆ ಆಗಿಲ್ಲ. ಗಣಿ ಗುತ್ತಿಗೆ ಮತ್ತು ಗಡಿಗಳ ಹೊಂದಾಣಿಕೆ ಆಗಿಲ್ಲವೆಂದು ವರದಿ ಸಲ್ಲಿಕೆ ಮಾಡಲಾಗಿದೆ. ಈ ಕಂಪನಿಗಳು ಕರ್ನಾಟಕದಲ್ಲಿ ಅತಿಕ್ರಮಣ ಮಾಡಿವೆ ಎಂದು ವರದಿ ಸಲ್ಲಿಸಲಾಗಿದೆ. ಕರ್ನಾಟಕ ಹಾಗೂ ಆಂಧ್ರಪ್ರದೇಶ ನಡುವಿನ ಗಡಿ ನಾಶಪಡಿಸಿದ ಆರೋಪ ಕೇಳಿ ಬಂದಿದೆ.…
ಮೈಸೂರು : ಡಿಸಿಎಂ ಡಿಕೆ ಶಿವಕುಮಾರ್ CM ಆಗೋ ವಿಚಾರವಾಗಿ, ಅಂತೂ ಇಂತೂ ಕುಂತಿ ಮಕ್ಕಳಿಗೆ ಅಧಿಕಾರ ಇಲ್ಲ ಅಂತಾಗಿದೆ ಎಂದು ಮೈಸೂರಿನಲ್ಲಿ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ವ್ಯಂಗ್ಯವಾಡಿದರು. ಮೈಸೂರಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ. ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ಈ ಹಿಂದೆ ಪತ್ರ ಬರೆದಿದ್ದೆ, ಈಗ ಬರೆದ್ರೆ ಓಡುವವರು ಯಾರಿದ್ದಾರೆ? ಪತ್ರ ಓದುವುದಕ್ಕೆ ರಾಹುಲ್ ಗಾಂಧಿಗೆ ಪುರುಸೊತ್ತು ಎಲ್ಲಿದೆ? ಸಿಎಂ ಸಿದ್ದರಾಮಯ್ಯ ಪತ್ರ ಓದುವುದಿಲ್ಲ ಎಂದು ತಿಳಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಿದರೆ ಅವರು ಹೈಕಮಾಂಡ್ ಅವರನ್ನು ಕೇಳಿದ್ದಾರೆ. ನಾನೇ ಹೈಕಮಾಂಡ್ ಅಂತ ಹೇಳಿಕೊಳ್ಳುವ ಧೈರ್ಯ ಸಹ ಇಲ್ಲ. ಇದೆ ಖರ್ಗೆ ಅವರನ್ನು ಸಿಎಂ ಮಾಡಬೇಕು ಅನ್ನೋ ವಿಚಾರ ಬಂದಾಗ ಮಲ್ಲಿಕಾರ್ಜುನ ಖರ್ಗೆಗೆ ಡಿಕೆ ಶಿವಕುಮಾರ್ ಬೆಂಬಲ ಕೊಟ್ಟರು. ಸಿದ್ದರಾಮಯ್ಯರಾಗಲಿ ಅಥವಾ ಖರ್ಗೆಗಾಗಲಿ ಆ ಉದಾರತೆ ಇಲ್ಲ. ಇದೆಲ್ಲ ನೋಡಿದ್ರೆ ಕುಂತಿ ಮಕ್ಕಳಿಗೆ ರಾಜ್ಯ ಇಲ್ಲ ಅನ್ನುವ ಹಾಗೆ ಆಗಿದೆ ಎಂದು ಹೆಚ್. ವಿಶ್ವನಾಥ್…
ಮೈಸೂರು : ಡಿಸಿಎಂ ಡಿಕೆ ಶಿವಕುಮಾರ್ CM ಆಗೋ ವಿಚಾರವಾಗಿ, ಅಂತೂ ಇಂತೂ ಕುಂತಿ ಮಕ್ಕಳಿಗೆ ಅಧಿಕಾರ ಇಲ್ಲ ಅಂತಾಗಿದೆ ಎಂದು ಮೈಸೂರಿನಲ್ಲಿ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ವ್ಯಂಗ್ಯವಾಡಿದರು. ಮೈಸೂರಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ. ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ಈ ಹಿಂದೆ ಪತ್ರ ಬರೆದಿದ್ದೆ, ಈಗ ಬರೆದ್ರೆ ಓಡುವವರು ಯಾರಿದ್ದಾರೆ? ಪತ್ರ ಓದುವುದಕ್ಕೆ ರಾಹುಲ್ ಗಾಂಧಿಗೆ ಪುರುಸೊತ್ತು ಎಲ್ಲಿದೆ? ಸಿಎಂ ಸಿದ್ದರಾಮಯ್ಯ ಪತ್ರ ಓದುವುದಿಲ್ಲ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಿದರೆ ಅವರು ಹೈಕಮಾಂಡ್ ಅವರನ್ನು ಕೇಳಿದ್ದಾರೆ ನಾನೇ ಹೈಕಮಾಂಡ್ ಅಂತ ಹೇಳಿಕೊಳ್ಳುವ ಧೈರ್ಯ ಸಹ ಇಲ್ಲ ಎಂದು ತಿಳಿಸಿದರು.
ಚಿತ್ರದುರ್ಗ : ಪೋಕ್ಸೋ ಕೇಸ್ ನಲ್ಲಿ ನಿರ್ದೋಷಿ ಎಂದು ಕೋರ್ಟ್ ತೀರ್ಪು ಬಳಿಕ ಮುರುಘಾ ಶ್ರೀಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇದರ ಬೆನ್ನಲ್ಲೆ, ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಮುರುಘಾಶ್ರೀ ಮಠದ ಆಸ್ತಿಯನ್ನು ಮಾರಾಟ ಮಾಡಿದ್ದಾರೆಂಬ ಗಂಭೀರ ಆರೋಪ ಚಿತ್ರದುರ್ಗದಲ್ಲಿ ಕೇಳಿಬಂದಿದೆ. ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಇತ್ತೀಚೆಗಷ್ಟೇ ಮೊದಲ ಪೋಕ್ಸೊ ಕೇಸಲ್ಲಿ ಖುಲಾಸೆಯಾಗಿದ್ದು, ಎರಡನೇ ಕೇಸ್ ವಿಚಾರಣೆಯ ಹಂತದಲ್ಲಿದೆ. ಇದರ ಬೆನ್ನಲ್ಲೇ ಮುರುಘಾಶ್ರೀ ಪೋಕ್ಸೊ ಕೇಸಲ್ಲಿ ಆರೋಪಿಯಾಗಿದ್ದಾಗ ಮಠದ ಆಡಳಿತದಲ್ಲಿ ಯಾವ್ದೇ ಹಸ್ತಕ್ಷೇಪ ಮಾಡದಂತೆ ಸುಪ್ರಿಂ ಕೋರ್ಟ್ ಆದೇಶಿಸಿದ್ದರೂ ಸಹ ಕೋರ್ಟ್ ಆದೇಶವನ್ನು ಮೀರಿ 2025ರ ಅ.6ರಂದು ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿರುವ ಸುಮಾರು 2 ಕೋಟಿ ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಂಜುನಾಥ್ ಎಂಬುವರಿಗೆ ಸ್ಪೆಷಲ್ ಜಿಪಿಎ ನೀಡಿ ಮಾರಾಟ ಮಾಡಿದ್ದಾರೆಂಬ ಗಂಭೀರ ಆರೋಪವನ್ನು ಮಠದ ಭಕ್ತರಾದ ಪ್ರಕಾಶ್ ಮಾಡಿದ್ದಾರೆ. ಮುರುಘಾಶ್ರೀ ಪೋಕ್ಸೊ ಆರೋಪದಲ್ಲಿ ಸಿಲುಕಿದ ಹಿನ್ನಲೆಯಲ್ಲಿ ಸರ್ಕಾರದಿಂದ ಮಠಕ್ಕೆ ಆಡಳಿತ ಸಮಿತಿ ನೇಮಿಸಲಾಗಿದೆ. ಆದರೆ ಆಡಳಿತ ಸಮಿತಿ…
ಬೆಂಗಳೂರು : ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಡಿ.31ರಂದು ಬೆಳಿಗ್ಗೆ 6ರಿಂದ ತಡರಾತ್ರಿ 1ರವರೆಗೆ ಮದ್ಯದ ವಹಿವಾಟಿಗೆ ಅನುಮತಿಸಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ಹೌದು ಬೆಂಗಳೂರಿಗೆ ಅನ್ವಯವಾಗುವಂತೆ ವಿಶೇಷ ಸಾಂದರ್ಭಿಕ ಅಬಕಾರಿ ಸನ್ನದುದಾರರಿಗೆ (CL-5) ಡಿಸೆಂಬರ್ 31ರಂದು ಬೆಳಿಗ್ಗೆ 6 ಗಂಟೆಯಿಂದ ತಡರಾತ್ರಿ 1ರವರೆಗೆ ಮದ್ಯದ ವಹಿವಾಟು ಮತ್ತು ಮದ್ಯ ಸೇವನೆಗೆ ಅನುಮತಿ ನೀಡಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. CL-5 ತಾತ್ಕಾಲಿಕವಾಗಿ (24 ಗಂಟೆಗಳಿಗೆ) ಮದ್ಯದ ಸನ್ನದು ಆಗಿದ್ದು, ವಿಶೇಷ ಸಂದರ್ಭಗಳಲ್ಲಿ ಮದ್ಯ ಬಳಕೆಗೆ ಅನುಮತಿ ನೀಡುತ್ತದೆ. ಈ ಸನ್ನದು ಮುಖ್ಯವಾಗಿ ಖಾಸಗಿ ಪಾರ್ಟಿಗಳು, ನಿರ್ದಿಷ್ಟ ದಿನಗಳಂದು ನಡೆಯುವ ಸಮಾರಂಭಗಳಿಗೆ ಮದ್ಯ ಮಾರಾಟ ಅಥವಾ ಪೂರೈಕೆ ಮಾಡಲು ಅನುಮತಿ ನೀಡುತ್ತದೆ. ಈ ಲೈಸೆನ್ಸ್ ಹೊಂದಿರುವವರು ಸಾಮಾನ್ಯವಾಗಿ ಹೊಸ ವರ್ಷದಂತಹ ವಿಶೇಷ ಸಂದರ್ಭಗಳಲ್ಲಿ ಒಂದು ದಿನ ಮಾತ್ರ ಮದ್ಯ ಮಾರಾಟ ಮಾಡಲು ಅವಕಾಶವಿರುತ್ತದೆ. CL-5 ಸನ್ನದುದಾರರಿಗೆ ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 10.30ರಿಂದ ರಾತ್ರಿ 12ರವರೆಗೆ ಮಾತ್ರ ಮದ್ಯದ ವಹಿವಾಟು ನಡೆಸಲು…














