Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಕಳೆದ ಕೆಲವು ದಿನಗಳಿಂದ ಸ್ಯಾಂಡಲ್ವುಡ್ ನಲ್ಲಿ ಸ್ಟಾರ್ ವಾರ್ ನಡೆಯುತ್ತಿದ್ದು ಡೆವಿಲ್ ಸಿನಿಮಾ ಬಿಡುಗಡೆ ಬಳಿಕ ಕೆಲವು ಕಿಡಿಗೇಡಿಗಳು ನಟ ಕಿಚ್ಚ ಸುದೀಪ್ ಹಾಗೂ ಸಾನ್ವಿ ಅವರ ಫೋಟೋ ಎಡಿಟ್ ಮಾಡಿ ಟ್ರೊಲ್ ಮಾಡಿದರು ಇದೀಗ ಈ ವಿಚಾರವಾಗಿ ಇನ್ಸ್ಟಾಗ್ರಾಮ್ ಸ್ಟೋರಿ ಹಾಕಿಕೊಂಡಿದ್ದು, ನನ್ನ ದೇಹ ಚರ್ಚೆಯ ವಿಷಯವಲ್ಲ ಎಂದು ತನನ್ನು ನೆಗೆಟಿವ್ ಟ್ರೋಲ್ ಮಾಡುವವರಿಗೆ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಕುಟುಕಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಸಾನ್ವಿ ಸುದೀಪ್ ಸ್ಟೋರಿ ಹಾಕಿದ್ದಾರೆ. ನನ್ನ ದೇಹವು ಚರ್ಚೆಯ ವಿಷಯವಲ್ಲ. ನಿಮ್ಮ ಅಭಿಪ್ರಾಯ ಬೇಕಾದರೇ ನಾನು ಕೇಳುತ್ತೇನೆ ಎಂದು ತಿರುಗೇಟು ಕೊಟ್ಟಿದ್ದಾರೆ. ಶನಿವಾರ ನಡೆದ ಮಾರ್ಕ್ ಕೃತಜ್ಞತಾ ಸುದ್ದಿಗೋಷ್ಠಿಯಲ್ಲಿ ಸುದೀಪ್ಗೆ ಮಗಳ ಬಗ್ಗೆ ನೆಗೆಟಿವ್ ಟ್ರೋಲ್ ಕುರಿತು ಪ್ರಶ್ನೆ ಕೇಳಲಾಗಿತ್ತು. ಈ ವೇಳೆ ತನ್ನ ಮಗಳ ವಿರುದ್ಧ ಮಾತಾಡುವವರಿಗೆ ಕಿಚ್ಚ ಸುದೀಪ್ ಖಡಕ್ ಕೌಂಟರ್ ಕೊಟ್ಟಿದ್ದರು. ನಮಗೆ ಪ್ರೋತ್ಸಾಹ ಕೊಡುವವರ ಬಗ್ಗೆ ಮಾತಾಡೋಣ, ನನ್ನ ಬಗ್ಗೆ, ನನ್ನ ಮಗಳ ಬಗ್ಗೆ…
BREAKING : ಇನ್ಮುಂದೆ ‘ನಮ್ಮ ಮೆಟ್ರೋ’ದಲ್ಲಿ ತಿಂಡಿ ತಿನ್ನೋದು, ಮೊಬೈಲ್ ಸೌಂಡ್ ಜಾಸ್ತಿ ಇಟ್ಟರೆ ಬೀಳುತ್ತೆ ಭಾರಿ ದಂಡ!
ಬೆಂಗಳೂರು : ನಗರದ ಬಹುತೇಕ ಪ್ರಯಾಣಿಕರ ಮೊದಲ ಆಯ್ಕೆ ಕೂಡ ಮೆಟ್ರೋ. ಆದರೆ ಮೆಟ್ರೋ ಬಳಕೆದಾರರ ಸಂಖ್ಯೆ ಹೆಚ್ಚಾದಂತೆ ಕೆಲವರು, ರೂಲ್ಸ್ಗಳ ಕಡೆ ಹೆಚ್ಚು ಗಮನ ನೀಡದೆ, ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಅದರಲ್ಲೂ ಮೊಬೈಲ್ ಬಳಕೆಯಿಂದಲೇ ಬಹುತೇಕ ರೂಲ್ಸ್ ಬ್ರೇಕ್ಗೆ ಕಾರಣವಾಗುತ್ತಿದೆ. ಇದರಿಂದ, ಸಹ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬಿಎಂಆರ್ಸಿಎಲ್ಗೆ ಸಾವಿರಾರು ಸಂಖ್ಯೆಯಲ್ಲಿ ದೂರು ದಾಖಲಾಗಿದೆ. ಪರಿಣಾಮ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಮೆಟ್ರೋ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಮೆಟ್ರೋ ಟ್ರಾವೆಲಿಂಗ್ ವೇಳೆ ಸೌಂಡ್ ಜಾಸ್ತಿ ಇಟ್ಟುಕೊಂಡು ಮೊಬೈಲ್ ಬಳಕೆ ಮಾಡಬಾರದು ಅನ್ನೋ ನಿಯಮ ಇದ್ದರೂ ಉಲ್ಲಂಘನೆ ಆಗುತ್ತಿದೆ. ಇದೇ ಕಾರಣಕ್ಕೆ ದಂಡಾಸ್ತç ಪ್ರಯೋಗಕ್ಕೆ ಬಿಎಂಆರ್ಸಿಎಲ್ ಮುಂದಾಗಿದೆ. ಮೊಬೈಲ್ ಅಲ್ಲಿ ವಾಲ್ಯೂಮ್ ಜಾಸ್ತಿ ಕೊಡುವುದು, ಬ್ಲೂಟೂತ್ ಬಳಕೆ ಮಾಡಿ ಗಟ್ಟಿಯಾಗಿ ಮಾತನಾಡಿ ಇತರೆ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುವುದು, ಅಲ್ಲಲ್ಲಿ ಊಟ, ತಿಂಡಿ ಮಾಡುವುದು, ತಂಬಾಕು ಸೇವನೆ ಮಾಡುವ ದೂರು ಕಂಡು ಬರುತ್ತಲೇ ಇದೆ. ಡಿಸೆಂಬರ್…
ಶಿವಮೊಗ್ಗ : ಶಿವಮೊಗ್ಗದಲ್ಲಿ ವಿಚ್ಛೇದನ ಬಳಿಕ ಪತಿಯ ಗೆಳೆಯನನ್ನು ಮದುವೆಯಾದ ಮಹಿಳೆ ಇದರಿಂದ ರೊಚ್ಚಿಗೆದ್ದು ಸ್ನೇಹಿತನ ಮೇಲೆ ವಿಕ್ರಂ ಹಲ್ಲೆ ನಡೆಸಿದ್ದಾನೆ. ಶಿವಮೊಗ್ಗದ ಮಲಬಕೊಪ್ಪ ಪೆಟ್ರೋಲ್ ಬಂಕ್ ಬಳಿ ಈ ಒಂದು ಘಟನೆ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ವಿಕ್ರಂ ಪತ್ನಿಗೆ ವಿಚ್ಛೇದನ ನೀಡಿದ್ದಾನೆ. ಪತ್ನಿ ಛಾಯಾಗೆ ಆರೋಪಿ ವಿಕ್ರಂ ವಿಚ್ಛೇದನ ನೀಡಿದ್ದ. ಹಲ್ಲೆಗೆ ಒಳಗಾದ ವಿನೋದ್ ಆರೋಪಿ ವಿಕ್ರಂ ಇಬ್ಬರು ಸ್ನೇಹಿತರು. ವಿಚ್ಛೇದನ ಬಳಿಕ ತನ್ನ ಪತ್ನಿಗೆ ಸ್ನೇಹಿತನೇ ಮದುವೆಯಾದ ಹಿನ್ನೆಲೆಯಲ್ಲಿ, ವಿಕ್ರಮ್ ಸಿಟ್ಟಿಗೆದ್ದು ವಿನೋದ್ ಮೇಲೆ ಆರೋಪಿ ವಿಕ್ರಂ ಹಲ್ಲೆ ಮಾಡಿದ್ದಾನೆ. ಲಾರಿ ಚಾಲಕ ವಿನೋದ್ ಮೇಲೆ ವಿಕ್ರಂ ಮಾರಣಾಂತಿಕವಾಗಿ ಹಲ್ಲೆಗೈದಿದ್ದಾನೆ. ಹಲ್ಲೆಗೆ ಒಳಗಾದಂತಹ ವಿನೋದ್ ಗೆ ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ವಿಕ್ರಂ ಗಾಗಿ ಪೊಲೀಸರು ಇದಿಗ ಹುಡುಕಾಟ
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಕೊನೆಗೂ ಚಿರತೆ ಬಿದ್ದಿದೆ. ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ರಂಗೇನಹಳ್ಳಿಯಲ್ಲಿ ಅರಣ್ಯ ಇಲಾಖೆ ಇಟ್ಟಂತಹ ಬೋನಿಗೆ ಚಿರತೆ ಕೊನೆಗೂ ಬಿದ್ದಿದೆ. ಎಮ್ಮೆದೊಡ್ಡಿ, ರಂಗೇನಹಳ್ಳಿ, ಶ್ರೀರಾಮಪುರ, ಗೊಲ್ಲರಹಟ್ಟಿ, ಶಿವಪುರ, ಲಕ್ಕೇನಹಳ್ಳಿ, ಇಸ್ಲಾಂಪುರ ಭಾಗದಲ್ಲಿ ಚಿರತೆ ಓಡಾಡುತ್ತಿತ್ತು. ಇದರಿಂದ ಈ ಭಾಗದ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು. ಜಾನುವಾರು ಸಾಕು ನಾಯಿಗಳನ್ನು ಚಿರತೆ ಹೊತ್ತು ಒಯ್ದಿತ್ತು. ಹಾಗಾಗಿ ಸ್ಥಳೀಯರು ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು ಹಾಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದ್ದು ಈ ಭಾಗದ ಜನ ನಿಟ್ಟುಸಿರುಬಿಟ್ಟಿದ್ದಾರೆ
ಬೆಂಗಳೂರು : ಮದುವೆಯಾಗೋದಾಗಿ ನಂಬಿಸಿ ಯುವತಿಯ ಜೊತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದು ವಂಚಿಸಿದ್ದಲ್ಲದೆ, ಆಕೆಯ ಅಪ್ರಾಪ್ತ ಸಹೋದರಿ ಮೇಲೂ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ಬೆಂಗಳರಲ್ಲಿ ನಡೆದಿದೆ. ಅಷ್ಟೆ ಅಲ್ಲದೇ ಸಂತ್ರಸ್ತೆ ಯುವತಿಯಿಂದ ಲಕ್ಷಾಂತರ ಹಣ ಪಡೆದು ವಂಚನೆ ಎಸಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಶುಭಾಂಶು ಶುಕ್ಲಾ(27)ನನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲು ಸಂತ್ರಸ್ತೆಯ ಸಹೋದರಿಯಾದ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಯ ಕುಟುಂಬಕ್ಕೂ ಬಲ್ಲವನಾಗಿದ್ದ. ಬಳಿಕ ಬಾಲಕಿ ಸಹೋದರಿಯನ್ನ ಪ್ರೀತಿ ಬಲೆಯಲ್ಲಿ ಬೀಳಿಸಿದ್ದ ಈತ, ಮಾಸ್ಟರ್ ಪ್ಲ್ಯಾನ್ ಮಾಡಿ ಆಕೆಯನ್ನು ತನ್ನ ಜೊತೆ ಕರೆದುಕೊಂಡು ಹೋಗಿದ್ದ. ತನಗೆ ಮುಂಬೈನಲ್ಲಿ ಕೆಲಸ ಸಿಕ್ಕಿದೆ ಎಂದು ಮನೆಯವರನ್ನು ನಂಬಿಸಿದ್ದ ಸಂತ್ರಸ್ತೆ, ಈತನನನ್ನು ನಂಬಿ ಜೊತೆಗೆ ತೆರಳಿದ್ದಳು. ನಂತರ ಫ್ಲ್ಯಾಟ್ನಲ್ಲಿ ಶುಭಾಂಶು ಮತ್ತು ಯುವತಿ ಲಿವಿನ್ ರಿಲೇಷನ್ಶಿಪ್ನಲ್ಲಿದ್ದರು ಎನ್ನಲಾಗಿದೆ. ಈ ವೇಳೆ ಶುಭಾಂಶುಗೆ ಮೊದಲೇ ಮದುವೆಯಾಗಿರುವ ಬಗ್ಗೆ ಸಂತ್ರಸ್ತೆಗೆ ಗೊತ್ತಾಗಿದೆ. ಮತ್ತೊಂದು ಅಪ್ರಾಪ್ತ…
ಬೆಂಗಳೂರು : ಹೊಸ ವರ್ಷಾಚರಣೆ ಬಂದರೆ ಸಾಕು ಯುವಜನತೆ ಡ್ರಗ್ಸ್ ಮಾದಕ ದ್ರವ್ಯ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ ಇದೀಗ ಟ್ರ್ಯಾಕ್ಸ್ ವಿರುದ್ಧ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ 55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಡಿಸೆಂಬರ್ 26ರಂದು ಮಹಾರಾಷ್ಟ್ರದ ANTF ಕಾರ್ಯಾಚರಣೆ ನಡೆಸಿದ್ದರು. ಬೆಂಗಳೂರಿನ ಮೂರು ಕಡೆ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಇಬ್ಬರು ಯೋಗಿರಾಜ್ ಕುಮಾರ್ ಹಾಗೂ ನಯನ್ ಪವರ್ ಈ ಒಂದು ದಂಧೆಯ ಕಿಂಗ್ ಪಿನ್ ಗಳಾಗಿದ್ದಾರೆ. ದೇಶದ ಅನೇಕ ಕಡೆಗೆ ಡ್ರಗ್ಸ್ ಫ್ಯಾಕ್ಟರಿಗಳನ್ನು ಆರೋಪಿಗಳು ನಡೆಸುತ್ತಿದ್ದರು. ಬೆಂಗಳೂರು ನಗರದಲ್ಲಿ ಮೂರು ಕಡೆ ಡ್ರಗ್ಸ್ ಫ್ಯಾಕ್ಟ್ರಿಗಳು ನಡೆಸುತ್ತಿದ್ದರು ಕಾರ್ಖಾನೆ ಹಾಗೂ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಎನ್ಜಿ ಗೊಲ್ಲಹಳ್ಳಿ ಪ್ರದೇಶ ಅವಲಹಳ್ಳಿ ಠಾಣ ಎರಪ್ಪನಹಳ್ಳಿ ಮನೆಯಲ್ಲಿ ಡ್ರಗ್ಸ್ ಸಂಗ್ರಹ ಮಾಡುತ್ತಿದ್ದರು. ಇದೀಗ ಹೊಸ ವರ್ಷದ ಹೊತ್ತಿನಲ್ಲಿ ಪೊಲೀಸರು ಅತಿ ದೊಡ್ಡ ಭೇಟಿ ಆಡಿದ್ದಾರೆ ಬೆಂಗಳೂರಿನಲ್ಲಿ ಮೂರು…
ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಗದ್ದುಗೆಯ ಕಿತ್ತಾಟದ ನಡುವೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಕುರಿತು ಕೋಡಿಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇದರ ಮಧ್ಯ ವೇದಿಕೆ ಮೇಲೇನೆ ಡಿಕೆ ಶಿವಕುಮಾರ್ ಗೆ ಮಹಿಳೆಯೊಬ್ಬರು ಯಾವಾಗ CM ಆಗ್ತೀರಾ ಸರ್ ಅಂತ ಪ್ರಶ್ನೆ ಕೇಳಿದ್ದಾರೆ. ಹೌದು ಬೆಂಗಳೂರಿನ ಬಸವನಗುಡಿ ಅವರೇ ಬೆಳೆ ಮೇಳದಲ್ಲಿ ಈ ಒಂದು ಘಟನೆ ನಡೆದಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಭಾಷಣ ಮುಗಿಸಿ ಹೊರಡುವಾಗ ಮಹಿಳೆ ಪ್ರಶ್ನೆ ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸರ್ ಯಾವಾಗ ನೀವು ಸಿಎಂ ಆಗ್ತೀರ? ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಹಿಳೆ ಮಾತು ಕೇಳಿಸಿಕೊಂಡು ಡಿಕೆ ಶಿವಕುಮಾರ್ ಏನು ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ. ಇನ್ನು ಬೆಳಗಾವಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು,ಸ್ಪೋಟಕ ಭವಿಷ್ಯ ನುಡಿದಿದ್ದರೆ. ಹಾಲು ಮತದ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೋದು ಅಷ್ಟು ಸುಲಭವಾದುದ್ದಲ್ಲ. ಅದು ಕಷ್ಟವಾಗಿದೆ. ಸಿದ್ಧರಾಮಯ್ಯ ಅವರು ತಾವಾಗಿಯೇ ಅಧಿಕಾರ ಬಿಟ್ಟು ಕೊಟ್ರೆ ಮಾತ್ರವೇ ಬೇರೆಯವರಿಗೆ…
ಹೈದರಾಬಾದ್ : ಪುಷ್ಪ 2: ದಿ ರೂಲ್ ಚಿತ್ರದ ಪ್ರಥಮ ಪ್ರದರ್ಶನಕ್ಕೆ ಸಂಬಂಧಿಸಿದ ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದು, ಆರೋಪಿಗಳಲ್ಲಿ ನಟ ಅಲ್ಲು ಅರ್ಜುನ್ ಹೆಸರಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಆರೋಪಪಟ್ಟಿಯಲ್ಲಿ ಅವರ ಮ್ಯಾನೇಜರ್ ಹೆಸರನ್ನೂ ಹೆಸರಿಸಲಾಗಿದೆ. ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು 11 ನೇ ಆರೋಪಿಯಾಗಿ ಪಟ್ಟಿ ಮಾಡಲಾಗಿದೆ. ಇದಕ್ಕೂ ಮೊದಲು, ಪೊಲೀಸರು ಚಿತ್ರಮಂದಿರದ ಆಡಳಿತ ಮಂಡಳಿ, ನಟ ಮತ್ತು ಅವರ ತಂಡದ ಸದಸ್ಯರ ವಿರುದ್ಧ ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ ಸೇರಿದಂತೆ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವು ಪ್ರೀಮಿಯರ್ ಶೋ ಸಮಯದಲ್ಲಿ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿ, ಆಕೆಯ ಮಗನಿಗೆ ಗಂಭೀರ ಗಾಯಗಳಾಗಿದ್ದವು. ಡಿಸೆಂಬರ್ 13, 2024 ರಂದು ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಯಿತು ಮತ್ತು ನಾಂಪಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಅವರನ್ನು 1 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತು. ನಂತರ ಅವರು ತೆಲಂಗಾಣ ಹೈಕೋರ್ಟ್ ಅನ್ನು ಸಂಪರ್ಕಿಸಿದರು,…
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಪರೋಕ್ಷವಾಗಿ ವಾಕ್ಸಮರ ನಡೆಯುತ್ತಿದೆ. ಇದರ ಮಧ್ಯ ದೀಪದ ಬೆಳಕು ಮಾತ್ರ ಗೊತ್ತಾಗುತ್ತದೆ ಆದರೆ ದೀಪದ ಕಷ್ಟ ಗೊತ್ತಾಗುವುದಿಲ್ಲ ಎಂದು ಬೆಂಗಳೂರಿನ ಜಿಕೆವಿಕೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದ್ದಾರೆ. ಬಿದರಿನ ಬೊಮ್ಮನಿಂದ ಕೊಳಲು ಮಾಡುತ್ತಾರೆ. ಕೊಳಲು ಇಡೀ ವಿಶ್ವಕ್ಕೆ ಪರಿಚಯ. ಕುರಿಯ ಚರ್ಮ ಹಾಗು ಕೋಣದ ಚರ್ಮದಿಂದ ತಮಟೆ ಮಾಡುತ್ತೇವೆ. ಸಗಣಿ ಬಿಸಾಕುತ್ತೇವೆ ಅದಕ್ಕೆ ಹುಲ್ಲು ಸೇರಿಸಿದರೆ ಪಿಳ್ಳಾರತಿ ಆಗುತ್ತದೆ. ದೀಪದ ಬೆಳಕು ಮಾತ್ರ ಗೊತ್ತಾಗುತ್ತದೆ ಆದರೆ ದೀಪದ ಕಷ್ಟ ಗೊತ್ತಾಗಲ್ಲ ಬೆವರು ಶ್ರಮಕ್ಕೆ ಯಾರು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದರು.
BREAKING : ಸಿದ್ಧರಾಮಯ್ಯ ತಾವಾಗಿಯೇ ಅಧಿಕಾರ ಬಿಟ್ಟು ಕೊಟ್ರೆ ಮಾತ್ರ ಬೇರೆಯವರಿಗೆ ಅವಕಾಶ : ಕೋಡಿಶ್ರೀ ಸ್ಪೋಟಕ ಭವಿಷ್ಯ
ಬೆಳಗಾವಿ: ರಾಜ್ಯದಲ್ಲಿ ಅಧಿಕಾರ ಗದ್ದುಗೆಯ ಕಿತ್ತಾಟದ ನಡುವೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಕುರಿತು ಕೋಡಿಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠ ಶ್ರೀ ನುಡಿದಂತ ಆ ಸ್ಪೋಟಕ ಭವಿಷ್ಯವನ್ನು ಮುಂದೆ ಓದಿ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಹಾಲು ಮತದ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೋದು ಅಷ್ಟು ಸುಲಭವಾದುದ್ದಲ್ಲ. ಅದು ಕಷ್ಟವಾಗಿದೆ. ಸಿದ್ಧರಾಮಯ್ಯ ಅವರು ತಾವಾಗಿಯೇ ಅಧಿಕಾರ ಬಿಟ್ಟು ಕೊಟ್ರೆ ಮಾತ್ರವೇ ಬೇರೆಯವರಿಗೆ ಅವಕಾಶ ಸಿಗಬಹುದು ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ಸಿಎಂ ಆಗೋ ಕನಸಿನಲ್ಲಿದ್ದಂತ ಡಿಕೆ ಶಿವಕುಮಾರ್ ಅವರಿಗೆ, ಸಿದ್ಧರಾಮಯ್ಯ ತಾನಾಗಿಯೇ ಅಧಿಕಾರ ಬಿಟ್ಟುಕೊಟ್ಟರೆ ಮಾತ್ರವೇ ಅದು ಸಾಧ್ಯವಾಗಲಿದೆ. ಇಲ್ಲ ಅಂದರೇ ಡಿಕೆಶಿಗೆ ಅಧಿಕಾರ ಸಿಗೋದಿಲ್ಲ ಎಂಬುದಾಗಿ ಮಾರ್ಮಿಕವಾಗಿ ನುಡಿದಿದ್ದಾರೆ.














