Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕುರಿತು ಯಾವುದೇ ಕಾಂಗ್ರೆಸ್ ನಾಯಕರಿಗೂ ಮಾತನಾಡದೆ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ ಎಂದು ಕಳೆದ ಕೆಲವು ದಿನಗಳ ಹಿಂದೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಡಕ್ ವಾರ್ನಿಂಗ್ ನೀಡಿದ್ದರು. ಆದರೆ ಇದೀಗ ಕಾಂಗ್ರೆಸ್ ಸಂಸದ ಸುನಿಲ್ ಬೋಸ್ ಸಿಎಂ ಸಿದ್ದರಾಮಯ್ಯ 5 ವರ್ಷದವರೆಗೆ ಸಿಎಂ ಆಗಿ ಮುಂದುವರೆಯಲಿದ್ದು ಎರಡುವರೆ ವರ್ಷ ಬಳಿಕ ಕೂಡ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಮೈಸೂರಿನ ಟಿ ನರಸೀಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯನವರು 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಇಲ್ಲ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಇಲ್ಲ 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ ಎಂದರು. ಪಕ್ಷದ ಶಾಸಕರು, ಹೈಕಮಾಂಡ್ ಬೆಂಬಲ ಇರುವವರೆಗೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ. ಎರಡುವರೆ ವರ್ಷದ ಬಳಿಕವು ಸಹ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು…
ಬೆಂಗಳೂರು : ಬೆಂಗಳೂರಿನಲ್ಲಿ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಡಿಗೆಹಳ್ಳಿ ಪೊಲೀಸರು ಲಾಯರ್ ಜಗದೀಶ್, ಅವರ ಪುತ್ರ,, ಗನ್ ಮ್ಯಾನ್ ಹಾಗೂ ಕಾರು ಚಾಲಕರನ್ನು ಕೋಡಿಗೆಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಇದೀಗ ಬಂಧಿತ ಎಲ್ಲ ನಾಲ್ಕು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೌದು ಬಿಗ್ಬಾಸ್ ಸ್ಪರ್ಧಿ, ವಕೀಲ ಜಗದೀಶ್ ಮೇಲೆ ಹಲ್ಲೆ ನಡೆದಿದೆ. ಇದನ್ನು ಜಗದೀಶ್ ಅವರೇ ಸ್ವತಃ ವಿಡಿಯೋ ಮಾಡಿ ನನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ಮೂಗಿನಿಂದ ರಕ್ತ ಬರುತ್ತಿರುವುದನ್ನು ಕಾಣಬಹುದು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಡಿಗೆಹಳ್ಳಿ ಪೊಲೀಸರಿಂದ ವಕೀಲ ಜಗದೀಶ್ ಸೇರಿ ನಾಲ್ವರು ಅರೆಸ್ಟ್ ವಕೀಲ ಜಗದೀಶ್ ಜಗದೀಶ್ ಪುತ್ರ ಹಾಗೂ ಕಾರು ಚಾಲಕನನ್ನು ಅರೆಸ್ಟ್ ಮಾಡಿದ್ದು, ಸದ್ಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ಹಿನ್ನೆಲೆ? ಲಾಯರ್ ಜಗದೀಶ್ ಗೆ ಸೇರಿದ ಕಾಂಪ್ಲೆಕ್ಸ್ ಬಳಿಕ ಅಣ್ಣಮ್ಮ…
ಬೆಂಗಳೂರು : ಪ್ರೀತಿಯಲ್ಲಿ ಬಿರುಕು ಮೂಡಿದ ಹಿನ್ನೆಲೆಯಲ್ಲಿ ತಾನು ಕೊಡಿಸಿದ್ದ ಮೊಬೈಲ್ ಹಾಗೂ ದ್ವಿಚಕ್ರ ವಾಹನ ವಾಪಾಸ್ ಕೇಳಲು ಯುವತಿ ಮನೆ ಬಳಿ ತೆರಳಿದ್ದ ಮಾಜಿ ಪ್ರಿಯಕರನ ಮೇಲೆ ಮಾರಕಾಸ್ತದಿಂದ ಹಲ್ಲೆ ಮಾಡಿದ ಹಾಲಿ ಪ್ರಿಯಕರ ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೇಪಾಳ ಮೂಲದ ಬಿಕಾಸ್ (26) ಎಂದು ತಿಳಿದುಬಂದಿದೆ.ಜ.13ರಂದು ಜಕ್ಕೂರು ಲೇಔಟ್ನ 10ನೇ ‘ಬಿ’ ಕ್ರಾಸ್ನಲ್ಲಿ ನೇಪಾಳದ ಲೋಕೇಶ್ ಗುರುಂಗ್(25) ಮೇಲೆ ಬಿಕಾಸ್ ಹಾಗೂ ಆತನ ಸಹಚರರು ಹಲ್ಲೆ ಮಾಡಿದ್ದರು.ಈ ಸಂಬಂಧ ನೀಡಿದ್ದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಸಹಚರರಿಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು ಲೋಕೇಶ್ ನಗರದಲ್ಲಿ ಸೇಲ್ ಕೆಲಸ ಮಾಡಿ ಕೊಂಡಿದ್ದ. ನೇಪಾಳ ಮೂಲದ ಸಂಧ್ಯಾ ಪಲಲ್ಲಿ ಹಾಗೂ ಆಕೆಯ ಕುಟುಂಬವನ್ನು ನೇಪಾಳದಿಂದ ನಗರಕ್ಕೆ ಕರೆತಂದು ಬಾಡಿಗೆ ಮನೆ ಮಾಡಿ ಇರಿಸಿದ್ದ. ಲೋಕೇಶ್ ಮತ್ತು ಸಂಧ್ಯಾ ಪಲ್ಸಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು. ಲೋಕೇಶ್ ಯುವತಿಗೆಮೊಬೈಲ್, ದ್ವಿಚಕ್ರ ವಾಹನ ಕೊಡಿಸಿದ್ದ. 8 ತಿಂಗಳ…
ಬೆಂಗಳೂರು : ಕ್ಯಾನ್ಸರ್ ಹಿನ್ನೆಲೆಯಲ್ಲಿ ನಟ ಶಿವರಾಜ್ಕುಮಾರ್ ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸರ್ ಚಿಕಿತ್ಸೆ ಮುಗಿಸಿಕೊಂಡು ಭಾನುವಾರ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಈಗಾಗಲೇ ಬೆಂಗಳೂರಿಗೆ ಬರುವ ಕುರಿತು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಈ ಕುರಿತು ವಿಡಿಯೋ ಮೂಲಕ ಸಂದೇಶ ಹಂಚಿ ಕೊಂಡಿರುವ ಶಿವರಾಜ್ ಕುಮಾರ್, ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮನ್ನೆಲ್ಲಾ ನೋಡಲು ನಾನು ಜನವರಿ 26ರಂದು ಗಣರಾಜ್ಯೋತ್ಸವ ದಿನ ಬೆಂಗಳೂರಿಗೆ ಬರುತ್ತಿದ್ದೇನೆ. ನಿಮ್ಮ ಆಶೀರ್ವಾದ ಹೀಗೇ ಇರಲಿ ಎಂದು ಹೇಳಿದ್ದಾರೆ. ಕಳೆದ 2024 ಡಿಸೇಂಬರ್ 18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್ಕುಮಾರ್ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಶಿವಣ್ಣ ಹೆಚ್ಚು ಕಮ್ಮಿ ಒಂದು ತಿಂಗಳ ನಂತರ ಬೆಂಗಳೂರಿಗೆ ಮರಳಿ ಬರುತ್ತಿದ್ದಾರೆ. ಇದೀಗ ನಟ ಶಿವಣ್ಣ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
ಬೆಂಗಳೂರು : ರಸ್ತೆ ಮೇಲೆ ಬಿದ್ದಿದ್ದ ಕೇಬಲ್ ವೈಯರ್ ದ್ವಿಚಕ್ರ ವಾಹನದ ಚಕ್ರಕ್ಕೆ ಸುತ್ತಿಕೊಂಡು ನಿಯಂತ್ರಣ ತಪ್ಪಿ ರಸ್ತೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಎಚ್ಎಎಲ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ನಿವಾಸಿ ರೋಹಿತ್ ಆರ್. ಪಾಟೀಲ್ (23) ಮೃತ ಸವಾರ. ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ರೋಹಿತ್ ಶುಕ್ರವಾರ ಸಂಜೆ ಐಟಿಪಿಎಲ್ ರಸ್ತೆಯ ರಾಮೇಶ್ವರಂ ಕೆಫೆ ಸಮೀಪದ ಪಾಸ್ ಪೋರ್ಟ್ ಕಚೇರಿ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಕೇಬಲ್ ವೈರ್ ದ್ವಿಚಕ್ರ ವಾಹನದ ಚಕ್ರಕ್ಕೆ ಸುತ್ತಿಕೊಂಡು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಇದೇ ಸಮಯಕ್ಕೆ ಹಿಂದಿನಿಂದ ಬರುತ್ತಿದ್ದ ಬಿಎಂಟಿಎಸ್ ಬಸ್ ಚಕ್ರ ರೋಹಿತ್ ಮೇಲೆಯೇ ಉರುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಶನಿವಾರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು…
ಬೆಂಗಳೂರು : ಇಂದು ದೇಶದಾದ್ಯಂತ 76ನೇ ಗಣರಾಜ್ಯೋತ್ಸವದ ಆಚರಣೆ ಸಂಭ್ರಮವಿದ್ದು, ಅದೇ ರೀತಿಯಾಗಿ ಇಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಈಗಾಗಲೇ ಮಾಣಿಕ್ಯಪ್ಪ ರೆಡ್ ಮೈದಾನದಲ್ಲಿ ಪೊಲೀಸರಿಂದ ಒದಗಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ. 10 ಕೆ.ಎಸ್.ಆರ್.ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷೀಪ್ರ ಕಾರ್ಯಚರಣೆ ತಂಡ, 8 ಡಿಸಿಪಿ, 17 ಎಸಿಪಿ, 44ಪಿಐ, ಸೇರಿ 1051 ಪೊಲೀಸರನ್ನು ಅನಿ ಯೋಜನೆ ಮಾಡಲಾಗಿದೆ. 114 ಪಿಎಸ್ಐ, 58 ಎಎಸ್ಐ, 80 ಪಿಸಿ, 30 ಕ್ಯಾಮೆರಾ ಸಿಬ್ಬಂದಿಯಿಂದ ಭದ್ರತೆ ಒದಗಿಸಲಾಗಿದೆ. ಅಲ್ಲದೆ ಮೈದಾನದ ಸುತ್ತಲೂ 103 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ.
ಹುಬ್ಬಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಎಷ್ಟು ಜನರು ಊರು ಬಿಡುತ್ತಿದ್ದು ಇದುವರೆಗೂ ರಾಜ್ಯದಲ್ಲಿ ಈ ಒಂದು ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಐದು ಜನರು ಆತ್ಮಹತ್ಯೆ ಮಾಡಿಕೊಟ್ಟಿದ್ದಾರೆ. ಇನ್ನು ಇದೇ ವಿಚಾರವಾಗಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಮೈಕ್ರೋಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೇ ಮಾರುವ ಸ್ಥಿತಿ ಬಂದಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೇ ಮಾರುವ ಸ್ಥಿತಿ ಬಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ಅವರ ಕಿರುಕುಳದಿಂದ ಜನರು ಊರು ಬಿಡುತ್ತಿದ್ದಾರೆ.ಫೈನಾನ್ಸ್ ಸಿಬ್ಬಂದಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮೀಟರ್ ಬಡ್ಡಿ ದಂಧೆ, ಜೂಜು, ಡ್ರಗ್ಸ್ ದಂಧೆ ನಡುವೆ ಲಿಂಕ್ ಇದೆ. ಎಲ್ಲಾ ದಂಧೆಗಳು ಒಂದಕ್ಕೊಂದು ಸಂಬಂಧ ಇರುವಂತಹ ವ್ಯವಹಾರವಾಗಿವೆ. ರಾಜ್ಯದಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದ್ ಸರ್ಕಾರದ…
ಬಳ್ಳಾರಿ : ರಾಜ್ಯದಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಬಳ್ಳಾರಿಯಲ್ಲಿ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣಕಾರು ಅಪಹರಿಸಿರುವ ಘಟನೆ ನಡೆದಿತ್ತು. ಆದರೆ ನಿನ್ನೆ ಸಂಜೆ ಕಿಡ್ನಾಪರ್ಸ್ ಅವರನ್ನು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮ ಸಮುದ್ರ ಗ್ರಾಮದ ಹೊಲ ವೊಂದರಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಹೌದು ಸುನೀಲ್ ಮೊಬೈಲ್ ನಿಂದಲೇ ಅವರ ಕುಟುಂಬದವರಿಗೆ ದೂರವಾಣಿ ಕರೆ ಮಾಡುತ್ತಿದ್ದ ಅಪಹರಣಕಾರರು, ಮೂರು ಕೋಟಿ ರೂ. ನಗದು ಹಣ, ಮೂರು ಕೋಟಿ ಮೌಲ್ಯದ ಬಂಗಾರ ನೀಡುವಂತೆ ಬೇಡಿಕೆ ಇಟ್ಟಿದ್ದರು. ಡಾ. ಸುನೀಲ್ ಮೊಬೈಲ್ ನಿಂದ ಎರಡು ಬಾರಿ ದೂರವಾಣಿ ಕರೆ ಮಾಡಿದ್ದ ಅಪಹರಣಕಾರರಯ ಹಿಂದಿಯಲ್ಲಿ ಮಾತನಾಡಿದ್ದರು. ಆದರೆ, ಬೆಳಗ್ಗೆಯಿಂದ ಊರೂರು ಸುತ್ತಿದ ಅಪಹರಾಕಾರರು, ರಾತ್ರಿ 9 ಗಂಟೆ ಸುಮಾರಿಗೆ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮ ಸಮುದ್ರ ಗ್ರಾಮದ ಹೊಲ ವೊಂದರಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಪ್ರಕರಣ ಹಿನ್ನೆಲೆ? ಡಾ. ಸುನೀಲ್ ಅವರು ಶನಿವಾರ ನಸುಕಿನಲ್ಲಿ ಸತ್ಯನಾರಾಯಣಪೇಟೆಯಲ್ಲಿ ಇರುವ ಶನೀಶ್ವರ ದೇವಸ್ಥಾನದ ಹತ್ತಿರ ವಾಕಿಂಗ್ ಮಾಡುತ್ತಿದ್ದಾಗ ಟಾಟಾ ಇಂಡಿಕಾ…
ಬೆಂಗಳೂರು : ಮನೆಯಲ್ಲಿ ಯಾವುದೇ ವಸ್ತು ಹಾಳಾದಾಗ ರಿಪೇರಿ ಮಾಡುವವರನ್ನು ಕರೆಸಿ ರಿಪೇರಿ ಮಾಡಿಸುತ್ತೇವೆ. ಆದರೆ ರಿಪೇರಿ ಮಾಡುವವರು ನಂಬಿಕಸ್ತರು ಇದ್ದರೆ ಒಳ್ಳೇದು. ಏಕೆಂದರೆ ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಗೀಸರ್ ರಿಪೇರಿ ಮಾಡುವವ ಒಬ್ಬ ಗೀಸರ್ ನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೆಲ್ ಮಾಡಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಿನ ಬನ್ನೇರುಘಟ್ಟದ ಸಿ.ಕೆ.ಪಾಳ್ಯದ ಮನೆಯೊಂದರಲ್ಲಿ ಗೀಸರ್ ಫಿಟ್ ಮಾಡುವ ನೆಪದಲ್ಲಿ ಬಂದಿದ್ದ ಮುರಳಿ ಎಂಬಾತ ರಹಸ್ಯ ಕ್ಯಾಮರಾವನ್ನು ಅಳವಡಿಸಿದ್ದಾನೆ. ಕಳೆದ ಒಂದು ವರ್ಷದ ಹಿಂದೇನೆ ಆತ ಈ ಕ್ಯಾಮರಾ ಅಳವಡಿಸಿದ್ದ ಎನ್ನಲಾಗಿದೆ. ಆದರೆ ಮನೆಯವರು ಗೊತ್ತಿಲ್ಲದೇ ಹಾಗೆ ಬಾತ್ ರೂಂ ಬಳಸಿದ್ದಾರೆ.ಆದರೆ ಸ್ನಾನಗೃಹ ಬಳಸಿದ ಮಹಿಳೆಯ ಖಾಸಗಿ ಫೋಟೋಗಳನ್ನು ರೆಕಾರ್ಡ್ ಮಾಡಿಕೊಂಡ ಗೀಸರ್ ಫೀಟ್ ಮಾಡಿದ ಕಿರಾತಕ ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದ್ದಾನೆ. ಕಳೆದ ಒಂದು ವರ್ಷದಿಂದ ಕಾಮುಕ ಮುರುಳಿ ಮಹಿಳೆಗೆ ನಾನು ಕರೆದಲ್ಲಿಗೆ ಬರಬೇಕು. ಅಕಸ್ಮಾತ್ ಬರದೇ ಹೋದರೆ ಫೋಟೋ,…
ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೆರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ನಿನ್ನೆ ಓರ್ವ ಆರೋಪಿಯನ್ನು ಬಂಧಿಸಿದ್ದರು. ಇದೀಗ ಇಂದು ಇನ್ನೊರ್ವ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಹೌದು, ಹೊನ್ನಾವರದಲ್ಲಿ ಗರ್ಭ ಧರಿಸಿದ್ದ ಹಸುವನ್ನು ಕೊಯ್ದು ರುಂಡ ಬೇರ್ಪಡಿಸಿ ಕೇವಲ ಮಾಂಸವನ್ನು ಮಾತ್ರ ಕದ್ದು ಒಯ್ದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಪೊಲೀಸರು ತೌಫಿಕ್ (41) ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದ್ದರು. ಬಳಿಕ ಈ ಒಂದು ಪ್ರಕರಣಕ್ಕೆ ಇದೀಗ ಪೊಲೀಸರು ಇನ್ನೊರ್ವ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಆತನ ಮೇಲೆ ಫೈರಿಂಗ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೊಡು ಗ್ರಾಮದಲ್ಲಿ ಕಳೆದ ಜನವರಿ 19ರಂದು ಗರ್ಭ ಧರಿಸಿದ್ದ ಹಸುವನ್ನು ಕೊಯ್ದು ಆರೋಪಿಗಳು ಮದುವೆ ಸಮಾರಂಭಕ್ಕೆ ಹಸುವಿನ ಮಾಂಸ ಬಳಸಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ತೌಫಿಕ್ ಎನ್ನುವ ಆರೋಪಿಯನ್ನು ಅರೆಸ್ಟ್…