Author: kannadanewsnow05

ಬೆಂಗಳೂರು : ಲೋಕಸಭಾ ಚುನಾವಣೆಗೆ ಟಿಕೆಟ್ ಕೈತಪ್ಪಿದರಿಂದ ಈಗಾಗಲೇ ಬಿಜೆಪಿಯಲ್ಲಿ ಹಲವು ಹಿರಿಯ ನಾಯಕರು ಸೊ ಪಕ್ಷದ ವಿರೋಧಿ ಬಂಡಾಯ ವೆದ್ದಿದ್ದು ಇದೀಗ ಕಾಂಗ್ರೆಸ್ ನಲ್ಲಿ ಕೂಡ ಹಲವು ಕಡೆಗಳಲ್ಲಿ ಆ ಟಿಕೆಟ್ ಬಿಡುಗಡೆಗ ಮುನ್ನ ಕಾಂಗ್ರೆಸ್ ಮೇಲೆ ಒತ್ತಡ ಹೆಚ್ಚಾಗಿದೆ ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ವೀಣಾ ಕಾಶಪ್ಪನವರಿಗೆ ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಒತ್ತಾಯ ಮಾಡಿದ್ದಾರೆ. https://kannadanewsnow.com/kannada/breaking-sc-asks-sbi-to-file-affidavit-that-no-information-has-been-concealed/ ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ ವೀಣಾ ಕಾಶಪ್ಪನವರಿಗೆ ಟಿಕೆಟ್ ನೀಡುವಂತೆ ಇದೀಗ ಲಾಬಿ ನಡೆಯುತ್ತಿದ್ದು ಬಾಗಲಕೋಟೆಯಿಂದ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿದೆ. ಈಗಾಗಲೇ ಬಾಗಲಕೋಟೆಯಿಂದ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ ಹೆಸರು ಕೇಳಿ ಬಂದಿದೆ. https://kannadanewsnow.com/kannada/youtuber-elvish-yadav-admits-to-arranging-snake-venom-at-parties-sources/ ಆದರೆ ಸಂಯುಕ್ತ ಪಾಟೀಲ್ ಗೆ ಕಾಂಗ್ರೆಸ್ ಟಿಕೇಟ್ ನೀಡಬಾರದೆಂದು ಒತ್ತಡಕ್ಕೆ ಹೇರಲಾಗುತ್ತಿದೆ.ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನೀಡುವಂತೆ ಇದೀಗ ಕಾಶಪ್ಪನವರ ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ. ಲೋಕಸಭೆಗೆ ಕಾಂಗ್ರೆಸ್ ನಲ್ಲಿ ಇದೀಗ ಜೋರಾಗಿ ಲಾಭಿ ನಡೆಯುತ್ತಿದೆ. https://kannadanewsnow.com/kannada/breaking-delhi-court-dismisses-plea-against-former-delhi-minister-satyendar-jain/ ವೀಣಾ ಕಾಶಪ್ಪನವರಿಗೆ ಬಾಗಲಕೋಟೆ ಲೋಕಸಭಾ…

Read More

ಚಿಕ್ಕಮಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತೇಶ್ ಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಅವರು ಇತ್ತೀಚಿಗೆ ಸಿಟಿ ರವಿ, ಪ್ರತಾಪ್ ಸಿಂಹ ಡಿವಿ ಸದಾನಂದ ಗೌಡ ಅವರಿಗೆ ಕೂಡ ಬಿಜೆಪಿಯಿಂದ ಅನ್ಯಾಯವಾಗಿದೆ ಎಂಬ ಹೇಳಿಕೆ ನೀಡಿದ್ದರು. ಇದೀಗ ಮಾಜಿ ಶಾಸಕ ಸಿಟಿ ರವಿ ಅವರು ಈಶ್ವರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದ್ದು ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಬಿಜೆಪಿ ಮಾತ್ರ ಎಂದು ಟಾಂಗ್ ನೀಡಿದ್ದಾರೆ. https://kannadanewsnow.com/kannada/new-rules-to-come-into-effect-across-the-country-f/ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿಯಲ್ಲಿ ಸಿಟಿ ರವಿಗೂ ಮೋಸವಾಗಿದೆ ಅಂತ ಕೆ.ಎಸ್ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಬಿಜೆಪಿಯ ಮಾಜಿ ಶಾಸಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, ಈಗ ಚರ್ಚಿಸುವ ಸಮಯವಲ್ಲ ನಾನಂತೂ ಪಕ್ಷದ ಕಟ್ಟಾ ಕಾರ್ಯಕರ್ತ ಎಂದು ಅವರು ತಿಳಿಸಿದರು. https://kannadanewsnow.com/kannada/bengaluru-shop-owner-stabbed-to-death-for-obstructing-prayers-by-singing-song/ 1988 ರಿಂದಲೂ ನಾನು ಭಾರತೀಯ ಜನತಾ ಪಕ್ಷದಲ್ಲಿ ಇದ್ದೇನೆ ಬಿಜೆಪಿ ಸೇರಿದಾಗ ಮನೆಯಲ್ಲೂ ಒಬ್ಬಂಟಿ ಊರಿನಲ್ಲೂ ಒಬ್ಬಂಟಿಯಾಗಿದ್ದೆ. ಒಂದೊಂದೇ ಮೆಟ್ಟಿಲು…

Read More

ಬೆಂಗಳೂರು : ಅಂಗಡಿಯಲ್ಲಿ ಜೋರಾಗಿ ಹಾಡು ಹಾಕಿದ್ದರಿಂದ ಪ್ರಾರ್ಥನೆ ಮಾಡಲು ಅಡ್ಡಿಯಾಗುತ್ತೇ ಎಂದು ಆರೋಪಿಸಿ ಅಂಗಡಿ ಮಾಲೀಕನ ಮೇಲೆ ಹಲವು ದುಷ್ಕರ್ಮಿಗಳು ಚಾಕು ಇರಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರು ನಗರದ ಹಲಸೂರು ಗೇಟ್ ಬಳಿಯ ನಗರ್ತಪೇಟೆಯಲ್ಲಿ ನಡೆದಿದೆ. https://kannadanewsnow.com/kannada/tmc-mp-files-complaint-with-election-commission-against-pm-modi-for-violating-model-code-of-conduct/ ಹಲ್ಲೆಗೊಳಗಾದ ಮುಖೇಶ್ ಎಂಬವರು ನಗರ್ತಪೇಟೆಯಲ್ಲಿ‌ ಕೃಷ್ಣ ಟೆಲಿಕಾಂ ಮೊಬೈಲ್​ ಅಂಗಡಿ ಮಾಲೀಕರರು. ಇವರು ನೀಡಿದ ದೂರಿನ‌ ಮೇರೆಗೆ ಸುಲೇಮಾನ್, ಶಹನವಾಜ್, ರೋಹಿತ್, ದ್ಯಾನೀಶ್ ಹಾಗೂ ತರುಣ್ ಎಂಬವರ ಮೇಲೆ‌ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಂಗಡಿಯಲ್ಲಿ ಹಾಕಿರುವ ಹಾಡಿನಿಂದ ತಮ್ಮ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ನಡೆಸಲು ತೊಂದರೆಯಾಗುತ್ತಿದೆ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/watch-video-video-call-virat-kohli-greets-rcb-players-video-goes-viral/ ಭಾನುವಾರ ಸಂಜೆ 6.30 ಸುಮಾರಿಗೆ ಮುಖೇಶ್​ ಅವರ ಅಂಗಡಿಗೆ ಬಂದ ಯುವಕರು, ನಮಗೆ ಪ್ರಾರ್ಥನೆ ಮಾಡಲು ತೊಂದರೆಯಾಗುತ್ತಿದೆ. ಕೂಡಲೇ ಸ್ಪೀಕರ್​ನಲ್ಲಿ ಹಾಕಲಾಗಿದ್ದ ಹಾಡು ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಈ ವಿಚಾರಕ್ಕೆ ಅಂಗಡಿ ಮಾಲೀಕನಿಗೂ ಯುವಕರಿಗೂ ಮಾತಿನ ಚಕಮಕಿ ನಡೆದಿದೆ. https://kannadanewsnow.com/kannada/sbi-supreme/ ನೋಡುನೋಡುತ್ತಿದ್ದಂತೆ ಗುಂಪಿನಲ್ಲಿದ್ದ ಓರ್ವ…

Read More

ಮೈಸೂರು : ಇತ್ತೀಚಿಗೆ ಈ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ದೊಡ್ಡ ದೊಡ್ಡ ಅನಾಹುತಗಳು ನಡೆಯುತ್ತಿವೆ.ಇದೀಗ ಮೈಸೂರು ನಲ್ಲೂ ಅಂತದ್ದೇ ಘಟನೆ ನಡೆದಿದ್ದು, instagram ಮೂಲಕ ಪರಿಚಯವಾಗಿದ್ದ ಯುವಕ ಹಾಗೂ ಮಹಿಳೆ ನಡುವೆ ಇದೀಗ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾಳೆ. https://kannadanewsnow.com/kannada/rahul-gandhi-is-not-only-hinduphobic-but-also-misogynist-amit-malviya/ ಮದುವೆ ಆಗದಿದ್ದರೆ ಬಿಲ್ಡಿಂಗ್ ಮೇಲಿಂದ ಬಿದ್ದು ಸಾಯ್ತೀನಿ ಎಂದು ಮಹಿಳೆಯು ಕಟ್ಟಡದ ತುದಿಯಲ್ಲಿ ನಿಂತು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿ ಪ್ರೀತಿಸಿದ್ದ ಯುವತಿಯು, ಖಾಸಗಿ ಹೋಟೆಲ್‌ನ ಮೇಲ್ಭಾಗದಲ್ಲಿ ನಿಂತು ರಂಪಾಟ ಮಾಡಿದ್ದು, ವಿವಾಹಿತ ಮಹಿಳೆಯಿಂದ ಯುವಕನನ್ನ ಮದುವೆ ಆಗುವಂತೆ ಒತ್ತಾಯ ಮಾಡಿದ್ದಾಳೆ. ಇಲ್ಲದಿದ್ದರೆ ಬಿಲ್ಡಿಂಗ್ ಮೇಲತ್ತಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನು ಬಿಹಾರ ಮೂಲದ ನಾಸಿಂ ಬೇಗಂ(31) ಹಾಕಿದ್ದಾಳೆ. ಸದ್ಯ ನಂಜನಗೂಡು ಪಟ್ಟಣ ಪೊಲೀಸರ ವಶದಲ್ಲಿ ಮಹಿಳೆ ಇದ್ದಾಳೆ. https://kannadanewsnow.com/kannada/wpl-2024-vijay-mallya-congratulates-rcb-womens-team-for-winning-title/ ಕಳೆದ ಒಂದು ವರ್ಷದಿಂದ ಬಿಹಾರ ಮೂಲದ ಮಹಿಳೆ ಹಾಗೂ ಯುವಕ…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ  ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯ ಎದ್ದಿರುವ ಈಶ್ವರಪ್ಪ ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಹೇಳಿದರೂ ಕೂಡ ನನ್ನ ಸ್ಪರ್ಧೆ ಖಚಿತ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ ಎಂದು ಕೆಎಸ್ ಈಶ್ವರಪ್ಪ ತಿಳಿಸಿದರು. https://kannadanewsnow.com/kannada/post-partum-headaches-are-caused-by/ ಮಾಧ್ಯಮದ ಸಂದರ್ಶನ ಒಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರೇ ಹೇಳಿದರು ಹಿಂದೆ ಸರಿಯುವುದಿಲ್ಲ. ಮೋದಿ ಅಮಿತ್ ಶಾ ಹೇಳಿದರು ನನ್ನ ಸ್ಪರ್ಧೆ ಖಚಿತ. ಚುನಾವಣೆ ಸ್ಪರ್ಧೆಯಿಂದ ನಾನು ಹಿಂದೆ ಸರಿಯುವುದಿಲ್ಲ. ಯಾರೇ ಫೋನ್ ಮಾಡಿದರು ನನ್ನ ನಿರ್ಧಾರ ಅಚಲವಾಗಿದೆ. ಇದೊಂದುಕ್ಕೆ ಮಾತ್ರ ಕ್ಷಮಿಸಿ ಅಂತ ನಾನು ಹೇಳುತ್ತೇನೆ ಕಾರ್ಯಕರ್ತರನ್ನು ನೋಯಿಸಲು ನಾನು ಇಷ್ಟಪಡುವುದಿಲ್ಲ ಎಂದು ತಿಳಿಸಿದರು. https://kannadanewsnow.com/kannada/do-you-know-by-what-method-you-can-find-the-treasure-that-is-adjacent-to-it-do-you-know-by-what-method-you-can-find-the-treasure-that-is-adjacent-to-it/ ನಮ್ಮ ನಾಯಕರ ಬಗ್ಗೆ ನನಗೆ ಇವತ್ತು ಗೌರವವಿದೆ. ಮೋದಿಯವರು, ಅಮಿತ್ ಶಾ ಅವರಾಗಲಿ ಫೋನ್ ಕರೆ ಮಾಡಿ ಹೇಳಿದರೂ ಕೂಡ ನನ್ನ ನಿರ್ಧಾರ…

Read More

ಬೆಂಗಳೂರು: ಚುನಾವಣಾ ಬಾಂಡ್‌ ಯೋಜನೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ ನಡೆಸಿದ್ದಾರೆ. ಶ್ರೀ ಶ್ರೀ ವಿಶ್ವಗುರು ಮಹಾ ಪ್ರಭುಗಳೇ ಮನ್ ಕಿ ಬಾತ್ ನಿಂದ ಎಷ್ಟು ಹಣ ವಸೂಲಿ ಮಾಡಿದ್ದೀರಾ ಅಂತ ಹೇಳ್ತೀರಾ ಎಂದು ವ್ಯಂಗ್ಯವಾಡಿದ್ದಾರೆ. https://kannadanewsnow.com/kannada/stampede-at-mathuras-radha-rani-temple-during-pre-holi-event-several-devotees-injured/ ಚುನಾವಣಾ ಬಾಂಡ್‌ ಯೋಜನೆ ಕುರಿತು ಎರಡು ಮೀಮ್‌ಗಳ ಸಮೇತ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶ್ರೀ ಶ್ರೀ ಶ್ರೀ ವಿಶ್ವಗುರು.. ವಸೂಲಿಗುರು ಮಹಾಪ್ರಭುಗಳೇ.. ನಿಮ್ಮ ‘ಮನ್ ಕಿ ಬಾತ್‌’ ಕಾರ್ಯಕ್ರಮದಿಂದಾಗಿ ಯಾರಿಂದ ಎಷ್ಟು ವಸೂಲಿ ಮಾಡಿದ್ರಿ ಅಂತ ಹೇಳ್ತೀರಾ’ ಎಂದು ಲೇವಡಿ ಮಾಡಿದ್ದಾರೆ.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೋದಿ ಅವರು ದೇಣಿಗೆ ಪಡೆಯುತ್ತಿದ್ದಾರೋ ಅಥವಾ ದಂಧೆ ನಡೆಸುತ್ತಿದ್ದಾರೋ ಗೊತ್ತಿಲ್ಲ’ ಎಂದು ವ್ಯಂಗ್ಯಭರಿತ ಮೀಮ್‌ ಹಂಚಿಕೊಂಡಿದ್ದಾರೆ.ಖುದ್ದು 12,000 ಕೋಟಿ ತಿಂದು ನಮಗೆ ಎರಡು ರೂಪಾಯಿ ಕೊಡ್ತಿದ್ದಾನೆ ಪಾಪಿ ಎಂದು ಮತ್ತೊಂದು ವ್ಯಂಗ್ಯ ಚಿತ್ರವನ್ನು ಹಂಚಿಕೊಂಡಿದ್ದಾರೆ. https://kannadanewsnow.com/kannada/panipuri-takes-boys-life-in-davangere/ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದ್ದ ಚುನಾವಣಾ ಬಾಂಡ್‌ಗಳ ಕುರಿತಾದ ಹೊಸ ಮಾಹಿತಿಯನ್ನು ಚುನಾವಣಾ…

Read More

ಉತ್ತರಕನ್ನಡ : ಕೋಮುವಾದಿ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳನ್ನು ಸೋಲಿಸದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ. ಹಾಗಾಗಿ ದೇಶದಲ್ಲಿ ಸರ್ವಾಧಿಕಾರಿ ಧೋರಣೆ ತಡೆದು ಸಂವಿಧಾನವನ್ನು ಉಳಿಸಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದರು. https://kannadanewsnow.com/kannada/breaking-19-children-fall-ill-after-consuming-pani-puri-in-davangere-one-boy-dies/ ಹಿಂದೆ ಅಧಿಕಾರಕ್ಕೆ ಬಂದರೆ ಸ್ವಿಸ್ ಬ್ಯಾಂಕ್‌ನಿಂದ ಕಪ್ಪು ಹಣ ತರುತ್ತೇವೆ ಎಂದು ಜನರನ್ನ ಮರುಳು ಮಾಡಿದ್ದರು. ಅಧಿಕೃತ ಅಧಿಕಾರ ಉಪಯೋಗಿಸಿ ದರೋಡೆ ಮಾಡಿದ್ದರು. ನರೇಂದ್ರ ಮೋದಿ ಸರ್ಕಾರ ಹಿಟ್ಲರ್‌ಗಿಂತ ಕೆಟ್ಟ ಸರ್ಕಾರವಾಗಿದೆ. ಬಿಜೆಪಿಯ ಸರ್ವಾಧಿಕಾರಿ ಧೋರಣೆಯಿಂದ ಮುಂದೊಂದು ದಿನ ದೇಶದಲ್ಲಿ ಚುನಾವಣೆಯೂ ಮಾಯವಾಗುತ್ತದೆ. ಹೀಗಾಗಿ ಆಮ್‌ ಆದ್ಮಿ ಫಾರ್ಟಿ ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸಿದೆ ಎಂದರು. https://kannadanewsnow.com/kannada/breaking-boy-dies-of-electrocution-in-chikkaballapur/ ಸಂವಿಧಾನವನ್ನೇ ಬದಲಾಯಿಸುವ ಹೇಳಿಕೆ ನೀಡಿದ ಅನಂತ ಕುಮಾರ್ ಹೆಗಡೆ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಬಿಜೆಪಿಯ ನಿರ್ಧಾರವೂ ಸಂವಿಧಾನ ಬದಲಾವಣೆಯೇ ಆಗಿದೆ. ಮತ್ತೊಮ್ಮೆ ಹೆಗ್ಡೆಗೆ ಟಿಕೆಟ್ ನೀಡಿದರೆ ಬಿಜೆಪಿ ನಿರ್ಧಾರ ಖಚಿತವಾಗುತ್ತದೆ. ಇದೀಗ ರಾಮ, ಧರ್ಮದ…

Read More

ದಾವಣಗೆರೆ : ರಂಜಾನ್ ಹಬ್ಬದ ಪ್ರಯುಕ್ತವಾಗಿ ಮಕ್ಕಳು ಈ ಸಂದರ್ಭದಲ್ಲಿ ಪಾನಿಪುರಿ ಸೇವಿಸಿ 19 ಮಕ್ಕಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಪಾನಿ ಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಬೆನ್ನೂರಿನ ಹಾಜರತ್ ಬಿಲಾಲ್ ಪುತ್ರ ಇರ್ಫಾನ್ (6) ಎನ್ನುವ ಬಾಲಕ ಸಾವನ್ನಪ್ಪಿದ್ದಾನೆ. ಮಾರ್ಚ್ 15 ರಂದು ಮಲೆಬೆನ್ನೂರಿನಲ್ಲಿ ಈ ಘಟನೆ ನಡೆದಿತ್ತು ಎಂದು ಹೇಳಲಾಗುತ್ತಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿತ್ತು.ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಮಕ್ಕಳು ಉಪವಾಸ ಇದ್ದರೂ ಎಂದು ಹೇಳಲಾಗುತ್ತಿದೆ. ಈ ವೇಳೆ ನಂತರ ಜಾಮಿಯಾ ಮಸೀದಿ ಬಳಿ ಮಕ್ಕಳು ಪಾನಿಪುರಿಯನ್ನು ಸೇವಿಸಿದ್ದರು. ನಂತರ ವಾಂತಿ ಭೇದಿ ಹೊಟ್ಟೆ ನೋವಿನಿಂದ 19 ಮಕ್ಕಳು ಆಸ್ಪತ್ರೆ ಸೇರಿದ್ದರು.ಈ ಬಗ್ಗೆ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಇಂದು ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದಾನೆ ಎಂದು…

Read More

ಚಿಕ್ಕಬಳ್ಳಾಪುರ : ಮೇಕೆಗಳಿಗೆಂದು ಮರದ ರೆಂಬೆ ಕಡಿಯುವಾಗ ವಿದ್ಯುತ್ ತಂತಿ ತಗುಲಿ 12 ವರ್ಷದ ಬಾಲಕ ಧಾರಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/bjp-returns-to-power-at-centre-modiji-will-become-pm-again-by-vijayendra/ ದಿಬ್ಬೂರುಹಳ್ಳಿ ಮೂಲದ ಬಾಲಕ ದೇವಪ್ಪ(12) ಮೃತ ರ್ದುದೈವಿ ಎಂದು ಹೇಳಲಾಗುತ್ತಿದೆ. ಮೇಕೆಗಳಿಗಾಗಿ ಮರವೇರಿ ರೆಂಬೆ ಕಡಿಯುವಾಗ ಈ ದುರಂತ ನಡೆದಿದೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More

ಅಫ್ಘಾನಿಸ್ತಾನ : ಅಫ್ಘಾನಿಸ್ತಾನದ ಹೆಲ್ಮಂಡ್ ಪ್ರಾಂತ್ಯದ ಗೆರಾಶ್ಕ್ ಜಿಲ್ಲೆಯಲ್ಲಿ ತೈಲ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು 38 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಂದಹಾರ್-ಹೆರಾತ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತವು ಹೆರಾತ್ ನಗರದಿಂದ ರಾಜಧಾನಿ ಕಾಬೂಲ್‌ಗೆ ಪ್ರಯಾಣಿಸುತ್ತಿದ್ದ ಮೋಟಾರ್‌ಸೈಕಲ್, ಇಂಧನ ಟ್ರಕ್ ಮತ್ತು ಬಸ್ ಅನ್ನು ಒಳಗೊಂಡಿತ್ತು ಎಂದು ಹೆಲ್ಮಂಡ್‌ನ ಪ್ರಾಂತೀಯ ಸರ್ಕಾರದ ಮಾಹಿತಿ ವಿಭಾಗದ ಮುಖ್ಯಸ್ಥ ಶೇರ್ ಮೊಹಮ್ಮದ್ ವಹ್ದತ್ ಹೇಳಿದ್ದಾರೆ. ಮೋಟಾರು ಸೈಕಲ್‌ಗೆ ಡಿಕ್ಕಿ ಹೊಡೆದ ನಂತರ ಬಸ್ ಚಾಲಕನ ನಿಯಂತ್ರಣ ತಪ್ಪಿ ದಕ್ಷಿಣದ ನಗರವಾದ ಕಂದಹಾರ್‌ನಿಂದ ಹೆರಾತ್‌ಗೆ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ತೈಲ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ.

Read More