Author: kannadanewsnow05

ಉತ್ತರಕನ್ನಡ : ಗೇಟ್ ನಿಂದ ಸಿಐಎಸ್ಎಫ್ ಹೆಡ್ ಕಾನ್ಸ್ಟೇಬಲ್ ಜಗದಾಳೆ (52) ಸಾವನ್ನಪ್ಪಿರುವ ಘಟನೆ ಕೈಗಾ ಅಣು ವಿದ್ಯುತ್ ಸ್ಥಾವರ ಘಟಕದಲ್ಲಿ ನಡೆದಿದೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ನಿನ್ನೆ ರಾತ್ರಿ ಜಗದಾಳೆ ಕರ್ತವ ನಿರತದಲ್ಲಿ ಇದ್ದಾಗ ಗೇಟ್ ಕೆಳಗೆ ಬಿದ್ದಿದೆ. ಈ ವೇಳೆ ತಲೆಗೆ ಬಲವಾಗಿ ಬಿಟ್ಟು ಬಿದ್ದಿದ್ದರಿಂದ ಜಗದಾಳೆ, ಸ್ಥಳದಲ್ಲೇ ಸಾವನಪ್ಪಿದ್ದಾರೆ ಸಿಐಎಸ್ಎಫ್ ಹೆಡ್ ಕಾನ್ಸ್ಟೇಬಲ್ ಜಗದಾಳೆ, ಕೈಗಾದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.a

Read More

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸಂಸದ ರಾಜಶೇಖರ ಹಿಟ್ನಾಳ ದೆಹಲಿಯಲ್ಲಿ ಔತಣಕೂಟ ಏರ್ಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರುಗಳಿಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಹೌದು ನವೆಂಬರ್ ಕ್ರಾಂತಿ ಚರ್ಚೆ ಮಧ್ಯ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದು ಕಾಂಗ್ರೆಸ್ ಮನೆಯಲ್ಲಿ ದೆಹಲಿ ದಂಡಯಾತ್ರೆ ಜೋರಾಗಿದೆ. ನವೆಂಬರ್ 15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ ಹೈಕಮಾಂಡ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಆಗಲಿದ್ದಾರೆ. ಸಿಎಂ ಬದಲಾವಣೆ ಮತ್ತು ಸಂಪುಟ ಪುನಾರಚನ ಸೇರಿ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ದೆಹಲಿ ಪ್ರವಾಸದ ವೇಳೆ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ನವೆಂಬರ್ 16ರಂದು ರಾಜಶೇಖರ್ ಹಿಟ್ನಾಳ ಮನೆಯಲ್ಲಿ ಡಿನ್ನರ್ ಸಭೆ ಇದ್ದು ಆಪ್ತನ ಮನೆಯಲ್ಲಿ ಡಿನ್ನರ್ ಮೀಟಿಂಗ್ ಆಯೋಜನೆ ಮಾಡಲಾಗಿದೆ. ನವೆಂಬರ್ 16ರಂದು ರಾಜಶೇಖರ್ ಮನೆಯಲ್ಲಿ ಡಿನ್ನರ್ ಸಭೆ…

Read More

ದಕ್ಷಿಣಭಾರತದ ಖ್ಯಾತ ನಟಿ ಅನುಪಮಾ ಪರಮೇಶ್ವರನ್​​ಗೆ ಸಾಮಾಜಿಕ ಜಾಲತಾಣದಲ್ಲಿ 20 ವರ್ಷದ ಯುವತಿ ಒಬ್ಬಳು ಕಿರುಕುಳ ನೀಡಿದ್ದಾಳೆ ಈ ವಿಚಾರವಾಗಿ ಸಂಬಂಧಪಟ್ಟಂತೆ ಅನುಪಮಾ ಪರಮೇಶ್ವರಂ ಅವರು ಸೈಬರ್ ಠಾಣೆಗೆ ದೂರು ನೀಡಿದ್ದು ಕಿರುಕುಳ ನೀಡಿದ 20 ವರ್ಷದ ಯುವತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಹೌದು ನಟಿಯ ಫೋಟೋವನ್ನು ಆಕ್ಷೇಪಾರ್ಹ ರೀತಿಯಲ್ಲಿ ಎಡಿಟ್ ಮಾಡಿ, ಸುಳ್ಳು ಮಾಹಿತಿ ಹಬ್ಬಿಸಲಾಗಿದೆ. ವಿಪರ್ಯಾಸ ಏನೆಂದರೆ, ಈ ಕೃತ್ಯ ಎಸಗಿರುವುದು ಕೂಡ ಓರ್ವ ಯುವತಿ! ಆ ಯುವತಿಯ ವಯಸ್ಸು ಕೇವಲ 20 ವರ್ಷ. ಈ ಬಗ್ಗೆ ಅನುಪಮಾ ಪರಮೇಶ್ವರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಒಂದು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ನನ್ನ ಆಕ್ಷೇಪಾರ್ಹ ಫೋಟೋ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿರುವುದು ತಿಳಿದುಬಂತು. ನನ್ನ ಪರಿಚಯದವರನ್ನು ಮತ್ತು ಕುಟುಂಬದವರನ್ನು ಟ್ಯಾಗ್ ಮಾಡಲಾಗುತ್ತಿತ್ತು. ಈ ರೀತಿ ಟಾರ್ಗೆಟ್ ಮಾಡಿ ಕಿರುಕುಳು ನೀಡಿದ್ದರಿಂದ ನನಗೆ ನಿಜಕ್ಕೂ ತೀವ್ರ ನೋವಾಗಿದೆ’ ಎಂದು ಅನುಪಮಾ ಪರಮೇಶ್ವರನ್ ಅವರು ಹೇಳಿದ್ದಾರೆ. ನನಗೆ ಆಶ್ಚರ್ಯ…

Read More

ಕೊಡಗು : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18 ಸಾವಿರ ಶಿಕ್ಷಕರ‌ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕೊಡಗಿನ ಸೋಮವಾರ ಪೇಟೆ ಬಳಿಯ ಬೇಳೂರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಯನ್ನು ಬಲಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದೆ. ಆ ನಿಟ್ಟಿನಲ್ಲಿ ಪೂರ್ವ ಕಿರಿಯ ಪ್ರಾಥಮಿಕ ಆರಂಭಿಸಲಾಗಿದೆ ಎಂದು ಸಚಿವರು ತಿಳಿಸಿದರು. ರಾಜ್ಯದಲ್ಲಿ 46 ಸಾವಿರ ಸರ್ಕಾರಿ ಶಾಲೆಗಳು, 57 ಸಾವಿರ ಅನುದಾನಿತ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಎಲ್‌ಕೆಜಿ ಯಿಂದ 12ನೇ ತರಗತಿ ವರೆಗೆ ಸುಮಾರು 1.16 ಕೋಟಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ರಾಷ್ಟ್ರದ ಬೆಳವಣಿಗೆಗೆ ಶಿಕ್ಷಣದಿಂದ ಮಾತ್ರ ಸಾಧ್ಯ, ಆ ದಿಸೆಯಲ್ಲಿ ಸರ್ಕಾರ ಹಲವು ಸಮಸ್ಯೆಗಳ ನಡುವೆಯೂ ಅಗತ್ಯ ಮೂಲಸೌಕರ್ಯ ಹಾಗೂ ಗುಣಮಟ್ಟದ…

Read More

ಬೆಂಗಳೂರು : ಮೈಸೂರು ಜಿಲ್ಲೆಯ ಸರಗೂರು ತಾಲೂಕಿನಲ್ಲಿ ಪದೇ ಪದೆ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆ ಹಿಡಿದಿರುವುದಾಗಿ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಸಚಿವರು ಹೇಳಿದ್ದಾರೆ. ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಈ ಹುಲಿಯ ಡಿಎನ್​​ಎ ಎರಡನ್ನೂ ಪರಿಶೀಲಿಸಿ, ಸೆರೆ ಹಿಡಿಯಲಾದ ಹುಲಿ ಹೆಡಿಯಾಲ, ಮೊಳೆಯೂರು, ನುಗು ಸುತ್ತಮುತ್ತ ಜನರ ಅಮೂಲ್ಯ ಜೀವ ಹಾನಿ ಮಾಡಿದ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ತಪ್ಪು ಮಾಡಿದರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು . ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಭಯೋತ್ಪಾದಕರಿಗೆ ಮೊಬೈಲ್ ನೀಡಲಾಗಿದ್ದು, ಅಲ್ಲದೆ ಇಂದು ಸಹ ಮತ್ತೊಂದು ವಿಡಿಯೋ ವೈರಲಾಗಿದ್ದು ಕೈದಿಗಳು ಮಧ್ಯ ಸೇವಿಸಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆ ರೀತಿ ಯಾರು ಮಾಡಿದ್ದಾರೋ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಅಲ್ಲದೇ ಅವಕಾಶ ಮಾಡಿಕೊಟ್ಟವರೆ ವಿರುದ್ಧವು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Read More

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ಮತ್ತೊಮ್ಮೆ ಬಯಲಾಗಿದ್ದು ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಭಯೋತ್ಪಾದಕರು ಸೇರಿದಂತೆ ಹಲವು ಕೈದಿಗಳ ಕೈಯಲ್ಲಿ ಮೊಬೈಲ್ ಕಂಡುಬಂದಿದ್ದು ಈ ಒಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ ಇದಕ್ಕೆ ಯಾರು ಹೊಣೆಗಾರರಾಗಿದ್ದಾರೆ. ಅಂಥವರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಇವಂದು ಘಟನೆಗಳು ಮಂಗಳೂರು ಬೆಳಗಾವ್ ಸೇರಿದಂತೆ ಬಹಳ ಕಡೆ ಆದ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇಪದೇ ಆಗಿದ್ದು ಕೇಳಿಬಂದಿದ್ದು ಇದೇ ಕೂಡ ಇದೇ ರೀತಿಯಾದಾಗ ಕೆಲವರನ್ನು ಸಸ್ಪೆಂಡ್ ಮಾಡಲಾಗಿತ್ತು. ಎಡಿಜಿಪಿ ಬಿ ದಯಾನಂದ ಜೊತೆಗೆ ನಾನು ಮಾತನಾಡಿದ್ದೇನೆ ಯಾರು ಹೊಣೆಗಾರರಾಗಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೂಪರಿಟೆಂಡೆಂಟ್ ಮತ್ತು ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕೂಡಲೇ ವರದಿ…

Read More

ಬೆಂಗಳೂರು : ಯೋಗ ಗುರು ನಿರಂಜನ ಮೂರ್ತಿಯಿಂದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿ ಪೊಲೀಸ್ ಬೆಂಗಳೂರಿನ ಆರ್ ಆರ್ ನಗರ ಠಾಣೆ ಪೊಲೀಸ್ರು ವಿಶೇಷ ಕೋರ್ಟಿಗೆ ಚಾರ್ಜ ಶೀಟ್ ಸಲ್ಲಿಸಿದ್ದಾರೆ. ಯೋಗ ಕಲಿಯಲು ಬಂದಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ವೇಳೆ ವಿದ್ಯಾರ್ಥಿನಿಗೆ ಅತ್ಯಾಚಾರ ಎಸಗಿರುವ ಸಾಕ್ಷಿ ಲಭ್ಯವಾಗಿದ್ದು ಕೆಲ ವಿಡಿಯೋ ಹಾಗೂ ಫೋಟೋಗಳು ಕೂಡ ಲಭ್ಯವಾಗಿವೆ. FSL ಒಂದು ವರದಿ ಮಾತ್ರ ಬರುವುದು ಬಾಕಿ ಇದೆ. ಹಲವು ಮಹಿಳೆಯರಿಗೆ ಯೋಗ ಗುರು ಅತ್ಯಾಚಾರ ಬಗ್ಗೆ ಆರೋಪ ಸಹ ಕೇಳಿಬಂದಿತ್ತು. ತನಿಖೆಯ ವೇಳೆ ಆರ್ ಆರ್ ನಗರ ಠಾಣೆ ಪೋಲಿಸರು ಮಾಹಿತಿ ಕಲೆ ಹಾಕಿದ್ದರು. ಮೊಬೈಲ್ ಪರಿಶೀಲನೆ ವೇಳೆ ಮಹಿಳೆಯರ ಜೊತೆ ಯೋಗ ಗುರುಗೆ ಸಂಪರ್ಕ ಇರುವುದು ದೃಢವಾಗಿದೆ. ಹಲೋ ಮಹಿಳೆಯರ ಜೊತೆ ಲೈಂಗಿಕ ಸಂಪರ್ಕ ಮಾಡಿದ್ದು ಕೂಡ ಪತ್ತೆಯಾಗಿದೆ. ಆದರೆ ವಿದ್ಯಾರ್ಥಿನಿ ಹೊರತುಪಡಿಸಿ ಬೇರೆ…

Read More

ಬೆಂಗಳೂರು : ನಿನ್ನೆ ತಾನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಭಯೋತ್ಪಾದಕರು ಮೊಬೈಲ್ ನಲ್ಲಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಅದರ ಬೆನ್ನಲ್ಲೇ ಇದೀಗ ಮತ್ತೊಂದು ಜೈಲಿನ ಕರ್ಮಕಾಂಡ ಬಯಲಾಗಿದ್ದು, ಜೈಲಿನಲ್ಲಿ ಮದ್ಯ ಸೇವಿಸಿ ಕೈದಿಗಳ ಭರ್ಜರಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಹೌದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಧ್ಯ ಕುಡಿದು ಕೈದಿಗಳು ಭರ್ಜರಿ ಡ್ಯಾನ್ಸ್ ಹಾಕಿದ್ದಾರೆ ಜೈಲಿನಲ್ಲಿ ಡ್ಯಾನ್ಸ್ ಮಾಡುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ನಾನ್ ವೆಜ್ ಎಣ್ಣೆ ಫುಲ್ ಮೋಜು ಮಸ್ತಿ ಮಾಡುತ್ತಿರುವ ವಿಡಿಯೋ ಆಗಿದೆ ಡ್ರಮ್ ಮತ್ತು ತಟ್ಟೆಗಳೇ ಕೈದಿಗಳಿಗೆ ಮ್ಯೂಸಿಕ್ ಬ್ಯಾಂಡ್ ಗಳಾಗಿವೆ. ವಿಡಿಯೋ ಯಾರೂ ವೈರಲ್ ಮಾಡಿದರು ಹೇಗೆ ವೈರಲ್ ಆಯ್ತು ಎನ್ನುವುದರ ಕುರಿತು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ. ಇನ್ನು ಜೈಲಿನ ವೈರಲ್ ವಿಡಿಯೋ ಬಗ್ಗೆ ಪೊಲೀಸರು ತನಿಖೆ ನಡೆಸುತಿದ್ದಾರೆ ವೈರಲ್ ಆಗಿರುವ ವಿಡಿಯೋ ಪರಪ್ಪನ ಅಗ್ರಹಾರ ಜೈಲಿನದ್ದ ಅಥವಾ ಯಾವ ಜೈಲಿನದ್ದು ಎಂದು…

Read More

ಮೈಸೂರು : ಮೈಸೂರಿನ ಶಾಲೆಯಲ್ಲಿ ಬಾಲಕರಿಂದ ರ್‍ಯಾಗಿಂಗ್ ನಡೆಸಿರುವ ಘಟನೆ ವರದಿಯಾಗಿದ್ದು, 13 ವರ್ಷದ ಬಾಲಕನ ಮೇಲೆ ಮೂವರಿಂದ ಹಾಲೆ ನಡೆದಿದ್ದು, ಬಾಲಕನ ಮರ್ಮಾಂಗಕ್ಕೆ ಮೂವರು ಬಾಲಕರು ಒದ್ದಿದ್ದಾರೆ ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಹಲ್ಲೆಯಿಂದ ಬಾಲಕನ ಮರ್ಮಾಂಗಕ್ಕೆ ಗಂಭೀರವಾದ ಗಾಯಗಳಾಗಿವೆ. ಎಂಟನೇ ತರಗತಿಗೆ ಬಾಲಕ ಕ್ಲಾಸ ಲೀಡರ್ ಆಗಿದ್ದ ಪ್ರತಿನಿತ್ಯ ಹಣ ಕೊಡು ಮೊಬೈಲ್ ತೆಗೆದುಕೊಂಡು ಬಾ, ನಾವು ಹೇಳಿದ ಹಾಗೆ ಕೇಳು ಮಾಡು ಎಂದು ಮೂರು ಬಾಲಕರು ನಡೆಸಿದ್ದಾರೆ ಅಕ್ಟೋಬರ್ 25ರಂದು ಬಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಶೌಚಾಲಯದಲ್ಲಿ ಬಾಲಕನ ಮರುಮಾಂಗಕ್ಕೆ ಒದಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಬಾಲಕನ ಸ್ಥಿತಿ ಕಂಡು ಪೋಷಕರು ಕಂಗಾಲಾಗಿದ್ದಾರೆ. ಈ ವಿಚಾರವಾಗಿ ಬಾಲಕ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕನ್ನಡ ರಾಜ್ಯೋತ್ಸವ ಹಿನ್ನೆಲೆ ಪ್ರಾಕ್ಟೀಸ್ ಮಾಡುವಾಗ ನಾನು ಶೌಚಾಲಯಕ್ಕೆ ಹೋದೆ ಶೌಚಾಲಯದಲ್ಲಿ ಶಿಕ್ಷಕರಿಗೆ ನಮ್ಮ ಬಗ್ಗೆ ಕಂಪ್ಲೀಟ್ ಮಾಡುತ್ತೀಯಾ ಅಂತ ಹೇಳಿ ಒದಿದ್ದಾರೆ. ಶಿಕ್ಷಕರಿಗೆ ನಮ್ಮ ತಾಯಿ…

Read More