Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಚಿಕ್ಕಬಳ್ಳಾಪುರ : ಪ್ರೀಯತಮೆಯ ಕಿರುಕುಳಕ್ಕೆ ಬೇಸತ್ತು ವಿವಾಹಿತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಬಾಪೂಜಿನಗರದಲ್ಲಿ ಬಾಲಾಜಿ ಸಿಂಗ್ (30) ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಮಂಡೆ ಪಟ್ಟಣದಲ್ಲಿರುವ ಬಾಪೂಜಿನಗರದಲ್ಲಿ ಈ ಒಂದು ಘಟನೆ ನಡೆದಿದೆ. ಪ್ರಿಯತಮೆ ಕಿರುಕುಳಕ್ಕೆ ನೊಂದ ಬಾಲಾಜಿ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದು ಪತ್ನಿ ಮತ್ತು ಮಕ್ಕಳಿದ್ದರೂ ಯುವತಿಯೊಂದಿಗೆ ಅಕ್ರಮ ಸಂಬಂಧ ಆರೋಪ ಕೇಳಿ ಬಂದಿದೆ. ಈ ವೇಳೆ ಬುದ್ಧಿವಾದ ಹೇಳಿ ಮಹಿಳೆಯಿಂದ ಸಂಬಂಧಿಕರು ದೂರ ಇರಿಸಿದ್ದರು. ಆದರೂ ಬಾಲಾಜಿಯಿಂದ ಮಹಿಳೆ ದೂರ ಇರಲಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಪತ್ನಿಯ ಮನೆಯಲ್ಲಿ ಬಾಲಾಜಿ ಸಿಂಗ್ ನೇಣು ಬಿಗಿದುಕೊಂಡು ಬಾಲಾಜಿ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಸಂಭಂದ ಗುಡಿಬಂಡೆ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ನವದೆಹಲಿ : ಬೆಂಗಳೂರಿನ ಶ್ರೀನಿವಾಸಪುರದ ಬಳಿ ಇರುವ ಕೋಗಿಲು ಕ್ರಾಸ್ ಬಳಿ ಅಕ್ರಮವಾಗಿ ಒತ್ತುವರಿ ಮಾಡಿದ ಮನೆಗಳನ್ನು ತೆರವು ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಟೀಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮನೆಗಳನ್ನು ತೆರವು ಮಾಡುವ ವೇಳೆ ಕಾನೂನಿನ ಪಾಲಿಸಲಾಗಿದ್ದು, ಸಂತ್ರಸ್ತರಿಗೆ ಬೇರೆ ವಸತಿ ವ್ಯವಸ್ಥೆ ಕಲ್ಪಿಸುವಂತೆ ಜಿಬಿಎ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ನವದೆಹಲಿಯಲ್ಲಿ ಮಾತನಾಡದ ಅವರು, 2020-2021 ರಿಂದ ಅನಧಿಕೃತವಾಗಿ ಅಲ್ಲಿ ವಾಸಿಸಿದ್ದರು. ಅನಧಿಕೃತ ಮನೆಗಳಿಗೆ ನೋಟಿಸ್ ಸಹ ಕೊಡಲಾಗಿತ್ತು ನೋಟಿಸ್ ಕೊಟ್ಟರು ಸಹ ಅವರು ಕೇಳಿರಲಿಲ್ಲ. ಹಾಗಾಗಿ ಮನೆಗಳನ್ನು ತೆರವು ಮಾಡಲಾಗಿದೆ. ಒತ್ತುವರಿ ತೆರವು ವೇಳೆ ಕಾನೂನು ನಿಯಮ ಪಾಲಿಸಿದ್ದೇವೆ. ಅವರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡುವಂತೆ ಜಿಬಿಎ ಕಮಿಷನರ್ ಜೊತೆಗೆ ಮಾತನಾಡಿದ್ದೇನೆ ಎಂದು ಅವರು ತಿಳಿಸಿದರು. ಜನವರಿ 5 ರಿಂದ ದೇಶಾದ್ಯಂತ ಮನ್ ರೇಗಾ ಬಚಾವೋ ಆಂದೋಲನ ಕಾರ್ಯಕ್ರಮ ಹಿನ್ನೆಲೆ ಮನ್ ರೇಗಾ ಯೋಜನೆಗೆ ‘ವಿಬಿಜಿ ರಾಮಜಿ’ ಎಂದು ಬಿಜೆಪಿಯ ನೇತೃತ್ವದ…
ಹೈದರಾಬಾದ್ : ಪುಷ್ಪ 2 ದಿ ರೂಲ್ ಚಿತ್ರದ ಪ್ರಥಮ ಪ್ರದರ್ಶನಕ್ಕೆ ಸಂಬಂಧಿಸಿದ ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದು, ಆರೋಪಿಗಳಲ್ಲಿ ನಟ ಅಲ್ಲು ಅರ್ಜುನ್ ಹೆಸರಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಆರೋಪಪಟ್ಟಿಯಲ್ಲಿ ಅವರ ಮ್ಯಾನೇಜರ್ ಹೆಸರನ್ನೂ ಹೆಸರಿಸಲಾಗಿದೆ. ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು 11 ನೇ ಆರೋಪಿಯಾಗಿ ಪಟ್ಟಿ ಮಾಡಲಾಗಿದೆ. ಇದಕ್ಕೂ ಮೊದಲು, ಪೊಲೀಸರು ಚಿತ್ರಮಂದಿರದ ಆಡಳಿತ ಮಂಡಳಿ, ನಟ ಮತ್ತು ಅವರ ತಂಡದ ಸದಸ್ಯರ ವಿರುದ್ಧ ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ ಸೇರಿದಂತೆ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವು ಪ್ರೀಮಿಯರ್ ಶೋ ಸಮಯದಲ್ಲಿ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿ, ಆಕೆಯ ಮಗನಿಗೆ ಗಂಭೀರ ಗಾಯಗಳಾಗಿದ್ದವು. ಡಿಸೆಂಬರ್ 13, 2024 ರಂದು ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಯಿತು ಮತ್ತು ನಾಂಪಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಅವರನ್ನು 1 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತು. ನಂತರ ಅವರು ತೆಲಂಗಾಣ ಹೈಕೋರ್ಟ್ ಅನ್ನು ಸಂಪರ್ಕಿಸಿದರು,…
ಬೆಂಗಳೂರು : ಅಶ್ಲೀಲ ಕಮೆಂಟ್ ಬಗ್ಗೆ ವಿಜಯಲಕ್ಷ್ಮಿ ದೂರು ನೀಡಿದ ವಿಚಾರವಾಗಿ ಬೆಂಗಳೂರಿನಲ್ಲಿ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ನಾನು ಜಗಳ ಮಾಡುವುದಕ್ಕೆ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ ಎಲ್ಲರನ್ನೂ ನಗಿಸಲು ಮತ್ತು ಮನರಂಜಿಸಲು ಚಿತ್ರರಂಗಕ್ಕೆ ಬಂದಿದ್ದೇನೆ. ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ ಅದೇ ಪಕ್ಕದ ಮನೆಯವರು ಹೊಡೆಯುವುದೇ ಬೇರೆಯಾಗುತ್ತದೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಪರೋಕ್ಷವಾಗಿ ಟಾಂಗ್ ನೀಡಿದರು ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಯುದ್ಧ ಅಂತ ಬಂದಾಗ ನನ್ನ ವಿಚಾರ ಬಗ್ಗೆ ನಾನು ಮಾತನಾಡುತ್ತೇನೆ. ಕನ್ನಡ ಚಿತ್ರರಂಗದಲ್ಲಿ ಎಲ್ಲರೂ ಚೆನ್ನಾಗಿದ್ದೇವೆ ನನ್ನಲ್ಲಿರುವ ಹುಡುಗರು ಸರಿ ಇಲ್ಲ ಅಂದರೆ ಸರಿಪಡಿಸಿಕೊಳ್ಳೋಣ. ನನಗೆ ಹೊಡೆದರೆ ಕಪಾಳಕ್ಕೆ ಹೊರಡಿಸಿಕೊಳ್ಳುವಷ್ಟು ನಾನು ಒಳ್ಳೆಯವನಲ್ಲ ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ ಅದೇ ಪಕ್ಕದ ಮನೆಯವರು ಹೊಡೆಯುವುದೇ ಬೇರೆಯಾಗುತ್ತದೆ ಎಂದು ನಟ ಕಿಚ್ಚ ಸುದೀಪ್ ಪರೋಕ್ಷವಾಗಿ ವಿಜಯಲಕ್ಷ್ಮಿ ಅವರಿಗೆ ಟಾಂಗ್ ನೀಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಶುರುವಾಗಿದ್ದು ಡೆವಿಲ್ ಸಿನಿಮಾ ರಿಲೀಸ್…
ಬೆಂಗಳೂರು : ಅಶ್ಲೀಲ ಕಮೆಂಟ್ ಬಗ್ಗೆ ವಿಜಯಲಕ್ಷ್ಮಿ ದೂರು ನೀಡಿದ ವಿಚಾರವಾಗಿ ಬೆಂಗಳೂರಿನಲ್ಲಿ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ನಾನು ಜಗಳ ಮಾಡುವುದಕ್ಕೆ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ. ಎಲ್ಲರನ್ನೂ ನಗಿಸಲು ಮತ್ತು ಮನರಂಜಿಸಲು ಚಿತ್ರರಂಗಕ್ಕೆ ಬಂದಿದ್ದೇನೆ. ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ ಅದೇ ಪಕ್ಕದ ಮನೆಯವರು ಹೊಡೆಯುವುದೇ ಬೇರೆಯಾಗುತ್ತದೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಪರೋಕ್ಷವಾಗಿ ಟಾಂಗ್ ನೀಡಿದರು ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಯುದ್ಧ ಅಂತ ಬಂದಾಗ ನನ್ನ ವಿಚಾರ ಬಗ್ಗೆ ನಾನು ಮಾತನಾಡುತ್ತೇನೆ. ಕನ್ನಡ ಚಿತ್ರರಂಗದಲ್ಲಿ ಎಲ್ಲರೂ ಚೆನ್ನಾಗಿದ್ದೇವೆ ನನ್ನಲ್ಲಿರುವ ಹುಡುಗರು ಸರಿ ಇಲ್ಲ ಅಂದರೆ ಸರಿಪಡಿಸಿಕೊಳ್ಳೋಣ. ನನಗೆ ಹೊಡೆದರೆ ಕಪಾಳಕ್ಕೆ ಹೊರಡಿಸಿಕೊಳ್ಳುವಷ್ಟು ನಾನು ಒಳ್ಳೆಯವನಲ್ಲ ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ ಅದೇ ಪಕ್ಕದ ಮನೆಯವರು ಹೊಡೆಯುವುದೇ ಬೇರೆಯಾಗುತ್ತದೆ ಎಂದು ನಟ ಕಿಚ್ಚ ಸುದೀಪ್ ಪರೋಕ್ಷವಾಗಿ ವಿಜಯಲಕ್ಷ್ಮಿ ಅವರಿಗೆ ಟಾಂಗ್ ನೀಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಶುರುವಾಗಿದ್ದು ಡೆವಿಲ್ ಸಿನಿಮಾ ರಿಲೀಸ್…
ಬೆಂಗಳೂರು : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31 ರಂದು ಸಿಎಲ್ 5 ಲೈಸೆನ್ಸ್ ದಾರರಿಗೆ ಮದ್ಯ ಮಾರಾಟಕ್ಕೆ ಸಮಯ ನಿಗದಿಪಡಿಸಲಾಗಿದೆ. ಬೆಳಿಗ್ಗೆ 6 ರಿಂದ ಮಧ್ಯರಾತ್ರಿ ಒಂದರವರೆಗೆ ಮಧ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಬೆಂಗಳೂರು ಪೊಲೀಸ್ ಕಮಿಷನರ್ ಶ್ರೀಮಂತ್ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. CL 5 ತಾತ್ಕಾಲಿಕವಾಗಿ ಅಬಕಾರಿ ಇಲಾಖೆ ನೀಡುವ ಲೈಸನ್ಸ್ ಆಗಿದ್ದು 24 ಗಂಟೆಗಳ ಕಾಲ ಅಷ್ಟೇ ಸಿಎಲ್ 5 ಲೈಸೆನ್ಸ್ ಗೆ ಮಾನ್ಯತೆ ಇರುತ್ತದೆ ಹೊಸ ವರ್ಷದಂದು 24 ಗಂಟೆ ಮಧ್ಯ ಮಾರಾಟಕ್ಕೆ ಅವಕಾಶ ಇಲ್ಲ ಖಾಸಗಿ ಪಾರ್ಟಿ ಮಾಡಲು ಸಿ ಎಲ್ 5 ಲೈಸೆನ್ಸ್ ಪಡೆದುಕೊಳ್ಳಲಾಗುತ್ತದೆ.
ಬೆಂಗಳೂರು : ಇತ್ತೀಚಿಗೆ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಬಾರಿ ವೈರಲ್ ಆಗಿತ್ತು. ಅದರ ಬೆನ್ನಲ್ಲೆ ಅಲರ್ಟ್ ಆದ ಆರೋಗ್ಯ ಇಲಾಖೆ ಮೊಟ್ಟೆ ಟೆಸ್ಟ್ ಮಾಡಲು ಮುಂದಾಗಿದ್ದು, ಸಚಿವ ದಿನೇಶ್ ಗುಂಡೂರಾವ್ ವಿವಿಧ ಮಾದರಿ ಮೊಟ್ಟೆ ಟೆಸ್ಟ್ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಮೊಟ್ಟೆ ಸ್ಯಾಂಪಲ್ ರಿಪೋರ್ಟ್ ಬಹಿರಂಗ ಆಗಿದ್ದು ವರದಿಯಲ್ಲಿ ಮೊಟ್ಟೆ ಸೇವನೆ ಸುರಕ್ಷಿತ ಎಂದು ತಿಳಿದುಬಂದಿದೆ. 27 ಮೊಟ್ಟೆಗಳ ಸ್ಯಾಂಪಲ್ ಟೆಸ್ಟಿಗೆ ಆರೋಗ್ಯ ಇಲಾಖೆ ಒಳಪಡಿಸಿತ್ತು. ಇದೀಗ ವರದಿಯಲ್ಲಿ ಮೊಟ್ಟೆ ಸೇವನೆ ಸುರಕ್ಷಿತ ಎಂದು ವರದಿ ಬಂದಿದೆ. ಸುಮಾರು 60 ಆಯಾಮಗಳಲ್ಲಿ ಮೊಟ್ಟೆ ಟೆಸ್ಟ್ ಮಾಡಲಾಗಿತ್ತು. ಸ್ಯಾಂಪಲ್ ಸಂಗ್ರಹಿಸಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಟೆಸ್ಟ್ ನಡೆಸಿತ್ತು. ಬೆಂಗಳೂರು ಸೇರಿ ರಾಜ್ಯಾದ್ಯಂತ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿತ್ತು. ರಾಜ್ಯದಲ್ಲಿ 200 ಕ್ಕೂ ಹೆಚ್ಚು ಮೊಟ್ಟೆಗಳ ಸ್ಯಾಂಪಲ್ ಸಂಗ್ರಹಿಸಿದ್ದರು ರಾಜಧಾನಿ ಬೆಂಗಳೂರಿನಲ್ಲಿ 50 ಸ್ಯಾಂಪಲ್ ಕಲೆಕ್ಟ್ ಮಾಡಿದರು. ಇದರಲ್ಲಿ ಇಲಾಖೆಯ…
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಶುರುವಾಗಿದ್ದು ಡೆವಿಲ್ ಸಿನಿಮಾ ರಿಲೀಸ್ ಬಳಿ ಹಲವು ಕಿಡಿಗೇಡಿಗಳು ನಟ ಕಿಚ್ಚ ಸುದೀಪ್ ಹಾಗೂ ಅವರ ಮಗಳ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಿ ಕೆಟ್ಟದಾಗಿ ಕಮೆಂಟ್ ಹಾಕಿದರು ಈ ವಿಚಾರವಾಗಿ ಕಿಚ್ಚ ಸುದೀಪ್ ಇದೀಗ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು ಕೆಟ್ಟ ಹಾಕುವವರು ವೇಸ್ಟ್ ನನ್ನ ಮಕ್ಕಳು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ ನನ್ನ ಮಗಳು ನನಗಿಂತ ದೊಡ್ಡದಾಗಿ ಬೆಳೆಯುತ್ತಾಳೆ ಎಂದು ಕಿಡಿ ಕಾರಿದ್ದಾರೆ. ನಟ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಬಗ್ಗೆ ಕೆಟ್ಟ ಕಮೆಂಟ್ ವಿಚಾರಕ್ಕೆ ಸಂಬಂಧಪಟ್ಟಂತೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ನಾವು ಸೆಲೆಬ್ರೇಶನ್ ಬಗ್ಗೆ ಮಾತನಾಡೋಣ. ಅಂತಹ ವಿಚಾರಗಳ ಬಗ್ಗೆ ಮಾತನಾಡಿಯೇ ಚೀಪ್ ಆಗಿರೋದು ಅವರ ಬಗ್ಗೆ ಮಾತನಾಡಿ ಟೈಂ ವೇಸ್ಟ್ ಮಾಡಲ್ಲ. ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ ಮಕ್ಕಳು. ನಾನು ಫೇಸ್ ಮಾಡಿದ್ದಕ್ಕಿಂತ ಅದರ ಹತ್ತರಷ್ಟು ಫೇಸ್ ಮಾಡುತ್ತಾಳೆ. ಪುತ್ರಿ ಸಾನ್ವಿ ನನಗಿಂತ ದೊಡ್ಡದಾಗಿ ಬೆಳೆಯುತ್ತಾಳೆ…
ಬೆಂಗಳೂರು : ಬೆಂಗಳೂರಿನ ಶ್ರೀನಿವಾಸಪುರದಲ್ಲಿರುವ ಕೋಗಿಲಿ ಕ್ರಾಸ್ ನಲ್ಲಿ ಮನೆಗಳ ತೆರವು ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟೀಕೆ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆ ಹಂಚಿಕೆ ಮಾಡುತ್ತೇವೆ ಎಂದು ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೇರಳ ಮುಖ್ಯಮಂತ್ರಿ ವಾಸ್ತವ ಅರ್ಥ ಮಾಡಿಕೊಳ್ಳದೆ ಮಾತನಾಡಿದ್ದಾರೆ ಕೆಲವರು ಡಮ್ ಸೈಟ್ ನಲ್ಲಿ ಅಕ್ರಮವಾಗಿ ವಾಸವಾಗಿದ್ದರು. ನಮ್ಮ ಶಾಸಕರು ಮತ್ತು ಅಧಿಕಾರಿಗಳು ಅದನ್ನು ತೆರವು ಮಾಡಿದ್ದಾರೆ. ನಮಗೆ ಬೆಂಗಳೂರು ಬಗ್ಗೆ ಚೆನ್ನಾಗಿ ಗೊತ್ತಿದೆ. ಮನೆ ಕಳೆದುಕೊಂಡವರಿಗೆ ನಾವು ಮನೆ ಹಂಚಿಕೆ ಮಾಡುತ್ತೇವೆ. ರಾಜೀವ್ ಗಾಂಧಿ ವಸತಿ ನಿಗಮ ಮೂಲಕ ಮನೆ ಹಂಚಿಕೆ ಮಾಡುತ್ತೇವೆ ನಾವು ಬುಲ್ಡೋಜರ್ ಪದ್ಧತಿ ಬಳಸಿಲ್ಲ ಈ ಕುರಿತು ನಮ್ಮ ಪಕ್ಷದ ನಾಯಕರಿಗೂ ಮಾಹಿತಿ ನೀಡಿದ್ದೇವೆ ಅವರು ಇಲ್ಲಿನ ಸ್ಥಿತಿ ತಿಳಿದುಕೊಳ್ಳದೆ ಮಾತನಾಡಲು ಸರಿಯಲ್ಲ ಸರ್ಕಾರಿ ಜಾಗ ಒತ್ತುವರಿ ಮಾಡಲು ಬಿಡಲ್ಲ ಚುನಾವಣೆ ವೇಳೆ…
ರಾಯಚೂರು : ಮಂತ್ರಾಲಯದ ರಾಯರ ಮಠಕ್ಕೂ ಇದೀಗ ಭಾಷಾ ವಿವಾದ ತಟ್ಟಿದೆ. ಆಂಧ್ರಪ್ರದೇಶದ ಮಂತ್ರಾಲಯದಲ್ಲಿರುವ ರಾಯರ ಮಠಕ್ಕೆ ಇದೀಗ ಭಾಷಾ ವಿವಾದ ತಟ್ಟಿದೆ. ಮಠದ ಮುಖ್ಯ ದ್ವಾರದ ಬಳಿ ಇರುವ ರಾಘವೇಂದ್ರ ಶ್ರೀಗಳ ಶ್ಲೋಕ ಇದೀಗ ವಿವಾದಕ್ಕೆ ಕಾರಣವಾಗಿದೆ. ಕನ್ನಡ ಭಾಷೆಯಲ್ಲಿಯೇ ರಾಯರ ಶ್ಲೋಕದ ಬಗ್ಗೆ ವಿವಾದ ಸೃಷ್ಟಿಯಾಗಿದೆ. ಹೌದು ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ರತಾಯಚ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ ಅಂತ ಕನ್ನಡದಲ್ಲಿ ಒಂದು ಶ್ಲೋಕ ಇದೆ ಶ್ಲೋಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೆಲುಗು ಭಾಷಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಪ್ಲೋಡ್ ಮಾಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ ಸಿಎಂ ಡಿಸಿಎಂ ಅವರೇ ತೆಲುಗು ಮಂಡಳಿ ಎಲ್ಲಿದೆ ಸಾರ್? ಮಂತ್ರಾಲಯ ಆಂಧ್ರಪ್ರದೇಶದ ಭಾಗವಾಗಿದೆ, ಅಲ್ಲಿ ತೆಲುಗು ಭಾಷೆಯನ್ನು ಸಂಪೂರ್ಣವಾಗಿ ಹೇಗೆ ಕೈಬಿಡುತ್ತಾರೆ? ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.













