Subscribe to Updates
Get the latest creative news from FooBar about art, design and business.
Author: kannadanewsnow05
ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿರುವ ವಿಶಾಖಪಟ್ಟಣಂನಲ್ಲಿರುವ ಉಕ್ಕಿನ ಸ್ಥಾವರಕ್ಕೆ ಬೆಂಕಿ ಬಿದ್ದಿದೆ. ವಿಶಾಖಪಟ್ಟಣಂ ನಲ್ಲಿರುವ ಉಕ್ಕಿನ ಸ್ಥಾವರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಅವಘಡಕ್ಕೆ ಇದುವರೆಗೂ ನಿಖರವಾದ ಕಾರಣ ಇನ್ನು ಗೊತ್ತಾಗಿಲ್ಲ. ವಿಶಾಖಪಟ್ಟಣಂ ಉಕ್ಕು ಸ್ಥಾವರದಲ್ಲಿ, ವಿಶೇಷವಾಗಿ ಉಕ್ಕು ಕರಗುವ ಕೇಂದ್ರ -2 (SMS-2) ವಿಭಾಗದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆ ತಿಳಿದ ಬಳಿಕ ತಕ್ಷಣ ತುರ್ತು ಸೇವೆಗಳು, ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡುತ್ತಿದ್ದಾರೆ. ಘಟನೆ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ವೇಗವಾಗಿ ಬಂದು ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ತಾಯಿ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಬಳಿ ಈ ಒಂದು ರಸ್ತೆ ಅಪಘಾತ ಸಂಭವಿಸಿದೆ. ತಾಯಿ ಆಸ್ಮ ಬಾನು (30) ಹಾಗೂ ಮಹಮ್ಮದ್ ಕಬೀರ್ (3) ಮೃತ ದುರ್ದೈವಿಗಳು. ಇನ್ನು ಪತಿ ಖಲಂದರ್ ಪಾಶಾ ಮತ್ತು ಮತ್ತು ಇನ್ನೊರ್ವ ಮಗು ಪ್ರಾಣಾಯಾಪಾಯದಿಂದ ಪಾರಾಗಿದ್ದಾರೆ.ತರೀಕೆರೆಯ ಬುಕ್ಕಂಬೂದಿಯಿಂದ ಸಾಗರಕ್ಕೆ ತೆರಳುತ್ತಿರುವಾಗ ಈ ಒಂದು ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ವೇಗವಾಗಿ ಖಾಸಗಿ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ತಕ್ಷಣ ತಾಯಿ ಮಗವನ್ನು ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಗೃಹಲಕ್ಷ್ಮಿ ಹಣ ನಾವು ತಿಂಗಳಿಗೆ ಹಾಕುತ್ತೇವೆ ಅಂತ ಯಾವತ್ತಾದರೂ ಹೇಳಿದ್ದೆವಾ? ನೀವು ಟ್ಯಾಕ್ಸ್ ಕಟ್ಟುತ್ತಿದ್ದರೆ, ಅದರಂತೆ ಗೃಹಲಕ್ಷ್ಮಿ ಹಣ ನೀಡುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದರ ಮಧ್ಯೆ ಗೃಹಲಕ್ಷ್ಮಿ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ ಗೃಹಲಕ್ಷ್ಮಿ ಸಂಘ ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಗುಂಪುಗಳನ್ನು ರಚಿಸುವ ಶಕ್ತಿ ಸಂಬಂಧ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಗೃಹಲಕ್ಷ್ಮಿ ಸಂಘವನ್ನು ರಚಿಸಲಾಗುವುದು ಎಂದರು. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.25 ಕೋಟಿ ಫಲಾನುಭವಿಗಳಿದ್ದಾರೆ. ಪ್ರತಿ ತಿಂಗಳು ಸಂದಾಯ ಆಗುತ್ತಿರುವ 2 ಸಾವಿರ ರೂಪಾಯಿ ಹಣವನ್ನು ಇನ್ನಷ್ಟು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ರಚಿಸಲಾಗುವುದು. ಈ ಮೂಲಕ ಗೃಹಲಕ್ಷ್ಮಿ ಯಜಮಾನಿಯರನ್ನು…
ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ನಡೆಯಿತು. ಬೆಂಗಳೂರಿನ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಯಿತು. ಈ ಒಂದು ಸಚಿವ ಸಂಪುಟದಲ್ಲಿ ಮೆಟ್ರೋ 3ನೇ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಇದೀಗ ಅನುಮತಿ ನೀಡಿದೆ. ಈ ವಿಚಾರವಾಗಿ ಸಂಪುಟ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ, ಮೆಟ್ರೋ ವಿಚಾರವಾಗಿ ಮೂರನೇ ಹಂತದ ಮೆಟ್ರೋ ಯೋಜನೆಗೆ ಅಂದಾಜು ವೆಚ್ಚ 40,424 ಕೋಟಿ ರೂ.ಗೆ ಅನುಮತಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭಮಾಡುತ್ತಿದ್ದೇವೆ ಎಂದು ಹೇಳಿದರು. ಬಳಿಕ ಬೆಂಗಳೂರಿನಲ್ಲಿ ಅನೇಕ ಸಂಘ ಸಂಸ್ಥೆಗಳು, ದೇವಾಲಯಗಳು ಬಿಡಿಎ ವ್ಯಾಪ್ತಿಯಲ್ಲಿ ನಿವೇಶನ ತೆಗೆದುಕೊಂಡಿದ್ದು, ಅವರಿಗೆ ಒನ್ ಟೈಮ್ ಇನ್ವೆಸ್ಟ್ ಬೆನಿಫಿಟ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದೇವೆ. 125 ದಿನಗಳ ಒಳಗಾಗಿ ಅವರು ಬಾಕಿಯಿರುವ ತೆರಿಗೆ ಪಾವತಿಸಿದರೆ ಬಡ್ಡಿ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದರು. ಇನ್ನು ಟನಲ್ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಟೆಂಡರ್ ಕರೆಯುವ ಬಗ್ಗೆ…
ಬೆಂಗಳೂರು : ಸಾಮಾನ್ಯವಾಗಿ ಪ್ರವಾಸಕ್ಕೆ ಹೋದಾಗ ಅರಣ್ಯ ಪ್ರದೇಶಗಳಲ್ಲಿ ರಸ್ತೆಯ ಮೇಲೆ ಆಗಾಗ ಕಾಡುಪ್ರಾಣಿಗಳು ಕಂಡುಬರುತ್ತವೆ. ಈ ವೇಳೆ ಪ್ರಯಾಣಿಕರು ಅವುಗಳ ಫೋಟೋ ತೆಗೆದುಕೊಳ್ಳುವುದು ಅಥವಾ ಅವುಗಳ ಸಮೀಪ ಹೋಗಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಂತಹ ಅಪಾಯಕಾರಿ ಕೆಲಸಕ್ಕೆ ಮುಂದಾಗುತ್ತಾರೆ. ಹಾಗಾಗಿ ಇನ್ಮುಂದೆ ವನ್ಯಜೀವಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುವುದು ಅವುಗಳ ಜೊತೆಗೆ ಚೆಲ್ಲಾಟ ಆಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಹೌದು ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಗುರುವಾರ ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.…
ಬೆಂಗಳೂರು : ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಗೂ ಕಿರುತೆರೆ ನಟ ಮಡೇನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ಹಾಸನದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿ ಇದೀಗ ಠಾಣೆಗೆ ಕರೆತಂದಿದ್ದಾರೆ. ಅತ್ಯಾಚಾರ ಆರೋಪ ಮಾಡಿರುವ ಕಿರುತೆರೆ ನಟಿ ಮನು ವಿರುದ್ಧ ಮತ್ತಷ್ಟು ಗಂಭೀರವಾದ ಆರೋಪ ಮಾಡಿದ್ದು, ಮನು ವಶೀಕರಣ ಮಾಡುತ್ತಿದ್ದ, ಬೂದಿ ಎರಚುತಿದ್ದ ಎಂದು ಹೇಳಿಕೆ ನೀಡಿದ್ದಾರೆ. ಕಿರುತೆರೆ ಕಲಾವಿದ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಡೆನೂರು ಮನು ವಿರುದ್ಧ ಆರೋಪಿಸಿದ್ದ ಯುವತಿ ಇದೀಗ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದು, ಮಡೆನೂರು ಮನು ವಶೀಕರಣ ಮಾಡುತ್ತಿದ್ದ ಬೂದಿ ಎರಚುತಿದ್ದ. ಮನು ಎರಡು ಬಾರಿ ನನಗೆ ಗರ್ಭಪಾತ ಮಾಡಿಸಿದ್ದಾನೆ. ನನ್ನ ಹೆಂಡತಿ ನನಗೆ ಸರಿಯಾಗಿ ಸಹಕರಿಸುತ್ತಿಲ್ಲ ಎಂದು ಹೇಳುತ್ತಿದ್ದ. ಸರಿ ಮಾಡಿಕೊಳ್ಳುವುದಾಗಿ ಕಷ್ಟಪಡುತ್ತಿದ್ದೇನೆ ಎಂದು ಹೇಳುತ್ತಿದ್ದ. ಮಡೆನೂರು ಮನುಗಾಗಿ ನಾನೇ ಸಾಕಷ್ಟು ಹಣ ಖರ್ಚು ಮಾಡಿದ್ದೇನೆ. ಮನುಗೆ…
ಬೆಂಗಳೂರು : ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಶ್ವಾನಕ್ಕೆ ಹೋಲಿಸಿದ್ದರು. ಇದರಿಂದ ಆಕ್ರೋಶಗೊಂಡ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚಿತ್ತಾಪೂರ ಪಟ್ಟಣದ ಪ್ರವಾಸಿ ಮಂದಿರದ ಎದರುಗಡೆ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್ ಹಾಕಿದ್ದರು. ಈ ವಿಚಾರವಾಗಿ ಚಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ. ಹೌದು ಇತ್ತೀಚಿಗೆ ಚಿತಾಪುರಕ್ಕೆ ಭೇಟಿ ನೀಡಿದಾಗ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ್ದಾರೆ. ಇದರಿಂದ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಕೆರಳಿದ್ದು, ಚಿತ್ತಾಪೂರ ಪಟ್ಟಣದ ಪ್ರವಾಸಿ ಮಂದಿರದ ಎದರುಗಡೆ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್ ಹಾಕಿದ್ದರು.ಅಲ್ಲದೇ ಅವರ ಕಾರಿನ ಮೇಲೆ ಬಣ್ಣ ಎರಚಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಚಲವಾದಿ ನಾರಾಯಣಸ್ವಾಮಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ದೂರು ನೀಡಿದ್ದಾರೆ. ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಾಜಕ್ಕೆ ಮನವಿ ಪ್ರಿಯಾಂಕ್ ಖರ್ಗೆ ಅವರನ್ನು…
ಬಾಗಲಕೋಟೆ : ಪ್ರಧಾನಮಂತ್ರಿ ನರೇಂದ್ರ ಮೋದಿ ಬಗ್ಗೆ ವಿವಾದಾತ್ಮಕ ಪೋಸ್ಟ್ ಹಾಕಿದ್ದವನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಮೊಹಮ್ಮದ್ ಅಜೀಜ್ ರೋಣ (27) ಎನ್ನುವ ಆರೋಪಿಯನ್ನು ಬಾಗಲಕೋಟೆ ತಾಲೂಕಿನ ಕಲಾದಗಿ ಪೊಲೀಸ್ರು ಅರೆಸ್ಟ್ ಮಾಡಿದ್ದಾರೆ. ಬಾಗಲಕೋಟೆ ತಾಲೂಕಿನ ಕಲಾದಗಿ ಪಟ್ಟಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಫೋಟೋ ಎಡಿಟ್ ಮಾಡಿ ಅವಹೇಳನಕಾರಿಯಾಗಿ ಆರೋಪಿ ಮೊಹಮ್ಮದ್ ಪೋಸ್ಟ್ ಮಾಡಿದ್ದ. ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಎಡಿಟ್ ಮಾಡಿ ಪೋಸ್ಟ್ ಹಾಕಿದ್ದ. ಮೊಹಮ್ಮದ್ ಅಜೀಜ್ ಪ್ರಧಾನ ಮಂತ್ರಿ ಮೋದಿ ಜೈಲಿನಲ್ಲಿ ಬಂಧಿಸಿದ ರೀತಿಯಲ್ಲಿ ಎಡಿಟ್ ಮಾಡಿದ್ದ. ಅಷ್ಟೆ ಅಲ್ಲದೇ ಓವೈಸಿ ಪೊಲೀಸ್ ಅಧಿಕಾರಿ ವೇಷದಲ್ಲಿ ಕೂತಿರುವ ರೀತಿ ಎಡಿಟ್ ಮಾಡಿದ್ದ. ಈ ಹಿನ್ನೆಲೆ ಕಲಾದಗಿ ಪೊಲೀಸರು ಆರೋಪಿ ಮೇಲೆ ಸುಮೋಟೋ ಕೇಸ್ ಹಾಕಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಅಜೀಜ್ ಕಲಾದಗಿ ಪಟ್ಟಣದ ನಿವಾಸಿ ಎಂದು ತಿಳಿದು ಬಂದಿದೆ.
ಬೆಂಗಳೂರು : ಟರ್ಕಿಯಲ್ಲಿ ಕಾಂಗ್ರೆಸ್ ಕಚೇರಿ ಸಂಬಂಧ ತಪ್ಪು ಮಾಹಿತಿ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಅಮಿತ್ ಮಾಳವಿಯ ವಿರುದ್ಧದ FIR ಗೆ ಹೈ ಕೋರ್ಟ್ ತಡೆ ನೀಡಿದೆ.ಮಧ್ಯಂತರ ತಡೆ ನೀಡಿ ನ್ಯಾಯಾಧೀಶರಾದ ಎಸ್ ರಾಚಯ್ಯ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ FIR ದಾಖಲಾಗಿತ್ತು. ಟರ್ಕಿಯಲ್ಲಿ ಕಾಂಗ್ರೆಸ್ ಕಚೇರಿ ಸಂಬಂಧ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ FIR ದಾಖಲಿಸಲಾಗಿತ್ತು. ಇಂದು ವಿಚಾರಣೆ ವೇಳೆ ಪೊಲೀಸರು FIR ತಿದ್ದುಪಡಿ ಮಾಡಿದ್ದಾರೆ. ಸೆಕ್ಷನ್ ತಿದ್ದುಪಡಿ ಮಾಡಿ ಜಾಮೀನು ರಹಿತ ಕೇಸ್ ಹಾಕಿದ್ದಾರೆ. ಹಾಕಿರುವ ಸೆಕ್ಷನ್ ಗಳು ಅನ್ವಯವಾಗುವುದಿಲ್ಲವೆಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶಾಮ್ ವಾದ ಮಂಡಿಸಿದರು. ಬಳಿಕ ಅಮಿತ್ ಮಾಳವಿಯ ವಿರುದ್ಧದ ಪ್ರಕರಣಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ.
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಇಂದು ರಾಜ್ಯದಲ್ಲಿ ಒಂದೇ ದಿನ ಮೂವರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಬೆಂಗಳೂರಲ್ಲಿ ಕ್ಯಾಬ್ ಚಾಲಕ, ಹಾಸನದಲ್ಲಿ ಬಾತ್ ರೂಂನಲ್ಲಿ ಕುಸಿದುಬಿದ್ದು ಯುವತಿ ಸಾವನ್ನಪ್ಪಿದ್ದರೆ, ಕೊಡಗಿನಲ್ಲಿ ಅರಣ್ಯ ಅಧಿಕಾರಿ ಒಬ್ಬರು ಸಾವನ್ನಪ್ಪಿದ್ದಾರೆ. ನಿಂತಲ್ಲೇ ಕ್ಯಾಬ್ ಚಾಲಕ ಕುಸಿದುಬಿದ್ದು ಸಾವು! ಮೊದಲನೇ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಾಡನೂರಿನ ಕೆ.ಆರ್ ಅಭಿಷೇಕ್ ಎನ್ನುವ ಯುವಕ ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ ಇಂದು ಬಸವೇಶ್ವರನಗರದಲ್ಲಿ ನಿಂತಲ್ಲಿಯೇ ಕುಸಿದು ಬಿದ್ದು ಅಭಿಷೇಕ್ ಸಾವನಪ್ಪಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಿದರೂ ಸಹ ಮಾರ್ಗ ಮಧ್ಯದಲ್ಲಿ ಅಭಿಷೇಕ್ ಉಸಿರು ಚೆಲ್ಲಿದ್ದಾನೆ. ಬಾತ್ ರೂಂನಲ್ಲೆಕುಸಿದುಬಿದ್ದು ಯುವತಿ ಸಾವು! ಇನ್ನು ಹಾಸನದಲ್ಲಿ ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ…