Author: kannadanewsnow05

ದಾವಣಗೆರೆ : ಇಂದು ರಾಜನಹಳ್ಳಿ ವಾಲ್ಮೀಕಿ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಹಿಂಡಲಿದ್ದಾರೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠಕ್ಕೆ ಭೇಟಿ ನೀಡಲಿದ್ದು ಮಧ್ಯಾಹ್ನ 12 15ಕ್ಕೆ ಹೆಲಿಕ್ಯಾಪ್ಟರ್ ನಲ್ಲಿ ರಾಜನಹಳ್ಳಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಮಹರ್ಷಿ ವಾಲ್ಮೀಕಿ ಜಾತ್ರಾ 2026 ಜನ ಜಾಗೃತಿ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದು ಇಂದು ವಾಲ್ಮೀಕಿ ಗುರುಪೀಠದಿಂದ ಇಬ್ಬರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀ ನೇತ್ರತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು ಸಿಎಂ ಸಿದ್ದರಾಮಯ್ಯ ಇಬ್ಬರು ಸಾಧಕರಿಗೆ ಪ್ರಶಸ್ತಿ ಪ್ರಧಾನಿ ಮಾಡಲಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹನುಮಂತಪ್ಪ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರಧಾನಿ ಮಾಡಲಿದ್ದು, ಇನ್ನೂ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ ಅವರಿಗೆ ರಾಜ ವೀರಮದಕರಿ ನಾಯಕ ಪ್ರಶಸ್ತಿ ಪ್ರಧಾನಿ ಮಾಡಲಿದ್ದಾರೆ. ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಮಂಡಳಿ

Read More

ಉಡುಪಿ : ರಾಜ್ಯದಲ್ಲಿ ಒಂದು ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು ನಿವೃತ್ತ ಅಂಚಿನಲ್ಲಿ ಇರುವ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿದ್ದಾರೆ ಆದರೆ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆಯೇ ಅವರ ರುಂಡ ಬೇರ್ಪಟ್ಟು ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಅಂಬಾಗಿಲು ವಾರ್ಡ್‌ನ ಕಕ್ಕುಂಜೆ ಪ್ರದೇಶದಲ್ಲಿ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಅವರ ರುಂಡ ಬೇರ್ಪಟ್ಟು ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು ಪುರುಷೋತ್ತಮ ನಾಯಕ್ (52) ಎಂದು ಗುರುತಿಸಲಾಗಿದೆ. ಮೃತ ಪುರುಷೋತ್ತಮ ನಾಯಕ್ ಅವರು ತಮ್ಮ ಮನೆಯ ಬಾವಿಯಲ್ಲಿ ಹಗ್ಗದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ರುಂಡ ಬೇರ್ಪಟ್ಟ ಪರಿಣಾಮ ಬಾವಿಯ ನೀರು ಕೆಂಪು ಬಣ್ಣಕ್ಕೆ ತಿರುಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಅರ್ಚಕ ವಾಸುದೇವ ನಾಯಕ್ ಅವರ ದ್ವಿತೀಯ ಪುತ್ರರಾಗಿದ್ದಾರೆ. ಮೃತರು ಮಣಿಪಾಲದ ವ್ಯಾಲಿ ವ್ಯೂ ಹೊಟೇಲ್​ನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಅವರು ನಿವೃತ್ತಿ ಅಂಚಿನಲ್ಲಿದ್ದರು.ಆರ್ಥಿಕ ಸಮಸ್ಯೆಯಿಂದ…

Read More

ಬೆಂಗಳೂರು : ಇಂದಿನಿಂದ 2 ದಿನಗಳ ಕಾಲ ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಶೃಂಗಸಭೆ ನಡೆಯಲಿದ್ದು, ಬಿಗ್ ಕ್ಯಾಟ್ ಶೃಂಗಸಭೆ ಹೆಸರಿನಲ್ಲಿ ಹುಲಿಗಳ ಕುರಿತಾದ ಸೆಮಿನಾರ್ ಆಯೋಜನೆ ಮಾಡಲಾಗಿದೆ. ಬಂಡಿಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿಯಿಂದ ಈ ಶೃಂಗಸಭೆ ಆಯೋಜನೆ ಮಾಡಲಾಗಿದೆ. ಈ ಒಂದು ಸಭೆಯಲ್ಲಿ ಬರೋಬ್ಬರಿ 23 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಜ್ಯದಲ್ಲಿಯೇ ಬಿಗ್ ಕ್ಯಾಟ್ ಶೃಂಗಸಭೆ ಹೊಸ ಇತಿಹಾಸ ಸೃಷ್ಟಿಸಲಿದೆ. ಅರ್ಮೆನಿಯ, ಭೂತಾನ್, ಕಾಂಗೋ, ಮೆಕ್ಸಿಕೋ ಕಿನ್ಯಾ ಹಾಗು ರಷ್ಯಾಸೇರಿದಂತೆ 23 ದೇಶಗಳ ಸಂಶೋಧಕರು ಈ ಒಂದು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಶೃಂಗಸಭೆ ಕರ್ನಾಟಕದಲ್ಲಿ ನಡೆಯುತ್ತಿರುವುದು ಮಹತ್ವ ಪಡೆದಿದೆ. ದಕ್ಷಿಣ ಭಾರತದ ವನ್ಯಜೀವಿ ಸಂರಕ್ಷಣೆ ಹಾಗೂ ಅತಿ ಹೆಚ್ಚಾಗಿರುವ ಹುಲಿಗಳ ಬಗ್ಗೆ ಈ ಶೃಂಗಸಭೆಯಲ್ಲಿ ಜಾಗತಿಕ ಗಮನ ಸೆಳೆಯಲಿದೆ. ಫೆಬ್ರವರಿ 9 ಮತ್ತು 10 ರಂದು ಬಂಡಿಪುರದಲ್ಲಿ ಹಾಗೂ ಫೆಬ್ರವರಿ 11 ಮತ್ತು 13 ರಂದು ನಾಗರಹೊಳೆಯಲ್ಲಿ ಈ ಶೃಂಗಸಭೆ ನಡೆಯಲಿದೆ. ನಾಲ್ಕು ದಿನಗಳ ಶೃಂಗಸಭೆಯಲ್ಲಿ ಹುಲಿಗಳ…

Read More

ಬೆಂಗಳೂರು : ರಾಜ್ಯದಲ್ಲಿ ನಿನ್ನೆ ಕರಾಳ ರವಿವಾರವಾಗಿತ್ತು. ಹೌದು ರಾಜ್ಯದಲ್ಲಿ ನಿನ್ನೆ ಒಂದೇ ದಿನ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 12 ಜನರು ಸಾವನಪ್ಪಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ, ಬೀದರ್ ಕೋಲಾರದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ಲಾರಿ ಹರಿದು ಗರ್ಭಿಣಿ ಸಾವು! ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಿಂದ ಸ್ಕೂಟಿಯಲ್ಲಿ ತೆರಳುತ್ತಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಬಾಗಲೂರು ಗ್ರಾಮದಲ್ಲಿ ಅಪಘಾತ ನಡೆದಿದೆ. ಬೂದಿಗೆರೆಯ ವಿರಗ ನಗರ ನಿವಾಸಿ ಮಾನಸ ಮೃತ ಗರ್ಭಿಣಿ ಎಂದು ತಿಳಿದು ಬಂದಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದು ಗರ್ಭಿಣಿ ಮೇಲೆ ಲಾರಿ ಹರಿದಿದ್ದರಿಂದ ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ. ಪೊಲೀಸರು ಸದ್ಯ ಸಿಮೆಂಟ್ ಮಿಕ್ಸರ್ ಲಾರಿ ಚಾಲಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು! ಕೃಷಿಹೊಂಡದಲ್ಲಿ ಮೀನು…

Read More

ಮೈಸೂರು : ಮೈಸೂರಿನಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕಕ್ಕೂ ಹೆಚ್ಚು ಗೋದಾಮುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಮೈಸೂರು ಹೊರವಲಯದ ಕೆಸರೆ ಬಡಾವಣೆಯಲ್ಲಿ ಈ ಒಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಮೈಸೂರು ಬೆಂಗಳೂರು ಹೈವೇ ಬಳಿಯ ನಾಲ್ಕು ಗೋದಾಮುಗಳು ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿವೆ. ಹಳೆಯ ವಸ್ತುಗಳನ್ನು ಗೋದಾಮುಗಳಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಬೆಂಕಿ ಶಂಕೆ ವ್ಯಕ್ತವಾಗಿದೆ. ಎನ್ ಆರ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮೆಟ್ರೋ ದೊರ ಪರಿಷ್ಕರಣೆ ಸಂಬಂಧ ಇಂದು ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದರು ಆದರೆ ಬೆಂಗಳೂರಿನ ಜಯನಗರ ಠಾಣೆ ಪೊಲೀಸರು ತೇಜಸ್ವಿ ಸೂರ್ಯ ಅವರಿಗೆ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ನೋಟಿಸ್ ನೀಡಿದ್ದಾರೆ. ಹೌದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮೆಟ್ರೋ ದರ ಪರಿಷ್ಕರಣೆ ಸಂಬಂಧ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಸರ್ಕಾರದ ವಿರುದ್ಧ ಇಂದು ಪ್ರತಿಭಟನೆಗೆ ಮುಂದಾಗಿದ್ದರು. ಆರ್ ವಿ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆಗೆ ತಯಾರಿ ಮಾಡಿಕೊಂಡಿದ್ದರು. ಶಾಸಕ ರಾಮಮೂರ್ತಿ ಜೊತೆಗೆ ಪ್ರತಿಭಟನೆಗೆ ಮುಂದಾಗಿದ್ದರು. ಹೈಕೋರ್ಟ್ ಆದೇಶದಂತೆ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಬೇರೆ ಎಲ್ಲೂ ಮುಷ್ಕರ ನಡೆಸುವಂತಿಲ್ಲ ಮೆರವಣಿಗೆ ಮುಷ್ಕರಕ್ಕೆ ಅನುಮತಿ ನಿರಾಕರಿಸಿ ಬೆಂಗಳೂರಿನ ಜಯನಗರ ಠಾಣೆ ಪೊಲೀಸರು ತೇಜಸ್ವಿ ಸೂರ್ಯ ಅವರಿಗೆ ನೋಟಿಸ್ ನೀಡಿದ್ದಾರೆ.

Read More

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಕುರಿತಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ಹಗ್ಗ ಜಗ್ಗಾಟ ನಡೆದಿತ್ತು. ಅಷ್ಟೇ ಅಲ್ಲದೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಹ ಟಿಕೆಟ್ ದರ ಕಡಿಮೆ ಆಗಲಿದೆ ಎಂದು ಹೇಳಿಕೆ ನೀಡಿದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿಲ್ಲ ಕೇಂದ್ರದವರು ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಇದೀಗ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಮೆಟ್ರೋ ಟಿಕೆಟ್ ಪ್ರಯಾಣದ ದರ ಏರಿಕೆಯನ್ನು ಬಿಎಂಆರ್ಸಿಎಲ್ ಕೈಬಿಟ್ಟಿದೆ. ಹಾಗಾಗಿ ಇಂದಿನಿಂದ ಮೆಟ್ರೋ ಟಿಕೆಟ್ ದರ ಏರಿಕೆ ಆಗೋದಿಲ್ಲ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಬಿಎಂಆರ್‌ಸಿಎಲ್ ಎಂಡಿ ರವಿಶಂಕರ್ ಅವರಿಗೆ ಕೇಂದ್ರ ಸರ್ಕಾರದಿಂದ ಇ-ಮೇಲ್ ಮೂಲಕ ಸೂಚನೆ ಬಂದಿದ್ದು, ನಾಳೆಯಿಂದ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಬೇಡಿ ಎಂದು ಇ-ಮೇಲ್ ಬಂದಿದೆ. ಹಾಗಾಗಿ…

Read More

ಬೆಂಗಳೂರು : ಭಾರತ & ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನ ಆಗಲಿರುವುದು ಖಂಡಿತ ಎಂದು ಸಿಎಂ ಸಿದ್ದರಾಮಯ್ಯ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟ್ ನಲ್ಲಿ ಈ ಕುರಿತು ಆಕ್ರೋಶ ಹೊರಹಾಕಿದ ಅವರು, ಎರಡು ದೇಶಗಳ ನಡುವಿನ ಸಂಬಂಧಗಳು ಸಮಾನತೆ ಮತ್ತು ಪರಸ್ಪರ ಗೌರವದ ಬುನಾದಿಯ ಮೇಲೆ ಸ್ಥಾಪನೆಯಾಗಬೇಕಾಗುತ್ತದೆ. ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರಗಳ ಹೇರಿಕೆಯಿಂದ ನಡೆಯಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿರುವ ವಿಧಿ-ವಿಧಾನಗಳನ್ನು ಗಮನಿಸಿದರೆ ಇದು ಒಡೆಯನ ಅಜ್ಞೆಗೆ ಸೇವಕ ತಲೆಯಾಡಿಸಿದಂತಿದೆ. ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಯರ್ರಾಬಿರ್ರಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್…

Read More

ಮುಂಬೈ : ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅವರಿಗೆ ಭಾರತರತ್ನ ಕೊಟ್ಟರೆ ಪ್ರಶಸ್ತಿಯ ಘನತೆ ಹೆಚ್ಚುತ್ತದೆ. ಹಿಂದುತ್ವ ಸಿದ್ಧಾಂತವಾದಿ ಸಾವರ್ಕರ್ ಅವರಿಗೆ ಭಾರತರತ್ನ ಪ್ರಶಸ್ತಿ ಕೊಡಬೇಕು. ಅದರಿಂದಪ್ರಶಸ್ತಿಯಘನತೆ ಹೆಚ್ಚುತ್ತದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗ್ವತ್ ಅವರು ಹೇಳಿದ್ದಾರೆ. ನಿನ್ನೆ ಮುಂಬೈನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಆರ್‌ಎಸ್‌ಎಸ್‌ಗೆ ಅಚ್ಛೇ ದಿನ್ ಬಂದಿದೆಯೇ ಎಂದು ಸಭಿಕರೊಬ್ಬರು ಕೇಳಿದ ಪ್ರಶ್ನೆಗೆ, ಅದು ಇನ್ನೊಂದು ಮಾರ್ಗ. ಸಂಘವು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬದ್ಧವಾಗಿತ್ತು. ಅದನ್ನು ಬೆಂಬಲಿಸಿದವರು ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು. ಇಸ್ಲಾಂ ಅನ್ನು ಶಾಂತಿಯ ಧರ್ಮ ಎಂದು ಕರೆಯಲಾಗುತ್ತದೆ, ಆದರೆ ಶಾಂತಿ ಕಾಣುವುದಿಲ್ಲ. ಧರ್ಮದಲ್ಲಿ ಆಧ್ಯಾತ್ಮಿಕತೆ ಇಲ್ಲದಿದ್ದರೆ, ಅದು ದಬ್ಬಾಳಿಕೆ ಮತ್ತು ಆಕ್ರಮಣಕಾರಿಯಾಗುತ್ತದೆ. ಇಂದು ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮದಲ್ಲಿ ಏಸುಕ್ರಿಸ್ತ ಮತ್ತು ಪ್ರವಾದಿ ಮುಹಮ್ಮದ್ ಅವರ ಬೋಧನೆಗಳು ಕಂಡುಬರುತ್ತಿಲ್ಲ. ನಮಗೆ ನಿಜವಾದ ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮದ ಆಚರಣೆ ಬೇಕು ಎಂದು ಹೇಳಿದರು

Read More

ನವದೆಹಲಿ : ಪ್ರಧಾನಿ ಮೋದಿ ಮಲೇಷಿಯಾಗೆ ಭೇಟಿ ನೀಡಿದ್ದು, ಭಯೋತ್ಪಾದನೆ ನಿರ್ಮೂಲನೆಗೆ ಭಾರತ-ಮಲೇಷ್ಯಾ ಜಂಟಿಯಾಗಿ ಪಣತೊಟ್ಟಿವೆ. ಉಗ್ರರ ವಿರುದ್ದ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಲು, ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಸಹಕಾರ ಹೆಚ್ಚಿಸಲು ಹಾಗೂ ಸಂಘಟಿತ ಅಪರಾಧಗಳ ಬಗ್ಗೆ ಪರಸ್ಪರ ಮಾಹಿತಿ ವಿನಿಮಯಕ್ಕೆ ಉಭಯ ದೇಶಗಳು ಸಂಕಲ್ಪ ಮಾಡಿವೆ. ಎರಡು ದಿನಗಳ ಮಲೇಷ್ಯಾ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ, ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ಎಂದಿಗೂ ರಾಜಿಯಾಗುವುದಿಲ್ಲ, ಮೂಲಭೂತವಾದ ಹತ್ತಿಕ್ಕುವ ವಿಷಯದಲ್ಲಿ ಎಂದಿಗೂ ಭಾರತ ದ್ವಿಮುಖ ನೀತಿ ಅನುಸರಿಸುವುದಿಲ್ಲ. ಮತೀಯ ಹಿಂಸಾಚಾರ ಹತ್ತಿಕಲು ಭಾರತಕ್ಕೆ ನೆರೆಯ ‘ಆಸಿಯಾನ್’ ದೇಶಗಳು ಬೆಂಬಲ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮಲೇಷ್ಯಾ ಪ್ರವಾಸ ಮುಗಿಸಿ ಭಾನುವಾರ ರಾತ್ರಿ ಭಾರತಕ್ಕೆ ಮರಳಿದ ಮೋದಿ, ಇದಕ್ಕೂ ಮುನ್ನ ಅಲ್ಲಿನ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ದ್ವಿಪಕ್ಷೀಯ ಬಾಂಧವ್ಯ ಸುಧಾರಣೆ ಸಂಬಂಧ ಚರ್ಚಿಸಿದರು. ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಪರಸ್ಪರ ಸಹಕಾರ ಹೆಚ್ಚಳವೂ ಇದರ ಭಾಗವಾಗಿದೆ. ಕೃಷಿ, ಉತ್ಪಾದನೆ,…

Read More