Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಮನಸೋಇಚ್ಛೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದವರ ಪೈಕಿ ಇಟ್ಟಿಗೆ ಕಾರ್ಖಾನೆ ಮಾಲೀಕ ಖೇಮು ರಾಠೋಡ್, ವಿಶಾಲ ಜುಮನಾಳ ಹಾಗೂ ಸಚಿವ ಮಾನವರ ಅನ್ನು ಪೊಲೀಸರು ಗಾಂಧಿನಗರದ ಖೇಮು ನಿವಾಸದಲ್ಲಿ ಬಂಧಿಸಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಹೋಗಿದ್ದವರು ಹಿಂದಿರುಗುವುದು ತಡವಾಗಿದ್ದಕ್ಕೆ ಮೂವರು ಕಾರ್ಮಿಕರ ಪಾದಗಳಿಗೆ ಕಟ್ಟಿಗೆ, ಪೈಪ್ಗಳಿಂದ ಹೊಡೆದಿದ್ದಾರೆ. ಕಾರ್ಮಿಕರ ಮೇಲೆ ಹಲ್ಲೆ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಮಾನವೀಯ ಹಲ್ಲೆ ಸಂಬಂಧ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಪ್ರಕರಣ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಹಲ್ಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾರೇ ತಪ್ಪು ಮಾಡಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಚಿಕ್ಕಮಗಳೂರು : ಸಾವು ಯಾರಿಗೆ ಯಾವಾಗ ಹೇಗೆ ಬರುತ್ತದೆ ಎಂದು ಹೇಳಲಾಗುವುದಿಲ್ಲ. ಕಳೆದ ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಕೆಲವೇ ದಿನಗಳಲ್ಲಿ ಹಸೆಮಣೆ ಎರಬೇಕಾಗಿದ್ದ ಯುವತಿ ಒಬ್ಬಳು ಭೀಕರವಾದ ಅಪಘಾತದಲ್ಲಿ ಸಾವನಪ್ಪಿದ್ದಳು. ಇದೀಗ ಚಿಕ್ಕಮಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ನೆಡೆದಿದ್ದು ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ. ಹೌದು ಮಗಳ ಮದುವೆ ಸಂಭ್ರಮದಲ್ಲಿದ್ದ ತಂದೆಯ ಸಾವನ್ನಾಪ್ಪಿದ್ದಾರೆ. ಹುಲಿತಿಮಾಪುರ ಬಳಿ ನಿನ್ನೆ ಅಪಘಾತದಲ್ಲಿ ಚಂದ್ರಪ್ಪ (45) ಎನ್ನುವವರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹುಲಿತಿಮಾಪುರದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮೃತ ಚಂದ್ರಪ್ಪ ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿಯಾಗಿದ್ದಾರೆ. ಮದುವೆ ನಿಲ್ಲಬಾರದೆಂಬ ಕಾರಣಕ್ಕೆ ಸಂಬಂಧಿಕರು ಚಂದ್ರಪ್ಪ ಸಾವಿನ ವಿಷಯ ಮುಚ್ಚಿಟ್ಟಿದ್ದರು. ಮದುವೆ ಮುಗಿದ ಬಳಿಕ ಸಂಬಂಧಿಕರು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸದ್ಯ ಚಂದ್ರಪ್ಪ ಮೃತ ಪಟ್ಟಿರುವ ವಿಷಯ ತಿಳಿದು ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಹುಬ್ಬಳ್ಳಿ : ರಾಜ್ಯದಲ್ಲಿ ಸಾಲು ಸಾಲು ಬ್ಯಾಂಕ್ ದರೋಡೆಗಳ ಪ್ರಕರಣಗಳ ನಡೆದಿದ್ದು, ಕಳೆದ ಹಲವು ದಿನಗಳ ಹಿಂದೆ ಬೀದರ್, ಮಂಗಳೂರಿನಲ್ಲಿ ನಡೆದ ದರೋಡೆ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಅಲ್ಲದೆ ಇಂದು ಬೆಳಿಗ್ಗೆ ಕೂಡ ಮೈಸೂರಿನಲ್ಲಿ ಕೇರಳ ಮೂಲದ ಉದ್ಯಮಿಯ ಕಾರು ಹಾಗೂ ಹಣದ ಜೊತೆಗೆ ದರೋಡೆ ಮಾಡಿದ ಘಟನೆ ನಡೆದಿತ್ತು. ಇದೀಗ ಹುಬ್ಬಳ್ಳಿಯಲ್ಲಿ ಕೂಡ ಬ್ಯಾಂಕ್ ದರೋಡೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಹೌದು ಹುಬ್ಬಳ್ಳಿಯಲ್ಲಿ ನಿನ್ನೆ ರಾತ್ರಿ ನವನಗರದಲ್ಲಿರುವ ಕೆನರಾ ಬ್ಯಾಂಕಿಗೆ ಕನ್ನ ಹಾಕಲು ಖದೀಮರು ಯತ್ನಿಸಿರುವ ಘಟನೆ ವರದಿಯಾಗಿದೆ. ಹುಬ್ಬಳ್ಳಿಯ ಎಪಿಎಂಸಿ ಆವರಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಗೆ ದರೋಡೆಗೆ ಯತ್ನಿಸಿದ್ದಾರೆ. ಬ್ಯಾಂಕಿನ ಶೇಟರ್ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬ್ಯಾಂಕ್ ದರೋಡೆಗೆ ಯತ್ನಿಸಿದ ಕಳ್ಳರಿಗಾಗಿ ಇದೀಗ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಬೆಳಗಾವಿ : ಬೆಳಗಾವಿಯಲ್ಲಿ ಜಾತ್ರೆಯಲ್ಲಿ ದೀಪ ಹಚ್ಚುವ ವಿಚಾರಕ್ಕೆ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ ಈ ಗಲಾಟೆ ಬಳಿಕ ಕುಸ್ತಿ ಪೈಲ್ವಾನ್ ರೀಲ್ಸ್ ಮುಖಾಂತರ ಉರಿಸಿದ್ದಕ್ಕಾಗಿ ಕುಸ್ತಿ ಪೈಲ್ವಾನನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಸಂಬಂಧ ಇಬ್ಬರು ಬಾಲಾಪರಾಧಿಗಳು ಸೇರಿದಂತೆ ಪೊಲೀಸರು 8 ಜನ ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಹೌದು ಬೆಳಗಾವಿಯಲ್ಲಿ ರೀಲ್ಸ್ ಮಾಡಿ ಉರಿಸಿದ ಹಿನ್ನೆಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಸ್ಕೆಚ್ ಹಾಕಿ ಕುಸ್ತಿ ಪೈಲ್ವಾನ್ ನನ್ನು ಮರ್ಡರ್ ಮಾಡಲಾಗಿದೆ. ಜನವರಿ 15ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಳವಿ ಗ್ರಾಮದ ಹೊರವಲಯದಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಕೊಳವಿ ಗ್ರಾಮದ ಪ್ರಕಾಶ್ ಹಿರಟ್ಟಿ ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಜಾತ್ರೆಯಲ್ಲಿ ದೀಪ ಹಚ್ಚುವ ವಿಚಾರಕ್ಕೆ ಪ್ರಕಾಶ್ ಹಾಗೂ ರವಿಚಂದ್ರ ಎನ್ನುವವರ ನಡುವೆ ಗಲಾಟೆ ಆಗಿದೆ. ಗಲಾಟೆಯ ಬಳಿಕ ಪ್ರಕಾಶ್ ಹಿರಟ್ಟಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹಾಕಿದ್ದ. ಬಳಿಕ ಪ್ರಕಾಶ್ ಹಿರಟ್ಟಿಯನ್ನು ಮಾರಕಸ್ತ್ರಗಳಿಂದ ಕೊಚ್ಚಿ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಿಯಮಿತ ಜಾಮೀನು ಪಡೆದಿರುವ ನಟ ದರ್ಶನ್, ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ದರ್ಶನ್ ಇಂದ 37 ಲಕ್ಷ ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಆ ಹಣವನ್ನು ಮರಳಿ ಕೊಡಿಸುವಂತೆ ದರ್ಶನ್ ಅರ್ಜಿ ಹಾಕಿದ್ದರು. ಅರ್ಜೆ ವಿಚಾರಣೆ ನಡೆಯಿಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಫೆಬ್ರವರಿ 1ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನದ ಬಳಿಕ ಅವರಿಂದ ಬರೋಬ್ಬರಿ 37 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಹಣವನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಬಳಸಲಾಗಿತ್ತು ಎಂದು ಪೊಲೀಸರು ಆರೋಪ ಮಾಡಿದ್ದರು. ರೇಣುಕಾ ಸ್ವಾಮಿ ಕೊಲೆಯನ್ನು ತಾವು ಮಾಡಿದ್ದಾಗಿ ಒಪ್ಪಿಕೊಳ್ಳಲು ಹೊರಗಡೆಯಿಂದ ಕರೆಸಲಾಗಿದ್ದ ಮೂವರಿಗೆ ಅದಾಗಲೇ ಒಂದಿಷ್ಟು ಹಣವನ್ನು ಸಹ ನೀಡಲಾಗಿತ್ತು. ಹಣ ವಶಪಡಿಸಿಕೊಂಡಿದ್ದ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ನ್ಯಾಯಾಲಯದಲ್ಲಿ…
ನಿಯಮ ಉಲ್ಲಂಘಿಸಿ ಅರಣ್ಯ ಪ್ರದೇಶದಲ್ಲಿ ಕಾಂತಾರ-2 ಸಿನೆಮಾ ಚಿತ್ರೀಕರಣ : ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ, ಪರಿಶೀಲನೆ
ಹಾಸನ : ನಿಯಮ ಉಲ್ಲಂಘನೆ ಮಾಡಿ ಅರಣ್ಯ ಪ್ರದೇಶದಲ್ಲಿ ಕಾಂತಾರ-2 ಸಿನಿಮಾ ಚಿತ್ರೀಕರಣ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಘಟನೆ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗವಿಗುಡ್ಡದಲ್ಲಿ ನಿಯಮ ಉಲ್ಲಂಘಿಸಿ ಅರಣ್ಯ ಪ್ರದೇಶದಲ್ಲಿ ಕಾಂತಾರ-2 ಸಿನಿಮಾ ಚಿತ್ರೀಕರಣ ಮಾಡುತ್ತಿದ್ದು, ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೌದು ಕಾಂತಾರ-2 ಸಿನೆಮಾ ಚಿತ್ರೀಕರಣ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಇದೀಗ ಭೇಟಿ ನೀಡಿದ್ದಾರೆ. ACF ಮಧು ಹಾಗೂ RFO ಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಶೂಟಿಂಗ್ ಮಾಡಲು ಅನುಮತಿ ನೀಡಿದ ಸ್ಥಳವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಒಂದು ಚಲನಚಿತ್ರದ ಚಿತ್ರೀಕರಣದಲ್ಲಿ 1000ಕ್ಕೂ ಅಧಿಕ ಜನರು ಭಾಗವಹಿಸುತ್ತಿದ್ದಾರೆ.ಕಳೆದ 10 ದಿನಗಳಿಂದ ಕಾಂತಾರ 2 ಶೂಟಿಂಗ್ ನಡೆಯುತ್ತಿದೆ. ಆದರೆ ಅಕ್ರಮವಾಗಿ ನಿಯಮ ಉಲ್ಲಂಘಿಸಿ ಅರಣ್ಯ ಪ್ರದೇಶದಲ್ಲಿ…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಕಾರ್ಪೊರೇಷನ್ ಕಸದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೋಚಿಂಗ್ ಕ್ಲಾಸ್ ಗೆ ತೆರಳುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹಿಮ್ಸ್ ಆಸ್ಪತ್ರೆಯ ಹಿಂಭಾಗ ಈ ಒಂದು ಅಪಘಾತ ಸಂಭವಿಸಿದೆ. ಯುವಕ ಅಧ್ವೈತ್ ಮತ್ತು ಆತನ ಸ್ನೇಹಿತ ಇಬ್ಬರು ಬೈಕ್ನಲ್ಲಿ ಕೋಚಿಂಗ್ ಕ್ಲಾಸ್ಗೆ ತೆರಳುತ್ತಿದ್ದರು. ಈ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಸದ ಗಾಡಿಗೆ ಬೈಕ್ ಡಿಕ್ಕಿಯಾಗಿ ಅಧ್ವೈತ್ (18) ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರ ವಿವೇಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಾಯಗೊಂಡಂತಹ ವಿವೇಕ್ ಎನ್ನುವ ಯುವಕನಿಗೆ ಸದ್ಯ ಹುಬ್ಬಳ್ಳಿಯ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ಕುರಿತು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ವಿಜಯಪುರ : ವಿಜಯಪುರ ಸಿಂದಗಿ ರಸ್ತೆಯಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ಇಂದು ಮಾಲೀಕನೊಬ್ಬ ಅಡ್ವಾನ್ಸ್ ಹಣ ಪಡೆದು ಕೆಲಸಕ್ಕೆ ತಡವಾಗಿ ಬಂದಿದ್ದಕ್ಕೆ ಕೋಪಗೊಂಡು ಇಬ್ಬರು ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ವಿಜಯಪುರ ಸಿಂದಗಿ ರಸ್ತೆಯಲ್ಲಿರುವಂತಹ ಇಟ್ಟಂಗಿ ಭಟ್ಟಿಯ ಮಾಲೀಕ ಖೇಮು ರಾಠೋಡ್ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದ ನಿವಾಸಿಗಳಾದಂತಹ ಸದಾಶಿವ ಹಾಗೂ ಉಮೇಶ್ ಮಾದರ್ ಎನ್ನುವ ಕಾರ್ಮಿಕರಿಗೆ ಅಲ್ಲೇ ಇದ್ದಂತಹ ಪ್ಲಾಸ್ಟಿಕ್ ಪೈಪ್ ಗಳಿಂದ ಅಂಗಾಲಿಗೆ ಭೀಕರವಾಗಿ ಹಲ್ಲೆ ನಡೆಸಿದ್ದ. ಸದಾಶಿವ ಹಾಗೂ ಉಮೇಶ್ ನಮ್ಮನ್ನು ಬಿಟ್ಟು ಬಿಡಿ ಎಂದು ಎಷ್ಟೇ ಗೊಗರೆದರೂ ಕೂಡ ಕನಿಕರವಿಲ್ಲದೆ ಖೇಮು ರಾಠೋಡ್ ಹಲ್ಲೆ ನಡೆಸಿದ್ದ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈ ಒಂದು ಘಟನೆಯಲ್ಲಿ…
ಬೆಂಗಳೂರು : ಬೆಂಗಳೂರಿನ ಮಾಪನ ಸೌಧ ಮೇಲೆ ಇಂದು ದಿಢೀರ್ ಆಗಿ ಲೋಕಾಯುಕ್ತ ದಾಳಿ ಮಾಡಿದೆ. ಲಂಚಕ್ಕೆ ಬೇಡಿಕೆ ಹಾಗೂ ಫೈಲ್ ಪೆಂಡಿಂಗ್ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾ.ಬಿಎಸ್ ಪಾಟೀಲ್, ಉಪಲೋಕಾಯುಕ್ತ ನ್ಯಾ.ಬಿ ವೀರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಉಪ ಲೋಕಾಯುಕ್ತ ಫಾಣಿಂದ್ರ ಸಹ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯ ವೇಳೆ 6 ಎಸ್ ಪಿ ಸೇರಿದಂತೆ 30ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಮುಂದಿನ 10 ದಿನಕ್ಕೂ ಹಾಜರಾತಿ ಸಹಿ ಮಾಡಿದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮಾಪನಸೌಧದ ರೆಜಿಸ್ಟರ್ ಬುಕ್ ಇಟ್ಕೊಂಡು ತರಾಟೆ ತೆಗೆದುಕೊಂಡಿದ್ದಾರೆ. ಈ ವೇಳೆ ನ್ಯಾ. ವೀರಪ್ಪ ಸಿಬ್ಬಂದಿಗಳ ಫೋನ್ ಪೇ ಚೆಕ್ ಮಾಡಿದ್ದಾರೆ. ಮೊಬೈಲ್ ನಲ್ಲಿ ಹಣ ವರ್ಗಾವಣೆ ಮಾಡಿಕೊಂಡ ಮಾಹಿತಿ ಇದೀಗ ತಿಳಿದು ಬಂದಿದೆ. ಹೀಗಾಗಿ ಅಧಿಕಾರಿಗಳ ಫೋನ್ ಪೇ ಗಳನ್ನು ಕೂಡ ಪರಿಶೀಲನೆ ನಡೆಸಲಾಗುತ್ತಿದೆ. 50 ಸಾವಿರದಿಂದ ರಿಂದ 1 ಲಕ್ಷ ಹೇಗ್ರಿ ನಿಮ್ಮ ಅಕೌಂಟಿಗೆ ಬಂತು ಎಂದು…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಇಡಿ ಅಧಿಕಾರಿಗಳು 30 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಿಕೊಂಡಿದ್ದು ಅಲ್ಲದೆ ಪ್ರಕಟಣೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಹೆಸರುಗಳನ್ನು ಉಲ್ಲೇಖಿಸಿತ್ತು ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜಕೀಯ ದುರುದ್ದೇಶದಿಂದ ಇಡಿ ಇಂದ ಪ್ರಕಟಣೆ ರಿಲೀಸ್ ಮಾಡಿಸಿದೆ ಎಂದು ಗಂಭೀರವಾದ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ತನಿಖೆಯ ಬಗ್ಗೆ ಇಡಿ ಮಾಧ್ಯಮ ಪ್ರಕಟಣೆ ವಿಚಾರವಾಗಿ ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. ರಾಜಕೀಯ ಉದ್ದೇಶಪೂರ್ವಕವಾಗಿ ತನಿಖೆ ಮಾಡುತ್ತಿದ್ದಾರೆ 50:50 ಅನುಪಾತ ಸೈಟ್ಗಳನ್ನು ಮುಟ್ಟುಗಳು ಹಾಕಿದ್ದೇವೆ ಅಂತಾರೆ ಆದರೆ ಅದಕ್ಕೂ ನನಗೂ ಸಂಬಂಧ ಇಲ್ಲ ಬಿಜೆಪಿ ಇಡೀಯಿಂದ ಮಾಧ್ಯಮ ಪ್ರಕಟಣೆ ರಿಲೀಸ್ ಮಾಡಿಸಿದೆ ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಇದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇನ್ನು ರಾಜ್ಯದ ಹಲವು ಕಡೆಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಜನರು ಊರು ಬಿಡುತ್ತಿರುವ ವಿಚಾರಕ್ಕೆ…