Author: kannadanewsnow05

ಬೆಂಗಳೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ನೆನ್ನೆಯಿಂದ ಬೆಂಗಳೂರು ಸೇರಿದಂತೆ ರಾಜಾದ್ಯಂತ ನೀತಿ ಸಂಹಿತೆ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ, ಲೈಸೆನ್ಸ್ ಹೊಂದಿರುವಂತಹ ಗನ್ ಗಳನ್ನು ಎಲ್ಲಾ ಠಾಣೆಗಳಿಗೆ ಒಪ್ಪಿಸಬೇಕು ಎಂದು ಬೆಂಗಳೂರಿನ ನಗರ ಪೊಲೀಸ್ ಆಯುಕ್ತ ಬೀದೆ ಆನಂದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. https://kannadanewsnow.com/kannada/bs-yediyurappa-cheated-hindutvawadis-by-denying-them-tickets-ks-eshwarappa/ ಈ ಕುರಿತಂತೆ ಮಾಹಿತಿ ನೀಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಲೈಸೆನ್ಸ್ ಹೊಂದಿರುವಂತಹ ಗನ್ ಗಳನ್ನು ವಶಪಡಿಸಿಕೊಳ್ಳುವಂತೆ ಎಲ್ಲ ಠಾಣೆಗಳಿಗೆ ಸೂಚನೆ ನೀಡಲಾಗಿದೆ ಎಂದರು. https://kannadanewsnow.com/kannada/electoral-bonds-brs-4th-largest-recipient-dmk-got-%e2%82%b9509-crore-from-santiago-martins-firm/ ಲೈಸೆನ್ಸ್ ಗನ್ ಗಳನ್ನು ಜಮಾ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಗನ್ ಹೊಂದಿರುವ ನಾಗರಿಕರು ಆಯಾ ಠಾಣೆಗಳಿಗೆ ಒಪ್ಪಿಸಬೇಕು ಎಂದು ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರು ಈ ಕುರಿತಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಶಿವಮೊಗ್ಗ: ಹಿಂದುತ್ವವಾದಿಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೋಸ ಮಾಡಿದ್ದಾರೆ. ಬಿಎಸ್‌ವೈ ಹಿಡಿತದಲ್ಲಿ ಪಕ್ಷ ಸಿಲುಕಿ ಒದ್ದಾಡುತ್ತಿದೆ. ನನ್ನ ನಿರ್ಧಾರ ವಾಪಸ್ ಪಡೆಯಲ್ಲ. ಬಂಡಾಯ ಸ್ಪರ್ಧೆ ಎಂದ ಮೇಲೆ ಹಿಂದೆ ಸರಿಯಲ್ಲ. ಪಕ್ಷೇತರ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. https://kannadanewsnow.com/kannada/electoral-bonds-brs-4th-largest-recipient-dmk-got-%e2%82%b9509-crore-from-santiago-martins-firm/ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಎಂಎಲ್‌ಸಿ ರವಿಕುಮಾ‌ರ್, ಅರುಣ್ ನನ್ನ ಮನೆಗೆ ಬಂದಿದ್ರು. ಯಾವ ಕಾರಣಕ್ಕೆ ನನ್ನ ಸ್ಪರ್ಧೆ ಎಂದು ಅವರಿಗೆ ಮಾಹಿತಿ ನೀಡಿದ್ದೇನೆ. ನನ್ನ ಮಗನಿಗೆ ಟಿಕೆಟ್ ಸಿಗದಿರುವುದು ಒಂದೇ ಕಾರಣ ಅಲ್ಲ. ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಮೋಸ ಮಾಡಿದ್ದಾರೆ ಎಂದು ಹೇಳಿದರು.ಯಡಿಯೂರಪ್ಪ ಹಿಡಿತದಲ್ಲಿ ಬಿಜೆಪಿ ಪಕ್ಷ ಸಿಲುಕಿದೆ. ಲಿಂಗಾಯತ ನಾಯಕ ಯತ್ನಾಳ್‌, ಸಿಟಿ ರವಿಯನ್ನು ರಾಜ್ಯಾಧ್ಯಕ್ಷರನ್ನಾಗಿ ಏಕೆ ಮಾಡಲಿಲ್ಲ. ಎಂಪಿ ಸ್ಥಾನಕ್ಕೆ ಸೀಟಿ ರವಿಗೆ ಟಿಕೆಟ್ ಕೊಡಬಹುದಾಗಿತ್ತು. ಬಿಎಸ್‌ವೈಗೆ ಲಿಂಗಾಯತರು, ಒಕ್ಕಲಿಗರು, ಹಿಂದುಳಿದವರು ಬೇಡ ಎಂದು ಕಿಡಿಕಾರಿದರು. https://kannadanewsnow.com/kannada/modi-is-afraid-of-mallikarjun-kharge-dk-shivakumar-shivakumar/ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಕೇಂದ್ರ ತಂಡದ ಬಳಿಯೂ ಇದನ್ನೇ…

Read More

ನವದೆಹಲಿ: ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕ ಬದಲಾವಣೆ ಮಾಡಿ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ. https://kannadanewsnow.com/kannada/belagavi-sp-suspends-asi-in-accident-for-not-wearing-helmet/ ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಗಳಿಗೆ ಏಪ್ರಿಲ್ 19ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ ಫಲಿತಾಂಶ ಎರಡು ದಿನ ಮುಂಚಿತವಾಗಿ ಹೊರಬೀಳಲಿದೆ. ಚುನಾವಣಾ ಆಯೋಗದ ಪ್ರಕಾರ, ಮತ ಎಣಿಕೆಯು ಜೂನ್ 4ರ ಬದಲು ಜೂನ್ 2ರಂದು ನಡೆಯಲಿದೆ. https://kannadanewsnow.com/kannada/elvish-yadav-arrested-by-noida-police-in-snake-venom-case-reports/ ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆ ಅವಧಿ ಜೂನ್ 2ರಂದು ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬದಲಾವಣೆ ತರಲಾಗಿದೆ. ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ಲೋಕಸಭಾ ಕ್ಷೇತ್ರಗಳ ಫಲಿತಾಂಶ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಪ್ರಕಟಣೆ ಹೇಳಿದೆ.

Read More

ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಎಎಸ್‌ಐ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಕೃಷ್ಣಾ ಬಡಾವಣೆ ಬಳಿ ತಡರಾತ್ರಿ ನಡೆದಿದೆ.ಹೆಲ್ಮೆಟ್ ಧರಿಸದೇ ಅತಿವೇಗವಾಗಿ ಬೈಕ್ ಚಾಲಾಯಿಸಿ ಹಂಪ್ ಜಿಗಿಸಿದಕ್ಕೆ ಅಪಘಾತ ಸಂಭವಿಸಿದೆ.ಇದೀಗ ಹೆಲ್ಮೆಟ್ ಧರಿಸಿ ಕಡ್ಡಾಯ ಆದೇಶವನ್ನು ನಿರ್ಲಕ್ಷ ವಹಿಸಿದಕ್ಕೆ ದೊಡವಾಡ ಠಾಣೆ ಪಿಎಸ್‌ಐ ನಂದೀಶ್‌ರನ್ನು ಅಮಾನತ್ತು ಮಾಡಿ ಅದೇಶಿಸಲಾಗಿದೆ. https://kannadanewsnow.com/kannada/election-commission-releases-details-of-electoral-bonds-submitted-by-political-parties/ ಹೆಲ್ಮೆಟ್ ಧರಿಸದಿದ್ದಕ್ಕೆ ಅಪಘಾತದಲ್ಲಿ ಎಎಸ್ಐ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ, ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ ಎಂಬ ಆದೇಶ ಸಮರ್ಪಕವಾಗಿ ಅನುಷ್ಠಾನಗೊಳಿಸದೆ ನಿರ್ಲಕ್ಷ ವಹಿಸಿದ್ದರಿಂದ ದೊಡ್ಡವಾಡ ಠಾಣೆ ಪಿಎಸ್ಐ ನಂದೀಶ್ ಅಮಾನತು ಗೊಳಿಸಲಾಗಿದೆ. https://kannadanewsnow.com/kannada/nirmala-sitharaman-should-answer-on-election-donations-mla-pradeep-easwar/ ಅಪಘಾತದಲ್ಲಿ ಏಎಸ್ಐ ವಿಜಯಕಾಂತ್ (51) ಸಾವನಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ದೊಡ್ಡವಡ ಠಾಣೆ ಎಎಸ್ಐ ಎನ್ನಲಾಗುತ್ತಿದ್ದು, ಎಲ್ಲಾ ಪೊಲೀಸರು ಹೆಲ್ಮೆಟ್ ಕಡ್ಡಾಯಗೊಳಿಸಿದ್ದ ಎಸ್ ಪಿ.ಆದರೆ ಆದೇಶವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಪಿಎಸ್ಐ ನಂದೀಶ್ ನನ್ನು ಅಮಾನತು ಮಾಡಿ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು : ಚುನಾವಣಾ ಬಾಂಡ್ ಗೆ ಸಂಬಂಧಿಸಿದಂತೆ ಬಿಜೆಪಿಗೆ ಇಲ್ಲಿವರೆಗೂ ಎಷ್ಟು ಹಣ ದೇಣಿಗೆ ಸಂಗ್ರಹವಾಗಿದೆ ಎನ್ನುವುದನ್ನು ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಅವರು ಉತ್ತರ ನೀಡಬೇಕು ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದಿಪೀಶ್ವರ್ ಒತ್ತಾಯ ಪಡಿಸಿದರು. https://kannadanewsnow.com/kannada/railway-passengers-note-weekly-special-train-service-between-hubballi-and-rameswaram/ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಚುನಾವಣಾ ದೇಣಿಗೆ ಬಗ್ಗೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಉತ್ತರ ನೀಡಬೇಕು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಪ್ರದೀಪ ಈಶ್ವರ ತಿಳಿಸಿದರು. 20,000ಕ್ಕೂ ಅಧಿಕ ದಣಿಗೆ ನೀಡಿದ ವಿವರ ಬಹಿರಂಗಪಡಿಸಬೇಕು. ಹತ್ತು ದಿನ ಮಾತ್ರ ಚುನಾವಣಾ ಬಾಂಡ್ ಓಪನ್ ಇರುತ್ತದೆ. https://kannadanewsnow.com/kannada/i-am-confident-that-eshwarappa-will-be-convinced-basavaraj-bommai/ ದೇಣಿಗೆ ನೀಡಿದರೆ ಯಾರಿಗೂ ಹೇಳಲ್ಲ ಎಂದು ಬಿಜೆಪಿ ಹೇಳುತ್ತದೆ. ಸುಪ್ರೀಂ ಕೋರ್ಟ್ ಸರಿ ಯಾರಿಗೂ ಹೇಳಲ್ಲ ಎಂದು ಬಿಜೆಪಿ ಹೇಳುತ್ತದೆ. ಚುನಾವಣಾ ಬಾಂಡ್ ನಲ್ಲಿ ಸಾಕಷ್ಟು ಹಗರಣ ಆಗಿದೆ. ಹದಿನೈದು ಸಾವಿರ ಕೋಟಿ ದೇಣಿಗೆ ಪಡೆದವರು ಕೊಟ್ಟವರ ವಿವರ ನೀಡಿಲ್ಲ. ಇದಕ್ಕೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಹಾಗೂ ಬಿಜೆಪಿಯವರು ಉತ್ತರ…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಈಗಾಗಲೇ ನಿನ್ನೆ ಚುನಾವಣಾ ಆಯೋಗ ದಿನಾಂಕ ಮಾಡಿದ್ದು ಅದಕ್ಕೂ ಮುನ್ನ ಬಿಜೆಪಿ ಮೊದಲು, ಎರಡನೇ ಪಟ್ಟೆ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಕೂಡ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಇದೀಗ ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. https://kannadanewsnow.com/kannada/railway-passengers-note-weekly-special-train-service-between-hubballi-and-rameswaram/ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾರ್ಚ್ 19 ರಂದು ಸಭೆ ಇದೆ ಅಂದೆ ಅಭ್ಯರ್ಥಿಗಳ ಪಟ್ಟಿ ಕುರಿತು ತೀರ್ಮಾನಿಸುತ್ತೇವೆ ಆದರೆ ನಾವು ಎರಡನೇ ಪಟ್ಟಿಯನ್ನು ಮಾರ್ಚ್ 20 ಮಾಡುತ್ತೇವೆ ಎಂದು ತಿಳಿಸಿದರು. https://kannadanewsnow.com/kannada/i-am-confident-that-eshwarappa-will-be-convinced-basavaraj-bommai/ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಂದರೆ ಭಯ ಹಾಗಾಗಿ ಅವರು ಚುನಾವಣಾ ಪ್ರಚಾರವನ್ನು ಅಲ್ಲಿಂದಲೇ ಆರಂಭಿಸಿದ್ದಾರೆ. ಕಲ್ಬುರ್ಗಿ ಸೇರಿದಂತೆ ರಾಜ್ಯದಲ್ಲಿ 20 ಕ್ಷೇತ್ರವನ್ನು ಕಾಂಗ್ರೆಸ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯಕ್ತಪಡಿಸಿದರು

Read More

ದಾವಣಗೆರೆ : ವೇಗವಾಗಿ ಬಂದಂತಹ ಟಿಪ್ಪರ್ ಒಂದು ಹಿಂಬದಿಂದ ಬೈಕುಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. https://kannadanewsnow.com/kannada/ks-eshwrappa-smg-news/ ಈ ಒಂದು ಅಪಘಾತದಲ್ಲಿ ದಾವಣಗೆರೆ ತಾಲ್ಲೂಕಿನ ಬಾತಿ ಗ್ರಾಮ ರಾಕೇಶ್ (22), ಆಕಾಶ್ (23) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದ್ದು, ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.‌ https://kannadanewsnow.com/kannada/shivamogga-eshwarappa-did-not-turn-up-even-after-1-pm-but-the-central-leaders-were-tired-of-waiting/ ಯುವಕರಿಬ್ಬರ ಮೃತದೇಹಗಳನ್ನು ಹರಿಹರ ತಾಲ್ಲೂಕಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪತ್ರ ಕಾಂತೇಶ ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಂಡಾಯ ವೆದ್ದಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಂದ್ರ ನಡೆಸಿದ್ದಾರೆ. ಹೀಗಾಗಿ ಇಂದು ರಾಜ್ಯ ನಾಯಕರು ಹಾಗೂ ಕೇಂದ್ರ ನಾಯಕರ ಸಂಧಾನ ವಿಫಲವಾಗಿದೆ. https://kannadanewsnow.com/kannada/breaking-bagalkot-girl-commits-suicide-after-being-accused-of-theft/ ಇಂದು ಕೇಂದ್ರ ನಾಯಕರಾದ ರಾಧಾ ಮೋಹನ್ ಅಗರ್ವಾಲ್ ಅವರು ಕೆ ಎಸ್ ಈಶ್ವರಪ್ಪ ಅವರ ಮನವೊಲಿಸಲು ಅವರ ಮನೆಗೆ ಆಗಮಿಸಿದ್ದರು ಈ ವೇಳೆ ಇವರು ಆಗಮಿಸುವ ಸುದ್ದಿ ತಿಳಿಯುತ್ತಿದ್ದಂತೆ ಅವರು ಕೆಲಸ ಇದೆ ಎಂದು ಮನೆಯಿಂದ ತೆರಳಿದ್ದಾರೆ. ಈ ವೇಳೆ ರಾಧಾ ಮೋಹನ್ ಅಗರ್ವಾಲ್ ಅವರು ಈಶ್ವರಪ್ಪ ಅವರ ಭೇಟಿಗಾಗಿ ಸುಮಾರು ಒಂದು ಗಂಟೆಗಳ ಕಾಲ ವರೆಗೂ ಕಾದು ಕಾದು ಸುಸ್ತಾಗಿ ಅನಂತರ ಅವರು ತೆರಳಿದ್ದಾರೆ ಎಂದು ತಿಳಿದುಬಂದಿದೆ. ಈ ವಿಷಯದ ಕುರಿತಾಗಿ ನಮ್ಮ ಕೈಲಾದಷ್ಟು ಸಂಧಾನ ಮಾಡುವ ಕೆಲಸ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ ನೀಡಿದರು. ನಾನು…

Read More

ಬಾಗಲಕೋಟೆ : ತನ್ನ ಮೇಲೆ ಕಳ್ಳತನ ಆರೋಪ ಬಂದಿದ್ದಕ್ಕೆ ಮನನೊಂದು 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಬಾಗಲಕೋಟೆ ತಾಲೂಕಿನ ಕದಾಂಪುರ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/election-commission-of-karnataka-keeps-a-close-watch-on-water-tankers-report/ ಮೃತ ವಿದ್ಯಾರ್ಥಿನಿಯನ್ನು ದಿವ್ಯಾ ಬಾರಕೇರ (14) ಎಂದು ಗುರುತಿಸಲಾಗಿದ್ದು, ಅನುಮಾನಾಸ್ಪವಾಗಿ ಸಾವಿಗೀಡಾಗಿದ್ದಾಳೆ ಎಂದು ಕೂಡ ಹೇಳಲಾಗುತ್ತಿದೆ.ಪ್ರೌಢಶಾಲಾ ವಿದ್ಯಾರ್ಥಿನಿ ದಿವ್ಯಾ ಬಾರಕೇರ ಮೇಲೆ ಶಾಲಾ ಶಿಕ್ಷಕಿಯರು ಸಂಶಯ ಪಟ್ಟಿದ್ರಾ ಎಂಬ ಅನುಮಾನ ಮೂಡಿದೆ. https://kannadanewsnow.com/kannada/lok-sabha-elections-exam-slated-to-be-held-in-may-postponed/ ಬಾಗಲಕೋಟೆ ತಾಲ್ಲೂಕಿನ ಕದಾಂಪುರ ಗ್ರಾಮದಲ್ಲಿ ತಡವಾಗಿ ಘಟನೆ ಬೆಳಕಿಗೆ ಬಂದಿದೆ.ಏಕೆಂದರೆ ಮಾರ್ಚ್ 14 ರಂದು ಶಿಕ್ಷಕಿಯೊಬ್ಬರ 2 ಸಾವಿರ ಹಣ ಕಳೆದು ಹೋಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಕರು ಐವರು ವಿದ್ಯಾರ್ಥಿಗಳ‌ ಮೇಲೆ ಸಂಶಯ ಬಂದು ದೇವರ ಮೇಲೆ ಪ್ರಮಾಣ ಮಾಡಿಸಿದ್ದರು. ನಂತರ ಕೊಠಡಿಯೊಂದರಲ್ಲಿ ಶಾಲಾ ಸಮವಸ್ತ್ರ ಸಹಿತ ಬಿಚ್ಚಿಸಿ ಚೆಕ್ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. https://kannadanewsnow.com/kannada/mobile-users-this-rule-regarding-sim-cards-will-change-from-july-1/ ಹೀಗಾಗಿ ಕಳ್ಳತನದ ಅನುಮಾನ ವ್ಯಕ್ತಪಡಿಸಿ ಅವಮಾನವಾದ ಹಿನ್ನೆಲೆಯಲ್ಲಿ ಮನನೊಂದು ನಿನ್ನೆ ಮಾರ್ಚ್ 16 ರಂದು ಬಾಲಕಿ…

Read More

ಬೆಂಗಳೂರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ವ್ಯಕ್ತಿಗೆ ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿದ ಹೆಸ್ಕಾಂ ಕ್ರಮಕ್ಕೆ ಹೈಕೋರ್ಟ್ ಕಿಡಿ ಕಾರಿದ್ದು, ಇದೀಗ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. https://kannadanewsnow.com/kannada/ipl-wont-be-moved-overseas-bcci-secretary-jay-shah-confirms-after-lok-sabha-election-date-announcement/ ಹೆಸ್ಕಾಂನ ನಿವೃತ್ತ ಎಂಜಿನಿಯರ್​ ಮಕಾಂದಾರ್​ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಹೆಸ್ಕಾಂನಲ್ಲಿ ಎಂಜಿನಿಯರ್​ ಆಗಿದ್ದ ಅರ್ಜಿದಾರರು ದುರಸ್ತಿಗೊಳಗಾದ ವಿದ್ಯುತ್​ ಪ್ರವರ್ತಕ(ಟ್ರಾನ್ಸ್​ ಫಾರ್ಮರ್​)ಗಳನ್ನು ಸಂಗ್ರಹಿಸಿ ಹಿಂದಿರುಗಿಸದಿರುವ ಆರೋಪ ಸಂಬಂಧ 86 ಲಕ್ಷ ರೂ.ನಿಮ್ಮಿಂದ ವಸೂಲಿ ಮಾಡಬೇಕಾಗಿದೆ ಎಂದು ತಿಳಿಸಿತು. ಹೆಸ್ಕಾಂಗೆ ಹಲವು ಬಾರಿ ಮನವಿ ಸಲ್ಲಿಸಿದ ಬಳಿಕ ಶೇ.25 ರಷ್ಟು ಪಿಂಚಣಿ ಮತ್ತು ಶೇ.50 ರಷ್ಟು ಗ್ರಾಚ್ಯುಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ನಿವೃತ್ತಿ ವೇತನ ಪಿಂಚಣಿಯನ್ನು ತಡೆ ಹಿಡಿಯಲಾಗಿದೆ ಎಂದು ಹೆಸ್ಕಾಂ ತಿಳಿಸಿತು. ಹೈಕೋರ್ಟ್​ದಲ್ಲಿ ಇದನ್ನು ಪ್ರಶ್ನಿಸಿದ್ದ ಅರ್ಜಿದಾರರು ತಮ್ಮ ವಿರುದ್ಧ ಯಾವುದೇ ರೀತಿಯ ಇಲಾಖೆವಾರು ತನಿಖೆ ಕೈಗೊಳ್ಳದೇ ದಂಡ ವಿಧಿಸಿದ್ದು ವಸೂಲಿಗೆ…

Read More