Author: kannadanewsnow05

ದಾವಣಗೆರೆ : ಶಾಲೆಗೆ ಸ್ವಲ್ಪ ಮರಳು ಪಡೆದಿದ್ದಕ್ಕೆ ನಿನ್ನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿ ಗಲಾಟೆ ನಡೆದಿತ್ತು ಗಲಾಟೆಯ ವೇಳೆ ಓರ್ವನ ಕೊಲೆಯಾಗಿತ್ತು. ಈ ಒಂದು ಕೊಲೆಗೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಎಂಪಿ ರೇಣುಕಾಚಾರ್ಯರ ಕಟ್ಟಾ ಬೆಂಬಲಿಗ ಸೇರಿದಂತೆ ಒಟ್ಟು 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಮರಳು ದಂಧೆಯ ವಿಚಾರಕ್ಕೆ ಮರ್ಡರ್ ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ ರೇಣುಕಾಚಾರ್ಯ ಕಟ್ಟಾ ಬೆಂಬಲಿಗ ಸೇರಿ 6 ಜನರನ್ನು ಇದೀಗ ಬಂಧಿಸಲಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿ ಈ ಒಂದು ಕೊಲೆ ನಡೆದಿತ್ತು ಮರಿಗೊಂಡನಹಳ್ಳಿಯ ಮರಳು ಪಡೆದಿದ್ದ ವಿಚಾರಕ್ಕೆ ಶಿವರಾಜ್ (33) ಕೊಲೆ ಮಾಡಲಾಗಿತ್ತು. ಪಕ್ಕದ ಕಡದಕಟ್ಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದ್ದು, ಆತನ ಪುತ್ರ ಅಭಿಷೇಕ್ ಸೇರಿದಂತೆ 6 ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ. ಮರಿಗೊಂಡನಹಳ್ಳಿ ಶಾಲೆಗೆ ಸ್ವಲ್ಪ ಮರಳು ಪಡೆದಿದ್ದಕ್ಕೆ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ಇಬ್ಬರಿಗೆ ಆರೋಪಿ ಸತೀಶ್ ಅಂಡ್ ಗ್ಯಾಂಗ್ ಚಾಕು ಇರಿದಿದ್ದರು. ಕೂಡಲೇ…

Read More

ಉತ್ತರಕನ್ನಡ : ಇತ್ತೀಚ್ಚಿಗೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಹಾಗೂ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಸ್ಟೆಲ್ ವಾರ್ಡನ್ ನಿಂದ ಸ್ವಚ್ಛತಾ ಸಿಬ್ಬಂದಿ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಹೌದು ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೊಜಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಾರ್ಡನ್​​ನಿಂದ ಸ್ವಚ್ಚತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ತನ್ನ ಬಗ್ಗೆ ಬಾಯಿ ಬಿಟ್ಟರೆ ಕೊಲೆ ಮಾಡುವುದಾಗಿ ವಾರ್ಡನ್ ಶಂಕರ ಪೊಳ ಎಂಬಾತ ಬೆದರಿಕೆವೊಡ್ಡಿದ್ದಾನೆ. ಲೈಂಗಿಕ ಕಿರುಕುಳದ ಬಗ್ಗೆ ಸಂತ್ರಸ್ತೆ ಮಹಿಳೆ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು ಸಹ ಅಧಿಕಾರಿಗಳು ಯಾವುದೇ ರೀತಿಯಾದಂತಹ ಕ್ರಮ ಕೈಗೊಂಡಿಲ್ಲ. ಈ ಹಿನ್ನಲೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ನನಗೆ ಸಹಕರಿಸದಿದ್ದರೆ ನಿನ್ನನ್ನು ಕೆಲಸದಿಂದ ತೆಗೆಯುವೆ ಹಾಗೂ ವಿಷಯವನ್ನು ಬೇರೊಬ್ಬರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಕುರಿತು ಉಲ್ಲೇಖಿಸಲಾಗಿದೆ. ಸಂತ್ರಸ್ಥ ಮಹಿಳೆ…

Read More

ಶಿವಮೊಗ್ಗ : ಇತ್ತೀಚಿಗೆ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಹೃದಯಾಘಾತ ಎನ್ನುವ ಕಾಯಿಲೆ ಸಾಮಾನ್ಯವಾಗಿ ಬಿಟ್ಟಿದೆ. ನಿನ್ನೆ ಯಾದಗಿರಿಯಲ್ಲಿ ಶಿಕ್ಷಕರು ಗದರಿದ್ದಕ್ಕೆ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ವಾಕಿಂಗ್ ಮಾಡುತ್ತಲೇ ಎಂಬಿಬಿಎಸ್ ವಿದ್ಯಾರ್ಥಿ ಒಬ್ಬ ಕುಸಿದು ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಹೌದು ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಪೃಥ್ವಿರಾಜ್ (20) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಬುಧವಾರ ಸಂಜೆ ನಗರದ ಪ್ರವಾಸಿ ಮಂದಿರದ ಬಳಿ ವಾಕಿಂಗ್ ಮಾಡುವಾಗ ವಿದ್ಯಾರ್ಥಿ ಕುಸಿದು ಬಿದ್ದಿದ್ದ. ತಕ್ಷಣವೇ ಯುವಕನನ್ನು ಮೋಹನ್ ಎಂಬುವರು ಪ್ರವಾಸಿ ಮಂದಿರ ಮುಂಭಾಗದಲ್ಲಿಯೇ ಇರುವ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಮಾರ್ಗಮಧ್ಯೆಯೇ ವಿದ್ಯಾರ್ಥಿ ಮೃತಪಟ್ಟಿದ್ದಾನೇ ಎಂದು ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ್ದಾರೆ.

Read More

ಬೆಂಗಳೂರು : ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಸಲಾಗುತ್ತದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪ ಸದ್ಯ ಎಲ್ಲೆಡೆ ಸಂಚಲನ ಮೂಡಿಸಿದೆ. ನಾಯ್ಡು ಹೇಳಿಕೆಗೆ ಇದೀಗ ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ ನೀಡಿದ್ದು, ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆಗೂ ನಮ್ಮ ನಂದಿನಿ ಬ್ರ್ಯಾಂಡ್ ಗು ಯಾವುದೇ ರೀತಿಯಾದ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 4 ವರ್ಷಗಳಿಂದ ನಂದಿನಿ ತುಪ್ಪ‌ ಅಲ್ಲಿಗೆ ಹೋಗಿಲ್ಲ. ಈಗ ನಂದಿನಿ ತುಪ್ಪ ತಿರುಪತಿಗೆ ಸರಬರಾಜು ಮಾಡಲು ಶುರು ಮಾಡಿದ್ದೇವೆ. 2013-18ರ ಅವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 3 ರಿಂದ 4 ಮೆಟ್ರಿಕ್‌ ಟನ್ ತುಪ್ಪ ಸರಬರಾಜು ಮಾಡಿದ್ದೇವೆ ಎಂದು ತಿಳಿಸಿದ್ದಾರೆ. 2019ರಲ್ಲಿ‌ ಸಮ್ಮಿಶ್ರ ಸರ್ಕಾರ ಇತ್ತು. ಆ ವರ್ಷ 17 ಟನ್ ಸರಬರಾಜು ಮಾಡಿದ್ದೇವೆ. 2020-24ರವರೆಗೆ ಟಿಟಿಡಿನವರು ನಂದಿನಿ ತುಪ್ಪವನ್ನ ಸ್ಥಗಿತ ಮಾಡಿದ್ದರು. ಇಲ್ಲಿ…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ರೈಲಿನಲ್ಲಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿದ ವಿಚಾರವಾಗಿ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಹೌದು ಆರೋಪಿಗಳಾದ ವಿಲ್ಸನ್ ಗಾರ್ಡನ್ ನಾಗ ಹಾಗೂ ವೇಲು ನನ್ನು ವಶಕ್ಕೆ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ರಾಜ್ಯಾತೀಥ್ಯ ಸಂಬಂಧ ಒಟ್ಟು ಮೂರು ಕೇಸ್ ದಾಖಲಿಸಲಾಗಿತ್ತು. 2 ಕೇಸ್ ನಲ್ಲಿ ವಿಲ್ಸನ್ ಗಾರ್ಡನ್ ನಾಗ ಆರೋಪಿಯಾಗಿದ್ದಾನೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಇದೀಗ ತೀರ್ಮಾನಿಸಿದ್ದಾರೆ. ಬಳಿಕ ಮಧ್ಯಾಹ್ನ 3:30ಕ್ಕೆ ಜಡ್ಜ್ ಮುಂದೆ ಇಬ್ಬರನ್ನು ಹಾಜರುಪಡಿಸಲಿದ್ದಾರೆ.ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆಯಲು ತೀರ್ಮಾನಿಸಲಾಗಿದೆ. ಬೆಂಗಳೂರಿನ 8ನೇ ACMM ನ್ಯಾಯಾಲಯಕ್ಕೆ ಪೊಲೀಸರು ಇಬ್ಬರು ಆರೋಪಿಗಳನ್ನು ಹಾಜರುಪಡಿಸಲಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಕೋರ್ಟ್ ಆದೇಶದ ಮೇರೆಗೆ ವಶಕ್ಕೆ ಪಡೆದುಕೊಳ್ಳಲಿದ್ದಾರೆ.

Read More

ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಈಗಾಗಲೇ ಬಿಜೆಪಿ ಶಾಸಕ ಮುನಿರತ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಮಹಿಳೆಯೊಬ್ಬರು ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸಿಗಿದ್ದಾನೆ ಎಂದು ಆರೋಪಿಸಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಿನ್ನೆ ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ ರಾಮನಗರ ಪೊಲೀಸರು ಮುನಿರತ್ನ ಅವರನ್ನು ವಶಕ್ಕೆ ಪಡೆದುಕೊಳ್ಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಹೌದು ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ಬಂಧಿಸಲು ರಾಮನಗರ ಪೊಲೀಸರಿಂದ ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ರಾಮನಗರ ಪೊಲೀಸರ ತಂಡ ಭೇಟಿ ನೀಡಲಿದೆ. ಕೋರ್ಟ್ ಗೆ ಅರ್ಜಿ ಸಲ್ಲಿಸಿ, ಅತ್ಯಾಚಾರ ಕೇಸಲ್ಲಿ ಹೆಚ್ಚಿನ ವಿಚಾರಣೆಗಾಗಿ ಶಾಸಕ ಮುನಿರತ್ನರನ್ನು ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಇಂದು ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಲಿದ್ದು, ಈ ಒಂದು ಪ್ರಕರಣದಲ್ಲಿ ಅವರಿಗೆ ಜಾಮೀನು…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ವಿಚಿತ್ರವಾದಂತಹ ಘಟನೆಯೊಂದು ನಡೆದಿದ್ದು, ತಂದೆಯ ಜೊತೆಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಒಂದು ಯುವಕನಿಗೆ ಕಚ್ಚಿದೆ. ಈ ವೇಳೆ ಹಾವನ್ನು ಕೊಂದು, ಅದರ ಸಮೇತ ಯುವಕ ಕಿಮ್ಸ್ ಆಸ್ಪತ್ರೆಗೆ ಬಂದಿರುವ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಹೌದು ಇಂಗಳಗಿ ಗ್ರಾಮದ ಫಕೀರಪ್ಪ ಅಣ್ಣಿಗೇರಿ ಹಾವು ಕಡಿತಕ್ಕೊಳಗಾದವ ಎಂದು ತಿಳಿದುಬಂದಿದೆ.ತಂದೆಯೊಂದಿಗೆ ಶೇಂಗಾ ಕೀಳಲು ಹೋಗಿದ್ದಾಗ ಯುವಕನಿಗೆ ಹಾವು ಕಚ್ಚಿದೆ. ಕೂಡಲೇ ಹಾವಿನ ತಲೆ ಜಜ್ಜಿ ಕೊಂದು ಹಾಕಿದ್ದಾನೆ. ನಂತರ ತಂದೆಯ ಜೊತೆ ಬಂದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಎಂದಿನಂತೆ ಹೊಲದಲ್ಲಿ ಕೆಲಸ ಮಾಡುವಾಗ ಮಗನಿಗೆ ಹಾವು ಕಚ್ಚಿತು. ಕೂಡಲೇ ಹಾವನ್ನು ಜಜ್ಜಿ ಹಾಕಿ ಕೊಂದು ಚೀಲದಲ್ಲಿ ಹಾಕಿಕೊಂಡು ಬಂದು ವೈದ್ಯರಿಗೆ ತೋರಿಸಿದ್ದಾನೆ. ಆಗ ವೈದ್ಯರು ಹೊರ ಹಾಕಲು ಹೇಳಿದರು. ಅದು ಚಿಣಗೇನ ಹಾವು. ಮಗ ವೈದ್ಯರಿಗೆ ಹಾವನ್ನು ತೋರಿಸಿ, ಇದೇ ಹಾವು ಕಚ್ಚಿದೆ, ಚಿಕಿತ್ಸೆ ಕೊಡಿ ಎಂದು ದಾಖಲಾಗಿದ್ದಾನೆ ಎಂದು ಫಕ್ಕಿರಪ್ಪ ತಂದೆ ತಿಳಿಸಿದರು.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದ್ದು ಮೈಸೂರು ಮೂಲದ ಪಿ ಎಸ್ ನಟರಾಜ್ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ನಿಯಮ ಬಾಹಿರವಾಗಿ ಕಾಮಗಾರಿ ನಡೆಸಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಹೌದು ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ಸಲ್ಲಿಕೆಯಾಗಿದ್ದು, ಮೈಸೂರು ಮೂಲದ ಪಿ ಎಸ್ ನಟರಾಜರಿಂದ ಇದೀಗ ದೂರು ದಾಖಲಾಗಿದೆ. ಕಳೆದ ತಿಂಗಳು ಆಗಸ್ಟ್ 27ರಂದು ನಟರಾಜ್ ದೂರು ನೀಡಿದ್ದರು ಎಂದು ಇದೀಗ ತಡವಾಗಿ ಬೆಳಕಿಗೆ ಬಂದಿದೆ. ದೂರಿನಲ್ಲಿ ನಿಯಮ ಬಾಹಿರವಾಗಿ ಕಾಮಗಾರಿ ಕೈಗೊಂಡ ಬಗ್ಗೆ ಆರೋಪ ಮಾಡಿ ದೂರು ನೀಡಿದ್ದರು. ವರುಣ ಹಾಗೂ ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿನ ಕಾಮಗಾರಿಯ ಕುರಿತು, ಸುಮಾರು 387 ಕೋಟಿಯ ಕಾಮಗಾರಿಗಳು ನಿಯಮಬಾಹಿರ ಆಗಿವೆ. ನಿಯಮಬಾಹಿರವಾಗಿ ಮುಡಾ ಕಾಮಗಾರಿಗಳನ್ನು ಕೈಗೊಂಡಿದೆ. ಸಿಎಂ ನಿರ್ದೇಶನದ ಅನ್ವಯ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಈ ಬಗ್ಗೆ ಸಿಬಿಐ ತನಿಖೆ ಕೈಗೊಳ್ಳುವಂತೆ ರಾಜ್ಯಪಾಲರಿಗೆ ನಟರಾಜ ಮನವಿ ಮಾಡಿದ್ದಾರೆ. ದೂರು ಸಲ್ಲಿಕೆಯಾದ…

Read More

ಬೆಂಗಳೂರು : ಸದ್ಯ ರಾಜ್ಯದಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಭಾರಿ ಚರ್ಚೆ ಆಗುತ್ತಿದ್ದು ಇದೀಗ ಈ ಒಂದು ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದೀಗ ಮುಡಾ ಸಂಬಂಧ ಸಲ್ಲಿಕೆಯಾಗಿರುವ ಮತ್ತೊಂದು ದೂರಿನ ಆಧಾರದಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲರು ವಿವರ ಕೋರಿದ್ದಾರೆ. ಹೌದು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಮೂಲದ ಪಿಎಸ್​ ನಟರಾಜ್​ ಎಂಬವರು ಆಗಸ್ಟ್ 27ರಂದು ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ನಟರಾಜ್ ದೂರಿಗೆ ಸಂಬಂಧಿಸಿ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ಮೇಲಿನ ದೂರಿನ ವಿವರಣೆ ಕೇಳಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರ ಬರೆದಿದ್ದಾರೆ. ರಾಜ್ಯಪಾಲರ ಪತ್ರದಲ್ಲೇನಿದೆ? ಮೈಸೂರಿನ ಪಿಎಸ್ ನಳರಾಜ್ ಎಂಬವರು ದಿನಾಂಕ 27-08-2024 ರಂದು ವಿವರವಾದ ಪ್ರಾತಿನಿಧ್ಯವನ್ನು ಸಲ್ಲಿಸಿದ್ದು ಮುಖ್ಯಮಂತ್ರಿಗಳ ವಿರುದ್ಧ ಆರೋಪ ಮಾಡಿರುತ್ತಾರೆ. ಇದರಲ್ಲಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮುಖ್ಯಮಂತ್ರಿಗಳ ಮೌಖಿಕ ಸೂಚನೆಯ ಮೇರೆಗೆ ಕರ್ನಾಟಕ ನಗರಾಭಿವೃದ್ಧಿ…

Read More

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈ ಕೋರ್ಟ್ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ. ಇಂದು ಹೈಕೋರ್ಟ್ ನಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಪ್ರಜ್ವಲ್ ಪರ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ತಮ್ಮ ವಿರುದ್ಧ ಮಹಿಳೆಯೊಬ್ಬರು ಮಾಡಿರುವ ಅತ್ಯಾಚಾರ ಆರೋಪ ಸತ್ಯಕ್ಕೆ ದೂರವಾಗಿದೆ. ಘಟನೆ ನಡೆದಿದ್ದರೂ ನಾಲ್ಕು ವರ್ಷಗಳ ಬಳಿಕ ದೂರು ನೀಡಿದ್ದು ಇದೊಂದು ಒಪ್ಪಿತ ಲೈಂಗಿಕ ಕ್ರಿಯೆ ಎಂದರು. ಇಡೀ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದರೆ ಸಂತ್ರಸ್ತೆ ಮಹಿಳೆ ಮೊದಲು ಅರ್ಜಿದಾರರ ತಂದೆ HD ರೇವಣ್ಣ ವಿರುದ್ಧ ಅತ್ಯಾಚಾರ ಆರೋಪದಲ್ಲಿ ದೂರು ದಾಖಲಿಸಿದ್ದರು. ಬಳಿಕ ಅರ್ಜಿದಾರರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ. ಅಷ್ಟಕ್ಕೂ ನಾಲ್ಕು ವರ್ಷಗಳ ಹಿಂದೆ 2020ರಲ್ಲಿ ನಡೆದಿರುವ ಘಟನೆ ಸಂಬಂಧಿಸಿದಂತೆ 2024ರಲ್ಲಿ ದೂರು…

Read More