Subscribe to Updates
Get the latest creative news from FooBar about art, design and business.
Author: kannadanewsnow05
‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ‘ಗಣರಾಜ್ಯೋತ್ಸವ’ ಹಿನ್ನೆಲೆ ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ರೈಲು ಸಂಚಾರ ಆರಂಭ
ಬೆಂಗಳೂರು : ನಾಳೆ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರ ಬೆಳಿಗ್ಗೆ 7 ಗಂಟೆಯ ಬದಲಾಗಿ 1 ಗಂಟೆ ಬೇಗ ಅಂದರೆ 6 ಗಂಟೆಗೆನೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು BMRCL ಪ್ರಕಟಣೆಯಲ್ಲಿ ತಿಳಿಸಿದೆ. ಹೌದು ನಮ್ಮ ಮೆಟ್ರೊ ಎಲ್ಲ ನಾಲ್ಕು ಟರ್ಮಿನಲ್ಗಳಿಂದ ಮತ್ತು ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಸಂಚಾರ ಏಕಕಾಲಕ್ಕೆ ಆರಂಭಗೊಳ್ಳಲಿದೆ. ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಒಟ್ಟು 20 ಹೆಚ್ಚುವರಿ ಟ್ರಿಪ್ಗಳನ್ನು ನಡೆಸಲಾಗವುದು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿರುವ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ, ಬಿಐಇಸಿ ನಡೆಯುತ್ತಿರುವ ಕಾರ್ಯಕ್ರಮ, ಶಾಲೆ ಮತ್ತು ಕಾಲೇಜುಗಳಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್ ಈ ಕ್ರಮವನ್ನು ಕೈಗೊಂಡಿದೆ. ಲಾಲ್ಬಾಗ್ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಬಂದು ಹೋಗುವವರ ಅನುಕೂಲಕ್ಕಾಗಿ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ಟೋಕನ್ ಬದಲಿಗೆ 30 ನೀಡಿ ಪೇಪರ್ ಟಿಕೆಟ್ ಖರೀದಿಸಬಹುದು. ನಗದು ಪಾವತಿಸಿ ಖರೀದಿಸಲು…
ದಕ್ಷಿಣಕನ್ನಡ : ಹಾಸ್ಟೆಲ್ ನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ತಾಲೂಕಿನಲ್ಲಿ ನಡೆದಿದೆ. ಮೂಡುಬಿದಿರೆಯ ಮಿಜಾರಿನ ಎಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಪಲ್ಗುಣಿ ಹಾಸ್ಟೆಲ್ನಲ್ಲಿ ಗುರುವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯು ಮೂಲತಃ ಬೆಂಗಳೂರಿನ ನಿವಾಸಿಯಾಗಿದ್ದಾಳೆ ಎಂದು ತಿಳಿದು ಬಂದಿದೆ. ಈ ವೇಳೆ ಮಗಳ ಸಾವಿನ ಬಗ್ಗೆ ಯುವತಿಯ ತಂದೆ ಅನುಮಾನ ವ್ಯಕ್ತಪಡಿಸಿದ್ದು, ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರ ವಿರುದ್ಧ ದೂರು ನೀಡಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಘಟನೆ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ನಿವೇಶನವನ್ನು ತಮ್ಮ ಪತ್ನಿಯ ಹೆಸರಿಗೆ ಮಾಡಿಸಲು ವ್ಯಕ್ತಿಯೊಬ್ಬರ ಬಳಿ ಪಿಡಿಒ ಅಧಿಕಾರಿ ಒಬ್ಬರು 20,000ಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಈ ವೇಳೆ ಲಂಚ ಪಡೆಯುವ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಳಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಟಿ ಬೇಗೂರು ಗ್ರಾಮ ಪಂಚಾಯಿತಿ ಪಿಡಿಒ ಅಧಿಕಾರಿ ಶೋಭಾ ರಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ ಎಂದು ತಿಳಿದು ಬಂದಿದೆ.ನೆಲಮಂಗಲ ತಾಲೂಕಿನ ತೊರೆಕೆಂಪೋಹಳ್ಳಿ ಗ್ರಾಮದ ರಮೇಶ್ ಅವರಿಗೆ ಸೇರಿದ ಖಾಲಿ ನಿವೇಶನ ಟಿ.ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿತ್ತು. ಸದರಿ ನಿವೇಶನವನ್ನು ತಮ್ಮ ಹೆಂಡತಿಯ ಹೆಸರಿಗೆ ಖಾತಾ ವರ್ಗಾವಣೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಖಾತೆ ಮಾಡಿಕೊಡುವ ವಿಚಾರವಾಗಿ ಮಧ್ಯವರ್ತಿ ರುದ್ರಪ್ಪ ಮೂಲಕ ಪಿಡಿಒ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಕೊಡುವ ಸಲುವಾಗಿ ರುದ್ರಪ್ಪ ರಮೇಶ್ ಅವರನ್ನು ಪಂಚಾಯಿತಿ ಕಚೇರಿಗೆ ಕರೆದುಕೊಂಡು ಬಂದಿದ್ದರು. ಲಂಚದ ಹಣ ಸ್ವೀಕರಿಸುವಾಗ ಬೆಂಗಳೂರು…
ಹಾಸನ : ಹಾಸನ ಜಿಲ್ಲೆಯಲ್ಲಿ ಹಾಡ ಹಗಲೇ ಇಬ್ಬರೂ ರೌಡಿಶೀಟರ್ ಗಳ ಮೇಲೆ ಪುಡಿ ರೌಡಿಗಳು ಮಚ್ಚಿನಿಂದ ಹಾಗೂ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದ ಘಟನೆ ಮೈಸೂರು ರಸ್ತೆಯ ಚನ್ನರಾಯಪಟ್ಟಣದ ಕಾಳೆನಹಳ್ಳಿ ಗೇಟ್ ಬಳಿ ನಡೆದಿದೆ. ಹೌದು ಚನ್ನರಾಯಪಟ್ಟಣ ಕಾಳೆನಹಳ್ಳಿ ಗೇಟ್ ಬಳಿಯ ಡಾಬಾ ಒಂದರಲ್ಲಿ ಈ ಒಂದು ಹಲ್ಲೆ ನಡೆಸಲಾಗಿದ್ದು, ಹಾಸನದಲ್ಲಿ ರೌಡಿಶೀಟರ್ ಗಳಿಗೆ ಮಚ್ಚಿನಿಂದ ಪುಡಿ ರೌಡಿಗಳು ಹಲ್ಲೆ ನಡೆಸಿದ್ದಾರೆ. ಮೈಸೂರು ರಸ್ತೆಯ ಕಾಳೆನಹಳ್ಳಿ ಡಾಬಾದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಇಬ್ಬರು ರೌಡಿಶೀಟರ್ಸ್ ಮೇಲೆ ಪುಡಿ ರೌಡಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಒಳಗದಂತಹ ರೌಡಿಶೀಟರ್ ಗಳನ್ನು ಕಾಳೆನಹಳ್ಳಿಯ ಕಾರ್ತಿಕ್ ಮತ್ತು ಪುನೀತ್ ಎಂದು ತಿಳಿದುಬಂದಿದೆ. ಘಟನೆ ಕುರಿತು ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಡಿಗೆಹಳ್ಳಿ ಪೊಲೀಸರು ಲಾಯರ್ ಜಗದೀಶ್, ಅವರ ಪುತ್ರ,, ಗನ್ ಮ್ಯಾನ್ ಹಾಗೂ ಕಾರು ಚಾಲಕರನ್ನು ಕೋಡಿಗೆಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಬಿಗ್ಬಾಸ್ ಸ್ಪರ್ಧಿ, ವಕೀಲ ಜಗದೀಶ್ ಮೇಲೆ ಹಲ್ಲೆ ನಡೆದಿದೆ. ಇದನ್ನು ಜಗದೀಶ್ ಅವರೇ ಸ್ವತಃ ವಿಡಿಯೋ ಮಾಡಿ ನನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ಮೂಗಿನಿಂದ ರಕ್ತ ಬರುತ್ತಿರುವುದನ್ನು ಕಾಣಬಹುದು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಡಿಗೆಹಳ್ಳಿ ಪೊಲೀಸರಿಂದ ವಕೀಲ ಜಗದೀಶ್ ಸೇರಿ ನಾಲ್ವರು ಅರೆಸ್ಟ್ ವಕೀಲ ಜಗದೀಶ್ ಜಗದೀಶ್ ಪುತ್ರ ಹಾಗೂ ಕಾರು ಚಾಲಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಪ್ರಕರಣ ಹಿನ್ನೆಲೆ? ಲಾಯರ್ ಜಗದೀಶ್ ಗೆ ಸೇರಿದ ಕಾಂಪ್ಲೆಕ್ಸ್ ಬಳಿಕ ಅಣ್ಣಮ್ಮ ದೇವಿಯನ್ನು ಕೂರಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಜಗದೀಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೇ ವಿಚಾರದಲ್ಲಿ ಜನವರಿ 24ರಂದು ರಾತ್ರಿ ಜಗದೀಶ್…
ಬೆಂಗಳೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಎಸ್ಪಿ ಪಕ್ಷದಿಂದ ಸ್ಪರ್ಧಿಸಿದ್ದ ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿ ರೇವತಿ ರಾಜ್ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಈ ವಿಚಾರವಾಗಿ ಅವರು ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಅಸಿಂಧುಗೊಳಿಸಿ ಹೊಸದಾಗಿ ಚುನಾವಣೆ ನಡೆಸಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಸಂಸದ ಯದುವೀರ್ ಒಡೆಯರ್ ಗೆ ನೋಟಿಸ್ ಜಾರಿ ಮಾಡಿದೆ. ಹೌದು ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಅಸಿಂಧುಗೊಳಿಸಿ ಹೊಸದಾಗಿ ಚುನಾವಣೆ ನಡೆಸಲು ಕೋರಿ ಬಹುಜನ ಸಮಾಜವಾದಿ ಪಕ್ಷದ ನಾಮಪತ್ರ ತಿರಸ್ಕೃತ ಅಭ್ಯರ್ಥಿ ರೇವತಿ ರಾಜ್ ಸಲ್ಲಿಸಿರುವ ಅರ್ಜಿಯ ಸಂಬಂಧ ಕರ್ನಾಟಕ ಹೈಕೋರ್ಟ್ ಸಂಸದ ಯದುವೀರ್ ಒಡೆಯರ್ ಅವರಿಗೆ ನಿನ್ನೆ ನೋಟಿಸ್ ಜಾರಿಗೊಳಿಸಿದೆ. ಪ್ರಕರಣ ಹಿನ್ನೆಲೆ? 2024ರ ಏಪ್ರಿಲ್ 4ರಂದು ರೇವತಿ ರಾಜ್ ಆಯೋಗಕ್ಕೆ ನಾಮಪತ್ರ ಸಲ್ಲಿಸಲಾಗಿತ್ತು. ಏಪ್ರಿಲ್ 5ರ ಬೆಳಿಗ್ಗೆ 11 ಗಂಟೆಯ ಒಳಗಾಗಿ ಸರಿಯಾಗಿ ಭರ್ತಿ ಮಾಡಿ ನಾಮಪತ್ರ ಸಲ್ಲಿಸಬೇಕು ಎಂದು ಚುನಾವಣಾಧಿಕಾರಿ ಸೂಚಿಸಿದ್ದರು. ಸೂಕ್ತ ಸಮಯದಲ್ಲಿ ನಾಮಪತ್ರ ಸಲ್ಲಿದ್ದರೂ…
ಚಾಮರಾಜನಗರ : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದ್ದು ಇದೀಗ ಚಾಮರಾಜನಗರದಲ್ಲಿ ಮನೆ ಕಟ್ಟಲು ಪತಿಯೊಬ್ಬರು ಸಾಲ ಮಾಡಿದ್ದಾರೆ. ಪತಿಯ ಸಾಲದ ಚಿಂತೆಯಲ್ಲಿ ಮನನೊಂದ ಮಹಿಳೆ ಒಬ್ಬರು ಇದೀಗ ಆತ್ಮಹತ್ಯೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೆರೆ ಕೋಟೆ ಗ್ರಾಮದಲ್ಲಿ ನಡೆದಿದೆ. ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದ ಮಹಾದೇವಮ್ಮ ಎನ್ನುವ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆ ನಿರ್ಮಿಸಲು ಮಹಾದೇವಮ್ಮ ಪತಿ 5 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ಮಾಡಿದ್ದರಿಂದ ಖಿನ್ನತೆಗೆ ಒಳಗಾಗಿದ್ದ ಮಹಾದೇವಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಮಾಡಿದ್ದ ಸಾಲಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಹಲವು ಜಿಲ್ಲೆಗಳಲ್ಲಿ ಜನ ಊರು ಬಿಟ್ಟರೆ ಇನ್ನು ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇನ್ನು ಈ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಕಠಿಣ ಕಾನೂನು ಜಾರಿ ತರುವುದಾಗಿ ನಿರ್ಧರಿಸಿದ್ದಾರೆ. ಇದರ ಮಧ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕ್ಷೇತ್ರದಲ್ಲಿ ಕೂಡ ಇದೀಗ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, 7 ತಿಂಗಳ ಗರ್ಭಿಣಿಯನ್ನು ಮನೆಯಿಂದ ಹೊರಹಾಕಿ ಸಿಬ್ಬಂದಿಗಳು ಮನೆಗೆ ಬೀಗ ಹಾಕಿ ಸಿಬ್ಬಂದಿಗಳು ಕ್ರೌರ್ಯ ಮೆರೆದಿದ್ದಾರೆ. ಹೌದು ಧಾರವಾಡ ಜಿಲ್ಲೆಯಲ್ಲೂ ಕೂಡ ಇದೀಗ ಮೈಕ್ರೋಫೈನಾನ್ಸ್ ಸಿಬ್ಬಂದಿಗಳು ಅಟ್ಟಹಾಸ ಮೆರೆದಿದ್ದು, ಗರ್ಭಿಣಿ ಹೊರಹಾಕಿ ಮನೆ ಬೇಗ ಹಾಕಿರುವ ಫೈನಾನ್ಸ್ ಸಿಬ್ಬಂದಿಗಳು. ಧಾರವಾಡ ತಾಲೂಕಿನ ಅರವಟ್ಟಿಗೆ ಗ್ರಾಮದಲ್ಲಿ ಕಿರುಕುಳ ನೀಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸದ್ಯ ಅರವಟ್ಟಿಗೆ ಗ್ರಾಮದ 20ಕ್ಕೂ ಹೆಚ್ಚು ಕುಟುಂಬಗಳು ಊರು ಬಿಟ್ಟಿವೆ. ಇಕ್ವಿಟಾಸ್ ಫೈನಾನ್ಸ್ ಪ್ರತಿನಿಧಿಗಳ ಕಾಟಕ್ಕೆ ಜನರು ಊರು…
ಹುಬ್ಬಳ್ಳಿ : ಒಂದು ಕಡೆ ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ಅವರ ನಡುವೆ ಬಿರುಕು ಮೂಡಿದ್ದು, ಇನ್ನೊಂದು ಕಡೆ ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ವದಂತಿ ಹರಡಿದೆ. ಈ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾರ್ಡ್ ಪ್ರತಿಕ್ರಿಯೆ ನೀಡಿದ್ದು ಶ್ರೀರಾಮುಲು ಅವರು ನನ್ನ ಸ್ನೇಹಿತ. ಕಾಂಗ್ರೆಸ್ ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ನಾನು ಸ್ವಾಗತ ಕೋರುತ್ತೇನೆ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ನನ್ನ ಸ್ನೇಹಿತ ಅವರ ಬಗ್ಗೆ ನನಗೆ ಗೌರವವಿದೆ.ರಾಮುಲು ನಮ್ಮ ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ಸ್ವಾಗತ ಕೋರುತ್ತೇನೆ. ಈ ಕುರಿತಂತೆ ಸಿಎಂ ಮತ್ತು ಪಕ್ಷದ ಅಧ್ಯಕ್ಷರು ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು. ಚುನಾವಣೆಗೆ ಮುನ್ನ ರಾಮುಲು ಅವರನ್ನು ಡಿಕೆ ಶಿವಕುಮಾರ್ ಸಂಪರ್ಕ ಮಾಡಿದ ವಿಚಾರವಾಗಿ ಡಿಕೆ ಶಿವಕುಮಾರ್ ಸಂಪರ್ಕ ಮಾಡಿರುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮ ಅಧ್ಯಕ್ಷರು ಸಂಪರ್ಕ ಮಾಡಿದ್ದರೂ ಮಾಡಿರಬಹುದು ನಾನು…
ಬಳ್ಳಾರಿ : ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಇದೀಗ ಬಿರುಕು ಮೂಡಿದೆ. ಜನಾರ್ದನ ರೆಡ್ಡಿ ವಿರುದ್ಧ ಶ್ರೀರಾಮುಲು ಬೆಂಬಲಿಗರು ದೂರು ನೀಡಿರುವ ವಿಚಾರವಾಗಿ ಇಂದು ಬಳ್ಳಾರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ನಾನು ಸಿಬಿಐ ನಂತಹ ಕೇಸ್ ಗಳನ್ನು ನೋಡಿದ್ದೇನೆ ಇದಕ್ಕೆಲ್ಲ ಜಗ್ಗುವುದಿಲ್ಲ ಬಗ್ಗುವುದಿಲ್ಲ ಎಂದು ಮತ್ತೆ ಗುಡುಗಿದ್ದಾರೆ. ಬಳ್ಳಾರಿಯಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಶ್ರೀರಾಮುಲು ಬೆಂಬಲಿಗರು ಎಸ್ಪಿಗೆ ದೂರು ನೀಡಿರುವ ವಿಚಾರವಾಗಿ ನಾನು ಸಿಬಿಐ ಅಂತಹ ಕೇಸ್ ಗಳನ್ನು ನೋಡಿದ್ದೇನೆ. ಇದನ್ನೆಲ್ಲ ಲೆಕ್ಕ ಇಡಲ್ಲ. ಇಂಥದಕ್ಕೆಲ್ಲಾ ನಾನು ಜಗ್ಗಲ್ಲ ಹೆದರಲ್ಲ. ಆಸ್ತಿ ವಿಚಾರಕ್ಕೆ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ವಹಿ ಮನಸು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಯಾವುದು ಸಹ ರಹಸ್ಯವಾಗಿ ಉಳಿಯಲ್ಲ ನಿಧಾನವಾಗಿ ಎಲ್ಲ ವಿಷಯ ಗೊತ್ತಾಗುತ್ತದೆ ಎಂದರು. ನಾನು ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ವರಿಷ್ಠರು ಸೂಚನೆ ಕೊಟ್ಟಿದ್ದಾರೆ ನಾನು ಅಲ್ಲೇ ಮಾತನಾಡುತ್ತೇನೆ. ಏನೇ ಇದ್ದರೂ…