Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
BREAKING : ಕೋಗಿಲು ಲೇಔಟ್ ನಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಹಂಚಿಕೆ ಮಾಡುತ್ತೇವೆ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ
ಬೆಂಗಳೂರು : ಬೆಂಗಳೂರಿನ ಶ್ರೀನಿವಾಸಪುರದಲ್ಲಿರುವ ಕೋಗಿಲಿ ಕ್ರಾಸ್ ನಲ್ಲಿ ಮನೆಗಳ ತೆರವು ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟೀಕೆ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆ ಹಂಚಿಕೆ ಮಾಡುತ್ತೇವೆ ಎಂದು ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೇರಳ ಮುಖ್ಯಮಂತ್ರಿ ವಾಸ್ತವ ವಾರ್ತೆ ಮಾಡಿಕೊಳ್ಳದೆ ಮಾತನಾಡಿದ್ದಾರೆ ಕೆಲವರು ಡಮ್ ಸೈಟ್ ನಲ್ಲಿ ಅಕ್ರಮವಾಗಿ ವಾಸವಾಗಿದ್ದರು. ನಮ್ಮ ಶಾಸಕರು ಮತ್ತು ಅಧಿಕಾರಿಗಳು ಅದನ್ನು ತೆರವು ಮಾಡಿದ್ದಾರೆ. ನಮಗೆ ಬೆಂಗಳೂರು ಬಗ್ಗೆ ಚೆನ್ನಾಗಿ ಗೊತ್ತಿದೆ. ಮನೆ ಕಳೆದುಕೊಂಡವರಿಗೆ ನಾವು ಮನೆ ಹಂಚಿಕೆ ಮಾಡುತ್ತೇವೆ. ರಾಜೀವ್ ಗಾಂಧಿ ವಸತಿ ನಿಗಮ ಮೂಲಕ ಮನೆ ಹಂಚಿಕೆ ಮಾಡುತ್ತೇವೆ ನಾವು ಬುಲ್ಡೋಜರ್ ಪದ್ಧತಿ ಬಳಸಿಲ್ಲ ಈ ಕುರಿತು ನಮ್ಮ ಪಕ್ಷದ ನಾಯಕರಿಗೂ ಮಾಹಿತಿ ನೀಡಿದ್ದೇವೆ ಅವರು ಇಲ್ಲಿನ ಸ್ಥಿತಿ ತಿಳಿದುಕೊಳ್ಳದೆ ಮಾತನಾಡಲು ಸರಿಯಲ್ಲ ಸರ್ಕಾರಿ ಜಾಗ ಒತ್ತುವರಿ ಮಾಡಲು ಬಿಡಲ್ಲ ಚುನಾವಣೆ ವೇಳೆ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಅಡಿಕೆ ಶಿವಕುಮಾರ್ ನಡುವೆ, ಶೀತಲ ಸಮರ ನಡೆದಿದೆ. ಇದರ ಮಧ್ಯ ಸಚಿವ ಎಂಬಿ ಪಾಟೀಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಪೂರ್ಣಾವಧಿ ಮುಖ್ಯಮಂತ್ರಿ ಆಗಲು ಬಿಡಲಿಲ್ಲ. ಅವರಿಗೆ ಕಣ್ಣೀರು ಹಾಕಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ. ಹೈಕಮಾಂಡ್ ಹೇಳುವವರೆಗೂ ನಾನೆ ಮುಖ್ಯಮಂತ್ರಿ ಅಂತ ಹೇಳಿದ್ದಾರೆ ಬಿಜೆಪಿಯವರು ಯಡಿಯೂರಪ್ಪ ಅವರನ್ನು ಮುಂದುವರಿಸಲು ಬಿಡಲಿಲ್ಲ ಸಿಎಂ ಆಗಿ ಯಡಿಯೂರಪ್ಪ ಅವರನ್ನು ಪೂರ್ಣಾವಧಿ ಮುಗಿಸಲು ಬಿಟ್ಟಿಲ್ಲ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿದರು ಎಂದರು. ಡಿಕೆ ಶಿವಕುಮಾರ್ ಬಹಳ ಶ್ರಮಪಟ್ಟು ಪಕ್ಷದ ಕೆಲಸ ಮಾಡಿದ್ದಾರೆ ಅವರು ಶ್ರಮಪಟ್ಟಿದ್ದಾರೆ ಅದರಲ್ಲಿ ಬೇರೆ ಮಾತಿಲ್ಲ ಅಹಿಂದ ಸಮಾವೇಶ ಮಾಡುವುದರಲ್ಲಿ ತಪ್ಪೇನಿದೆ ಪಕ್ಷವನ್ನು ಬಲಗೊಳಿಸಲು ಸಮಾವೇಶ ಮಾಡಿದರೆ ತಪ್ಪಿಲ್ಲ ಸ್ಥಳೀಯ ಚುನಾವಣೆಗಳಲ್ಲಿ ಮೈತ್ರಿ ಇಲ್ಲ…
ಹುಬ್ಬಳ್ಳಿ : ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಗರ್ಭಿಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪ ಆರೋಪದ ಮೇಲೆ ಬೆಳಗಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜ ಗಿರಿಯಪ್ಪನವರ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು, ಕರ್ತವ್ಯಲೋಪದ ಆರೋಪ ಹಿನ್ನೆಲೆಯಲ್ಲಿ ಶುಕ್ರವಾರ ಪಿಡಿಒ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪಿಡಿಒ ನಾಗರಾಜ ಗಿರಿಯಪ್ಪನವರ ಅವರು ಗರ್ಭಿಣಿ ಮಾನ್ಯ ಶವಸಂಸ್ಕಾರ ಸಂದರ್ಭದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೆ, ಸಾಮಾಜಿಕ ಸ್ಥಾಯಿ ಸಮಿತಿ ಸದಸ್ಯರನ್ನು ಕರೆದು ಸಭೆ ನಡೆಸಿ, ಕೈಗೊಂಡ ಕ್ರಮಗಳ ಕುರಿತು ಠರಾವು ಪಾಸ್ ಮಾಡಿಲ್ಲ. ಜೊತೆಗೆ, ಅಂತ್ಯಸಂಸ್ಕಾರದ ವೇಳೆ ಪೊಲೀಸರು ಪಂಚಾಯತ್ ಸಿಬ್ಬಂದಿಯ ಸಹಾಯ ಕೇಳಿದಾಗ ಅದಕ್ಕೂ ಸ್ಪಂದಿಸದೆ, ಶಿಷ್ಟಾಚಾರ ಪಾಲಿಸುವಲ್ಲಿ ಹಾಗೂ ಕರ್ತವ್ಯ ನಿರ್ವಹಿಸುವಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
SHOCKING : ಬೆಂಗಳೂರಿನಲ್ಲಿ ರೋಗಿಗೆ O+ ಬದಲು A+ ರಕ್ತ ನೀಡಿ ಎಡವಟ್ಟು : ಆಸ್ಪತ್ರೆ ಸಿಬ್ಬಂದಿ ವಿರುದ್ಧ ದೂರು ದಾಖಲು!
ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಅನಾಹುತ ಒಂದು ತಪ್ಪಿದೆ. ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಂದ ಎಡವಟ್ಟು ಆಗಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ರೋಗಿ ಒಬ್ಬ ಆಸ್ಪತ್ರೆಗೆ ಬಂದಿದ್ದ ಈ ವೇಳೆ O+ ರಕ್ತ ನೀಡೋ ಬದಲು A+ ರಕ್ತ ನೀಡಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ. ರೋಗಿ ಪುನೀತ್ ಸೂರ್ಯಗೆ ಐಸಿಯುನಲ್ಲಿ ಇದೀಗ ಚಿಕಿತ್ಸೆ ಮುಂದುವರಿದಿದೆ. ಚಿಕಿತ್ಸೆಗಾಗಿ ಪುನೀತ್ ಸೂರ್ಯ ಆಸ್ಪತ್ರೆಗೆ ಬಂದಿದ್ದ ಸದ್ಯ ಸಹಜ ಸ್ಥಿತಿಗೆ ಪುನೀತ್ ಸೂರ್ಯ ಮರಳುತ್ತಿದ್ದಾನೆ. ರೋಗಿಗೆ ಬೇರೆ ರಕ್ತ ನೀಡಿದ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಉಮೇಶ ಎಂದು ತಿಳಿದು ಬಂದಿದ್ದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಮೇಶ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಆಡಳಿತ ಆಸ್ಪತ್ರೆಯ ಮಂಡಳಿ ಭರವಸೆ ನೀಡಿದೆ. ರಜೆ ಕೊಡದ ಹಿನ್ನೆಲೆಯಲ್ಲಿ ತಪ್ಪಾಗಿ ಹೋಯಿತು ಎಂದು ಲ್ಯಾಬ್ ಟೆಕ್ನಿಷಿಯನ್ ತಿಳಿಸಿದ್ದಾನೆ. ಉಮೇಶ್ ಉತ್ತರ ಕೇಳಿ ಸಂಬಂಧಿಕರು ಮತ್ತಷ್ಟು ಕೇರಳಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದ್ದು ಚಾಕುವಿನಿಂದ ಇರಿದು ಪತಿಯಿಂದಲೇ ಪತ್ನಿಯ ಭೀಕರ ಕೊಲೆ ಆಗಿದೆ. ಕೊಲೆಯ ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಲೇಔಟ್ ನಲ್ಲಿ ಈ ಒಂದು ಕೊಲೆ ನಡೆದಿದೆ. ಚಾಕುವಿನ ಇರಿದು ಪತ್ನಿ ಆಯಾಶಾ ಸಿದ್ದಿಕಿ (39) ಯನ್ನು ಪತಿ ಸೈಯದ್ ಕೊಲೆ ಮಾಡಿದ್ದಾನೆ. ಪತಿಯಿಂದ ಕೊಲೆಯಾದ ಆಯೇಷಾ ಸಿದ್ಧಿಕಿಗೆ ಸೈಯದ್ ಜಬಿ ಮೂರನೆ ಪತಿಯಾಗಿದ್ದಾನೆ. ಆರೋಪಿ ಸೈಯದ್ ಜಬಿಗೆ ಎರಡನೇ ಪತ್ನಿ ಆಗಿರುವ ಆಯೇಷಾ ಸಿದ್ದಿಕಿ ಮಸಾಜ್ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದರು. ಪಾರ್ಲರ್ ಕೆಲಸ ಬಿಡುವಂತೆ ಪತಿ ಸೈಯದ್ ಹೇಳಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ನೆನ್ನೆ ರಾತ್ರಿ ಗಲಾಟೆ ವಿಕೋಪಕ್ಕೆ ತಿರುಗಿ ಸಯ್ಯದ್ ಪತ್ನಿಯನ್ನು ಚಾಕುವಿನಿಂದ ಹಿಡಿದು ಕೊಲೆ ಮಾಡಿದ್ದಾನೆ ಸಂಪಗೆ ಹೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ಹಿಲಿಯಂ ಸ್ಪೋಟದಿಂದ ಬಲೂನ್ ಮಾರಾಟಗಾರ ಸಲೀಂ ಸೇರಿದಂತೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಜುಳಾ ಹಾಗೂ ಲಕ್ಷ್ಮೀಸಹ ಸಾವನ್ನಪ್ಪಿದ್ದು ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ ಇದೀಗ ಹೂವಿನ ವ್ಯಾಪಾರ ಮಾಡಿಕೊಂಡಿದ್ದ ಮಂಜುಳಾ ಅವರ ಸಾವಿನ ಸುದ್ದಿ ಕೇಳಿ ಅವರ ಸಹೋದರ ಪರಮೇಶ್ವರ ಅವರು ಕೂಡ ಇಂದು ಸಾವನ್ನಪ್ಪಿದ್ದಾರೆ. ಹೌದು ತಂಗಿ ಮಂಜುಳಾ ಸಾವಿನ ಸುದ್ದಿ ಕೇಳಿ ಅಣ್ಣ ಪರಮೇಶ್ವರ್ (60) ಇದೀಗ ಸಾವನಪ್ಪಿದ್ದಾರೆ ಹೀಲಿಯಂ ಸಿಲಿಂಡರ್ ಸ್ಪುಟದಿಂದ ಮಂಜುಳ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗಿದೆ ನಿನ್ನೆ ಆಸ್ಪತ್ರೆಯಲ್ಲಿ ಮಂಜುಳಾ ಸಾವನಪ್ಪಿದ್ದಾರೆ ತಂಗಿ ಮಂಜುಳಾ ಸಾವಿನ ಸುದ್ದಿ ಕೇಳಿ ಅಣ್ಣ ಪರಮೇಶ್ವರ್ ಇದೀಗ ಸಾವನಪ್ಪಿದ್ದಾರೆ ನಂಜನಗೂಡು ತಾಲೂಕಿನ ಚಾಮಲಾಪುರದ ನಿವಾಸಿ ಪರಮೇಶ್ವರ್ ಸಾವನ್ನಪ್ಪಿದ್ದಾರೆ ಪರಮೇಶ್ವರ್ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಲಬುರ್ಗಿ : ದೆವ್ವ ಹಿಡಿದಿದೆ ಅಂತ ಮಹಿಳೆಯ ಬರ್ಬರ ಕೊಲೆ ಮಾಡಲಾಗಿದೆ. ಬೇವಿನ ಕಟ್ಟಿಗೆಯಿಂದ ಹೊಡೆದು ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ ಕಲ್ಬುರ್ಗಿ ಮೂಲದ ಮಹಿಳೆಯನ್ನು ಮಹಾರಾಷ್ಟ್ರದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಸಂಬಂಧಿಕರು ಮಹಿಳೆಯನ್ನು ಹೊಡೆದು ಕೊಲೆ ಮಾಡಿದ್ದಾರೆ 38 ವರ್ಷದ ಮುಕ್ತಬಾಯಿ ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ. ಕಲಬುರ್ಗಿಯ ಆಳಂದದ ನಿವಾಸಿಯಾಗಿರುವ ಮುಕ್ತಬಾಯಿ ಆಗಿರುವ ಈಕೆ ಮಹಾರಾಷ್ಟ್ರದ ಮುರುಮ್ ಗ್ರಾಮದಲ್ಲಿ ಭೀಕರವಾಗಿ ಕೊಲೆಯಾಗಿದ್ದಾಳೆ. ಕಾರಣ ಏನೆಂದರೆ ಈಕೆಗೆ ದೆವ್ವ ಮೆತ್ತಿ ಕೊಂಡಿದೆ ಅದನ್ನ ಬಿಡಿಸುತ್ತೇವೆ ಅಂತ ಹೇಳಿ ಬೇವಿನ ಕಟ್ಟಿಗೆನಿಂದ ಹೊಡೆದು ಕೊಲೆ ಮಾಡಿದ್ದಾರೆ ಬೇವಿನ ಕಟ್ಟಿಗೆಯಿಂದ ಹೊಡೆದರೆ ದೆವ್ವ ಬಿಟ್ಟು ಹೋಗುತ್ತದೆ ಎನ್ನುವ ನಂಬಿಕೆಯಿಂದ ಹೊಡೆದು ಹೊಡೆದು ಕೊಲೆ ಮಾಡಿದ್ದಾರೆ ಎಂದು ಮುಕ್ತ ಬಾಲ್ಯ ಸಂಬಂಧಿಕರು ಗಂಭೀರವಾಗಿ ಆರಂಭಿಸಿದ್ದಾರೆ. ಏಕಾಏಕಿ ತಲೆ ಸುತ್ತಿನಿಂದ ಮುಕ್ತಾಭಾಯಿ ಮನೆಯ ಮಳೆ ಬಂದು ಬಿದ್ದಿದ್ದಾಳೆ. ದೆವ್ವ ಹಿಡಿದಿದೆ ಅಂತ ಮುಕ್ತಾಭಾಯಿ ಮೇಲೆ ಹಲ್ಲೆ ಮಾಡಿದ್ದಾರೆ ಕಳೆದ ನಾಲ್ಕು ದಿನಗಳ ಹಿಂದೆ…
ಮೈಸೂರು : ಮೈಸೂರು ಅರಮನೆ ಎದುರು ಹೀಲಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ತನಿಖೆಯ ವೇಳೆ ಮೃತ ಸಲೀಂ ಸೈಕಲ್ ನಲ್ಲಿ ಇದ್ದಂತಹ ಅರ್ಧ ಕೆಜಿ ಹಿಲಿಯಂ ಪೌಡರ್ ನನ್ನು ವಶ ಪಡಿಸಿಕೊಂಡಿದ್ದಾರೆ. ಹೌದು ಮೈಸೂರು ಅರಮನೆ ಬಳಿ ಹೀಲಿಯಮ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಸಲೀಂ ಸೈಕಲ್ನಲ್ಲಿ ಇಟ್ಟುಕೊಂಡು ಬಲೂನ್ ಮಾರಾಟ ಮಾಡುತ್ತಿದ್ದ ಸ್ಪೋಟದ ಸ್ಥಳದಲ್ಲಿ ಇದೀಗ ಅರ್ಧ ಕೆಜಿ ಹಿಲಿಯಂ ಪೌಡರ್ ತುಂಬಿದ ಚೀಲ ಪತ್ತೆಯಾಗಿದೆ. ಪೊಲೀಸ್ ಪರಿಶೀಲನೆಯ ವೇಳೆ ಪೊಲೀಸರು ಹಿಲಿಯಂ ಪೌಡರನ್ನು ಅಶಕ್ಕೆ ಪಡೆದುಕೊಂಡಿದ್ದಾರೆ. ಹಿಲಿಯಂ ಗ್ಯಾಸ್ ರೆಫೀಲ್ ಮಾಡಲು ಅರ್ಧ ಗಂಟೆ ಬೇಕು ಜನನಿ ನಿಬಿಡ ಪ್ರದೇಶದಲ್ಲಿ ಹೀಲಿಯಂ ತಯಾರಿಸಲು ಸಾಧ್ಯವಿಲ್ಲ ಹೀಗಿದ್ದರೂ ಕೂಡ ಸಲೀಂ ಜೊತೆಯಲ್ಲಿಯೇ ಹಿಲಿಯಂ ಪೌಡರ್ ಇಟ್ಟುಕೊಂಡಿದ್ದು ಯಾಕೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಅನುಮಾನಕ್ಕೆ ಇದೀಗ ಹಿಲಿಯಂ ಪೌಡರ್ ಕಾರಣವಾಗಿದ್ದು ಅದನ್ನು ಸಂಗ್ರಹಿಸಲಾಗಿದೆ.
ಬೆಂಗಳೂರು : ಡೈವೋರ್ಸ್ ಪ್ರಕರಣಗಳಲ್ಲಿ ಪತ್ನಿ ಮತ್ತು ಮಕ್ಕಳ ಮಾಸಿಕ ಜೀವನಾಂಶ ಪಾವತಿಸಲು ಕೋರಿ ಸಿಆರ್ಪಿಸಿ 125 ಅಡಿಯಲ್ಲಿ ಸಲ್ಲಿಸುವ ಅರ್ಜಿಗಳ ವಿಚಾರಣೆ ನಡೆಸಿ ಆದೇಶಗಳನ್ನು ಹೊರಡಿಸುವ ಸಂದರ್ಭಗಳಲ್ಲಿ ಲುಕ್ಔಟ್ ನೋಟಿಸ್ ಜಾರಿ ಮಾಡಲು ಕೌಟುಂಬಿಕ ನ್ಯಾಯಾಲಯಕ್ಕೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೌಟುಂಬಿಕ ನ್ಯಾಯಾಲಯಕ್ಕೆ ಲುಕ್ಔಟ್ ನೋಟಿಸ್ ಜಾರಿ ಮಾಡುವುದಕ್ಕೆ ಅಧಿಕಾರವಿಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಹಲವು ಪ್ರಕರಣಗಳಲ್ಲಿ ತಿಳಿಸಿದೆ. ಸುಪ್ರೀಂಕೋರ್ಟ್ನ ಆದೇಶದ ಹೊರತಾಗಿಯೂ ಲುಕ್ಔಟ್ ನೋಟಿಸ್ ಮುಂದುವರೆಸುವುದು ಕಾನೂನುಬಾಹಿರವಾಗಿದೆ. ಇದು ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಪೀಠ ಹೇಳಿದೆ. ಮಾಸಿಕ ಜೀವನಾಂಶ ಪಾವತಿ ಮಾಡದ ಹಿನ್ನೆಲೆಯಲ್ಲಿ, ಕೌಟುಂಬಿಕ ನ್ಯಾಯಾಲಯವು ಜಾರಿ ಮಾಡಿದ್ದ ಲುಕ್ಔಟ್ ನೋಟಿಸ್ ಪ್ರಶ್ನಿಸಿ, ಪ್ರಸ್ತುತ ಕುವೈತ್ನಲ್ಲಿ ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಮೂಲದ ಮಹಮ್ಮದ್ ಅಜೀಂ ಎಂಬವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನೆಗಂಟ್ಟಿ ಅವರಿದ್ದ ನ್ಯಾಯಪೀಠ, ಸೆಪ್ಟೆಂಬರ್ 22ರಂದು ಈ…
ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯರಿಗೆ ಬೀದಿ ಪುಂಡರು ಕಿರುಕುಳ ನೀಡಿದ್ದಾರೆ. ಬೈಕ್ ನಲ್ಲಿ ಹೋಗುತ್ತಿದ್ದ ಯುವತಿಯನ್ನು ಕಿಡಿಗೇಡಿಗಳು ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಸುಮಾರು 2 ಕಿಲೋಮೀಟರ್ ವರೆಗೂ ಯುವತಿಯನ್ನು ಪುಂಡರು ಫಾಲೋ ಮಾಡಿದ್ದಾರೆ. ಒಂದೇ ಬೈಕ್ ನಲ್ಲಿ ಮೂವರು ಪುಂಡರು ಯುವತಿಯನ್ನು ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಯುವತಿ ಸ್ಕೂಟಿ ಮೇಲೆ ತೆರಳುತ್ತಿದ್ದರೆ, ಮತ್ತೊಂದು ಸ್ಕೂಟಿಯಲ್ಲಿ ಪುಂಡರು ಯುವತಿ ಹತ್ತಿರ ಅಡ್ಡಾದಿಡ್ಡಿ ಹಿಂದೆ ಮುಂದೆ ಚಲಿಸಿದ್ದಾರೆ. ಬೇಕು ಬೇಕು ಅಂತಾನೆ ಆಕೆಯ ಪಕ್ಕದಲ್ಲಿ ಬೈಕ್ ಚಲಾಯಿಸಿದ್ದಾರೆ ಕಾರಿನಲ್ಲಿ ಹಿಂದೆ ಬರುತ್ತಿದ್ದ ವ್ಯಕ್ತಿ ಈ ವಿಡಿಯೋ ಸೆರೆ ಹಿಡಿದು ವಿಡಿಯೋ ಸಮೇತ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.














