Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಮೈಸೂರು : ಇಲ್ಲಿನ ವಿಶ್ವವಿಖ್ಯಾತ ಅರಮನೆ ಬಳಿ ಬಲೂನ್ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿ, ಐವರು ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ವಿಶ್ವ ವಿಖ್ಯಾತ ಮೈಸೂರು ಅರಮನೆಯ ಬಳಿ ಜಯಮಾರ್ತಾಂಡ ದ್ವಾರದ ಬಳಿ ಈ ಘಟನೆ ನಡೆದಿದೆ. ಬಲೂನ್ಗೆ ಬಳಸುವ ಹೀಲಿಯಂ ಗ್ಯಾಸ್ನ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಐವರಲ್ಲಿ ಇಬ್ಬರು ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಸಲೀಂ ಖಮರುದ್ದೀನ್ (40) ಮೃತ ವ್ಯಕ್ತಿ. ಇದೀಗ ಈ ಒಂದು ಅರಮನೆಯ ಬಳಿ ಇಲಿಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಸಲೀಂ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಜೊತೆಗೆ ಇಬ್ಬರೂ ಸಹ ಮಾರಾಟಕ್ಕೆ ಬಂದಿದ್ದರು ಎನ್ನಲಾಗಿದೆ ಇದೀಗ ಉತ್ತರ ಪ್ರದೇಶದ ಮೂಲದ ಇಬ್ಬರು ವನ್ನು ಪೊಲೀಸರು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಲೀಂ ಜೊತೆಗೆ ಇಬ್ಬರು ಸಹ ಬಲೂನ್…
ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ಒಂದು ನಡೆದಿದ್ದು ಈಜಲು ಹೋಗಿದ್ದ ಬಾಲಕರು ಇಬ್ಬರು ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಬಳಿ ಈ ಒಂದು ದುರಂತ ಸಂಭವಿಸಿದೆ. ಮೃತ ಬಾಲಕರನ್ನು ಬಸವರಾಜ ಸೋಮಣ್ಣವರ್ (10) ಹಾಗೂ ಹನುಮಂತ (10) ಎಂದು ತಿಳಿದುಬಂದಿದೆ ನೀರಿನ ರಭಸ ಹೆಚ್ಚಾಗಿ ಕಾಲುವೆಯಲ್ಲಿ ಬಾಲಕರು ಕೊಚ್ಚಿ ಹೋಗಿದ್ದಾರೆ. ಸದ್ಯ ಇಬ್ಬರು ಬಾಲಕರ ಶವಗಳನ್ನು ಸ್ಥಳೀಯರು ಹಾಗೂ ಪೊಲೀಸರು ಹೊರಗಡೆ ತೆಗೆದಿದ್ದಾರೆ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ಘೋರ ದುರಂತ ಒಂದು ಸಂಭಾವಿಸಿದ್ದು, ಕಟ್ಟಡದ ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪಟ್ಟಣದ ಮುತ್ತುರಿನಲ್ಲಿ ಈ ಒಂದು ಘಟನೆ ಸಂಭವಿಸಿದೆ ದೊಡ್ಡಬಳ್ಳಾಪುರದ ಮುತ್ತೂರು ನಿವಾಸಿಯಾದ ಸೋಮಶೇಖರ (50) ಮೃತ ದುರ್ದೈವಿ ಆಗಿದ್ದು ನೀರಿನ ಟ್ಯಾಂಕ್ ವಾಲ್ ರಿಪೇರಿ ಮಾಡಲು ಹೋಗಿದ್ದಾಗ ದುರಂತ ಸಂಭವಿಸಿದೆ. ಸೋಮಶೇಖರ್ ಬಾಡಿಗೆ ಮನೆಯಲ್ಲಿ ಕುಟುಂಬದ ಜೊತೆಗೆ ವಾಸವಾಗಿದ್ದರು. ಘಟನೆ ಕುರಿತು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿ ಇದ್ದಂತಹ ನಾಲ್ವರು ಯುವಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತರ ಕುಟುಂಬದ ಸದಸ್ಯರಿಗೆ 5 ಲಕ್ಷ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಇದೀಗ ಸೂಚನೆ ನೀಡಿದ್ದಾರೆ. ಅಧಿಕಾರಿಗಳಿಗೆ ಪರಿಹಾರ ವಿತರಣೆಗೆ ಕ್ರಮ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಘಟನೆ ಹಿನ್ನೆಲೆ? ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಅಜ್ಜವಾರ ಗ್ರಾಮದ ನರಸಿಂಹಮೂರ್ತಿ. ನಂದೀಶ್, ಅರುಣ್, ಮನೋಜ್ ಮೃತಪಟ್ಟಿದ್ದಾರೆ. ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು. ಮೃತ ನಾಲ್ವರು ಯುವಕರು ಒಂದೇ ಬೈಕಿನಲ್ಲಿ ಹೊರಟಿದ್ದರು. ಈ ವೇಳೆ ಟಿಪ್ಪರ್ ಲಾರಿ ಅಡ್ಡ ಬಂದಿದ್ದು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಟಿಪ್ಪರ್…
ಮಂಡ್ಯ : ಕೆಆರ್ ಪೇಟೆ ತಾಲೂಕಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆಯಲ್ಲಿ ರಾಗಿ ಒಕ್ಕಣಿ ವೇಳೆ ಕಾರು ಪಟ್ಟಿಯಾಗಿದೆ ಕೆಆರ್ ಪೇಟೆ ತಾಲೂಕಿನ ಅಶೋಕನಗರದಲ್ಲಿ ಈ ಒಂದು ಘಟನೆ ಸಂಭವಿಸಿದ್ದು ಕಾರಿನಲ್ಲಿ ಇದ್ದಂತಹ ಇಬ್ಬರಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತ ಯುವಕನನ್ನು ಪ್ರಜ್ವಲ್ (19) ಎಂದು ತಿಳಿದುಬಂದಿದ್ದು, ಘಟನೆಯಲ್ಲಿ 26 ವರ್ಷದ ಕಾವ್ಯ ಸ್ಥಿತಿ ಗಂಭೀರವಾಗಿದೆ. ಕೆ ಆರ್ ಪೇಟೆ ಗ್ರಾಮತರ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ನಡೆದಿದೆ. ಪ್ರಕರಣದ ಕಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಮತಾ (39) ಭೀಕರವಾಗಿ ಕೊಲೆಯಾಗಿದ್ದು ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದೇ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿದ್ದ ಸುಧಾಕರ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಯದೇವ ಸ್ಟಾಫ್ ನರ್ಸ್ ಸುಧಾಕರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸುಧಾಕರ್ ಮತ್ತು ಮಮತಾ ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಗಳಾಗಿದ್ದರು. ಕಳೆದ ಒಂದು ವರ್ಷದಿಂದ ಇಬ್ಬರು ಪ್ರೀತಿ ಮಾಡುತ್ತಿದ್ದರು. ವಯಸ್ಸಿನಲ್ಲಿ ಮಮತಾಗಿಂತ ಸುಧಾಕರ್ ಚಿಕ್ಕವನಾಗಿದ್ದ. ಇದು ಸುಧಾಕರ್ ಗೆ ಗೊತ್ತಿರಲಿಲ್ಲ. ಇತ್ತೀಚಿಗೆ ಸುಧಾಕರ್ ಗೆ ಬೇರೆ ಹುಡುಗಿ ಜೊತೆಗೆ ನಿಶ್ಚಿತಾರ್ಥ ಆಗಿತ್ತು. ಎಂಗೇಜ್ಮೆಂಟ್ ವಿಚಾರ ಗೊತ್ತಾಗಿ ಮಮತಾ ಜಗಳ ಮಾಡಿದ್ದಾಳೆ. ನನ್ನ ಮದುವೆ ಆಗುವಂತ ಪಟ್ಟು ಹಿಡಿದಿದ್ದಾಳೆ ಇಲ್ಲದಿದ್ದರೆ ನಿನ್ನ ಹೆಸರು ಬರೆದು ಸಾಯುತ್ತೇನೆ ಎಂದು ಧಮ್ಕಿ ಹಾಕಿದ್ದಾಳೆ . ನಿನ್ನ ಮತ್ತು ನಿನ್ನ ಕುಟುಂಬದವರನ್ನು ಜೈಲಿಗೆ ಕಳಿಸುವುದಾಗಿ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರುಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ತೋಟಗೇರಿ ಕ್ರಾಸ್ ನಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತೋಟಗೆರೆ ಕ್ರಾಸ್ ನಲ್ಲಿ ಗೌರಿಬಿದನೂರು ಮೂಲದ ಹರೀಶ್ (39) ಹಾಗೂ ವೀರಭದ್ರ (80) ಸಾವನ್ನಪ್ಪಿದ್ದಾರೆ ಇನ್ನು ಕಾರಿನಲ್ಲಿ ಇದ್ದಂತಹ ಗೌರಮ್ಮ, ಮೈತ್ರಿ, ಸಿರಿ ಹಾಗೂ ವಂದನಾಗೆ ಗಂಭೀರವಾದ ಗಾಯಗಳಾಗಿದ್ದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಸರಹಳ್ಳಿಯಲ್ಲಿ ಗೌರಿಬಿದನೂರು ಮೂಲದ ಕುಟುಂಬ ವಾಸವಿತ್ತು. ಇನ್ನು ಮೃತ ಹರೀಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಮೀನು ನೋಡಿಕೊಂಡು ವಾಪಸ್ ಆಗುವಾಗ ಈ ಒಂದು ಅಪಘಾತ ಸಂಭವಿಸಿದೆ. ಘಟನೆ ಕುರಿತಂತೆ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮಗೆ ಬೇಕಾದುದನ್ನು ತರುವ ಕಲಿಕಿಯಾರ್ (ಕೇಳಯ್ಯರ್) ಮಂತ್ರ ಬಹುಶಃ ಇಂದು ಅತ್ಯಂತ ಜನಪ್ರಿಯವಾದ ಸಿದ್ಧ ಈ ಕಲ್ಯಕ್ಯ ಸಿದ್ಧವಾಗಿದೆ. ಗೂಗಲ್ನಲ್ಲಿ ಹುಡುಕಿದರೆ ಅವರ ಹೆಸರು ಸಿಗುವುದಿಲ್ಲ. ಆದರೆ ಅವರು ಅನೇಕ ಜನರ ಜೀವನದಲ್ಲಿ ಪವಾಡಗಳನ್ನು ಮಾಡಿದರು ಎಂದು ಹೇಳಲಾಗುತ್ತದೆ. ಸತತ 3 ದಿನ ಕೇಳಕಿಯಾರ್ ಮಂತ್ರವನ್ನು ಪಠಿಸುವುದರಿಂದ 3 ದಿನಗಳಲ್ಲಿ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ…
ಮೈಸೂರು : ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ಬೆನ್ನಲ್ಲೇ ರಾಜ್ಯದಲ್ಲಿ ಕೂಡ ಹೈ ಅಲರ್ಟ್ ಘೋಷಿಸಲಾಗಿದ್ದು, ಇನ್ನು ನಿನ್ನೆ ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಕಾರಣ ಏನೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದೀಗ ಈ ಒಂದು ಸ್ಫೋಟಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಇಂದು ಮೈಸೂರಿಗೆ ಎನ್ಐಎ ತಂಡ ಆಗಮಿಸಲಿದೆ. ಮೈಸೂರು ಅರಮನೆಯ ಬಳಿಯ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಲಿದೆ. ಸ್ಪೋಟದ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಲಿದ್ದಾರೆ ಸದ್ಯ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.ಇನ್ನು ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಹೀಲಿಯಂ ಗ್ಯಾಸ್ ತುಂಬುವ ವೇಳೆ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಹೌದು ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ…
ಮೈಸೂರು : ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ಬೆನ್ನಲ್ಲೇ ರಾಜ್ಯದಲ್ಲಿ ಕೂಡ ಹೈ ಅಲರ್ಟ್ ಘೋಷಿಸಲಾಗಿದ್ದು, ಇನ್ನು ನಿನ್ನೆ ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಕಾರಣ ಏನೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಹೀಲಿಯಂ ಗ್ಯಾಸ್ ತುಂಬುವ ವೇಳೆ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಹೌದು ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ ಸತತವಾಗಿ ಬಲೂನ್ಗಳಿಗೆ ಹೀಲಿಯಂ ಗ್ಯಾಸ್ ತುಂಬುತ್ತಿದ್ದ. ಅಲ್ಲದೆ, ಸಿಲಿಂಡರ್ ಅನ್ನು ವೇಗವಾಗಿ ಆನ್–ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ಹೀಟ್ ಉಂಟಾಗಿ ಒತ್ತಡ ಹೆಚ್ಚಾಗಿತ್ತು. ಇದರ ಪರಿಣಾಮ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಮೈಸೂರು ಪೊಲೀಸ್ ಮೂಲಗಳು ತಿಳಿಸಿವೆ.














