Subscribe to Updates
Get the latest creative news from FooBar about art, design and business.
Author: kannadanewsnow05
ಯಾದಗಿರಿ : ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದಾಗ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ವಿಧಿ ಜಾರಿ ಮಾಡಿದರು. ಈ ಭಾಗದಲ್ಲಿ 371 ಜೆ ವಿಧಿ ಜಾರಿಯಾಗಲು ಮಾಜಿ ಮುಖ್ಯಮಂತ್ರಿ ದಿ.ಎನ್. ಧರ್ಮಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಕಾರಣ. ಕಳೆದ ಮೂರು ವರ್ಷದಲ್ಲಿ ಕೆಕೆಆರ್ಡಿಬಿಗೆ 13000 ಕೋಟಿ ರೂಪಾಯಿ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇಂದು ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆರೋಗ್ಯ ಆವಿಷ್ಕಾರಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ಬಳಿ ದುಡ್ಡಿಲ್ಲ ಅದಕ್ಕೆ ಅಭಿವೃದ್ಧಿ ಕೆಲಸ ನಿಂತಿದೆ ಅಂತಾರೆ, ಬಿಜೆಪಿಯವರು ಹೇಳುತ್ತಿರುವುದು ಅಪ್ಪಟ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಗ್ಯಾರಂಟಿ ಯೋಜನೆ ಜಾರಿಗೆ ಮಾಡಿದ್ದೇವೆ ಅದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಸಹ ಮಾಡುತ್ತಿದ್ದೇವೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 371 ಜೆ ವಿಧಿ ಜಾರಿ ಮಾಡಿದರು. 371 ಜೆ ಜಾರಿಯಾಗಲು ಎನ್. ಧರ್ಮಸಿಂಗ್ ಮಲ್ಲಿಕಾರ್ಜುನ ಖರ್ಗೆ ಕಾರಣ.ಕಳೆದ…
ಮೈಸೂರು : ರಾಜ್ಯದಲ್ಲಿ ಆಗ್ಗಾಗ್ಗೆ ಕೇಳಿಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಸಂಬಂಧ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭವಿಷ್ಯ ನುಡಿದಿದ್ದು, ಮುಂಬರುವ ನವೆಂಬರ್ ನಲ್ಲಿ ಬದಲಾವಣೆಯಾಗಲಿದೆ ಎಂದಿದ್ದಾರೆ. ಅಲ್ಲದೆ ಈ ಇಬ್ಬರು ನಾಯಕರಲ್ಲಿ ಒಬ್ಬರು ಸಿಎಂ ಆಗಲಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಎಚ್ ವಿಶ್ವನಾಥ್ ಅವರ ಈ ಒಂದು ಹೇಳಿಕೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ವರ್ಷಗಳ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಸುಮಾರು ಒಂದೂವರೆ ಲಕ್ಷ ಶಿಕ್ಷಕರು ಗಣತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಕ್ಕಾಗಿ 170 ಕೋಟಿ ರೂಪಾಯಿ ಹಣ ಖರ್ಚು ಮಾಡಲಾಗಿತ್ತು. ಅಂದಿನಿಂದ ಜಾತಿವಾರು ಜನಗಣತಿ ವರದಿಯನ್ನು ಬಹಿರಂಗಪಡಿಸಲಿಲ್ಲ. ಕುಮಾರಸ್ವಾಮಿ, ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಇದನ್ನು…
ರಾಯಚೂರು : ರಾಯಚೂರಿನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಭೂತಲದಿನ್ನಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಟ್ಯಾಂಕರ್ ನಿಂದ ಪೂರಿಕೈಯಾದ ನೀರು ಕುಡಿದು 30 ಜನರು ಅಸ್ವಸ್ಥರಾಗಿದ್ದಾರೆ. ವಾಂತಿ, ಭೇದಿಯಿಂದ 25ಕ್ಕೂ ಹೆಚ್ಚು ಆಸ್ಪತ್ರೆಗೆ ದಾಖಲಾಗಿದ್ದಾರೆ. ಟ್ಯಾಂಕರ್ ಅನ್ನು ಸ್ವಚ್ಛಗೊಳಿಸದೆ ನೀರು ಪೂರೈಕೆ ಮಾಡಿರುವ ಆರೋಪ ಇದೀಗ ಕೇಳಿಬರುತ್ತಿದೆ. ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ಇದೀಗ ಆಕ್ರೋಶ ಹೊರಹಾಕುತ್ತಿದ್ದಾರೆ. ಭೂತಲದಿನ್ನಿ ನಿವಾಸಿಗಳ ಆರೋಗ್ಯವನ್ನು ಇದೀಗ ವೈದ್ಯರು ತಪಾಸಣೆ ನಡೆಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಬಿಎಂಟಿಸಿ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಕೇವಲ ಬಸ್ ನಿಲ್ಲಿಸದಕ್ಕಾಗಿ ಮಹಿಳೆ ಒಬ್ಬರು ಬಿಎಂಟಿಸಿ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.ಜೂನ್ 11 ರಂದು ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ಜೂ. 11ರಂದು ಟಿನ್ ಫ್ಯಾಕ್ಟರಿಯಿಂದ ಎಲೆಕ್ಟ್ರಾನಿಕ್ ಸಿಟಿಗೆ ಸಂಚರಿಸುತ್ತಿದ್ದ ಕೆಎ57, ಎಫ್ 0836 ಬಸ್ನಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ 8.40ರ ಹೊತ್ತಿಗೆ ಬಸ್ ಸರ್ಜಾಪುರ ರಸ್ತೆಯ ಕೈಕೊಂಡರಹಳ್ಳಿ ಸಮೀಪ ತಲುಪಿದಾಗ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಕಾವ್ಯ ಎಂಬ ಮಹಿಳೆ, ಬಸ್ ಸ್ಟಾಪ್ ಇಲ್ಲದೇ ಇದ್ರೂ, ಎಲೆಕ್ಟ್ರಾನಿಕ್ ಸಿಟಿ ರಸ್ತೆಯಲ್ಲಿ ಹೋಗುವಾಗ ಕಚೇರಿ ಮುಂದೆ ಬಸ್ ನಿಲ್ಲಿಸಲು ಹೇಳಿದ್ದಳು. ಟ್ರಾಫಿಕ್ನಿಂದ ಬಸ್ ಡ್ರೈವರ್ ಬಸ್ ನಿಲ್ಲಿಸಿಲ್ಲ. ಆಗ ಹೊಟ್ಟೆ ಹಿಡಿದುಕೊಂಡು ಕಿರುಚಿ, ಅವಾಚ್ಯ ಶಬ್ದಗಳಿಂದ 42 ವರ್ಷದ ಚಾಲಕ ಅತಹರ್ ಹುಸೇನ್ ಅವರನ್ನು ನಿಂದಿಸಿದ್ದಳು. ಬಳಿಕ ಮಹಿಳೆ ಬಲ ಚಪ್ಪಲಿ ತೆಗೆದುಕೊಂಡು…
ಚಿಕ್ಕಬಳ್ಳಾಪುರ : ಪ್ರಪಂಚದಲ್ಲಿ ಕೆಟ್ಟ ತಂದೆ ತಾಯಿಗಳು ಯಾರು ಇರಲ್ಲ. ಆದರೆ ಕೆಟ್ಟ ಮಕ್ಕಳು ಇರುತ್ತಾರೆ ಅಂತ ಹೇಳುತ್ತಾರೆ. ಆದರೆ ಪ್ರಸ್ತುತ ದಿನಗಳಲ್ಲಿ ಹೆತ್ತವರು ಕೂಡ ಕೆಟ್ಟ ದಾರಿ ತುಳಿದು ತಮ್ಮ ಮಕ್ಕಳನ್ನು ಕೆಟ್ಟದಾರಿಗೆ ದೂಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. ಇದೀಗ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಅನ್ಯ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ತನ್ನ ಅಪ್ರಾಪ್ತ ಮಗಳಿಗೆ ಪಾಪಿ ತಂದೆಯೊಬ್ಬ ಒತ್ತಾಯಿಸಿದ ಘಟನೆ ಬೆಳಕಿಗೆ ಬಂದಿದೆ. ಹೌದು ಬೇರೊಬ್ಬನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಹೆತ್ತ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಲವಂತ ಮಾಡಿದ ಬೆಚ್ಚಿ ಬೀಳಿಸೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಲೈಂಗಿಕ ಕ್ರಿಯೆಗೆ ಸಹಕರಿಸಲು ಬಾಲಕಿ ಒಪ್ಪದಿದ್ದಾಗ ಈ ದುರುಳ ತಂದೆ ಆಕೆಗೆ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಲೈಂಗಿಕ ಕ್ರಿಯೆ ನಡೆಸದಿದ್ದಕ್ಕೆ ಬಲವಂತವಾಗಿ ರೂಮಿನಲ್ಲಿ ಕೂಡಿ ಹಾಕಿದ್ದು, ತಾನು ಹೇಳಿದಂತೆ ಮಾಡದಿದ್ದರೆ ಊಟ ತಿಂಡಿ ಕೊಡುವುದಿಲ್ಲ ಎಂದು ಬೆದರಿಸಿದ್ದಾನೆ.…
ದಾವಣಗೆರೆ : ರಾಜ್ಯದಲ್ಲಿ ಬಾಣಂತಿಯರ ಸಾವು ಮುಂದುವರೆದಿದ್ದು ಈಗ ದಾವಣಗೆರೆಯಲ್ಲಿ ಹೆರಿಗೆಯಾದ ಎರಡು ದಿನಕ್ಕೆ ಬಾಣಂತಿಯೊಬ್ಬರು ಸಾವನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತ ಬಾಣಂತಿಯನ್ನು ದುರ್ಗಮ್ಮ (21) ಎಂದು ತಿಳಿದುಬಂದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿರುವ ತನ್ನ ತಾಯಿ ಮನೆಗೆ ಹೆರಿಗೆ ಬಂದಿದ್ದ ಅವರಿಗೆ ಮೂರು ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಪೋಷಕರು ತಕ್ಷಣ ಹತ್ತಿರದ ಹರಪನಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಹರಪನಹಳ್ಳಿ ವೈದ್ಯರು ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು. ಹೆಣ್ಣು ಮಗು ಜನಿಸಿತ್ತು. ಬಳಿಕ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆರೋಗ್ಯದಲ್ಲಿ ಏರುಪೇರು ಆದ ಬಳಿಕ ದುರ್ಗಮ್ಮ ಸಾವನ್ನಪ್ಪಿದ್ದಾರೆ. ಬಾಣಂತಿ ಸಾವಿನ ನಂತರ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.
ನವದೆಹಲಿ : ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ವಿಮಾನ ಪತನ ಇಡಿ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಘೋರ ದುರಂತ. ಈ ಒಂದು ಅಪಘಾತದಲ್ಲಿ ವಿಮಾನದಲ್ಲಿದ್ದ ಪೈಲಟ್, ಸಿಬ್ಬಂದಿಗಳು ಸೇರಿ ಎಲ್ಲರೂ ಸಾವನಪ್ಪಿದ್ದಾರೆ. ಆದರೆ ಒಬ್ಬ ಪ್ರಯಾಣಿಕ ಮಾತ್ರ ಬದುಕು ಉಳಿದಿದ್ದು, ವಿಮಾನ ದುರಂತದ ಕುರಿತು ಇಂದು ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಸುದ್ದಿ ಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿ ಆರಂಭಿಸಿದ ಅವರು ಕಳೆದ ಎರಡು ದಿನದಿಂದ ಬಹಳ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದೇವೆ. ವಿಮಾನ ದುರಂತದಲ್ಲೇ ನಾನು ನನ್ನ ತಂದೆಯನ್ನು ಕಳೆದುಕೊಂಡಿದ್ದೇನೆ. ತಮ್ಮವರನ್ನು ಕಳೆದುಕೊಂಡ ನೋವನ್ನು ನಾನು ಅನುಭವಿಸಿದ್ದೇನೆ. ರಕ್ಷಣಾ ತಂಡಗಳು ತಕ್ಷಣ ಕಾರ್ಯ ಪ್ರವೃತ್ತರಾಗಿ ಕೆಲಸ ನಿರ್ವಹಿಸಿವೆ. ನಿನ್ನೆ ಸಂಜೆ 5 ಗಂಟೆಗೆ ದುರಂತ ಸ್ಥಳದಲ್ಲಿ ಒಂದು ಬ್ಲಾಕ್ ಬಾಕ್ಸ್ ಸಿಕ್ಕಿದೆ. ಸದ್ಯ ಬ್ಲಾಕ್ ಬಾಕ್ಸ್ ಡಿಕೋಡ್ ಮಾಡುವ ಕೆಲಸ ನಡೆಯುತ್ತಿದೆ. ಬ್ಲಾಕ್ ಬಾಕ್ಸ್ ನಿಖರವಾದ ಮಾಹಿತಿ ಸಿಗಲಿದೆ. ತನಿಖೆಗೆ ಮತ್ತೊಂದು ಉನ್ನತ ಮಟ್ಟದ ಸಮಿತಿ ರಚಿಸಿದ್ದೇವೆ ಎಂದು ವಿಮಾನಯಾನ…
ಶಿವಮೊಗ್ಗ : ಕ್ಯಾನ್ಸರ್ ತೀಡಿತ ಮಕ್ಕಳಿಗೆ ಉಚಿತ ಆರೋಗ್ಯ ಸೌಲಭ್ಯ ಸೇರಿದಂತೆ ಅವರಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ಶೀಘ್ರದಲ್ಲಿ ಕ್ಯಾನ್ಸರ್ ಪೀಡಿತ ವಸತಿ ಶಾಲೆ ಆರಂಭಿಸುವ ಯೋಜನೆ ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಯಾನ್ಸರ್ ಪೀಡಿತ ವಸತಿ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತದೆ. ಮಕ್ಕಳಿಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಕಿದ್ವಾಯಿ ಆಸ್ಪತ್ರೆಗೆ ಕರೆದೊಯ್ಯಲು ಮಿನಿ ಬಸ್ ಹಾಗೂ ಕಾರಿನ ಸೌಲಭ್ಯ ಕಲ್ಪಿಸಲಾಗುತ್ತದೆ. ಆಟ,ಪಾಠಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಎಲ್ಲ ಮಕ್ಕಳಂತೆ ಅವರು ಗೌರವಯುತವಾಗಿ ಬದುಕಬೇಕು ಎಂಬುದು ನನ್ನ ಉದ್ದೇಶ ಎಂದರು. ಈಗಾಗಲೇ ಖಾಸಗಿ ಎನ್ಜಿಓ ಒಂದು ಜೊತೆ ಸಭೆ ನಡೆಸಿ ಯೋಜನೆ ರೂಪಿಸಿದ್ದೇನೆ. ಕಿದ್ವಾಯಿ ಆಸ್ಪತ್ರೆ ಸಮೀಪದಲ್ಲಿ ಖಾಸಗಿ ಕಟ್ಟಡವನ್ನು ನೋಡಲಾಗಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಪಡೆದುಕೊಂಡು ಜುಲೈ ಅಂತ್ಯದೊಳಗೆ ಪ್ರಾರಂಭಿಸಲಾಗುವುದು. ಎನ್ಜಿಓ ಅವರ ಮಾಹಿತಿ ಪ್ರಕಾರ ಈಗಾಗಲೇ 1,500 ಸಾವಿರ ಮಕ್ಕಳನ್ನು ಗುರುತಿಸಿದ್ದಾರೆ. ಇದಕ್ಕೂ ಹೆಚ್ಚು…
ಮಂಗಳೂರು : ಕಳೆದ ತಿಂಗಳು ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಕೊಲೆಯಾಗಿತ್ತು. ಅದಾದ ನಂತರ ಕೆಲವೇ ದಿನಗಳಲ್ಲಿ ರೆಹಿಮಾನ್ ಎನ್ನುವ ಯುವಕನ ಬರ್ಬರ ಕೊಲೆಯಾಗಿತ್ತು. ಹೀಗೆ ಮಂಗಳೂರಿನಲ್ಲಿ ಕೋಮು ದ್ವೇಷಕ್ಕೆ ಇಬ್ಬರ ಕೊಲೆಯಾಗಿದೆ. ಇನ್ನು ಕರಾವಳಿ ಭಾಗದಲ್ಲಿ ಕೋಮು ಸಂಘರ್ಷ ತಡೆಗಟ್ಟಲು ನಿನ್ನೆ ತಾನೇ ಗೃಹ ಸಚಿವ ಜಿ. ಪರಮೇಶ್ವರ್ ಅವರು ಸ್ಪೆಷಲ್ ಆ್ಯಕ್ಷನ್ ಫೋರ್ಸ್ (SAF) ಗೆ ಚಾಲನೆ ನೀಡಿದ್ದಾರೆ. ಇಷ್ಟೆಲ್ಲಾ ಆದರೂ ಕೂಡ ಇದೀಗ ಮಂಗಳೂರಿನಲ್ಲಿ ಮತ್ತೆ ಲಾಂಗು ಮಚ್ಚುಗಳು ಝಳಪಿಸಿದ್ದು, ಓರ್ವ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿಗೆ ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ನಡೆದಿದೆ. ಸಜೀಪಮುನ್ನೂರಿನ ಉಮರ್ ಫಾರೂಕ್ ಮೇಲೆ ದಾಳಿಗೆ ಯತ್ನಿಸಲಾಗಿದೆ. ಉಮರ್ ಫಾರೂಕ್ ಘಟನೆ ನಡೆದ ದಿನ ಮುಂಜಾನೆ ಮನೆಯಿಂದ ಜೀಪ್ನಲ್ಲಿ ದೇರಳಕಟ್ಟೆಗೆ ತೆರಳುತ್ತಿದ್ದರು. ದೇರಾಜೆ ಬಸ್ ನಿಲ್ದಾಣದ ಬಳಿ ತಲುಪಿದಾಗ ಬೈಕ್ನಲ್ಲಿ…
ವಿಜಯನಗರ : ಜಮಿನಲ್ಲಿ ವಿದ್ಯುತ್ ಹೈ ಟೆನ್ಶನ್ ಲೈನ್ ಅಳವಡಿಕೆ ವಿರೋಧ ವ್ಯಕ್ತಪಡಿಸಿದ್ದು, ರೈತನ ವಿರೋಧದ ನಡುವೆಯೂ ಕೂಡ ಇಲಾಖೆಯ ಸಿಬ್ಬಂದಿ ಕಾಮಗಾರಿ ಆರಂಭಿಸಿದ್ದಾರೆ. ಹಾಗಾಗಿ ಸಿಬ್ಬಂದಿ ವರ್ತನೆಗೆ ಬೇಸತ್ತು ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಯತ್ನಿಸಿರುವ ಘಟನೆ ಹರಪ್ಪನಹಳ್ಳಿ ತಾಲೂಕಿನ ಮಾಚಿಹಳ್ಳಿ ತಾಂಡಾದ ಜಮೀನಿನಲ್ಲಿ ಈ ಒಂದು ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮಾಜಿ ಹಳ್ಳಿ ತಂಡದಲ್ಲಿ ವಿಷ ಸೇವಿಸಿ ಗಜೇಂದ್ರ ನಾಯಕ (48) ಮಟ್ಟು ಪತ್ನಿ ವಿಜಯಲಕ್ಷ್ಮಿ ಬಾಯಿ (38) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ತಕ್ಷಣ ದಂಪತಿಗಳನ್ನು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರ ಜಮೀನಿನಲ್ಲಿ 220 ಕೆವಿ ವಿದ್ಯುತ್ ಲೈನ್ ಹಾದುಹೋಗಿದೆ. ನನಗೆ ಇರುವುದು ಒಂದೇ ಎಕರೆ ಜಮೀನು ಹೀಗಾಗಿ ಜಮೀನಿನಲ್ಲಿ ವಿದ್ಯುತ್ ಲೈನ್ ಹಾಕದಂತೆ ರೈತ ಸಿಬ್ಬಂದಿ ಬಳಿ ಮನವಿ ಮಾಡಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಸಿಬ್ಬಂದಿಗಳು ಕಾಮಗಾರಿ ಆರಂಭಿಸಿದ್ದಾರೆ. ವಿದ್ಯುತ್ ಇಲಾಖೆಯ ವರ್ತನೆಗೆ ಬೇಸತ್ತು ದಂಪತಿಗಳು ಇಬ್ಬರು ವಿಷ…














