Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಗ್ನಿ ದುರಂತ ಸಂಭವಿಸಿದ್ದು, ಸ್ನಾನಕ್ಕೆಂದು ನೀರು ಕಾಯಿಸಲು ಹಚ್ಚಿದ್ದ ಬೆಂಕಿಯು ತೆಂಗಿನ ಮಟ್ಟೆ ರಾಶಿಗೆ ವ್ಯಾಪಿಸಿ ಮನೆಯೇ ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಕೊಡಗಾಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಹೌದು ಕೊಡಗಾಪುರ ಗ್ರಾಮದ ವಿನೋದ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ನೀರು ಕಾಯಿಸಲು ಬೆಂಕಿ ಹಂಚಿದ್ದ ವೇಳೆ ಹತ್ತಿರದಲ್ಲೇ ಇದ್ದ ತೆಂಗಿನಕಾಯಿ ಮಟ್ಟೆ ರಾಶಿಗೂ ಬೆಂಕಿ ಹೊತ್ತಿಕೊಂಡು ಬಳಿಕ ಮನೆಯೇ ಹೊತ್ತಿ ಉರಿದಿದೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಮನೆಯಲ್ಲಿದ್ದ ಕುಟುಂಬದ ಸದಸ್ಯರೆಲ್ಲರೂ ಮನೆಯಿಂದ ಹೊರಗೋಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾಗಿ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಮನೆಯಲ್ಲಿದ್ದ ಸರಕುಗಳು ಬೆಂಕಿಗೆ ಆಹುತಿಯಾಗಿದೆ. ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಡ್ಯ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಅದೆಷ್ಟೋ ಜನರು ಇದೀಗ ಮನೆ ತೊರೆದಿದ್ದಾರೆ. ಅಲ್ಲದೆ ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ವಿಚಾರವಾಗಿ ಮಂಡ್ಯದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿ ಜನರಿಗೆ ತೊಂದರೆ ನೀಡುವ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಕಠಿಣ ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧ ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಯುತ್ತಿದೆ. ಬಡ್ಡಿ ಹಾಕಿ ತೊಂದರೆ ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ. ಮಂಡ್ಯದಲ್ಲೂ ಈ ಬಗ್ಗೆ ಎಸ್ಪಿಗೆ ನಿರ್ದೇಶನ ನೀಡಿದ್ದೇವೆ. ಜನ ಈ ಬಗ್ಗೆ ಜಾಗೃತರಾಗಬೇಕು. ನಾವು ಬಡ್ಡಿ ರಹಿತ ಸಾಲ ನೀಡುತ್ತಿದ್ದೇವೆ. PLD ಬ್ಯಾಂಕ್, ಸೊಸೈಟಿ, ಇತರೆ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತೆ. ಹಾಗಾಗಿ ಮೈಕ್ರೋ ಫೈನಾನ್ಸ್ ಗೆ ಹೋಗೋದನ್ನು ಜನರು ನಿಲ್ಲಿಸಬೇಕು ಎಂದು ಸಚಿವರು ತಿಳಿಸಿದರು.
ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಬಳ್ಳಾರಿ ಬೆಳಗಾವಿ ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಇಡಿ ರಾಜ್ಯವನ್ನೇ ಬೆಚ್ಚಿ ಬೀಳಿಸಿತು. ಈ ಒಂದು ಘಟನೆಯ ಬಳಿಕ ಎಚ್ಚರ ರಾಜ್ಯ ಸರ್ಕಾರ ಈ ಕುರಿತು ವರದಿ ಪಡೆದುಕೊಂಡಿತ್ತು. ಇದೀಗ ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದ್ದು, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಬಾಣಂತಿಯೋರ್ವಳು ವೈದ್ಯರ ನಿರ್ಲಕ್ಷದಿಂದ ಮುತ್ತವ್ವ ಸಂತೋಷ ಗೊಳಸಂಗಿ (21) ಎನ್ನುವ ಬಾಣಂತಿ ಸಾವನಪ್ಪಿದ್ದಾಳೆ. ಜನವರಿ 31ಕ್ಕೆ ಮುತ್ತವ್ವಗೆ ವೈದ್ಯರು ಹೆರಿಗೆ ದಿನಾಂಕವನ್ನು ನೀಡಿದ್ದರು. ಮುತ್ತವ್ವಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುತ್ತವ್ವಳ ಆರೋಗ್ಯದಲ್ಲಿ ಬಿಪಿಯಲ್ಲಿ ವ್ಯತ್ಯಾಸ ಆದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರು ಹೆರಿಗೆ ಮಾಡಿಸಿದರು.ಆದರೆ ಶಸ್ತ್ರಚಿಕಿತ್ಸೆಯ ನಂತರ ತೀವ್ರ ರಕ್ತಸ್ರಾವದಿಂದ ಮುತ್ತವ್ವ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷದಿಂದಲೇ ಮುತ್ತವ್ವ ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಂಗಳೂರು : ಜನವರಿ 26ರಂದು ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ಕೆಳಗಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಿ ನಗರ ಸಂಚಾರಿ ಉಳಿಸಲು ಸೂಚನೆ ನೀಡಿದ್ದಾರೆ ಅಲ್ಲದೆ ಕೆಲವು ಪ್ರದೇಶಗಳಲ್ಲಿ ವಾಹನ ನಿಲುಗಡೆ ಕೂಡ ನಿಷೇಧಿಸಿದ್ದಾರೆ. 26ರಂದು ಬೆಂಗಳೂರಿನ ಕೆಲ ಮಾರ್ಗಗಳಲ್ಲಿ ಬದಲಾವಣೆ ಮಾಡಿದ್ದು, 26ರಂದು ಬೆಳಗ್ಗೆ 8:30 ರಿಂದ 10:30ರ ವರೆಗೆ ಸಂಚಾರ ನಿಷೇಧಿಸಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿ ಆರ್ ವಿ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. ಅದೇ ರೀತಿಯಾಗಿ ಬೆಂಗಳೂರಿನ ಹಲವಡೆ ವಾಹನ ನಿಲುಗಡೆಗೆ ನಿಷೇಧಿಸಿದ್ದಾರೆ. ಸೆಂಟ್ರಲ್ ಸ್ಟ್ರೀಟ್, ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಡಿಓ ವೃತ್ತದಿಂದ ಕೆಆರ್ ರಸ್ತೆ, ಕಬ್ಬನ್ ಜಂಕ್ಷನ್ ಎಂ.ಜಿ ರಸ್ತೆ, ಅನಿಲ್ ಕುಂಬಳೆ ವೃತ್ತದ ವರೆಗೆ ಸಂಚಾರ ನಿಷೇಧಿಸಲಾಗಿದೆ.
ಚಾಮರಾಜನಗರ : ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿ ಒಬ್ಬರು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅದೇ ಗ್ರಾಮದ ಖುಷ್ಬು (32) ಎಂದು ತಿಳಿದುಬಂದಿದೆ. ಮೂಲತಃ ಬೆಂಗಳೂರು ಮೂಲದ ವರಾದ ಖುಷ್ಬು ಕೆಲ ವರ್ಷಗಳ ಹಿಂದೆ ಹನೂರು ತಾಲೂಕಿನ ಕೌದಳ್ಳಿಯ ಸಣ್ಣಸೀಗಯ್ಯ ಎಂಬುವವರನ್ನು ಮದುವೆಯಾಗಿದ್ದರು. ಕೌಟುಂಬಿಕ ಕಲಹದಿಂದ ಮನನೊ೦ದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26ರಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಹಾಗಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು ಅಧಿಕಾರಿಗಳ ಜೊತೆಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರಿನ ಕಮಿಷನರ್ ಬಿ ದಯಾನಂದ್ ಮಾಹಿತಿ ನೀಡಿದರು. ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಅವರು, 26 ಜನವರಿ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬೆಳಿಗ್ಗೆ 9 ಗಂಟೆಗೆ ರಾಜ್ಯಪಾಲರಿಂದ ಧ್ವಜಾರೋಹಣ ನಡೆಯಲಿದ್ದು ಯಾವುದೇ ಸಮಸ್ಯೆಯಾಗದಂತೆ ರಾಜೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರದ ಎಲ್ಲಾ ವಿಭಾಗಗಳಿಂದ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ. 8ಡಿಸಿಪಿ, 7ಸಿಪಿ, 44ಪಿಐ, 114 ಪಿಎಸ್ಐ, 185 ಎಎಸ್ಐ, 80 ಮಹಿಳಾ ಸಿಬ್ಬಂದಿ 30 ಕ್ಯಾಮೆರಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. 10 ಕೆ.ಎಸ್.ಆರ್.ಪಿ ತುಕಡಿ 2 ಅಗ್ನಿಶಾಮಕ ವಾಹನ, ಕ್ಷೀಪ್ರಕಾರ್ಯ ಪಡೆ, ಭದ್ರತೆಗಾಗಿ ಒಟ್ಟು 1,051 ಅಧಿಕಾರಿಗಳು ಹಾಗೂ…
ಉಡುಪಿ : ರಾಜ್ಯದಲ್ಲಿ ಒಂದು ಕಡೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ಹಲವರು ಬೀದಿಗೆ ಬಂದರೆ, ಇನ್ನೂ ಕೆಲವರು ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಉಡುಪಿಯಲ್ಲಿ ಬಡ್ಡಿ ದಂಧೆಕೊರರ ಅಟ್ಟಹಾಸ ಮಿತಿಮೀರಿದು, ಯಕ್ಷಗಾನ ಕಲಾವಿದನೊಬ್ಬನಿಗೆ ಸಾಲ ನೀಡಿದ ವ್ಯಕ್ತಿ ಬಾರುಕೋಲಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಹೌದು ಉಡುಪಿಯಲ್ಲಿ ಬಡ್ಡಿ ದಂಧೆಕೊರರ ಅಟ್ಟಹಾಸ ಮಿತಿ ಮೀರಿದ್ದು, ಯಕ್ಷಗಾನ ಕಲಾವಿದನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ವರದಿಯಾಗಿದೆ.ಯಕ್ಷಗಾನ ಕಲಾವಿದ ನಿತೀನ್ ಗೆ ಸಚಿನ್ ಎನ್ನುವ ವ್ಯಕ್ತಿ ಸಾಲ ನೀಡಿದ್ದ. 20 ಪರ್ಸೆಂಟ್ ಬಡ್ಡಿಗೆ 1.80 ಲಕ್ಷ ಸಚಿನ್ ಸಾಲ ನೀಡಿದ್ದ. ಸಾಲಕ್ಕೆ ಕಲಾವಿದ ಬಡ್ಡಿ ಕಟ್ಟಿ ಬೇಸತ್ತಿದ್ದ. ಈಗ ಬಡ್ಡಿ ಕಟ್ಟುತ್ತಿದ್ದರು ಬಡ್ಡಿ ನೀಡಿಲ್ಲ ಎಂದು ಸಚಿನ್ ಹಲ್ಲೆ ನಡೆಸಿದ್ದಾನೆ. ಸಾಲ ವ್ಯವಹಾರದಲ್ಲಿ ಭಿನ್ನಮತ ಮೂಡಿ ಗಲಾಟೆ ನಡೆದಿದೆ. ಕಂಬಳದ ಬಾರ್ಕೋಲಿನಲ್ಲಿ ಈ ಒಂದು ಭೀಕರ ಹಲ್ಲೆ ನಡೆದಿದೆ. ಕಾರಿನಲ್ಲಿ ಉದ್ಯಾವರಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ. ಪಡುಬಿದ್ರಿ ಆಸ್ಪತ್ರೆಯಲ್ಲಿ ಸದ್ಯ ನಿತಿನ್…
ಬೆಂಗಳೂರು : ನಿನ್ನೆ ತಾನೆ ಬೆಂಗಳೂರಿನಲ್ಲಿ ಹಲವು ಬಾಲಕರು ನಾಪತ್ತೆಯಾಗಿದ್ದು ಬಳಿಕ ಮೈಸೂರಲ್ಲಿ ಪ್ರತ್ಯಕ್ಷವಾಗಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಮತ್ತೋರ್ವ ವಿದ್ಯಾರ್ಥಿ ನಾನು ಅಸತ್ಯ ಪ್ರಪಂಚದಲ್ಲಿ ಸತ್ಯ ಹುಡುಕುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ಕಾಲೇಜು ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿಯನ್ನು ಮೋಹಿತ್ ಋಷಿ ಎಂದು ತಿಳಿದುಬಂದಿದೆ.ಈತ ಜನವರಿ 16 ರಂದು ಮುಂಜಾನೆ 4 ಗಂಟೆ ಸುಮಾರಿಗೆ ಮನೆಯಲ್ಲೇ ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದಾನೆ.ಮೋಹಿತ್ ನಗರದ ಕಾಲೇಜುವೊಂದರಲ್ಲಿ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಎಂದು ತಿಳಿದುಬಂದಿದೆ. ಮನೆಯಿಂದ ನಾಪತ್ತೆಯಾಗುವ ಮುನ್ನ ಆತ ತನ್ನ ಬುಕ್ ನಲ್ಲಿ ನಾನು ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಹೊರಟಿದ್ದೇನೆ. ಈ ಅಧರ್ಮದ ಜಗತ್ತಿನಲ್ಲಿ ನನಗೆ ಇರಲು ಆಗುವುದಿಲ್ಲ.ನಾನು ವಿಷ್ಣುವಿನ ಮಗ ನನಗೆ ಏನು ಆಗಲ್ಲ ದಯವಿಟ್ಟು ಯಾರು ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಬರೆದಿದ್ದಾನೆ. ಪೋಷಕರು ಎಂದಿನಂತೆ ಆತನನ್ನು ಎಬ್ಬಿಸಲು ಆತನ ರೂಮ್ಗೆ ತೆರಳಿದಾಗ ಆತ…
ಬೆಳಗಾವಿ : ನಿನ್ನೆ ಮಂಗಳೂರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ರಾಮಸೇನೆಯ ಕಾರ್ಯಕರ್ತರು ಪಾರ್ಲರ್ ಮೇಲೆ ದಾಳಿ ನಡೆಸಿ ಪೀಠೋಪಕರಣಗಳನ್ನು ನಾಶ ಮಾಡಿದ್ದರು. ಇದೀಗ ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮೇಲೆ ದಾಳಿ ಮಾಡಿದ ಪೊಲೀಸರು 6 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಹೌದು ಬೆಳಗಾವಿಯಲ್ಲಿ ಸ್ಪಾ ಬ್ಯೂಟಿ ಪಾರ್ಲರ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಅನಗೋಳಗೋಳದಲ್ಲಿರುವ ಅಂಜಲಿ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮೇಲೆ ದಾಳಿ ಮಾಡಿದ್ದು ದಾಳಿಯ ವೇಳೆ ವೇಶ್ಯಾವಾಟಿಕೆ ನಡೆಸುತ್ತಿರುವುದು ಬಹಿರಂಗವಾಗಿದೆ. ದಾಳಿಯ ವೇಳೆ 6 ಮಹಿಳೆಯರನ್ನು ಪೊಲೀಸರು ಇದೇ ಸಂದರ್ಭದಲ್ಲಿ ರಕ್ಷಣೆ ಮಾಡಿದ್ದಾರೆ. ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಓನರ್ ಅಂಜಲಿ ಸಂಜಯ್ ಕಾಳೆ ಎನ್ನುವ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಬೆಳಗಾವಿಯ ಸೆಂಡ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : 2019ನೇ ಸಾಲಿನ ಚಲನಚಿತ್ರ ಪ್ರಶಸ್ತಿಯನ್ನು ಇತ್ತೀಚಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು.ಈ ಒಂದು ಪ್ರಶಸ್ತಿಯಲ್ಲಿ ಅತ್ಯುತ್ತಮ ನಟ ಎಂದು ಪೈಲ್ವಾನ್ ಚಿತ್ರದಲ್ಲಿ ನಟಿಸಿದ್ದಕ್ಕಾಗಿ ಕಿಚ್ಚ ಸುದೀಪ್ ಅವರಿಗೆ ಈ ಒಂದು ಪ್ರಶಸ್ತಿ ಲಭಿಸಿತ್ತು. ಆದರೆ ನಟ ಕಿಚ್ಚ ಸುದೀಪ್ ಅವರು ಟ್ವೀಟ್ ಮುಖಾಂತರ ನನಗೆ ಈ ಪ್ರಶಸ್ತಿ ಬೇಡ ಎಂದು ನಯವಾಗಿ ತಿರಸ್ಕರಿಸಿದ್ದಾರೆ. ಆದರೆ ಇದಕ್ಕೆ ಆ ಒಂದು ಎರಡು ಘಟನೆಗಳೆ ಕಾರಣ ಎಂದು ಹೇಳಲಾಗುತ್ತಿದೆ. ಹೌದು ಕಿಚ್ಚ ಸುದೀಪ್ ಅವರ ಜೀವನದಲ್ಲಿ ನಡೆದ ಆ ಎರಡು ಘಟನೆಗಳಿಂದ ಅವರು ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. 2004 ರಲ್ಲಿ ನಿಮಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದೆ ಅಂತ ಕನ್ನಡ ಚಲನಚಿತ್ರ ಕಮಿಟಿ ಅವರು ಸುದೀಪ್ ಗೆ ಫೋನ್ ಮಾಡಿದ್ದರು. ಆ ವಿಷಯ ಕೇಳಿ ಕಿಚ್ಚ ಸುದೀಪ್ ಅವರು ಸಂಭ್ರಮಿಸಿದ್ದರಂತೆ.ಪ್ರಶಸ್ತಿ ಘೋಷಿಸಿದಾಗ ಅದು ಬೇರೆ ನಟರ ಪಾಲಾಗಿತ್ತಂತೆ. 2004 ರಲ್ಲಿ ಕಿಚ್ಚ ಸುದೀಪ್ ಅಭಿನಯದ ರಂಗ SSLC ಮತ್ತು ಮುಸಂಜೆ…