Author: kannadanewsnow05

ಹುಬ್ಬಳ್ಳಿ : ಹುಬ್ಬಳ್ಳಿಯ ಮಂಟೂರು ರಸ್ತೆಯ ಬಳಿ ಇರುವ ಹಿಂದೂ ಸ್ಮಶಾನ ಭೂಮಿಯ ಬಳಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಿರುವ ವಿಚಾರವಾಗಿ ನಿನ್ನೆ ಪ್ರಮೋದ್ ಮುತಾಲಿಕ್ ಪ್ರಸಾದ ಭಯ ವಿರುದ್ಧ ಕಿಡಿ ಕಾರಿದ್ದರು. ಮುತಾಲಿಕ್ ಆರೋಪಕ್ಕೆ ಇದೀಗ ಶಾಸಕ ಪ್ರಸಾದ ಬಯ್ಯ ತಿರುಗೇಟು ನೀಡಿದ್ದು ಬೆಂಕಿ ಹಚ್ಚುವುದು ಬಿಟ್ಟರೆ ಬೇರೆ ಏನು ಗೊತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು. ಮುತಾಲಿಕ್ ತಾಕತ್ತು ನಾನು ನೋಡಿದ್ದೇನೆ. ಬೆಂಕಿ ಹಚ್ಚೋದು ಬಿಟ್ರೆ ಅವನಿಗೆ ಏನೂ ಗೊತ್ತಿಲ್ಲ. ಅವನು ಅಂತಾರಾಷ್ಟ್ರೀಯ ನಾಯಕನೇನು ಅಲ್ಲ.ಪ್ರಮೋದ್ ಮುತಾಲಿಕ್ ನನ್ನನ್ನು ಆರಿಸಿ ತಂದಿಲ್ಲ. ಜನ ನನ್ನನ್ನು ಆರಿಸಿ ತಂದಿದ್ದಾರೆ. ಅವರಿಗಾಗಿ ನಾನು ಕೆಲಸ ಮಾಡುತ್ತಾ ಇದ್ದೇನೆ ಅದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಹರಿಹಾಯ್ದರು. ಬಿಜೆಪಿಯ ಒಂದು ಗುಂಪು ಇಂದಿರಾ ಕ್ಯಾಂಟೀನ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸರ್ಕಾರ ಯಾರದೋ ಭೂಮಿ ಕಬಳಿಸಿ ಇಂದಿರಾ ಕ್ಯಾಂಟೀನ್ ಮಾಡುತ್ತಿಲ್ಲ. ಸ್ಥಳೀಯ ಜನರಿಗೆ ಅನುಕೂಲ ಆಗಲಿ…

Read More

ಬೆಂಗಳೂರು : ಸಾಮಾನ್ಯವಾಗಿ ಆತ್ಮಹತ್ಯೆ ಮಾಡಿಕೊಳ್ಳುವವರು ನದಿಗೋ ಅಥವಾ ಬೆಟ್ಟದಿಂದ ಜಿಗಿದು, ಇಲ್ಲವೇ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದರೆ ಇತ್ತೀಚಿಗೆ ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿ ಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇಂದು ಕೂಡ ಅಂಥದ್ದೇ ಘಟನೆ ನಡೆದಿದ್ದು, ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿ ಒಬ್ಬ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಅಲ್ಲಿಯೇ ಇದ್ದಂತಹ ಮಹಿಳಾ ಸೆಕ್ಯೂರಿಟಿ ಗಾರ್ಡ್ ನ ಸಮಯಪ್ರಜ್ಞೆಯಿಂದ ಆತನ ಜೀವ ಉಳಿದಿದೆ. ಬಿಹಾರ್ ಮೂಲದ ಸಿದ್ದಾರ್ಥ್ (35) ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಹಳಿಗೆ ಜಿಗಿದಿದ್ದಾನೆ. ಕೂಡಲೇ ಎಚ್ಚೆತ್ತ ಸೆಕ್ಯೂರಿಟಿ ಗಾರ್ಡ್ ರಶ್ಮಿ ಮೆಟ್ರೋ ಸ್ಟೇಷನ್ ನಲ್ಲಿದ್ದ ಎಮರ್ಜೆನ್ಸಿ ಟ್ರಿಪ್ ಸಿಸ್ಟಮ್ (ETS) ಆಫ್ ಮಾಡಿದ್ದಾರೆ. ಪ್ಲಾಟ್ ಫಾರ್ಮನಲ್ಲಿ ಕೆಂಪು ಬಣ್ಣದ ಬಾಕ್ಸ್ ನಲ್ಲಿ ಇರುವ ಇ ಟಿ ಎಸ್ ಬಾಕ್ಸ್ ಬಟನ್ ಆಫ್ ಮಾಡಿದ್ದಾರೆ. ಇದನ್ನು ಆಫ್ ಮಾಡಿದರೆ ಮೆಟ್ರೋ ರೈಲಿನ ಪವರ್ ಸಂಪೂರ್ಣ ಆಫ್…

Read More

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಆಗುವ ರೀತಿಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಜಾ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೌದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ, ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ ಮತ್ತು ಕಚೇರಿಯಲ್ಲಿ ಕುಳಿತಿರುವ ಫೋಟೋಗಳನ್ನು ಬಳಸಿ ಅದನ್ನು ಎಡಿಟ್ ಮಾಡಿ ಸಿದ್ದರಾಮಯ್ಯ ಕಲೆಕ್ಟರ್ ಮಾಸ್ಟರ್ (CM) ಎಂದು ಪೋಸ್ಟ್ ಹಾಕಿದ್ದರು. ಈ ಒಂದು ಪೋಸ್ಟ್ ಗೆ ಸಂಬಂಧಿಸಿದಂತೆ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ಶೇಖ‌ರ್ ಕುಕ್ಕೇಡಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು ಕಳೆದ 2023 ರ ಅಕ್ಟೊಬರ್ 26 ರಂದು IPC ಸೆಕ್ಷನ್ 1860(U/s-504,505(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು…

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರ ರಸ್ತೆ ಅಪಘಾತ ಒಂದು ಸಂಭವಿಸಿದ್ದು, ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಹೊರವಲಯದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಹೊರವಲಯದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಪತಿ ದಿನೇಶ್ ಪತ್ನಿ ಅಂಜು ಹಾಗೂ ಮಗ ಇಶಾನ್ ಕೃಷ್ಣ ಮೃತಪಟ್ಟವರು ಎಂದು ತಿಳಿದುಬಂದಿದೆ. ಕೇರಳದಿಂದ ಗುಂಡ್ಲುಪೇಟೆಗೆ ಮೂವರು ಬೈಕ್ ನಲ್ಲಿ ಬರುತ್ತಿದ್ದರು. ಕುಡಿದ ಮತ್ತಿನಲ್ಲಿ ಚಾಲಕ ಟಿಪ್ಪರ್ ಚಲಾಯಿಸುತ್ತಿದ್ದ ಎನ್ನಲಾಗುತ್ತಿದ್ದು, ಚಾಲಕನ ಅಜಾಗರುಕತೆಯಿಂದ ಇದೀಗ ಮೂವರು ಬಲಿಯಾಗಿದ್ದಾರೆ. ಘಟನೆ ಕುರಿತಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ, ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವಂತಹ ಆರೋಪಿ ದರ್ಶನ್ ನನ್ನು ನೋಡಲು ಇಂದು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ದನ್ವೀರ್ ಆಗಮಿಸಿದ್ದರು. ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವಿರ್ ದರ್ಶನ ಭೇಟಿ ಆಗಲು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ದರ್ಶನ್ ಬೇಟಿಯ ವೇಳೆ ಸ್ವಲ್ಪ ಹೊತ್ತು ಮಾತನಾಡಿದ ಬಳಿಕ ನಟ ದನ್ವೀರ್ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಪತ್ನಿ ವಿಜಯಲಕ್ಷ್ಮಿ ಅವರ ಜೊತೆಗೆ ನಟ ದರ್ಶನ್ ಕೆಲವು ಹೊತ್ತು ಮಾತುಕತೆ ನಡೆಸಿದ್ದು, ಜಾಮೀನು ಕುರಿತಾಗಿ ಹಾಗೂ ಕಾನೂನು ಹೋರಾಟದ ಕುರಿತಾಗಿ ನಟ ದರ್ಶನ್ ವಿಜಯಲಕ್ಷ್ಮಿ ಅವರೊಂದಿಗೆ ಚರ್ಚಿಸಿದ್ದಾರೆ. ಕೇವಲ ಅರ್ಧ ಗಂಟೆ ಸಮಯ ಇರುವುದರಿಂದ ನಟ ದನ್ವೀರ್ ಹಾಗೂ ಪತ್ನಿ ವಿಜಯಲಕ್ಷ್ಮಿ ನಟ ದರ್ಶನ್ ಅವರನ್ನು ಇದೀಗ ಬಳ್ಳಾರಿ ಜಿಲ್ಲೆಯಲ್ಲಿ ಭೇಟಿ ಮಾಡಿದ್ದಾರೆ.

Read More

ಬಾಗಲಕೋಟೆ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಂತಹ ಗಲಭೆಯ ಬೆಂಕಿ ಅರುವ ಮುನ್ನವೇ ಇದೀಗ ಬಾಗಲಕೋಟೆಯಲ್ಲಿ ಯುವಕನೊಬ್ಬ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಪಾಕಿಸ್ತಾನದ ಧ್ವಜವಿರುವ ಸ್ಟೇಟಸ್ ಹಾಕಿ ಪುಂಡಾಟ ಮೆರೆದಿದ್ದು, ಇದೀಗ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಬಾಗಲಕೋಟೆ ತಾಲ್ಲೂಕಿನ ಕಲಾದಗಿ ಗ್ರಾಮದ ಯುವಕ ತೌಶೀಪ್ ಮೆಹ್ತರ್ ಬಂಧಿತ ಆರೋಪಿ ಎನ್ನಲಾಗಿದ್ದು, ಪಾಕಿಸ್ತಾನ ಪರ ವಾಟ್ಸಾಪ್​ ಸ್ಟೇಟಸ್ ಹಾಕಿ ಪುಂಡತನ ಮೆರೆದ ಘಟನೆ ನಡೆದಿದೆ. ಯಾವುದೋ ವಾಹನದ ಮೇಲೆ ಪಾಕಿಸ್ತಾನದ ಧ್ವಜ ಹಾರಾಡುತ್ತಿರುವ ವಿಡಿಯೋದ ತುಣುಕನ್ನು ಸ್ಟೇಟಸ್ ಇಟ್ಟುಕೊಂಡು ಪುಂಡಾಟ ಮೆರೆದಿದ್ದಾನೆ. ಇದೀಗ ತೌಶೀಪ್ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಹಿಂದೂ ಕಾರ್ಯಕರ್ತರು ಕಿಡಿಕಾರಿದ್ದಾರೆ. ಈ ಹಿನ್ನಲೆ ಎಚ್ಚೆತ್ತ ಕಲಾದಗಿ ಪೊಲೀಸರು ಆರೋಪಿ ತೌಶೀಪ್​ನನ್ನು ವಶಕ್ಕೆ ಪಡೆದಿದ್ದಾರೆ.ಮಂಡ್ಯ ಜಿಲ್ಲೆಯ ನಾಗಮಂಗಲದ ಘಟನೆ ಮಾಸುವ ಮುನ್ನವೇ ಇದೀಗ ಬಾಗಲಕೋಟೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು ಹಿಂದೂ ಕಾರ್ಯಕರ್ತರನ್ನು ಕೆರಳಿಸಿದೆ.

Read More

ಬೆಂಗಳೂರು : ಸುಮಾರು 6 ಎಕರೆ ಪ್ರದೇಶದಲ್ಲಿ ಟೊಮ್ಯಾಟೋ ಬೆಳೆ ಬೆಳೆದಿದ್ದ ಟೆಕ್ಕಿ ಒಬ್ಬ, ಟೊಮ್ಯಾಟೋ ಲಾಸ್ ಆಗಿದ್ದಕ್ಕೆ ತಾನು ಈ ಹಿಂದೆ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಸುಮಾರು 22 ಲಕ್ಷ ಮೌಲ್ಯದ ಲ್ಯಾಪ್ಟಾಪ್ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಮಿಳುನಾಡಿನ ಹೊಸೂರಿನ ಮುರುಗೇಶ್ ಎಂಬ ಟೆಕ್ಕಿ ಐಟಿಪಿಲ್ ಬಳಿಯಿರುವ ಕಂಪನಿಯೊಂದರಲ್ಲಿ ಸಿಸ್ಟಂ ಅಡ್ಮಿನ್ ಆಗಿ ಕೆಲಸ ಆರಂಭಿಸಿದ್ದ. ಆಗಸ್ಟ್ 22ರಿಂದ ಕೆಲಸಕ್ಕೆ ಬಾರದೆ ಗೈರಾಗಿದ್ದ. ಅನುಮಾನಗೊಂಡ ಕಂಪನಿಯವರು ಪರಿಶೀಲಿಸಿದಾಗ ಆರೋಪಿ ಕೆಲಸ ನಿರ್ವಹಿಸುತ್ತಿದ್ದಾಗ ಆತನ ಸುಪರ್ದಿಯಲ್ಲಿದ್ದ ಒಟ್ಟು 57 ಲ್ಯಾಪ್‌ಟಾಪ್‌ಗಳು ನಾಪತ್ತೆಯಾಗಿರುವುದು ಕಂಡು ಬಂದಿತ್ತು. ತಕ್ಷಣ ಕಂಪನಿಯ ಪ್ರತಿನಿಧಿ ವೈಟ್‌ಫೀಲ್ಡ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ತಮಿಳುನಾಡಿನ ಹೊಸೂರಿನ ರಾಘವೇಂದ್ರ ಚಿತ್ರಮಂದಿರದ ಬಳಿ ಸಿಸ್ಟಂ ಅಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಸಾಲ ಮಾಡಿ ಹೊಸೂರಿನಲ್ಲಿರುವ ತನ್ನ 5 ಎಕರೆ ಜಮೀನಿನಲ್ಲಿ ಟೊಮ್ಯಾಟೊ ಬೆಳೆದಿದ್ದ ಆರೋಪಿಗೆ ಉತ್ತಮ ಬೆಲೆ ಸಿಗದೆ ಸಾಕಷ್ಟು ನಷ್ಟವಾಗಿತ್ತು.…

Read More

ದಕ್ಷಿಣಕನ್ನಡ : ಧರ್ಮ ನಿಂದನೆ ಪ್ರಚೋದನಕಾರಿ ಭಾಷಣ ಹಾಗೂ ಸಮಾಜದಲ್ಲಿ ಶಾಂತಿ, ನೆಮ್ಮದಿ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಸೆಪ್ಟೆಂಬರ್ 16ರಂದು ಬಿಸಿ ರೋಡಿನ ದೇವಸ್ಥಾನ ಒಂದರ ಮುಂಭಾಗದಲ್ಲಿ ಶರಣ್ ಪಂಪ್ವೆಲ್, ಭಾರತ್ ಕುಮ್ದೇಲು ಪ್ರಚೋದನಕಾರಿಯಾದಂತಹ ಭಾಷಣ ಮಾಡಿದ್ದು ಅಲ್ಲದೆ ತಾವು ಮಾತನಾಡಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮಾಜದಲ್ಲಿ ಶಾಂತಿ ನೆಮ್ಮದಿ ಕದಡುವಂತಹ ಕೆಲಸ ಮಾಡಿದ ಕಾಗೆ ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ದ್ವೇಷ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಬಿ.ಮೂಡ ಗ್ರಾಮದ ಬಂಟ್ವಾಳ ಕೆಳಗಿನ ಪೇಟೆ ನಿವಾಸಿ ಮಹಮ್ಮದ್ ರಫೀಕ್ ಎಂಬವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇನ್ನೂ ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ ಯಶೋಧರ ಕರ್ಬೆಟ್ಟು ಎಂಬಾತನ…

Read More

ಚಿತ್ರದುರ್ಗ : ರೈತರ ಪಹಣಿ ಪ್ರತ್ಯೇಕ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತಿ ಗ್ರಾಮ ಲೆಕ್ಕಿಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ನಡೆದಿದೆ. ಹೌದು ಹಿರಿಯೂರು ಪಟ್ಟಣದಲ್ಲಿ ಗ್ರಾಮ ಲೆಕ್ಕೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲಗಲದ್ದಿ ಗ್ರಾಮ ಪಂಚಾಯಿತಿ ಗ್ರಾಮಲೆಕ್ಕಿಗ ನಾಗಪ್ಪ ಲಮಾಣಿ ರೇಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ಪಹಣಿ ಪ್ರತ್ಯೇಕ ಮಾಡಿಕೊಡಲು ಹಲಗಲದ್ದಿ ಗ್ರಾಮದ ತಿಪ್ಪೇಸ್ವಾಮಿ ಬಳಿ 9 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ. ಹಿರಿಯೂರು ತಾಲೂಕು ಕಚೇರಿ ಆವರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.

Read More

ಧಾರವಾಡ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಗಲಭೆ ನಡೆದಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಗಲಭೆ, ಗಲಾಟೆ ನಡೆಯದಂತೆ ಸೂಕ್ತವಾದಂತ ಬಂದೋಬಸ್ತ್ ಮಾಡಿ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈದ್ಗ ಮೈದಾನದಲ್ಲಿ ಗಣಪತಿ ಇಡಲು ಅವಕಾಶ ಕೊಟ್ಟರು.ಅದಕ್ಕೆ ಅವರಿಗೆ ಎಷ್ಟು ಗೌರವ ಸಿಕ್ಕಿತ್ತು ನೋಡಿ. ಸಮಾಜದಲ್ಲಿ ಕೆಲವರು ಬೆಂಕಿ ಹಚ್ಚುವವರು ಇರುತ್ತಾರೆ. ಗಲಾಟೆ ಮಾಡುವ ಉದ್ದೇಶವನ್ನೇ ಇಟ್ಟುಕೊಂಡಿದ್ದಾರೆ ಎಲ್ಲರೂ ಹೊಂದಿಕೊಂಡು ಹೋಗುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಆದ್ದರಿಂದ ಉತ್ತರ ಪ್ರದೇಶದಂತೆ ಬಂದೋಬಸ್ತ್ ಮಾಡಿ.ಗಲಾಟೆ ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂಬ ಗ್ಯಾರಂಟಿಯೇ ಇಲ್ಲ. 4-5 ದಿನ ಜೈಲಿನಲ್ಲಿದ್ದು ಹೊರ ಬರುತ್ತಾರೆ. ಇದು ತಪ್ಪಬೇಕು ಈ ಸಂಬಂಧ ನಾನು ಮುಖ್ಯಮಂತ್ರಿ ಅವರಿಗೆ ಪತ್ರ ಬರೆಯುತ್ತೇನೆ ಎಂದು ಧಾರವಾಡದಲ್ಲಿ ಸಭಾಪತಿ ಬಸವರಾಜ್ ಹೊರಟಿ ಹೇಳಿಕೆ ನೀಡಿದರು.

Read More