Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಇಲಾಖೆಯವರು ಬಿಟ್ಟಿಯಾಗಿ ಯೋಜನೆಗಳನ್ನು ಹಾಕಿಕೊಳ್ಳುತ್ತಾರೆ. ಹಣ ವ್ಯರ್ಥ ಆಗುತ್ತಿದೆ.‌ ಜನರಿಗೆ ಉಪಯೋಗ ಆಗುತ್ತಿಲ್ಲ. ಹೀಗಾಗಿ ಅನೇಕ ಸರ್ಕಾರದ ಯೋಜನೆಗಳು ವಿಫಲವಾಗುತ್ತಿವೆ ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ತಿಳಿಸಿದರು. ನಿನ್ನೆ ಗಾಂಧಿಭವನದಲ್ಲಿ ನಡೆದ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಅವಶ್ಯಕತೆ, ಸಾಕ್ಷ್ಯ ಮತ್ತು ಫಲಿತಾಂಶ ಆಧಾರಿತ ನೀತಿ ಹಾಗೂ ಯೋಜನೆ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಸರ್ವ ಶಿಕ್ಷಣ ಅಭಿಯಾನದಡಿ ಕಟ್ಟಿದ ಎಲ್ಲಾ ಶಾಲಾ ಕಟ್ಟಡಗಳು ಖಾಲಿ ಬಿದ್ದಿವೆ, ಅಲ್ಲಿ ವಿದ್ಯಾರ್ಥಿಗಳು ಸಹ ಇಲ್ಲ, ಶಿಕ್ಷಕರು ಮೊದಲೇ ಇಲ್ಲ. ನನ್ನ ಕ್ಷೇತ್ರದಲ್ಲಿ ನಾನೇ ಕೇಳೇ ಇಲ್ಲ, ನನಗೆ ಗೊತ್ತೂ ಇಲ್ಲ‌. ಆದರೆ ಒಂದು ಗ್ರಾಮದಲ್ಲಿ ಐದು ಕೋಟಿ ರೂಪಾಯಿ ಬಿಡುಗಡೆ ಮಾಡಿ ದೊಡ್ಡ ಹಾಸ್ಟೆಲ್ ಕಟ್ಟಲು ಹಣ ಮಂಜೂರಾಗಿದೆ. ಅಷ್ಟು ದೊಡ್ಡ ಹಾಸ್ಟೆಲ್ ಅಗತ್ಯನೂ ಇಲ್ಲ. ಇದೇ ರೀತಿ ಅನೇಕ ಕಡೆ ಹಾಸ್ಟೆಲನ್ನು ಕಟ್ಟಲಾಗಿದೆ.‌ ಮಕ್ಕಳು ಅಲ್ಲಿ ಇಲ್ಲ. ಈ ರೀತಿ…

Read More

ಬೆಂಗಳೂರು : ರಾಜ್ಯ ಸರ್ಕಾರದ ಯೋಜನೆಗಳು ರಾಜ್ಯದ ಇನ್ನೂ ಕೆಲವಷ್ಟು ಜನರಿಗೆ ತಲುಪಿಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.  ರಾಜ್ಯ ಸರ್ಕಾರದಲ್ಲಿ ಇಷ್ಟೆಲ್ಲಾ ಯೋಜನೆಗಳಿದ್ದರೂ ಸಹ ಈವರೆಗೆ ಕೆಲವರಿಗೆ ಅವು ತಲುಪಿಲ್ಲ.ನನ್ನ ಬಳಿ ಅದರ ಅಂಕಿಅಂಶ ಇದೆ. ಈಗಲೂ ರಾಜ್ಯದಲ್ಲಿ ಕೆಲವರಿಗೆ ಯೋಜನೆ ತಲುಪಿಲ್ಲ. ಇದಕ್ಕೆ ಯಾರು ಜವಾವ್ದಾರರು?. ವಿಕೇಂದ್ರೀಕರಣ ವ್ಯವಸ್ಥೆ, ಆಡಳಿತ ಯಂತ್ರ, ಸಂಘ ಸಂಸ್ಥೆಗಳು ಇದರ ಹೊಣೆ ಹೊರಬೇಕು ಎಂದು ಅವರು ತಿಳಿಸಿದರು. ಕಳೆದ 75 ವರ್ಷದಿಂದ ಗ್ರಾಮೀಣಾಭಿವೃದ್ಧಿಗೆ ಲಕ್ಷಾಂತರ ರೂಪಾಯಿ ಹಾಕಿದ್ದೇವೆ. ಅದನ್ನು ಲೆಕ್ಕಹಾಕಿದರೆ ಪ್ರತಿಯೊಬ್ಬನಿಗೆ ಸುಮಾರು 1 ಲಕ್ಷ ರೂ‌. ಬಂದಂತಾಗಿದೆ. ಆದರೆ ತಳಮಟ್ಟದಲ್ಲಿ ಅದರ ಫಲಿತಾಂಶ ಕಾಣಿಸುತ್ತಿಲ್ಲ.‌ ಬಿಪಿಎಲ್ ಸಂಖ್ಯೆ ಹೇಳಲು ನಾಚಿಕೆ ಆಗುತ್ತದೆ. ಅದನ್ನು ಪರಿಷ್ಕರಣೆ ಮಾಡಲು ಸಾಧ್ಯವಾಗಿಲ್ಲ. ಅವರು ವಾಸ್ತವವಾಗಿ ಬಿಪಿಎಲ್ ಇದ್ದಾರಾ?. ಅದನ್ನು ಟಚ್ ಮಾಡಿದರೆ ಸಮಸ್ಯೆ ಆಗುತ್ತದೆ ಎಂದು ತಿಳಿಸಿದರು. ಗ್ರಾಮೀಣ ಭಾಗದಲ್ಲಿ ಯೋಜನೆಗಳು, ಆಯವ್ಯಯ ಹಣ ಸರಿಯಾಗಿ ಸಮೀಕರಣ ಆಗುತ್ತಿಲ್ಲ.ಎಲ್ಲಾ‌…

Read More

ವಡೋದರ : ಉಮೆನ್ಸ್ ಪ್ರೀಮಿಯಂ ಲೀಗ್ ನಲ್ಲಿ ಆರ್‌ಸಿಬಿ ಈಗಾಗಲೇ ಸತತವಾಗಿ ನಾಲ್ಕು ಪಂದ್ಯಗಳನ್ನು ಗೆದ್ದಿದ್ದು ಅಲ್ಲದೆ, ನಿನ್ನೆ ವಡೋದರದಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧ ಸತತ ಐದನೇ ಪಂದ್ಯ ಗೆಲುವು ಮೂಲಕ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿದೆ. ಗುಜರಾತ್ ಜೈಂಟ್ಸ್ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿ ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ.  ಹೌದು ನಿನ್ನೆ ವಡೋದರಾದಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸತತ ಗೆಲುವಿನ ಮೂಲಕ ಪ್ಲೇಆಫ್‌ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ. ತವರು ನೆಲ ಆದುದ್ದರಿಂದ ಗುಜರಾತ್ ತಂಡದಿಂದ ಸಂಘಟಿತ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಆದರೆ ಆರ್‌ಸಿಬಿ ಮತ್ತೆ ಎರಡನೇ ಬಾರಿ ಗುಜರಾತ್ ತಂಡವನ್ನು ಸೋಲಿಸಿ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿದೆ, ಏಕೆಂದರೆ ಮೊದಲ ಪಂದ್ಯದಲ್ಲಿ ಇದೆ ಗುಜರಾತ್ ತಂಡವನ್ನು ಸೋಲಿಸಿದ್ದು, ಅದರ ಸೇಡನ್ನು ಈ ಪಂದ್ಯದಲ್ಲಿ ತೀರಿಸಿಕೊಳ್ಳುತ್ತದೆ ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಆರ್​ಸಿಬಿ…

Read More

ಬಳ್ಳಾರಿ,ಜ.19(ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಲಾ ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ.-ಎಸ್.ವೈಎA) ಪಿಂಚಣಿ ಯೋಜನೆಯಡಿ ಕಾರ್ಮಿಕರನ್ನು ನೋಂದಾಯಿಸಲು ವಿಶೇಷ ನೋಂದಣಿ ಅಭಿಯಾನ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಜಿ ಖೈನೂರು ಅವರು ತಿಳಿಸಿದ್ದಾರೆ. ನಗರ ಪ್ರದೇಶಗಳಲ್ಲಿ ಫೆ.15 ರ ವರೆಗೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಫೆ.16 ರಿಂದ ಮಾ.15 ರವರೆಗೆ ವಿಶೇಷ ನೋಂದಣಿ ಅಭಿಯಾನ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ ರೀತಿಯ ಇತರೆ ಉದ್ಯೋಗಗಳ ಕೆಲಸಗಾರರು ಅಸಂಘಟಿತ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಅಸಂಘಟಿತ…

Read More

ಬೆಂಗಳೂರು : ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಸಿಎಂ ಹಾಗೂ ಸಚಿವರು ತಿಳಿಸಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಒಂದೇ ಬಾರಿಗೆ ಎಲ್ಲವನ್ನು ನಡೆಸಲು ಚಿಂತನೆ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನ್ಯಾಯಾಲಯ ಆದೇಶ ನೀಡಿದೆ. ನಮ್ಮ ಸರ್ಕಾರ ಸಂವಿಧಾನದ 73, 74ನೇ ತಿದ್ದುಪಡಿಗೆ ಬದ್ಧವಾಗಿದೆ. ಯುವಕರಿಗೆ ಅಧಿಕಾರ ನೀಡಬೇಕು, ಹೊಸ ಪೀಳಿಗೆ ಅಧಿಕಾರಕ್ಕೆ ಬರಬೇಕು. ಈಗ ಐದು ಪಾಲಿಕೆಗಳಿಂದ 369 ವಾರ್ಡ್​​ಗಳನ್ನು ರಚಿಸಲಾಗಿದೆ. ಇನ್ನು ಬೆಂಗಳೂರಿನ ಹೊರವಲಯವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು. ನನಗೂ ಈ ಬಗ್ಗೆ ಮಾಹಿತಿ ಬಂದಿದೆ. ಇದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ. ಮತಪತ್ರ ಬಳಸುವುದರಲ್ಲಿ ತಪ್ಪೇನು ಇಲ್ಲ. ಯಾವ ರೂಪದಲ್ಲಿ ಚುನಾವಣೆ ನಡೆಸಲಾಗುವುದು ಎನ್ನುವುದಕ್ಕಿಂತ…

Read More

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಇರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆ ಒಂದು ನೀಡಿದ್ದು ರಾಜ್ಯದ 140 ಶಾಸಕರು ಸಿರಿದಂತೆ ಸಿಎಂ ಸಿದ್ದರಾಮಯ್ಯ ಸಹ ನನ್ನ ಬೆಂಬಲಕ್ಕೆ ಇದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಸಿಎಂ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ. ನಾನು ಹಾಗೂ ಸಿಎಂ ಅವರು ಏನು ಮಾತನಾಡಿದ್ದೇವೆ ಎಂದು ಸಾರ್ವಜನಿಕವಾಗಿ ಚರ್ಚೆ ಮಾಡಲು ಆಗಲ್ಲ ಎಂದು ತಿಳಿಸಿದರು. ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.

Read More

ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ಡಿಜಿಪಿ ರಾಮಚಂದ್ರ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಈ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು ಇಂದು ಬೆಳಿಗ್ಗೆ ತಾನೇ ನನಗೆ ಈ ವಿಚಾರ ಗೊತ್ತಾಗಿದ್ದು, ಬಿಜೆಪಿ ರಾಮಾಚಂದ್ರ ರಾವ್ ವಿರುದ್ಧ ಪ್ರಸ್ತುತ ಕ್ರಮ ತೆಗೆದುಕೊಳ್ಳುತ್ತೇವೆ, ರಸ್ತೆ ಎತ್ತರದ ಅಧಿಕಾರಿ ಇದ್ದರು ಕಾನೂನಿನ ಮುಂದೆ ಯಾರು ದೊಡ್ಡವರಲ್ಲ ಹಾಗಾಗಿ ಅವರ ವಿರುದ್ಧ ಶಿಸ್ತು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ವಿಚಾರಣೆ ಮಾಡಿ ಕ್ರಮತೆ ಕಳೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

Read More

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಬಿಜೆಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಮಚಂದ್ರರಾವ್ ಅವರನ್ನು ತಕ್ಷಣ ಸಸ್ಪೆಂಡ್ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಲಾಗಿದೆ. ನಾಗರಿಕ ಹಾಗೂ ಹೋರಾಟ ಸಮಿತಿ ಅಧ್ಯಕ್ಷರಾಗಿರುವ ದಿನೇಶ್ ಕಲ್ಲಹಳ್ಳಿಯವರು ದೂರು ನೀಡಿದ್ದು, ಇದು ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ ಈ ಕೂಡಲೇ ರಾಜ್ಯ ಸರ್ಕಾರ ರಾಮಚಂದ್ರ ಅವರನ್ನು ತಕ್ಷಣ ಅಮಾನತುಗೊಳಿಸಬೇಕು, ಪ್ರಕರಣದ ಕುರಿತು ಉನ್ನತ ತನಿಖೆಗೆ ವಹಿಸಬೇಕು. ಗೃಹ ಇಲಾಖೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಒಳ್ಳೆಯ ಹೆಸರಿರುವಂತಹ ಕರ್ನಾಟಕ ಪೊಲೀಸ್ ಇಲಾಖೆ ಇಂತಹ ಅಧಿಕಾರಿಗಳಿಂದ ಮಾನ ಮರ್ಯಾದೆ ಹರಾಜು ಆಗುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಉನ್ನತ ಮಟ್ಟದ ತಣಿಕೆಗೆ ವಹಿಸಬೇಕು ದಕ್ಷ ಮತ್ತು ಪ್ರಮಾಣಿಕ ಅಧಿಕಾರಿಗಳಿಂದ ಇಡೀ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಸರ್ಕಾರದ ಮುಖ್ಯ…

Read More

ಮೈಸೂರು : ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದ್ದರೆ, ಇತ್ತ ಜೆಡಿಎಸ್ ಪಕ್ಷದಲ್ಲೂ ಕೂಡ ಹಲವು ಬೆಳವಣಿಗೆಗಳು ನಡೆದಿವೆ.ನಾನು ಜೆಡಿಎಸ್​​ನಲ್ಲಿಯೇ ಇದ್ದೇನೆ, ಎಲ್ಲಿಯೂ ಹೋಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್​​ನಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದರು. ನಾನು ಯಾವ ನಾಯಕರಿಗೂ ದ್ರೋಹ ಮಾಡಿಲ್ಲ. 5 ಬಾರಿ ಶಾಸಕನಾಗಿದ್ದೇನೆ, ಅದರಲ್ಲಿ 2 ಬಾರಿ ಹುಣಸೂರು ಹಾಗೂ 3 ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದಿದ್ದೇನೆ. ಜೆಡಿಎಸ್ ಪಕ್ಷದ ಸಂಘಟನೆಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇನೆ, ಈಗಲೂ ಪಕ್ಷದಿಂದ ದೂರ ಉಳಿದಿಲ್ಲ. ಯಾರನ್ನೂ ಟೀಕೆ ಮಾಡಿಲ್ಲ, ನಾನು ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು. ನಾನು ಜೆಡಿಎಸ್ ಪಕ್ಷವನ್ನು ಕಟ್ಟಿರುವ ವಿಚಾರ ಹೆಚ್​ ಡಿ ದೇವೇಗೌಡರು ಹಾಗೂ ಹೆಚ್​ ಡಿ ಕುಮಾರಸ್ವಾಮಿಗೆ ಗೊತ್ತಿದೆ. ಮೂರು ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದಿದ್ದೇನೆ, ಮುಂದೆಯೂ ಜೆಡಿಎಸ್​​ನಲ್ಲಿಯೇ ಇರುತ್ತೇನೆ. ಜೊತೆಗೆ ಜೆಡಿಎಸ್​​ನಿಂದಲೇ ಸ್ಪರ್ಧಿಸುತ್ತೇನೆ. ಯಾರೂ ಆತಂಕಪಡುವ ಆವಶ್ಯಕತೆ ಇಲ್ಲ. ನನಗೂ ಆತಂಕವಿಲ್ಲ, ಕಾರ್ಯಕರ್ತರಿಗೂ ಇಲ್ಲ…

Read More

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಗುತ್ತಿದೆ ಇದೇ ವಿಚಾರವಾಗಿ ರಾಮಚಂದ್ರರಾವ್ ಎಂದು ಬೆಂಗಳೂರಿನ ಸದಾಶಿವನಾಗರದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಲು ಆಗಮಿಸಿದ್ದರು. ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಲು ಬಂದಾಗ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಚಂದ್ರರಾವ್, ಇದು ಹಳೆಯ ಹಳೆಯ ವಿಡಿಯೋ ಎಂಟು ವರ್ಷ ಹಳೆಯದು. ಆಗ ನಾನು ಬೆಳಗಾವಿಯಲ್ಲಿ ಇದ್ದೆ. ಈ ವಿಡಿಯೋ ಸುಳ್ಳು ಇದರ ಕುರಿತು ವಕೀಲರ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇವೆ. ಇದರ ಬಗ್ಗೆ ನನಗೆ ಏನೂ ಗೊತ್ತಿಲ್ಲ ಯಾವಾಗ ಮಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ತನಿಖೆ ಬಳಿಕ ಎಲ್ಲವೂ ಗೊತ್ತಾಗುತ್ತದೆ. ಈ ರೀತಿ ಸುಳ್ಳು ಮಾಹಿತಿ ಹರಿಬಿಡಬಾರದು ಎಂದು ತಿಳಿಸಿದರು.

Read More