Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಖಾಸಗಿ ಬಸ್ಗೆ ಕಂಟೇನರ್ ಲಾರಿ ಡಿಕ್ಕಿಯಾಗಿ 9 ಜನರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ  ಈ ಒಂದು ಭೀಕರ ಅಪಘಾತ ಸಂಭವಿಸಿದೆ ಘಟನೆ ಸಂಭಂದ ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡಿದ್ದು ಅಪಘಾತಕ್ಕೆ ನಿಖರವಾದ ಕಾರಣ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಸೂಚಿಸಿದ್ದಾರೆ ಕುಟುಂಬದ ಸದಸ್ಯರಿಗೆ ಪರಿಹಾರ ಘೋಷಿಸುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಶೀಘ್ರದಲ್ಲಿ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಲಿದೆ. ಇನ್ನು ಈ ಒಂದು ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಮೃತರರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಚಿತ್ರದುರ್ಗದ ಬಳಿ ಲಾರಿ ಮತ್ತು ಬಸ್ಸಿ ನಡುವೆ ಅಪಘಾತ ಸಂಭವಿಸಿದೆ ಅಪಘಾತದಲ್ಲಿ ಪ್ರಯಾಣಿಕರು ಸಚಿವ ದಹನಗೊಂಡಿದ್ದಾರೆ ಸುದ್ದಿ ಕೇಳಿ ಎದೆ ನಡುಗಿತು. ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ…

Read More

ಚಿಕ್ಕಬಳ್ಳಾಪುರ : ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ತಂದೆಯೇ ತನ್ನ ಗರ್ಭಿಣಿ ಮಗಳನ್ನ ಭೀಕರವಾಗಿ ಕೊಲೆ ಮಾಡಿದ್ದ ಈ ಒಂದು ಮರ್ಯಾದಾ ಹತ್ಯೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ ಮರ್ಯಾದಾ ಹತ್ಯೆಯ ಶಂಕೆ ವ್ಯಕ್ತವಾಗಿದೆ. 40 ದಿನಗಳ ಗಂಡುಶಿಶುವಿನ ಸಾವಿಗೆ ಮುತ್ತಜ್ಜಿಯೇ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ ಹೌದು ಅಪ್ರಾಪ್ತ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಕ್ಕೆ ದ್ವೇಷ ಹೊಂದಿದ್ದ ಅನ್ಯಕೋಮಿಗೆ ಸೇರಿದ ಅಜ್ಜಿ, ಮೊಮ್ಮಗಳ 40 ದಿನದ ನವಜಾತ ಶಿಶುವನ್ನು ಕೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಪ್ರೀತಿಸಿ ಮದುವೆಯಾದ ದಂಪತಿಗೆ ಜನಸಿದ್ದ ಗಂಡು ಮಗು ಡಿಸೆಂಬರ್ 21 ರಂದು ಮೃತಪಟ್ಟಿದೆ. ಸಾವು ಸಂಭವಿಸಿದ ವೇಳೆ ಮಗು ಅಜ್ಜಿ ಬಳಿ ಇತ್ತು. ಆದರೆ, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡುವ ಅಗತ್ಯವಿಲ್ಲ ಎಂದು ಅಜ್ಜಿ ವಾದಿಸಿದ್ದಾಳೆ ಎನ್ನಲಾಗಿದೆ. ಆದರೆ ತನ್ನ ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿದೆ ಎಂಬ ಅನುಮಾನ ವ್ಯಕ್ತಪಡಿಸಿದ 17 ವರ್ಷದ ಅಪ್ರಾಪ್ತ ಬಾಲಕಿ, ಚೇಳೂರು ಪೊಲೀಸ್…

Read More

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಸದ್ಯ ಸಾವಿನ ದವಡೆಯಿಂದ ಇಬ್ಬರು ಯುವತಿಯರು ಹೊರಬಂದಿದ್ದಾರೆ. ಧಗಧಗನೇ ಉರಿಯುತ್ತಿದ್ದ ಬಸ್‌ನಿಂದ ಇಬ್ಬರು ಯುವತಿಯರು ಪ್ರಾಣ ಉಳಿಸಿ ಬಂದ ದೃಶ್ಯ ವೈರಲ್ ಆಗಿದೆ. ಇನ್ನು ಇದೆ ವೇಳೆ ಅಪಘಾತದ ಭೀಕರತೆ ನಡುವೆ ಬಚಾವಾದ ಮತ್ತೊಂದು ಬಸ್ ಅಪಘಾತವಾದ ಖಾಸಗಿ ಬಸ್ ಹಿಂದೆಯೇ ಶಾಲಾ ವಾಹನ ತೆರಳುತ್ತಿತ್ತು. ಶಾಲಾ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಮತ್ತೊಂದು ಭಾರಿ ದುರಂತ ತಪ್ಪಿದೆ. ಶಾಲಾ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 46 ಮಕ್ಕಳು ಹಾಗೂ ಶಿಕ್ಷಕರು ಬಚಾವ್ ಆಗಿದ್ದಾರೆ. ಬೆಂಕಿ ಹತ್ತಿದ್ದ ಬಸ್ ನಲ್ಲಿ ಇದ್ದ ಏಳು ಜನರನ್ನು ನಾನೇ ರಕ್ಷಣೆ ಮಾಡಿದೆ ಆ ಬಳಿಕ ಖಾಸಗಿ ಬಸ್ ನಲ್ಲಿ ಸ್ಪೋಟವಾಯಿತು. ಅದಾದ ಬಳಿಕ ನನಗೆ ಬಸ್ ಒಳಗೆ ಹೋಗಲು ಆಗಲಿಲ್ಲ ಎಂದು ಬಸ್ ಚಾಲಕ ಸಚಿನ್…

Read More

ರಾಜಸ್ತಾನ್ : ರಾಜಸ್ಥಾನದ ಉದಯಪುರದಲ್ಲಿ ಚಲಿಸುವ ಕಾರಿನಲ್ಲಿ ಐಟಿ ಕಂಪನಿ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಬಂದ ನಂತರ ಸಂತ್ರಸ್ತೆಯನ್ನು ಸುರಕ್ಷಿತವಾಗಿ ಕಾರಿನಲ್ಲಿ ಕರೆದುಕೊಂಡು ಹೋಗುವುದಾಗಿ ಹೇಳಿ ಕಾರಿನೊಳಗೆ ಸೇರಿಸಲಾಗಿತ್ತು. ದಾರಿಯಲ್ಲಿ ಮಾದಕ ದ್ರವ್ಯ ನೀಡಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಕಂಪನಿಯ ಸಿಇಒ ಮತ್ತು ಮಹಿಳಾ ಕಾರ್ಯನಿರ್ವಾಹಕ ಮುಖ್ಯಸ್ಥೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಕಳೆದ ಶನಿವಾರ ನಡೆದಿದೆ. ಸಂತ್ರಸ್ತೆ ಉದಯಪುರದ ಖಾಸಗಿ ಐಟಿ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ . ಶನಿವಾರ ರಾತ್ರಿ ಕಂಪನಿಗೆ ಸಂಬಂಧಿಸಿದ ಹುಟ್ಟುಹಬ್ಬದ ಪಾರ್ಟಿ ನಡೆಯುತ್ತಿತ್ತು. ಪಾರ್ಟಿ ಮುಗಿದು ಎಲ್ಲಾ ಅತಿಥಿಗಳು ನಿಧಾನವಾಗಿ ಹೊರಟುಹೋದ ನಂತರ, ಸಂತ್ರಸ್ತೆ ಒಬ್ಬಂಟಿಯಾಗಿ ಉಳಿದಿದ್ದಳು. ಆ ಸಮಯದಲ್ಲಿ, ಕಂಪನಿಯ ಮಹಿಳಾ ಕಾರ್ಯನಿರ್ವಾಹಕ ಮುಖ್ಯಸ್ಥರು ಅವಳನ್ನು ತನ್ನ ಕಾರಿನಲ್ಲಿ ಸುರಕ್ಷಿತವಾಗಿ ಮನೆಗೆ ಬಿಡಲು ಮುಂದಾದರು. ಮಹಿಳಾ ಕಾರ್ಯನಿರ್ವಾಹಕ ಮುಖ್ಯಸ್ಥೆ ಕಾರಿನಲ್ಲಿ ತನ್ನ ಪತಿ ಮತ್ತು…

Read More

ಬೆಂಗಳೂರು : ನಾಳೆ ರಾಜ್ಯಾದ್ಯಂತ ವಾಜಪೇಯಿ ಅವರ ಹುಟ್ಟುಹಬ್ಬ ಆಚರಣೆ ಮಾಡುತ್ತೇವೆ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಜನರು ಬೇಸತ್ತಿದ್ದಾರೆ ಎನ್ನುವುದಕ್ಕೆ ಈ ಫಲಿತಾಂಶ ಸ್ಪಷ್ಟ ಸಂದೇಶವಾಗಿದೆ. ಬ್ಯಾಲೆಟ್ ಪೇಪರ್ ಬೇಕೆಂದು ಕಾಂಗ್ರೆಸ್ ನವರು ಆರೋಪ ಮಾಡುತ್ತಿದ್ದರು. ರಾಹುಲ್ ಗಾಂಧಿ ಸಿದ್ದರಾಮಯ್ಯ ಆದಿಯಾಗಿ ನಾಟಕ ಮಾಡಿದರು. ಬ್ಯಾಲೆಟ್ ಪೇಪರ್ ನಲ್ಲಿ ನಡೆದ ಚುನಾವಣೆಯಲ್ಲೂ ಬಿಜೆಪಿ ಗೆದ್ದಿದೆ. ಕಾಂಗ್ರೆಸ್ ಪಕ್ಷಕ್ಕೆ ಜನರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು. ಇಂದು ಮಾಜಿ ಪ್ರಧಾನ ಮಂತ್ರಿ ವಾಜ್ಪೇಯ್ ಅವರ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಟಲ್ ದೀಪೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ಯಾವ ರೀತಿ ದೇಶವನ್ನು ಮುನ್ನಡೆಸಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ದೇಶದ ಮಹಾನ್ ನಾಯಕನನ್ನು ಸ್ಮರಣೆ ಮಾಡುವ ದಿನ ಅಟಲ್ ದೀಪೋತ್ಸವ ಕಾರ್ಯಕ್ರಮದಲ್ಲಿ ಬಿ…

Read More

ಬೆಂಗಳೂರು : ಮಂಗನ ಕಾಯಿಲೆ ತಡೆ ಮತ್ತು ಮುನ್ನೆಚ್ಚರಿಕೆ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆ ಆಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಗ ಶಿವಮೊಗ್ಗದಲ್ಲಿ ಒಂದು ಲ್ಯಾಬ್ ಕೆಲಸ ಮಾಡುತ್ತಿದ್ದು, ಒತ್ತಡ ಹೆಚ್ಚಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನೂತನ ಲ್ಯಾಬ್ ಪ್ರಾರಂಭಕ್ಕೆ ಎಲ್ಲ ಉಪಕರಣ ಖರೀದಿಸಲಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಮಾಡಲಿದೆ ಎಂದು ತಿಳಿಸಿದರು. ಇದರಿಂದ ಸಿರಸಿ, ಸಿದ್ದಾಪುರ ಭಾಗದ ಜನರಿಗೆ ಹೆಚ್ಚು ಉಪಯೋಗ ಆಗಲಿದೆ. ಬೇಗ ರೋಗವನ್ನು ಗುರುತಿಸಲು ಮತ್ತು ಸಾವಿನ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಇದು ಸಹಕಾರಿ ಆಗಲಿದೆ. ಮಂಗನ ಕಾಯಲೆ ಎಂದು ಕರೆಸಿಕೊಳ್ಳುವ ಈ ಕಾಯಿಲೆ ಪ್ರತಿ ವರ್ಷ ಅಕ್ಟೊಬರ್ ನಿಂದ ಜೂನ್ ವರೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳಲ್ಲಿ ಕಂಡುಬರುವ ಈ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸನ್ನಧ್ದವಾಗಿದೆ. ಸರಿಯಾದ ರೀತಿಯ ತಪಾಸಣೆಯನ್ನು ನಿಯಮಿತವಾಗಿ ಮಾಡಲಾಗುತ್ತಿದೆ. ಈವರೆಗೆ ಶಿವಮೊಗ್ಗ -1163, ಚಿಕ್ಕಮಗಳೂರು- 124, ಉತ್ತರ ಕನ್ನಡ- 368,…

Read More

ಬೆಂಗಳೂರು :ಕಳೆದ ಕೆಲವು ದಿನಗಳ ಹಿಂದೆ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ಸುದ್ದಿ ಹರಿದಾಡಿತ್ತು. ಅದರ ಬೆನ್ನಲ್ಲೇ ಆರೋಗ್ಯ ಇಲಾಖೆ ಮೊಟ್ಟೆಗಳನ್ನು ಲ್ಯಾಬ್ ಟೆಸ್ಟಿಗೆ ಪ್ರವಾಸಿ ಪರೀಕ್ಷೆಗೆ ಒಳಪಡಿಸಿದ್ದರು. ಇದೀಗ ಕೇಕ್ ನಲ್ಲಿ ಕೆಮಿಕಲ್ ಬಳಸುವುದರಿಂದ ಹಲವು ರೋಗಗಳು ಬರುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷ ವೇಳೆ ಕೇಕ್ ತಿನ್ನುವ ಮುನ್ನ ಎಚ್ಚರದಿಂದ ಇರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಡಿಸೆಂಬರ್ ಬಂದರೆ ಸಾಕು ಕ್ರಿಸ್ಮಸ್ ಹೊಸ ವರ್ಷಾಚರಣೆ ಎಲ್ಲೆಡೆ ಭರ್ಜರಿಯಾಗಿ ಮಾಡಲಾಗುತ್ತೆ. ಕ್ರಿಸ್ಮಸ್ ಮತ್ತು ನ್ಯೂ ಇಯರ್ ಹಿನ್ನೆಲೆಯಲ್ಲಿ ಬೇಕರಿ ಮಾಲೀಕರಿಗೆ ಈ ಒಂದು ಸೀಸನ್ ನಲ್ಲಿ ಭಾರಿ ವ್ಯಾಪಾರ ಆಗುತ್ತೆ. ಕೇಕ್​​ಗಳ ತಯಾರಿ ವೇಳೆ ಕೃತಕ ಬಣ್ಣಗಳ ಬಳಕೆ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಹೀಗಾಗಿ ಕಲರ್​​ ಕಲರ್​​ ಕೇಕ್​​ಗಳ ಖರೀದಿಗೂ ಮುನ್ನ ಎಚ್ಚರವಿರಲಿ. ಹೌದು ಈ ನಡುವೆ ವೈದ್ಯರು ನೀಡಿರೋ…

Read More

ಹುಬ್ಬಳ್ಳಿ : ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ‌. ವಿಠ್ಠಲ ಕರಾಡೆ(29) ಕೊಲೆಯಾದ ಯುವಕ. ಕೊಲೆ ಮಾಡಿದ ಆರೋಪಿಗಳನ್ನು ಘಟನೆ ನಡೆದ ಅರ್ಧ ಗಂಟೆಯಲ್ಲೇ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆಯಾದ ಯುವಕನನ್ನು ಮೂಲತಃ ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮದ ನಿವಾಸಿಯಾದ ವಿಠ್ಠಲನನ್ನು, ಹುಣಸಿಕಟ್ಟಿ ಗ್ರಾಮಕ್ಕೆ ಪತ್ನಿ ಮನೆಗೆ ಬಂದಿದ್ದಾಗ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಬಿಸಾಕಿದ್ದರು. ಕೊಲೆಗೀಡಾದ ವಿಠ್ಠಲ್ ಹುಬ್ಬಳ್ಳಿಯ ವಿದ್ಯಾನಗರ, ನವನಗರ, ಹುಬ್ಬಳ್ಳಿ ಗ್ರಾಮೀಣ, ತಡಸ ಸೇರಿದಂತೆ ವಿವಿಧ ಕಡೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಅಲ್ಲದೇ ಅವುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಆ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಹುಬ್ಬಳ್ಳಿ, ಕಲಘಟಗಿ, ತಡಸ ಸೇರಿದಂತೆ ಧಾರವಾಡ ಸುತ್ತಮುತ್ತಲು ಬೈಕ್ ಕಳ್ಳತನದಲ್ಲಿ ಕುಖ್ಯಾತಿ ಪಡೆದಿದ್ದ ವಿಠ್ಠಲನನ್ನು ಆತನ ಸಂಬಂಧಿಕರೇ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ಕೊಲೆಯಾದ ಅರ್ಧ ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸುವಲ್ಲಿ ಕಲಘಟಗಿ ಠಾಣಾ…

Read More

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಗದ್ದೆಗೆ ಕಾರು ಬಿದ್ದಿದೆ. ಪರಿಣಾಮ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ತಾಲೂಕಿನ ಮುಕ್ತಿ ಹಳ್ಳಿ ಸಮೀಪ ಈ ಒಂದು ಅಪಘಾತ ಸಂಭವಿಸಿದೆ.ಖಾಸಗಿ ಕಾಲೇಜು ವಿದ್ಯಾರ್ಥಿಯಾದ ಮೋಹಿನ್ (19) ಸ್ಥಳದಲ್ಲೆ ಸಾವನಪ್ಪಿದ್ದಾನೆ. ಅತೀ ವೇಗದ ಚಾಲನೆಯಿಂದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲೂ ಆರು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿವೆ ತಕ್ಷಣ ಗಾಯಗೊಂಡ ವಿದ್ಯಾರ್ಥಿಗಳನ್ನು ನೀಡಲಾಗುತ್ತಿದೆ ಸ್ನೇಹಿತರ ಜೊತೆ ಕಾರಿನಲ್ಲಿ ಮೋಹಿನ್ ಕೊಟ್ಟಿಗೆಹಾರಕ್ಕೆ ತೆರಳಿದ್ದ. ಈ ವೇಳೆ ನಿಯಂತ್ರಣ ಕಳೆದುಕೊಂಡು ಕಾರು ಗದ್ದೆಗೆ ಬಿದ್ದಿದೆ. ಪರಿಣಾಮ ಸ್ಥಳದಲ್ಲಿ ಮೋಹಿನ್ ಸಾವನಪ್ಪಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪೊಲೀಸ್ ಇಲಾಖೆಗೆ ಮುಜುಗರ ತಂದಿದ್ದ ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಹಣ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಸೇರಿದಂತೆ ಇಬ್ಬರನ್ನು ಅಮಾನತುಗೊಳಿಸಿ ಉತ್ತರಕನ್ನಡ ಎಸ್‌ಪಿ ದೀಪನ್ ಆದೇಶ ಹೊರಡಿಸಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಮತ್ತು ಹೆಡ್ ಕಾನ್ಸ್ಟೆಬಲ್ ಅಶೋಕ ನಾಯ್ಕ್ ಅವರನ್ನು ಅಮಾನತುಗೊಳಿಸಲಾಗಿದೆ. ಡ್ರಿಂಕ್ ಆ್ಯಂಡ್ ಡ್ರೈವ್, ಹಣ ವಸೂಲಿ, ಮತ್ತು ದೂರುದಾರರಿಗೆ ಬೆದರಿಕೆ ಹಾಕಿದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಉತ್ತರಕನ್ನಡ ಎಸ್‌ಪಿ ಈ ಕ್ರಮ ಕೈಗೊಂಡಿದ್ದಾರೆ. ಸಿಪಿಐ ಮಂಜುನಾಥ್ ವಿರುದ್ಧ ಕೇವಲ ಕುಡಿದು ವಾಹನ ಚಲಾಯಿಸಿದ ಆರೋಪವಷ್ಟೇ ಅಲ್ಲದೆ, ವ್ಯಾಪಕ ಭ್ರಷ್ಟಾಚಾರದ ದೂರುಗಳು ಕೇಳಿಬಂದಿದ್ದವು. ಸಾರ್ವಜನಿಕರಿಂದ ಹಣ ವಸೂಲಿ ಮಾಡುವುದು ಹಾಗೂ ಅಕ್ರಮ ದನ ಸಾಗಾಟಗಾರರಿಗೆ ಸಾಥ್ ನೀಡುತ್ತಿದ್ದ ಆರೋಪಗಳು ಇವರ ಮೇಲಿತ್ತು. ಹಲವು ಬಾರಿ ಎಚ್ಚರಿಕೆ ನೀಡಿದರೂ ವರ್ತನೆಯಲ್ಲಿ ಬದಲಾವಣೆ ಕಾಣದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕೆಲವು ದಿನಗಳ ಹಿಂದೆ ಭಟ್ಕಳ…

Read More