Author: kannadanewsnow05

ಬೆಳಗಾವಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರು ಕುಟುಂಬ ಸಮೇತ ಮನೆಯನ್ನು ತೊರೆಯುತ್ತಿದ್ದಾರೆ. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಬಾಣಂತಿಯನ್ನು ಹೊರಹಾಕಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಮನೆಗೆ ಬೀಗ ಜಡಿದಿರುವ ಘಟನೆ ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಫೈನಾನ್ಸ್ ಕಿರುಕುಳಕ್ಕೆ ನೊಂದು ಗಣಪತಿ ಲಾಹೋರ್ ಎನ್ನುವ ಕುಟುಂಬ ಇದೀಗ ಕಣ್ಣೀರು ಹಾಕುತ್ತಿದೆ. ಒಂದು ತಿಂಗಳ ಮಗು ಸಮೇತ ಸಿಬ್ಬಂದಿಯಗಳು ಬಾಣಂತಿಯ ಕುಟುಂಬವನ್ನು ಹೊರಹಾಕಿದ್ದಾರೆ. ಮನೆ ಕಟ್ಟಲು ಗಣಪತಿ ಲಾಹೋರ್ 5 ಲಕ್ಷ ಸಾಲ ಪಡೆದಿದ್ದರು. ಅಫ್ಟೋಸ್ ಫೈನಾನ್ಸ್ ನಲ್ಲಿ 5 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಈಗಾಗಲೇ 3,50,000 ಸಾಲವನ್ನು ಗಣಪತಿಯವರು ಮರುಪಾವತಿ ಮಾಡಿದ್ದರು.ಅನಾರೋಗ್ಯ ಮಗಳ ಹೆರಿಗೆ ಕಾರಣದಿಂದ ಮುಂದಿನ ಕಂತುಗಳನ್ನು ಗಣಪತಿಯವರು ಕಟ್ಟಿರಲಿಲ್ಲ. ಇದೀಗ 7 ಲಕ್ಷಕ್ಕೂ ಅಧಿಕ ಹಣಕಟ್ಟಿ ಅಂತ ಹೇಳಿ ಮನೆ ಸೀಜ್ ಮಾಡಿದ್ದಾರೆ. ನ್ಯಾಯಾಲಯದಿಂದ ಆದೇಶ ತಂದು…

Read More

ಬೆಂಗಳೂರು : ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಹೆಣ್ಣು ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಗುಲಾಬಿ ಬಣ್ಣದ ದೀಪಾಲಂಕಾರ ಮಾಡಲು ನಿರ್ಧರಿಸಿದೆ. ಇದೆ ವೇಳೆ ಇಂದು ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನಿಸುವ ಹೆಣ್ಣು ಮಕ್ಕಳಿಗೆ 1 ಸಾವಿರ ರೂ. ಕಿಟ್ ಗಿಫ್ಟ್ ನೀಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಹೌದು ಇಂದು ರಾಜ್ಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಹೆಣ್ಣುಮಕ್ಕಳ ಲಿಂಗಾನುಪಾತವನ್ನ ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆಯನ್ನ ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ಈ ಬಾರಿಯ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನ ರಾಜ್ಯದಾದ್ಯಂತ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಸಂಭ್ರಮದಿಂದ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಆಸ್ಪತ್ರೆಗಳಲ್ಲಿ ಪಿಂಕ್ ಲೈಟಿಂಗ್ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಮಕ್ಕಳಿಗೆ ಸ್ಪೆಷಲ್ ಗಿಫ್ಟ್ ನೀಡುವಂತೆ ಆರೋಗ್ಯ ಸಚಿವ…

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು ಆಗತಾನೆ ಹುಟ್ಟಿದ ನವಜಾತ ಶಿಶುವನ್ನು ಪಾಪಿಗಳು ಮುಳ್ಳಿನ ಪೊದೆಯಲ್ಲಿ ಎಸೆದು ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ. ಮುಧೋಳ ತಾಲೂಕಿನ ಹಲಗಲಿಯ ಬಳಿ ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವನ್ನು ಪಾಪಿಗಳು ಎಸೆದು ಹೋಗಿದ್ದಾರೆ. ವಿಷಯ ತಿಳಿದ ಸ್ಥಳೀಯರು ನವಜಾತಶವನ್ನು ರಕ್ಷಣೆ ಮಾಡಿ ಸ್ಥಳೀಯ ಹಲಗಲಿ ಆರೋಗ್ಯ ಕೇಂದ್ರಕ್ಕೆ ಮಗುವನ್ನು ಕಳಿಸಿದ್ದಾರೆ. ಸದ್ಯ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮುಧೋಳ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇದೀಗ ಮತ್ತೊಂದು ಸೂಸೈಡ್ ಪ್ರಕರಣ ವರದಿಯಾಗಿದ್ದು, ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು, ಸಾಲದಿಂದ ಬೇಸತ್ತು ಬೆಂಗಳೂರಿನ ಮಲ್ಲೇಶ್ವರ ಬಳಿ ಇರುವ ಮಂತ್ರಿ ಮಾಲ್‌ನ 2ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ನಿನ್ನೆ ರಾತ್ರಿ ಆತ್ಮಹತ್ಯೆ ‌ಮಾಡಿಕೊಂಡಿದ್ದಾರೆ‌. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ತುಮಕೂರು ಜಿಲ್ಲೆಯ ತಿಪಟೂರಿನ‌ ನಿವಾಸಿ ಟಿ.ಸಿ. ಮಂಜುನಾಥ್ (55) ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ 9ರ ಸುಮಾರಿಗೆ ಮಾಲ್‌ನಲ್ಲಿ ಹೆಚ್ಚಿನ ಗ್ರಾಹಕರು ಇದ್ದರು.‌ ಅದೇ ವೇಳೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಂಜುನಾಥ್ ಅವರು ಬ್ಯಾಂಕ್ ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆಕೊಂಡಿರುವ ಸಾಧ್ಯತೆಯಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಮೃತ ವ್ಯಕ್ತಿಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಕೇವಲ ಆಟೋ ಟಚ್ ಆಗಿದ್ದಕ್ಕೆ ಚಾಲಕನ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್ ಟಿ ನಗರ ಠಾಣಾ ವ್ಯಾಪ್ತಿಯ ರೆಹಮದ್ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಆಟೋ ಚಾಲಕ ಸಲ್ಮಾನ್ (27) ಕೊಲೆಯಾದವರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ರಹಮತ್‌ ನಗರದ ಸೈಯದ್ ಪರ್ವೇಜ್, ಆತನ ಸಹೋದರ ಸೈಯದ್ ತಬ್ರೇಜ್ ಮತ್ತು ಸಂಬಂಧಿಕರಾದ ಸಾದಿಕ್, ತೌಸಿಫ್ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಸೈಯದ್ ಪರ್ವೇಜ್‌ ತಂದೆಗೆ ರಹಮತ್‌ ನಗರದಲ್ಲಿ ಬುಧವಾರ ಬೆಳಿಗ್ಗೆ ಆಟೊ ಡಿಕ್ಕಿಯಾಗಿತ್ತು. ಈ ಕಾರಣಕ್ಕೆ ಪರ್ವೇಜ್‌ನ ತಂದೆ, ಆಟೊ ಚಾಲಕ ಸಲ್ಮಾನ್‌ಗೆ ಬೈದಿದ್ದರು. ಇದರಿಂದ ಕೋಪಗೊಂಡ ಸಲ್ಮಾನ್, ಅವರ ಮೇಲೆ ಹಲ್ಲೆ ನಡೆಸಿ ಮನೆಗೆ ತೆರಳಿದ್ದ. ಬಳಿಕ ಬಂಧಿತ ನಾಲ್ವರು ಆರೋಪಿಗಳು ಸಲ್ಮಾನ್ ಮನೆಗೆ ತೆರಳಿ ಅಲ್ಲಿ ಸಲ್ಮಾನ್ ಜೊತೆಗೆ ಜಗಳಕ್ಕೆ ಇಳಿದಿದ್ದಾರೆ.ಗಲಾಟೆಯ ವೇಳೆ ಆಟೋ ಚಾಲಕ ಸಲ್ಮಾನ್ ಮೇಲೆ ಹಲ್ಲೆ ನಡೆಸಿದರು.ಹಲ್ಲೆಯಿಂದ ಅಸ್ವಸ್ಥಗೊಂಡಿದ್ದ ಸಲ್ಮಾನ್ ತಕ್ಷಣ ಆಸ್ಪತ್ರೆಗೆ…

Read More

ತುಮಕೂರು : ಕಳೆದ 50 ವರ್ಷಗಳ ಹಿಂದೆ ಕಾರಣಾಂತರಗಳಿಂದ ನಿಲ್ಲಿಸಿದ್ದ ಮಧುಗಿರಿ ತೆಪ್ಪೋತ್ಸವ ಇಂದು ಮತ್ತೆ ಆರಂಭವಾಗಲಿದ್ದು, ಇಂದು ತುಮಕೂರು ಜಿಲ್ಲೆಯ ಮಧುಗಿರಿಯ ಚೋಳೇನಹಳ್ಳಿ ಯಲ್ಲಿ ಕೆರೆಯಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಅಲ್ಲದೇ ಸಂಜೆ 7:00ಗೆ ಗೋಧೋಳಿ ಲಗ್ನದಲ್ಲಿ ಗಂಗಾವತಿ ನಡೆಯಲಿದೆ. ಕಾಶಿಯಿಂದ ಆಗಮಿಸಿರುವ ಸುಮಾರು 40 ಪಂಡಿತರಿಂದ ಗಂಗಾವತಿ ನಡೆಯಲಿದ್ದು, ಈ ಹಿಂದೆ 1974 ರಲ್ಲಿ ಮಧುಗಿರಿ ತಕ್ಕೋತ್ಸವ ನಡೆದಿತ್ತು. 50 ವರ್ಷಗಳಿಂದ ಕಾರಣಾಂತರಗಳಿಂದ ಈ ಒಂದು ತಪೋತ್ಸವವನ್ನು ಕೈ ಬಿಡಲಾಗಿತ್ತು.ಇದೀಗ ಸಹಕಾರ ಸಚಿವ ಕೆ ಎನ್ ರಾಜಣ್ಣ ಅಧ್ಯಕ್ಷತೆ ಹಾಗೂ ಎಂಎಲ್ಸಿ ರಾಜೇಂದ್ರ ರಾಜಣ್ಣ ನೇತೃತ್ವದಲ್ಲಿ ತೆಪ್ಪೋತ್ಸವ ಆಯೋಜನೆ ಮಾಡಲಾಗಿದೆ. ಇಂದು ಸಂಜೆ 7:30 ರಿಂದ ರಾತ್ರಿ 10 ಗಂಟೆಯವರೆಗೆ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ತೆಪ್ಪೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್, ಕೇಂದ್ರ ಸಚಿವ ವಿ ಸೋಮಣ್ಣ, ಸಿದ್ದಗಂಗಾ ಮಠದ ಶ್ರೀಗಳು, ಸಿದ್ದರಬೆಟ್ಟದ ಶ್ರೀಗಳು ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ…

Read More

ಬೆಂಗಳೂರು : ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ತಿಕ್ಕಾಟ ನಡೆದಿದೆ. ಹೀಗಾಗಿ ಅರಮನೆ ಮತ್ತು ಸರ್ಕಾರದ ನಡುವಿನ ಕಾನೂನು ಸಮರ‌ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ 3 ಗಂಟೆಗೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಇಂದು ನಡೆಯುವ ತುರ್ತು ಸಂಪುಟ ಸಭೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ಕೈಬಿಡುವ ಸಾಧ್ಯತೆ ಇದೆ. ರಸ್ತೆ ಅಗಲೀಕರಣ ಮಾಡದೇ ಇರಲು ಸರ್ಕಾರ ತೀರ್ಮಾನಿಸಿದ್ದು, ಟಿಡಿಆರ್​ ನೀಡಿದರೆ ಮುಂದಿನ ಭೂಸ್ವಾಧೀನ‌ ಪ್ರಕ್ರಿಯೆಗಳಿಗೆ ಮಾನದಂಡ ಆಗುವ ಆತಂಕ ಎದುರಾಗಿದೆ. ಹೀಗಾಗಿ ಇಡೀ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಸರ್ಕಾರದ ನಿರ್ಧಾರವಾಗಿದ್ದು, ನಾಳೆಯ ತುರ್ತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲು ಸರ್ಕಾರ ತೀರ್ಮಾನ ಮಾಡಿದೆ. 1996ರಲ್ಲಿ ಅರಮನೆ ಮೈದಾನವನ್ನು ವಶಪಡಿಸಿಕೊಂಡ ಕಾಯ್ದೆ ಸಿಂಧುತ್ವವನ್ನು ಎತ್ತಿ ಹಿಡಿಯುವಂತೆ ಸುಪ್ರೀಂ ಕೋರ್ಟ್‌ಗೆ ಮತ್ತೆ ಮೇಲ್ಮನವಿ ಅರ್ಜಿ ಸಲ್ಲಿಸಲು ಇತ್ತೀಚ್ಚಿಗೆ ಸಿದ್ದರಾಮಯ್ಯ ನೇತೃತ್ವದಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ಮೊದಲ ಮಂಕೀಪಾಕ್ಸ ಸೋಂಕು ಪತ್ತೆಯಾಗಿದ್ದು, ದುಬೈ ನಿಂದ ಬೆಂಗಳೂರಿಗೆ ನೀಡಿದ 40 ವರ್ಷದ ವ್ಯಕ್ತಿಯಲ್ಲಿ ಈ ಒಂದು ಮಂಕಿಪಾಕ್ಸ್ ದೃಢವಾಗಿದೆ. ಆದರೆ ವೈದ್ಯರು, ವ್ಯಕ್ತಿಯ ಆರೋಗ್ಯ ಸ್ಥಿರವಾಗಿದ್ದು ಶೀಘ್ರದಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ. ಪುಣೆಯ ಎನ್‌ಐವಿ ಲ್ಯಾಬ್‌ನಲ್ಲಿ ಸೋಂಕು ದೃಢಪಟ್ಟಿದ್ದು, ಕಳೆದ 14 ವರ್ಷಗಳಿಂದ ದುಬೈನಲ್ಲಿ ವಾಸವಿದ್ದ ಸೋಂಕಿತ, ಇತ್ತೀಚೆಗೆ ಅಂದರೆ ಜನವರಿ 17ರಂದು ಮಂಗಳೂರಿಗೆ ಭೇಟಿ ನೀಡಿದ್ದರು.ವ್ಯಕ್ತಿಯಲ್ಲಿ ಜ್ವರ, ಗುಳ್ಳೆ ಕಾಣಿಸಿಕೊಂಡಿತ್ತು. ತಕ್ಷಣ ಐಸೋಲೆಟ್ ಮಾಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವ್ಯಕ್ತಿಯ ಸ್ಯಾಂಪಲ್​ನ್ನು ಬೆಂಗಳೂರು ಮೆಡಿಕಲ್ ಕಾಲೇಜು ಹಾಗೂ ಪುಣೆಯ ಎನ್‌ಐವಿ ಲ್ಯಾಬ್‌ಗೆ ರವಾನಿಸಲಾಗಿತ್ತು. ಇದೀಗ ಎನ್‌ಐವಿ ಲ್ಯಾಬ್‌ ರಿಪೋರ್ಟ್‌ನಲ್ಲಿ ಮಂಕಿಪಾಕ್ಸ್‌ ಸೋಂಕು ದೃಢ ಪಟ್ಟಿದೆ. ಮಂಕಿಪಾಕ್ಸ್​ನ ಲಕ್ಷಣಗಳಿವು 1) ಊದಿಕೊಂಡ ದುಗ್ಧರಸ ಗ್ರಂಥಿಗಳು 2) ಜ್ವರ 3) ಚಳಿಯ ಅನುಭವ 4) ಸ್ನಾಯು ನೋವು 5) ತಲೆನೋವು 6) ಸುಸ್ತು ಸೋಂಕಿತನ ಆರೋಗ್ಯ ಸ್ಥಿರವಾಗಿದ್ದು, ಸದ್ಯದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌…

Read More

ನವದೆಹಲಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಕರ್ನಾಟಕ ಹೈಕೋರ್ಟ್ ರೆಗ್ಯುಲರ್ ಬೇಲ್ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಪೊಲೀಸರು ಸುಪ್ರೀಂ ಕೋರ್ಟಿಗೆ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಇಂದು ನಟ ದರ್ಶನ್ ಅವರ ಜಾಮೀನು ಭವಿಷ್ಯ ಸುಪ್ರೀಂ ಕೋರ್ಟ್ ನಲ್ಲಿ ನಿರ್ಧಾರವಾಗಲಿದೆ. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರಾಜ್ಯ ಹೈಕೋರ್ಟಿನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ನಟ ದರ್ಶನ್ ಸೇರಿ7 ಮಂದಿ ಜಾಮೀನು ರದ್ದು ಕೋರಿ ರಾಜ್ಯ ಪೊಲೀಸರು ಸುಪ್ರೀಂ ಕೋರ್ಟಲ್ಲಿ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆಗೆ ಬರಲಿದೆ. ಕರ್ನಾಟಕ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಇಂದು ನಿಗದಿಯಾಗಿದೆ. ಹಾಗಾಗಿ ನಟ ದರ್ಶನ್ ಗೆ ಇಂದು ಮಹತ್ವದ ದಿನ ಎನ್ನಲಾಗುತ್ತದೆ. ನಟ ದರ್ಶನ್, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್, ಅನು ಕುಮಾರ್, ಜಗದೀಶ್, ಪ್ರದೋಷ್ ಜಾಮೀನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ನ್ಯಾಯ ಮೂರ್ತಿಗಳಾದ ಜೆ.ಬಿ.ಪರಿದಿವಾಲಾ ಹಾಗೂ…

Read More

ಬೆಂಗಳೂರು : ಇತ್ತೀಚಿಗೆ ಸೈಬರ್ ವಂಚಕರ ಮೋಸಕ್ಕೆ ಅದೆಷ್ಟೋ ಜನರು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ.ಇದೀಗ ಬೆಂಗಳೂರಲ್ಲಿ ಮತ್ತೊಂದು ಘಟನೆ ನಡೆದಿದ್ದು ಹೂಡಿಕೆ ನೆಪದಲ್ಲಿ ಲಾಭದಾಸೆ ತೋರಿಸಿ ಸೈಬರ್ ವಂಚಕರು ಹೋಟೆಲ್ ನೌಕರರೊಬ್ಬರಿಗೆ ಬರೋಬ್ಬರಿ 43.15 ಲಕ್ಷ ರು. ಹಣ ಪಡೆದು ವಂಚಿಸಿದ ಆರೋಪದಡಿ ವೈಟ್ ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ವಂಚನೆಗೆ ಒಳಗಾದಂತ ವ್ಯಕ್ತಿಯನ್ನು ಕೆ.ಆರ್.ಪುರ ಸೀಗೆಹಳ್ಳಿ ನಿವಾಸಿ ಜಯಕುಮಾ‌ರ್ (40) ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ ಮೇರೆಗೆ ರಾಶಿ ಅರೋರಾ ಸೇರಿ ಇತರರ ವಿರುದ್ದ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಎಫ್ ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಹಿನ್ನೆಲೆ? ದೂರುದಾರ ಜಯಕುಮಾ‌ರ್ ಅವರನ್ನು ಕಳೆದ ಡಿಸೆಂಬರ್ ನಲ್ಲಿ ಅಪರಿಚಿತರು ಆಕ್ಸಿಸ್ ಸ್ಟಾಕ್ ಎಕ್ಸ್‌ ಚೇಂಜ್ ಗ್ರೂಪ್ ಮತ್ತು ಏಂಜೆಲ್ ಒನ್ ಎಂಬ ವಾಟ್ಸಾಪ್ ಗ್ರೂಪ್‌ ಗೆ ಸೇರಿಸಿದ್ದಾರೆ. ಬಳಿಕ ರಾಶಿ ಅರೋರಾ ಮತ್ತು ಪ್ರಿಯಾಂಕಾ ಸಿಂಗ್…

Read More