Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಮೈಸೂರಿನ ಕೆ ಆರ್ ನಗರದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟಿಸಲಿದೆ. ಇತ್ತ ಪ್ರಜ್ವಲ್ ತಂದೆ ಎಚ್ಡಿ ರೇವಣ್ಣ ಹಾಗೂ ತಾಯಿ ಭವಾನಿ ಅವರು ಇದುವರೆಗೂ ಮನೆಯಿಂದ ಆಚೆ ಬಂದಿಲ್ಲ ಯಾರು ಸಹ ಇದುವರೆಗೂ ಮನೆಯಿಂದ ಹೊರಗಡೆ ಬಂದಿಲ್ಲ ಇದೀಗ ಪ್ರಜ್ವಲ್ ಗೆ ಈಗಾಗಲೇ ದೋಷಿ ಎಂದು ನ್ಯಾಯಾಲಯ ತಿಳಿಸಿತ್ತು. ಶಿಕ್ಷೆ ಆಗುವುದಂತೂ ಗ್ಯಾರಂಟಿ ಈ ಹಿನ್ನೆಲೆಯಲ್ಲಿ ಕನಿಷ್ಠ ಶಿಕ್ಷೆ ಆಗಲಿ ಎಂದು ಹಾಸನ ಜಿಲ್ಲೆಯ ಹೊಳೆನರಸೀಪುರದ ಹರದನಹಳ್ಳಿಯ ಮನೆಯಲ್ಲಿ ತಂದೆ ಎಚ್ ಡಿ ರೇವಣ್ಣ ಅವರು ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರು : ನಟ ದರ್ಶನ್ ಅಭಿಮಾನಿಗಳು ಎಂದು ಅಶ್ಲೀಲ ಮೆಸೇಜ್ ಮಾಡಿದ ಕಿಡಿಗೇಡಿಗಳು ಅರೆಸ್ಟ್ ಆಗಿದ್ದು, ಪೊಲೀಸರಿಗೆ ಧನ್ಯವಾದ ತಿಳಿಸಿ ನಟಿ ರಮ್ಯಾ ಪೋಸ್ಟ್ ಹಂಚಿಕೊಂಡಿದ್ದಾರೆ. ಹೌದು ದೂರಿನ ಮೇಲೆ ತ್ವರಿತ ಕ್ರಮ ಕೈಗೊಂಡಿದ್ದಕ್ಕಾಗಿ ನಮ್ಮ ಗೃಹ ಸಚಿವ ಡಾ. ಪರಮೇಶ್ವರ್ ಅವ್ರು @DrParameshwara ಮತ್ತು ಸೀಮಂತ್ ಕುಮಾರ್ ಸಿಂಗ್ ಅವ್ರು @seemantsingh96 ಬೆಂಗಳೂರು ಪೊಲೀಸ್ ಆಯುಕ್ತರು @CPBlr ಮತ್ತು ಸಿಸಿಬಿಯ ಸಂಪೂರ್ಣ ತಂಡಕ್ಕೆ ಧನ್ಯವಾದಗಳು.ಬೆಂಗಳೂರು ನಗರ ಪೊಲೀಸರು ಸ್ತ್ರೀದ್ವೇಷದ ಆಕ್ರಮಣದ ವಿರುದ್ಧ ದೃಢವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಕಾನೂನು ಕ್ರಮ ಕೈಗೊಳ್ಳಲಾಗಿದೆ ಮತ್ತು ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸಂದೇಶ ಸ್ಪಷ್ಟವಾಗಿದೆ:. ನಮ್ಮ ನಗರದಲ್ಲಿ ಮಹಿಳೆಯರ ಘನತೆಯನ್ನು ರಕ್ಷಿಸುವ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸುವ ವಿಷಯಕ್ಕೆ ಬಂದಾಗ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳುವುದು ಕಷ್ಟ ಎಂದು ನಟಿ ರಮ್ಯಾ ಪೋಸ್ಟ್ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರಮ್ಯಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಈ ವಿಚಾರವಾಗಿ ದರ್ಶನ್ ಅಭಿಮಾನಿಗಳು ನಟಿ ರಮ್ಯಾ ಗೆ…
ಬೆಂಗಳೂರು : ಹಿರಿಯ ನಾಗರಿಕರು ಸರ್ಕಾರಿ ಕಛೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸಿ, ಆಸನದ ವ್ಯವಸ್ಥೆಯನ್ನು ಮಾಡುವಂತೆ ಹಾಗೂ ಅವರುಗಳ ಮನವಿ/ ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುವಂತೆ ಸ್ಪಷ್ಟ ನಿರ್ದೇಶನದೊಂದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ನಾಗರಿಕರು ಸರ್ಕಾರಿ ಕಛೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸಿ, ಆಸನದ ವ್ಯವಸ್ಥೆಯನ್ನು ಮಾಡುವಂತೆ ಹಾಗೂ ಅವರುಗಳ ಮನವಿ/ ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುವಂತೆ ಸ್ಪಷ್ಟ ನಿರ್ದೇಶನದೊಂದಿಗೆ ಈಗಾಗಲೇ ಸುತ್ತೋಲೆ ಸಂಖ್ಯೆ ಸಿಆಸುಇ 38 ಕತವ 2021, ದಿನಾಂಕ: 21-06-2021 ನ್ನು ಹೊರಡಿಸಲಾಗಿರುತ್ತದೆ. ಆದರೆ, ಸದರಿ ಸುತ್ತೋಲೆಯನ್ನು ಪಾಲಿಸದೇ ಇರುವ ಬಗ್ಗೆ ಹಾಗೂ ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸುತ್ತಿರುವ ಕುರಿತು ದೂರುಗಳು ಸ್ವೀಕೃತವಾಗಿದ್ದರಿಂದ, ದಿನಾಂಕ: 21-06-2021ರ ಸುತ್ತೋಲೆಯನ್ನು ಅಕ್ಷರಶ:…
ಬೆಂಗಳೂರು : ಧರ್ಮಸ್ಥಳದಲ್ಲಿ ಅಪರಿಚಿತ ಶವಗಳನ್ನು ಒತ್ತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದೂರುದಾರ ತೋರಿಸಿರುವ ಜಾಗದಲ್ಲಿ ಅಂದರೆ ಒಂಬತ್ತನೇ ಪಾಯಿಂಟ್ ನಲ್ಲಿ ಎಸ್ಐಟಿ ಅಧಿಕಾರಿಗಳು ಉತ್ಖನನ ಆರಂಭಿಸಿದ್ದಾರೆ. ಆದರೆ ಎರಡು ಅಡಿ ಹಾಳಾಗಿದರೂ ಕೂಡ ಇಲ್ಲಿ ಅಸ್ತಿಪಂಜರದ ಯಾವುದೇ ಕುರುಹು ಪತ್ತೆಯಾಗಿಲ್ಲ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಸ್ ಶಾಲಿನಿ ರಜನಿಶ್ ಅವರನ್ನು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಭೇಟಿಯಾಗಿದ್ದಾರೆ. ವಿಧಾನಸೌಧದ ಸಿಎಸ್ ಕಚೇರಿಯಲ್ಲಿ ಪ್ರಕರಣದ ಕುರಿತು ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ತನಿಖಾ ಬೆಳವಣಿಗೆಯ ಬಗ್ಗೆ ಸಿಎಸ್ ಗೆ ಪ್ರಣವ್ ಮೋಹಂತಿ ವಿವರಣೆ ನೀಡಿರುವ ಸಾಧ್ಯತೆ ಇದೆ. ನನಗೆ ಸಹ ಬೆಂಗಳೂರಿನ ಸದಾಶಿವನಾಗರದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಮೋಹಂತಿ ಭೇಟಿಯಾಗಿದ್ದರು.
ಬೆಂಗಳೂರು : ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 5ರಂದು ಸಾರಿಗೆ ನೌಕರರಿಂದ ಮುಷ್ಕರಕ್ಕೆ ಕರೆ ಹಿನ್ನೆಲೆಯಲ್ಲಿ, ಇದೀಗ ಕೊನೆಗೂ ಸಾರಿಗೆ ನೌಕರರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲು ನಿರ್ಧರಿಸಿದ್ದಾರೆ. ಹೌದು ಆಗಸ್ಟ್ 4 ರಂದು ಬೆಳಿಗ್ಗೆ 11:30 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಾರಿಗೆ ನೌಕರರ ಮುಖಂಡರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಈ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಎರಡು ಸಭೆಗಳು ಸಹ ಅಪೂರ್ಣಗೊಂಡಿತ್ತು. ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಆಗಸ್ಟ್ 5ರಂದು ಮುಷ್ಕರಕ್ಕೆ ನಿರ್ಧರಿಸಿದ್ದಾರೆ. ಹಾಗಾಗಿ ಸಾರಿಗೆ ನೌಕರರ ಜೊತೆಗೆ ಸಿಎಂ ಸಿದ್ದರಾಮಯ್ಯ ಆಗಸ್ಟ್ ನಾಲ್ಕರಂದು ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಸಾರಿಗೆ ನೌಕರರ ಮುಖಂಡರ ಜೊತೆಗೆ ಸಭೆ ನಡೆಸಲಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ಮುಷ್ಕರ ಹಿಂಪಡೆಯಲ್ಲ ಎಂದು ಸಾರಿಗೆ ನೌಕರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಪರಿಚಿತ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಹ ಅಸ್ತಿಪಂಜರಗಳಿಗಾಗಿ ಉತ್ಖನನ ಕಾರ್ಯ ನಡೆಯಿತು. ದೂರುದಾರ ತೋರಿಸಿದ 9ನೇ ಪಾಯಿಂಟ್ ನಲ್ಲಿ ಎಸ್ಐಟಿ ಅಧಿಕಾರಿಗಳು ಉತ್ಖನನ ನಡೆಸಿದರು. ಆದರೆ ಯಾವುದೇ ವಸ್ತುಗಳು ದೊರೆತಿಲ್ಲ ಎಂದು ತಿಳಿದು ಬಂದಿದೆ. ಹೌದು 9ನೇ ಪಾಯಿಂಟ್ ನಲ್ಲಿ ಉತ್ಖನನ ಕಾರ್ಯ ಈಗ ಮುಂದುವರೆದಿದ್ದು ಈ ಒಂದು ಪಾಯಿಂಟ್ ನಲ್ಲಿ ಎರಡು ಅಡಿ ಅಗೆದರು ಕೂಡ ಯಾವುದೇ ಕುರುಹುಗಳಾಗಲಿ, ಮನುಷ್ಯನ ಅಸ್ತಿ ಪಂಜರದ ಭಾಗಗಳಾಗಲಿ ಸಿಕ್ಕಿಲ್ಲ. ಈಗಾಗಲೇ ಅಧಿಕಾರಿಗಳು ದೂರುದಾರನ ಮಾಹಿತಿಯನ್ನು ಆಧರಿಸಿ ಉತ್ಖನ ಕಾರ್ಯ ಆರಂಭಿಸಿದೆ.
ಮಂಗಳೂರು : ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು NIA ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಹೌದು ಸುಹಾಸ್ ಶೆಟ್ಟಿ, ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಂಗಳೂರಿನ 14 ಕಡೆ ಎನ್ಐಎ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಮಂಗಳೂರಿನ 14 ಕಡೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಹಲವರ ಮನೆ ಮತ್ತು ಕಚೇರಿಯ ಮೇಲೆ ಎನ್ಐಎ ತಂಡ ದಾಳಿ ಮಾಡಿದೆ ಈ ವೇಳೆ ಕೆಲವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು : ಮೈಸೂರಿನ ಕೆ ಆರ್ ನಗರದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು ಬಳಿಕ ಜಡ್ಜ್ ಸಂತೋಷ ಗಜಾನನ ಭಟ್ ಅವರು ಮಧ್ಯಾಹ್ನ 2:45 ಕ್ಕೆ ಆದೇಶ ಕಾಯ್ದೆಸಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ ಆಗೋಕು ಮುನ್ನವೇ ಮತ್ತೊಂದು ಬಿಗ್ ಶಾಪ್ ಎದುರಾಗಿದ್ದು, ಎರಡು ಅತ್ಯಾಚಾರ ಕೇಸ್ ನಿಂದ ಮತ್ತೊಬ್ಬ ವಕೀಲರು ಹಿಂದೆ ಸರಿದ್ದಾರೆ ಎಂದು ತಿಳಿದು ಬಂದಿದೆ ಈಗಾಗಲೇ ಒಂದು ಕೇಸಿನ ಕುರಿತು ಮಧ್ಯಾಹ್ನ 2:45 ಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಪಕ್ಷೇ ಪ್ರಕಟಿಸಲಿದ್ದು ಇನ್ನು ಉಳಿದ ಎರಡು ಕೆ ಎಸ್ ವಹಿಸಿದ್ದ ವಕೀಲ ಅರುಣ್ ಎರಡು ಪ್ರಕರಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಆಘಾತವಾಗಿದೆ.
ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಯ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಸಂತೋಷ್ ಗಜಾನನ ಭಟ್ ಅವರು, ಪ್ರಕರಣದ ಆದೇಶವನ್ನು ಕಾಯ್ದಿರಿಸಿ 2:45 ಕ್ಕೆ ಆದೇಶ ನೀಡುವುದಾಗಿ ತಿಳಿಸಿದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ಮೊದಲಿಗೆ ಪ್ರಾಸಿಕ್ಯೂಷನ್ ಪರ ವಾದಿಸಲು ಕೋರ್ಟ್ ಸೂಚನೆ ನೀಡಿತು ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ ಬಿ.ಎನ್ ಜಗದೀಶ್ ವಾದ ಆರಂಭ ಮಾಡಿದರು. ಗರಿಷ್ಠ ಶಿಕ್ಷಕನಿಷ್ಠ ಶಿಕ್ಷೆ ಎಷ್ಟು ಎಂದು ಸ್ಪಷ್ಟವಾಗಿದೆ ಕೇವಲ ಅತ್ಯಾಚಾರ ಆಗಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿತ್ತು. ಆದರೆ ಇಲ್ಲಿ ಪದೇ ಪದೇ ಅತ್ಯಾಚಾರವಾಗಿದೆ. ಕನಿಷ್ಠ 10 ವರ್ಷ ಗರಿಷ್ಠ ಜೀವನ ಪರ್ಯಂತ ಸೆರೆವಾಸದ ಅವಕಾಶ ಇದೆ, ಮಹಿಳೆ ಶಿಕ್ಷಿತಳಲ್ಲ, ಬಡ ಕೂಲಿ…
ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಯ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಸಂತೋಷ್ ಗಜಾನನ ಭಟ್ ಅವರು, ಪ್ರಕರಣದ ಆದೇಶವನ್ನು ಕಾಯ್ದಿರಿಸಿ 2:45 ಕ್ಕೆ ಆದೇಶ ನೀಡುವುದಾಗಿ ತಿಳಿಸಿದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ಮೊದಲಿಗೆ ಪ್ರಾಸಿಕ್ಯೂಷನ್ ಪರ ವಾದಿಸಲು ಕೋರ್ಟ್ ಸೂಚನೆ ನೀಡಿತು ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ ಬಿ.ಎನ್ ಜಗದೀಶ್ ವಾದ ಆರಂಭ ಮಾಡಿದರು. ಗರಿಷ್ಠ ಶಿಕ್ಷಕನಿಷ್ಠ ಶಿಕ್ಷೆ ಎಷ್ಟು ಎಂದು ಸ್ಪಷ್ಟವಾಗಿದೆ ಕೇವಲ ಅತ್ಯಾಚಾರ ಆಗಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿತ್ತು. ಆದರೆ ಇಲ್ಲಿ ಪದೇ ಪದೇ ಅತ್ಯಾಚಾರವಾಗಿದೆ. ಕನಿಷ್ಠ 10 ವರ್ಷ ಗರಿಷ್ಠ ಜೀವನ ಪರ್ಯಂತ ಸೆರೆವಾಸದ ಅವಕಾಶ ಇದೆ, ಮಹಿಳೆ ಶಿಕ್ಷಿತಳಲ್ಲ, ಬಡ ಕೂಲಿ…