Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕೆ ಎಸ್ ಡಿ ಎಲ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರು ಆಯ್ಕೆ ಆಗಿದ್ದಾರೆ. ಪರಭಾಷೆ ನಟಿ ತಮನ್ನಾ ಆಯ್ಕೆಗೆ ಇದೀಗ ಕರ್ನಾಟಕ ರಕ್ಷಣಾ ವೇದಿಕೆ ಅಸಮಾಧಾನ ಹೊರಹಾಕಿದೆ. ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಈ ಕುರಿತು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ತಮನ್ನಾ ಗೆ 6.20 ಕೋಟಿಯಷ್ಟು ವ್ಯಯಿಸಿರುವುದು ಆಕ್ಷೇಪಾರ್ಹ. ಈ ಹಣವನ್ನು ಕನ್ನಡಿಗರ ಒಳಿತಿಗಾಗಿ ಬಳಕೆ ಮಾಡಬಹುದಿತ್ತು. ಕೂಡಲೇ ತಮನ್ನಾ ಆಯ್ಕೆಯನ್ನು ಸರ್ಕಾರ ಹಿಂಪಡೆಯಬೇಕು. ಕನ್ನಡ ಜನಪ್ರಿಯ ನಟ ನಟಿಯರನ್ನೆ ರಾಯಭಾರಿಯನ್ನಾಗಿ ಮಾಡಿ. ಕನ್ನಡಿಗರ ಭಾವನೆಗೆ ಧಕ್ಕೆ ಎಂದು ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಭಾರಿಯಾಗಿ ತಮನ್ನಾ ಆಯ್ಕೆಗೆ ಸಚಿವ ಎಂ.ಬಿ ಪಾಟೀಲ್ ಸಮರ್ಥನೆ ಮಾಡಿಕೊಂಡಿದ್ದು, ಕನ್ನಡ ಚಲನಚಿತ್ರೋದ್ಯಮದ ಬಗ್ಗೆ KSDL ಗೆ ಗೌರವವಿದೆ ಕೆಲವು ಕನ್ನಡ ಚಲನಚಿತ್ರಗಳು ಸ್ಪರ್ಧೆಯನ್ನು ನೀಡುತ್ತಿವೆ. ಬಾಲಿವುಡ್ ಚಲನಚಿತ್ರಗಳಿಗೂ ಸ್ಪರ್ಧೆಯನ್ನು ನೀಡುತ್ತಿವೆ. ಮೈಸೂರು ಸ್ಯಾಂಡಲ್ ಕರ್ನಾಟಕದಲ್ಲಿ ಉತ್ತಮ ಬ್ರಾಂಡ್. ಕರ್ನಾಟಕ ಮಾರುಕಟ್ಟೆಯಿಂದ ಹೊರಗೆ ಪರಿಚಯಿಸಬೇಕು ಹೀಗಾಗಿ ತಮನ್ನಾ ಅವರನ್ನು ಆಯ್ಕೆ ಮಾಡಲಾಗಿದೆ…
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ರಸ್ತೆಯ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಯುವಕ ಸಾಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಾಂಡೆಭಾಗದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಾಂತೇಶ್ ಬಾನಾವಳಿಕರ್ (28) ಸಾವನ್ನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅವರ್ಸಾದ ದಾಂಡೆಭಾಗ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅಂಗಡಿಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಒಂದು ದುರಂತ ನಡೆದಿದೆ.ಘಟನೆ ಕುರಿತಂತೆ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆ ಆಗುತ್ತಿದ್ದು ಇದುವರೆಗೂ ಮಹಾ ಮಳೆಗೆ ಹಲವರು ಬಲಿಯಾಗಿದ್ದಾರೆ. ಇದೀಗ ಬೆಂಗಳೂರಿನ ಕೋರಮಂಗಲದ ಪ್ರಿಂಟೋ ಜಂಕ್ಷನ್ ಬಳಿಯ 60 ಅಡಿ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ದುರಂತದಲ್ಲಿ ದ್ವಿಚಕ್ರ ವಾಹನ ಸವಾರರ ಮೇಲೆ ಮರದ ಕೊಂಬೆ ಬಿದ್ದು, ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ಮೂಡಲ ಗಿರಿಯಪ್ಪ (48) ಎಂದು ಗುರುತಿಸಲಾಗಿದೆ. ಗಾಯಗೊಂಡವರು ರಮೇಶ್ ಎಂದು ತಿಳಿದುಬಂದಿದೆ. ಇವರಿಬ್ಬರೂ ಆಡುಗೋಡಿಯ ನಿವಾಸಿಗಳಾಗಿದ್ದು, ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.ಮಧ್ಯಾಹ್ನ 2.45ರ ಸುಮಾರಿಗೆ ಗಿರಿಯಪ್ಪ ಮತ್ತು ರಮೇಶ್ ಕೋರಮಂಗಲ 5ನೇ ಬ್ಲಾಕ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮರದ ಕೊಂಬೆ ಗಿರಿಯಪ್ಪ ಅವರ ತಲೆಯ ಮೇಲೆ ಬಿದ್ದ ಪರಿಣಾಮ, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಕ್ಷಣವೇ ಸ್ಥಳೀಯರು ಗಾಯಾಳು ರಮೇಶ್ ಅವರನ್ನು ರಕ್ಷಿಸಿ, ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.ರಮೇಶ್ ನೀಡಿರುವ ದೂರಿನ ಆಧಾರದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು,…
ಕೊಪ್ಪಳ : ಕೊಪ್ಪಳದಲ್ಲಿ ಇಂದು ಘೋರವಾದ ದುರಂತವೊಂದು ಸಂಭವಿಸಿದ್ದು, ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಇಂದು ಲಾರಿಯಿಂದ ಪೈಪ್ ಇಳಿಸುವಾಗ ಪೈಪ್ ಗಳು ಕಾರ್ಮಿಕರ ಮೇಲೆ ಬಿದ್ದಿವೆ. ಈ ವೇಳೆ ಪೈಪ್ ಗಳ ಅಡಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕುಷ್ಟಗಿಯ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು : ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯಂದು ಸಂಪುಟದಲ್ಲಿ ತೀರ್ಮಾನ ಆಗಿದೆ. ರಾಮನಗರವೆ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತದೆ. ಆದರೆ ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದರು. ಇಂದು ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತದೆ. ರಾಮನಗರದ ಜಿಲ್ಲಾ ಕೇಂದ್ರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಎಂದು ವಿಧಾನ ಸೌಧದಲ್ಲಿ ಸಂಪುಟ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಕೋಲಾರ : ಪತ್ನಿಯ ಜೊತೆ ಅಕ್ರಮ ಸಂಬಂಧ ಹಿನ್ನೆಲೆ, ಪತಿಯೊಬ್ಬ ತನ್ನ ಸಹಚರರ ಜೊತೆಗೂಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದ ಪ್ರಶಾಂತನಗರದಲ್ಲಿ ಈ ಒಂದು ಕೊಲೆ ಘಟನೆ ನಡೆದಿದೆ. ಇರ್ಫಾನ್ ಹಾಗೂ ಆತನ ಸಹಚರರಿಂದ ಅಮೀನ್ (30) ಎನ್ನುವ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ಅಮೀನ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದವನು ಎಂದು ತಿಳಿದುಬಂದಿದೆ. ಇರ್ಫಾನ್ ಪತ್ನಿ ಹುಸ್ನಾ ಜೊತೆಗೆ ಅಮಿನ್ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗುತ್ತಿದೆ. ಈ ವಿಚಾರವಾಗಿ ಹುಸ್ನಾ ಅಕ್ಕ ರಾಜಿ ಪಂಚಾಯಿತಿಯ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಮಚ್ಚಿನಿಂದ ಕೊಚ್ಚಿ ಇರ್ಫಾನ್ ಮತ್ತು ಸಹಚರರು ಅಮೀನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಘಟನೆಯ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕೋಮು ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಗೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮೇಲಿನ ಆದೇಶ ನೀಡಿದೆ. ವಿಚಾರಣೆ ವೇಳೆ ಹರೀಶ್ ಪೂಂಜಾ ಪರ ವಕೀಲರು ವಾದ ಮಂಡಿಸಿ, ಇಡೀ ದೂರನ್ನು ಓದಿದರೆ ದಾಖಲಿಸಿರುವ ಸೆಕ್ಷನ್ಗಳು ಅನ್ವಯಿಸುವುದಿಲ್ಲ. ಧರ್ಮಗಳ ನಡುವೆ ದ್ವೇಷ ಹರಡುವಂಥ ಕೆಲಸವನ್ನು ಪೂಂಜಾ ಅವರು ಮಾಡಿಲ್ಲ. ಸರ್ಕಾರದ ಪರ ವಕೀಲರು ಆರೋಪ ಪಟ್ಟಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಹಾಗಾಗಿ ಆರೋಪ ಪಟ್ಟಿ ವಜಾಗೊಳಿಸಲು ಮನವಿ ಮಾಡಿದರು.
ಬೆಂಗಳೂರು : ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣಕ್ಕೆ ಸಮಾಬಂಧಿಸಿದಂತೆ ಇದೀಗ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದಾರೆ. ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ.ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಈ ಹೊತ್ತಲ್ಲೇ ನಟನ ಮೇಲೆ ಎಫ್ಐಆರ್ ದಾಖಲಾಗಿದೆ. ಅತ್ಯಾಚಾರ ಕೇಸ್ ದಾಖಲಾಗಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.ಇದೀಗ ಪೊಲೀಸರು ಮನುವನ್ನು ಅರೆಸ್ಟ್ ಮಾಡಿದ್ದಾರೆ.
ಹಾಸನ : ಚಿಕ್ಕ ವಯಸ್ಸಿನವರಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಚಿಕ್ಕ ಮಕ್ಕಳೂ ಸಹ ನಿಂತಲೇ ಕೂತಲ್ಲೇ ಕುಸಿದುಬಿದ್ದು ಸಾವನ್ನಪ್ಪುತ್ತಿದ್ದಾರೆ. ಇದೀಗ ಹಾಸನದಲ್ಲಿ ಬಾತ್ರೂಂನಲ್ಲಿ ಇದ್ದಾಗಲೇ ಯುವತಿಗೆ ಹೃದಯಾಘಾತವಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಇಂದು ನಡೆದಿದೆ. ಹೌದು ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಬಾತ್ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟೊತ್ತಿಗಾಗಲೇ ಸಂಧ್ಯಾ ಉಸಿರು ಚೆಲ್ಲಿದ್ದಳು.
ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಬಳಿ ಮತ್ತೆ ಭದ್ರತಾ ಲೋಪ ಕಂಡು ಬಂದಿದೆ. ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಬಳಿ ಯುವಕನೊಬ್ಬ ಸಲ್ಮಾನ್ ಖಾನ್ ಅವರ ಮನೆಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾನೆ. ಹೌದು ಯುವಕನೊಬ್ಬ ಸಲ್ಮಾನ್ ಖಾನ್ ಮನೆಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾನೆ. ಮೇ 26 ಸಂಜೆ 7.15 ರ ಸಮಯದಲ್ಲಿ ಯುವಕ ಅಕ್ರಮವಾಗಿ ಮನೆ ಪ್ರವೇಶಿಸಲು ಯತ್ನಿಸಿದ್ದಾನೆ. 23 ವರ್ಷದ ಜಿತೇಂದ್ರ ಕುಮಾರ್ ಸಿಂಗ್ ನನ್ನು ಇದೀಗ ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಲ್ಮಾನ್ ಖಾನ್ ಭೇಟಿ ಮಾಡುವ ಉದ್ದೇಶದಿಂದ ಬಂದಿದ್ದೇನೆ ಎಂದು ಬಂಧಿತ ಜಿತೇಂದ್ರ ಕುಮಾರ್ ಸಿಂಗ್ ಈ ವೇಳೆ ಹೇಳಿದ್ದಾನೆ. ಸಲ್ಮಾನ್ ಖಾನ್ ಮನೆ ಆವರಣದಲ್ಲಿ ಇದೀಗ ಹೆಚ್ಚುವರಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ.