Author: kannadanewsnow05

ಬೆಂಗಳೂರು : ಪಕ್ಷ ವಿರೋಧಿ ಹಾಗೂ ಪಕ್ಷಕ್ಕೆ ಮುಜುಗರ ತರುವಂತಹ ಹೇಳಿಕೆ ನೀಡಿದ್ದರಿಂದ ಈ ಹಿಂದೆ ಮಾಜಿ ಸಚಿವ ಕೆ. ಎನ್ ರಾಜಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದರ ಬೆನ್ನಲ್ಲೇ ಇದೀಗ ಪಕ್ಷವಿರೋಧಿ ಹಾಗೂ ಮುಜುಗರ ತರುವಂತ ಹೇಳಿಕೆ ನೀಡಿದ್ದರಿಂದ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ತೆಗೆದುಹಾಕಲಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ ಸಿಎಂ ಸಿದ್ದರಾಮಯ್ಯ ನಿಗಮ ಸ್ಥಾನದಿಂದ ನಿಮ್ಮನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹೌದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರ ಪಟ್ಟಿಯಲ್ಲಿ ಇದೀಗ ಗೊಂದಲ ಉಂಟಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದಾರೆ. ಎಐಸಿಸಿ ಬಿಡುಗಡೆಗೊಳಿಸಿದ ಪಟ್ಟಿಯಲ್ಲಿ ಅರುಣ್ ಪಾಟೀಲ್ ಹೆಸರು ಉಲ್ಲೇಖವಾಗಿದೆ. ನಿನ್ನೆ ರಾಜು ಕಾಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದ್ದಾರೆ. ನಿಗಮದ…

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿಗೆ ರಾಜ್ಯ ಸರ್ಕಾರ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿಯವರು ಇಂದು ಭೇಟಿ ನೀಡಿ ಪ್ರಕರಣದ ಮಾಹಿತಿ ನೀಡಿದರು. ಹೌದು ಧರ್ಮಸ್ಥಳ ಬುರುಡೆ ಪ್ರಕರಣದ ಕುರಿತಂತೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮಹಾಂತಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ತನಿಖಾ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧಪಟ್ಟ ಆರೋಪಿ ಚಿನ್ನಯ್ಯ ಪರ ವಕೀಲರು ಸುಪ್ರೀಂಕೋರ್ಟಿಗೆ ಪಿಐಎಲ್ ಸಲ್ಲಿಸಿದರು. ನಿನ್ನೆ ಸುಪ್ರೀಂಕೋರ್ಟ್ ಪಿಐಎಲ್ ಅನ್ನು ವಜಾ ಗೊಳಿಸಿತ್ತು. ಅರ್ಜಿ ಸಲಿಸಿದ್ದನ್ನು ಚಿನ್ನಯ್ಯ ಮತ್ತು ಬುರುಡೆ ಗ್ಯಾಂಗ್ ಮುಚ್ಚಿಟ್ಟಿತ್ತು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಈ ಒಂದು ಬ್ಯಾಂಕ್ ಮುಜುಗರ ತಂದಿತ್ತು ಈ ಬಗ್ಗೆ ಪ್ರಣವ್ ಮೋಹಂತಿ ದಾಖಲೆ ಸಮೇತ ಜಿ ಪರಮೇಶ್ವರ್ ಅವರಿಗೆ ಮಾಹಿತಿ ನೀಡಿದರು.

Read More

ಬೆಂಗಳೂರು : ಬೆಂಗಳೂರಿನ ಮಲ್ಲೇಶ್ವರಂ ನ ಫರ್ನಿಚರ್ ಶಾಪ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ. ಮಲ್ಲೇಶ್ವರಂ ದತ್ತಾತ್ರೇಯ ದೇಗುಲದ ರಸ್ತೆಯಲ್ಲಿರುವ ಫರ್ನಿಚರ್ ಶಾಪ್ ನಲ್ಲಿ ಬೆಂಕಿ ಹತ್ತಿಕೊಂಡಿದೆ. ಪಕ್ಕದ ಅಪಾರ್ಟ್ಮೆಂಟ್ಗು ಕೂಡ ಬೆಂಕಿ ವ್ಯಾಪಿಸಿದೆ ತಕ್ಷಣ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಘಟನಾ ಸ್ಥಳಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ,ರಾತ್ರಿ 3 ಗಂಟೆಗೆ ಈ ಒಂದು ಬೆಂಕಿ ಅವಗಡ ಸಂಭವಿಸಿದೆ. ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಯಾವುದೇ ರೀತಿಯಾದ ಪ್ರಾಣ ಹಾನಿ ಆಗಿಲ್ಲ ಆದರೆ ಫರ್ನಿಚರ್ ಮಾಲೀಕರಿಗೆ ತುಂಬಾ ನಷ್ಟವಾಗಿದೆ. ಅಕ್ಕ ಪಕ್ಕದ ಮನೆಗಳಿಗೂ ಕೂಡ ಬೆಂಕಿ ವ್ಯಾಪಿಸಿದೆ. ಸ್ವಲ್ಪ ಮಟ್ಟಿಗೆ ಅಕ್ಕ ಪಕ್ಕದ ಮನೆಗಳಿಗೂ ಹಾನಿಯಾಗಿದೆ ಸದ್ಯಕ್ಕೆ ಯಾವುದೇ ರೀತಿ ಅನಾಹುತ ಆಗಲಿಲ್ಲ. ಈ ತರಹ ಅನಾಹುತ ಆದಾಗ ತಕ್ಷಣ ಸಾರ್ವಜನಿಕರು ಅಗ್ನಿಶಾಮಕ ಕಚೇರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

Read More

ಬೆಂಗಳೂರು : ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, 10 ದಿನಗಳ ಬಳಿಕ ಹ್ಯಾಕರ್ ಗಳ ಮೂಲ ಇದೀಗ ಪತ್ತೆಯಾಗಿದೆ. ಹ್ಯಾಕರ್ ಮೂಲವನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದಾರೆ. ಸದಾಶಿವನಗರ ಠಾಣೆ ಪೊಲೀಸರ ಮೂಲ ಪತ್ತೆ ಹಚ್ಚಿದ್ದಾರೆ. ಮೊದಲು ನಟಿ ಪ್ರಿಯಾಂಕ ಮೊಬೈಲ್ ಅವರ ಹ್ಯಾಕ್ ಆಗುತ್ತೆ. ಬಳಿಕ ನಟ ಉಪೇಂದ್ರ ಅವರ ಮೊಬೈಲ್ ಸಹ ಹ್ಯಾಕ್ ಆಗುತ್ತದೆ. ಈ ಮೊದಲು ಹಲವರ ಮೊಬೈಲ್ ಹ್ಯಾಕ್ ಮಾಡಿ ಹಣವನ್ನು ನಾಲ್ಕು ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಎಲ್ಲಾ ನಕಲಿ ಖಾತೆಗಳಿಗೂ ಹಣ ವರ್ಗಾವಣೆ ಆಗಿದೆ. ಬಳಿಕ ನಳಂದ ಬ್ಯಾಂಕಿಗೆ ಹಣವನ್ನು ಟ್ರಾನ್ಸ್ಯಾಕ್ಷನ್ ಮಾಡಲಾಗಿದೆ 1.65 ಲಕ್ಷ ಹಣವನ್ನು ಸೈಬರ್ ವಂಚಕರು ವರ್ಗಾವಣೆ ಮಾಡಿಕೊಂಡು ನಕಲಿ ಖಾತೆಯನ್ನು ಬ್ಲಾಕ್ ಮಾಡಿದ್ದಾರೆ. ಇನ್ನು ಕೆಲವರು ಡೌಟ್ ಬಂದು ಹಣ ಕಳಿಸಿರಲಿಲ್ಲ. ಅದಾದ ಮೇಲೆ ಉಪೇಂದ್ ಅವರ ಪತ್ನಿಗೆ ನಮ್ಮ ಫೋನ್ ಹ್ಯಾಕ್ ಆಗಿರುವುದು ಗೊತ್ತಾಗಿದೆ. ನಾಲ್ಕೈದು ಜನ ಬಿಹಾರಿ ಗ್ಯಾಂಗ್…

Read More

ಬೆಂಗಳೂರು : ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮಜುಗರ ತರುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ರಾಜಣ್ಣ ಬಳಿಕ ಮತ್ತೊರ್ವ ಹಿರಿಯ ಶಾಸಕನಿಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ. ಹೌದು ಪಕ್ಷ ವಿರೋಧಿ ಹೇಳಿಕೆಗಳು ಮತ್ತು ಸರ್ಕಾರಕ್ಕೆ ಮುಜುಗರ ಉಂಟಾಗುವಂತಹ ಮಾತುಗಳನ್ನಾಡುವ ನಾಯಕರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮ ಮುಂದುವರಿಸಿದೆ. ಕೆಎನ್ ರಾಜಣ್ಣರನ್ನು ಸಂಪುಟದಿಂದ ತೆರವುಗೊಳಿಸಿದ ಬಳಿಕ ಇದೀಗ ಶಾಸಕ ರಾಜು ಕಾಗೆ ಅವರನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ಕೈ ಬಿಡಲಾಗಿದೆ. ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡುವಂತೆ…

Read More

ಬೆಂಗಳೂರು : ಕೆಲ ತಿಂಗಳ ಹಿಂದೆ ಸುಪ್ರೀಂ ಕೋರ್ಟ್‌ಗೆ ಚಿನ್ನಯ್ಯನ ಮೂಲಕ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ 05-05-2025 ರಂದು ವಜಾಗೊಂಡಿದ್ದರೂ ಸಹ, ಅದನ್ನು ಮುಚ್ಚಿಟ್ಟು ಎಸ್‌ಐಟಿ ರಚನೆ ಆಗುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ ಬುರುಡೆ ಗ್ಯಾಂಗ್ ನ ಷಡ್ಯಂತ್ರ ಬಟಾ ಬಯಲಾಗಿದೆ. 2025 ಮೇ 5 ರಂದು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ವಕೀಲರಾದ ಕೆ.ವಿ. ಧನಂಜಯ್ ಹಾಗೂ ಅವರ ವಕೀಲರ ತಂಡದ ಮೂಲಕ ಚಿನ್ನಯ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿದ್ದರು. ಆ ಪಿಐಎಲ್‌ ಅರ್ಜಿ ಮಾನ್ಯ ಸುಪ್ರೀಂ ಕೋರ್ಟ್‌ನ ಗೌರವಾನ್ವಿತ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಹಾಗೂ ಸತೀಶ್‌ ಚಂದ್ರ ಶರ್ಮ ಅವರ ದ್ವಿಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ಸಂದರ್ಭದಲ್ಲಿ 1995 ರಿಂದ 2004 ರ ವರೆಗೆ ನಡೆದ ಘಟನೆಗಳ ಬಗ್ಗೆ 20 ವರ್ಷಗಳ ನಂತರ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಧೀರ್ಘಕಾಲೀನ ವಿಳಂಬಕ್ಕೆ ಯಾವುದೇ ಸಕಾರಣಗಳನ್ನು ನೀಡಲಾಗಿಲ್ಲ. ಈ ಸಾರ್ವಜನಿಕ ಹಿತಾಸಕ್ತಿಯಲ್ಲಿ ಯಾವುದೇ ಹುರುಳಿಲ್ಲ. ಇದೊಂದು…

Read More

ಬೆಂಗಳೂರು : ಬೆಂಗಳೂರಿನ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ವಿಶೇಷ ಅನುದಾನದಿಂದ, ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ ಸರ್ಜಾಪುರ ಮುಖ್ಯ ರಸ್ತೆ (ಓಆರ್‌ಆರ್) ವರೆಗೆ ರೂ.47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗೆ ಸಾರಿಗೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪೂಜೆ ನೆರವೇರಿಸಿದರು. ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ ಸರ್ಜಾಪುರ ಮುಖ್ಯ ರಸ್ತೆ (ಓಆರ್‌ಆರ್) ವರೆಗೆ ರಕ್ಷಣಾ ಭೂಮಿ ಮೂಲಕ ಸಾಗುವ 80 ಅಡಿ ಅಗಲದ (24.0 ಮೀಟರ್) ಸಂಪರ್ಕ ರಸ್ತೆ ನಿರ್ಮಾಣ ಹಾಗೂ ರಕ್ಷಣಾ ಭೂಮಿ ತೋಟಗಾರಿಕೆ ಕೆಲಸ (ಪ್ರಥಮ ಹಂತ – 5.34 ಏಕರೆ) ಒಟ್ಟು 3 ಕಿ.ಮೀ ಉದ್ದದಲ್ಲಿ ಪ್ರಾರಂಭಿಸಲಾಯಿತು. 2015ರ ಮಾಸ್ಟರ್ ಪ್ಲಾನ್‌ನಲ್ಲಿ, ಈಜಿಪುರ ಸಿಗ್ನಲ್ (ಶ್ರೀನಿವಾಗಿಲು) ಯಿಂದ ಸರಜಾಪುರ ಮೈನ್ ರಸ್ತೆ (ಓಆರ್‌ಆರ್) ವರೆಗೆ ಸಂಪರ್ಕ ರಸ್ತೆಯನ್ನು ಕಲ್ಪಿಸಲಾಗಿತ್ತು. ಇದು ಪೂರ್ವ ಬೆಂಗಳೂರು ಮತ್ತು ಓಆರ್‌ಆರ್, ಹೆಚ್‌ಎಸ್‌ಆರ್ ನಡುವೆ ಸಂಪರ್ಕ ಕಲ್ಪಿಸಲು ಉದ್ದೇಶಿತವಾಗಿತ್ತು. ಆದರೆ ರಕ್ಷಣಾ ಇಲಾಖೆಯಿಂದ ಭೂಮಿ…

Read More

ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಇಲಾಖೆಯ ‘ರಾಜ ಭಾಷಾ ಸಮಿತಿ’ ಬೆಂಗಳೂರಿನ ತಾಜ್‌ವೆಸ್ಟ್ಎಂಡ್ ಹೋಟೆಲಿನಲ್ಲಿ ಗುರುವಾರ ಆಯೋಜಿಸಿದ್ದ ‘ಹಿಂದಿ ಪ್ರಚಾರ‌ ಸಭೆ’ಗೆ ಕರ್ನಾಟಕ ರಕ್ಷಣಾ ವೇದಿಕೆ ಏಕಿಏಕಿ ದಾಳಿ ನಡೆಸಿದೆ. ಹೌದು ಬೆಂಗಳೂರಿನಲ್ಲಿ ಉತ್ತರ ಭಾರತದ ಸಂಸದರ ಕಾರ್ಯಕ್ರಮದಲ್ಲಿ ಕರವೇ ಕಾರ್ಯಕರ್ತರು ಏಕಾಏಕಿ ನುಗ್ಗಿ ದಾಂಧಲೇ ನಡೆಸಿದ್ದಾರೆ. ಹಿಂದಿ ಹೇರಿಕೆ ಬಗ್ಗೆ ಕಾರ್ಯಕ್ರಮ ಅಂತ ಕರವೇ ಆಕ್ಷೇಪ ವ್ಯಕ್ತಪಡಿಸಿದ್ದು, ತಾಜ್ ವೆಸ್ಟೆಂಡ್ ಹೋಟೆಲಿಗೆ ನುಗ್ಗಿ ಕಾರ್ಯಕರ್ತರು ದಾಂದಲೆ ಮಾಡಿದ್ದಾರೆ. ಕರವೇ ನಾರಾಯಣಗೌಡ ನೇತೃತ್ವದಲ್ಲಿ ಮುತ್ತಿಗೆಗೆ ಪ್ರಯತ್ನಿಸಿದ್ದಾರೆ. ಹಿಂದಿ ಭಾಷೆಯನ್ನು ಹಿಂದಿಯೇತರ ರಾಜ್ಯಗಳ ಮೇಲೆ ಹೇರಿಕೆ ಮಾಡುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ‌ ಎಂದು‌ ಪ್ರತಿಭಟನಾಕಾರರು ಆರೋಪಿಸಿದರು. ಕಾರ್ಯಕ್ರಮದ ನಡುವೆ ಕರವೇ ಕಾರ್ಯಕರ್ತರು‌ ಯಾವುದೇ ಮುನ್ಸೂಚನೆ‌ ನೀಡದೆ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಹೈಗ್ರೌಂಡ್ಸ್ ಠಾಣೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು.

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ, ದಿನವೊಂದಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಎಸ್ಐಟಿ ಅಧಿಕಾರಿಗಳು ತನಿಖೆ ಮಾಡುವ ವೇಳೆ ಹಲವು ಆಸ್ತಿ ಪಂಜರ ಪತ್ತೆಯಾಗಿದ್ದವು. ಈಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬಂಗ್ಲೆ ಗುಡ್ಡದಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ಮಾಡುವ ವೇಳೆ ಮಡಿಕೇರಿ ಮೂಲದ ವ್ಯಕ್ತಿ ಒಬ್ಬರ ಐಡಿ ಕಾರ್ಡ್ ಪತ್ತೆಯಾಗಿತ್ತು. ಇದೀಗ ಮತ್ತೊಂದು ಸಾಕ್ಷಿ ಸಿಕ್ಕಿದ್ದು, ಎಸ್ಐಟಿ ತನಿಖೆ ವೇಳೆ ಬಂಗ್ಲೇ ಗುಡ್ಡದಲ್ಲಿ ಡಿಎಲ್ ಸಿಕ್ಕಿತ್ತು. ಈ ಒಂದು ಡಿಎಲ್ ಆದಿಶೇಷ ನಾರಾಯಣ ಹೆಸರಿನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿದೆ. ಇವರು ತುಮಕೂರು ಮೂಲದವರು ಎಂದು ತಿಳಿದುಬಂದಿದೆ. ತುಮಕೂರು ಮೂಲದ ಫ್ಯಾಮಿಲಿ ಗೆ ಇದೀಗ ಎಸ್ಐಟಿ ಬುಲಾವ್ ನೀಡಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಕುಟುಂಬ ಆಗಮಿಸಿದೆ. ಆದಿಶೇಷ ನಾರಾಯಣನ ಸಹೋದರಿಯರು, ಬಾವ ಭೇಟಿ ನೀಡಿದ್ದಾರೆ. ಸಹೋದರ ಲಕ್ಷ್ಮಿ, ಪದ್ಮ ಹಾಗೂ ಬಾವ ಶಿವಕುಮಾರ್ ಆಗಮಿಸಿದ್ದಾರೆ. ಡಿಎಲ್ ಆದಿಶೇಷನದೆ ಎಂದು ಸಂಬಂಧಿಕರು ಪತ್ತೆಹಚ್ಚಿದ್ದಾರೆ. ಬಳಿಕ ಡಿಎನ್ಎ ಟೆಸ್ಟ್…

Read More

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು,ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಸಲಾಗಿತ್ತು. ಇದೀಗ ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ಅರ್ಜಿಗಳ ವಿಚಾರಣೆ ನಡೆಯಿತು. ಈ ವೇಳೆ ಕೆಲಸರತ್ತು ವಿಧಿಸಿ ಜಾತಿಗಣತಿ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಮಧ್ಯಂತರ ಆದೇಶ ನೀಡಿದೆ.ಬಳಿಕ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿತು. ಆಯೋಗದ ಪರವಾಗಿ ಪ್ರೊ. ರವಿವರ್ಮಕುಮಾರ್ ಅವರು ವಾದ ಆರಂಭಿಸಿದರು. 5 ನಿಮಿಷವಾದ ಮಂಡಿಸಲು ಅವಕಾಶ ನೀಡುವಂತೆ ಕೋರ್ಟಿಗೆ ಮನವಿ ಮಾಡಿದರು. ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧರಿಸಿ ವಾದ ಮಂಡನೆ ಮಾಡಿದರು. ಶೀಘ್ರವಾದ ಮಂಡನೆ ಪೂರ್ಣಗೊಳಿಸಲು ಇದೆ ವೇಳೆ ಕೋರ್ಟ್ ಸೂಚನೆ ನೀಡಿತು. ಒಂದು ಪತ್ರ ಬಂದಿದೆ ಅದನ್ನು ನಿಮಗೆ ನೀಡುತ್ತೇನೆ ಎಂದು ಜಡ್ಜ್ ಗೆ ರವಿವರ್ಮಕುಮಾರ್ ಪತ್ರ ನೀಡಿದರು. ಆಯೋಗದ ಸರ್ವೆಯ ವಿಧಾನವನ್ನು ಮರು ಪರಿಶೀಲಿಸಿದ್ದೇವೆ . ಸರ್ವೆ ವೇಳೆ ಮಾಹಿತಿ…

Read More