Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಆಗಸ್ಟ್ 30 ಮತ್ತು 31 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳು ವಿಸರ್ಜನಾ ಕಾರ್ಯಕ್ರಮ ಇರುವುದರಿಂದ ಗಿಡಿ ಗಿಡಿಗಳು ಮಧ್ಯ ಸೇವಿಸಿ ದಾಂದಲೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2025ನೇ ಸಾಲಿನ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮದ ಮೆರವಣಿಗೆಯ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನದ ಅಮಲಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಮಾಡಬಹುದಾದ ಸಾಧ್ಯತೆಗಳಿರುತ್ತವೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ಬಾರ್ & ರೆಸ್ಟೋರೆಂಟ್ ಮತ್ತು ವೈನ್ಸ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಸಂಬಂಧಪಟ್ಟ ವಿಭಾಗಗಳ…

Read More

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆ ಸುರಿಯುತ್ತಿದ್ದು, ಈಗಾಗಲೇ ಉಡುಪಿ, ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇಂದಿನಿಂದ ರಾಜ್ಯದಲ್ಲಿ ಮಳೆ ಮತ್ತಷ್ಟು ಜೋರಾಗಲಿದ್ದು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ರೆಡ್, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಹೌದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡದಲ್ಲಿ ಕೂಡ ಮಳೆಯಾಗಲಿದೆ. ಕದ್ರಾ, ಸಿದ್ದಾಪುರ, ಗೇರುಸೊಪ್ಪ, ಕಾರ್ಕಳ, ಶಿರಾಲಿ, ಭಾಲ್ಕಿ, ಬಂಟವಾಳ, ಉಪ್ಪಿನಂಗಡಿ, ಮಂಗಳೂರು, ಕಾರವಾರ, ಜೋಯ್ಡಾ, ಬೀದರ್, ಅಂಕೋಲಾದಲ್ಲಿ ಭಾರಿ ಮಳೆಯಾಗಿದೆ.

Read More

ಬಾಗಲಕೋಟೆ : ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಡ್ಡಿ ಗ್ಯಾಂಗ್ ಅಲರ್ಟ್ ಆಗಿದ್ದು ಇದೀಗ ಮತ್ತೆ ರಾಜ್ಯದಲ್ಲಿ ಚಡ್ಡಿ ಗ್ಯಾಂಗ್ ಅಲರ್ಟ್ ಆಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ರಾತ್ರಿ ಮನೆಯೊಂದಕ್ಕೆ ಕನ್ನ ಹಾಕಲು ಕಳ್ಳರು ಹೊಂಚು ಹಾಕಿದ್ದರು. ಆದರೆ ಅಮೆರಿಕಾದಲ್ಲಿರುವ ಮನೆಯ ಮಾಲಿಕನ ಪುತ್ರಿ ಅಲ್ಲಿಂದಲೇ ಕಳ್ಳರನ್ನು ಓಡಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ. ಹೌದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿರುವ ಪಿಡಬ್ಲ್ಯೂಡಿ ನಿವೃತ್ತ ಇಂಜಿನಿಯರ್ ಹನುಮಂತಗೌಡರ ಮನೆಗೆ ಚಡ್ಡಿ ಗ್ಯಾಂಗ್ ಕನ್ನ ಹಾಕಿತ್ತು. ನಾಲ್ವರು ಚಡ್ಡಿ ಗ್ಯಾಂಗ್ ರಾತ್ರಿ ಒಂದು ಗಂಟೆಗೆ ಮನೆಗೆ ಎಂಟ್ರಿ ಕೊಟ್ಟಿದ್ದು ಇದೇ ಮನೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. ಈ ಒಂದು ಸಿಸಿಟಿವಿ ಕ್ಯಾಮೆರಾ ನನ್ನ ಮೊಬೈಲ್ ಗೆ ಕನೆಕ್ಟ್ ಮಾಡಿಕೊಂಡಿರುವ ಹನುಮಂತಗೌಡರ ಪುತ್ರಿ ಶೃತಿ ಅಮೇರಿಕಾದಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿಂದಲೇ ಮನೆಯವರನ್ನು ನೋಡುತ್ತಿದ್ದರು ಆದರೆ ಮಧ್ಯರಾತ್ರಿ ಚಡ್ಡಿ ಗ್ಯಾಂಗ್ ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಶೃತಿ…

Read More

ಬೆಂಗಳೂರು : ಕನ್ನಡದ ಖ್ಯಾತ ನಿರೂಪಕಿ ಎಂದೇ ಪ್ರಸಿದ್ಧರಾದ ಅನುಶ್ರೀ ಅವರು ರೋಷನ್ ಅವರೊಂದಿಗೆ ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಹಸೆ ಮಣೆ ಏರಲಿದ್ದಾರೆ. ಇದೀಗ ಅವರ ಅರಿಶಿನ ಶಾಸ್ತ್ರದ ಹಲವು ಫೋಟೋ ವೈರಲ್ ಆಗಿವೆ. ಆ್ಯಂಕರ್ ಅನುಶ್ರೀ ಅವರಿಗೆ ಇರುವ ಜನಪ್ರಿಯತೆ ಅಪಾರ. ಕಿರಿತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ತುಂಬ ಸ್ನೇಹಿತರಿದ್ದಾರೆ. ಆಪ್ತರು ಅನುಶ್ರೀ ಮದುವೆಗೆ ಹಾಜರಿ ಹಾಕಲಿದ್ದಾರೆ. ಈಗ ಮದುವೆ ಶಾಸ್ತ್ರಗಳು ಶುರುವಾಗಿದ್ದು, ಹಳದಿ ಶಾಸ್ತ್ರದಲ್ಲಿ ಅನುಶ್ರೀ ಮತ್ತು ರೋಷನ್ ಅವರು ಭಾಗಿಯಾಗಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ. ಹಳದಿ ಶಾಸ್ತ್ರದ ಫೋಟೋಗಳು ಕೂಡ ಲಭ್ಯವಾಗಿವೆ. ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ನಿರೂಪಕಿ ಅನುಶ್ರೀ ಅವರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್​​​ನಲ್ಲಿ ನಡೆಯಲಿದೆ. ಈ ವಿವಾಹಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಲಿದ್ದಾರೆ.

Read More

ಮೈಸೂರು : ಈ ಬಾರಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿಚಾರವಾಗಿ ಹಾಗು ಚಾಮುಂಡೇಶ್ವರಿ ದೇವಸ್ಥಾನದ ದಸರಾ ಬೆಳವಣಿಗೆಯ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಾಲಯದ ಸುತ್ತ ರಾಜಕೀಯ ನಡೆಯುತ್ತಿರುವುದರಿಂದ ತೀವ್ರ ಬೇಸರದಿಂದ ಇದನ್ನು ಬರೆಯುತ್ತಿದ್ದೇನೆ. ಈ ವರ್ಷದ ನಾಡಹಬ್ಬ(ಜನತಾ ದಸರಾ) ಉದ್ಘಾಟನೆಗೆ ಆಹ್ವಾನಿಸಲಾದ ಗಣ್ಯರ ಆಯ್ಕೆಯು ಸಂಘರ್ಷದ ಅಭಿಪ್ರಾಯಗಳಿಗೆ ಕಾರಣವಾಗಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿಲ್ಲ ಎನ್ನುವಂತಹ ಅಸಂವೇದನಾಶೀಲ ಹೇಳಿಕೆಗಳು ಅನಗತ್ಯ ಮತ್ತು ತಪ್ಪಿಸಬಹುದಾದವು. ಅದು ಹಿಂದೂ ದೇವಸ್ಥಾನವಲ್ಲದಿದ್ದರೆ ಮುಜರಾಯಿ ಅಡಿಯಲ್ಲಿ ತರುತ್ತಿರಲಿಲ್ಲ ಎಂದು ಹೇಳಿದ್ದಾರೆ. ಸರ್ಕಾರದ ದಸರಾ ಒಂದು ಸಾಂಸ್ಕೃತಿಕ ಆಚರಣೆ ಎಂಬುದು ನಮ್ಮ ಅಭಿಪ್ರಾಯ. ರಾಜ್ಯವು ಸ್ವಭಾವತಃ ಇಂತಹ ಉತ್ಸವ ನಡೆಸುವಲ್ಲಿ ಧಾರ್ಮಿಕ ಪವಿತ್ರ ಸಂಪ್ರದಾಯ ಅಥವಾ ಪರಂಪರೆಯನ್ನು ಪ್ರತಿಪಾದಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರವು ಆಯೋಜಿಸುವ…

Read More

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ಒಂದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 9 ಜನರಿಗೆ ಗಾಯಗಳಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಹಿರೇ ಬಾಗೇವಾಡಿಯಲ್ಲಿ ಖಾಸಗಿ ಬಸ್ ಪಲ್ಟಿಯಾಗಿದೆ. ಈ ಒಂದು ಬಸ್ ಹುಬ್ಬಳ್ಳಿಯಿಂದ ಪುಣೆಗೆ ತೆರಳುತ್ತಿತ್ತು. ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 9 ಜನರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಇಂದು ಕೂಡ ವರುಣಾರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ಶಿವಮೊಗ್ಗ ಹಾಗು ಉತ್ತರಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯ ಟಿಕೆ ಸ್ವರೂಪ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗು ಸಾಗರ ತಾಲೂಕಿನ ಅಂಗನವಾಡಿ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಿ ಸಾಗರ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ ಕೂಡ ಮಳೆ ಆರ್ಭಟ ಮುಂದುವರೆದ ಹಿನ್ನೆಲೆ ಜಿಲ್ಲೆಯ 10 ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೇ ಹಾಗು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ,…

Read More

ಬೆಂಗಳೂರು : ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಹೆಚ್ಚುವರಿ ಪಟ್ಟಿಯಲ್ಲಿರುವ ಶಿಕ್ಷಕರು | ಕೋರಿಕೆ ವರ್ಗಾವಣೆ ಅರ್ಜಿ ಸಲ್ಲಿಸಿರುವ ಶಿಕ್ಷಕರುಗಳಿಗೆ ಆಕ್ಷೇಪಣೆ ಸಲ್ಲಿಸಲು ಹಾಗೂ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸಲು ಕಾಲಾವಕಾಶ ನೀಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ-2020 (2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 04) ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು-2020 ರ ಹಾಗೂ ವರ್ಗಾವಣೆ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022 ಪ್ರಕಾರ 2024-25 ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಉಲ್ಲೇಖ-1 ರ ವರ್ಗಾವಣಾ ವೇಳಾಪಟ್ಟಿಯಂತೆ ಹೆಚ್ಚುವರಿ ಶಿಕ್ಷಕರ ಆಕ್ಷೇಪಣೆಗಳನ್ನು ವಿಭಾಗೀಯ ಸಹ ನಿರ್ದೇಶಕರಿಗೆ ಸಲ್ಲಿಸಲು ದಿನಾಂಕ : 25-08-2025 ಹಾಗೂ ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರು ಆಕ್ಷೇಪಣೆಗಳನ್ನು ಸಲ್ಲಿಸಲು ವಿಭಾಗೀಯ ಸಹ ನಿರ್ದೇಶಕರಿಗೆ ಸಲ್ಲಿಸಲು ದಿನಾಂಕ : 29-08-2025…

Read More

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿಗಳಿಗೆ ಇದೀಗ ಜಾರಿ‌ ನಿರ್ದೇಶಾನಾಲಯ ಇ.ಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ಆರೋಪಿಗಳ ವಿಚಾರಣೆ ನಡೆಸಿದ್ದಾರೆ. 2022ರಲ್ಲಿ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎನ್ ಐಎ ಅಧಿಕಾರಿಗಳು ರಾಜ್ಯದ ವಿವಿಧ ಕಡೆ ದಾಳಿ ಮಾಡಿ ಹಲವರನ್ನು ಬಂಧಿಸಿ ಜೈಲಿಗಟ್ಟಿದ್ರು. ತನಿಖೆಯ ವೇಳೆ ಅಧಿಕಾರಿಗಳ ಮುಂದೆ ವಿವಿಧ ಕಡೆ ಸ್ಫೋಟಿಸಲು ಸಂಚು ರೂಪಿಸಿರುವುದು ಕೂಡ ಬೆಳಕಿಗೆ ಬಂದಿತ್ತು. ಇಷ್ಟೆಲ್ಲಾ ಮಾಡೋದಕ್ಕೆ ಈ ಆರೋಪಿಗಳಿಗೆ ಪ್ರಮುಖವಾಗಿ ಹಣದ ಸಹಾಯ ಮಾಡಿದ್ದು ಯಾರು ಅನ್ನೋದರ ಹಿಂದಿನ ರಹಸ್ಯ ಭೇದಿಸುವುದಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಂದಾಗಿದ್ದಾರೆ. ದೇಶದ ವಿವಿಧ ಕಡೆ ಬಾಂಬ್​ ಸ್ಫೋಟಿಸಲು ಆರೋಪಿಗಳು ಸಂಚು ರೂಪಿಸಿದ್ದರು. ಇದಕ್ಕೆ ಬೇಕಾದ ಕಚ್ಚಾ ಸಾಮಗ್ರಿಗಳನ್ನು ಆನ್ ಲೈನ್ ಮೂಲಕ ಖರೀದಿಸಿರುವುದು ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಬೆಂಗಳೂರು : ಕನ್ನಡದ ಖ್ಯಾತ ನಿರೂಪಕಿ ಎಂದೇ ಪ್ರಸಿದ್ಧರಾದ ಅನುಶ್ರೀ ಅವರು ರೋಷನ್ ಅವರೊಂದಿಗೆ ಹಸೆ ಮಣೆ ಏರಲಿದ್ದಾರೆ. ಇದೀಗ ಅವರ ಅರಿಶಿನ ಶಾಸ್ತ್ರದ ಹಲವು ಫೋಟೋ ವೈರಲ್ ಆಗಿವೆ. ಆ್ಯಂಕರ್ ಅನುಶ್ರೀ ಅವರಿಗೆ ಇರುವ ಜನಪ್ರಿಯತೆ ಅಪಾರ. ಕಿರಿತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ತುಂಬ ಸ್ನೇಹಿತರಿದ್ದಾರೆ. ಆಪ್ತರು ಅನುಶ್ರೀ ಮದುವೆಗೆ ಹಾಜರಿ ಹಾಕಲಿದ್ದಾರೆ. ಈಗ ಮದುವೆ ಶಾಸ್ತ್ರಗಳು ಶುರುವಾಗಿದ್ದು, ಹಳದಿ ಶಾಸ್ತ್ರದಲ್ಲಿ ಅನುಶ್ರೀ ಮತ್ತು ರೋಷನ್ ಅವರು ಭಾಗಿಯಾಗಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ. ಹಳದಿ ಶಾಸ್ತ್ರದ ಫೋಟೋಗಳು ಕೂಡ ಲಭ್ಯವಾಗಿವೆ. ಆಗಸ್ಟ್ 28ರ ಗುರುವಾರ ನಿರೂಪಕಿ ಅನುಶ್ರೀ ಅವರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್​​​ನಲ್ಲಿ ನಡೆಯಲಿದೆ. ಈ ವಿವಾಹಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಲಿದ್ದಾರೆ.

Read More