Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ನಿನ್ನೆ ತಾನೆ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರಯಾಗ್ರಾಜ್ ನ ಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ 6 ಜನರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇದೀಗ ಗುಜರಾತ್ ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು ರಾಜ್ಯದ ವಿಜಯಪುರ ಜಿಲ್ಲೆಯ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಗುಜರಾತ್ ನ ಪೋರ್ ಬಂದರ್ ಬಳಿ ಭೀಕರ ಅಪಘಾತ ಸಂಭವಿಸಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಬ್ಬರು ಸಾವನಪ್ಪಿದ್ದಾರೆ. ನಿಂತಿದ್ದ ಟಿಪ್ಪರ್ ಗೆ ವಾಹನವೊಂದು ವೇಗವಾಗಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಇಬ್ಬರೂ ಸಾವನಪ್ಪಿದ್ದಾರೆ. ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗೆ (40) ಮೃತ ದುರ್ದೇವಿಗಳು ಎಂದು ತಿಳಿದುಬಂದಿದೆ.
ಚಾಮರಾಜನಗರ : ಕಳೆದ ಎರಡು ದಿನಗಳ ಹಿಂದೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಇದೀಗ ಮಾದೇಶ್ವರ, ಕಾವೇರಿ ವನ್ಯಧಾಮಗಳಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಹಾಗೂ ಕಾವೇರಿ ವನ್ಯಧಾಮದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಮಹದೇಶ್ವರ ವನ್ಯಧಾಮದ ಹನೂರು ವಲಯ ಹೂಗ್ಯಮ ಪಿ.ಜಿ ಪಾಳ್ಯ ಅರಣ್ಯ ವಲಯದಲ್ಲಿ ಈ ಒಂದು ಬೆಂಕಿ ಕಾಣಿಸಿಕೊಂಡಿದೆ. ಕಾವೇರಿ ವನ್ಯಧಾಮದ ಕೊತ್ತನೂರು, ಅಲ್ದಾಳುಗಳಲ್ಲಿ ಬೆಂಕಿ ಅವಗಡ ಸಂಭವಿಸಿದೆ. ಬೆಂಕಿಯಿಂದಾಗಿ ನೂರಾರು ಎಕರೆಯ ಅರಣ್ಯ ಪ್ರದೇಶ ನಾಶವಾಗಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಮಾದೇಶ್ವರ ಕಾವೇರಿ ವನ್ಯಧಾಮದಲ್ಲಿ ಈ ಒಂದು ಅಗ್ನಿ ಅವಘಡಕ್ಕೆ ಕಿಡಿಗೇಡಿಗಳ ಕೃತ್ಯದ ಶಂಕೆ ವ್ಯಕ್ತವಾಗುತ್ತಿದೆ. ಕೊನೆಗೂ ಬೆಂಕಿ ನಂದಿಸುವಲ್ಲಿ ಅರಣ್ಯ ಸಿಬ್ಬಂದಿಗಳು ಯಶಸ್ವಿಯಾದರು.
BREAKING : ಬೆಂಗಳೂರಲ್ಲಿ ‘ಪ್ರೆಸ್ಟೀಜ್ ಗ್ರೂಪ್’ ಕಛೇರಿ ಮೇಲೆ ‘IT’ ಅಧಿಕಾರಿಗಳಿಂದ ಏಕಾಏಕಿ ದಾಳಿ : ದಾಖಲೆ ಪರಿಶೀಲನೆ
ಬೆಂಗಳೂರು : ಬೆಂಗಳೂರಿನಲ್ಲಿ ಪ್ರೆಸ್ಟೀಜ್ ಗ್ರೂಪ್ ಕಚೇರಿ ಮೇಲೆ ಐಟಿ ದಾಳಿ ಎಂಡಿ ರಸ್ತೆಯಲ್ಲಿರುವ ಮುಖ್ಯ ಕಚೇರಿ ಸೇರಿದಂತೆ ನಾಲ್ಕು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಚೇರಿ ಮೇಲೆ ನಾಲ್ಕು ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು ಸುಮಾರು 50ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ, ಪ್ರೆಸ್ಟೀಜ್ ಗ್ರೂಪ್ ಕಚೇರಿಯ ಮೇಲೆ ನಾಲ್ಕು ತಂಡಗಳನ್ನು ಒಳಗೊಂಡ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದೆ. ಈ ಗ್ರೂಪ್ ನಿಂದ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ದಾಳಿ ಮಾಡಿ ತಪಾಸಣೆ ನಡೆಸಲಾಗುತ್ತದೆ. ಅಪಾರ್ಟ್ಮೆಂಟ್ ನಿರ್ಮಾಣ ಸೇರಿ ಹಲವು ಉದ್ಯಮಗಳನ್ನು ಪ್ರೆಸ್ಟೀಜ್ ಗ್ರೂಪ್ ಹೊಂದಿದೆ. ಪ್ರೆಸ್ಟೀಜ್ ಗ್ರೂಪ್ ಗೆ ಸಂಬಂಧಿಸಿದಂತೆ ನಾಲ್ಕು ಕಡೆ ಏಕಾಏಕಿ ದಾಳಿ ಮಾಡಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ : ಮನೆಯಲ್ಲಿ ಗ್ಯಾಸ್ ಲೀಕ್ ಆಗಿ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡು ರಾಜಸ್ಥಾನ ಮೂಲದ ಮೂವರು ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಗೋಕುಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಹಾಳ ಬಳಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ರಾಜಸ್ಥಾನ ಮೂಲದ ಸುಭಾಸ್, ಅಶೋಕ್, ಮಾಂಗಿಲಾಲ್ ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದು ವರ್ಷದಿಂದ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿನ ಓಂ ಸಾಯಿ ಗ್ಯಾಸ್ ಏಜನ್ಸಿಯಲ್ಲಿ ಡಿಲೆವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ತಾರಿಹಾಳ ತೋಟದ ಮನೆಯೊಂದರಲ್ಲಿ ಅಡುಗೆ ಮಾಡಲು ಹೋದ ಸಂದರ್ಭದಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಮಲಗಿದ್ದ ಇಬ್ಬರು ಕಾರ್ಮಿಕರು ಹಾಗೂ ಅಡುಗೆ ಮಾಡಲು ಹೋಗಿದ್ದ ಓರ್ವ ಕಾರ್ಮಿಕ ಸೇರಿ ಒಟ್ಟು ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನು ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಧಾರವಾಡ : ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕು ಎಂದು ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣಸೌಧದ ಬಳಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದ್ದರು. ಈ ಕುರಿತು ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಿದರು. ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಇತರರು ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರ ನಡೆಸಿದ ಧಾರವಾಡ ಹೈಕೋರ್ಟ್ ಇದೀಗ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ. ಇಂದು ಧಾರವಾಡ ಹೈಕೋರ್ಟ್ ಪೀಠದಲ್ಲಿ, ಸರ್ಕಾರ ಹಾಗೂ ಪಂಚಮಸಾಲಿ ಹೋರಾಟಗಾರರ ಎರಡು ಕಡೆಯಿಂದ ಕೋರ್ಟಿಗೆ ವಿಡಿಯೋ ಸಾಕ್ಷಾಧಾರ ಸಲ್ಲಿಕೆ ಮಾಡಲಾಗಿದೆ. ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ಹಾಜರಾಗಿ ವಾದ ಮಂಡಿಸಿ, ಗಲಾಟೆ ಮಾಡದಂತೆ ಶಾಸಕರು, ಸಚಿವರು ಖುದ್ದು ಭೇಟಿ ನೀಡಿ ಮನವಿ ಮಾಡಿದರು. ಆದರೂ ಕೂಡ ಪ್ರತಿಭಟನಾಕಾರರು ಕಲ್ಲು, ಚಪ್ಪಲಿ ತೋರಿದ್ದರು. ಸುವರ್ಣಸೌಧದ ಎದುರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರು. ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡಿದ್ದಾರೆ. ಕಲ್ಲು ತೂರಿದ್ದರಿಂದ 23 ಪೊಲೀಸರು ಗಾಯಗೊಂಡಿದ್ದರು. ಇದು…
ಚಿಕ್ಕಮಗಳೂರು : ‘KSRTC ಪಲ್ಲಕ್ಕಿ ಬಸ್ ಗೆ ಹಿಂದಿನಿಂದ ವೇಗವಾಗಿ ಬಂದು ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆಂಧ್ರಪ್ರದೇಶದ ಹಲವು ಪ್ರವಾಸಿಗರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಳಸ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಕಳಸ-ಹೊರನಾಡು ರಸ್ತೆಯಲ್ಲಿ ಆಂಧ್ರ ಪ್ರವಾಸಿಗರಿದ್ದ ಕಾರು KSRTC ಪಲ್ಲಕ್ಕಿ ಬಸ್ ಗೆ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಆಂಧ್ರ ಮೂಲದ ಪ್ರವಾಸಿಗರಿಗೆ ಗಾಯವಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಒಂದು ಅಪಘಾತದಲ್ಲಿ ಕಾರು ಹಿಂದಿನಿಂದ ವೇಗವಾಗಿ ಬಂದು ಬಸ್ ಕೆಳಗೆ ನುಗ್ಗಿದೆ. ಸರ್ಕಾರಿ ಬಸ್ ಕೆಳಗೆ ಕಾರು ಸಿಲುಕಿದೆ. ಕೂಡಲೇ ಸ್ಥಳೀಯರು ಕಾರನ್ನು ಹೊರಗೆ ಎಳೆದು ತೆಗೆದಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಕಳಸ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ದೊಣ್ಣೆಯಿಂದ ಹೊಡೆದು ಹತ್ಯೆಗೈದಿರುವ ಘಟನೆ ಆನೇಕಲ್ ತಾಲೂಕಿನ ಮುತ್ತನಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುತ್ತನಲ್ಲೂರು ಗ್ರಾಮದಲ್ಲಿ ಬಾರ್ ನಲ್ಲಿ ಕುಡಿಯುವಾಗ ಪರಸ್ಪರ ಇಬ್ಬರು ವ್ಯಕ್ತಿಗಳು ಪರಿಚಯವಾಗಿದ್ದರು. ಕಂಠಪೂರ್ತಿ ಕುಡಿದು ಬಾರ ರ್ ನಿಂದ ಹೊರಗಡೆ ಬಂದು ಗಲಾಟೆ ಮಾಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ರಸ್ತೆಯಲ್ಲಿ ದೊಣ್ಣೆಯಿಂದ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಗುರು ಎನ್ನುವ ಆರೋಪಿ ತನಗೆ ಪರಿಚಯವಾದ ವ್ಯಕ್ತಿಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಸದ್ಯ ಸೂರ್ಯ ಸಿಟಿ ಪೊಲೀಸರು ಆರೋಪಿ ಗುರುನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಡ್ಡಿ ದಂಧೆಕೊರರ ಕಿರುಕುಳ ಮುಂದುವರೆದಿದೆ. ಕಿರುಕುಳ ಬಡ್ಡಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಮನೆಗೆ ನುಗ್ಗಿ ಪುಂಡರು ದಾಂಧಲೆ ನಡೆಸಿದ್ದಾರೆ. ಹುಬ್ಬಳ್ಳಿಯ ಸೆಟ್ಲಮೆಂಟ್ ಏರಿಯಾದಲ್ಲಿ ಬಡ್ಡಿ ದಂಧೆಕೋರರು ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಭಾರತಿ ದೊಡ್ಡಮನಿ ಎಂಬುವರ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಕಳೆದ 15 ವರ್ಷಗಳ ಹಿಂದೆ ಭಾರತೀ ದೊಡ್ಡಮನಿ 1 ಲಕ್ಷ ಹಣ ಸಾಲ ಪಡೆದಿದ್ದರು. ಆದರೆ ಕಳೆದ 15 ವರ್ಷದ ಗಳಿಂದ ಬರಿ ಒಂದು ಲಕ್ಷಕ್ಕೆ ಬಡ್ಡಿ ಕಟ್ಟುತ್ತಾನೆ ಬಂದಿದ್ದಾರೆ. ಬಡ್ಡಿ ಕಟ್ಟುತ್ತಿದ್ದರು ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಭಾರತೀಯ ದೊಡ್ಡಮನಿ ಬಡ್ಡಿ ಕಟ್ಟಿಲ್ಲ. ಹಾಗಾಗಿ ಮನೆಗೆ ನುಗ್ಗಿದ ಪುಂಡರು ಮನೆಯಲ್ಲಿ ಬಿಯರ್ ಕುಡಿದು, ಸಿಗರೇಟ್ ಸೇದಿ ಗಲಾಟೆ ಮಾಡಿದ್ದಾರೆ. ಬಡ್ಡಿ ಹಣ ಕೊಡುತ್ತೇನೆ ಅಂದರೂ ಬಿಡದೆ ಗಲಾಟೆ ಮಾಡಿದ್ದಾರೆ. ಬಡ್ಡಿ ದಂಧೆಕೊರರ ಹೆಸರು ಹೇಳುವುದಕ್ಕೂ ಭಾರತಿ ಭಯಪಟ್ಟಿದ್ದಾರೆ.
ವಿಜಯಪುರ : ವಿಜಯಪುರದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಜಮೀನಿನಲ್ಲಿ ಅಕ್ರಮವಾಗಿ ಬೆಳೆದ 28 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ತಿಕೋಟ ತಾಲೂಕಿನ ಯತ್ನಾಳ ಗ್ರಾಮದ ಬಳಿ ಹಸಿ ಗಾಂಜಾವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಚಿಕೋಟ ತಾಲೂಕಿನ ಯತ್ನಾಳ ಗ್ರಾಮದಲ್ಲಿ ಸೆನ್ ಠಾಣೆಯ ಡಿವೈಎಸ್ಪಿ ಸುನಿಲ್ ಕಾಂಬಳೆ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ವಿಜಯಪುರ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀದರ್ : ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದಲ್ಲಿ ಬೀದರ್ ಜಿಲ್ಲೆಯ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೀದರ್ ಜಿಲ್ಲೆಗೆ 6 ಜನರ ಮೃತದೇಹಗಳು ತಲುಪಿದ್ದು ಇದೀಗ ಬೀದರ್ ನಗರದ ಗುಮ್ಮೆ ಲೇಔಟ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ನೆರವೇರಿತು. ಹೌದು ಬೀದರ್ ನಗರದ 6 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೀದರ್ ನ ಗುಮ್ಮೆ ಲೇಔಟ್ ರುದ್ರಭೂಮಿಯಲ್ಲಿ ಸಾಮೂಹಿಕ ಅಂತ್ಯಕ್ರಿಯೆ ನಡೆಯಿತು. ಲಾಡಗೇರಿ ಬಡಾವಣೆಯ ಸುಲೋಚನಾ, ಲಕ್ಷ್ಮಿ, ನೀಲಮ್ಮ, ಸಂತೋಷ್ ಕುಮಾರ್, ಸುನಿತಾ ಹಾಗೂ ಕಲಾವತಿ ಅಂತ್ಯಕ್ರಿಯೆ ನಡೆಯಿತು. ಭೀಕರ ರಸ್ತೆ ಅಪಘಾತದಲ್ಲಿ 6 ಸೋದರ ಸಂಬಂಧಿಗಳು ಮೃತಪಟ್ಟಿದ್ದರು. ಉತ್ತರ ಪ್ರದೇಶದ ವಾರಣಾಸಿ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.