Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ವಿಜಯಪುರದಲ್ಲಿ ಅಡ್ವಾನ್ಸ್ ಹಣ ಪಡೆದು ಕೆಲಸಕ್ಕೆ ತಡವಾಗಿ ಬಂದಿದ್ದಕ್ಕೆ ಕಾರ್ಮಿಕರ ಮೇಲೆ ಇಟ್ಟಂಗಿಯ ಭಟ್ಟಿಯ ಮಾಲೀಕನೊಬ್ಬ ಮರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಅಮಾನವೀಯ ಘಟನೆಯಾಗಿದ್ದು, ಈ ಒಂದು ಘಟನೆಯಲ್ಲಿ ತಪ್ಪಿತಸ್ಥ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ಕಾರಣಕ್ಕೂ ಹಲ್ಲೆ ಮಾಡಿದಂತಹ ವ್ಯಕ್ತಿಗಳನ್ನು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೆ ವೇಳೆ ತಿಳಿಸಿದರು. ಇನ್ನು ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಎಂಬಿ ಪಾಟೀಲ್ ಅವರು ಪ್ರತಿಕ್ರಿಯೆ ನೀಡಿ, ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆದಿದೆ. ಈ ಕುರಿತು ಎಸ್ಪಿ ಜೊತೆ ಮಾತಾಡಿ ಮಾಹಿತಿ ಪಡೆದಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ಅಲ್ಲಿದ್ದವರೇ ಸಂಧಾನಕ್ಕೆ ಮುಂದಾಗಿದ್ದರು ಆದರೆ ಪೊಲೀಸರು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವ ಎಂ ಪಾಟೀಲ್ ತಿಳಿಸಿದರು.
ಕೋಲಾರ : ಸದ್ಯ ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದ್ಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಚರ್ಚೆ ಜೋರಾಗಿ ನಡೆದಿದೆ ಇದರ ಮಧ್ಯ ನಗರ ಅಭಿವೃದ್ಧಿ ಸಚಿವ ಭಾರತಿ ಸುರೇಶ್ ಅವರು, ಸಿಎಂ ಹಾಗೂ ಕೆಪಿಸಿಸಿ ಎರಡು ಸ್ಥಾನಗಳು ಯಾವುದೇ ಕಾರಣಕ್ಕೂ ಬದಲಾಗಲ್ಲ ಎಂದು ತಿಳಿಸಿದರು. ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಯಾವ ಪವರ್ ಶೇರಿಂಗ್ ಇಲ್ಲ ಕೇರಿಂಗು ಇಲ್ಲ. ಸಿಎಂ ಸ್ಥಾನ ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡೂ ಬದಲಾಗುವುದಿಲ್ಲ.ಈ ಎರಡು ಹುದ್ದೆಯ ಬದಲಾವಣೆಯಿಂದ ಹೈ ಕಮಾಂಡ್ ನಿಂದ ಮಾತ್ರ ಸಾಧ್ಯ. ಕೈಮೀರಿ ಅಭಿವೃದ್ಧಿ ಮಾಡಲು ನಾವೆಲ್ಲರೂ ಪ್ರಯತ್ನ ಮಾಡುತ್ತಿದ್ದೇವೆ. ಪ್ರತ್ಯೇಕ ಸಭೆ ಮಾಡದಂತೆ ಈಗಾಗಲೇ ನಮ್ಮ ಹೈಕಮಾಂಡ್ ಸೂಚನೆ ಕೊಟ್ಟಿದೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ವಿಚಾರಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೋಲಾರದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು. ಕೋಲಾರದಲ್ಲಿ ನಾಲ್ವರು ಸಚಿವ…
ಬೆಳಗಾವಿ : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಬದಲಾಯಿಸಿ ಎಂದು ರಾಜ್ಯದ ಕೆಲ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರಿಗೆ ದೂರು ನೀಡುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದೀಗ ಸ್ಪಷ್ಟನೆ ನೀಡಿದ್ದು, ಅದೆಲ್ಲಾ ಸುಳ್ಳು ಎಂದು ಬೆಳಗಾವಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರ್ಜೆವಾಲ ವಿರುದ್ಧ ಹಲವು ನಾಯಕರು ದೂರು ನೀಡಿರುವ ವಿಚಾರವಾಗಿ, ಅದೆಲ್ಲ ನಿಮಗೆ ಯಾರು ಹೇಳಿದ್ದು? ನಿಮಗೆ ಸುಳ್ಳು ಹೇಳಿ ನಿಮ್ಮ ಇಮೇಜ್ ಹಾಳು ಮಾಡುತ್ತಿದ್ದಾರೆ. ನಿನ್ನೆ ಫಿರೋಜ್ ಸೇಠ್ ಮನೆಗೆ ಹೋದರೆ ನೀವೆಲ್ಲ ನಿಮ್ಮದೇ ಸ್ಟೋರಿ ಬಿಲ್ಡ್ ಮಾಡಿದ್ದೀರಿ ಎಂದು ತಿಳಿಸಿದರು. ಫಿರೋಜ್ ಸೇಠ್ ನಮ್ಮ ಜೊತೆ ಎರಡು ಸಾರಿ ಎಂಎಲ್ಎ ಆಗಿ ಕೆಲಸ ಮಾಡಿದ್ದಾರೆ, ಒಳ್ಳೆ ಹಿರಿಯ ನಾಯಕರಾಗಿದ್ದಾರೆ. ಸಂಘಟನೆಯ ದೃಷ್ಟಿಯಿಂದ ನಾನು ಮತ್ತು ಜಿಲ್ಲಾಧ್ಯಕ್ಷರು ಹೋಗಿ ಭೇಟಿ ಮಾಡಿ ಚರ್ಚಿಸಿದ್ದೇವೆ. ಅದನ್ನೇ ನೀವು ಬೇರೆ ರೀತಿಯಲ್ಲಿ ಬಿಲ್ಡ್ ಮಾಡಿ ಸ್ಟೋರಿ…
ಬೆಂಗಳೂರು : ಇಂದು ಬೆಳಿಗ್ಗೆ 10.25ಕ್ಕೆ ಬೆಂಗಳೂರಿನ ಜಾಲಹಳ್ಳಿ ಬಳಿ ಇರುವ ಮೆಟ್ರೋ ನಿಲ್ದಾಣದಲ್ಲಿ 49 ವರ್ಷದ ವ್ಯಕ್ತಿ ಒಬ್ಬರು ಹಳಿಯ ಮಧ್ಯ ಮಲಗಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಬಿ ಎಂ ಆರ್ ಸಿ ಎಲ್ ಸ್ಪಷ್ಟನೆ ನೀಡಿದೆ. ಪ್ರಕರಣದ ಕುರಿತು ಬಿಎಮ್ಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಇಂದು ಸುಮಾರು 10.25 ಗಂಟೆಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದಾಗ ಸುಮಾರು 49 ವರ್ಷ ವಯಸ್ಸಿನ ಬಿಹಾರದ ಮಾಜಿ ವಾಯುಪಡೆಯ ಶ್ರೀ. ಅನಿಲ್ ಕುಮಾರ್ ಪಾಂಡೆ ಎಂಬ ವ್ಯಕ್ತಿ ಟ್ರ್ಯಾಕ್ ಮೇಲೆ ಹಾರಿದ್ದಾರೆ. ಘಟನೆಯ ನಂತರ ತಕ್ಷಣವೇ ಎಮರ್ಜೆನ್ಸಿ ಟ್ರಿಪ್ ಸಿಸ್ಟಂ ETS ಅನ್ನು BMRCL ಸಿಬ್ಬಂದಿ ಮತ್ತು ತಂಡವು ನಿರ್ವಹಿಸಿ ಹಾಗು ಅವರನ್ನು ರಕ್ಷಿಸಲಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ ಯಾವುದೇ ಗಾಯಗಳು ವರದಿಯಾಗಿಲ್ಲ. ಸಂಪೂರ್ಣ ಹಸಿರು ಮಾರ್ಗದಲ್ಲಿ ರೈಲು ಸೇವೆಗಳ ಎಂದಿನಂತೆ 10.50 ಗಂಟೆಗೆ ಪುನರಾರಂಭಿಸಲಾಯಿತು. ಈ ಅವಧಿಯಲ್ಲಿ 10.25 ಗಂಟೆಯಿಂದ…
ಹುಬ್ಬಳ್ಳಿ : ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು ನೂತನ ಅಧ್ಯಕ್ಷ ಆಯ್ಕೆ ಆಗಲಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಬಿವೈ ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ತೀವ್ರ ತಾರಕಕ್ಕೆ ಏರಿದ್ದು, ಇದೀಗ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಿಎಸ್ ಯಡಿಯೂರಪ್ಪ ಹಾಗೂ ಅವರ ಚೇಲಾಗಳು ಎಷ್ಟು ಲೂಟಿ ಮಾಡಿದ್ದಾರೆ ಎನ್ನುವುದರ ಕುರಿತು ಎಲ್ಲಾ ದಾಖಲೆಗಳು ನನ್ನ ಬಳಿ ಇವೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾವು ಸಿದ್ಧ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾವು ಚುನಾವಣೆ ಮಾಡೇ ಮಾಡುತ್ತೇವೆ. ಅಭ್ಯರ್ಥಿ ಯಾರೇ ಅಗಲಿ ನಾವು ಚುನಾವಣೆ ಮಾಡುತ್ತೇವೆ. ವಿಜಯೇಂದ್ರನನ್ನು ಬದಲಾವಣೆ ಮಾಡಲು ನಮ್ಮ ಹೋರಾಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಗುಡುಗಿದ್ದಾರೆ. ನನ್ನ ವಿರುದ್ಧ…
ವಿಜಯಪುರ : ವಿಜಯಪುರದಲ್ಲಿ ಅಮಾನವೀಯ ಘಟನೆ ನಡೆದಿದ್ದು ಕೂಲಿ ಕಾರ್ಮಿಕರನ್ನು ಮಾಲೀಕನೊಬ್ಬ ಹಿಗ್ಗಾಮುಗ್ಗ ಥಳಿಸಿರುವ ಘಟನೆ ನಡೆದಿದೆ. ಇಟ್ಟಂಗಿ ಭಟ್ಟಿ ಮಾಲೀಕ ಈ ಒಂದು ರಾಕ್ಷಸಿಯ ಕೃತ್ಯ ಎಸಗಿದ್ದಾನೆ. ಮಾಲಿಕ ಖೇಮು ರಾಠೋಡ್ ಎಂಬಾತ ಕಾರ್ಮಿಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಹೌದು ವಿಜಯಪುರ ಸಿಂದಗಿ ರಸ್ತೆಯಲ್ಲಿರುವ ಇಟ್ಟಂಗಿ ಬಟ್ಟೆಯಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ಸದಾಶಿವ ಹಾಗೂ ಉಮೇಶ್ ಮಾದರ್ ಎನ್ನುವ ಕಾರ್ಮಿಕರ ಮೇಲೆ ಮಾಲೀಕ ಹಲ್ಲೆ ಖೇಮು ನಡೆಸಿದ್ದಾನೆ. ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರುವುದು ಸ್ವಲ್ಪ ತಡವಾಗಿತ್ತು. ಅಡ್ವಾನ್ಸ್ ಹಣ ಪಡೆದು ಕೆಲಸಕ್ಕೆ ಬಂದಿಲ್ಲ ಎಂದು ಇಟ್ಟಂಗಿ ಭಟ್ಟಿಯ ಮಾಲೀಕ ಹಲ್ಲೆ ಮಾಡಿದ್ದಾನೆ. ಭಟ್ಟಿಯಲ್ಲಿದ್ದ ಪೈಪ್ ಗಳಿಂದ ಮಾಲೀಕ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ವಿಜಯಪುರ ನಗರದ ಸಿಂದಿಗೆ ರಸ್ತೆಯಲ್ಲಿರುವ ಇಟ್ಟಂಗಿ ಬಟ್ಟೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಾರ್ಮಿಕರಾದಂತಹ ಸದಾಶಿವ ಹಾಗೂ ಉಮೇಶ್ ನನ್ನು ಕೆಳಗೆ ಕೂಡಿಸಿ ಅಂಗಾಲಿಗೆ ಇಬ್ಬರು ವ್ಯಕ್ತಿಗಳು ಫೈಬರ್ ಪೈಪ್…
ಮೈಸೂರು : ರಾಜ್ಯದಲ್ಲಿ ಸಾಲು ಸಾಲು ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಇದೀಗ ಮೈಸೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಹಾಡು ಹಗಲೇ ಕಾರನ್ನು ಅಡ್ಡಗಟ್ಟಿ ಮುಸುಕು ದಾರಿಗಳು ದರೋಡೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ ಹಾರೋಹಳ್ಳಿ ಬಳಿ ಈ ಒಂದು ಬೆಚ್ಚಿಬಿಳಿಸುವ ಘಟನೆ ನಡೆದಿದೆ. ಹೌದು ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಮೈಸೂರಿನಲ್ಲಿ ಕಾರು ಅಡ್ಡಗಟ್ಟಿ ಮುಸುಕು ಧಾರಿಗಳು ರಾಬರಿ ನಡೆಸಿದ್ದಾರೆ. ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಸುತ್ತ ಮುತ್ತ ಇನ್ನು ಅನೇಕ ವಾಹನಗಳಿದ್ದರೂ ಕೂಡ ಉಸ್ಕೊ ದಾರಿಗಳು ಲೆಕ್ಕಿಸದೆ ಕಾರಣ ಅಡಗಟ್ಟಿ ದರೋಡೆ ನಡೆಸುತ್ತಿರುವ ದೃಶ್ಯ ನಿಜಕ್ಕೂ ಬೆಚ್ಚಿ ಬೀಳಿಸುವಂತಿದೆ. ಅಕ್ಕಪಕ್ಕದ ವಾಹನಗಳಲ್ಲಿರುವ ಜನರು ಕೂಗಾಟ ನಡೆಸುತ್ತಿದ್ದರು ಕೂಡ ಲೆಕ್ಕಿಸದೆ ದರೋಡೆಕೋರರು ಕಾರನ್ನು ಅಡ್ಡಗಟ್ಟಿ ಮಾಡಿ ದರೋಡೆ ನಡೆಸಿದ್ದಾರೆ. ಸದ್ಯ ಹಣ ಕಳೆದುಕೊಂಡ ಕಾರಿನ ವ್ಯಕ್ತಿಯನ್ನು ಪೋಲೀಸರು ವಿಚಾರಣೆ…
ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಲಾರಿ, ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರವಾದಂತಹ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಒಂದು ಸಣ್ಣ ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಗುಂಡೇನಹಳ್ಳಿಯ ಬಳಿ ಸರಣಿ ಅಪಘಾತ ಸಂಭವಿಸಿದೆ. ಕಾರು ಲಾರಿ ಹಾಗೂ ಖಾಸಗಿ ಬಸ್ ನಡುವೆ ಈ ಒಂದು ಭೀಕರ ಸರಣಿ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದಿದೆ. ಕಾರು ಲಾರಿಗೆ ಡಿಕ್ಕಿ ಹೊಡೆದ ಬಳಿಕ ಅದೇ ವೇಗದಲ್ಲಿ ಬಂದಂತಹ ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಆದರೆ ಲಾರಿ ಚಾಲಕನಿಗೆ ಈ ಒಂದು ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿದ್ದು ಬಿಟ್ಟರೆ, ಯಾವುದೇ ರೀತಿಯಾದಂತಹ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆ ಕುರಿತಂತೆ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ಹಾಗೂ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನ ಜಾಲಹಳ್ಳಿಯ ಮೆಟ್ರೋ ನಿಲ್ದಾಣದಲ್ಲಿ 49 ವರ್ಷದ ವ್ಯಕ್ತಿಯೊಬ್ಬರು ಮೆಟ್ರೋ ಟ್ರೈನ್ ಬರುತ್ತಿದ್ದಂತೆ ಎರಡು ಹಳಿಗಳ ಮಧ್ಯ ಮಲಗಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನ ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಾಲಹಳ್ಳಿ ಮೆಟ್ರೋ ರೈಲು ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ. ಮೆಟ್ರೋ ರೈಲು ಬರುತಿದ್ದಂತೆ ವ್ಯಕ್ತಿ ಎರಡು ಹಳಿಗಳ ಮಧ್ಯ ಮಲಗಿದ್ದಾನೆ. ಜಾಲಹಳ್ಳಿಯ ಹಸಿರು ಮಾರ್ಗದಲ್ಲಿ ಮೆಟ್ರೋ ಟ್ರೈನ್ ಬರುವಾಗ ಈ ಒಂದು ಘಟನೆ ನಡೆದಿದೆ. ಕೂಡಲೇ ಮೆಟ್ರೋ ಸಿಬ್ಬಂದಿಗಳು ವ್ಯಕ್ತಿಯನ್ನು ರಕ್ಷಣೆ ಮಾಡಿ ವಶಕ್ಕೆ ಪಡೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ವೇಳೆ ಬಿಎಂಆರ್ಸಿಎಲ್ ಮೆಟ್ರೋ ಸಂಚಾರ ಸ್ಥಗಿತಗೊಳಿಸಿದೆ. ಈ ಹಿನ್ನಲೆಯಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಇಂದು ಬೆಳಿಗ್ಗೆ 10.26ಕ್ಕೆ ಈ ಒಂದು ಘಟನೆ ನಡೆದಿದೆ.ಅನಿಲ್ ಕುಮಾರ್ ಪಾಂಡೆ (49)…
ಬೆಂಗಳೂರು : ಆಸ್ತಿ ವಿಚಾರಕ್ಕೆ ಸ್ವಂತ ಅಣ್ಣನ ಮಗನನ್ನೇ ಹತ್ಯೆಗೈದ ಚಿಕ್ಕಪ್ಪ ಕಾರಿನಿಂದ ಅಣ್ಣನ ಮಗನಿಗೆ ಅಪಘಾತ ಮಾಡಿ ಆತನ ಕೊಲೆಯಾದ ಬಳಿಕ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಾಕನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಹೌದು ನೆಲಮಂಗಲ ತಾಲೂಕಿನ ಮಾಾಕನಕುಪ್ಪೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮಾಕನಕುಪ್ಪೆಯಲ್ಲಿ ರವಿಕುಮಾರ್ ಎಂಬಾತನ ಹತ್ಯೆ ನಡೆದಿದೆ. ಮೃತ ರವಿ ತಂದೆ ಚಿಕ್ಕಣ್ಣಗು ಹಾಗೂ ತಮ್ಮ ಸುರೇಶ್ ಗಲಾಟೆ ಇತ್ತು. ಸುಮಾರು 19 ಗುಂಟೆ ಜಮೀನಿಗಾಗಿ ಸಹೋದರರ ನಡುವೆ ಗಲಾಟೆ ನಡೆದಿದೆ. ಮಗನನ್ನು ಕೊಂದರೆ ಎಲ್ಲಾ ಸರಿ ಹೋಗುತ್ತೆ ಎಂದು ಸುರೇಶ್ ಈ ಒಂದು ಕೃತ್ಯ ಎಸಗಿದ್ದಾನೆ. ಅಸ್ತಿಯ ವಿಚಾರವಾಗಿ ಅಣ್ಣನ ಮಗನನ್ನೇ ರಾಕ್ಷಸ ಚಿಕ್ಕಪ್ಪ ತನ್ನ ಕಾರಿನಿಂದ ಅಪಘಾತ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯ ಬಳಿಕ ಚಿಕ್ಕಪ್ಪ ಸುರೇಶ್ ಪರಾರಿಯಾಗಿದ್ದು ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಯ ಬಳಿಕ ಪರಾರಿಯಾಗಿರುವ ಸುರೇಶ್ ಗಾಗಿ ಪೊಲೀಸರು…