Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ರಾಯಚೂರು : ರಾಜ್ಯದಲ್ಲಿ ಹಾರ್ಟ್ ಅಟ್ಯಾಕ್ ಗೆ ಮತ್ತೊಂದು ಬಲಿಯಾಗಿದ್ದು, ರಾಯಚೂರಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕ ಒಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದಲ್ಲಿ ನಡೆದಿದೆ. ಚಿಂಚೋಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಮಿಕ ನಾಗಪ್ಪ (51) ಸವಣ್ಣಪ್ಪಿದ್ದಾರೆ. ಬೆಳಿಗ್ಗೆ ಎಂದಿನಂತೆ ನರೇಗಾ ಕೆಲಸಕ್ಕೆ ನಾಗಪ್ಪ ಹೋಗಿದ್ದ ಗಿಡಗಂಟಿಗಳನ್ನ ಕಡಿಯುವಾಗ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ನಾಗಪ್ಪ ಕೊನೆಯುಸಿರು ಎಳೆದಿದ್ದಾನೆ.
#ವಾಸ್ತುಶಾಸ್ತ್ರವು ಕೇವಲ ಮೂಢನಂಬಿಕೆಯಲ್ಲ, ಅದು ಪ್ರಕೃತಿಯ ಪಂಚಭೂತಗಳನ್ನು (ಭೂಮಿ, ನೀರು, ಅಗ್ನಿ, ವಾಯು, ಆಕಾಶ) ಮತ್ತು ದಿಕ್ಕುಗಳನ್ನು ಸಮತೋಲನಗೊಳಿಸಿ ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು (Positive Energy) ಹೆಚ್ಚಿಸುವ ಒಂದು ಪ್ರಾಚೀನ ವಿಜ್ಞಾನವಾಗಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ…
ಬೆಂಗಳೂರು: ರಾಜ್ಯದಲ್ಲಿ ಹೆಣ್ಣುಮಕ್ಕಳ ಸಬಲೀಕರಣ ಹಾಗೂ ಸುರಕ್ಷತೆಗಾಗಿ ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದರೂ, ಬಾಲ್ಯ ವಿವಾಹ ಎಂಬ ಸಾಮಾಜಿಕ ಪಿಡುಗಿಗೆ ಮಾತ್ರ ಇನ್ನೂ ಸಂಪೂರ್ಣ ಕಡಿವಾಣ ಬಿದ್ದಿಲ್ಲ. ಸರ್ಕಾರ ಮತ್ತು ವಿವಿಧ ಇಲಾಖೆಗಳು ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಸಹ, ಕದ್ದುಮುಚ್ಚಿ ನಡೆಯುವ ಬಾಲ್ಯ ವಿವಾಹಗಳ ಸಂಖ್ಯೆ ಮಾತ್ರ ಆತಂಕ ಮೂಡಿಸುವಂತಿದೆ. ಇತ್ತೀಚಿನ ಅಧಿಕೃತ ಮಾಹಿತಿ ಪ್ರಕಾರ, ಕಳೆದ ಕೇವಲ ಮೂರು ವರ್ಷಗಳ ಅವಧಿಯಲ್ಲಿಯೇ ರಾಜ್ಯಾದ್ಯಂತ ಒಟ್ಟು 2,285 ಬಾಲ್ಯ ವಿವಾಹಗಳು ನಡೆದಿರುವುದು ಬೆಳಕಿಗೆ ಬಂದಿದೆ. ದಾರಿ ತಪ್ಪಿಸುತ್ತಿರುವ ಸಾಮಾಜಿಕ ಜಾಲತಾಣಗಳು ಬಾಲ್ಯ ವಿವಾಹಗಳು ಹೆಚ್ಚಾಗಲು ಬದಲಾಗುತ್ತಿರುವ ಇಂದಿನ ಜೀವನಶೈಲಿ ಹಾಗೂ ತಂತ್ರಜ್ಞಾನವೂ ಕಾರಣ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಳವಳ ವ್ಯಕ್ತಪಡಿಸಿದೆ. ಹದಿಹರೆಯದ ಮಕ್ಕಳಲ್ಲಿ ಕಂಡುಬರುತ್ತಿರುವ ಪ್ರೀತಿ-ಪ್ರೇಮದ ಪ್ರಕರಣಗಳು ಹಾಗೂ ಸಾಮಾಜಿಕ ಜಾಲತಾಣಗಳ (Social Media) ಅತಿಯಾದ ಬಳಕೆಯಿಂದ ಮಕ್ಕಳು ದಾರಿ ತಪ್ಪುತ್ತಿರುವುದು ಇಂತಹ ಮದುವೆಗಳಿಗೆ ಪ್ರಮುಖ ಕಾರಣವಾಗಿದೆ. ಇದರೊಂದಿಗೆ, ಕೆಲವು ಸಮುದಾಯಗಳಲ್ಲಿ ಇಂದಿಗೂ ಜೀವಂತವಾಗಿರುವ…
ಕೊಪ್ಪಳ: ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬ ಯುವಕ ತೀವ್ರವಾಗಿ ಗಾಯಗೊಂಡಿರುವ ಮನಕಲಕುವ ಘಟನೆ ಕೊಪ್ಪಳ ತಾಲೂಕಿನ ಕಾಮನೂರ ಗ್ರಾಮದ ಬಳಿ ನಡೆದಿದೆ. ನೆಲಕ್ಕುರುಳಿದ್ದ ಬೇವಿನ ಮರಕ್ಕೆ ಡಿಕ್ಕಿ: ಕಳೆದ ಕೆಲವು ದಿನಗಳಿಂದ ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಶನಿವಾರ ರಾತ್ರಿ ಸುರಿದ ಭಾರಿ ಗಾಳಿ-ಮಳೆಯ ರೌದ್ರಾವತಾರಕ್ಕೆ ರಸ್ತೆ ಬದಿಯಲ್ಲಿದ್ದ ಬೃಹತ್ ಬೇವಿನ ಮರವೊಂದು ಬುಡಸಮೇತ ರಸ್ತೆಗೆ ಉರುಳಿಬಿದ್ದಿತ್ತು. ಭಾನುವಾರ ಮುಂಜಾನೆ ಕತ್ತಲೆಯಿದ್ದ ಕಾರಣ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವು ಸವಾರನ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ. ಈ ವೇಳೆ ವೇಗವಾಗಿ ಬಂದ ಬೈಕ್ ನೇರವಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಕೊನೆಯುಸಿರೆಳೆದ ಕಿರಣ್: ಅಪಘಾತದ ಭೀಕರತೆಗೆ ಬೈಕ್ ಚಲಾಯಿಸುತ್ತಿದ್ದ ಕಿರಣ್ ಕರಬಡಗಿ (30) ಎಂಬ ಯುವಕ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇವರೊಂದಿಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಮಹೇಶ್ ಎಂಬ ಮತ್ತೊಬ್ಬ ಯುವಕನಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ…
ಕಲಬುರಗಿ: ನೀಟ್ (NEET) ಪರೀಕ್ಷೆ ಬರೆದ ಬೆನ್ನಲ್ಲೇ ನಗರದ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೇಲ್ನೋಟಕ್ಕೆ ನೀಟ್ ಪರೀಕ್ಷೆಯ ಒತ್ತಡದಿಂದ ಈ ದುರಂತ ಸಂಭವಿಸಿದೆ ಎಂದು ಭಾವಿಸಲಾಗಿತ್ತಾದರೂ, ಇದೀಗ ಆಕೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೇ ಫೇಲ್ ಆಗಿದ್ದ ಆಘಾತಕಾರಿ ಸತ್ಯ ತಡವಾಗಿ ಬೆಳಕಿಗೆ ಬಂದಿದೆ. ಹೆತ್ತವರಿಗೆ ಸುಳ್ಳು ಹೇಳಿದ್ದೇ ಈ ಇಡೀ ದುರಂತಕ್ಕೆ ಮುಖ್ಯ ಕಾರಣ ಎಂಬುದು ಬಹಿರಂಗವಾಗಿದೆ. ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ ಫಲಿತಾಂಶ ಬಂದಾಗ ವಿದ್ಯಾರ್ಥಿನಿ ಭಾಗ್ಯಶ್ರೀ ತನಗೆ ಶೇಕಡಾ 92 ರಷ್ಟು ಅಂಕಗಳು ಬಂದಿವೆ ಎಂದು ಪೋಷಕರ ಬಳಿ ಸುಳ್ಳು ಹೇಳಿಕೊಂಡಿದ್ದಳು. ಮಗಳ ಮಾತನ್ನು ಸಂಪೂರ್ಣವಾಗಿ ನಂಬಿದ್ದ ಹೆತ್ತವರು, ಆಕೆಯ ವೈದ್ಯಕೀಯ ಶಿಕ್ಷಣದ ಕನಸಿಗೆ ಹೆಗಲು ಕೊಟ್ಟು ನೀಟ್ ಪರೀಕ್ಷೆ ಬರೆಯಲು ಸಂಪೂರ್ಣ ಬೆಂಬಲ ನೀಡಿದ್ದರು. ಪೋಷಕರ ಪ್ರೋತ್ಸಾಹದೊಂದಿಗೆ ಇತ್ತೀಚೆಗಷ್ಟೇ ಭಾಗ್ಯಶ್ರೀ ನೀಟ್ ಪರೀಕ್ಷೆಯನ್ನೂ ಬರೆದು ಮುಗಿಸಿದ್ದಳು. ಆದರೆ ಇದೀಗ ಲಭ್ಯವಾಗಿರುವ ಅಂಕಪಟ್ಟಿ (Marks Card) ಕಹಿಯಾದ ಸತ್ಯವನ್ನು…
ಮಂಗಳೂರು: ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಿವಾಸಿಗಳ ಬಹುದಿನಗಳ ಕನಸಾಗಿದ್ದ ಮಂಗಳೂರು-ಬೆಂಗಳೂರು ನಡುವಿನ ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲು ಸೇವೆ ಮುಂಬರುವ ಜೂನ್ ತಿಂಗಳಿನಲ್ಲಿ ಅಧಿಕೃತವಾಗಿ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳ ನೂತನ ರೈಲು ಸಂಚಾರಗಳಿಗೆ ಜೂನ್ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ಅವರು ಪ್ರಕಟಿಸಿದ್ದಾರೆ. ರೈಲು ನಿಲ್ದಾಣ ಕಾಮಗಾರಿಗಳ ಪರಿಶೀಲನೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ಸಚಿವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್’ ಯೋಜನೆಯಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ಬದ್ಧವಾಗಿದೆ ಎಂಬ ಭರವಸೆಯನ್ನು ನೀಡಿದರು. ವಿದ್ಯುದ್ದೀಕರಣ ಕಾಮಗಾರಿ ಪೂರ್ಣ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲ್ವೆ ಮಾರ್ಗದ ಸಕಲೇಶಪುರದಿಂದ ಕುಕ್ಕೆ ಸುಬ್ರಹ್ಮಣ್ಯವರೆಗಿನ ಅತ್ಯಂತ…
ಚಾಮರಾಜನಗರ: ಕಳೆದ ಹಲವು ದಿನಗಳಿಂದ ಸ್ಥಳೀಯರು ಹಾಗೂ ಭಕ್ತಾದಿಗಳಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದ ಇಂಡಿಗನತ್ತ ಸಮೀಪ ಅರಣ್ಯ ಇಲಾಖೆಯ ಸಿಬ್ಬಂದಿ ನಡೆಸಿದ ನಿರಂತರ ಕಾರ್ಯಾಚರಣೆಯ ಫಲವಾಗಿ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಪೋಷಕರ ಕಣ್ಣೆದುರೇ ನಡೆದಿತ್ತು ಘೋರ ದುರಂತ: ಕೆಲವು ದಿನಗಳ ಹಿಂದೆ ಬೆಂಗಳೂರು ಮೂಲದ ಕುಟುಂಬವೊಂದು ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೆ ತೆರಳುತ್ತಿದ್ದಾಗ ಈ ಘೋರ ದುರಂತ ಸಂಭವಿಸಿತ್ತು. ನಡೆದುಕೊಂಡು ಹೋಗುತ್ತಿದ್ದ ಬಾಲಕನನ್ನು ಪೋಷಕರ ಕಣ್ಣೆದುರೇ ಹೊಂಚು ಹಾಕಿ ಕುಳಿತಿದ್ದ ಚಿರತೆಯು ಹಠಾತ್ತಾಗಿ ದಾಳಿ ನಡೆಸಿ, ಕಾಡಿನೊಳಗೆ ಎಳೆದೊಯ್ದು ಭೀಕರವಾಗಿ ಕೊಂದು ಹಾಕಿತ್ತು. ಈ ಘಟನೆಯು ಇಡೀ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿತ್ತಲ್ಲದೆ, ಸ್ಥಳೀಯ ನಿವಾಸಿಗಳು ಹಾಗೂ ಪ್ರವಾಸಿಗರಲ್ಲಿ ಭೀತಿಯ ವಾತಾವರಣ ನಿರ್ಮಿಸಿತ್ತು. ೧೫ ದಿನಗಳ ನಿರಂತರ ಕಾರ್ಯಾಚರಣೆ: ಬಾಲಕನ ಸಾವಿನ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ, ಚಿರತೆಯನ್ನು…
ಕ್ವೆಟ್ಟಾ: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾ ನಗರದ ಪ್ರಮುಖ ರೈಲ್ವೆ ನಿಲ್ದಾಣದ ಬಳಿ ಶನಿವಾರ ಅತ್ಯಂತ ಭೀಕರ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 23 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 47ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಭದ್ರತಾ ಅಧಿಕಾರಿಗಳು ಮತ್ತು ವೈದ್ಯಕೀಯ ಸಿಬ್ಬಂದಿ ಖಚಿತಪಡಿಸಿದ್ದಾರೆ. ರೈಲು ಹತ್ತಲು ನೂರಾರು ಪ್ರಯಾಣಿಕರು ಕಾಯುತ್ತಿದ್ದ ಸಂದರ್ಭದಲ್ಲೇ ಈ ಸ್ಫೋಟ ಸಂಭವಿಸಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎನ್ನಲಾಗಿದೆ. ಛಿದ್ರಗೊಂಡ ವಾಹನಗಳು, ನಡುಗಿದ ರೈಲ್ವೆ ನಿಲ್ದಾಣ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಇಡೀ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳು ನಡುಗಿಹೋಗಿವೆ. ನಿಲ್ದಾಣದ ಆವರಣ ಹಾಗೂ ರೈಲ್ವೆ ಹಳಿಯ ಸಮೀಪ ನಿಲ್ಲಿಸಲಾಗಿದ್ದ ಸುಮಾರು 10ಕ್ಕೂ ಹೆಚ್ಚು ವಾಹನಗಳು ಸ್ಫೋಟದ ತೀವ್ರತೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಸ್ಫೋಟದ ಸದ್ದು ಕೇಳುತ್ತಿದ್ದಂತೆ ಸ್ಥಳದಲ್ಲಿ ಮರಣಮೃದಂಗ ಸೃಷ್ಟಿಯಾಗಿದ್ದು, ಪ್ರಯಾಣಿಕರು ಪ್ರಾಣಭಯದಿಂದ ದಿಕ್ಕಾಪಾಲಾಗಿ ಓಡಿದ್ದಾರೆ. ಘಟನಾ ಸ್ಥಳದಲ್ಲಿ ರಕ್ತದ ಮಡುವು ಹಾಗೂ ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿ…
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ ಭದ್ರತಾ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯು ಇಬ್ಬರು ಅಧಿಕಾರಿಗಳು ಸೇರಿ ಒಟ್ಟು ಆರು ಮಂದಿ ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಪ್ರಧಾನಿ ಸಂಚರಿಸುವ ಮಾರ್ಗದಲ್ಲೇ ಸ್ಫೋಟಕಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಕ್ಷಣದ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚಿಗೆ ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಬೆಂಗಳೂರು ದಕ್ಷಿಣ ತಾಲೂಕಿನ ವಡೆರಹಳ್ಳಿ ಗೇಟ್ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು. ವಿವಿಐಪಿ ಭದ್ರತೆಯ ದೃಷ್ಟಿಯಿಂದ ಅತ್ಯಂತ ಸೂಕ್ಷ್ಮ ಹಾಗೂ ಸುರಕ್ಷಿತವಾಗಿರಬೇಕಾದ ಮಾರ್ಗದಲ್ಲೇ ಇಂತಹ ಅಪಾಯಕಾರಿ ವಸ್ತುಗಳು ಪತ್ತೆಯಾಗಿದ್ದು, ಇಡೀ ಪೊಲೀಸ್ ಇಲಾಖೆ ಮತ್ತು ಭದ್ರತಾ ವಲಯದಲ್ಲಿ ತೀವ್ರ ಆತಂಕ ಹಾಗೂ ಸಂಚಲನ ಮೂಡಿಸಿತ್ತು. ಈ ಗಂಭೀರ ಭದ್ರತಾ ಲೋಪವನ್ನು ಅತ್ಯಂತ ಕಠಿಣವಾಗಿ ಪರಿಗಣಿಸಿರುವ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀನಿವಾಸ್ ಗೌಡ ಅವರು ತನಿಖೆಯ ಬಳಿಕ ಅಮಾನತು ಆದೇಶ ಹೊರಡಿಸಿದ್ದಾರೆ.…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಿರಿಯ ನಾಗರಿಕರನ್ನೇ ಗುರಿಯಾಗಿಸಿಕೊಂಡು ಜಾಲ ಹೆಣೆದಿದ್ದ ಸೈಬರ್ ವಂಚಕರು, ವೃದ್ಧೆಯೊಬ್ಬರನ್ನು ಬರೋಬ್ಬರಿ 24 ಕೋಟಿ ರೂಪಾಯಿ ವಂಚಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ದೈತ್ಯ ‘ಡಿಜಿಟಲ್ ಅರೆಸ್ಟ್’ ಹಗರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮುಂಬೈ, ಅಲಹಾಬಾದ್ ಮತ್ತು ದೆಹಲಿ ಮೂಲದ ಐವರು ಅಂತಾರಾಜ್ಯ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಗೌರವ್ ಕುಮಾರ್, ಓಂ ಪ್ರಕಾಶ್ ಸೇರಿದಂತೆ ಐವರು ಎಂದು ಗುರುತಿಸಲಾಗಿದೆ. ತಿಂಗಳುಗಳ ಕಾಲ ನಡೆದ ಕಳ್ಳಾಟ ಬೆಂಗಳೂರಿನ ಶಿವಾಜಿನಗರದ ನಿವಾಸಿಯಾದ ಲಕ್ಷ್ಮೀ ನಾರಾಯಣ್ ಎಂಬ ವೃದ್ಧೆಯೇ ಈ ಕೋಟ್ಯಂತರ ರೂಪಾಯಿ ವಂಚನೆಗೆ ಒಳಗಾದ ದುರ್ದೈವಿ. ಸೈಬರ್ ಖದೀಮರು ಕಳೆದ ಜನವರಿ ತಿಂಗಳಿನಿಂದಲೇ ಈ ವೃದ್ಧೆಯನ್ನು ತಮ್ಮ ಡಿಜಿಟಲ್ ಜಾಲದಲ್ಲಿ ಸಿಲುಕಿಸಿದ್ದರು. ಕಾನೂನು ಬಾಹಿರ ಚಟುವಟಿಕೆ ಅಥವಾ ತನಿಖೆಯ ಹೆಸರಿನಲ್ಲಿ ವೃದ್ಧೆಯನ್ನು ಹೆದರಿಸಿ, ‘ಡಿಜಿಟಲ್ ಅರೆಸ್ಟ್’ ಮಾದರಿಯಲ್ಲಿ ಮನೆಯಲ್ಲೇ ಬಂಧಿಯಾಗುವಂತೆ ಮಾಡಿದ್ದರು. ಬಂಧನದ ಭೀತಿಯಲ್ಲಿದ್ದ ವೃದ್ಧೆಯಿಂದ ಹಂತ ಹಂತವಾಗಿ ಬರೋಬ್ಬರಿ 24…














