Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿದಂತೆ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಮತ್ತು ಅರಣ್ಯಪಡೆ ಮುಖ್ಯಸ್ಥರಿಗೆ ನೀಡಿರುವ ಸೂಚನೆಯಲ್ಲಿ, ಕಾಡ್ಗಿಚ್ಚು ನಂದಿಸಲು ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ನಿರ್ದೇಶಿಸಲೂ ಸೂಚಿಸಿದ್ದಾರೆ. ಹಿರಿಯ ಸಂದರ್ಭದಲ್ಲಿ ಚಾರ್ಮಾಡಿ ಘಾಟ್ ನಲ್ಲಿ ಇತ್ತೀಚಿಗೆ ಹಬ್ಬಿದ್ದ ಕಾಡ್ಗಿಚ್ಚಿನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಚಾರ್ಮಾಡಿ ಘಾಟ್ ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಅರಣ್ಯಕ್ಕೆ ಆಗಿರುವ ಹಾನಿಯ ಕುರಿತಂತೆಯೂ ಅರಣ್ಯ ಸಚಿವರು ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆ. ಕಾಡ್ಗಿಚ್ಚಿನ ಬಗ್ಗೆ ಸಂಬಂಧಿತ ವಲಯಕ್ಕೆ ಮಾಹಿತಿ ಲಭಿಸಿದ ಎಷ್ಟು ಸಮಯದಲ್ಲಿ ಬೆಂಕಿ ನಂದಿಸಲು ಕ್ರಮ ವಹಿಸಲಾಗಿದೆ. ಯಾವ ಯಾವ ವಿಧಾನ ಬಳಸಲಾಗಿದೆ ಮತ್ತು…
ಬೆಂಗಳೂರು : ನಿನ್ನೆ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಇದರಲ್ಲಿ ಪೈಲ್ವಾನ್ ಚಿತ್ರದಲ್ಲಿ ನಟಿಸಿದ್ದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಘೋಷಿಸಲಾಗಿತ್ತು ಆದರೆ ನಟ ಕಿಚ್ಚ ಸುದೀಪ್ ಅವರು ಇದೀಗ ಆ ಪ್ರಶಸ್ತಿಯನ್ನು ನಯವಾಗಿ ತಿರಸ್ಕರಿಸಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಹಂಚಿಕೊಂಡಿರುವ ನಟ ಕಿಚ್ಚ ಸುದೀಪ್ ಅವರು, ಗೌರವಾನ್ವಿತ ಕರ್ನಾಟಕ ಸರ್ಕಾರ ಮತ್ತು ತೀರ್ಪುಗಾರರ ಸದಸ್ಯರೇ, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ, ಮತ್ತು ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಆದಾಗ್ಯೂ, ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುವುದನ್ನು ನಿಲ್ಲಿಸಲು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ನಾನು ವ್ಯಕ್ತಪಡಿಸಲೇಬೇಕು, ನಾನು ಪ್ರಶಸ್ತಿ ಸ್ವೀಕರಿಸದೆ ಇರಲು ಉದ್ದೇಶಿಸಿರುವ ವಿವಿಧ ವೈಯಕ್ತಿಕ ಕಾರಣಗಳಿಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ತಮ್ಮ ಕಲೆಯಲ್ಲಿ ತಮ್ಮ ಹೃದಯವನ್ನು ಹರಿಸಿದ ಅನೇಕ ಅರ್ಹ ನಟರಿದ್ದಾರೆ ಮತ್ತು ನಾನು ಮಾಡುವುದಕ್ಕಿಂತ…
ರಾಯಚೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಲವು ಜಿಲ್ಲೆಗಳಲ್ಲಿ ಜನ ಊರು ತೊರೆಯುತ್ತಿದ್ದಾರೆ. ಅಲ್ಲದೆ ನಿನ್ನೆ ಹಾವೇರಿ ಜಿಲ್ಲೆಯಲ್ಲಿ ಹಲವು ಮಹಿಳೆಯರು ಮಾಂಗಲ್ಯ ಸರ ಪ್ಯಾಕ್ ಮಾಡಿ ಪೋಸ್ಟ್ ಮುಖಾಂತರ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಸರ ಕಳುಹಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದು, ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಪತಿ ಸಾವಿನ ಬೆನ್ನಲೆ ಗೃಹ ಸಚಿವರಿಗೆ ಮಹಿಳೆಯೊಬ್ಬಳು ಮಾಂಗಲ್ಯ ಸರ ಪೋಸ್ಟ್ ಮಾಡಿದ್ದಾಳೆ. ರಾಯಚೂರು ಜಿಲ್ಲೆಯ ಮಾನ್ವಿಯ ಠಾಣಾ ವ್ಯಾಪ್ತಿಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ವ್ಯಕ್ತಿ ಸಾವನ್ನಪ್ಪಿದ್ದ. ಈ ಹಿನ್ನೆಲೆಯಲ್ಲಿ ಮೃತ ಶರಣಬಸವ ಪತ್ನಿ ಪಾರ್ವತಿ ಸಚಿವ ಜಿ.ಪರಮೇಶ್ವರಿಗೆ ಮಾಂಗಲ್ಯ ಸರ ಪೋಸ್ಟ್ ಮಾಡಿದ್ದಾರೆ. ಅಂಚೆಯ ಮೂಲಕ ಸಚಿವ ಜಿ ಪರಮೇಶ್ವರಿಗೆ ಮಾಂಗಲ್ಯ ಸರ ರವಾನೆ ಮಾಡಿದ್ದಾರೆ. ಮೃತ ಶರಣಬಸವ ಪತ್ನಿ ಪಾರ್ವತಿ ಫೈನಾನ್ಸ್ ನವರ ಕಿರುಕುಳಕ್ಕೆ ಬೇಸತ್ತು ನನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ…
ಬೆಂಗಳೂರು : ನಿನ್ನೆ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಇದರಲ್ಲಿ ಪೈಲ್ವಾನ್ ಚಿತ್ರದಲ್ಲಿ ನಟಿಸಿದ್ದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಘೋಷಿಸಲಾಗಿತ್ತು ಆದರೆ ನಟ ಕಿಚ್ಚ ಸುದೀಪ್ ಅವರು ಇದೀಗ ಆ ಪ್ರಶಸ್ತಿಯನ್ನು ನಯವಾಗಿ ತಿರಸ್ಕರಿಸಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಹಂಚಿಕೊಂಡಿರುವ ನಟ ಕಿಚ್ಚ ಸುದೀಪ್ ಅವರು, ಗೌರವಾನ್ವಿತ ಕರ್ನಾಟಕ ಸರ್ಕಾರ ಮತ್ತು ತೀರ್ಪುಗಾರರ ಸದಸ್ಯರೇ, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ, ಮತ್ತು ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಆದಾಗ್ಯೂ, ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುವುದನ್ನು ನಿಲ್ಲಿಸಲು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ನಾನು ವ್ಯಕ್ತಪಡಿಸಲೇಬೇಕು, ನಾನು ಪ್ರಶಸ್ತಿ ಸ್ವೀಕರಿಸದೆ ಇರಲು ಉದ್ದೇಶಿಸಿರುವ ವಿವಿಧ ವೈಯಕ್ತಿಕ ಕಾರಣಗಳಿಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ತಮ್ಮ ಕಲೆಯಲ್ಲಿ ತಮ್ಮ ಹೃದಯವನ್ನು ಹರಿಸಿದ ಅನೇಕ ಅರ್ಹ ನಟರಿದ್ದಾರೆ ಮತ್ತು ನಾನು ಮಾಡುವುದಕ್ಕಿಂತ…
ಬೆಂಗಳೂರು : 2025ನೇ ಸಾಲಿನ ಎಂಜಿನಿಯರಿಂಗ್, ಪಶುವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ನಡೆಸಲಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 23ರಿಂದ ಫೆಬ್ರುವರಿ 21ರವರೆಗೆ ಅವಕಾಶ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಗುರುವಾರ ಇಲ್ಲಿ ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (ಡಿಸಿಇಟಿ), ಪಿಜಿಸಿಇಟಿ ಮತ್ತು ಎಂ.ಫಾರ್ಮಾ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳ ದಿನಾಂಕಗಳನ್ನೂ ಸಚಿವರು ಘೋಷಣೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ವರ್ಷದಲ್ಲಿ ನಡೆಯುವ ಎಲ್ಲ ವೃತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಒಮ್ಮೆಗೇ ಸಚಿವರು ಮಾಹಿತಿ ನೀಡಿದ್ದು, ಆ ಪ್ರಕಾರ ಎಲ್ಲ ಸಂಬಂಧಪಟ್ಟ ಇಲಾಖೆಗಳೂ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ಸೂಚಿಸಿದ್ದಾರೆ. ಏಪ್ರಿಲ್ 16ರಂದು ಬೆಳಿಗ್ಗೆ 10.30ರಿಂದ ಭೌತವಿಜ್ಞಾನ ಮತ್ತು ಮಧ್ಯಾಹ್ನ 2.30ರಿಂದ ರಸಾಯನ ವಿಜ್ಞಾನ ಹಾಗೂ ಏಪ್ರಿಲ್ 17ರಂದು…
ಚಿತ್ರದುರ್ಗ : ಬಯಲುಸೀಮೆ ಜನರ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಇದೀಗ ವಾಣಿವಿಲಾಸ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಬಾಗಿನ ಅರ್ಪಿಸಿದರು. ಹೌದು ವಾಣಿ ವಿಲಾಸ್ ಸಾಗರ ಜಲಾಶಯ ನಿರ್ಮಾಣವಾದ ದಿನದಿಂದ ಇಲ್ಲಿಗೆ ಮೂರನೇ ಬಾರಿ ಕೂಡಿ ಬಿದ್ದಿದ್ದು ಈ ಹಿನ್ನಲೆಯಲ್ಲಿ ಇಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಿರಿಯೂರು ತಾಲೂಕಿನಲ್ಲಿರುವ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ಗಂಗಾ ಮಾತೆಗೆ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ವಾಣಿ ವಿಲಾಸ ಸಾಗರ ಕಡೆಗೂ ಕೋಡಿ ಬಿದ್ದಿದ್ದು, ಚಿತ್ರದುರ್ಗ ಜಿಲ್ಲೆಯ ರೈತರು ಫುಲ್ ಖುಷಿಯಾಗಿದ್ದಾರೆ. ಜಲಾಶಯ ನಿರ್ಮಾಣವಾದಾಗಿನಿಂದ ಮೂರು ಬಾರಿ ಭರ್ತಿಯಾಗಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಸೇರಿದಂತೆ ಹಲವು ಕಾಂಗ್ರೆಸ್ ಸಚಿವರು, ಶಾಸಕರು ಸ್ಥಳೀಯ ಮುಖಂಡರು ಕಾರ್ಯಕರ್ತರು ಈ ಒಂದು ಬಾಗಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಉಪಚುನಾವಣೆಯಲ್ಲಿ ಸಂಡೂರಿನಲ್ಲಿ ಸೋಲಲು ಶ್ರೀರಾಮುಲು ಅವರೇ ಕಾರಣ ಎಂದು ಹೇಳಿಕೆ ನೀಡಿದ್ದರಿಂದ ಸಹಜವಾಗಿ ಶ್ರೀರಾಮುಲು ಅವರು ಬೇಸರ ವ್ಯಕ್ತಪಡಿಸಿ ಪಕ್ಷ ತೊರೆಯುತ್ತೇನೆ ಎಂದು ಹೇಳಿಕೆ ನೀಡಿದ್ದರು. ಈಗ ಇವರ ಒಂದು ಮುನಿಸ್ಸಿಗೆ ಹೈಕಮಾಂಡ್ ಎಂಟ್ರಿ ಆಗಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಫೋನ್ ಕರೆ ಮಾಡಿ ಮನವೊಲಿಕೆಗೆ ಮುಂದಾಗಿದ್ದಾರೆ. ಹೌದು ಶ್ರೀರಾಮುಲು ಮುನಿಸನ್ನು ತಣಿಸಲು ಇದೀಗ ಹೈಕಮಾಂಡ್ ಎಂಟ್ರಿ ಆಗಿದೆ. ರಾಮುಲುಗೆ ಕರೆ ಮಾಡಿ ಮನವೊಲಿಕೆಗೆ ಜೆಪಿ ನಡ್ಡಾ ಇದೀಗ ಪ್ರಯತ್ನಿಸಿದ್ದಾರೆ.ದೆಹಲಿಗೆ ಬನ್ನಿ ಎಂದು ಜೆಪಿ ನಡ್ಡಾ ಶ್ರೀರಾಮುಲು ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದರ ಬಗ್ಗೆ ಮನವರಿಕೆ ಮಾಡಿದ್ದಾರೆ.ಜೆಪಿ ನಡ್ಡಾಗೆ ಶ್ರೀರಾಮುಲು ಸಭೆಯಲ್ಲಿ ಏನೇನಾಯಿತು ಎಂಬುದರ ಕುರಿತು ಸಂಪೂರ್ಣವಾಗಿ ಮನವರಿಕೆ ಮಾಡಿಕೊಟ್ಟಿದ್ದಾರೆ.ಪಕ್ಷ ಬಿಡುವ ಬಗ್ಗೆ ಹಾಗೂ…
ಬೆಳಗಾವಿ : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಇದೀಗ ಆತ್ಮಹತ್ಯೆ ಮಾಡಿಕೊಳ್ಳುವವರು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಬೆಳಗಾವಿ ತಾಲೂಕಿನ ಯಮನಾಪುರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಮಹಿಳೆ ಒಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾವಿಗೆ ಹಾರಿ ಮಹಿಳೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಯಮನಾಪುರದಲ್ಲಿ ಈ ಒಂದು ಘಟನೆ ನಡೆದಿದೆ. 52 ವರ್ಷದ ಸರೋಜಾ ಕಿರಬಿ ಎನ್ನುವ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಸರೋಜ ಹುಕ್ಕೇರಿ ತಾಲೂಕಿನ ಶಿರೂರು ಮೂಲದ ಮಹಿಳೆ ಎಂದು ತಿಳಿದುಬಂದಿದೆ. ಸರೋಜ ಹೊಳೆಪ್ಪ ಎನ್ನುವವರು ಬಳಿ 2.3 ಲಕ್ಷ ಸಬ್ಸಿಡಿ ಸಾಲವನ್ನು ಪಡೆದಿದ್ದರು ಹೊಳೆಪ್ಪಾ ದಡ್ಡಿಯನ್ನು ನಂಬಿ ಸರೋಜಾ ಸಾಲವನ್ನು ಪಡೆದುಕೊಂಡಿದ್ದರು. ಹೊಳೆಪ್ಪನಿಗೆ ಅರ್ಧದಷ್ಟು ಹಣವನ್ನು ಸರೋಜಾ ನೀಡಿದ್ದರು. ಅರ್ಧ ಸಾಲ ಕಟ್ಟಿದ ಮೇಲೆ ಪೂರ್ತಿ ಸಾಲ ಕಟ್ಟಲು ಸರೋಜಾ ಗೆ ಸೂಚನೆ ನೀಡಲಾಗಿದೆ. ಸಬ್ಸಿಡಿ ಸಾಲ ಕೊಟ್ಟಿಲ್ಲ ಪೂರ್ತಿ ಹಣ ಕಟ್ಟಲು…
ಮಂಗಳೂರು : ಇಂದು ಮಂಗಳೂರಿನ ಬಿಜೆ ಬಳಿ ಇರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂದು ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿ ಪಾರ್ಲರ್ ಅಲ್ಲಿದ್ದ ಪೀಠೋಪಕರಣಗಳನ್ನು ದ್ವಂಸ ಮಾಡಿದ್ದರು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಮಸೇನೆ ಸಂಘಟನೆಯ ಸಂಸ್ಥಾಪಕನಾಗಿರುವ ಪ್ರಸಾದ ಅತಾವರ್ ಅವರನ್ನು ಸಿಸಿಬಿ ಇದೀಗ ವಶಕ್ಕೆ ಪಡೆದುಕೊಂಡಿದೆ. ಹೌದು ಮಸಾಜ್ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಬಿಜೆ ಬಳಿಯ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ ಮೇಲೆ ಕಾರ್ಯಕರ್ತರು ದಾಳಿ ನಡೆಸಿದ್ದರು. ಪ್ರಸಾದ್ ಅತಾವರ್ ನೇತೃತ್ವದ ಸಂಘಟನೆ ಈ ಒಂದು ದಾಳಿ ನಡೆಸಿತ್ತು. ಮಸಾಜ್ ಸೆಂಟರ್ ಗಾಜು ಒಡೆದು ಹಾಗೂ ಪೀಠೋಪಕರಣ ಧ್ವಂಸಗೊಳಿಸಿತ್ತು.ನಮ್ಮ ಕಾರ್ಯಕರ್ತರೇ ದಾಳಿ ನಡೆಸಿದ್ದಾರೆ ಎಂದು ಪ್ರಸಾದ ಅತ್ತವರ್ ಒಪ್ಪಿಕೊಂಡಿದ್ದಾರೆ. ಇದೀಗ ಪ್ರಸಾದ್ ಅತ್ತಾವರ ಅವರನ್ನು ವಶಕ್ಕೆ ಪಡೆದು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಬಳ್ಳಾರಿ : ಬಿಜೆಪಿಯ ಶಾಸಕ ಜನಾರ್ಧನ ರೆಡ್ಡಿ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ನಡುವಿನ ಸ್ನೇಹದಲ್ಲಿ ಇದೀಗ ಬಿರುಕು ಮೂಡಿದೆ. ಇದರ ಮಧ್ಯ ಬಿ ಶ್ರೀರಾಮುಲು ಅವರು ಮತ್ತೊಂದು ಹೇಳಿಕೆ ನೀಡಿದ್ದು, ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಕೂಡ್ಲಿಗಿಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದರು. ಇಂದು ಬಳ್ಳಾರಿಯಲ್ಲಿ ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದು, ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಶ್ರೀರಾಮುಲು ಅವರೇ ಕಾರಣ ಎಂದು ಜನಾರ್ದನ ರೆಡ್ಡಿ ಅವರು ಹೇಳಿಕೆ ನೀಡಿದ್ದರಿಂದ ನೆನ್ನೆ ಶ್ರೀರಾಮುಲು ಪಕ್ಷ ತೊರೆಯುವುದಾಗಿ ಬೇಸರದಿಂದ ಹೇಳಿಕೆ ನೀಡಿದ್ದರು. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದಿಂದ ಮುಂಬರುವ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮುಲು ಅವರು ಘೋಷಿಸಿದ್ದಾರೆ ನನಗೂ ರಾಜ್ಯಾಧ್ಯಕ್ಷ ಆಗುವ ಆಸೆ ಇದೆ ಸಂದರ್ಭದಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಆಯ್ಕೆ ಕುರಿತು ಚುನಾವಣೆ ನಡೆಯಲಿದ್ದು ಈ ಕುರಿತು ಮಾತನಾಡಿದ ಅವರು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನವನ್ನು ಕೊಟ್ಟರೆ ಒಪ್ಪಿಕೊಳ್ಳುತ್ತೇನೆ. ಸಣ್ಣವರೆಲ್ಲ ರಾಜ್ಯಾಧ್ಯಕ್ಷರಾಗುತ್ತಿದ್ದಾರೆ…