Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಇತ್ತೀಚಿಗೆ ಹಲವು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಇದೀಗ ಹಾವೇರಿಯಲ್ಲಿ ಮಹಿಳೆಯರು ವಿನೂತನ ಪ್ರತಿಭಟನೆ ಮಾಡಿದ್ದು ಪೋಸ್ಟ್ ಬಾಕ್ಸ್ ನಲ್ಲಿ ಮಂಗಳಸರವನ್ನು ಪ್ಯಾಕ್ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳುಹಿಸಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳು ಎಂದು ಮನವಿ ಮಾಡಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೌದು ಹಾವೇರಿಯಲ್ಲಿ ನೂರಾರು ಮಹಿಳೆಯರಿಂದ ವಿನೂತನ ಪ್ರತಿಭಟನೆ ನಡೆಸುತ್ತಿದ್ದು, ಮಾಂಗಲ್ಯ ಸರವನ್ನು ಉಳಿಸಿ ಎಂದು ಮಹಿಳೆಯರಿಂದ ವಿನೂತನ ಅಭಿಯಾನ ಆರಂಭವಾಗಿದೆ. ಹಾವೇರಿಯ ಅಂಚೆ ಕಚೇರಿಯ ಮುಂದೆ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಂಗಲ್ಯ ಸರವನ್ನು ಪ್ಯಾಕ್ ಮಾಡಿ ಪೋಸ್ಟ್ ಡಬ್ಬಿಗೆ ಹಾಕಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಸರವನ್ನು ಪ್ಯಾಕ್ ಮಾಡಿ ಮಹಿಳೆಯರು ಇದೀಗ ಕಳುಹಿಸಿದ್ದಾರೆ.ಮೈಕ್ರೋ ಫೈನಾನ್ಸ್ ಸಿಬ್ಬಂದಿ ದಿನನಿತ್ಯ ಬಂದು ಕಿರುಕುಳ ನೀಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳೆಯರು ಮನವಿ ಮಾಡಿದ್ದಾರೆ. ಅಲ್ಲದೆ ಜಿಲ್ಲಾಡಳಿತ ಮತ್ತು ಎಸ್ಪಿ ಕಚೇರಿಗೂ…
ಬೆಳಗಾವಿ : ತನ್ನ ಸ್ನೇಹಿತರ ಜೊತೆಗೆ ಈಜುಲು ತೆರಳಿದ್ದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ವಾಘ್ವಾಡೆ ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ಗಣೇಶ್ ಸುತಾರ್ (15) ಎಂದು ತಿಳಿದುಬಂದಿದೆ. ಮೃತ ಗಣೇಶ್ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಸ್ನೇಹಿತರ ಜೊತೆಗೆ ಈಜಲು ಕೆರೆಗೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ.ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಗಣೇಶನ ಮೃತದೇಹ ಹೊರತೆಗೆಯುತ್ತಿದ್ದಂತೆ ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೊಂದು ಘನ ಘೋರವಾದಂತಹ ಘಟನೆ ನಡೆದಿದ್ದು, ವಿವಾಹಿತ ಮಹಿಳೆಯ ಜೊತೆ ಮೊಬೈಲ್ ನಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಯುವಕನೋರ್ವನನ್ನು ಕಿಡ್ನ್ಯಾಪ್ ಮಾಡಿ ಸಿಕ್ಕ ಸಿಕ್ಕಲ್ಲಿ ಬ್ಲೇಡ್ ಹಾಕಿ ಕೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ನಡೆದಿದೆ. ಹೌದು ಮೆಹಿಳೆಯ ಜೊತೆ ಮಾತನಾಡಿದ್ದಕ್ಕೆ ಬೆತ್ತಲೆ ಗೊಳಿಸಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಈ ಒಂದು ಘನ ಘೋರ ಘಟನೆ ನಡೆದಿದೆ. ಪೊಲೀಸ್ ಠಾಣೆಯ ಕೂಗಳತೆಯಲ್ಲಿ ಈ ಒಂದು ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ಯುವಕನನ್ನು ಮುಜಾಫಿರ್ ಎಂದು ತಿಳಿದುಬಂದಿದೆ. ಮಹಿಳೆಯ ಸಂಬಂಧಿಕರು ಮುಜಾಫಿರ್ನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿದ್ದಾರೆ. ನಿನ್ನೆ ಮಹಿಳೆಯ ಜೊತೆ ಮುಜಾಫಿರ್ ಫೋನಿನಲ್ಲಿ ಮಾತನಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಈ ವಿಷಯ ತಿಳಿದು ಮುಜಾಫಿರ್ನನ್ನು ಅಪಹರಿಸಿ ಹಲ್ಲೆ ಮಾಡಿದ್ದಾರೆ. ಮಹಿಳೆಯ ಸಮಾಬಂಧಿಕರು ಮುಜಾಫಿರ್ ನನ್ನು ಅಪಹರಿಸಿ ಸಿಕ್ಕಸಿಕ್ಕಲ್ಲಿ ಬ್ಲೇಡ್ ಹಾಕಿದ್ದಾರೆ. ಹಲ್ಲೆಯ ಬಳಿಕ ಆತನನ್ನು ಮನೆಯ…
ಮೈಸೂರು : ಕೇವಲ ಒಂದು ವಾರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದರೋಡೆ ಪ್ರಕರಣಗಳು ನಡೆದಿವೆ. ಇದೀಗ ಪೊಲೀಸರು ಈ ಒಂದು ದರೋಡೆಕೋರರ ಬೆನ್ನು ಹತ್ತಿದ್ದು, ಈಗಾಗಲೇ ಒಂದು ಪ್ರಕರಣದಲ್ಲಿ ಹಲವು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಮೈಸೂರಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ವರದಿಯಾಗಿದ್ದು, ದನದ ಕೊಟ್ಟಿಗೆಯಲ್ಲಿ ಅಪ್ಪ ಮಗ ಸೇರಿ ಖೋಟಾ ನೋಟ್ ಪ್ರಿಂಟ್ ಮಾಡುತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಇದೀಗ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಜಿಲ್ಲೆಯ ಮಾದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಟಿ. ನರಸೀಪುರ ಪೊಲೀಸರು ದಾಳಿ ಮಾಡಿ ಕೃತ್ಯದಲ್ಲಿ ತೊಡಗಿದ್ದ ತಂದೆ ಮತ್ತು ಮಗನನ್ನು ಬಂಧಿಸಿರುವ ಘಟನೆ ಟಿ. ನರಸೀಪುರ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ. ಬಂಧಿತ ಅಪ್ಪ ಮಗನನ್ನು ಹಿರಿಯೂರು ಗ್ರಾಮದ ನಾಗೇಶ್ (25) ಹಾಗೂ ಶಿವಪ್ರಸಾದ್ (48) ಎಂದು ತಿಳಿದುಬಂದಿದೆ. ಈ ವೇಳೆ ಪೊಲೀಸರು ಕೋಟ ನೋಟ್…
ಮಂಡ್ಯ : ಪಾಲಹಳ್ಳಿ ರೌಡಿಶೀಟರ್ ಸುಪ್ರೀತ್ ಅಲಿಯಾಸ್ ಸುಪ್ರೀ ಕೋಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಲೆ ಆರೋಪಿ ಪ್ರಮೋದ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೊಲೆ ಆರೋಪಿಯನ್ನು ಬಂಧಿಸುವ ವೇಳೆ ಪಿಸಿ ಶರತ್ ಮೇಲೆ ಆರೋಪಿ ಪ್ರಮೋದ್ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆರೋಪಿ ಪ್ರಮೋದ್ ಕಾಲಿಗೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕೆ ಆರ್ ಎಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಪುನೀತ್ ಫೈರಿಂಗ್ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕರಿಕಟ್ಟೆ ಬಳಿ ಈ ಒಂದು ಘಟನೆ ನಡೆದಿದೆ. ಸದ್ಯ ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಪ್ರಮೋದ್ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೈಸೂರು : ಇತ್ತೀಚಿಗೆ ಮೈಸೂರಲ್ಲಿ ಹಾಡ ಹಗಲೇ ಕೇರಳದ ಉದ್ಯಮಿಯ ಹಣ ಹಾಗೂ ಆತನ ಕಾರನ್ನು ದರೋಡೆ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೇರಳದ ತ್ರಿಶೂರಿನ ರಜಿನ್ ಮತ್ತು ಪ್ರಮೋದ್ ಎಂದು ತಿಳಿದುಬಂದಿದೆ. ರಜಿನ್ ಮೂಲಕವೇ ದರೋಡೆಕೋರರು ವಾಹನ ಬಾಡಿಗೆ ಪಡೆದಿದ್ದರು. ರಜಿನನ್ನು ಸದ್ಯ ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಇನ್ನೋರ್ವ ಆರೋಪಿ ಪ್ರಮೋದ್ ನನ್ನು ತ್ರಿಶೂರಿನಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಜಿನ್ ಮತ್ತು ಪ್ರಮೋದ್ ಇಬ್ಬರು ಸ್ನೇಹಿತರು ಎಂದು ತಿಳಿದುಬಂದಿದೆ. ರಜಿನ್ ವ್ಯಕ್ತಿ ಒಬ್ಬನನ್ನು ಪ್ರಮೋದ್ ಬಳಿಗೆ ಕರೆತಂದಿದ್ದ. ಪ್ರಮೋದ್ ಬಳಿ ವ್ಯಕ್ತಿಗೆ ಕಾರು ಬಾಡಿಗೆ ಕೊಡಿಸಿದ್ದ. ದರೋಡೆಕೋರರಿಗೆ ಕಾರು ಬಾಡಿಗೆ ಕೊಡಿಸಿದ ಬಗ್ಗೆ ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ ಪ್ರಕರಣದ ಕುರಿತು ಮೈಸೂರು ಮತ್ತು ಕೇರಳ ಪೊಲೀಸ್ರು ಇನ್ನಷ್ಟು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೌದು ಕೇರಳದ ಉದ್ಯಮಿ ಅಶ್ರಫ್ ಅಹ್ಮದ್ ಹಾಗೂ…
BREAKING : ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ : ಶ್ರೀರಾಮುಲು ಸ್ಫೋಟಕ ಆರೋಪ!
ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಶ್ರೀರಾಮುಲು ಅವರು ಸಂಡೂರು ಚುನಾವಣೆಯ ಕುರಿತು ಲಘುವಾಗಿ ಮಾತನಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಘೇಂದ್ರ ಹಾಗೂ ಶ್ರೀರಾಮುಲು ನಡುವೆ ವಾಗ್ವಾದ ನಡೆದಿದ್ದು, ಸಭೆಯಲ್ಲಿ ನಡೆದಂತಹ ಈ ಒಂದು ಜಟಾಪಟಿ ಇದೀಗ ಹೈಕಮಾಂಡ್ ಅಂಗಳಕ್ಕೂ ತಲುಪಿದೆ. ಇದೀಗ ಜನಾರ್ದನ ರೆಡ್ಡಿ ಅವರು ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಪೋಟಕವಾದ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ನಾನು ಪಕ್ಷದ ಅಭ್ಯರ್ಥಿಯಾಗಿ ಕೆಲಸ ಮಾಡಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕೇಳಿದರೆ ನನ್ನ ಕೆಲಸದ ಬಗ್ಗೆ ಜನರು ಹೇಳುತ್ತಾರೆ. ನಾನು ಕೆಲಸ ಮಾಡಿಲ್ಲ ಅಂತ ಜನಾರ್ಧನ್ ರೆಡ್ಡಿ ಹೇಳಿರುವುದು ಸ್ಪಷ್ಟವಾಗಿದೆ. ನನ್ನ ಕುಟುಂಬದ ವಿರುದ್ಧ ಸೇಡು ತೀರಿಸಿಕೊಳ್ಳಲು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ಧನ ರೆಡ್ಡಿ ಪ್ರಯತ್ನಿಸಿದ್ದಾರೆ. ಎಂದು ಜನಾರ್ಧನ್ ರೆಡ್ಡಿ ವಿರುದ್ಧ ಮಾರಿ ಸಚಿವ ಶ್ರೀರಾಮುಲು ಗಂಭೀರವಾದ ಆರೋಪ ಮಾಡಿದರು.…
ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿತ್ತು. ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಶ್ರೀರಾಮುಲು ಪಕ್ಷದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ಪಕ್ಷ ತೊರೆಯುವ ಬಗ್ಗೆ ಶ್ರೀರಾಮಲು ಈಗ ಹೇಳಿಕೆ ನೀಡಿದ್ದಾರೆ. ನಿನ್ನೆ ನಡೆದಂತಹ ಕೋರ್ ಕಮಿಟಿ ಸಭೆಯ ಜಟಾಪಟಿ ಇದೀಗ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ಕೋರ್ ಕಮಿಟಿಯಲ್ಲಿನ ಬೆಳವಣಿಗೆ ಕುರಿತು ಶ್ರೀರಾಮುಲು ಇದೀಗ ದೂರು ನೀಡಿದ್ದಾರೆ. ಹೌದು ನಿನ್ನೆ ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿನ ಜಟಾಪಟಿ ಬೆಳವಣಿಗೆ ಬಗ್ಗೆ ಶ್ರೀರಾಮುಲು ಇದೀಗ ದೂರು ನೀಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಸಂಘ ಪರಿವಾರದ ಇಬ್ಬರು ಮುಖಂಡರಿಗೆ ಶ್ರೀರಾಮುಲು ಇದೀಗ ದೂರು ನೀಡಿದ್ದಾರೆ. ಕೋರ್ ಕಮಿಟಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನಡೆಸಿಕೊಳ್ಳಲಾಗಿದೆ. ದೂರವಾಣಿ ಮೂಲಕ ಶ್ರೀರಾಮುಲು ಇದೀಗ ಹೈಕಮಾಂಡ್ ನಾಯಕರಿಗೆ ದೂರು…
ಬಾಗಲಕೋಟೆ : ಪ್ರತಿ ವರ್ಷ ಬೇಸಿಗೆ ಆರಂಭವಾದರೆ ಸಾಕು, ಲೋಡ್ ವೆಡ್ಡಿಂಗ್ ನಿಂದ ಜನರು ಹೈರಾಣಾಗುತಾರೆ. ಒಂದು ಕಡೆ ವಿಪರೀತ ಸುಡುವ ಬಿಸಿಲು ಆದರೆ ಇನ್ನೊಂದು ಕಡೆ ಲೋಡ್ ಶೆಡ್ಡಿಂಗ್ ನಿಂದ ಜನರು ವಿದ್ಯುತ್ ಇಲ್ಲದೆ ಸೆಕೆಯಿಂದ ಬೇಸತ್ತು ಹೋಗುತ್ತಾರೆ. ಆದರೆ ಈ ಬಾರಿ ರಾಜ್ಯದ ಜನತೆಗೆ ಸಿಹಿ ಸುದ್ದಿ ಒಂದು ಇದ್ದು, ಈ ಬಾರಿ ಬೇಸಿಗೆಯಲ್ಲಿ ಯಾವುದೇ ರೀತಿಯ ಲೋಡ್ ಶೇಡ್ಡಿಂಗ್ ಮಾಡಲ್ಲ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಬೇಸಿಗೆ ಸಂದರ್ಭದಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ. ರಾಜ್ಯದಲ್ಲಿ ಬರಗಾಲ ಇದ್ದಾಗಲೇ ಲೋಡ್ ಶೆಡ್ಡಿಂಗ್ ಮಾಡಿಲ್ಲ. ಹೀಗಾಗಿ ಈ ವರ್ಷ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದು ತಿಳಿಸಿದರು. ಒಂದು ವೇಳೆ ವಿದ್ಯುತ್ ಕೊರತೆ ಉಂಟಾದರೆ ಬೇರೆ ಕಡೆಯಿಂದ ವಿದ್ಯುತ್ ಖರೀದಿಸುತ್ತೇವೆ.ಈ ವರ್ಷವೂ ಬೇಡಿಗೆ ಜಾಸ್ತಿಯಾಗಿದೆ. ಈಗ 16 ರಿಂದ 17 ಸಾವಿರ ಮೆಗಾ ವೇಟ್ ಬೇಡಿಕೆ ಬರ್ತಾ…
ಮಂಗಳೂರು : ಮಂಗಳೂರು ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದೀಗ ಸ್ಥಳ ಮಹಜರು ವೇಳೆ ದರೋಡೆಕೋರ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತನ ಮೇಲೆ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಹೌದು ಮಂಗಳೂರು ಬ್ಯಾಂಕ್ ನಲ್ಲಿ ಚಿನ್ನಾಭರಣ ನಗದು ದರೋಡೆ ಕೇಸ್ ಗೆ ಸಂಬಂಧಪಟ್ಟಂತೆ ಬ್ಯಾಂಕ್ ದರೋಡೆಕೋರನ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಮುಂಬೈ ಕಣ್ಣನ್ ಮಣಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಮುಂಬೈ ಕಣ್ಣನ್ ಮಣಿ ಪರಾರಿ ಆಗಲು ಯತ್ನಿಸಿದ್ದಾನೆ. ಈ ವೇಳೆ ಮಂಗಳೂರಿನ ಉಳ್ಳಾಲದ ಬಳಿ ಈ ಒಂದು ಗೂಡಿನ ದಾಳಿ ನಡೆದಿದೆ. ಆರೋಪಿಗಳು ಅರೆಸ್ಟ್ ಮಂಗಳೂರು ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಮಧುರೈ…