Author: kannadanewsnow05

ಚಿತ್ರದುರ್ಗ: ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷದಿಂದ ನಾಲ್ಕು ದಿನದ ಹಸುಗೂಸು ಸಾವನನಪ್ಪಿರುವ ಘಟನೆ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/rameswaram-cafe-bomb-blast-nia-interrogates-another-youth/ ಇದೀಗ ಕುಟುಂಬಸ್ಥರು ವೈದ್ಯರ ವಿರುದ್ಧ ನಿರ್ಲಕ್ಷ ಆರೋಪ ಮಾಡುತ್ತಿದ್ದು, ವೈದ್ಯರ ವಿರುದ್ಧ ಮೃತ ಮಗುವಿನ ಸಂಬಂಧಿಕರು ಇದೀಗ ಆರೋಪ ಮಾಡುತ್ತಿದ್ದಾರೆ. ನಾಲ್ಕು ದಿನದ ಹಿಂದೆ ಹೆರಿಗೆಗಾಗಿ ಕವಿತಾ ಎನ್ನುವ ಮಹಿಳೆ ಆಸ್ಪತ್ರೆಯ ದಾಖಲಾಗಿದ್ದಳು.ಹೆರಿಗೆ ಬಳಿಕ ಮಗುವಿಗೆ ಚಿಕಿತ್ಸೆ ನೀಡದೆ ವೈದರು ನಿರ್ಲಕ್ಷ ತೋರಿದ್ದಾರೆ. https://kannadanewsnow.com/kannada/sbi-deletes-documents-related-to-electoral-bonds-from-website/ ಮಕ್ಕಳ ತಜ್ಞ ವೈದ್ಯ ಶ್ರೀರಾಮ್ ವಿರುದ್ಧ ಇದೀಗ ಸಂಬಂಧಿಕರು ಆರೋಪ ಮಾಡುತ್ತಿದ್ದಾರೆ. ವೈದ್ಯರ ನಿರ್ಲಕ್ಷದಿಂದಲೇ ಮಗು ಮೃತಪಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಘಟನೆಯ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾ ಸರ್ಜನ್ ಡಾ.ರವೀಂದ್ರ ಕುಟುಂಬಸ್ಥರಿಗೆ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/tv-actress-lakshmi-accuses-woman-of-assault-jnanabharathi-police-reluctant-to-investigate/

Read More

ಬಳ್ಳಾರಿ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೂ ಬಳ್ಳಾರಿಗೂ ನಂಟಿದೆ ಎಂಬ ಮಾಹಿತಿ ಅನ್ವಯ ಇದೀಗ ಎಂಐ ಅಧಿಕಾರಿಗಳು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿರುವ ಶಂಕಿತ ಉಗ್ರ ಸುಲೇಮಾನ್ ಅನ್ನು ಈಗಾಗಲೇ ಕಳೆದ ಎರಡು ದಿನಗಳಿಂದ ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/tv-actress-lakshmi-accuses-woman-of-assault-jnanabharathi-police-reluctant-to-investigate/ ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಂಐ ಅಧಿಕಾರಿಗಳು ಬಳ್ಳಾರಿ ನಗರದ ಎಸ್ ಎನ್ ಪೇಟೆಯ ಇನ್ನೊರ್ವ ಯುವಕನ ವಿಚಾರಣೆ ಕೂಡ ನಡೆಸಲಾಗುತ್ತಿದೆ. ನಿರಂತರ ಒಂದು ಗಂಟೆಯ ಕಾಲ ಅಧಿಕಾರಿಗಳು ಯುವಕನನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/those-who-dont-know-caste-are-secular-anant-kumar-hegde-on-siddaramaiah/ ಸೈಯದ್ ಸಮೀರ್, ಸುಲೇಮಾನ್ ಜೊತೆ ಈ ಯುವಕ ನಂಟು ಹೊಂದಿದ್ದ ಎಂದು ಹೇಳಲಾಗುತ್ತಿದೆ. ಅಲ್ಲದೆ ಯುವಕನು ಕೋಮುಗಲಭೆ ಪ್ರಕರಣಗಳಲ್ಲಿ ಕಾಣಿಸಿಕೊಂಡಿದ್ದ ಎನ್ನಲಾಗಿದೆ. ತೀವ್ರವಾಗಿ ವಿಚಾರಣೆ ನಡೆಸಿ NIA ಅಧಿಕಾರಿಗಳು ಯುವಕನನ್ನು ಬಿಟ್ಟು ಕಳುಹಿಸಿದ್ದಾರೆ. ಮಲ್ಲೇಶ್ವರಂ ಬಾಂಬ್ ಬ್ಲಾಸ್ಟ್ ಕೇಸ್ ಗು ಬಳ್ಳಾರಿಗೂ ನಂಟಿರುವ ಮಾಹಿತಿ ಹಿನ್ನೆಲೆಯಲ್ಲಿ NIA ಅಧಿಕಾರಿಗಳು ಆರೋಪಿ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಕಳೆದ ಒಂದು ವಾರಗಳ ಹಿಂದೆ ಅಂದರೆ ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ನಡೆದಿತ್ತು. ಇದೀಗ ವಾರದ ಬಳಿಕ ಮತ್ತೆ ಕೆಫೆ ಆರಂಭಗೊಳ್ಳುತ್ತಿದ್ದು ಈ ಕುರಿತಂತೆ ರಾಮೇಶ್ವರಂ ಕೆಫೆಯ ಸಿಇಓ ರಾಘವೇಂದ್ರ ರಾವ್ ರಾಷ್ಟ್ರಗೀತೆ ಹಾಡುವ ಮೂಲಕ ನಾಳೆ ಕೆಫೆಯನ್ನು ಮತ್ತೆ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ. ನಾಳೆ ಕೆಫೆ ಆರಂಭದ ಕುರಿತಾಗಿ ಮಾಹಿತಿಯನ್ನು ಹಂಚಿಕೊಂಡ ಅವರು, ರಾಮೇಶ್ವರಂ ಕೆಫೆಯಲ್ಲಿ ಇಂದು ಪೂಜಾ ಕಾರ್ಯಗಳು ನಡೆಯುತ್ತಿವೆ. ಹೀಗಾಗಿ ಕೆಫೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ. ಇಂದು ಸಾಯಂಕಾಲ ಹೋಮ ಹವನಗಳು ನಡೆಯುತ್ತವೆ ಎಂದು ತಿಳಿಸಿದರು. ಶಿವರಾತ್ರಿ ಪ್ರಯುಕ್ತ ರುದ್ರ ಹೋಮ ನವಗ್ರಹ ಹೋಮ ಮೃತ್ಯುಂಜಯ ಹೋಮ ವಾಸ್ತು ಹೋಮ ಲಕ್ಷ್ಮಿ ಪೂಜೆ ಗಣೇಶ ಪೂಜೆ ಹಮ್ಮಿಕೊಂಡಿದ್ದೇವೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿ ಪರಮೇಶ್ವರ್ ಸೇರಿದಂತೆ ಆರ್ ಅಶೋಕ್ ಬಿ ವೈ ವಿಜಯೇಂದ್ರ ಪಿ ಸಿ ಮೋಹನ್ ಮಂಜುಳಾ ಅರವಿಂದ್  ಎಲ್ಲಾ ಗಣ್ಯರು ಆಗಮಿಸಲಿದ್ದಾರೆ…

Read More

ಹಾವೇರಿ : ಕಳೆದ ಜನವರಿ 8ರಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಮುಸ್ಲಿಂ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆ ನಡೆದು 58 ದಿನಗಳ ಬಳಿಕ ಹಾನಗಲ್ ಠಾಣೆಯ ಪೊಲೀಸರು ಹಾವೇರಿಯ ಜೆ ಎಂ ಎಫ್ ಸಿ ಕೋರ್ಟಿಗೆ 873 ಪುಟಗಳ ಶೀಟ್ ಸಲ್ಲಿಕೆ ಮಾಡಿದ್ದಾರೆ. https://kannadanewsnow.com/kannada/first-in-the-country-kerala-government-launches-state-owned-ott/ ಘಟನೆ ಕುರಿತಂತೆ JMFC ಕೋರ್ಟಿಗೆ 873 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ 2024 ಜನವರಿ 8ರಂದು ಹಾನಗಲ್ ಬಳಿ ನಡೆದಿದ್ದ ಗ್ಯಾಂಗ್ ರೇಪ್ ಎನ್ನಲಾಗಿದ್ದು, ಶಿರಸಿ ಮೂಲದ ಮುಸ್ಲಿಂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಎಂದು ಹೇಳಲಾಗುತ್ತಿದೆ. https://kannadanewsnow.com/kannada/jayaprakash-hegde-suresh-in-congress-first-list/ ವಿಚಾರಣೆಯ ವೇಳೆ ಸಂತ್ರಸ್ತೇ 7 ಜನ ಆರೋಪಿಗಳನ್ನು ಗುರುತಿಸಿದ್ದಳು.20 ದಿನಗಳ ಹಿಂದೆ ಹಾನಗಲ್ ಪೊಲೀಸರು ಹೊತಣಿಕೆಯನ್ನು ಪೂರ್ಣಗೊಳಿಸಿದ್ದರು ಆದರೆ ಎಫ್ಎಸ್ಎಲ್ ವರದಿ ಹಾಗೂ ಡಿಎನ್ಎ ವರದಿಗಳಿಗಾಗಿ ಪೊಲೀಸರು ಕಾದು ಕುಳಿತಿದ್ದರು ಎಂದು ಹೇಳಲಾಗುತ್ತಿದೆ ಅತ್ಯಾಚಾರ ಎಸೆಗಿದ್ದಾರೆ ಎನ್ನಲಾದ ಏಳು ಪ್ರಮುಖ ಆರೋಪಿಗಳ ಹೆಸರನ್ನು ಉಲ್ಲೇಖಸಲಾಗಿದೆ. https://kannadanewsnow.com/kannada/who-will-get-yoga-for-the-3-zodiac-signs-on-this-maha-shivratri-heres-the-information/…

Read More

ಬೆಂಗಳೂರು : ಬೆಂಗಳೂರಿನಲ್ಲಿ ಅನಗತ್ಯವಾಗಿ ನೀರು ಪೋಲು ಮಾಡಿದರೆ ದಂಡ ವಿಧಿಸಲಾಗುತ್ತದೆ. BWSSB ವತಿಯಿಂದ 5000 ದಂಡ ವಿಧಿಸಲಾಗುತ್ತದೆ. ಈ ಕುರಿತಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯಿದೆ 1964ರ ಕಲಂ 109ರಂತೆ 5000 ತಂಡ ವಿಧಿಸಲಾಗುತ್ತದೆ ಎಂದು BWSSB ಪ್ರಕಟಣೆಯಲ್ಲಿ ತಿಳಿಸಿದೆ. https://kannadanewsnow.com/kannada/electoral-bond-contempt-of-court-case-filed-against-sbi-for-violating-sc-order/ ಪದೇಪದೇ ನಿಯಮ ಮೀರಿದರೆ ಹೆಚ್ಚುವರಿ ದಂಡ ವಿಧಿಸಳಾಗುತ್ತೆ. ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಲಾಗಿದೆ.ಕುಡಿಯುವ ನೀರನ್ನು ವಾಹನಗಳ ಸ್ವಚ್ಛತೆಗೆ, ಕೈದೋಟ, ಕಟ್ಟಡ ನಿರ್ಮಾಣ, ಮನೋರಂಜಕವಾಗಿ ಕಾರಂಜಿ, ಅಂತ ಆಕರ್ಷಕ ವ್ಯವಸ್ಥೆಗೆ ಹಾಗೂ ಸಿನಿಮಾ ಥಿಯೇಟರ್ ಮಾಲ್ಗಳಲ್ಲಿ ಬಳಸಿದರೆ 5000 ದಂಡ ವಿಧಿಸಲಾಗುತ್ತದೆ. https://kannadanewsnow.com/kannada/maha-shivratri-puja-archana-how-to-do-special-deeparadhana-2/ ಜಲ ಮಂಡಳಿ ಕಾಯ್ದೆ 1964 ಕಲಂ ಕಾಯ್ದೆಯ 109 ಅಡಿ ನಿಯಮ ಉಲ್ಲಂಘನೆ ಮರುಕಳಿಸಿದರೆ 5,000 ದಂಡದ ಜೊತೆಗೆ ಪ್ರತಿದಿನ 500 ರೂಪಾಯಿ ದಂಡ ವಿರಿಸಲಾಗುತ್ತದೆ ಎಂದು BWSSB ಆದೇಶದಲ್ಲಿ ತಿಳಿಸಿದೆ.ಈಗಾಗಲೇ ಕಳೆದ 15 ದಿನಗಳಲ್ಲಿ ಬೆಂಗಳೂರಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಬೋರ್ವೆಲ್ ಗಳು ಅಂತರ್ಜಲ ಮಟ್ಟ…

Read More

ನವದೆಹಲಿ : ಫೆಬ್ರವರಿ 15 ರಂದು ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸುವ ತನ್ನ ನಿರ್ಧಾರದಲ್ಲಿ ಸುಪ್ರೀಂ ಕೋರ್ಟ್ ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ ನೀಡಿರುವ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಎಸ್‌ಬಿಐಗೆ ಸೂಚಿಸಿತ್ತು ಮತ್ತು ಮಾರ್ಚ್ 13 ರೊಳಗೆ ಮಾಹಿತಿ ನೀಡುವಂತೆ ಚುನಾವಣಾ ಆಯೋಗವನ್ನು ಕೇಳಿತ್ತು. ಅದನ್ನು ವೆಬ್‌ಸೈಟ್‌ನಲ್ಲಿ ಸಾರ್ವಜನಿಕಗೊಳಿಸಿ ಎಂದು ಹೇಳಿತ್ತು. https://kannadanewsnow.com/kannada/maha-shivratri-puja-archana-how-to-do-special-deeparadhana-2/ ಮಾ.6ರೊಳಗೆ ಚುನಾವಣಾ ಬಾಂಡ್‌ ಮೂಲಕ ನಡೆದ ವಹಿವಾಟುಗಳನ್ನು ಬಹಿರಂಗ ಮಾಡಬೇಕು ಎಂಬ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿ ಭಾರತೀಯ ಸ್ಟೇಟ್‌ ಬ್ಯಾಂಕ್‌ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಪ್ರಜಾಸತ್ತಾತ್ಮಕ ಸುಧಾರಣೆಗಳ ಒಕ್ಕೂಟ (ಎಡಿಆರ್‌) ಎನ್‌ಜಿಒ, ಖ್ಯಾತ ವಕೀಲ ಪ್ರಶಾಂತ್‌ ಭೂಷಣ್‌ ಅವರ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದೆ. https://kannadanewsnow.com/kannada/see-if-your-sign-is-such-that-women-are-more-attracted-to-men-of-this-sign/ ಇತ್ತೀಚೆಗೆ ಚುನಾವಣಾ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್‌ ನಿರ್ಬಂಧಿಸಿ, ಈ ಬಾಂಡ್‌ ಖರೀದಿಸಿದವರ ಹೆಸರನ್ನು ಮಾ.6ರೊಳಗೆ ಚುನಾವಣಾ ಆಯೋಗಕ್ಕೆ ನೀಡಬೇಕು ಎಂದು ಎಸ್‌ಬಿಐಗೆ ಆದೇಶಿಸಿತ್ತು. ಆದರೆ ಇದು ಕಷ್ಟದ ಕೆಲಸ ಎಂದಿದ್ದ ಎಸ್‌ಬಿಐ ಜೂ.30ರ…

Read More

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಸೇರಿದಂತೆ 40 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. https://kannadanewsnow.com/kannada/breaking-ksrtc-bus-brake-failure-at-charmadi-ghat-major-mishap-averted-due-to-punctuality-of-driver/ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಇಸಿ ಸಭೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 60 ಲೋಕಸಭಾ ಸ್ಥಾನಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.ದೆಹಲಿ, ಕರ್ನಾಟಕ, ಕೇರಳ, ಛತ್ತೀಸಗಢ, ತೆಲಂಗಾಣ, ಸಿಕ್ಕಿಂ, ತ್ರಿಪುರ, ನಾಗಾಲ್ಯಾಂಡ್, ಮಣಿಪುರ, ಮೇಘಾಲಯ ಮತ್ತು ಲಕ್ಷ್ವದೀಪದ ಲೋಕಸಭೆ ಸ್ಥಾನಗಳ ಕುರಿತು ಚರ್ಚೆಗಳು ನಡೆದವು. https://kannadanewsnow.com/kannada/pm-modi-buys-hand-woven-pashmina-shawl-in-srinagar/ ಕೇರಳದಲ್ಲಿ ಕಾಂಗ್ರೆಸ್‌ 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಉಳಿದ 4 ಸ್ಥಾನಗಳಲ್ಲಿ ಅದರ ಮಿತ್ರಪಕ್ಷಗಳು ಸ್ಪರ್ಧಿಸಲಿವೆ. 16 ಸ್ಥಾನಗಳಲ್ಲಿ ಅಭ್ಯರ್ಥಿಗಳು ಯಾರು ಎಂಬ ಬಗ್ಗೆ ಸಿಇಸಿ ನಿರ್ಧಾರ ಕೈಗೊಂಡಿದೆ. ಶುಕ್ರವಾರ ಎಐಸಿಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಿದೆ ಎಂದು ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕ ವಿ.ಡಿ ಸತೀಶನ್ ಹೇಳಿದ್ದಾರೆ.ಮೂಲಗಳ ಪ್ರಕಾರ ರಾಹುಲ್ ಗಾಂಧಿ ಕೇರಳದ…

Read More

ಚಿಕ್ಕಮಗಳೂರು : ಕೆಎಸ್ಆರ್ಟಿಸಿ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 45 ಪ್ರಯಾಣಿಕರು ಬದುಕು ಉಳಿದಿದ್ದಾರೆ. ಈ ಘಟನೆಯು ಚಿಕ್ಕಮಂಗಳೂರು ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ನಡೆದಿದೆ. https://kannadanewsnow.com/kannada/big-breaking-pm-modi-gives-womens-day-gift-reduces-lpg-price-by-rs-100/ ಕೆಎಸ್ಆರ್ಟಿಸಿ ಬಸ್ ಕಡೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಚಾರ್ಮಾಡಿ ಘಾಟ್ ತಿರುವಿನಲ್ಲಿ ಚಾಲಕನಿಗೆ ಬ್ರೇಕ್ ಕಂಟ್ರೋಲ್ ತಪ್ಪಿದೆ. ಈ ವೇಳೆ ಚಾಲಕ ಸಮಯ ಪ್ರಜ್ಞೆಯಿಂದ ಡಿವೈಡರ್ಗೆ ಬಸ್ ಡಿಕ್ಕಿ ಆಗಿದೆ.ಈ ವೇಳೆ ಚಾಲಕ ಡಿವೈಡರ್ಗೆ ಬಸ್ಸನ್ನು ಡಿಕ್ಕಿ ಹೊಡೆಸಿ ಬಸ್ಸನ್ನು ನಿಲ್ಲಿಸಿದ್ದಾನೆ. https://kannadanewsnow.com/kannada/breaking-mother-and-son-die-after-slipping-into-lake/ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ನಿಂದ ಭಾರಿ ಪ್ರಮಾಣದ ಹೊಗೆ ಹೊರಗೆ ಬಂದಿದೆ. ಈ ವೇಳೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 45ಕ್ಕೂ ಹೆಚ್ಚು ಜನರು ಅದೃಷ್ಟವಶಾತ್ ಪ್ರಾಣ ಅಪಾಯದಿಂದ ಎಲ್ಲರೂ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಾಗಿದೆ. https://kannadanewsnow.com/kannada/united-airlines-flight-loses-tyre-moments-after-take-off/

Read More

ನವದೆಹಲಿ : ಇಂದು ಮಹಿಳಾ ದಿನಾಚಾರಣೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ದೇಶದ ಎಲ್ಲಾ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದು ಇದೀಗ ಎಲ್‌ಪಿಜಿ ಸಿಲಿಂಡರ್ಗಳ ದರದ ಮೇಲಿನ 100 ರೂಪಾಯಿಯನ್ನು ಕಡಿತಗೊಳಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. https://kannadanewsnow.com/kannada/breaking-mother-and-son-die-after-slipping-into-lake/ ಸಾಮಾಜಿಕ ಜಾಲತಾಣದಲ್ಲಿ ಅವರು, ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ರೂ. 100. ಗೆ ಇಳಿಸಿದ್ದೇವೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ. https://kannadanewsnow.com/kannada/united-airlines-flight-loses-tyre-moments-after-take-off/ ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಲು ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ‘ಸುಲಭವಾಗಿ ಬದುಕುವ’ ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ತಿಳಿಸಿದ್ದಾರೆ. https://twitter.com/narendramodi/status/1765938424723202381?t=k7NouvyZf-oRiz2gFfzZhA&s=19

Read More

ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ಕಾಲು ಜಾರಿ ಕೆರೆಯಲ್ಲಿ ಬಿದ್ದ ಮಗು ರಕ್ಷಿಸಲು ಹೋದ ತಾಯಿ ಮುಳುಗಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗುತ್ತಿದೆ. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. https://kannadanewsnow.com/kannada/united-airlines-flight-loses-tyre-moments-after-take-off/ ತಾಯಿ ಗೀತಾ (26) ಮಗ ಯಶವಂತ್ (6) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ.ಮೃತರು ಕೋಡಿಹಳ್ಳಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/housewife-cannot-be-made-an-accused-in-disproportionate-assets-case-hc/ ಮೃತ ತಾಯಿ ಮಗನನ್ನು ಶ್ರೀನಿವಾಸಪುರ ಪಟ್ಟಣದ ಮಾರುತಿ ನಗರ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/section-144-imposed-in-kalburgis-aland-town-raghava-chaitanyas-shivalinga-offered-prayers-at-ladle-mashak-dargah-today/

Read More