Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಸಂಕ್ರಾಂತಿ ಹಬ್ಬದ ದಿನವೇ ರಾಜ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದ ಬಳಿ ಈ ಒಂದು ದುರಂತ ಸಂಭವಿಸಿದೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೆರೆಯಲ್ಲಿ ಮುಳುಗಿ ಧನುಷ್ (18) ಹಾಗೂ ಸಂತೋಷ (18) ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳು ಬೆಂಗಳೂರಿನ ಕೋಣನಕುಂಟೆ ನಿವಾಸಿಗಳು ಎಂದು ತಿಳಿದುಬಂದಿದೆ. ಬನಶಂಕರಿ ಬಳಿಯ ಖಾಸಗಿ ಕಾಲೇಜಿನಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಸ್ನೇಹಿತರ ಜೊತೆಗೆ ಇಬ್ಬರು ಕಬ್ಬಾಳು ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ಕೆರೆಯಲ್ಲಿ ಈಜಲು ಹೋದಾಗ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ : ಕೋಲಾರದಲ್ಲಿ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಕೊಲೆಯಾಗಿದ್ದು, ಕೋಲಾರದ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಈ ಕೊಲೆ ನಡೆದಿದೆ ಚಾಕುವಿನಿಂದ ಇರಿದು ಸುಜಾತ (27) ಎನ್ನುವ ಪ್ರಿಯತಮೆಯನ್ನು ಪ್ರಿಯತಮ ಚಿರಂಜೀವಿ ಕೊಲೆ ಮಾಡಿದ್ದಾನೆ. ಕೊಲೆಯಾದ ಸುಜಾತ ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿ ಗ್ರಾಮದಿ ನಿವಾಸಿ ಎಂದು ತಿಳಿದುಬಂದಿದೆ. ಯುವತಿ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಇನ್ನು ಆರೋಪಿ ಚಿರಂಜೀವಿ ಹೊಸಪೇಟೆ ಇಂಡಸ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯರು ಆರೋಪಿ ಚಿರಂಜೀವಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆ ಎಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ವಾರಾಣಾಸಿ : ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಗಾಳಿಪಟ ಹಾರಿಸಲು ನಿಷೇಧಿತ ಹಾಗೂ ತೀಕ್ಷ್ಣವಾದ ಗಾಜುಲೇಪಿತ ದಾರವನ್ನು ಬಳಸಿದ ಪರಿಣಾಮ ದೇಶದ ವಿವಿಧ ಭಾಗಗಳಲ್ಲಿ ಸಂಭವಿಸಿದ ದುರಂತಗಳಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಉತ್ತರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ದಾರದಿಂದ ಕತ್ತು ಸೀಳಲ್ಪಟ್ಟು ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸಂಕ್ರಾಂತಿ ಹಬ್ಬದ ವೇಳೆ ಗಾಳಿಪಟ ಹಾರಾಟದಿಂದ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉತ್ತರಪ್ರದೇಶದಲ್ಲಿ 28 ವರ್ಷದ ಸಮೀರ್ ಹಂಶಿ ಶಾಲಾ ಕ್ಯಾಂಪಸ್ ಸಮೀಪ ಇಂತಹ ದುರಂತದಲ್ಲಿ ಮೃತಪಟ್ಟಿದ್ದಾರೆ. ಕೇರಕತ್ ಪಟ್ಟಣದ ನಿವಾಸಿಯಾಗಿದ್ದ ಅವರು ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಗಾಳಿಪಟದ ದಾರ ಕುತ್ತಿಗೆಗೆ ಸುತ್ತಿಕೊಂಡು ಗಂಭೀರ ಗಾಯಗೊಂಡರು. ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಜೌನಪುರ ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಇಂತಹ ಎರಡು ಸಾವುಗಳು ವರದಿಯಾಗಿವೆ. ಡಿಸೆಂಬರ್ 11ರಂದು ಶಾಲಾ ಶಿಕ್ಷಕ ಸಂದೀಪ್ ತ್ರಿಪಾಠಿ (45) ಗಾಜುಲೇಪಿತ ದಾರದಿಂದ ಕತ್ತು ಸೀಳಲ್ಪಟ್ಟು ಮೃತಪಟ್ಟಿದ್ದರು. ಬುಧವಾರ ಉತ್ತರಪ್ರದೇಶದ ಲಕೀಂಪುರ ಜಿಲ್ಲೆಯಲ್ಲಿ ವಲಸೆ ಕಾರ್ಮಿಕ…
ಬೆಳಗಾವಿ : ವಾಲ್ಮೀಕಿ ಭವನ ನಿರ್ಮಾಣದ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದೆ. ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ವಿರೋಧಿಸಿದ್ದಕ್ಕೆ ದೌರ್ಜನ್ಯ ನಡೆದಿದ್ದು ದಲಿತ ಸಮುದಾಯದ ಸದಾಶಿವ ಭಜಂತ್ರಿ ಕುಟುಂಬದವರ ಮೇಲೆ ಹಲ್ಲೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಗ್ರಾಮದ ಸದಾಶಿವ ಭಜಂತ್ರಿ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಕಲ್ಲು ಎಸೆದು ಶೌಚಾಲಯ, ಮನೆ, ಮಾಳಿಗೆ ದ್ವಂಸ ಮಾಡಿದ್ದಾರೆ. ವಾಲ್ಮೀಕಿ ಭವನ ನಿರ್ಮಾಣದ ಜಾಗ ಸರ್ವೆಗೆ ಎಸ್ ಟಿ ಸಮುದಾಯದ ಯುವಕರು ಬಂದಿದ್ದರು. ಈ ವೇಳೆ ವಾಲ್ಮೀಕಿ ಸಮುದಾಯ ಭವನಕ್ಕೆ ಸದಾಶಿವ ಭಜಂತ್ರಿ ಕುಟುಂಬ ವಿರೋಧ ಮಾಡಿತ್ತು. ಆಗ ಸಮುದಾಯ ಭವನಕ್ಕೆ ವಿರೋಧಿಸಿದ್ದಕ್ಕೆ ಸದಾಶಿವ ಭಜಂತ್ರಿ ಕುಟುಂಬದವರ ಮೇಲೆ ಹಲ್ಲೆ ಮಾಡಿದೆ. ಸದಾಶಿವ ಮನೆಯಲ್ಲಿದ್ದ ವಸ್ತುಗಳನ್ನು ಕಿಡಿಗೇಡಿಗಳು ಪುಡಿಪುಡಿ ಮಾಡಿದ್ದಾರೆ. ಕಲ್ಲು ಕಟ್ಟಿಗೆಯಿಂದ ಹೊಡೆದು ಬಾಗಿಲು ಮುರಿದು ಒಳ ನುಗ್ಗಿ ಹಲ್ಲೆ ಮಾಡಿದ್ದಾರೆ. ಮಹಿಳೆ ಅನ್ನೋದನ್ನ ಲೆಕ್ಕಿಸಿದೆ ಆವಾಚ್ಯವಾಗಿ ನಿಂದನೆ…
ರಾಯಚೂರು : ರಾಯಚೂರಿನ ತಿಂಥಣಿಯ ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮಾನಂದ ಶ್ರೀ ನಿಧನರಾಗಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬಳಿ ಇರುವ ಮಠದಲ್ಲಿ ಸಿದ್ದರಾಮಾನಂದ ಶ್ರೀಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 3:40ರ ಸುಮಾರಿಗೆ ಸ್ವಾಮೀಜಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿತರಿಳೆದಿದ್ದಾರೆ. ಜನವರಿ 12, 13 ಮತ್ತು 14 ರಂದು ಹಾಲುಮತದ ಉತ್ಸವ ನಡೆಸಿಕೊಟ್ಟಿದ್ದರು.2023-24 ರಲ್ಲಿ ಇದೆ ಮಠದ ಉತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದರು.
BIG NEWS : ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ ಕೇಸ್ : ತಲೆಮರೆಸಿಕೊಂಡ ಕಾಂಗ್ರೆಸ್ ಮುಖಂಡನಿಗೆ ಪೊಲೀಸರು ತೀವ್ರ ಹುಡುಕಾಟ
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ನಗರಸಭೆ ಆಯುಕ್ತೆ ಅಮೃತಾಗೌಡಗೆ ಅಶ್ಲೀಲವಾಗಿ ನಿಂದನೆ ಮಾಡಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜೀವ್ ಗೌಡನಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹೌದು ನಗರಸಭೆ ಪೌರಾಯುಕ್ತೇ ಅಮೃತಗೌಡಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದು ಅಲ್ಲದೆ, ಜೀವ ಬೆದರಿಕೆ ಹಾಕಿದ್ದ. ಬಳಿಕ ಅಮೃತ ಗೌಡ ಅವರು ರಾಜೇಗೌಡ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಈ ಹಿನ್ನೆಲೆ ಬಂಧನದ ಭೀತಿಯಿಂದ ಇದೀಗ ರಾಜೇಗೌಡ ತಲೆಮರಿಸಿಕೊಂಡಿದ್ದು ಪೊಲೀಸರು ಆತನಿಗಾಗಿ ಇದೀಗ ಶೋಧ ನಡೆಸುತ್ತಿದ್ದಾರೆ.
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ಕಾರುಣ್ಯ ರಾಮ್ ಗೆ ಇದೀಗ ಸಾಲಗಾರರ ಕಾಟ ಶುರುವಾಗಿದ್ದು, ತಂಗಿಯ ಬೆಟ್ಟಿಂಗ್ ಹುಚ್ಚಿಗೆ ಬೇಸತ್ತು ಸಿಸಿಬಿ ಪೊಲೀಸರಿಗೆ ತಂಗಿ ವಿರುದ್ಧವೇ ಕಾರುಣ್ಯ ರಾಮ್ ದೂರು ನೀಡಿದ್ದಾರೆ. ಹೌದು ಸಮೃದ್ಧಿ ರಾಮ್ ಸೇರಿದಂತೆ ಹಲವರ ವಿರುದ್ಧ ಕಾರುಣ್ಯ ದೂರು ನೀಡಿದ್ದಾರೆ ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ ವಿರುದ್ಧ ಕಾರುಣ್ಯ ದೂರು ನೀಡಿದ್ದಾರೆ. ಕಾರುಣ್ಯ ರಾಮ್ ಜೊತೆ ಮನೆಯಲ್ಲಿಯೇ ಸಮೃದ್ಧಿ ವಾಸವಿದ್ದರು. ಆನ್ಲೈನ್ ಬೆಟ್ಟಿಂಗ್ ನಲ್ಲಿ 25 ಲಕ್ಷ ರೂಪಾಯಿ ಸಮೃದ್ಧಿ ಕಳೆದುಕೊಂಡಿದ್ದಾರೆ. ಇದಕ್ಕಾಗಿ ಖಾಸಗಿ ವ್ಯಕ್ತಿಗಳಿಂದ 25 ಲಕ್ಷ ರೂಪಾಯಿ ಸಾಲ ಮಾಡಿದ್ದಳು ಇದೀಗ ಸಮೃದ್ಧಿ ಹಣ ನೀಡಿದವರಿಂದ ಕಾರುಣ್ಯ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ಕಾರುಣ್ಯ ಮನೆಯವಳಿ ಬಂದು ಗಲಾಟೆ ಮಾಡಿದ ಆರೋಪ ಕೇಳಿ ಬಂದಿದೆ. ಇದರಿಂದ ಬೇಸತ್ತ ಕಾರುಣ್ಯ ರಾಮ್ ತಂಗಿ ಸಮೃದ್ಧ ರಾಮ ಸೇರಿದಂತೆ ಹಲವರ ವಿರುದ್ಧ ಸಿಸಿಬಿ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ನಟನೆಯ ಟ್ಯಾಕ್ಸಿಕ್ ಸಿನಿಮಾ ಬಿಡುಗಡೆಯಾದ 24 ಗಂಟೆಯಲ್ಲಿಯೇ 500 ಮಿಲಿಯನ್ ಗು ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಆದರೆ ಈ ಒಂದು ಸಿನಿಮಾದಲ್ಲಿ ಅಶ್ಲೀಲ ಇರುವುದರಿಂದ ಈಗಾಗಲೇ ಸೆನ್ಸಾರ್ ಮಂಡಳಿಗೆ ದೂರು ನೀಡಲಾಗಿದೆ. ಇನ್ನು ಟಾಕ್ಸಿಕ್ ಟೀಸರ್ ನಲ್ಲಿ ನಟಿಸಿದ್ದ ನಟಿಗೆ ಈಗ ಎಲ್ಲೆಡೆ ಟೀಕೆಗಳು ಬರುತ್ತಿವೆ. ಈ ನೆಲೆಯಲ್ಲಿ ನಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಟಾಪಿಕ್ ಟೀಸರ್ ನಲ್ಲಿ ನಟ ಯಶ್ ಅವರ ಎಂಟ್ರಿಗು ಮುನ್ನ ಅಶ್ಲೀಲತೆ ಕಂಡುಬಂದಿದ್ದು ಈ ಹಿನ್ನಲೆಯಲ್ಲಿ ಟ್ಯಾಕ್ಸಿಕ್ ಸಿನಿಮಾ ವಿರುದ್ಧ ಹಲವರು ದೂರು ನೀಡಿದ್ದಾರೆ. ಬೀದರ್ ನಲ್ಲಿರುವ ನಟಿ ಹೆಸರು ಬರಲಾಗುತ್ತಿದ್ದಂತೆ ಇನ್ಸ್ಟಾಗ್ರಾಮ್ ನಲ್ಲಿ ಆಕೆಗೆ ಟೀಕೆಗಳು ಬಂದ ಹಿನ್ನೆಲೆಯಲ್ಲಿ ಆ ನಟಿ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್ ಮಾಡಿದ್ದಾರೆ.
ದಕ್ಷಿಣಕನ್ನಡ : ದಕ್ಷಿಣಕನ್ನಡದಲ್ಲಿ ಘೋರ ದುರಂತ ನಡೆದಿದ್ದು, ದೇವಸ್ಥಾನಕ್ಕೆಂದು ಹೋಗಿದ್ದ ಬಾಲಕನ ಶವ ಸಂಶಯಾಸ್ಪದ ರೀತಿಯಲ್ಲಿ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾದ ಘಟನೆ ಇಂದು ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಸಂಬೋಳ್ಯ ಎಂಬಲ್ಲಿ ನಡೆದಿದೆ. ಸಂಬೋಳ್ಯ ಎಂಬಲ್ಲಿಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಗೇರುಕಟ್ಟೆ ಪ್ರೌಢ ಶಾಲಾ ಒಂಬತ್ತನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂದಿನಂತೆ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುವ ಧನು ಪೂಜೆಗಾಗಿ ಬೆಳಗ್ಗೆ 5ರ ಸುಮಾರಿಗೆ ಮನೆಯಿಂದ ತೆರಳಿದ್ದಾನೆ. ಆದರೆ ಅತ್ತ ದೇವಸ್ಥಾನಕ್ಕೂ ಹೋಗದೆ, ಮನೆಗೂ ಹಿಂದಿರುಗದೇ ಇದ್ದಾಗ ಮನೆಯವರು ಗಾಬರಿಗೊಂಡು ಸ್ಥಳೀಯರೊಂದಿಗೆ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾಲಕ ಹೋಗಿದ್ದ ದಾರಿಯಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದು, ಚಿರತೆ ಕೊಂಡೊಯ್ದಿರಬಹುದು ಎಂಬ ಸಂಶಯ ಸ್ಥಳೀಯರಲ್ಲಿ ಮೂಡಿತ್ತು. ತಕ್ಷಣ ಪೊಲೀಸರಿಗೆ ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ತಲೆಯ ಹಿಂಭಾಗ ಗಂಭೀರ ರೀತಿಯಲ್ಲಿ ಎರಡು ಗಾಯ…
ಧಾರವಾಡ : ಧಾರವಾಡದಲ್ಲಿ ಭೀಕರವಾದ ಕೊಲೆಯಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಬಾಲಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ ಸಂಜೆ ಈ ಒಂದು ಕೊಲೆ ನಡೆದಿದೆ. ಕೊಲೆಯಾದ ಬಾಲಕನನ್ನು ನಿಂಗರಾಜ್ ಅವರಿ (16) ಎಂದು ತಿಳಿದುಬಂದಿದೆ ಅನುದಾನಿತ ಶಾಲೆಯಲ್ಲಿ ಕೊಲೆಯಾದ ನಿಂಗರಾಜ್ ಎಸ್ ಎಸ್ ಎಲ್ ಸಿ ಓದುತ್ತಿದ್ದ ಕ್ಷುಲ್ಲಕ ವಿಚಾರವಾಗಿ ಜಗಳ ಮಾಡಿಕೊಂಡು ಮೂವರು ಅಪ್ರಾಪ್ತ ಬಾಲಕರು ಸೇರಿ ನಿಂಗರಾಜನನ್ನು ಕೊಲೆ ಮಾಡಿದ್ದಾರೆ. ಸದ್ಯ ಪೊಲೀಸರು ಮೂವರು ಅಪರಾಪ್ತರನ್ನು ಅರೆಸ್ಟ್ ಮಾಡಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














