Author: kannadanewsnow05

ಹುಬ್ಬಳ್ಳಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇತ್ತೀಚಿಗೆ ಮತ್ತೆ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಮರಳಿದ್ದಾರೆ ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ತಿಂಗಳು ಕಳೆದ ಮೇಲೆ‌ ಶೆಟ್ಟರ್ ಅವರಿಂದ ಪಶ್ಚಾತ್ತಾಪದ ಹೇಳಿಕೆ ಹೊರಬರುತ್ತೆ ನೋಡ್ತಾ ಇರಿ ಎಂದು ತಿಳಿಸಿದ್ದಾರೆ. https://kannadanewsnow.com/kannada/cafe-bomb-blast-nia-conducts-9-hour-search-at-bellary-central-bus-stand/ ಹುಬ್ಬಳ್ಳಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರವೇ ಫ್ಲಡ್ ಗೇಟ್ ಓಪನ್ ಆಗುತ್ತೆ ಎಂಬ ಮಾಜಿ‌ ಸಿಎಂ‌ ಜಗದೀಶ ಶೆಟ್ಟರ್ ಹೇಳಿಕೆ ಬಗ್ಗೆ ಕೇಳಿದಾಗ, ಈ ತಿಂಗಳು ಕಳೆದ ಮೇಲೆ‌ ಶೆಟ್ಟರ್ ಅವರಿಂದ ಪಶ್ಚಾತ್ತಾಪದ ಹೇಳಿಕೆ ಹೊರಬರುತ್ತೆ ನೋಡ್ತಾ ಇರಿ. ಬಿಜೆಪಿಯಲ್ಲಿ ಅವರನ್ನು ಕಡೆಗಣಿಸಲಾಗಿತ್ತು ಎಂದು ಹೇಳಿದರು. https://kannadanewsnow.com/kannada/shivamogga-prof-sharath-ananthamurthy-the-new-vice-chancellor-of-kuvempu-university-has-been-sworn-in/ ಆದರೆ ನಾವು ಅವರನ್ನು ಕರೆತಂದು ಟಿಕೆಟ್‌ ನೀಡಿದೆವು. ಚುನಾವಣೆಯಲ್ಲಿ ಸೋತರೂ ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಿದೆವು. ಆದರೂ ಅವರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಅವರು ಪಶ್ಚಾತ್ತಾಪ ಪಡಲಿದ್ದಾರೆ…

Read More

ಬಳ್ಳಾರಿ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್ಐಎ ಅಧಿಕಾರಿಗಳು ತೀವ್ರ ಶೋಧ ಕಾರ್ಯಾಚರಣೆ ನಡೆಸುತಿದ್ದು ಶಂಕಿತ ಉಗ್ರ ಬಸ್ ಮೂಲಕ ತುಮಕೂರು ಮಾರ್ಗವಾಗಿ ಬಳ್ಳಾರಿಗೆ ಪ್ರಯಾಣಿಸಿ ದರ ಕುರಿತು ಮಾಹಿತಿ ಬಂದಿದೆ ಎನ್ನಲಾಗಿದೆ. https://kannadanewsnow.com/kannada/state-govt-to-organise-rythu-solar-shakti-mela-on-march-9-know-what-will-happen-here-are-the-details/ ಈ ಹಿನ್ನೆಲೆಯಲ್ಲಿ ಶಂಕಿತ ಉಗ್ರನ ಬೆನ್ನತ್ತಿದ ಎನ್ಐಎ ತಂಡ ಬಳ್ಳಾರಿ ಕೇಂದ್ರ ನಿಲ್ದಾಣದಿಂದ ಬಸ್ ಬದಲಾಯಿಸಿ ಪ್ರಯಾಣಿಸಿದ್ದಾನೆ ಎಂದು ಹೇಳಲಾಗುತ್ತಿದೆ.ಶಂಕಿತ ಉಗ್ರ ಆಗಮನದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಇದೀಗ NIA ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ.ನಿನ್ನೆ ತಡರಾತ್ರಿಯಿಂದ ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಎನ್ಐಎ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರ. https://kannadanewsnow.com/kannada/ramzan-govt-issues-schedule-of-schools-in-the-state/ ನಿನ್ನೆ ತುಮಕೂರು ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ NIA ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ನಿನ್ನೆ ತಡರಾತ್ರಿ ಬಳ್ಳಾರಿ ಕೇಂದ್ರ ಬಸ್ ನಿಲ್ದಾಣಕ್ಕೆ ತೆರಳಿದ್ದಾರೆ.ಅಲ್ಲಿ ಸತತವಾಗಿ ಒಂಬತ್ತು ಗಂಟೆಗಳಿಂದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/hridaya-jyothi-scheme-to-be-launched-in-the-name-of-puneeth-rajkumar-minister-dinesh-gundu-rao/

Read More

ಕೋಲಾರ : ಕರುನಾಡಿನ ಅಪ್ಪು ಪುನೀತ್ ರಾಜಕುಮಾರ್ ಅವರು ಹೃದಯಾಘಾತದಿಂದ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹೃದಯ ಸಂಜೀವಿನಿ ಯೋಜನೆಯನ್ನು ಪ್ರಾರಂಭಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. https://kannadanewsnow.com/kannada/defence-exports-target-of-rs-50000-crore-by-2028-29-defence-minister-rajnath-singh/ ಕೆಜಿಎಫ್‌ನ ಸಾರ್ವಜನಿಕರ ಆಸ್ಪತ್ರೆಗೆ ಭೇಟಿ ನೀಡಿ, ೫೦ ಲಕ್ಷ ರು.ಗಳ ವೆಚ್ಚದಲ್ಲಿ ಎರಡು ಅತ್ಯಾಧುನಿಕ ಆ್ಯಂಬುಲೆನ್ಸ್, ಬೆಮಲ್ ಸಿಎಸ್‌ಆರ್ ಯೋಜನೆಯಡಿ ನೀಡಿರುವ ಒಂದು ಸಾವಿರ ಲೀಟರ್ ಆಕ್ಸಿಜನ್ ಪ್ಲಾಂಟ್, ಉಚಿತ ಬ್ಲಾಕ್, ಪಬ್ಲಿಕ್ ಹೆಲ್ತ್ ಲ್ಯಾಬ್, ಅತ್ಯಾಧುನಿಕ ಇಸಿಜಿ ಯಂತ್ರದ ಉದ್ಘಾಟಿಸಿ ಮಾತನಾಡಿದರು. https://kannadanewsnow.com/kannada/pro-pakistan-sloganeering-case-mohammad-shafi-nashapudi-produced-before-court/ ನಟ ಪುನೀತ್ ರಾಜಕುಮಾರಗೆ ಹೃದಯಾಘಾತ ಯಾವ ಮಟ್ಟದಲ್ಲಿ ಇತ್ತು ಎಂಬುದು ತಿಳಿಯದೆ ಪುನಿತ್ ರಾಜ್‌ಕುಮಾರ್ ಮೃತಪಟ್ಟಿದ್ದರು. ಈ ಹಿನ್ನಲೆಯುಲ್ಲಿ ಮುಖ್ಯಮಂತ್ರಿ ಪ್ರತಿ ತಾಲೂಕಿನ ಆರೋಗ್ಯ ಕೇಂದ್ರಗಳಲ್ಲಿ ಪುನಿತ್ ರಾಜ್‌ಕುಮಾರ್ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಪ್ರಾರಂಭಿಸಲಿದ್ದು, ಇನ್ನೊಂದು ವಾರದಲ್ಲಿ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ ಎಂದರು. https://kannadanewsnow.com/kannada/shocking-cancer-causing-chemical-detected-in-clinic-clearcil-acne-treatments-us-lab-report/

Read More

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪ್ರ ಘೋಷಣೆ ಕೂಗಿದ ಪ್ರಕಾರದಲ್ಲಿ ಬಂದಿತನಾಗಿದ್ದ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಹಮ್ಮದ್ ಶಫಿ ನಾಶಿಪುಡಿಯನ್ನು ಇಂದು ಪೊಲೀಸರು ಬೆಂಗಳೂರಿನ 39ನೇ ACMM ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. https://kannadanewsnow.com/kannada/big-update-74-foeticide-case-in-nelamangala-police-close-hospital/ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೊಹಮ್ಮದ್ ಶಫಿ ನಾಶಪುಡಿಯನ್ನು ಇದೀಗ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಬೆಂಗಳೂರಿನ 39ನೇ ಎಸಿಎಂ ನ್ಯಾಯಾಲಯಕ್ಕೆ ನಾಶಿ ಪುಡಿಯನ್ನು ಪೊಲೀಸರು ಹಾಜರು ಪಡಿಸಿದ್ದಾರೆ. https://kannadanewsnow.com/kannada/mahadevappa-makes-such-statements-only-during-elections-ks-eshwarappa/ ಕಳೆದ ಒಂದು ದಿನಗಳಿಂದ ನಾಶಿಪುಡಿ ಪೊಲೀಸ್ ಕಸ್ಟಡಿಯಲ್ಲಿದ್ದ. ಇಂದು ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದಾರೆ. ನಿನ್ನೆನಾಶಿಪುಡಿಯನ್ನು ಒಂದು ದಿನದ ಮಟ್ಟಿಗೆ ಪೊಲೀಸ್ ಪೊಲೀಸ್ ಕಸ್ಟಡಿಗೆ ನೀಡಿ ಅದೇಶಿಸಿತ್ತು.

Read More

ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವವಂತ ಘಟನೆ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ ನಡೆದಿದ್ದು, ಒಟ್ಟು 74 ಭ್ರೂಣ ಹತ್ಯೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಸ್ಪತ್ರೆಯನ್ನು ನೆಲಮಂಗಲ ಠಾಣೆಯ ಪೊಲೀಸರು ಕ್ಲೋಸ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ. https://kannadanewsnow.com/kannada/mahadevappa-makes-such-statements-only-during-elections-ks-eshwarappa/ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದ್ದು, ಭ್ರೂಣ ಹತ್ಯೆ, ಭ್ರೂಣ ಪತ್ತೆ ನಿಷೇಧವಿದ್ದರೂ ಈ ಆಸ್ಪತ್ರೆಯ ವೈದ್ಯರು 73 ಭ್ರೂಣ ಹತ್ಯೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಇದೀಗ ನೆಲಮಂಗಲ ಪೊಲೀಸ್ ಠಾಣೆ ಪೊಲೀಸರು ಆಸ್ಪತ್ರೆಯನ್ನು ಕ್ಲೋಸ್ ಮಾಡಿಸಿದ್ದಾರೆ. https://kannadanewsnow.com/kannada/bengaluru-police-issues-warning-to-vehicle-owners-who-want-to-book-hsrp/ ಡಾಕ್ಟರ್ ರವಿಕುಮಾರ್ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಘಟನೆ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಆಸ್ಪತ್ರೆ ಮೇಲೆ ದಾಳಿ ನಡೆಸಿದಾಗ ಭ್ರೂಣ ಹತ್ಯೆ ದಂಧೆ ನಡೆಸಿರುವುದು ಬಯಲಾಗಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಡಾ. ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಆಸ್ಪತ್ರೆಯನ್ನು ನೆಲಮಂಗಲ ಪೊಲೀಸ್…

Read More

ಶಿವಮೊಗ್ಗ : ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು ವಿಚಾರಕ್ಕೆ ಸಂಬಂಧ ಪಟ್ಟಂತೆ ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರ ಸಚಿವ ಡಾ. ಎಚ್ ಸಿ ಮಾದೇವಪ್ಪ ಇಂತಹ ಹೇಳಿಕೆ ನೀಡುತ್ತಾರೆ ಎಂದು ಕಿಡಿ ಕಾರಿದರು. https://kannadanewsnow.com/kannada/breaking-police-have-received-a-tip-off-that-a-suspected-terrorist-has-come-towards-tumkur-g-sudhakaran-parameshwara/ ಶಿವಮೊಗ್ಗದಲ್ಲಿ ಮಾಜಿ ಶಾಸಕ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದು, ಚುನಾವಣಾ ಸಂದರ್ಭದಲ್ಲಿ ಈ ಕೂಗು ಕೇಳಿ ಬರುತ್ತದೆ.ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಕುತಂತ್ರ ಮಾಡುತ್ತಿದೆ.ಚುನಾವಣೆ ವೇಳೆ ಮಾತ್ರ ಸಚಿವ ಡಾ. ಮಾದೇವಪ್ಪ ಈ ರೀತಿ ಹೇಳಿಕೆ ಹೇಳುತ್ತಾರೆ. ಎರಡು ದಿನದಿಂದ ಡಿಕೆ ಶಿವಕುಮಾರ್ ಬೆಂಬಲಿಗರು ಕೂಡ ಶುರು ಮಾಡಿದ್ದಾರೆ ಎಂದರು. https://kannadanewsnow.com/kannada/breaking-cafe-bomb-blast-another-photo-of-terrorist-travelling-in-bmtc-bus-goes-viral/ ಡಿಕೆ ಶಿವಕುಮಾರ್ ಸಿಎಂ ಆಗೇ ಬಿಟ್ರೇನೋ ಎಂದು ಕೂಗು ಎಬ್ಬಿಸಿದ್ದಾರೆ. ಇದೀಗ ಮಾದೇವಪ್ಪ ದಲಿತ ಸಿಎಂ ಕೂಗು ಎಬ್ಬಿಸಿದ್ದಾರೆ. ಡಾ. ಪರಮೇಶ್ವರರನ್ನು ಸಿಎಂ ಮಾಡುತ್ತೇವೆ ಅಂದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಬೆಂಬಲಿಗರು ಮುಂದೆ ಬರುತ್ತಾಾರಾ? ಎಂದು ಪ್ರಶ್ನಿಸಿದರು.ಗುಂಪುಗಾರಿಕೆಯಿಂದ ದಲಿತ ಸಿಎಂ…

Read More

ತುಮಕೂರು : ಬೆಂಗಳೂರಿನ ರಾಮೇಶ್ವರಂ ಕೆರೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ಆರು ದಿನ ಕಳೆದರೂ ಕೂಡ ಇದುವರೆಗೂ ಪತ್ತೆಯಾಗಿಲ್ಲ .ಹೀಗಾಗಿ NIA ತಂಡ ಈಗ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಶಂಕಿತ ಉಗ್ರ ತುಮಕೂರಿನ ಕಡೆ ಬಂದಿರುವ ಕುರಿತು ಪೊಲೀಸರಿಗೆ ಸುಳಿವು ಸಿಕ್ಕಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು. https://kannadanewsnow.com/kannada/breaking-cafe-bomb-blast-another-photo-of-terrorist-travelling-in-bmtc-bus-goes-viral/ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ತುಮಕೂರಿನ ಕಡೆ ಬಂದಿರುವ ಕುರಿತು ಪೊಲೀಸರಿಗೆ ಲೀಡ್ ಸಿಕ್ಕಿದೆ. ಬಸ್ನಲ್ಲಿ ಈ ಕಡೆ ಬಂದಿದ್ದಾನೆ ಎಂದು ಲೀಡಿ ಸಿಕ್ಕಿದೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು. https://kannadanewsnow.com/kannada/breaking-three-arrested-for-gang-raping-minor-girl-in-tumkur/ ಬಸ್ನಲ್ಲಿ ಉಗ್ರ ತುಮಕೂರಿಗೆ ಬಂದಿದ್ದಾನೆ ಎನ್ನುವುದರ ಕುರಿತು ಲೀಡ್ ಸಿಕ್ಕಿದೆ ಎಂದು ಪೊಲೀಸರಿಗೆ ಸುಳಿವು ಸಿಕ್ಕಿದೆ ಅಲ್ಲದೆ ಬಳ್ಳಾರಿ ಸೇರಿದಂತೆ ಹಲವು ಸ್ಥಳಗಳಿಗೆ ಅಧಿಕಾರಿಗಳ ತಂಡ ಹೋಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡುತ್ತಿದೆ. https://kannadanewsnow.com/kannada/breaking-break-2nd-puc-student-commits-suicide-by-hanging-herself-from-train-in-shivamogga/ ಅಲ್ಲದೆ ಶಂಕಿತ…

Read More

ಬೆಂಗಳೂರು : ಬೆಂಗಳೂರಿನ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಇದೀಗ ಶಂಕಿತ ಉಗ್ರನ ಮತ್ತೊಂದು ಫೋಟೋ ವೈರಲ್ ಆಗಿದ್ದು ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಫೋಟೋ ಇದೀಗ ಸಿಸಿಟಿವಿ ಕ್ಯಾಮೆರಾ ದೃಶ್ಯದಲ್ಲಿ ಸೆರೆಯಾಗಿದೆ. ಮಾರ್ಚ್ 1 ರಂದು 11:45 ನಿಮಿಷಕ್ಕೆ ಈ ಆರೋಪಿ ಬಿಎಂಟಿಸಿ ಬಸ್ ಹತ್ತಿದ್ದಾನೆ. ಬಸ್ನಲ್ಲಿದ್ದ ಸಿಸಿ ಕ್ಯಾಮೆರಾ ನೋಡಿದ ಶಂಕಿತ ಉಗ್ರ ಬಸ್ಸಿನ ಸಿ ಸಿ ಕ್ಯಾಮೆರಾದಿಂದ ತಪ್ಪಿಸಿಕೊಳ್ಳಲು ಶಂಕಿತ ಉಗ್ರ ಕಳ್ಳಾಟ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಜನರು ಗಾಯಗೊಂಡಿದ್ದಾರೆ.ಎನ್‌ ಐಎ ಫೋನ್ ಸಂಖ್ಯೆಗಳು ಮತ್ತು ಇಮೇಲ್ಗಳನ್ನು ಹಂಚಿಕೊಂಡಿದೆ, ಅಲ್ಲಿ ಜನರು ಪ್ರಮುಖ ಶಂಕಿತರಾಗಿ ಹೊರಹೊಮ್ಮಿದ ಅಪರಿಚಿತ ವ್ಯಕ್ತಿಯ ಬಗ್ಗೆ ಮಾಹಿತಿಯನ್ನು ಕಳುಹಿಸಬಹುದು. ಮಾಹಿತಿದಾರರ ಗುರುತನ್ನು ಗೌಪ್ಯ ವಾಗಿಡಲಾಗುವುದು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಭರವಸೆ ನೀಡಿದೆ.

Read More

ತುಮಕೂರು : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು ತುಮಕೂರಿನಲ್ಲಿ ಬಾಲಕಿಯ ಮೇಲೆ ದುರುಳರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದು, ಘಟನೆಯ ನಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸಿದ್ದಗಂಗಾ ಮಠದ ಜಾತ್ರೆಗೆ ಬಂದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಬೆಟ್ಟದ ಬಳಿ ಕುಳಿತಿದ್ದ ಬಾಲಕಿಯನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಗೆಳೆಯನ ಜೊತೆ ಇದ್ದಾಗ ವಿಡಿಯೋ ರೆಕಾರ್ಡ್ ಮಾಡಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ. ನಂತರ ಆರೋಪಿಗಳು ವಿಡಿಯೋ ಬಿಡುಗಡೆಗೊಳಿಸುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾರೆ .ಈ ವೇಳೆ ಬಾಲಕಿಗೆ ಬೆದರಿಕೆ ಹಾಕಿ ಆರೋಪಿಗಳು ಅತ್ಯಾಚಾರ ಎಸಗದ್ದಾರೆ ಎಂದು ಆರೋಪಿಸಲಾಗುತ್ತಿದೆ.ಘಟನೆಗೆ ಸಂಬಂಧಿಸಿದಂತೆ ಇದೀಗ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ತುಮಕೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Read More

ಶಿವಮೊಗ್ಗ : ದ್ವಿತೀಯ ಪಿಯುಸಿ ಪರೀಕ್ಷಾ ಭಯದಿಂದ ವಿದ್ಯಾರ್ಥಿನಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಬಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಭೂಮಿಕ (18) ಎನ್ನುವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ತಾಳಗುಪ್ಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ದ್ವಿತೀಯ ಪಿಯುಸಿಯ ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಒಂದು ಪರೀಕ್ಷಾ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಂಕೆ ವ್ಯಕ್ತಪಡಿಸಲಾಗುತ್ತಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರೀಕ್ಷೆ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

Read More