Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಶಿವಮೊಗ್ಗದ ಕೋಟೆ ಗಂಗೂರಿನ ಮಂಡಿ ಬಡಾವಣೆಯಲ್ಲಿ ಈ ಒಂದು ಭೀಕರ ಅಗ್ನಿ ದುರಂತ ಅವಘಡವಿಸಿದೆ. ಬೈಲಪ್ಪ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಬೈಲಪ್ಪ ಕುಟುಂಬಸ್ಥರು ಕೂಡಲೇ ಮನೆಯಿಂದ ಹೊರಬಂದ ತಕ್ಷಣ ಸಿಲಿಂಡರ್ ಸ್ಫೋಟಗೊಂಡಿದೆ. ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಮನೆ ಗೋಡೆಗಳಲ್ಲಿ ಬಿರುಕು ಮೂಡಿದೆ. ಅಲ್ಲದೇ ಸ್ಫೋಟದ ತೀವ್ರತೆಗೆ ಮೇಲ್ಚಾವಣಿ ಹಾರಿಹೋಗಿದೆ. ಮನೆಯಲ್ಲಿದ್ದ ಬಟ್ಟೆ ದವಸ ಧಾನ್ಯ ಮತ್ತಿತರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕತಾಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.
ರಾಮನಗರ : ವಾಣಿಜ್ಯ ಮಳಿಗೆಗಳ ನಿರ್ಮಾಣ ಕಟ್ಟಡದ ಕಮಾನು ನಿರ್ಮಿಸುವ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದು ಓರ್ವ ಕಾರ್ಮಿಕ ಸ್ಥಳದಲ್ಲಿ ಮತ್ತೊರವಣಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ನಡೆದಿದೆ. ಹೌದು ನಿರ್ಮಾಣ ಹಂತದ ಕಟ್ಟಡ ಕಮಾನು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಕನಕಪುರ ಪಟ್ಟಣದ ರೂರಲ್ ಕಾಲೇಜು ಬಳಿ ಈ ಒಂದು ಘಟನೆ ಸಂಭವಿಸಿದೆ. ವಾಣಿಜ್ಯ ಮಳಿಗೆಗಳ ನಿರ್ಮಾಣ ಕಾಮಗಾರಿ ವೇಳೆ ಈ ಒಂದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಮತ್ತೋರ್ವ ಕಾರ್ಮಿಕ ಗಾಯಗೊಂಡಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5 ಪ್ರಮುಖ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಕೂಡ ಒಂದು. ಕಾಂಗ್ರೆಸ್ ಸರ್ಕಾರ ರಾಜ್ಯದ ಬಡ ಜನರಿಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುತ್ತಿದ್ದು, ಇದೀಗ ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದೆ. ಒಂದು ವೇಳೆ ಗೃಹಜ್ಯೋತಿ ಯೋಜನೆಗೆ ಸರ್ಕಾರ ಹಣ ನೀಡದೆ ಹೋದರೆ ಗ್ರಾಹಕರಿಂದ ವಸೂಲಿ ಮಾಡಲಾಗುತ್ತದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ ಸ್ಪಷ್ಟನೆ ನೀಡಿದ್ದಾರೆ. ಹೌದು ಈ ಕುರಿತು ಬೆಂಗಳೂರಿನಲ್ಲಿ ಬೆಸ್ಕಾಂ ಎಂಡಿ ಶಿವಶಂಕರ್ ಸ್ಪಷ್ಟನೆ ನೀಡಿದ್ದು, ಗೃಹಜ್ಯೋತಿ ಯೋಜನೆಗೆ ಮುಂಗಡ ಅನುದಾನ ನಮಗೆ ನೀಡಲಾಗಿದೆ.ಈ ಯೋಜನೆ ಸಂಬಂಧ ನಮ್ಮಲ್ಲಿ ಮುಂಗಡ 50 ಕೋಟಿ ರೂಪಾಯಿ ಇದೆ. ಸರ್ಕಾರ ಮುಂಗಡ ಹಣ ಕೊಡದೆ ಇದ್ದಲ್ಲಿ ಗ್ರಾಹಕರು ಕೊಡಬೇಕು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ ತಿಳಿಸಿದರು. ಆದರೆ ಸರ್ಕಾರ ನಮಗೆ ಪ್ರತಿ ತಿಂಗಳು ಮುಂಗಡ ಹಣ ಬಿಡುಗಡೆ ಮಾಡುತ್ತಿದೆ.ಹಾಗಾಗಿ ಗ್ರಾಹಕರು ಬಿಲ್ ಪಾವತಿಸಬೇಕಾದ ಪ್ರಮೇಯ ಬರುವುದಿಲ್ಲ. ರಾಜ್ಯ ಸರ್ಕಾರ…
ಮಂಡ್ಯ : ಮಂಡ್ಯದಲ್ಲಿ ಸಾಲ ಬಾದೆಗೆ ಬೇಸತ್ತು ಒಂದೇ ಕುಟುಂಬದ ಮೂವರು ಮಂಡ್ಯ ತಾಲೂಕಿನ ಯಲಿಯೂರು ಬಳಿ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಮೊದಲು ಮೂವರು ವಿಷ ಸೇವಿಸಿದ್ದಾರೆ. ಬಳಿಕ ವಿಸಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೌದ್ ಗಂಜಾಂ ನಿಂದ ಮೂವರು ಆಟೋದಲ್ಲಿ ವಿಸಿ ನಾಲೆ ಬಳಿ ಬಂದಿದ್ದಾರೆ. ನಾಲೆ ಮೇಲೆ ಆಟವನ್ನು ನಿಲ್ಲಿಸಿದ್ದಾರೆ ನಾಲೆ ಬಳಿಯೇ ವಿಷ ಕುಡಿದು ನೀರಿಗೆ ಹಾರಿದ್ದಾರೆ. ಮಂಡ್ಯ ತಾಲೂಕಿನ ಚಂದಗಾಲು ಬಳಿ ಘಟನೆ ನಡೆದಿದೆ. ಮೊದಲು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆ ಶರಣಾಗಿದ್ದಾರೆ. ಮಂಡ್ಯ ತಾಲೂಕಿನ ಚಂದಗಾಲು ಬಳಿ ವಿಸಿ ನಾಲೆಗೆ ಹಾರಿ ಶರಣಾಗಿದ್ದಾರೆ ಎಂದು ಮಂಡ್ಯ ಜಿಲ್ಲೆಯ ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದರು. ಘಟನೆ ಹಿನ್ನೆಲೆ? ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡವರು…
ವಿಜಯಪುರ : ಇತ್ತೀಚಿಗೆ ವಿಜಯಪುರ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಯಿತು.ಈ ಒಂದು ಜಯಂತಿಯಲ್ಲಿ ಒಂದು ಕಡೆ ಶಿವಾಜಿ ಮಹಾರಾಜರ ಭಾವಚಿತ್ರ ಹಿಡಿದುಕೊಂಡು ಯುವಕರು ಕುಣಿದು ಕುಪ್ಪಳಸಿದರೆ ಮತ್ತೊಂದು ಕಡೆ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯಿ ಫೋಟೋ ಹಿಡಿದುಕೊಂಡು ಡ್ಯಾನ್ಸ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಹೌದು ವಿಜಯಪುರದಲ್ಲಿ ಕೆಲ ಯುವಕರು ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯಿ ಭಾವ ಚಿತ್ರ ಹಿಡಿದು ನೃತ್ಯ ಮಾಡಿದ್ದು, ಇದೀಗ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ವಿಜಯಪುರ ನಗರದಲ್ಲಿ ನಡೆದ ಶಿವಾಜಿ ಜಯಂತಿ ಉತ್ಸವದ ಅಂಗವಾಗಿ ಮೆರವಣಿಗೆ ನಡೆಯಿತು. ಈ ವೇಳೆ ಮೆರವಣಿಗೆಯಲ್ಲಿ ಕೆಲ ಯುವಕರು ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯಿ ಫೋಟೊ ಹಿಡಿದು ಡಾನ್ಸ್ ಮಾಡಿದ್ದಾರೆ. ಶಿವಾಜಿ ಮಹಾರಾಜರ ಮೆರವಣಿಗೆ ಸಂದರ್ಭದಲ್ಲಿ ಒಂದು ಕಡೆ ಕೇಸರಿ ಧ್ವಜ, ಇನ್ನೊಂದೆಡೆ ಶಿವಾಜಿ ಮಹಾರಾಜರು ಭಾವಚಿತ್ರವಿರುವ ಕೇಸರಿ ಧ್ವಜಗಳ ನಡುವೆ ಗ್ಯಾಂಗ್ ಸ್ಟಾರ್ ಪೊಟೋ ಕೂಡ ಕಂಡು ಬಂದಿದೆ. ವಿಜಯಪುರ ನಗರದ ಗಾಂಧಿ…
ಮಂಡ್ಯ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರೂ ಕೂಡ ಸಿಬ್ಬಂದಿಗಳ ಕಿರುಕುಳ ನಿಲ್ಲುತಿಲ್ಲ.. ಇದೀಗ ಮಂಡ್ಯ ಜಿಲ್ಲೆಯ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಯಲಿಯೂರು ಬಳಿ ನಡೆದಿದೆ. ಹೌದು ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿವಾಸಿಗಳು ಎಂದು ಬಂದಿದೆ. ಮಂಡ್ಯ ತಾಲೂಕಿನ ವಿ ಸಿ ನಾಲಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಾಸ್ತಪ್ಪ (65) ಪತ್ನಿ ರತ್ನಮ್ಮ (45) ಮಗಳು ಲಕ್ಷ್ಮಿ (18) ಎಂದು ತಿಳಿದುಬಂದಿದೆ. ಪತ್ನಿ ಮಗಳೊಂದಿಗೆ ಆತ್ಮಹತ್ಯೆಗೆ ಮಾಸ್ತಪ್ಪ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಶ್ರೀರಂಗಪಟ್ಟಣದ ಗಂಜಾಂ ನಿವಾಸಿಯಾಗಿರುವ ಮೃತರು ಎಂದು ತಿಳಿದುಬಂದಿದ್ದು, ಮಾಸಪ್ಪ ಆಟೋ ಚಾಲಕರಾಗಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬರ ಮರೆತಮೃತ ದೇಹ ಪತ್ತೆಗಾಗಿ…
ಸೊಲ್ಲಾಪುರ : ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ, ಕಳೆದ ಎರಡು ದಿನಗಳ ಹಿಂದೆ ಬೆಳಗಾವಿಯ ಸೂಳೆಬಾವಿ ಹಾಗೂ ಬಾಳೆಕುಂದ್ರಿ ರಸ್ತೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮಹಾದೇವ್ ಹುಕ್ಕೇರಿ ಮೇಲೆ ಮಹಾರಾಷ್ಟ್ರದ ಪುಂಡರು ಹಲ್ಲೆ ನಡೆಸಿದ್ದರು. ಅದಾದ ಬಳಿಕ ಕರ್ನಾಟಕ ಹಾಗು ಮಹಾರಾಷ್ಟ್ರದಲ್ಲಿ ಹಲವಾರು ಬೆಳವಣಿಗೆ ಆದವು. ಇದೀಗ ಸೋಲಾಪುರದಲ್ಲಿ ಕೆಎಸ್ಆರ್ಟಿಸಿ ಬಸ್ ತಡೆದು ಬಸ್ಗೆ ಕೇಸರಿ ಬಣ್ಣ ಎರಚಿ ಶಿವಸೇನೆ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಹೌದು ಶಿವಸೇನೆ ಕಾರ್ಯಕರ್ತರು ಕರ್ನಾಟಕದ ಮತ್ತೊಂದು ಬಸ್ ಅಡ್ಡಗಟ್ಟಿ ದರ್ಪ ಮೆರೆದಿದ್ದಾರೆ.ಮಹಾರಾಷ್ಟ್ರದ ಸೋಲಾಪುರ ಪಟ್ಟಣದಲ್ಲಿ ಶಿವಸೇನೆ ಪುಂಡರ ಅಟ್ಟಹಾಸ ಇದೀಗ ಮಿತಿ ಮೀರಿದ್ದು, ಬಸ್ ಮೇಲೆ ಕೇಸರಿ ಬಣ್ಣ ಬಳಿದು ಪುಂಡಾಟಿಗೆ ಮೆರೆದಿದ್ದಾರೆ. ಅಲ್ಲದೆ ನಿನ್ನೆ ಕೊಳಪುರದಲ್ಲಿ ಕೆಎಸ್ಆರ್ಟಿಸಿ ಸಂಸ್ಥೆಯ ಅಂಬಾರಿ ಬಸ್ ಮೇಲೆ ಜೈ ಮಹಾರಾಷ್ಟ್ರ ಎಂದು ಮಸಿ ಬಳಿದು ಪುಂಡಾಟಿಕೆ ಮೆರೆದಿದ್ದರು. ರಾಜ್ಯದ ಬಸ್ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದು ಚಾಲಕ ನಿರ್ವಾಹಕನಿಗೂ ಜೈ ಮಹಾರಾಷ್ಟ್ರ ಅನ್ನುವಂತೆ ಬಲವಂತ ಮಾಡಿದ್ದಾರೆ.…
ಮೈಸೂರು : ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗೆ ಅವಾಕಾಶ ನೀಡುವಂತೆ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮೀಕ್ಷೆ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿದೆ. ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಅನುಮತಿ ನೀಡಿದೆ. ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಇದೆ ವೇಳೆ ಹೈಕೋರ್ಟ್ ನಿರ್ದೇಶನ ನೀಡಿದ್ದು 1 ಲಕ್ಷ ರೂಪಾಯಿ ಬಾಂಡ್ ನೀಡಲು ಪ್ರತಿಭಟನೆಯ ಆಯೋಜಕರಿಗೆ ನಿರ್ದೇಶನ ನೀಡಲಾಗಿದೆ.ಮಧ್ಯಾಹ್ನ 3:30ರ ಬಳಿಕ ಪ್ರತಿಭಟನೆಗೆ ಅವಕಾಶ ನೀಡಲು ಸೂಚನೆ ನೀಡಿ, ಮೈಸೂರಿನ ಪೊಲೀಸ್ ಆಯುಕ್ತರಿಗೆ ನ್ಯಾ.ದೇವದಾಸ್ ಅವರಿದ್ದ ಪೀಠ ಅವರಿದ್ದ ಪೀಠ ಸೂಚನೆ ನೀಡಿದೆ. ಮೈಸೂರಿ ಫುಟ್ಬಾಲ್ ಮೈದಾನದಲ್ಲಿ ಬಿಜೆಪಿ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿದೆ. ಪ್ರತಿಭಟನೆ ಶಾಂತಿಯುತವಾಗಿರಬೇಕು. ಪ್ರತಿಭಟನೆಯ ಸಂಪೂರ್ಣ ಚಿತ್ರೀಕರಣ ಮಾಡಬೇಕು. ಶಾಂತಿಭಂಗವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಅಕಸ್ಮಾತ್ ಅಹಿತಕರ ಘಟನೆ ನಡೆದರೆ ಅರ್ಜಿದಾರರೇ ಹೊಣೆ…
ತುಮಕೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ತುಮಕೂರು ಜಿಲ್ಲಾ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ನಡೆಸಲು ಜಿಲ್ಲಾ ಪಂಚಾಯತ್ ಸಭಾಂಗಣಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಉದಯಗಿರಿ ಗಲಾಟೆಗೆ ಯಾರು ಕಾರಣಕರ್ತರಾಗಿದ್ದರು ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ. ಈ ಸಂದರ್ಭದಲ್ಲಿ ಬಿಜೆಪಿಯವರು ಘಟನೆಯನ್ನು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಂಡು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು. ಬಿಜೆಪಿಯವರು ಮೈಸೂರಿನಲ್ಲಿ ಇಂದು ಪ್ರತಿಭಟನೆ ಮಾಡಲು ಅನುಮತಿ ಕೋರಿ ಪೊಲೀಸರಿಗೆ ಮನವಿ ಮಾಡಿದ್ದರು. ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಈ ವಿಚಾರಚಾಗಿ ಅನುಮತಿ ಕೋರಿ ಹೈಕೋರ್ಟ್ಗೆ ಹೋಗಿದ್ದಾರೆ. ಕೋರ್ಟ್ನಲ್ಲಿ ಏನು ತೀರ್ಮಾನ ಬರುತ್ತದೆಯೇ ನೋಡಬೇಕು ಎಂದು ಹೇಳಿದರು.ಮೈಸೂರು ಗಲಾಟೆ ವಿಚಾರದಲ್ಲಿ ಹೆಚ್ಚು ರಾಜಕೀಯ ಮಾಡುವ ಬದಲು, ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು…
ಬೆಂಗಳೂರು : ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇದೀಗ ಮತ್ತೆ ಗುಡುವನ್ನು ವಿಸ್ತರಣೆ ಮಾಡಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರವು ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ. ಇದರ ಮೇಲೂ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ…