Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು: ಧರ್ಮಸ್ಥಳ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡರು ಮೊದಲ ಬಾರಿಗೆ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. “ಮಂಜುನಾಥ ಮಹಾಶಕ್ತ ದೇವರು. ಅವರ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ. ಇಂತಹ ಅಪಪ್ರಚಾರ ಮಾಡುವವರೇ ಮುಂದೆ ಅದರ ಪ್ರತಿಫಲ ಅನುಭವಿಸುತ್ತಾರೆ. ಅಂತಿಮ ತೀರ್ಪು ಮಂಜುನಾಥನ ಅನುಗ್ರಹದಿಂದಲೇ ಒಳ್ಳೆಯದಾಗುತ್ತದೆ” ಎಂದು ದೇವೇಗೌಡರು ಹೇಳಿದ್ದಾರೆ. ಏನೇ ಏರುಪೇರು ಆದರೂ ಎಲ್ಲವೂ ತಾತ್ಕಾಲಿಕ ಅಂತಿಮ ಫಲಿತಾಂಶ ಇದೆಯಲ್ಲವೇ ಅದು ಅವನ ಅನುಗ್ರಹ ದಿಂದ ಒಳ್ಳೆಯದೇ ಆಗಲಿದೆ. ಮಂಜುನಾಥ ನ ಶಕ್ತಿ ಯನ್ನು ಯಾರೂ ಕಡಿಮೆ ಮಾಡಲು ಆಗಲ್ಲ.ಅಪ ಪ್ರಚಾರ ಮಾಡುವವರೇ ಮುಂದೆ ಕಷ್ಟ ಕ್ಕೆ ಸಿಲುಕುತ್ತಾರೆ ಕಾದು ನೋಡಿ ಇವತ್ತು ಅಪ ಪ್ರಚಾರ ಮಾಡುತ್ತಿರುವ ವರು ಮುಂದೆ ಪ್ರತಿಫಲ ಅನುಭವಿಸುತ್ತಾರೆ ಸಮಾಜದಲ್ಲಿ ಎಲ್ಲ ರೀತಿಯ ಜನ ಇದ್ದಾರೆ. ನಾವು ಗಂಭೀರ ವಾಗಿ ಪ್ರಾರ್ಥನೆ ಮಾಡಬೇಕು ಅಷ್ಟೇ ಅಂತಿಮ ತೀರ್ಮಾನ ನೀನೇ ಕೊಡಪ್ಪಾ ಅಂತಾ ಕೇಳಬೇಕು ಅಷ್ಟೇ ಎಂದರು. ಈಗ ನಡೆಯುತ್ತಿರುವ ಎಲ್ಲ ಘಟನೆಗಳಿಗೆ…
ದಕ್ಷಿಣಕನ್ನಡ : ಅನನ್ಯ ಭಟ್ ನಾಪತ್ತೆ ಎಂದು ಸುಜಾತಾ ಭಟ್ ದೂರು ನೀಡಿರುವ ವಿಚಾರವಾಗಿ ಎಸ್ಐಟಿ ಅಧಿಕಾರಿಗಳ ಎದುರು ಇದೀಗ ಸುಜಾತ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ. ಅನನ್ಯ ಭಟ್ ನಾಪತ್ತೆ ಕುರಿತು ಸುಜಾತ ಭಟ್ ದೂರು ನೀಡಿದರು ಈ ವಿಚಾರವಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಹಾಗಾಗಿ ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದರು. ನಿನ್ನೆ ಸುಜಾತಾ ಭಟ್ ಅವರಿಂದ ಅಧಿಕಾರಿಗಳು ಕೆಲವು ಮಹತ್ವದ ಹೇಳಿಕೆ ದಾಖಲಿಸಿಕೊಂಡಿದ್ದು, ಸುಜಾತ ಭಟ್ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಸುಜಾತ ಭಟ್ ಅವರಿಗೆ ಸೂಚಿಸಿತ್ತು. ಇದೀಗ ಸುಜಾತಾ ಭಟ್ ಎಸ್ಐಟಿ ಅಧಿಕಾರಿಗಳ ಎದುರಿಗೆ ವಿಚಾರಣೆ ಹಾಜರಾಗಿದ್ದಾರೆ. ಹಾಗಾಗಿ ಈ ಒಂದು ಅಧಿಕಾರಿಗಳ ತನಿಖೆ ತೀವ್ರ ಕುತೂಹಲ ಮೂಡಿಸಿದೆ. ಸುಜಾತ ಭಟ್ ಯಾವ ರೀತಿ ಹೇಳಿಕೆ ನೀಡಲಿದ್ದಾರೆ ಎನ್ನುವುದು ಕುತೂಹಲ ಕೆರಳಿಸಿದೆ.
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರೆಸ್ಟ್ ಆದ ಬೆನ್ನಲ್ಲೇ ಎಸ್ಐಟಿ ಆರೋಪಿ ಚಿನ್ನಯ್ಯನನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ವಿಚಾರಣೆಯ ವೇಳೆ ಎಸ್ಐಟಿ ಅಧಿಕಾರಿಗಳಿಗೆ ಸ್ಪೋಟಕವಾದ ಸಾಕ್ಷಿಗಳು ಲಭ್ಯವಾಗಿದ್ದು , ನಿನ್ನೆಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಈ ವೇಳೆ ಚಿನ್ನಯ್ಯ ಬಳಸುತ್ತಿದ್ದ 1 ಆಂಡ್ರಾಡ್ ಮೊಬೈಲ್ ಹಾಗು 1 ಕೀಪ್ಯಾಡ್ ಮೊಬೈಲ್ ಪತ್ತೆಯಾಗಿದೆ. ಹೌದು ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಎರಡು ಮೊಬೈಲ್ ಪತ್ತೆಯಾಗಿವೆ.ಆರಂಭದಲ್ಲಿ ಚಿನ್ನಯ್ಯ ಕೀಪ್ಯಾಡ್ಒಬ್ಬ ಬಳಸುತ್ತಿದ್ದ. ನಂತರ ಆಂಡ್ರಾಡ್ ಮೊಬೈಲ್ ಬಳಸುತ್ತಿದ್ದ. ಲಗೇಜ್ ಬ್ಯಾಗ್, ಬಟ್ಟೆ ಸೇರಿದಂತೆ ಕೆಲವು ದಾಖಲೆಗಳನ್ನ SIT ವಶಕ್ಕೆ ಪಡೆದುಕೊಂಡಿದೆ. ವಶಪಡಿಸಿಕೊಂಡಿರುವ ವಸ್ತುಗಳನ್ನ FSL ಗೆ ಕಳುಹಿಸಲಾಗಿದೆ. ಇನ್ನು ಮಹೇಶ್ ಮನೆಯಲ್ಲಿ ಹಾರ್ಡ್ ಡಿಸ್ಕ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನಯ್ಯಗೆ ಸಂಬಂಧಸಿದಂತೆ ಹಲವು ಸಾಕ್ಷಿಗಳು ಲಭ್ಯವಾಗಿವೆ. ಹೌದು 25 ವಿಡಿಯೋಗಳ ಮೂಲಕ ಈ ಒಂದು ಗ್ಯಾಂಗ್ ಮೆಗಾ ಪ್ಲಾನ್ ಮಾಡಿದ್ದು…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರೆಸ್ಟ್ ಆದ ಬೆನ್ನಲ್ಲೇ ಎಸ್ಐಟಿ ಆರೋಪಿ ಚಿನ್ನಯ್ಯನನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ವಿಚಾರಣೆಯ ವೇಳೆ ಎಸ್ಐಟಿ ಅಧಿಕಾರಿಗಳಿಗೆ ಸ್ಪೋಟಕವಾದ ಸಾಕ್ಷಿಗಳು ಲಭ್ಯವಾಗಿದ್ದು , ಚಿನ್ನಯ್ಯ, ಈ ಒಂದು ಪ್ರಕರಣದ ಕುರಿತು ಮೊದಲೇ 25ಕ್ಕೂ ಹೆಚ್ಚು ವಿಡಿಯೋಗಳನ್ನು ರೆಕಾರ್ಡ್ ಮಾಡಿ ಇಂಟರ್ವ್ಯೂ ರೂಪದಲ್ಲಿ ರೆಕಾರ್ಡ್ ಮಾಡಿ ಬುರುಡೆ ಷಡ್ಯಂತರ ಮಾಡಿದ ಗ್ಯಾಂಗ್ ಮೆಗಾ ಪ್ಲಾನ್ ಮಾಡಿಕೊಂಡಿತ್ತು ಎಂದು ಬಾಯಿಬಿಟ್ಟಿದ್ದಾನೆ. ಹೌದು 25 ವಿಡಿಯೋಗಳ ಮೂಲಕ ಈ ಒಂದು ಗ್ಯಾಂಗ್ ಮೆಗಾ ಪ್ಲಾನ್ ಮಾಡಿದ್ದು ಯಾವ ಸಂದರ್ಭದಲ್ಲಿ ಏನೇನು ಮಾಡಬೇಕು ಎಂದು ತಂತ್ರ ಹೂಡಿತ್ತು. ಇಂಟರ್ವ್ಯೂ ವಿಡಿಯೋ ಮೂಲಕ ಅಡ್ವಾನ್ಸ್ ಪ್ಲಾನ್ ಮಾಡಿತ್ತು ವಿವಿಧ ಮಾದರಿಯಲ್ಲಿ ವಿಡಿಯೋ ಮಾಡಿಟ್ಟುಕೊಂಡಿತ್ತು. ಇಂಟರ್ವ್ಯೂ ರೂಪದಲ್ಲಿ ವಿಡಿಯೋ ಮಾಡಿಸಿ ತಂತ್ರ ರೂಪಿಸಿತ್ತು. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳು ಬರುತ್ತದೆ. ವಿಡಿಯೋ ಬಗ್ಗೆ ಎಸ್ಐಟಿ ಮುಂದೆ ಚಿನ್ನಯ್ಯ ಬಾಯಿಬಿಟ್ಟಿದ್ದಾನೆ. ಚಿನ್ನಯ ಅರೆಸ್ಟ್ ಆದಾಗ ಯಾವ ವಿಡಿಯೋ ಬಿಡಬೇಕು? ಚಿನ್ನಯ್ಯ ಓಡಿ…
ಕಲಬುರ್ಗಿ : ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕ್ಲಿನಿಕ್ ಗಳ ಮೇಲೆ ಇದೀಗ ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ಬಳಿಕ ನಕಲಿ ಕ್ಲಿನಿಕ್ ಗಳನ್ನು ಕ್ಲೋಸ್ ಮಾಡಿ ಬೀಗ ಜಡಿದಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ, ನೆಲೋಗಿ ಗ್ರಾಮದಲ್ಲಿರುವ ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ಮಾಡಿ ಕ್ಲಿನಿಕ್ ಗಳಿಗೆ ಬೀಗ ಹಾಕಿದ್ದಾರೆ. ನಕಲಿ ವೈದ್ಯರು ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರು ಸಾರ್ವಜನಿಕರಿಂದ ದೂರು ಹಿನ್ನೆಲೆ, ಜಿಲ್ಲಾ ಆರೋಗ್ಯ ಅಧಿಕಾರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮತ್ತೆ ಓಪನ್ ಮಾಡಿದರೆ ಆಸ್ತಿ ಮುಟ್ಟುಗೊಲು ಹಾಕುವುದಾಗಿ ಎಚ್ಚರಿಕೆ ನೀಡಿ ನಕಲಿ ಕ್ಲಿನಿಕ್ ಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ದಕ್ಷಿಣಕನ್ನಡ : ಹಿಂದೂ ಕ್ರೈಸ್ತರ ನಡುವೆ ದ್ವೇಷ ಹುಟ್ಟುವಂತಹ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ವಸಂತ ಗಡಿಯಾರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ FIR ದಾಖಲಾಗಿದೆ. BNS ಸೆಕ್ಷನ್ 196(1),(a), 353(2)ರಡಿ ಪ್ರಕರಣ ದಾಖಲಾಗಿದೆ. ಶೇಖರ ಲಾಯಿಲ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕರಾಗಿದ್ದಾರೆ. ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ವಸಂತ ಗಿಳಿಯಾರ್ ಈ ಒಂದು ಹೇಳಿಕೆ ನೀಡಿದ್ದು ಆಗಸ್ಟ್ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಮಾವೇಶ ನಡೆದಿತ್ತು. ಧರ್ಮಸ್ಥಳ ಬೆಳ್ತಂಗಡಿ ಭಾಗದಲ್ಲಿ ಕ್ರೈಸ್ತ ಮಿಷಿನರಿಗಳ ಪ್ರಭಾವದಿಂದ ಹಿಂದೂಗಳ ಕಟ್ಟೆಯನ್ನು ಒಡೆಸಿ ಶಿಲುಬೆಯನ್ನು ನೀಡಲಾಗಿತ್ತು. ತುಳಸಿ ಕಟ್ಟೆಗಳು ಮತ್ತೆ ಮನೆ ಅಂಗಳದಲ್ಲಿ ಎದ್ದು ನಿಲ್ಲುವಂತೆ ಮಾಡಿದ್ದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂದು ವಸಂತ್ ಗಿಳಿಯಾರ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಶೇಖರ್ ಲಾಯಿಲ ದೂರು ಬೆಳ್ತಂಗಡಿ ಠಾಣಿಗೆ ದೂರು ನೀಡಿದ್ದಾರೆ. ಅವರ ದೂರಿನ ಅನ್ವಯ ಇದೀಗ ವಸಂತ್ ಗಿಳಿಯಾರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಬಾನು ಮುಷ್ತಾಕ್ ದಸರಾ ಉದ್ಘಾಟನೆಯ ವಿಚಾರವಾಗಿ ಬಿಜೆಪಿಯವರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನೆಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಮುಂಡೇಶ್ವರಿ ಬೆಟ್ಟ ಏನು ಕೇವಲ ಹಿಂದೂ ಧರ್ಮದ ಆಸ್ತಿಯಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು ಡಿಕೆಶಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ನಲ್ಲಿ ಸ್ಪಷ್ಟನೆ ನೀಡಿದ್ದು, ನಮ್ಮ ನಾಡ ಹಬ್ಬ – ದಸರಾ ನಮ್ಮ ನಾಡ ದೇವತೆ – ಚಾಮುಂಡೇಶ್ವರಿ. ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ! ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಮಹಿಳೆಯ ತಲೆ ಬುರುಡೆ ತಂದು ಇದು ಹೆಣ್ಣು ಮಗಳ ತಲೆ ಬುರುಡೆ ಎಂದು ಹೇಳಿಕೆ ನೀಡಿದ್ದ ಮಾಸ್ಕ್ ಮ್ಯಾನ್ ಚಿನ್ನಯನನ್ನು ಎಸ್ಐಟಿ ವಶಕ್ರ್ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಅಲ್ಲದೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲೂ ಕೂಡ ನಿನ್ನೆಯಿಂದ SIT ಅಧಿಕಾರಿಗಳು ತೀವ್ರ ಶೋಧ ನೆಡೆಸಿದ್ದಾರೆ. ಇದೀಗ ಬುರುಡೆ ಷಡ್ಯಂತ್ರದ ಹಿಂದೆ ಯಾರ್ಯಾರಿದ್ದಾರೆ ಇದರ ಸೂತ್ರಧಾರಿಗಳು ಯಾರು ಎನ್ನುವುದು ಎಸ್ಐಟಿ ಪತ್ತೆ ಹಚ್ಚುತ್ತಿದ್ದು, ನಿನ್ನೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಶೋಧ ನಡೆಸುವ ವೇಳೆ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದ್ದು, ಅದರಲ್ಲಿ ಹಲವು ಆಡಿಯೋ ಮತ್ತು ವಿಡಿಯೋಗಳು ಸಹ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಬುರುಡೆ ಷಡ್ಯಂತರದ ಸೂತ್ರಧಾರಿಗಳಿಗೆ ಎಸ್ಐಟಿ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪ್ರಕರಣ ಮತ್ತಷ್ಟು ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.
ಬೆಂಗಳೂರು : ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನಾ ವಿಚಾರವಾಗಿ ಜೆಡಿಎಸ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಾಲೆಳೆದಿದೆ.ಚಾಮುಂಡಿ ಬೆಟ್ಟ ಏನು ಹಿಂದುಗಳ ಆಸ್ತಿಯಲ್ಲ ಎಂದು ನಿನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಇಂದು ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು ಜೆಡಿಎಸ್ ತನ್ನ ಟ್ವೀಟ್ ಖಾತೆಯಲ್ಲಿ, ಚಾಮುಂಡಿ ಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ ಎಂಬ ಡಿಕೆ ಶಿವಕುಮಾರ್ ಹೇಳೀಕೆಗೆ ಆಪ್ತಮಿತ್ರ ಚಿತ್ರದಲ್ಲಿ ಗಂಗಾ ನಾಗವಲ್ಲಿಯಾಗಿ ಹಂತ ಹಂತವಾಗಿ ಬದಲಾಗುತ್ತಾಳೆ. ಆದರೆ ಡಿಕೆ ಶಿವಕುಮಾರ್ ನಾಗವಲ್ಲಿಗಿಂತಲೂ ಬಹುಬೇಗ ಬದಲಾಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ. https://twitter.com/JanataDal_S/status/1960541540029497850?t=FbXJsJEvM2-O2aKyoR3N3A&s=19
ನವದೆಹಲಿ : ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಪುತ್ರ ವಿಜಯ್ ನಿರಾಣಿ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಹೌದು 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ್ದರು. ಆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ 2023ರಲ್ಲಿ ಬ್ರೇಕ್ ಹಾಕಿತ್ತು. ಆದರೆ, ಈ ಆದೇಶದ ವಿರುದ್ಧ ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರಿಂಕೋರ್ಟ್, ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ ತನಿಖೆಗೆ ಆದೇಶಿಸಿದೆ. ಪ್ರಕರಣ ಹಿನ್ನೆಲೆ? ವಿಜಯ್ ನಿರಾಣಿ ನಿರಾಣಿ ಶುಗರ್ಸ್ ಲಿಮಿಟೆಡ್ ಕಂಪನಿಯ ನಿರ್ದೇಶಕರಾಗಿದ್ದಾರೆ. ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ನ ಡಿಸ್ಟಿಲರಿ ಫ್ಯಾಕ್ಟರಿಯಲ್ಲಿ ತ್ಯಾಜ್ಯ ನಿರ್ವಹಣಾ ಘಟಕವೊಂದನ್ನು ಸ್ಥಾಪಿಸಿದ್ದರು. ಆ ಘಟಕಕ್ಕೆ…