Author: kannadanewsnow05

ಮಂಡ್ಯ : ಶ್ರೀರಂಗಪಟ್ಟಣದಲ್ಲಿ 415ನೇ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಜಂಬೂ ಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಮಂಗಳಾರತಿ ಬಳಿಕ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಮರದ ಅಂಬಾರಿಯಲ್ಲಿ ವಿರಾಜಮಾನರಾದ ನಾಡದೇವಿಗೆ ಪುಷ್ಪಾರ್ಚನೆಸಲ್ಲಿಸಲಾಯಿತು. ಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಪುಷ್ಪಾರ್ಚನೆ ಸಲ್ಲಿಸಿದರು. ಪುಷ್ಪಾರ್ಚನೆ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು. ಟಿ.ಎಸ್.ನಾಗಾಭರಣ ಅವರಿಗೆ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಗಣಿಗ ರವಿಕುಮಾರ್ ಸಾಥ್ ನೀಡಿದರು. ಕಿರಂಗೂರು ಬನ್ನಿಮಂಟಪದಿಂದ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು. ಮರದ ಅಂಬಾರಿ ಹೊತ್ತ ಮಹೇಂದ್ರ ಆನೆಗೆ ಕಾವೇರಿ, ಲಕ್ಷ್ಮೀ ಆನೆಗಳು ಸಾಥ್ ನೀಡಿದವು. ಕಿರಂಗೂರಿನ ಬನ್ನಿ ಮಂಟಪದಿಂದ ಶ್ರೀ ರಂಗನಾಥಸ್ವಾಮಿ ದೇವಾಲಯವರೆಗೆ ಮೆರವಣಿಗೆ ಸಾಗಲಿದೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಪ್ರಕರಣದಿಂದ ಕೈಬಿಡುವಂತೆ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ 57 ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದೆ ವೇಳೆ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡುವಂತೆ ಕೂಡ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಅಕ್ಟೋಬರ್ 9ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿತು. ಇದೀಗ ನಟ ದರ್ಶನ್ ಕೋರ್ಟ್ ಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಪರವಾಗಿಲ್ಲ ಸುನೀಲ್ ವಾದ ಮಂಡಿಸಿದರು. ಇನ್ನು ಆರೋಪಿಗಳನ್ನು ಕ್ವಾರೆಂಟೈನಲ್ಲಿ ಇಟ್ಟಿದ್ದಾರೆ. ಜೈಲಿನ ಅಧಿಕಾರಿಗಳು ಆದೇಶ ಪಾಲಿಸುತ್ತಿಲ್ಲ. ಇದೆ ವೇಳೆ ಕೊಲೆ ಆರೋಪಿ ದರ್ಶನ್ ಗೆ ಜಡ್ಜ್ ಆದೇಶ ಪಾಲಿಸುತ್ತಿದ್ದಾರ ಎಂದು ಪ್ರಶ್ನಿಸಿದರು. ಆಗ ಇಲ್ಲ ಸರ್ ಯಾವ ಆದೇಶಗಳನ್ನು ಸಹಪಾಲಿಸುತ್ತಿಲ್ಲ. 25/3 ಫೀಟ್ ಮಾತ್ರ ಓಡಾಡಲು ಅವಕಾಶ ಕೊಟ್ಟಿದ್ದಾರೆ ವಾಕಿಂಗ್ ಮಾಡಲು ಸೂರ್ಯನ ಬೆಳಕು ಬರುತ್ತಿಲ್ಲ ಎಂದು ಆರೋಪಿ ದರ್ಶನ್ ಜಡ್ಜ್…

Read More

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸುತ್ತಿದ್ದು ಈ ಒಂದು ಸಮೀಕ್ಷೆಗೆ ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಆದರೆ ಸಮೀಕ್ಷೆ ಆರಂಭದ ದಿನವೇ ನೂರಾರು ಸಮಸ್ಯೆಗಳು ಎದುರಾಗಿದ್ದು ಸರ್ವರ್ ಸಮಸ್ಯೆ ಹಾಗೂ ಮೊಬೈಲ್ನಲ್ಲಿ ತಾಂತ್ರಿಕ ದೋಷಗಳಿಂದ ಸಮೀಕ್ಷೆ ನಡೆಸುವುದು ಕಷ್ಟವಾಗಿದೆ. ಇತ್ತ ಇನ್ನೊಂದು ಕಡೆ ಇಂದು ಸಚಿವ ಸಂಪುಟದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಗೈರಾದ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಒಂದು ಕಡೆ ಸರ್ವರ್ ಇಲ್ಲ ಮೊಬೈಲಲ್ಲಿ ತಾಂತ್ರಿಕ ದೋಷಗಳು ಇವೆ ಎಂದು ಶಿಕ್ಷಕರು ಈ ಒಂದು ಜಾತಿಗಣತಿ ಸಮೀಕ್ಷೆ ಮುಂದೂಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದರೆ, ಇನ್ನೊಂದೆಡೆ ಸಮೀಕ್ಷೆಗೆ ಗೈರಾದ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಪುಟ ಮುಂದಾಗಿದೆ.

Read More

ನವದೆಹಲಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಚಿನ್ನಯ ಬುರುಡೆ ಗ್ಯಾಂಗ್ ದೆಹಲಿಗೆ ತೆರಳಿ ಸುಪ್ರೀಂ ಕೋರ್ಟ್ ಜಡ್ಜ ಅವರನ್ನು ಸಹ ಭೇಟಿಯಾಗಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿತ್ತು. ಇದೀಗ ಚೆನ್ನಾಗಿರ ಮೂಲಕ ಈ ಒಂದು ಬುರುಡೆ ತಂಡ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಪಿಐಎಲ್ ಅನ್ನು ಇದೀಗ ವಜಾಗೋಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಹೌದು ಧರ್ಮಸ್ಥಳ ತಲೆ ಬುರುಡೆ ಕೇಸಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಚಿನ್ನಯ ಹಿಂದಿದ್ದ ಟೀಮ್ಗೆ ತಪರಾಕಿ. ಚಿನ್ನಯ್ಯ ಮೂಲಕ ಸಲ್ಲಿಸಿದ ಪಿಐಎಲ್ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಎಫ್ಐಆರ್ ಇಲ್ಲದೇ ಯಾವುದೇ ಕ್ರಮ ಕೈಗೊಳ್ಳಲಿಸಲಾಗಿತ್ತು. 1995 ರಿಂದ 2004 ರವರೆಗೆ ಚಿನ್ನಯ್ಯ ಟೀಮ್ ತನಿಖೆಗೆ ಕೋರಿ ಪಿಐಎಲ್ ಸಲ್ಲಿಸಿತ್ತು ವಕೀಲ ಕೆ.ವಿ ಧನಂಜಯ ಸಲ್ಲಿಸಿದ ಪಿಐಎಲ್ ಅನ್ನು ಇದೀಗ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರತಿವಾದಿಗಳ ವಿರುದ್ಧ ಯಾವುದೇ ಮನವಿ ಇಲ್ಲದೆ ಪಿಐಎಲ್ ಸಲ್ಲಿಸಲಾಗಿತ್ತು.

Read More

ಬೆಂಗಳೂರು : ರಾಜ್ಯದಲ್ಲಿ ಅವಧಿ ಮುಗಿದಿರೋ ಮದ್ಯದ ಅಂಗಡಿಗಳನ್ನ ಹರಾಜು ಮೂಲಕ ಹಂಚಿಕೆ ಮಾಡೋ ಪ್ರಕ್ರಿಯೆ ಶುರುವಾಗಿದೆ. ಕರಡು ನಿಯಮ ಬಿಡುಗಡೆ ಮಾಡಲಾಗಿದ್ದು, ಆದಷ್ಟೂ ಬೇಗ ಪ್ರಕ್ರಿಯೆ ಶುರು ಮಾಡೋದಾಗಿ ಅಬಕಾರಿ ಸಚಿವ ತಿಮ್ಮಾಪುರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಹರಾಜು ಪ್ರಕ್ರಿಯೆಗೆ ತಯಾರಿ ಆಗ್ತಿದೆ. ಹರಾಜು ಪ್ರಕ್ರಿಯೆಯಲ್ಲಿ ಮೀಸಲಾತಿ ಕೊಡಬೇಕು ಎಂದು ಅಂದುಕೊಳ್ಳಲಾಗಿದೆ. ಈಗಾಗಲೇ ಹರಾಜು ಪ್ರಕ್ರಿಯೆಯ ಡ್ರಾಫ್ಟ್ ರೆಡಿ ಆಗಿ ಸಹಿ ಆಗಿದೆ. ಆದಷ್ಟೂ ಬೇಗ ಹರಾಜು ಪ್ರಕ್ರಿಯೆ ಆಗಲಿದೆ ಎಂದಿದ್ದಾರೆ. ಜನರಲ್ ಆಗಿ ಹರಾಜು ಹಾಕಬೇಕಾ? ಮೀಸಲಾತಿ ಕೊಡಬೇಕು ಅಂತ ಸಿಎಂ ಜೊತೆ ನಾಳೆ ಚರ್ಚೆ ಮಾಡ್ತೀನಿ. ಹರಾಜು ಪ್ರಕ್ರಿಯೆಯಿಂದ 2 ಸಾವಿರ ಕೋಟಿ ರೂ. ಲಾಭ ಬರಬಹುದು ಅಂತ ನಿರೀಕ್ಷೆ ಇದೆ. ಮೀಸಲಾತಿ ಕೊಟ್ಟರೆ ಸಹಾಯ ಅಗುತ್ತದೆ ಅಂತ ಚರ್ಚೆ ಇದೆ. ಚರ್ಚೆ ಮಾಡಿ ನಿರ್ಧಾರ ಮಾಡ್ತೀವಿ ಎಂದು ಹೇಳಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನೀತಿ ರೂಪಿಸಲು ಒಂದು ತಿಂಗಳ ಕಾಲಾವಕಾಶ ನೀಡಿದರೂ ಸೂಕ್ತ ಕ್ರಮಕ್ಕೆ ಮುಂದಾಗದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಓಲಾ, ಉಬರ್‌ ಮತ್ತು ರ‍್ಯಾಪಿಡೋ ಮಾತೃ ಸಂಸ್ಥೆಗಳು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿತು. ವಿಚಾರಣೆ ವೇಳೆ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನಿರ್ಬಂಧ ವಿಧಿಸಿದ್ದು, ಪ್ರಯಾಣಿಕರು ಬಳಸಲು ಅನುಮತಿ ನೀಡಿಲ್ಲ. ಕೇವಲ ಡೆಲಿವರಿಗಾಗಿ ಬಳಸಲು ಅವಕಾಶ ನೀಡಲಾಗಿದೆ. ಡೆಲಿವರಿಗಾಗಿ ಟ್ಯಾಕ್ಸಿ ಎಂದು ನೋಂದಣಿ ಮಾಡಿಸುವ ಅಗತ್ಯವಿಲ್ಲ. ಈ ಸಂಬಂಧ ನೀತಿ ರೂಪಿಸಿದ್ದೇವೆ ಎಂದು ತಿಳಿಸಿದರು. ಪ್ರಕರಣದ ಹಿನ್ನೆಲೆ ಮೋಟಾರು ವಾಹನ ಕಾಯ್ದೆಯ ನಿಯಮಗಳ ಪ್ರಕಾರವಾಗಿ ಹಳದಿ ನೋಂದಣಿ ಫಲಕ (ಎಲ್ಲೋ…

Read More

ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವ ವರೆಗೂ ಮುಂದೂಡುವಂತೆ ಮನವಿ ರಾಜ್ಯದ ಶಿಕ್ಷಕರು ಮನವಿ ಮಾಡಿದ್ದಾರೆ. ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ, ತಮ್ಮ ಗಮನಕ್ಕೆ ತರುವ ವಿಷಯವೆನೆಂದರೆ, ಸದ್ಯ ನಡೆಸುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಅನೇಕ ತಾಂತ್ರಿಕ ಸಮಸ್ಯೆಗಳು ಶಿಕ್ಷಕರಿಗೆ ಕಾಡುತ್ತಿದ್ದು, ಇದರ ಕುರಿತು ಮೇಲಾಧಿಕಾರಿಗಳಿಗೆ ಎಷ್ಟೇ ಕೇಳಿಕೊಂಡರೂ ಸಹ ಯಾವುದೇ ಪರಿಹಾರ ಸಿಗುತ್ತಿಲ್ಲ. ಕಾರಣ ಶಿಕ್ಷಕರು ಮನೆ ಮನೆಗೆ ಹೋಗಿ ಗಂಟೆಗಟ್ಟಲೇ ಕುಳಿತು APP ಕಾರ್ಯ ನಿರ್ವಹಿಸದ ಕಾರಣ ಮುಜುಗರ ಪಡುವಂತಾಗಿದ್ದು, ಮಹಿಳಾ ಶಿಕ್ಷಕಿಯರು ಪಡುವ ಕಷ್ಟಗಳನ್ನು ಕೇಳುವವರಿಲ್ಲದಂತಾಗಿದೆ. 1) ಹೊಸ ವರ್ಷನ್ APP ಓಪನ್ ಆಗದೇ UNKNOWN ERROR ಬರುತ್ತಿರುವುದು. 2) ನಿಯೋಜಿಸಿರುವ ಮನೆಗಳು ಲೋಕೆಷನ್ ನಲ್ಲಿ ಸಿಗದೇ ಇರುವುದು. 3) ನಿಗದಿಪಡಿಸಿರುವ ಮನೆಗಳು ಒಂದೇ ಕಡೆ ಇಲ್ಲದಿರುವುದು 4) ಮನೆ ಸಮೀಕ್ಷೆ ಮಾಡಿದ ನಂತರ ಸಬ್ಸಿಟ್ ಆಗದೇ ಇರುವುದು 5) OTP ಮತ್ತು ODP ಸಮಸ್ಯೆ 6) ಮನೆಪಟ್ಟಿ ಮುಖ್ಯಸ್ಥರು…

Read More

ದೊಡ್ಡಬಳ್ಳಾಪುರ : ಮನೆಯಲ್ಲಿ ತಾಯಿಗೆ ಸ್ನೇಹಿತರ ಜೊತೆಗೆ ಹೋಗಿ ಬರುವುದಾಗಿ ಹೇಳಿ ತೆರಳಿದ ಯುವಕನೊಬ್ಬ ಮರುದಿನ ಹೆಣವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ. ಹಳೆ ವೈಶಮ್ಯ ಹಿನ್ನೆಲೆಯಲ್ಲಿ ಸ್ನೇಹಿತರೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ದೊಡ್ಡಬಳ್ಳಾಪುರ ನಗರದ ತ್ಯಾಗರಾಜನಗರದ ನಿವಾಸಿಯಾಗಿದ್ದ ಬುಲೆಟ್ ರಘು (38) ಹತ್ಯೆಗೀಡಾಗಿರುವ ವ್ಯಕ್ತಿ. ಬೆಳಗಾವಿಯಲ್ಲಿ ಹೋಟೆಲ್​ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ವ್ಯಕ್ತಿ ವಾರದ ಹಿಂದೆಯಷ್ಟೇ ಊರಿಗೆ ಬಂದಿದ್ದ. ಬಾಶೆಟ್ಟಿಹಳ್ಳಿಯ ಯಲಹಂಕ ರಸ್ತೆಯಲ್ಲಿ ಬುಲೆಟ್ ರಘುನನ್ನು ದುಷ್ಕರ್ಮಿಗಳು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆ ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜು, ಕೊಲೆಯಾದ ವ್ಯಕ್ತಿ ಹೆಸರು​ ರಘು. 38 ವರ್ಷ. ತ್ಯಾಗರಾಜನಗರದ ನಿವಾಸಿ. ಏಳೆಂಟು ವರ್ಷಗಳ ಹಿಂದೆ ಈ ಊರು ಬಿಟ್ಟು ಬೆಳೆಗಾವಿಯಲ್ಲಿ ಹೋಟೆಲ್ ಇಟ್ಕೊಂಡು ಜೀವನ ಮಾಡುತ್ತಿದ್ದ, ಅಲ್ಲಿಯ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿ ಅಲ್ಲಿಯೇ ವಾಸವಾಗಿದ್ದ. ವಾರದ ಹಿಂದೆಯಷ್ಟೇ ಊರಿಗೆ ಬಂದಿದ್ದ. ನಿನ್ನೆ…

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದು, ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಗೃಹ ಸಚಿವರ ಕಚೇರಿಯಲ್ಲಿ ಜಿ ಪರಮೇಶ್ವರ್ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಭೇಟಿಯಾಗಿ ಚರ್ಚಿಸಿದ್ದಾರೆ. ಇನ್ನು ಸಿಐಡಿ ಮುಖ್ಯಸ್ಥರ ನೇಮಕಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು ಎಸ್ಐಟಿ, ಮುಖ್ಯಸ್ಥ ಪ್ರಣಬ್ ಮೊಹಂತಿಯವರನ್ನೇ ನೇಮಕ ಮಾಡುವ ಸಾಧ್ಯತೆ ಇದೆ. ಹೌದು ಸಿಐಡಿ ಮುಖ್ಯಸ್ಥರ ಹುದ್ದೆಗೆ ನೇಮಕಕ್ಕೆ ರಾಜ್ಯ ಸರ್ಕಾರ ಇದೀಗ ತಯಾರಿ ಮಾಡಿಕೊಂಡಿದ್ದು, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಮಾಡುವ ಸಾಧ್ಯತೆ ಇದೆ ಎಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಲಾಗಿದ್ದು ಸಿಎಂ ಸಿದ್ದರಾಮಯ್ಯ ಕರೆಯ ಮೇರೆಗೆ ಪ್ರಣವ್ ಮೋಹಂತಿ ಭೇಟಿಯಾಗಿದ್ದಾರೆ. ವಿಧಾನಸೌಧದಲ್ಲಿ ಗೃಹ ಸಚಿವರನ್ನು ಭೇಟಿಯಾಗಿದ್ದು ಸರ್ಕಾರ ಇದೀಗ ಒಲವು ತೋರಿದೆ ಇಂದು ಈ ಕುರಿತು ಅಧಿಕೃತ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಪ್ರಕರಣದಿಂದ ಕೈಬಿಡುವಂತೆ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ 57 ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಲ್ಲಿರುವ ನಟ ದರ್ಶನ್ & ಗ್ಯಾಂಗ್ ಗೆ ಮತ್ತೊಂದು ಹೊಸ ಸಂಕಷ್ಟ ಶುರುವಾಗಿದೆ. ದರ್ಶನ ಮತ್ತು ಗ್ಯಾಂಗ್ ವಿರುದ್ಧ ಇಂದು ದೋಷರೋಪ ಸಲ್ಲಿಸಲಾಗುತ್ತಿದೆ. ಕೊಲೆ ಪ್ರಕರಣದಲ್ಲಿ ಕೋರ್ಟ್ ದೋಷಾರೋಪ ಹೊರಿಸಲಿದೆ. ದೋಷಾರೋಪದ ಬಳಿಕ ಸಾಕ್ಷಿ ವಿಚಾರಣೆಗೆ ಕೋರ್ಟ್ ದಿನಾಂಕ ನಿಗದಿ ಮಾಡಲಿದೆ. ಹಾಗಾಗಿ ದರ್ಶನ್ ಮತ್ತು ಆರೋಪಿಗಳು ಕೋರ್ಟಿಗೆ ಹಾಜರಾಗಬೇಕಿದ್ದು, ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಇಂದು ದೋಷಾರೋಪ ಹೊರಿಸಲಿದೆ. ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದೆ. ಎ೧ ಆರೋಪಿ ಪವಿತ್ರಾಗೌಡ ಅಂತಾ ಕೂಗಿದಾಗ ಕಟಕಟೆಗೆ ಬರಬೇಕಿದೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆಯತ್ನ, 364 ಕಿಡ್ನ್ಯಾಪ್, 202 ಸಾಕ್ಷಿನಾಶ ಕೇಸ್…

Read More