Author: kannadanewsnow05

ರಾಯಚೂರು : ರಾಯಚೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಹರಿದು ರಸ್ತೆ ಬದಿ ನಿಂತಿದ್ದ ತಂದೆ ಮಗ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಬೈಪಾಸ್ ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ತಂದೆ ನಾಗಪ್ಪ (65) ಹಾಗೂ ಪುತ್ರ ರಮೇಶ್ (46) ಸ್ಥಳದಲ್ಲಿ ಸಾವನಪ್ಪಿದ್ದಾರೆ. ರಸ್ತೆ ಬದಿ ಮೊಬೈಲ್ನಲ್ಲಿ ತಂದೆ ಭಾಗ ಮಾತನಾಡುತ್ತ ನಿಂತಿದ್ದರು. ಏಕಾಏಕಿ ವೇಗವಾಗಿ ಬಂದಂತಹ ಲಾರಿ ಇಬ್ಬರ ಮೇಲೆ ಹರಿದು ದೇಹಗಳು ಛಿದ್ರ ಛಿದ್ರವಾಗಿವೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ನಮ್ಮಲ್ಲಿ ಯಾವುದೇ ಗುಂಪಿಲ್ಲ, ನಾವು ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಾಗಿ ಗುಂಪು ಯಾಕೆ ಬೇಕು? ನೀವೆಲ್ಲ ಏನೇನೋ ತೋರಿಸ್ತಿದೀರ, ಸಿದ್ದರಾಮಯ್ಯದೊಂದು ಗುಂಪು, ಡಿಕೆಶಿ ಗುಂಪು ಅಂತ ನಮ್ಮಲ್ಲಿ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿಂದು ಡಿಸಿಎಂ ಡಿಕೆಶಿ ಹನುನಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವಿಚಾರ ನನಗೂ ಸಿಎಂಗೆ ಸಂಬಂಧಿಸಿದ ವಿಚಾರ. ನಾವಿಬ್ರೂ ಬ್ರದರ್ಸ್ ಥರ ಇದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ ಎಂದು ನುಡಿದರು. ಹನುನಂತಯ್ಯ ವಿಧಾನಸೌಧ ಕಟ್ಟಿದ್ರು, ಎಸ್.ಎಂ ಕೃಷ್ಣ ವಿಕಾಸಸೌಧ ಕಟ್ಟಿದ್ರು. ಬೆಂಗಳೂರನ್ನು ಕೆಂಪೇಗೌಡ ಕಟ್ಟಿದ್ದಾರೆ. ಅಧಿಕಾರ ಸಿಕ್ಕಿದಾಗ ಇವರೆಲ್ಲ ಸಾಕ್ಷಿಗುಡ್ಡೆ ಬಿಟ್ ಹೋಗಿದ್ದಾರೆ. ಯಾರೇ ಆಗಲೀ ಅಧಿಕಾರ ಸಿಕ್ಕಿದಾಗ ಇಂಥ ಸಾಕ್ಷಿ…

Read More

ಬಳ್ಳಾರಿ : ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲ್ಲೂಕಿನ ಬಂಡಿಹಳ್ಳಿಯಲ್ಲಿ ನಡೆದಿದೆ.ಪೃಥ್ವಿ (10) ಮೃತ ಬಾಲಕ ಎಂದು ತಿಳಿದುಬಂದಿದೆ. ಶಿಕ್ಷಕ ಯು.ಗೋಣಿಬಸಪ್ಪ ಎಂಬುವವರ ಪುತ್ರನಾಗಿದ್ದು, ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಿಬಿಎಸ್‌ಇ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ. ತರಗತಿಯ ಐದು ಜನ ಸ್ನೇಹಿತರೊಂದಿಗೆ ಸೇರಿ ಬಂಡಿಹಳ್ಳಿಯ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಪೃಥ್ವಿ ಹಾಗೂ ಇನ್ನೋರ್ವ ಬಾಲಕ ಆಕಾಶ್ ನೀರಿನಲ್ಲಿ ಮುಳುಗುತ್ತಿದ್ದರು. ಇದನ್ನು ಗಮನಿಸಿದ ಕುರಿಗಾಹಿಗಳು ಆಕಾಶ್ ಅನ್ನು ರಕ್ಷಿಸಿದ್ದು, ಪೃಥ್ವಿ ಮೃತಪಟ್ಟಿದ್ದಾನೆ. ಈ ಸಂಬಂಧ ಹಗರಿಬೊಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಬೆಳಗಾವಿಯಲ್ಲಿ PHD ಪದವಿ ನೀಡದ ಆರೋಪ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯನ್ನು ಸುಜಾತ ಬೆಂಡೆ (32) ಎಂದು ತಿಳಿದುಬಂದಿದೆ. ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಾಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ರಾಣಿ ಚೆನ್ನಮ್ಮ PHD ವಿದ್ಯಾರ್ಥಿನಿ ಸುಜಾತ ಅಸ್ವಸ್ಥ ವಿದ್ಯಾರ್ಥಿನಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಶ್ವ ವಿದ್ಯಾಲಯ ಘಾಟಿಕೋತ್ಸವದಲ್ಲಿ PHD ಪದವಿ ಪ್ರದಾನ ಮಾಡದ ಆರೋಪ ಹಿನ್ನೆಲೆಯಲ್ಲಿ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಾಯದ ಕುಲಪತಿ ಸಿಎಂ ತ್ಯಾಗರಾಜ್ ಕುಲಸಚಿವ ಸಂತೋಷ ಕಾಮೇಗೌಡ, ಗೈಡ್, KLN ಮೂರ್ತಿ ವಿರುದ್ಧ ಆರೋಪ ಕೇಳಿಬಂದಿದೆ. ರಾಯಭಾಗ ಪ್ರದೇಶದ ಸಮಗ್ರ ಚಾರಿತ್ರಿಕ ವಿಷಯದಲ್ಲಿ ಸಂಶೋಧನೆ 6 ತಿಂಗಳ ಹಿಂದೆ ಸಲ್ಲಿಕೆ ಮಾಡಿದ್ದ PHD ವಿದ್ಯಾರ್ಥಿನಿ ಸುಜಾತ. ಟಾರ್ಗೆಟ್ ಮಾಡಿ PHD ಪದವಿ ಕೊಡಲು ನಿರಾಕರಣೆ ಆರೋಪ ಕೇಳಿಬಂದಿದೆ. ಗೈಡ್ ಮೂರ್ತಿ ಕಿರುಕುಳ ಬಗ್ಗೆ ವಿಸಿ ಕುಲಸಚಿವರಿಗೆ…

Read More

ಹಾಸನ : ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಚ್ಚಿನಿಂದ ಕೊಚ್ಚಿ ಸಹೋದರನ ಭೀಕರ ಕೊಲೆ ಮಾಡಲಾಗಿದೆ. ಸೋಂಪುರ ಬಳಿ ಜಮೀನಿನಲ್ಲಿ ದಯಾಕರ್ (46) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸೋಂಪುರ ಗ್ರಾಮದಲ್ಲಿ ತಂದೆ ಕಾಲದ ಆಸ್ತಿಯಲ್ಲಿ ಪಾಲು ಸಂಬಂಧ ಸಹೋದರರ ನಡುವೆ ಗಲಾಟೆಯಾಗಿದೆ. ಆಸ್ತಿಯಲ್ಲಿ ಹೆಚ್ಚಿನ ಪಾಲು ಕೇಳಿ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದ್ದಾರೆ. ಕೇಸ್ ವಿಚಾರಣೆ ಆಸ್ತಿ ಕೈ ತಪ್ಪುವ ಭೀತಿಯಿಂದ ದಯಾಕರ್ ನನ್ನ ಸಹೋದರ ಸಂಬಂಧಿ ಹಾಗು ಶಿಕ್ಷಕನಾಗಿರುವ ರಾಜಶೇಖರ್ ಕೊಲೆ ಮಾಡಿದ್ದಾನೆ. ತಮ್ಮ ವಶದಲ್ಲಿದ್ದ ಜಮೀನಿನಲ್ಲಿ ಬೆಳೆದಿದ್ದ ಸಿಲ್ವರ್ ಮರ ಕಡಿಸುತ್ತಿದ್ದ. ಕೋರ್ಟ್ನಲ್ಲಿ ಕೇಸ್ ನಡೆಯುತ್ತಿರುವ ಹಿನ್ನೆಲೆ ಮರ ಕಡಿಯದಂತೆ ದಯಾಕರ್ ಒತ್ತಾಯ ಮಾಡಿದ್ದಾರೆ. ಈ ವೇಳೆ ತಡೆಯಲು ಮುಂದಾದ ದಯಾಕರ ಮೇಲೆ ಮಚ್ಚಿನಿಂದ ದಾಳಿ ನಡೆಸಲಾಗಿದೆ. ಜಮೀನಿನಲ್ಲಿಯೇ ದಯಾಕರನನ್ನು ಕೊಚ್ಚಿ ಸಹೋದರ ರಾಜಶೇಖರ್ ಕೊಲೆ ಮಾಡಿದ್ದಾನೆ. ದಯಾಕರ್ ನನ್ನ ಕೊಂದ ಬಳಿಕ ಶಿಕ್ಷಕ ರಾಜಶೇಖರ್ ಪರಾರಿಯಾಗಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು : ಬೆಂಗಳೂರು ಚೆನ್ನೈ ಹೆದ್ದಾರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಪೆರಾಂಡಪಲ್ಲಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದಿರುವ ರಭಸಕ್ಕೆ ಕಾರುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಅಪಘಾತದಲ್ಲಿ ಗಾಯಗೊಂಡ ಐವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೆ ಅಪಘಾತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ ಮೂಲಕ ಕಾರುಗಳನ್ನು ತೆರವು ಮಾಡಲಾಗುತ್ತಿದೆ

Read More

ರಾಯಚೂರು : ಸಾವು ಅನ್ನೋದು ಯಾರಿಗೆ ಯಾವ ಸಮಯದಲ್ಲಿ ಯಾವ ರೂಪದಲ್ಲಾದರೂ ಬರಬಹುದು ಇದೀಗ ರಾಯಚೂರಿನಲ್ಲಿ ಮನಕಲಕುವ ಘಟನೆ ಒಂದು ನಡೆದಿದ್ದು, ಮಾಂಗಲ್ಯ ಧಾರಣೆಗೂ ಮುನ್ನ ಹೃದಯಘಾತದಿಂದ ವರನ ತಂದೆ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಜೈನ ಕಲ್ಯಾಣ ಮಂಟಪದಲ್ಲಿ ಈ ಒಂದು ಘಟನೆ ನಡೆದಿದೆ. ಸಿಂಧನೂರಿನ ಗಂಗಾನಗರದ ಶರಣಯ್ಯ ಸ್ವಾಮಿ (55) ಮೃತ ದುರದೇವಿ ಎಂದು ತಿಳಿದುಬಂದಿದೆ ಬೆಳಿಗ್ಗೆ ಶರಣಯ್ಯ ಸ್ವಾಮಿಪುತ್ರ ತಾಳಿ ಕಟ್ಟಬೇಕಾಗಿತ್ತು. ಬೆಳಗಿನ ಜಾವ ಹೃದಯಾಘಾತದಿಂದ ಶರಣಯ್ಯ ಸ್ವಾಮಿ ಸಾವನಪ್ಪಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಶರಣಯ್ಯ ಸ್ವಾಮಿ, ಮಗನ ಮದುವೆ ಮಾಡಲು ಲವಲವಿಕೆಯಿಂದ ಓಡಾಡಿಕೊಂಡಿದ್ದರು. ವರನ ತಂದೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಮದುವೆ ಸಮಾರಂಭವನ್ನು ರದ್ದುಗೊಳಿಸಲಾಗಿದೆ.

Read More

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಂಎಸ್ ಉಮೇಶ್​ ಕೊನೆಯುಸಿರೆಳೆದಿದ್ದಾರೆ. ಅವರು ಲಿವರ್ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅವರು ಕಳೆದ ತಿಂಗಳು ಮನೆಯಲ್ಲಿ ಕಾಲು ಜಾರಿ ಬಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಎಂಆರ್​ಐ ಹಾಗೂ ಸಿಟಿ ಸ್ಕ್ಯಾನ್ ಮಾಡಿದ ಬಳಿಕ ಲಿವರ್​ನಲ್ಲಿ ದೊಡ್ಡ ಗಾತ್ರದ ಗಡ್ಡೆ ಇರುವುದು ಪತ್ತೆಯಾಗಿತ್ತು. ಲಿವರ್ ಕ್ಯಾನ್ಸರ್ ಆಗಿ ಅದು ಬೇರೆ ಬೇರೆ ಅಂಗಗಳಿಗೆ ಹರಡಿದೆ ಎಂಬುದು ತಿಳಿದುಬಂದಿತ್ತು. ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಕಿದ್ವಾಯಿ ಆಸ್ಪತ್ರೆಯಿಂದ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಜೆಪಿ ನಗರಕ್ಕೆ ಸ್ಥಳಾಂತರಿಸಲಾಯಿತು. ಅಲ್ಲಿ ಕೆಲಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ಬಳಿಕ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಮೇಶ್ ಅವರ ಅಂತಿಮ ದರ್ಶನ ಪಡೆದರು. ಬಳಿಕ ಬನಶಂಕರಿ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು. ಚಿತ್ರರಂಗಕ್ಕೆ ಕಾಲಿಟ್ಟದ್ದೆಗೆ? ಉಮೇಶ್ ಅವರು…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರ ದುರಂತವೊಂದು ನಡೆದಿದ್ದು, ಏರ್ ಗನ್ ಬಾಲ್ಸ್ ತಗುಲಿ ಓರ್ವ ವಿದ್ಯಾರ್ಥಿ ತಲೆಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಿನ್ನೆ ನಡೆದ ಕಾಲೇಜು ಬಿಸಿನೆಸ್ ಫೆಸ್ಟ್ ವೇಳೆ ಅಪಘಾತ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿಯ ಶಾಲೆಯಲ್ಲಿ ಘಟನೆ ಸಂಭವಿಸಿದೆ. 8ನೇ ತರಗತಿ ವಿದ್ಯಾರ್ಥಿ ಚರಣ್ ತೇಜ್ (14) ತಲೆಗೆ ಗಾಯ ನಿನ್ನೆ ವಿದ್ಯಾರ್ಥಿ ಚರಣ್ ತೇಜ್ ಭೇಟಿಗೆ ಪೋಷಕರು ಆಗಮಿಸಿದ್ದರು. ಈ ವೇಳೆ ಪೋಷಕರು ಜೊತೆ ಬಿಸಿನೆಸ್ ಫೆಸ್ಟ್ ಗೆ ಚರಣ್ ತೆರಳಿದ್ದ. ಈ ವೇಳೆ ಏರ್ ಗನ್ ಬಲೂನ್ ಶೂಟ್ ವೇಳೆ ಸ್ಟಾಲ್ ಹಿಂದೆ ಚರಣ್ ನಿಂತಿದ್ದ ಸದ್ಯ ಗಾಯಗೊಂದ ವಿದ್ಯಾರ್ಥಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಗದಗ : ಬುದ್ಧಿವಾದ ಹೇಳಿದ್ದಕ್ಕೆ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗದಲ್ಲಿ ನಡೆದಿದೆ. ನಗರದ ಭೀಷ್ಮ ಕೆರೆಗೆ ಹಾರಿ ಚಂದ್ರಿಕಾ ನಡುವಿನಮನಿ (21) ಎನ್ನುವ ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿದ್ದಾಳೆ. ಚಂದ್ರಿಕಾ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು ಇಂಜಿನಿಯರಿಂಗ್ ಅಂತಿಮ ವರ್ಷದಲ್ಲಿ ಓದುತ್ತಿದ್ದಳು. ಬಾಗಲಕೋಟೆಯ ಶಿರೂರು ಮೂಲದ ಚಂದ್ರಿಕಾ ಗದಗದಲ್ಲೇ ಬಾಡಿಗೆ ಮನೆಯಲ್ಲಿ ರೂಂ ಮಾಡಿ ವಾಸವಿದ್ದಳು. ಗೆಳತಿಯರ ಜೊತೆ ರೂಮ್ನಲ್ಲಿ ವಾಸವಿದ್ದಳು ನೆನ್ನೆ ರಾತ್ರಿ 1:30ಕ್ಕೆ ಚಂದ್ರಿಕಾ ಹೊರಗಡೆ ಹೋಗಿದ್ದಾಳೆ. ಚಂದ್ರಿಕಾ ಶವವಾಗಿ ಪತ್ತೆಯಾಗಿದ್ದಾಳೆ. ಅಣ್ಣ ಬುದ್ಧಿವಾದ ಹೇಳಿದ್ದಕ್ಕೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಎಸ್ ಎಸ್ ಎಲ್ ಸಿ ಪಿಯುಸಿಯಲ್ಲಿ ಒಳ್ಳೆ ಮಾರ್ಕ್ಸ್ ಬಂದಿದೆ, ಇತ್ತೀಚಿಗೆ ಚಂದ್ರಿಕಾ ಓದುವುದರಲ್ಲಿ ಆಸಕ್ತಿ ಕಡಿಮೆ ಮಾಡಿದ್ದಳು ಹಾಗಾಗಿ ನಾನು ಸ್ವಲ್ಪ ಓದಿನ ಕಡೆಗೆ ಗಮನ ಕೊಡು ಚೆನ್ನಾಗಿ ಓದು ಅಂತ ಹೇಳಿದ್ದಕ್ಕೆ ಚಂದ್ರಿಕಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಚಂದ್ರಿಕಾ ಸಹೋದರ ಆಳಲು ತೋಡಿಕೊಂಡಿದ್ದಾರೆ.

Read More