Author: kannadanewsnow05

ಬೆಂಗಳೂರು : ಹಬ್ಬಕ್ಕೆಂದು ಊರಿಗೆ ಹೋಗುವವರೇ ಈ ಸುದ್ದಿಯನ್ನು ಒಮ್ಮೆ ಓದಿ ಏಕೆಂದರೆ ಮಂಗಳವಾರದಿಂದ ಸರ್ಕಾರಿ ಬಸ್ ಗಳು ರಸ್ತೆಗೆ ತಿಳಿಯಲ್ಲ. ಆಗಸ್ಟ್ 5 ರಿಂದ ಸಾರಿಗೆ ನೌಕರರ ಅನಿರ್ದಿಷ್ಟವಧಿ ಮುಷ್ಕರಕ್ಕೆ ಸಾರಿಗೆ ಸಂಘಟನೆಗಳು ಇದೀಗ ಸಜ್ಜಾಗಿವೆ. BMTC, KSRTC, NWKRTC, ಹಾಗು KKRTC ಬಸ್ ಸ್ಥಗಿತ ಕೊಳ್ಳುತ್ತವೆ. ವೇತನ ಹೆಚ್ಚಳ ಮಾಡದ ಸರ್ಕಾರದ ಮೇಲೆ ನೌಕರರು ಇದೀಗ ಆಕ್ರೋಶ ಹೊರ ಹಾಕಿದ್ದು, ಆರು ತಿಂಗಳಿನಿಂದ ನೌಕರರ ವೇತನ ಪರಿಷ್ಕರಣಿಗೆ ಸರ್ಕಾರ ಮೀನಮೇಷ ಎಣಿಸುತ್ತಿದೆ. ಕಳೆದ ವರ್ಷ ಡಿಸೆಂಬರ್ 31ರಂದು ಮುಷ್ಕರಕ್ಕೆ ನೌಕರರು ಕರೆ ನೀಡಿದ್ದರು.ಅಂದು ಸಮಾಧಾನ ಸಭೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ ಸರ್ಕಾರ ನೀಡಿತ್ತು. ಆದರೆ ಇದುವರೆಗೂ ನೌಕರರ ಬೇಡಿಕೆಗೆ ರಾಜ್ಯ ಸರ್ಕಾರ ಈಡೇರಿಸಿಲ್ಲ. ಹಾಗಾಗಿ ಆಗಸ್ಟ್ 5 ರಿಂದ ಬಸ್ ನಿಲ್ಲಿಸಿ ಪುಷ್ಕರ ಆರಂಭಿಸುತ್ತೇವೆ ಮತ್ತು ನಿಗಮಗಳ ಅಧಿಕಾರಿಗಳಿಗೆ ಪುಷ್ಕರದ ನೋಟಿಸ್ ಕೂಡ ಕಳುಹಿಸಲಾಗಿದೆ ಬೇಡಿಕೆ ಈಡೇರಿಸದಿದ್ದರೆ ಮುಷ್ಕರ ಗ್ಯಾರಂಟಿ ಎಂದು ತಿಳಿಸಿವೆ. ಖಾಸಗಿ ಬಸ್ ಮಾಲೀಕರ…

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಕೆಲವೇ ಕ್ಷಣಗಳಲ್ಲಿ 9ನೇ ಪಾಯಿಂಟ್ ನಲ್ಲಿ ನೆಲ ಆಗೆಯುವ ಪ್ರಕ್ರಿಯ ಆರಂಭವಾಗಲಿದೆ. 9ನೇ ಸ್ಥಳದಲ್ಲಿ ಆರರಿಂದ ಏಳು ಶವಗಳನ್ನು ಕೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ನೀಡಿದ್ದಾನೆ. ಶವ ಹೂತು ಹಾಕಿರುವ ಬಗ್ಗೆ ದೂರುದಾರ ಎಸ್ಐಟಿಗೆ ಮಾಹಿತಿ ನೀಡಿದ್ದಾನೆ. ದೂರುದಾರನ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಅಧಿಕಾರಿಗಳು ಇದೀಗ ಆತನ ಮಾಹಿತಿಯಂತೆ 9ನೇ ಪಾಯಿಂಟ್ ನಲ್ಲಿ ಅಸ್ತಿಪಂಜರಗಳು ಸಿಗುತ್ತವಾ? ಅಥವಾ ಇಲ್ಲವಾ? ಎನ್ನುವುದು ಇವರ ಕುತೂಹಲ ಮೂಡಿಸಿದೆ. ಈಗಾಗಲೇ 9ನೇ ಪಾಯಿಂಟಲ್ಲಿ ಶೋಧ ಕಾರ್ಯ ಆರಂಭವಾಗಿದ್ದು ಸುಮಾರು 45ಕ್ಕೂ ಹೆಚ್ಚು ಕಾರ್ಮಿಕರ ಜೊತೆಗೆ ಅಧಿಕಾರಿಗಳು ಶೋಧ ಕಾರ್ಯಕ್ಕೆ ಇಳಿದಿದ್ದಾರೆ. ಈಗಾಗಲೇ 9ನೇ ಪಾಯಿಂಟ್ ಸ್ಥಳದಲ್ಲಿ ಹಸಿರು ಪರದೆ ಅಳವಡಿಸಲಾಗಿದೆ.

Read More

ಬಳ್ಳಾರಿ : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರವಿಹಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.. ರವಿಹಾಳ ಗ್ರಾಮದ ವೀರೇಶ್ ಪುತ್ರ ಸಿರಿ (4) ಶವವಾಗಿ ಪತ್ತೆಯಾಗಿದ್ದಾನೆ. ಸಿರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಕುಟುಂಬ ಮತ್ತು ಗ್ರಾಮಸ್ಥರು ಇಡೀ ಗ್ರಾಮವನ್ನೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ. ನಿನ್ನೆ ಸಂಜೆ ಬಾವಿಯಲ್ಲಿ ಸ್ಥಳೀಯರು ಶವ ತೇಲುತ್ತಿರುವುದನ್ನು ನೋಡಿದ್ದಾರೆ. ಘಟನಾ ಸ್ಥಳಕ್ಕೆ ಸದ್ಯ ಸಿರುಗುಪ್ಪಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Read More

ಕಲಬುರ್ಗಿ : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವು ಮುಂದುವರೆದಿದ್ದು, ಕಳೆದ ಜೂನ್ ಜುಲೈ ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲಿ 45ಕ್ಕೂ ಹೆಚ್ಚು ಜನರು ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದರು. ಇದೀಗ ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ 24 ವರ್ಷದ ಯುವಕನೊಬ್ಬ ಮನೆಯಲ್ಲಿದ್ದಾಗಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಹೌದು ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಜೋಪಡಪಟ್ಟಿ ನಿವಾಸಿ ಪಾಷಾ ಖುರೆಷಿ (24) ಸಾವನಪ್ಪಿದ್ದಾನೆ. ಜೇವರ್ಗಿ ಪಟ್ಟಣದಲ್ಲಿ ಖುರೇಶಿ ಆಟೋ ಚಾಲಕನಾಗಿ ಕೆಲಸ ಮಾಡ್ತಿದ್ದ ಮನೆಯಲ್ಲಿದ್ದಾಗಲೇ ಖುರೇಶಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕುಟುಂಬಸ್ಥರು ಖುರೇಶಿಯನ್ನು ಜೇವರ್ಗಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಕಲ್ಬುರ್ಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಾಗ ಖುರೆಷಿ ತೀವ್ರ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ.

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಭೌತಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅನಾಮಿಕ ವ್ಯಕ್ತಿ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ನೆಲ ಆಗಿದವು ಅಸ್ತಿಪಂಜರ ಹುಡುಕಾಟದಲ್ಲಿ ತೊಡಗಿದೆ ಈಗಾಗಲೇ ಪಾಯಿಂಟ್ ನಂಬರ್ ಆರಲ್ಲಿ ಮನುಷ್ಯನ ದೇಹದ ಹಲವು ಮೂಳೆಗಳು ಸಿಕ್ಕಿದ್ದು ಸ್ಥಿತಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಇದೀಗ ದೂರುದಾರ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದು, ನಾನು ಹರಿಹರಿಯದ ಹುಡುಗಿಯ ಮೃತ ದೇಹವನ್ನು ನೋಡಿದ್ದೆ. ವಯಸ್ಸು 12 ರಿಂದ 15 ವರ್ಷಗಳ ನಡುವೆ ಇತ್ತು ಆ ಬಾಲಕಿ ಶಾಲಾ ಸಮವಸ್ತ್ರದ ಶರ್ಟ್ ಧರಿಸಿದ್ದಳು. ಅವಳ ಲಂಗ ಮತ್ತು ಒಳಉಡುಪು ಇರಲಿಲ್ಲ. ಲೈಂಗಿಕ ಆಕ್ರಮಣದ ಸ್ಪಷ್ಟ ಲಕ್ಷಣ ಕಾಣಿಸುತ್ತಿತ್ತು. ಅವಳ ಕುತ್ತಿಗೆ ಹಿಸುಕಿರುವ ಗುರುತುಗಳು ಸಹ ಇದ್ದವು. ನನಗೆ ಗುಂಡಿ ಅಗೆಯಲು ನಿರ್ದೇಶನ ನೀಡಿದ್ದರು. ಅವಳ ಶಾಲಾ ಬ್ಯಾಗ್ ನೊಂದಿಗೆ ಹೂಳಲು ನನಗೆ ಹೇಳಿದ್ದರು.ಆ ಸನ್ನಿವೇಶ ನನಗೆ ಇಂದಿಗೂ ಮಾಸಿಲ್ಲ ಎಂದು ದೂರುದಾರ ಹೇಳಿಕೆ ನೀಡಿದ್ದಾನೆ.…

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಭೌತಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅನಾಮಿಕ ವ್ಯಕ್ತಿ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ನೆಲ ಆಗಿದವು ಅಸ್ತಿಪಂಜರ ಹುಡುಕಾಟದಲ್ಲಿ ತೊಡಗಿದೆ ಈಗಾಗಲೇ ಪಾಯಿಂಟ್ ನಂಬರ್ ಆರಲ್ಲಿ ಮನುಷ್ಯನ ದೇಹದ ಹಲವು ಮೂಳೆಗಳು ಸಿಕ್ಕಿದ್ದು ಸ್ಥಿತಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರಿಗೆ ದೂರು ನೀಡಲು ಎಸ್ಐಟಿ ಕಳೆದ ಎರಡು ದಿನಗಳ ಹಿಂದೆ ಸಹಾಯವಾಣಿ ಆರಂಭಿಸಿತ್ತು. ಎಸ್ ಐ ಟಿ ತೆರೆದಿರುವ ಸಹಾಯವಣಿಗೆ ಇದೀಗ ನೂರಾರು ಕರೆಗಳು ಬರುತ್ತಿವೆ. ರಾಜ್ಯ ಅಷ್ಟೆ ಅಲ್ಲದೇ ಹೊರ ರಾಜ್ಯಗಳಿಂದ ನೂರಾರು ಕರೆಗಳು ಬರುತ್ತಿವೆ. ಆದರೆ ತನಿಖೆಯ ವಿವರ ಕೇಳುವುದಕ್ಕೆ ಈ ಒಂದು ಕರೆಗಳು ಬರುತ್ತಿರವೆ ಎಂದು ತಿಳಿದು ಬಂದಿದೆ. ಕೇಸ್ ಪ್ರಗತಿಯ ಬಗ್ಗೆ ಬಹುತೇಕರು ಮಾಹಿತಿ ಕೇಳುತ್ತಿದ್ದಾರೆ. ಕರೆ ಮಾಡಿ ಕೆಲವರು ಸಲಹೆಯನ್ನು ಕೂಡ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಇದುವರೆಗೂ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಈ…

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ 6ನೇ ಪಾಯಿಂಟ್ ನಲ್ಲಿ ಮನುಷ್ಯನ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ. ಇದರ ಬೆನ್ನಲ್ಲೆ ಎಸ್ಐಟಿ ಅಧಿಕಾರಿಗಳು ತನಿಕೆಯನ್ನು ಚುರುಕುಗೊಳಿಸಿದ್ದು, ವಿಧಿ ವಿಜ್ಞಾನ ವರದಿ ಬರುವ ಮುನ್ನವೇ ಎಸ್ಐಟಿ ತನಿಖೆ ಶುರುಮಾಡಿದೆ. ಹೌದು ಹಲವು ದಾಖಲೆಯನ್ನು ಇದೀಗ ಎಸ್ಐಟಿ ಅಧಿಕಾರಿಗಳ ತಂಡ ಸಂಗ್ರಹಿಸುತ್ತಿದೆ. ಧರ್ಮಸ್ಥಳ ಗ್ರಾಮ್ ಪಂಚಾಯಿತಿ ವ್ಯಾಪ್ತಿಯ ಶವಗಳ ದಫನ್ ಆದ ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ. ಬೆಳ್ತಂಗಡಿ ಧರ್ಮಸ್ಥಳ ಪೊಲೀಸ್ ಠಾಣೆಗಳ ವಿಡಿಯೋ ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪಾಯಿಂಟ್ 6ರಲ್ಲಿ ಶವ ಹೂತ ವರ್ಷದ ಬಗ್ಗೆಯೂ ಎಸ್ ಐ ಟಿ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಈ ಕುರಿತು ದೂರುದಾರನಿಂದ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ದೂರುದಾರ ಕೊಟ್ಟ ಇಸವಿಯ ಮಾಹಿತಿ ಹಿನ್ನೆಲೆಯಲ್ಲಿ ದಾಖಲೆ ಹುಡುಕಾಟ ನಡೆಸುತ್ತಿದ್ದಾರೆ. ಯುಡಿಆರ್ ಸಂಬಂಧಿಸಿದ ದಿನಾಂಕ ಮತ್ತು ದಪನ್ಗೆ ದಾಖಲೆ ಹುಡುಕಾಟ ನಡೆಸುತ್ತಿದ್ದಾರೆ. ಧರ್ಮಸ್ಥಳ ಔಟ್ ಪೋಸ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಯಾವುದೇ ಕ್ಷಣದಲ್ಲಿ ಹೊರಟನೆಯ ಪೊಲೀಸರಿಗೆ ಎಸ್ಐಟಿ ಬುಲಾವ್…

Read More

ತುಮಕೂರು : ಕಳೆದ ಕೆಲವು ತಿಂಗಳ ಹಿಂದೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಸರಣಿ ಆತ್ಮಹತ್ಯೆ ಪ್ರಕರಣ ನಡೆದಿದ್ದವು. ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಮೈಕ್ರೋಫೈನಾನ್ಸ್ ಕಿರುಕುಳತಡೆಗೆ ಕಠಿಣ ಕಾನೂನು ಜಾರಿಗೆ ತದಿತು. ಆದರೂ ಸಹ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನಿಂತಿಲ್ಲ ಇದೀಗ ತುಮಕೂರು ಜಿಲ್ಲೆಯ ಶಿರಾದಲ್ಲಿ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಹೋಟೆಲ್ ಮಾಲೀಕರು ಒಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಮೈಕ್ರೊಫೈನಾನ್ಸ್ ಸಂಸ್ಥೆಗಳ ಸಾಲ ಮರುಪಾವತಿಗಾಗಿ ಸಿಬ್ಬಂದಿ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಹೋಟೆಲ್ ಉದ್ಯಮಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ತಾಲ್ಲೂಕಿನ ಬಡಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಜಗನ್ನಾಥ್ (40) ಎಂದು ಗುರುತಿಸಲಾಗಿದೆ. ಹೋಟೆಲ್ ನಡೆಸುತ್ತಿದ್ದ ಜಗನ್ನಾಥ್ ಅವರು, ತಮ್ಮ ವ್ಯವಹಾರದ ಅಗತ್ಯಗಳಿಗಾಗಿ ಪತ್ನಿ ಗಿರಿಜಾ ಅವರ ಹೆಸರಿನಲ್ಲಿ ಕನಕ ಬ್ಯಾಂಕ್, ಬಜಾಜ್ ಫೈನಾನ್ಸ್ ಮತ್ತು ಸಮರ್ಥ ಫೈನಾನ್ಸ್ ಸಂಸ್ಥೆಗಳಿಂದ ಒಟ್ಟು ₹5 ಲಕ್ಷ ಸಾಲ ಪಡೆದಿದ್ದರು. ಈ ಸಾಲವನ್ನು…

Read More

ಬೆಂಗಳೂರು : ಕರ್ನಾಟಕ ಮಾತ್ರವಲ್ಲ ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಕೋರ್ಟ್ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಆದರೆ ಶಿಕ್ಷೆ ಪ್ರಮಾಣ ಇಂದು ಪ್ರಕಟಿಸಲಿದೆ. ಹಾಗಾಗಿ ಇದೀಗ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ ಎಷ್ಟು ವರ್ಷಗಳ ಕಾಲ ಶಿಕ್ಷೆ ಪ್ರಕಟಿಸಲಿದೆ ಎಂದು ಕಾದು ನೋಡಬೇಕಾಗಿದೆ. ಮೈಸೂರಿನ ಕೆ.ಆರ್ ನಗರದ 47 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಸಂಬಂಧ ಶುಕ್ರವಾರ ಪ್ರಜ್ವಲ್ ರೇವಣ್ಣ ವಿರುದ್ಧ ಅಂತಿಮ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರದ ಸಂತೋಷ್ ಗಜಾನನ ಭಟ್ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಪ್ರಕಟಿಸಿದ್ದು, ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುವುದು. ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಈಗಾಗಲೇ ಒಂದು ವರ್ಷ ನಾಲ್ಕು ತಿಂಗಳಿನಿಂದ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಜೈಲುವಾಸ ಕಾಯಂ ಆಗಲಿದ್ದು, ಜಾಮೀನು ಸಿಗುವ ಬಾಗಿಲು ಮುಚ್ಚಲಿವೆ. ಒಂದು ವೇಳೆ ಅಪರಾಧ…

Read More

ಮುಂಬೈ : ನಮ್ಮ ದಾಂಪತ್ಯದ ಕುರಿತ ಸುದ್ದಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ, ಟೀಕೆ ನೋಡಿ ಖಿನ್ನತೆಗೆ ಜಾರಿದ್ದೆ. ಈ ಸಂದರ್ಭದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆಯೂ ಯೋಚಿಸಿದ್ದೆ ಎಂದು ಟೀಂ ಇಂಡಿಯಾ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸುಮಾರು 5 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದ ಯಜುವೇಂದ್ರ ಮತ್ತು ಧನಶ್ರೀ ಅವರಿಗೆ ಈ ವರ್ಷದ ಮಾರ್ಚ್ 20 ರಂದು ಬಾಂಬೆ ಹೈಕೋರ್ಟ್ ವಿಚ್ಛೇದನ ನೀಡಿತ್ತು. ಡಿವೋರ್ಸ್‌ ಪಡೆಯುವ ಕೆಲ ತಿಂಗಳ ಮೊದಲು ಆತ್ಮಹತ್ಯೆಯ ಆಲೋಚನೆಗಳು ಬರುತ್ತಿದ್ದವು ಎಂದು ಚಹಲ್‌ ಹೇಳಿದರು. ಧನಶ್ರೀ ವರ್ಮಾಗೆ ವಿಚ್ಛೇದನ ನೀಡಿದ ವಿಚಾರದ ಬಗ್ಗೆ ಇದೇ ಮೊದಲ ಬಾರಿಗೆ ಚಹಲ್‌ ಮೌನ ಮುರಿದಿದ್ದಾರೆ. ರಾಜ್ ಶಮಾನಿ ಯೂಟ್ಯೂಬ್ ಚಾನಲ್‌ನಲ್ಲಿ ವಿಚ್ಛೇದನದ ಬಗ್ಗೆ ಸಾಕಷ್ಟು ವಿಚಾರ ತಿಳಿಸಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ಸಮಯದಲ್ಲಿ ನಾನು ರಾಜ್ಯ ಕ್ರಿಕೆಟ್‌ ತಂಡದಿಂದ ವಿರಾಮ ಕೇಳಿದ್ದೆ. ನಮ್ಮಿಬ್ಬರ ಮಧ್ಯೆ ಹೊಂದಾಣಿಕೆಯಾಗದ ಕಾರಣ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದೆ. ಈ…

Read More