Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಆರೋಪ ಹಾಗೂ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬೆಂಗಳೂರಿನ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ಈಗಾಗಲೇ ಜೈಲಿಗೆ ಹೋಗಿ ಬಿಡುಗಡೆಯಾಗಿದ್ದಾರೆ. ಇದೀಗ ಅವರ ವಿರುದ್ಧ ಮತ್ತೊಂದು fir ದಾಖಲಾಗಿದ್ದು ಸ್ಲಂ ಏರಿಯಾದಲ್ಲಿನ ದಿನಗೂಲಿ ಕೆಲಸಗಾರರ ಮೇಲೆ ದೌರ್ಜನ್ಯ ಎಸಗಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ RMC ಯಾಡ್ ಪೊಲೀಸ್ ಠಾಣೆಯಲ್ಲಿ ಜನಗೂಲಿ ನೌಕರರು ಮುನಿರತ್ನ ವಿರುದ್ಧ FIR ದಾಖಲಿಸಿದ್ದಾರೆ. ಹೌದು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ದಿನಗೂಲಿ ಕೆಲಸ ಮಾಡುವವರ ಮೇಲೆ ದೌರ್ಜನ್ಯ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅಕ್ಕಮಹಾದೇವಿ ನೌಕರರು ಬೆಂಗಳೂರು ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯ ಸ್ಲಂನಲ್ಲಿರುವ ದಿನಗೂಲಿ ನೌಕರರ ಮೇಲೆ ಮುನಿರತ್ನ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮುನಿರತ್ನ ಮತ್ತು ಸಹಚರರಿಂದ ಮನೆಗಳ ನೆಲಸಮ ಆರೋಪ ಕೇಳಿ ಬಂದಿದೆ.ವಸಂತ್ ಕುಮಾರ್, ಚನ್ನಕೇಶವ, ನವೀನ್, ರಾಮ, ಕಿಟ್ಟಿ ಗಂಗಾ ಎಂಬುವವರು…
ಹಾಸನ : ಹಾಸನದಲ್ಲಿ ಪತಿ ಹಾಗೂ ಅತ್ತೆ ಮಾವ ಅವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಒಬ್ಬಳು ನೇಣು ತೆಗೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಕಲೇಶಪುರ ತಾಲೂಕಿನ ಧನ್ಯಶ್ರೀ (20) ಎಂದು ತಿಳಿದುಬಂದಿದೆ. ಕಳೆದ 2 ವರ್ಷದ ಹಿಂದೆ ಧನ್ಯಶ್ರೀ ಹಾಗೂ ಪ್ರೇಮ್ಕುಮಾರ್ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಒಂದು ವರ್ಷದಿಂದ ಪ್ರೇಮ್ಕುಮಾರ್ ಆಕೆಗೆ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ತವರು ಮನೆಗೆ ಹೋಗಿದ್ದ ಧನ್ಯಶ್ರೀ ಭಾನುವಾರ ಅತ್ತೆ ಮನೆಗೆ ವಾಪಸ್ ಬಂದಿದ್ದಳು. ಆ ವೇಳೆ ಯಾಕೆ ವರದಕ್ಷಿಣೆ ತಂದಿಲ್ಲ ಎಂದು ಜಗಳ ಮಾಡಿ ಆಕೆಯ ಮೇಲೆ ಹಲ್ಲೆ ಮಾಡಿದ್ದ.ಇದೇ ಸಮಯದಲ್ಲಿ ಪತಿಯೊಂದಿಗೆ ಅತ್ತೆ ಭವಾನಿ, ಮಾವ ಪ್ರದೀಪ್ ಕೂಡ ಆಕೆಯ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ಮನನೊಂದ ಮಹಿಳೆ ಸೋಮವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಬೆಂಗಳೂರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್ : ಆರೋಪಿಗಳ ವಿರುದ್ಧ ಕಠಿಣ ಕ್ರಮ: CM ಸಿದ್ದರಾಮಯ್ಯ
ಬೆಳಗಾವಿ : ಬೆಂಗಳೂರಿನಲ್ಲಿ ಬಸ್ ಗೈಡ್ ಕಾಯುತ್ತಿದ್ದ ಮಹಿಳೆಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಸಮಾಜಘಾತಕ ವ್ಯಕ್ತಿಗಳಿಂದ ಇಂತಹ ಕೃತ್ಯ ನಡೆಯುತ್ತವೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಾಜಘಾತುಕ ಶಕ್ತಿಗಳಿಂದ ಇಂತಹ ಕೃತ್ಯಗಳು ನಡೆಯುತ್ತವೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚಿ ಪೊಲೀಸರು ಬಂಧಿಸುತ್ತಾರೆ. ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಪಕ್ಷದಿಂದ ಗಾಂಧಿ ಭಾರತ ಸಮಾವೇಶ ಆಯೋಜನೆ ಕುರಿತು ಗಾಂಧಿ ತತ್ವಗಳನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಈ ಒಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಗಾಂಧಿ, ಬಸವಣ್ಣ, ಅಂಬೇಡ್ಕರ್ ಹಾಗೂ ಕನಕದಾಸರ ತತ್ವ ಪಾಲಿಸಬೇಕು. ಸಂವಿಧಾನವನ್ನು ವಿರೋಧಿಸುವ ಕೆಲಸಗಳು ನಡೆಯುತ್ತಿವೆ.ಹೀಗಾಗಿ ಗಾಂಧಿ ತತ್ವ ಆದರ್ಶಗಳನ್ನು ಪುನರ್ ಸ್ಥಾಪಿಸಬೇಕಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ನಟ ದರ್ಶನ್ ಅವರ ಬಳಿ ಇರುವ ಎರಡು ಗನ್ ಲೈಸೆನ್ಸ್ ಅಮಾನತುಗೊಳಿಸಿ ಇದೀಗ ಪೊಲೀಸ್ ಆಡಳಿತ ವಿಭಾಗ ಸೂಚನೆ ಹೊರಡಿಸಿದ್ದು ಎರಡು ಕಣ್ಣುಗಳನ್ನು ವಶಕ ಪಡೆಯುವಂತೆ ಬೆಂಗಳೂರಿನ ನಗರ ಠಾಣೆಯ ಪೊಲೀಸರಿಗೆ ಸೂಚಿಸಲಾಗಿದೆ. ಹೌದು ಕೊಲೆ ಆರೋಪಿ ದರ್ಶನ್ ಗನ್ ಲೈಸೆನ್ಸ್ ಅಮಾನತು ಮಾಡಿ ಪೊಲೀಸ್ ಇಲಾಖೆ ಆಡಳಿತ ವಿಭಾಗದಿಂದ ಇದೀಗ ಸೂಚನೆ ನೀಡಲಾಗಿದೆ. ಆರ್ ಆರ್ ನಗರ ಠಾಣೆಯ ಪೊಲೀಸರಿಗೆ ಈ ಕುರಿತು ಸೂಚನೆ ನೀಡಿದ್ದು, ಎರಡು ಗನ್ ಗಳನ್ನು ವಶಕ್ಕೆ ಪಡೆದುಕೊಳ್ಳಲು ಸೂಚನೆ ಕೊಡಲಾಗಿದೆ. ಪ್ರಕರಣದ ಟ್ರಯಲ್ ಮುಗಿಯುವವರೆಗೂ ಲೈಸೆನ್ಸ್ ಅಮಾನತು ಮಾಡಿ ಎಂದು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ರಾಜ್ಯದಲ್ಲಿ ಸಾಲು ಸಾಲು ದರೋಡೆ ಪ್ರಕರಣಗಳು ನಡೆಯುತ್ತಿವೆ. ನಿನ್ನೆ ಮೈಸೂರಲ್ಲಿ ಕೇರಳ ಮೂಲದ ಉದ್ಯಮಿಯ ಹಣ ಹಾಗೂ ಕಾರಿನ ಸಮೇತ ದರೋಡೆ ಮಾಡಿದರೆ ಹುಬ್ಬಳ್ಳಿಯಲ್ಲಿ ಕೆನರಾ ಬ್ಯಾಂಕ್ ಅನ್ನು ಖದೀಮರು ದರೋಡೆಗೆ ಯತ್ನಿಸಿ ವಿಫಲರಾಗಿದ್ದಾರೆ.ಇದೀಗ ಬೆಂಗಳೂರಿನಲ್ಲಿ ಕೂಡ ಈ ಒಂದು ಮುಸುಕುಧಾರಿ ಗ್ಯಾಂಗ್ ಬೆಂಗಳೂರಿನ ಕೆಆರ್ ಪುರಂನಲ್ಲಿ ಪ್ರತ್ಯಕ್ಷವಾಗಿದೆ. ಹೌದು ಮೂರು ಜನ ಕಳ್ಳರ ಈ ಒಂದು ಗ್ಯಾಂಗ್ ಕೈಯಲ್ಲಿ ಮಾರಾಕಸ್ತ್ರ ಹಿಡಿದುಕೊಂಡು ರಾತ್ರಿ 2.30 ರ ಸುಮಾರಿಗೆ ಮನೆ ಕಳ್ಳತನಕ್ಕೆ ಸ್ಕೆಚ್ ಹಾಕಿದ್ದಾರೆ. ಕೆಆರ್ ಪುರಂ ನ ಕಿತ್ತಗನೂರಿನಲ್ಲಿ ಮೂವರು ಕಳ್ಳರು ರೌಂಡ್ಸ್ ಹಾಕಿದ್ದಾರೆ. ರಾಜಾರೋಷವಾಗಿ ಮನೆಗಳ ಬಳಿ ಓಡಾಡಿರುವ ಗ್ಯಾಂಗ್ ಮುಸುಕು ಧರಿಸಿ ಮೂವರು ಖದೀಮರು ಎಂಟ್ರಿ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಹಜವಾಗಿ ಕೆಆರ್ ಪುರಂ ಸುತ್ತಮುತ್ತಲು ಏರಿಯಾಗಳಲ್ಲಿನ ಜನರಿಗೆ ಆತಂಕ ಸೃಷ್ಟಿಯಾಗಿದೆ.
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಳಗಾವಿಯಲ್ಲಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. 5ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಆರೋಪಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ನಡೆದಿದೆ. ಹೌದು ರಾಮದುರ್ಗ ತಾಲೂಕಿನ ಕೊಣ್ಣೂರು ಗ್ರಾಮದ ಈರಪ್ಪ ಕರಡಿ ಎಂಬಾತನೇ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೊಬೈಲ್ ಆಸೆ ತೋರಿಸಿ 5 ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಹೆಸರುವ ವಿಚಾರ ಬಾಲಕಿಯ ಮನೆಯಲ್ಲಿ ಗೊತ್ತಾದ ಬಳಿಕ ಭಾವ ಪ್ರಜ್ಞೆಯಿಂದ ಆರೋಪಿ ಈರಪ್ಪ ಕಡಾಡಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಕಡಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ನಾಳೆ ಬೆಳಗಾವಿಯಲ್ಲಿ ಗಾಂಧಿ ಸಮಾವೇಶ ಹಿನ್ನೆಲೆಯಲ್ಲಿ ಬೆಳಗಾವಿ ನಗರ ತಾಲೂಕಿನ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಡಿಸಿ ಮಹಮ್ಮದ್ ರೋಷನ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಅಲ್ಲದೆ ನಾಳೆ ಪ್ರಾಥಮಿಕ ಹಾಗೂ ಪ್ರೌಢಶಾಲೆ ಅಂಗನವಾಡಿ, ಬೆಳಗಾವಿ ಗ್ರಾಮಾಂತರ ಹಾಗೂ ನಗರದ ಎಲ್ಲಾ ಶಾಲೆಗಳು ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೂ ಕೂಡ ನಾಳೆ ರಜೆ ಘೋಷಿಸಿ ಡಿಸಿ ಮಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಬೀದರ್ : ರಾಶಿ ಮಾಡಿ ಕೂಡಿಟ್ಟಿದ್ದ ತೊಗರಿ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗೋಳಿ ಲಕ್ಷಾಂತರ ರೂಪಾಯಿ ಮೌಲ್ಯದ ತೊಗರಿ ಬೆಳೆ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯ ಬಾಲಕಿ ತಾಲೂಕಿನ ಕೇಸರ ಜವಳಗ ಗ್ರಾಮದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಹೌದು ಕೆಸರ ಜವಳಗ ಗ್ರಾಮದಲ್ಲಿ ಈ ಒಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೀದರ್ ಜಿಲ್ಲೆಯ ಬಾಲಕಿ ತಾಲೂಕಿನ ಕೆಸರ ಜವಳಗ ಗ್ರಾಮದಲ್ಲಿ ಆಕಸ್ಮಿಕವಾಗಿ ಹೊತ್ತಿದ ಬೆಂಕಿಯಿಂದ ತೊಗರಿ ಬಣವೆ ಬೆಂಕಿಗೆ ಆಹುತಿಯಾಗಿದೆ. ಸುಮಾರು 45 ಕ್ವಿಂಟಲ್ ಗು ಅಧಿಕ ತೊಗರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಗ್ರಾಮದ ಪ್ರತಿಭಾ ಕೊಳೇಕರ್ ಎಂಬ ರೈತ ಮಹಿಳೆಗೆ ಈ ಒಂದು ತೊಗರಿ ಸೇರಿತ್ತು ಎನ್ನಲಾಗಿದೆ. ರಾಶಿ ಮಾಡಲು ಕೂಡಿ ಹಾಕಿದ್ದ ಬಣವೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಈ ಒಂದು ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ತೊಗರಿ ನಷ್ಟವಾಗಿದೆ. ಘಟನೆ ಕುರಿತು ಮೇಹಕಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಷಿಂಗ್ಟನ್ : ಉನ್ನತ ವ್ಯಾಸಂಗಕ್ಕಾಗಿ ಹಾಗೂ ಉದ್ಯೋಗಕ್ಕಾಗಿ ಎಂದು ಭಾರತೀಯರು ವಿದೇಶಕ್ಕೆ ತೆರಳುತ್ತಾರೆ. ಆದರೆ ವಿದೇಶದಲ್ಲಿ ಭಾರತೀಯರ ಮೇಲೆ ನಿರಂತರವಾಗಿ ಹಲ್ಲೆ ಹಾಗೂ ದಾಳಿ ನಡೆಯುತ್ತಲೇ ಇರುತ್ತೆ. ಇದೀಗ ಹೈದರಾಬಾದ್ ಮೂಲದ ಯುವಕನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ವರದಿಯಾಗಿದೆ. ಹೌದು ಹೈದ್ರಾಬಾದ್ ಮೂಲದ ಯುವಕ ರವಿತೇಜ (26) ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಈ ಒಂದು ಭೀಕರ ಹತ್ಯೆಯು ಅಮೆರಿಕಾದ ವಾಷಿಂಗ್ಟನ್ ಡಿಸಿಯ ಗ್ಯಾಸ್ ಸ್ಟೇಷನ್ ನಲ್ಲಿ ನಡೆದಿದೆ. ಹೈದರಾಬಾದ್ನ ಆರ್ಕೆ ಪುರಂ ಗ್ರೀನ್ ಹಿಲ್ಸ್ ಕಾಲೋನಿಯ ನಿವಾಸಿಯಾಗಿದ್ದು, ಸ್ನಾತಕೋತ್ತರ ಪದವಿ ಪಡೆಯುವ ಸಲುವಾಗಿ 2022ರಲ್ಲಿ ಅಮೆರಿಕಗೆ ತೆರಳಿದ್ದರು. ಉನ್ನತ ವ್ಯಾಸಂಗ ಶಿಕ್ಷಣ ಮುಗಿಸಿದ ಬಳಿಕ ರವಿತೇಜ ಅವರು ಅಲ್ಲಿಯೇ ಉದ್ಯೋಗಕ್ಕಾಗಿ ಅರಸುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಅವರನ್ನು ಹತ್ಯೆಗೈದಿದ್ದಾರೆ. ಸ್ಥಳೀಯ ಪೊಲೀಸರು ದಾಳಿಯ ಹಿಂದಿನ ಉದ್ದೇಶವನ್ನು ತನಿಖೆ ಮಾಡುತ್ತಿದ್ದಾರೆ ಮತ್ತು ದುಷ್ಕರ್ಮಿಗಳನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು…
ವಿಜಯಪುರ : ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಮನಸೋಇಚ್ಛೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದವರ ಪೈಕಿ ಇಟ್ಟಿಗೆ ಕಾರ್ಖಾನೆ ಮಾಲೀಕ ಖೇಮು ರಾಠೋಡ್, ವಿಶಾಲ ಜುಮನಾಳ ಹಾಗೂ ಸಚಿವ ಮಾನವರ ಅನ್ನು ಪೊಲೀಸರು ಗಾಂಧಿನಗರದ ಖೇಮು ನಿವಾಸದಲ್ಲಿ ಬಂಧಿಸಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಹೋಗಿದ್ದವರು ಹಿಂದಿರುಗುವುದು ತಡವಾಗಿದ್ದಕ್ಕೆ ಮೂವರು ಕಾರ್ಮಿಕರ ಪಾದಗಳಿಗೆ ಕಟ್ಟಿಗೆ, ಪೈಪ್ಗಳಿಂದ ಹೊಡೆದಿದ್ದಾರೆ. ಕಾರ್ಮಿಕರ ಮೇಲೆ ಹಲ್ಲೆ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಮಾನವೀಯ ಹಲ್ಲೆ ಸಂಬಂಧ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಪ್ರಕರಣ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಹಲ್ಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾರೇ ತಪ್ಪು ಮಾಡಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.