Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಘೋಷಿಸಿದ್ದಾರೆ. https://kannadanewsnow.com/kannada/bengaluru-psi-rescues-child-from-water-sump/ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ ಮಾಡಿದ್ದ. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/%e0%b2%95%e0%b3%87%e0%b2%82%e0%b2%a6%e0%b3%8d%e0%b2%b0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%95%e0%b2%be%e0%b2%82%e0%b2%97%e0%b3%8d%e0%b2%b0%e0%b3%86%e0%b2%b8%e0%b3%8d/ ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು. https://kannadanewsnow.com/kannada/indian-sacrifice-in-ukraine-battlefield-kannadigas-raise-concerns/

Read More

ಬೆಳಗಾವಿ : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಬೇಡಿಕೆ ಯಾಗಿರುವ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಇತರೆ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಲ್ಲದೆ ಎಸ್ ಪಿ ಪಿ ಕಾಯ್ದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. https://kannadanewsnow.com/kannada/indian-sacrifice-in-ukraine-battlefield-kannadigas-raise-concerns/ ಬೆಳಗಾವಿಯ ಸುವರ್ಣ ಸಹೋದರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತರಿಗೆ ಬೆಂಬಲ ಬೆಲೆ ಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ರೈತರು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಸ್‌ಪಿಪಿ ಕಾಯ್ದೆ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. https://kannadanewsnow.com/kannada/election-commission-advises-rahul-gandhi-to-be-more-careful-over-remarks-against-pm-modi/ ರೈತರಿಗೆ ತಲಾ 2 ಸಾವಿರ ರೂ.ಗಳಂತೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ 631 ಕೋಟಿ ರೂ. ನೆರವು ನೀಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಕೃಷಿಹೊಂಡ ಯೋಜನೆಯನ್ನು ಕೂಡ ಇದಕ್ಕೂ ಮುಂಚಿನ ಸರ್ಕಾರ ಸ್ಥಗಿತಗೊಳಿಸಿತ್ತು. ಈ ಬಾರಿ 200 ಕೋಟಿ ರೂ. ಒದಗಿಸುವ…

Read More

ನವದೆಹಲಿ : ರಷ್ಯಾದ ಸರ್ಕಾರಿ ಕಚೇರಿಯೊಂದರಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ನಂತರ ಯೂಕ್ರೇನ್ ವಿರುದ್ಧದ ಯುದ್ಧ ದಲ್ಲಿ ನಿಯೋಜನೆ ಮಾಡಲಾಗಿದ್ದ ಹೈದರಾಬಾದ್‌ನ 30 ವರ್ಷದ ವ್ಯಕ್ತಿಯೊಬ್ಬ ಯುದ್ಧಭೂಮಿಯಲ್ಲಿ ಮೃತಪಟ್ಟಿದ್ದಾನೆಂದು ವರದಿಯಾಗಿದೆ. ಈತನನ್ನು ಮಹಮದ್ ಅಫ್ಘಾನ್ ಎಂದು ಗುರುತಿಸಲಾಗಿದೆ. https://kannadanewsnow.com/kannada/cyber-security-policy-soon-home-minister-g-parameshwara/ ಈತ ಹೇಗೆ ರಷ್ಯಾದ ವಂಚನೆಯ ಬಲೆಗೆ ಬಿದ್ದನೆಂಬುದು ಗೊತ್ತಿಲ್ಲ ಎಂಬುದಾಗಿ ಕುಟುಂಬಸ್ಥರು ಕೆಲವು ದಿನಗಳ ಹಿಂದೆ ಮಾಧ್ಯಮದವರ ಬಳಿ ತಮ್ಮ ಅಳಲನ್ನು ತೋಡಿಕೊಂಡಿದ್ದರು. ಇದರೊಂದಿಗೆ, ರಷ್ಯಾ-ಯೂಕ್ರೇನ್ ಸಮರದಲ್ಲಿ ಈ ರೀತಿಯಾಗಿ ಬಲಿಯಾದವರ ಪಟ್ಟಿಗೆ ಇನ್ನೊಬ್ಬ ಭಾರತೀಯನ ಸೇರ್ಪಡೆಯಾದಂತಾಗಿದೆ. https://kannadanewsnow.com/kannada/laadle-mashak-dargah-controversy-only-15-people-allowed-to-offer-prayers-on-shivratri-says-hc/ ಅವರನ್ನು ವಂಚಿಸಲಾಗಿದೆ. ಅವರು ಮಾಸ್ಕೋದಲ್ಲಿ ಮಾತ್ರವೇ ಕೆಲಸ ಮಾಡಲಿದ್ದಾರೆ. ಎಂದು ಏಜೆಂಟ್ ಹೇಳಿದ್ದ. ಆದರೆ ಅವರಿಗೆ 15 ದಿನಗಳ ತರಬೇತಿ ನೀಡಿ ಯೂಕ್ರೇನ್‌ನಲ್ಲಿ ಬಿಟ್ಟು ಯುದ್ಧದಲ್ಲಿ ಭಾಗವಹಿಸುತ್ತಿರುವ ರಷ್ಯಾ ಯೋಧರೊಂದಿಗೆ ಉಳಿದುಕೊಳ್ಳುವಂತೆ ತಿಳಿಸಲಾಯಿತು ಎಂದು ಮೃತ ಅಫ್ಘಾನ್ ನ ಸೋದರ ಮಹಮದ್ ಇಮ್ರಾನ್ ಹೇಳಿದ್ದಾರೆ. ಅಫ್ಘಾನ್ ಕಳೆದ ವರ್ಷ ನವೆಂಬರ್‌ನಲ್ಲಿ ಮಾಸ್ಕೋಗೆ ತೆರಳಿದ್ದ. https://kannadanewsnow.com/kannada/breaking-sc-dismisses-vinay-kulkarnis-plea-to-enter-dharwad/ ಮಹಮದ್ ಅಫ್ಘಾನ್ ಹೈದ್ರಾಬಾಡಿನಲ್ಲಿ ಬಟ್ಟೆ ಶೋ…

Read More

ಕಲಬುರಗಿ: ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ಶಿವಲಿಂಗ ಎನ್ನಲಾಗುತ್ತಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಾರ್ಚ್ 8 ರಂದು ಶಿವರಾತ್ರಿ ನಿಮಿತ್ತ ಪೂಜೆ ಸಲ್ಲಿಸಲು ಶರತ್ತು ಬದ್ಧ ಅನುಮತಿ ನೀಡಿ ಕಲಬುರಗಿ ಉಚ್ಚ ನ್ಯಾಯಾಲಯ ಪೀಠ ಆದೇಶ ಹೊರಡಿಸಿದೆ. https://kannadanewsnow.com/kannada/breaking-sc-dismisses-vinay-kulkarnis-plea-to-enter-dharwad/ ದರ್ಗಾದ ಆವರಣದಲ್ಲಿ ಮಹಾಶಿವರಾತ್ರಿಯ ದಿನವಾದ ಶುಕ್ರವಾರದಂದು ಮಧ್ಯಾಹ್ನದ ನಂತರ ಪೂಜೆಗೆ 15ಜನ ಹಿಂದೂಗಳಿಗೆ ಅವಕಾಶ ಕೊಟ್ಟಿದೆ. ಪೂಜೆ ಸಲ್ಲಿಸುವ 15 ಜನರ ಪಟ್ಟಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ಸೂಚಿಸಿದೆ. ಇಲ್ಲದಿದ್ದರೆ ಅನುಮತಿ ನೀಡಲಾಗುವುದಿಲ್ಲ ಎಂದು ಸೂಚಿಸಿದೆ. https://kannadanewsnow.com/kannada/west-bengal-police-hands-over-sheikh-shahjahan-to-cbi/ ಕಳೆದ ಬಾರಿಯೂ ಸಹ ಇದೇ ರೀತಿಯಲ್ಲಿ ಉಚ್ಚ ನ್ಯಾಯಾಲಯವು ಅನುಮತಿ ಕೊಟ್ಟಿದ್ದು, ಆದಾಗ್ಯೂ, ಪೂಜೆಯ ನಂತರದಲ್ಲಿ ಹಿಂಸಾತ್ಮಕ ಘಟನೆಗಳು ಸಂಭವಿಸಿದ್ದವು. ಕೇಂದ್ರ ಸಚಿವ ಭಗವಂತ್ ಖೂಬಾ, ಶಾಸಕರಾಗಿದ್ದ ಬಸವರಾಜ್ ಮತ್ತಿಮೂಡ್, ಜಿಲ್ಲಾಧಿಕಾರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಾರುಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಬಾರಿ ಹಿಂದಿನ ಹಿಂಸಾತ್ಮಕ ಘಟನೆಗಳು ಸಂಭವಿಸದಂತೆ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು ಎಂದು ನ್ಯಾಯಾಲಯವು ಜಿಲ್ಲಾಡಳಿತಕ್ಕೆ ಸೂಚಿಸಿದೆ.…

Read More

ನವದೆಹಲಿ : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ಸ್ಥಳೀಯ ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಮಾಜಿ ಸಚಿವ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಿಸಲು ಸಲ್ಲಿಸಿದ್ದ ಅರ್ಜಿಯನ್ನು ರದ್ದುಪಡಿಸಿದೆ. https://kannadanewsnow.com/kannada/west-bengal-police-hands-over-sheikh-shahjahan-to-cbi/ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ ಹಾಗೂ ಹೈಕೋರ್ಟ್ ಧಾರವಾಡ ಪ್ರವೇಶವನ್ನು ನಿರಾಕರಿಸಿ ಆದೇಶ ನೀಡಿದವು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅವನೇ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ನ್ಯಾ. ಎಂ ತ್ರಿವೇದಿ ವಿಚಾರಣೆಯನ್ನು ನಡೆಸಿ ಪ್ರಕರಣವನ್ನು ಸ್ಥಳೀಯ ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಸೂಚಿಸಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/%e0%b2%ae%e0%b3%81%e0%b2%95%e0%b3%8d%e0%b2%a4-%e0%b2%b5%e0%b2%bf%e0%b2%b5%e0%b2%bf-%e0%b2%aa%e0%b3%8d%e0%b2%b0%e0%b2%b5%e0%b3%87%e0%b2%b6%e0%b2%be%e0%b2%a4%e0%b2%bf-%e0%b2%ae%e0%b2%be-31-%e0%b2%b0/ ಈ ವೇಳೆ ಆನೇಕಲ್ ಕರಣಿ ಪರವಾದ ಮಾಡಿದ ವಕೀಲರು ರಾಜಕೀಯ ದೃದ್ದೇಶದಿಂದ ಅವರನ್ನು ಹತ್ತಿಕ್ಕಲು ಯತ್ನಿಸಲಾಗುತ್ತಿದೆ ಎಂದುವಾದ ಮಂಡಿಸಿದರು.ವಾದ ಪ್ರತಿವಾದ ಆಲಿಸಿದ ನಂತರ ಕೊಲೆ ಪ್ರಕರಣದಂತಹ ಗಂಭೀರ ವಿಚಾರದಲ್ಲಿ ಜಾಮೀನಿನ ಮೇಲೆ ಹೊರಗಡೆ ಬಿಟ್ಟಿರುವುದೇ ದೊಡ್ಡ ವಿಚಾರ. ಈಗಾಗಲೇ…

Read More

ಬೆಂಗಳೂರು : ಕಳೆದ ವರ್ಷ ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಇನ್ನು ಹಸಿಯಾಗಿರುವಾಗಲೇ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಆಸರೆ ಆಸ್ಪತ್ರೆಯಲ್ಲಿ 73 ಪ್ರಕರಣಗಳು ಬೆಳಕಿಗೆ ಬಂದಿವೆ. ನೆಲಮಂಗಲದಲ್ಲಿ ಅವ್ಯಾಹತವಾಗಿ ಭ್ರೂಣ ಹತ್ಯೆ ಪ್ರಕರಣಗಳು ನಡೆಯುತ್ತಿವೆ. ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ ಬ್ರೂಣ ಹತ್ಯೆ ಕರ್ಮಕಾಂಡ ಇದೀಗ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿರುವ ಆಸ್ಪತ್ರೆಯಲ್ಲಿ ಇದುವರೆಗೂ 73 ಪ್ರಕರಣಗಳು ನಡೆದಿವೆ ಎಂದು ಹೇಳಲಾಗತ್ತಿದೆ. ಈ ಆಸ್ಪತ್ರೆ ಡಾ. ರವಿಕುಮಾರ್ ಎಂಬವರಿಗೆ ಸೇರಿದೆ ಎಂದು ಹೇಳಲಾಗುತ್ತಿದೆ. ಭ್ರೂಣ ಲಿಂಗ ಪತ್ತೆ ಭ್ರೂಣ ಹತ್ಯೆ ನಿಷೇಧವಿದ್ದರೂ ಯಾವುದೇ ರೀತಿಯಾದಂತಹ ಭಯವಿಲ್ಲದೆ ಹತ್ಯೆ ನಡೆಯುತ್ತಿದೆ. ಇದೀಗ ಆಸ್ಪತ್ರೆಯ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್ ಆಸರೆ ಆಸ್ಪತ್ರೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ನೆಲಮಂಗಲ ಟೌನ್ ಠಾಣೆಯಲ್ಲಿ ಡಾಕ್ಟರ್ ರವಿಕುಮಾರ್ ವಿರುದ್ಧ ಮೊಕದ್ದಮೆ ದಾಖಲಾಗಿದೆ ಐಪಿಸಿ ಸೆಕ್ಷನ್ 312 315…

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗಣೇಶನಗರದಲ್ಲಿ ಅಂಗನವಾಡಿ ಮಕ್ಕಳಿಗೋಸ್ಕರ ಕಳೆದ ಜನವರಿ 30 ನೇ ತಾರೀಕಿನಿಂದ ಗೌರಿ ನಾಯ್ಕ ಅವರು ಅಂಗನವಾಡಿಯ ಹಿಂಭಾಗದ ಜಾಗದಲ್ಲಿ ಯಾರ ಸಹಾಯವನ್ನೂ ಪಡೆಯದೇ ಬಾವಿ ತೋಡುತಿದ್ದಾರೆ. ಇವರ ಏಕಾಂಗಿ ಪ್ರಯತ್ನದಿಂದ ಇದೀಗ 45 ಅಡಿ ಯಲ್ಲಿ ನೀರು ಕಂಡು ಗೌರಿ ನಾಯಕ್ ಭಾವುಕರಾಗಿದ್ದಾರೆ. https://kannadanewsnow.com/kannada/man-who-has-taken-covid-19-vaccine-doses-more-than-200-times/ ಹೌದು ಬೇಸಿಗೆಯ ಹಿನ್ನೆಲೆಯಲ್ಲಿ ಗೌರಿ ನಾಯಕ್ ಕಳೆದ ಜನವರಿ 30ರಂದು ಅಂಗನವಾಡಿ ಮಕ್ಕಳಿಗೋಸ್ಕರ ಬಾವಿ ತೋಡಲು ಆರಂಭಿಸಿದ್ದರು. ಇದೀಗ ಏಕಾಂಗಿಯಾಗಿ ಭಾವಿತೋಡಿ ಕೊನೆಗೂ ನೀರು ತರಿಸಿದ ಗೌರಿ ನಾಯಕ್ 45 ಅಡಿ ಆಳದಲ್ಲಿ ನೀರು ಕಂಡು ಬಾವುಕರಾಗಿದ್ದಾರೆ. ಗಣೇಶನಗರದಲ್ಲಿ ಅಂಗನವಾಡಿ ಮಕ್ಕಳಿಗಾಗಿ ಗೌರಿ ಬಾವಿ ತೋಡಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗಣೇಶನಗರದಲ್ಲಿ ಅಂಗನವಾಡಿ ಮಕ್ಕಳಿಗೆ ಎಂದು ಗೌರಿ ಬಾವಿ ತೋಡಿದ್ದಾರೆ. https://kannadanewsnow.com/kannada/pakistan-and-chinese-hackers-india-website-hack-ram-mandir-inauguration-ai-tools-to-prevent-cyber-attack/ ಜನವರಿ 30 ರಿಂದ ಗೌರಿ ನಾಯಕ್ ಮಕ್ಕಳಿಗಾಗಿ ಬಾವಿ ತೋಡುತ್ತಿದ್ದರು. ಇ ವೇಳೆ ಪರವಾನಿಗೆ ಪತ್ರ ಇಲ್ಲವೆಂದು ಅಧಿಕಾರಿಗಳು ಇದೇ ವೇಳೆ…

Read More

ವಿಜಯಪುರ : ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ, ವಿಜಯಪುರದ ನಗರ ಶಾಸಕ ಬಸನಗೌಡ ಪಾಟೀಲ್ ವಿರುದ್ಧ ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಜಾಮಿಯ ಮಸೀದಿ ಅಬೂಬಕರ್ ಎನ್ನುವ ವ್ಯಕ್ತಿ ದೂರು ದಾಖಲಿಸಿದ್ದಾನೆ ಎಂದು ತಿಳಿದುಬಂದಿದೆ. https://kannadanewsnow.com/kannada/dalit-cm-issue-comes-to-the-fore-again-vote-is-ours-leadership-belongs-to-someone-else-hc-mahadevappa/ ವಿಜಯಪುರದ ಗಾಂಧಿ ಚೌಕ ಠಾಣೆಯಲ್ಲಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ. ವಿಜಯಪುರದ ಜಾಮಿಯಾ ಮಸೀದಿ ಬಳಿಯ ನಿವಾಸಿ ಅಬೂಬಕರ್ ಕಂಬಾಗಿ ಎನ್ನುವ ನಿಂದ ದೂರು ದಾಖಲಾಗಿದೆ. ಇದೀಗ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಅಬೂಬಕರ್ ಯತ್ನಾಳ್ ವಿರುದ್ಧ ದೂರು ದಾಖಲಿಸಿದ್ದಾನೆ. ಅಲ್ಲದೆ ಹೈದರಾಬಾದ್ ಶಾಸಕ ರಾಜಾಸಿಂಗ್ ವಿರುದ್ಧ ಕೂಡ ದೂರು ದಾಖಲಾಗಿದೆ ಎನ್ನಲಾಗುತ್ತಿದೆ. https://kannadanewsnow.com/kannada/german-man-receives-more-than-200-covid-19-vaccines-what-happened-next/

Read More

ಬೆಂಗಳೂರು : ದಲಿತ ಸಿಎಂ ಕುರಿತಂತೆ ಇದೀಗ ಮತ್ತೆ ವಿಚಾರ ಮುನ್ನೆಲೆಗೆ ಬಂದಿದ್ದು, ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್ ಸಿ ಮಹದೇವಪ್ಪ ಸ್ಫೋಟಗ ವಾದಂತಹ ಹೇಳಿಕೆ ನೀಡಿದ್ದು, ಮತ ನಾವು ಹಾಕುತ್ತಿದ್ದು ನಾಯಕತ್ವ ಇನ್ಯಾರದ್ದು ಆಗಿದೆ ಎಂದು ಸಿಎಂ ಸ್ಥಾನದ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ. https://kannadanewsnow.com/kannada/take-this-many-steps-a-day-to-reduce-the-risk-of-death-report/ ಇವತ್ತು ಮತ ನಮ್ಮ ಬಳಿ (ದಲಿತರ ಬಳಿ) ಇದೆ, ನಾಯಕತ್ವ ಇನ್ಯಾರ ಬಳಿಯೋ ಇದೆ. ಪ್ರಸ್ತುತ ಸಿದ್ದರಾಮಯ್ಯನವರು ಯಾಕೆ ಮುಖ್ಯಮಂತ್ರಿಯಾದರು, ಯಡಿಯೂರಪ್ಪ, ಎಚ್‌.ಡಿ.ದೇವೇಗೌಡರು ಯಾಕಾಗಿ ಮುಖ್ಯಮಂತ್ರಿಯಾಗಿದ್ದರು? ಜನಬೆಂಬಲ ಅವರಿಗಿದೆ. ಏಕೆಂದರೆ, ನಾವು ಕಣ್ಣು ಮುಚ್ಚಿಕೊಂಡು ಮತ ಹಾಕುತ್ತಿದ್ದೇವೆ ಎಂದು ಮಹದೇವಪ್ಪ ತಿಳಿಸಿದರು. https://kannadanewsnow.com/kannada/chandrayaan-4-launched-in-two-phases-using-both-lvm-3-and-pslv/ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯಿಂದ 5ನೇ ರಾಜ್ಯ ಮಟ್ಟದ ಜಾಗೃತ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 17 ಶೇ. ದಲಿತರು, ಶೇ. 7 ಪರಿಶಿಷ್ಟ ಪಂಗಡ, ಶೇ. 15 ಅಲ್ಪಸಂಖ್ಯಾತರಿದ್ದೇವೆ. ಇವೆಲ್ಲ ಸೇರಿದರೆ ರಾಜ್ಯದಲ್ಲಿ ನೂರಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲ್ಲಬಹುದು. ಆದರೆ,…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರಿಗೆ ಇ-ಮೇಲ್ ನಲ್ಲಿ ಬೆದರಿಕೆ ಸಂದೇಶ ಬಂದಿರುವ ಬೆನ್ನಲ್ಲೇ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಉತ್ತರಿಸಿದ್ದು ನನಗೂ ಕೂಡ ಇ-ಮೇಲ್ ನಲ್ಲಿ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿಸಿದರು. https://kannadanewsnow.com/kannada/karnataka-hc-cancels-board-exams-for-classes-5-8-9-and-11/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ ಉತ್ತರಿಸಿ, ಈ ಹಿಂದೆ ಕೂಡ ಬೆಂಗಳೂರಿನ ಹಲವು ಶಾಲೆಗಳಿಗೆ ಬೆದರಿಕೆ ಮೇಲೆ ಸಂದೇಶ ಬಂದಿತ್ತು.ಇಂತಹ ಕೇಸ್ ಗಳನ್ನು ಭೇದಿಸುವುದಕ್ಕೆ ಸ್ವಲ್ಪ ಕಷ್ಟ ಆಗುತ್ತದೆ ಎಂದರು. https://kannadanewsnow.com/kannada/is-bjp-committed-to-the-country-by-not-investigating-pro-pakistan-slogans-not-arresting-them-dk-shivakumar-shivakumar/ ಬೇರೆ ದೇಶದ ಏಜೆನ್ಸಿಗಳು ಸಪೋರ್ಟ್ ಮಾಡುತ್ತಿಲ್ಲ. ಫೇಸ್ಬುಕ್ ಗೂಗಲ್ ಅಂತ ಕಂಪನಿಗಳು ಸಹಕರಿಸುವುದಿಲ್ಲ.ಅಂತಹ ಕಂಪನಿ ಸಹಕರಿಸಿದರೆ ಸುಲಭವಾಗಿ ಕೇಸ್ ಅನ್ನು ಭೇದಿಸಬಹುದು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದರು. https://kannadanewsnow.com/kannada/rajya-sabha-mp-nasir-hussain-in-yet-another-controversy-after-pro-pakistan-slogans/ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಇ-ಮೇಲ್ ಸಂದೇಶ ಬಂದಿತ್ತು. ಈ ಕುರಿತಾಗಿ ಪೊಲೀಸರು ಇದೀಗ ಇಮೇಲ್ ಸಂದೇಶ ಎಲ್ಲಿಂದ ಬಂದಿದ್ದೆ ಯಾರು…

Read More